Thursday | April 16, 2026 |

ಸರ್ಕಾರ, ಸಂಸ್ಥೆಯ ವಿರುದ್ಧ ವಿಡಿಯೊ ಆರೋಪ; ವೈದ್ಯಾಧಿಕಾರಿ ವಿರುದ್ಧ ವಿಚಾರಣೆಗೆ ಆದೇಶ

ಬೆಂಗಳೂರು; ಸರ್ಕಾರ ಮತ್ತು ಸಂಸ್ಥೆಯ ವಿರುದ್ಧವಾಗಿ ಫೇಸ್‌ಬುಕ್‌ ಇನ್ನಿತರೆ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಅಪ್ಲೋಡ್‌ ಮಾಡಿರುವುದು ಸೇರಿದಂತೆ ಇನ್ನಿತರೆ ಆರೋಪಗಳಿಗೆ ಗುರಿಯಾಗಿರುವ ತುರ್ತು ಚಿಕಿತ್ಸಾ ವೈದ್ಯಾಧಿಕಾರಿ ವಿರುದ್ಧ ವಿಚಾರಣೆ ನಡೆಸಲು ರಾಜ್ಯ ಸರ್ಕಾರವು ಮುಂದಾಗಿದೆ.

 

ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ ತುರ್ತು ಚಿಕಿತ್ಸಾ ವೈದ್ಯಾಧಿಕಾರಿ ಡಾ ರಾಮದಾಸ್‌ ಮಧುಸೂದನ್‌ ಅವರ ವಿರುದ್ಧ ವಿಚಾರಣೆ ನಡೆಸಲು ನಿವೃತ್ತ ಜಿಲ್ಲಾ ನ್ಯಾಯಾಧೀಶ ಇಂಧೂದರ್‌ ಅವರನ್ನು ವಿಚಾರಣಾಧಿಕಾರಿಯನ್ನಾಗಿ ನೇಮಿಸಿದೆ.

 

ಈ ಕುರಿತು ವೈದ್ಯಕೀಯ ಶಿಕ್ಷಣ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್‌ ಅಖ್ತರ್‌ ಅವರು 2024ರ ಜನವರಿ 11ರಂದು ಆದೇಶ ( BMCRI-ESTOEST2/17/2022-ADM-DIR-BMCRI ದಿನಾಂಕ 11-01-2024) ಹೊರಡಿಸಿದ್ದಾರೆ ಎಂದು ಗೊತ್ತಾಗಿದೆ. ಇದರ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

‘ಸಂಸ್ಥೆಯ ಮೇಲಾಧಿಕಾರಿಗಳ ಮೇಲೆ ವಾಟ್ಸಾಪ್‌ ಗ್ರೂಪ್‌ನಲ್ಲಿ ಅವಹೇಳನಕಾರಿ ಸಂದೇಶಗಳನ್ನು ಹಾಗೂ ಫೇಸ್‌ಬುಕ್‌ ಅಂತರ್ಜಾಲದಲ್ಲಿ ಸರ್ಕಾರದ ಮತ್ತು ಸಂಸ್ಥೆಯ ವಿರುದ್ಧವಾಗಿ ಮಾತನಾಡಿ ವಿಡಿಯೋಗಳನ್ನು ಅಪ್ಲೋಡ್‌ ಮಾಡುವುದು ಹಾಗೂ ಕರ್ತವ್ಯಕ್ಕೆ ಬಾರದಿರುವುದು, ಆಸ್ಪತ್ರೆಯ ಸಿಬ್ಬಂದಿಯೊಂದಿಗೆ ಸೌಜನ್ಯಯುತವಾಗಿ ವರ್ತಿಸದಿರುವ ಆರೋಪಗಳು ಸತ್ಯಾಸತ್ಯತೆ ಅರಿಯಲು ಬೈಲಾದ ನಿಯಮಗಳ ನಿಯಮ 11(2) ಅಡಿ ವಿಚಾರಣೆ ನಡೆಸಲು ನಿವೃತ್ತ ಜಿಲ್ಲಾ ನ್ಯಾಯಾಧೀಶ ಇಂಧೂದರ್‌ ಅವರನ್ನು ವಿಚಾರಣಾಧಿಕಾರಿಯನ್ನಾಗಿ ನೇಮಿಸಲಾಗಿದೆ,’ ಎಂದು ಆದೇಶದಲ್ಲಿ ವಿವರಿಸಿರುವುದು ಗೊತ್ತಾಗಿದೆ.

 

ಈ ಆದೇಶವನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ ಶರಣ್‌ ಪ್ರಕಾಶ್‌ ಪಾಟೀಲ್‌ ಅವರು ಅನುಮೋದಿಸಿದ್ದಾರೆ ಎಂದು ತಿಳಿದು ಬಂದಿದೆ.

 

ನಿವೃತ್ತ ಜಿಲ್ಲಾ ನ್ಯಾಯಾಧೀಶರನ್ನು ವಿಚಾರಣಾಧಿಕಾರಿಯನ್ನಾಗಿ ನೇಮಿಸುವ ಮೊದಲು ಡಾ ಮಧುಸೂದನ್‌ ರಾಮದಾಸ್‌ ಅವರಿಗೆ ವೈದ್ಯಕೀಯ ಶಿಕ್ಷಣ ಇಲಾಖೆಯು ನೋಟೀಸ್‌ ನೀಡಿತ್ತು. ತಮ್ಮ ಮೇಲಿನ ಆರೋಪಗಳನ್ನು ಮಧುಸೂದನ್‌ ಅವರು ಅಲ್ಲಗಳೆದಿದ್ದರು. ಆದರೆ ಇಲಾಖೆಯು ಅದನ್ನು ಒಪ್ಪಿರಲಿಲ್ಲ ಎಂದು ಗೊತ್ತಾಗಿದೆ.

 

ತುರ್ತು ಚಿಕಿತ್ಸಾ ವೈದ್ಯಾಧಿಕಾರಿ ಡಾ ಮಧುಸೂದನ್‌ ರಾಮದಾಸ್‌ ಅವರು ತಮ್ಮ ಮೇಲಾಧಿಕಾರಿಗಳ ಮೇಲೆ ವಾಟ್ಸಾಪ್‌ ಗ್ರೂಪ್‌ನಲ್ಲಿ ಅವಹೇಳನಕಾರಿ ಸಂದೇಶಗಳನ್ನು ಕಳಿಸುತ್ತಿದ್ದರು. ಫೇಸ್‌ಬುಕ್‌ನಲ್ಲಿ ಸರ್ಕಾರದ ಮತ್ತು ಸಂಸ್ಥೆಯ ವಿರುದ್ಧವಾಗಿ ಮಾತನಾಡಿ ವಿಡಿಯೋಗಳನ್ನು ಅಪ್ಲೋಡ್‌ ಮಾಡಿದ್ದರು ಎಂಬ ಆರೋಪಕ್ಕೆ ಗುರಿಯಾಗಿದ್ದರು.

 

ಅಲ್ಲದೇ ಕರ್ತವ್ಯಕ್ಕೆ ನಿಯಮಿತವಾಗಿ ಹಾಜರಾಗುತ್ತಿರಲಿಲ್ಲ, ಆಸ್ಪತ್ರೆ , ಸಂಸ್ಥೆಯ ಸಿಬ್ಬಂದಿಯೊಂದಿಗೆ ಸೌಜನ್ಯಯುತವಾಗಿ ವರ್ತಿಸುತ್ತಿರಲಿಲ್ಲ ಎಂಬ ಆಪಾದನೆಗೂ ಗುರಿಯಾಗಿದ್ದರು. ಈ ಆರೋಪಗಳು ಮೇಲ್ನೋಟಕ್ಕೆ ಕಂಡು ಬಂದಿವೆ ಎಂದು ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ ಡೀನ್‌ ವರದಿ ನೀಡಿದ್ದರು ಎಂಬುದು ಆದೇಶದಿಂದ ಗೊತ್ತಾಗಿದೆ.

 

ಅವರ ವಿರುದ್ಧ ಆರೋಪಗಳು ಮೇಲ್ನೋಟಕ್ಕೆ ಕಂಡು ಬಂದಿವೆ ಎಂದು ನಿರ್ಧರಿಸಿದ್ದ ಸಂಸ್ಥೆಯು ಅವರ ವಿರುದ್ಧ ಶಿಸ್ತು ಕ್ರಮ ಬಾಕಿ ಇರಿಸಿ ಸೇವೆಯಿಂದ ಅಮಾನತುಗೊಳಿಸಬೇಕು ಎಂದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು ಎಂದು ತಿಳಿದುಬಂದಿದೆ. ಅದರಂತೆ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿತ್ತು.

 

ನಂತರ ಮಧುಸೂದನ್‌ ರಾಮದಾಸ್‌ ಅವರಿಗೆ 2023ರ ಮಾರ್ಚ್‌ 29ರಂದು ನೋಟೀಸ್‌ ಜಾರಿಗೊಳಿಸಲಾಗಿತ್ತು. ಇದಕ್ಕೆ ಉತ್ತರಿಸಿದ್ದ ಮಧುಸೂದನ್‌ ಅವರು ತಮ್ಮ ಮೇಲಿನ ಆರೋಪಗಳನ್ನು ತಳ್ಳಿ ಹಾಕಿದ್ದರು. ಹೀಗಾಗಿ ಅಮಾನತನ್ನು ತೆರವುಗೊಳಿಸಿ ಸೇವೆಗೆ ಪುನರ್‌ ಸ್ಥಾಪಿಸಿ ಅಟಲ್‌ ಬಿಹಾರಿ ವಾಜಪೇಯಿ ವೈದ್ಯಕೀಯ ಮಹಾವಿದ್ಯಾಲಯ ಸಂಶೋಧನೆ ಸಂಸ್ಥೆಗೆ ವರ್ಗಾಯಿಸಿ ಆದೇಶಿಸಿತ್ತು.

 

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧುಸೂದನ್‌ ಅವರು ಲಿಖಿತ ಸಮಜಾಯಿಷಿ ನೀಡಿದ್ದರು. ಆದರೆ ಅವರ ವಿರುದ್ಧದ ಆರೋಪಗಳನ್ನು ಅಲ್ಲಗಳೆಯಬಹುದಾದ ಯಾವುದೇ ಸಕಾರಣಗಳು, ಹೇಳಿಕೆಗಳು ಕಂಡು ಬಂದಿರಲಿಲ್ಲ. ಹಾಗೂ ಅದಕ್ಕೆ ಪೂರಕವಾಗಿ ದಾಖಲೆಗಳನ್ನು ಸಲ್ಲಿಸಿರಲಿಲ್ಲ ಎಂದು ಗೊತ್ತಾಗಿದೆ.

 

ಹೀಗಾಗಿ ಅವರ ವಿರುದ್ಧದ ಆರೋಪದ ಸತ್ಯಾಸತ್ಯತೆಯನ್ನು ಅರಿಯುವ ಸಲುವಾಗಿ ಇಲಾಖೆ ವಿಚಾರಣೆ ಮುಂದುವರೆಸಲು ವೈದ್ಯಕೀಯ ಶಿಕ್ಷಣ ಇಲಾಖೆಯು ನಿರ್ಧರಿಸಿತ್ತು ಎಂದು ತಿಳಿದು ಬಂದಿದೆ.

Hot this week

ಪಿಂಚಣಿಗೆ ಕೇಳಿದ್ದು 5.63 ಕೋಟಿ, ಬಜೆಟ್‌ನಲ್ಲಿ ನಿಗದಿಪಡಿಸಿದ್ದು ಕೇವಲ 1 ಲಕ್ಷ; ಆರ್ಥಿಕ ಮುಗ್ಗಟ್ಟಿಗೆ ಸಿಲುಕಲಿದೆಯೇ ವಿಶ್ವವಿದ್ಯಾಲಯ?

ಬೆಂಗಳೂರು; ಬೋಧಕ, ಬೋಧಕೇತರ ಸಿಬ್ಬಂದಿಗಳಿಗೆ ಪಿಂಚಣಿ  ಪಾವತಿಸಲು ವಿಶ್ವವಿದ್ಯಾಲಯಗಳು ಕೇಳಿದ್ದ ಸಹಾಯಾನುದಾನದ...

ಗ್ಯಾರಂಟಿ ಯೋಜನೆಗಳಿಗೆ ಜಾಹೀರಾತು; 3 ವರ್ಷದಲ್ಲಿ 348.25 ಕೋಟಿ ವೆಚ್ಚ

ಬೆಂಗಳೂರು; ಗ್ಯಾರಂಟಿ ಯೋಜನೆ ಜಾರಿಯಾದ ದಿನದಿಂದ ಜನವರಿ ಅಂತ್ಯದವರೆಗೆ ಜಾಹೀರಾತುಗಳ ಮೂಲಕ...

11,721 ಟ್ರಾನ್ಸ್‌ಫಾರ್ಮ್‌ರ್ ಖರೀದಿ; ಕೇರಳ ವಿದ್ಯುತ್ ಕಂಪನಿಗೆ 4 ಜಿ ವಿನಾಯಿತಿ ಅಧಿಸೂಚನೆ, ಕವಿಕಾಕ್ಕೆ 174.73 ಕೋಟಿ ಆದಾಯ ತಪ್ಪಿಸಿತೇ ಕಾಂಗ್ರೆಸ್ ಸರ್ಕಾರ?

ಬೆಂಗಳೂರು;  ರಾಜ್ಯದ ಬೆಂಗಳೂರು, ಹುಬ್ಬಳ್ಳಿ, ಮಂಗಳೂರು ವಿದ್ಯುತ್ ಸರಬರಾಜು ಕಂಪನಿಗಳಿಗೆ ಅವಶ್ಯಕವಿರುವ 11,721...

ಗಾಲ್ಫ್‌ ಅಸೋಸಿಯೇಷನ್‌ನ ಜಮೀನಿನ ಸರ್ವೇ, ಆದಾಯ ಪರಿಶೀಲನೆ; ಜಿಬಿಎ ಮುಖ್ಯ ಆಯುಕ್ತ, ಜಿಲ್ಲಾಧಿಕಾರಿಗೆ ಪತ್ರ ಬರೆದ ಸರ್ಕಾರ

ಬೆಂಗಳೂರು;  ಕರ್ನಾಟಕ ಗಾಲ್ಫ್‌ ಅಸೋಸಿಯೇಷನ್ ಸಂಸ್ಥೆಗೆ ನೀಡಲಾಗಿರುವ ಜಮೀನಿನ ಸರ್ವೇ ನಡೆಸಲು...

Topics

ಪಿಂಚಣಿಗೆ ಕೇಳಿದ್ದು 5.63 ಕೋಟಿ, ಬಜೆಟ್‌ನಲ್ಲಿ ನಿಗದಿಪಡಿಸಿದ್ದು ಕೇವಲ 1 ಲಕ್ಷ; ಆರ್ಥಿಕ ಮುಗ್ಗಟ್ಟಿಗೆ ಸಿಲುಕಲಿದೆಯೇ ವಿಶ್ವವಿದ್ಯಾಲಯ?

ಬೆಂಗಳೂರು; ಬೋಧಕ, ಬೋಧಕೇತರ ಸಿಬ್ಬಂದಿಗಳಿಗೆ ಪಿಂಚಣಿ  ಪಾವತಿಸಲು ವಿಶ್ವವಿದ್ಯಾಲಯಗಳು ಕೇಳಿದ್ದ ಸಹಾಯಾನುದಾನದ...

ಗ್ಯಾರಂಟಿ ಯೋಜನೆಗಳಿಗೆ ಜಾಹೀರಾತು; 3 ವರ್ಷದಲ್ಲಿ 348.25 ಕೋಟಿ ವೆಚ್ಚ

ಬೆಂಗಳೂರು; ಗ್ಯಾರಂಟಿ ಯೋಜನೆ ಜಾರಿಯಾದ ದಿನದಿಂದ ಜನವರಿ ಅಂತ್ಯದವರೆಗೆ ಜಾಹೀರಾತುಗಳ ಮೂಲಕ...

11,721 ಟ್ರಾನ್ಸ್‌ಫಾರ್ಮ್‌ರ್ ಖರೀದಿ; ಕೇರಳ ವಿದ್ಯುತ್ ಕಂಪನಿಗೆ 4 ಜಿ ವಿನಾಯಿತಿ ಅಧಿಸೂಚನೆ, ಕವಿಕಾಕ್ಕೆ 174.73 ಕೋಟಿ ಆದಾಯ ತಪ್ಪಿಸಿತೇ ಕಾಂಗ್ರೆಸ್ ಸರ್ಕಾರ?

ಬೆಂಗಳೂರು;  ರಾಜ್ಯದ ಬೆಂಗಳೂರು, ಹುಬ್ಬಳ್ಳಿ, ಮಂಗಳೂರು ವಿದ್ಯುತ್ ಸರಬರಾಜು ಕಂಪನಿಗಳಿಗೆ ಅವಶ್ಯಕವಿರುವ 11,721...

ಗಾಲ್ಫ್‌ ಅಸೋಸಿಯೇಷನ್‌ನ ಜಮೀನಿನ ಸರ್ವೇ, ಆದಾಯ ಪರಿಶೀಲನೆ; ಜಿಬಿಎ ಮುಖ್ಯ ಆಯುಕ್ತ, ಜಿಲ್ಲಾಧಿಕಾರಿಗೆ ಪತ್ರ ಬರೆದ ಸರ್ಕಾರ

ಬೆಂಗಳೂರು;  ಕರ್ನಾಟಕ ಗಾಲ್ಫ್‌ ಅಸೋಸಿಯೇಷನ್ ಸಂಸ್ಥೆಗೆ ನೀಡಲಾಗಿರುವ ಜಮೀನಿನ ಸರ್ವೇ ನಡೆಸಲು...

866.59 ಕೋಟಿ ರು ಮೊತ್ತದ 399 ಬಳಕೆ ಪ್ರಮಾಣ ಪತ್ರಗಳ ಸಲ್ಲಿಕೆಗೆ ಬಾಕಿ ಉಳಿಸಿಕೊಂಡ ಇಲಾಖೆಗಳು; ಅನುದಾನ ದುರುಪಯೋಗ ಸಾಧ್ಯತೆ?

ಬೆಂಗಳೂರು; ರಾಜ್ಯದ ಹಲವು ಇಲಾಖೆಗಳು ಬಳಕೆ ಪ್ರಮಾಣ ಪತ್ರಗಳನ್ನು ಸಲ್ಲಿಕೆಯಲ್ಲಿ ತೀವ್ರ...

ಸರ್ಕಾರಿ ಸೇವೆ; ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಪ್ರಾತಿನಿಧ್ಯ ಎರಡು ವರ್ಷದಲ್ಲಿ ಇಳಿಕೆಯಾಗಿದೆಯೇ?

ಬೆಂಗಳೂರು; ರಾಜ್ಯ ಸರ್ಕಾರದ ಶಿಕ್ಷಣ, ಒಳಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ...

Related Articles

Popular Categories

error: Content is protected !!