Saturday | March 21, 2026 |

ಶಾಸಕರಿಗೆ ‘ನಿದ್ರಾ’ ಮಾದರಿ ಹಾಸಿಗೆ, ದಿಂಬು ಖರೀದಿ; ಕಾಯರ್ ಬೋರ್ಡ್‌ ಬದಿಗಿರಿಸಿದ ಸರ್ಕಾರ

Support THE-FILE

spot_img

ಬೆಂಗಳೂರು; ಶಾಸಕರಿಗೆ  ‘ನಿದ್ರಾ’ ಮಾದರಿಯ ಹಾಸಿಗೆ, ದಿಂಬು, ತಲೆದಿಂಬು, ಸೋಫಾ, ಡೋರ್‍‌ ಫುಟ್‌ ಮ್ಯಾಟ್‌, ಟರ್ಕಿ ಟವಲ್‌, ಉಲ್ಲನ್‌ ಬೆಡ್‌ ಶೀಟ್‌ ಸೇರಿದಂತೆ ಇನ್ನಿತರೆ ಸಾಮಗ್ರಿಗಳನ್ನು 1.60 ಕೋಟಿ ರು. ವೆಚ್ಚದಲ್ಲಿ ಖರೀದಿಸಲು ಸರ್ಕಾರವು ಹೆಚ್ಚುವರಿ ಅನುದಾನವನ್ನು ಮಂಜೂರು ಮಾಡಿದೆ.

 

ಶಾಸಕರ ಭವನಕ್ಕೆ 2012ರಿಂದ 2023ರವರೆಗೂ  ಸಿಂಗಲ್‌ ಬೆಡ್‌, ಡಬಲ್‌ ಬೆಡ್‌ , ಸೋಫಾ ಲೂಸ್‌ ಕುಷನ್‌, ತಲೆದಿಂಬು, ಡೋರ್‍‌ ಫುಟ್‌ ಮ್ಯಾಟ್‌ಗಳನ್ನು ಸಾರ್ವಜನಿಕ ಉದ್ದಿಮೆಯಾದ ಕರ್ನಾಟಕ ರಾಜ್ಯ ತೆಂಗಿನ ನಾರಿನ ಅಭಿವೃದ್ಧಿ ನಿಗಮದಿಂದಲೇ ಹಾಸಿಗೆಗಳನ್ನು ಖರೀದಿಸಲಾಗುತ್ತಿತ್ತು.

 

ಆದರೆ ಇವುಗಳು ಸರಿ ಇಲ್ಲವೆಂದು ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದರು. ಹೀಗಾಗಿ ಧರ್ಮಸ್ಥಳ ಮಂಜುನಾಥೇಶ್ವರ ನ್ಯಾಚರೋಪತಿ ಕ್ಷೇಮ ವನದಲ್ಲಿ ಬಳಸಿದ್ದ ನಿದ್ರಾ ಮಾದರಿಯ ಹಾಸಿಗೆಗಳನ್ನೇ ಕೊಯಮತ್ತೂರಿನ ಖಾಸಗಿ ಕಂಪನಿಯಿಂದ ಖರೀದಿಸಲು ಮುಂದಾಗಿದೆ.

 

ಶಾಸಕರ ಕೊಠಡಿಗಳಿಗೆ ಅಗತ್ಯವಿರುವ ಸಿಂಗಲ್‌, ಡಬಲ್‌ ಹಾಸಿಗೆ, ದಿಂಬು ಸೇರಿದಂತೆ ಮತ್ತಿತರ ಸಾಮಗ್ರಿಗಳನ್ನು ಖರೀದಿಸಲು ಆರ್ಥಿಕ ಇಲಾಖೆಯು 4(ಜಿ) ವಿನಾಯಿತಿ ನೀಡಿದೆ. ಈ ಸಂಬಂಧ ‘ದಿ ಫೈಲ್‌’ ಆರ್‍‌ಟಿಐ ಅಡಿಯಲ್ಲಿ ದಾಖಲೆಗಳನ್ನು ಪಡೆದಿದೆ.

 

ಹಾಸಿಗೆ ಹಾಗೂ ಇನ್ನಿತರೆ ವಸ್ತುಗಳನ್ನು ಕೂಡಲೇ ಬದಲಾಯಿಸಿ ಹೊಸದಾದ ಹಾಸಿಗಗಳನ್ನು ನೀಡಬೇಕು ಎಂದು ಶಾಸಕರ ಒತ್ತಡ ಹೇರಿದ್ದರು.  ಇದಕ್ಕೆ  ಮಣಿದಿರುವ ವಿಧಾನಸಭೆ ಸಚಿವಾಲಯವು, ಆರ್ಥಿಕ ಇಲಾಖೆಗೆ 4(ಜಿ) ವಿನಾಯಿತಿಗಾಗಿ ಪ್ರಸ್ತಾವನೆ ಸಲ್ಲಿಸಿತ್ತು. ಈ ಪ್ರಸ್ತಾವನೆಯನ್ನು ಪರಿಶೀಲಿಸಿದ್ದ ಆರ್ಥಿಕ ಇಲಾಖೆಯು ಪ್ರಸ್ತಾವನೆಗೆ ಅನುಮೋದನೆ ನೀಡಿರುವುದು ತಿಳಿದು ಬಂದಿದೆ.

 

ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಸಹ ಅನುಮೋದನೆ ನೀಡಿದ್ದಾರೆ.

 

ಮೊದಲ ಬಾರಿಗೆ ಆಯ್ಕೆಯಾದ ಶಾಸಕರುಗಳಿಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ನ್ಯಾಚರೋಪತಿ ಆಯುರ್ವೇದಿಕ್‌ ಕ್ಷೇಮ ವನದಲ್ಲಿ ಏರ್ಪಡಿಸಿದ್ದ ತರಬೇತಿ ಶಿಬಿರದಲ್ಲಿ ನೀಡಿದ್ದ ನಿದ್ರಾ ಮಾದರಿ ಹಾಸಿಗೆಗಳನ್ನೇ ಒದಗಿಸಬೇಕು ಎಂದು ಶಾಸಕರು ಬೇಡಿಕೆ ಇರಿಸಿದ್ದರು. ಹೀಗಾಗಿ ನಿದ್ರಾ ಮಾದರಿಯ ಹಾಸಿಗೆಗಳನ್ನೇ ಖರೀದಿಸಲು ವಿಧಾನಸಭೆ ಸಚಿವಾಲಯವು ದರ ಪಟ್ಟಿ ಪಡೆದಿತ್ತು.

 

‘ಮೊದಲ ಬಾರಿಗೆ ಆಯ್ಕೆಯಾದ ಸದಸ್ಯರುಗಳಿಗೆ ಇತ್ತೀಚೆಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ನ್ಯಾಚೋರಪತಿ ಆಯುರ್ವೇದಿಕ್‌ ಸೆಂಟರ್‍‌ನ ಕ್ಷೇಮ ವನದಲ್ಲಿ ತರಬೇತಿ ಶಿಬಿರ ಏರ್ಪಡಿಸಲಾಗಿತ್ತು. ಆ ಸಂದರ್ಭದಲ್ಲಿ ಸಭಾಧ್ಯಕ್ಷ ಯು ಟಿ ಖಾದರ್‌ ಸೇರಿದಂತೆ ಶಾಸಕರು   ಹಾಗೂ ಸಚಿವಾಲಯದ ಅಧಿಕಾರಿಗಳು ಅಲ್ಲಿ ಬಳಕೆ ಮಾಡುತ್ತಿರುವ ಹಾಸಿಗೆಗಳನ್ನು ಪರಿಶೀಲಿಸಿದ್ದರು.

 

ಈ ಹಾಸಿಗೆಗಳು ದೇಹಾರೋಗ್ಯಕ್ಕೆ ಸೂಕ್ತವಾದಂತಹ ಮತ್ತು ಆರಾಮದಾಯಕವಾಗಿರುವಂತಹ ನಿದ್ರಾ ಮಾದರಿಯ ಹಾಸಿಗೆಗಳೆಂದು ತಿಳಿದು ಬಂದಿರುತ್ತದೆ,’ ಎಂದು ವಿಧಾನಸಭೆ ಸಚಿವಾಲಯದ ಕಾರ್ಯದರ್ಶಿ ಎಂ ಕೆ ವಿಶಾಲಾಕ್ಷಿ ಅವರು ಆರ್ಥಿಕ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್‌ ಕೆ ಅತೀಕ್‌ ಅವರಿಗೆ ಪ್ರಸ್ತಾವನೆಯಲ್ಲಿ ವಿವರಿಸಿದ್ದರು.

 

300 ಸಂಖ್ಯೆಯ ಸಿಂಗಲ್‌ ಹಾಶಿಗೆ, 150 ಸಂಖ್ಯೆಯ ಡಬಲ್‌ ಹಾಸಿಗೆ ಹಾಗೂ 1,250 ಸಂಖ್ಯೆಯ ದಿಂಬು, 50 ಸೆಟ್‌ ಸೋಫಾ ಲೂಸ್‌ ಕುಷನ್‌, 200 ಸಂಖ್ಯೆಯ ಡೋರ್‍‌ ಫುಟ್‌ ಮ್ಯಾಟ್‌, 1,000 ಸಂಖ್ಯೆಯ ರಬ್ಬರ್‍‌ ಫುಟ್‌ ಮ್ಯಾಟ್‌, 1,250 ಸಂಖ್ಯೆಯ ಸಿಂಗಲ್‌ ಬೆಡ್‌ಶೀಟ್‌, 600 ಸಂಖ್ಯೆಯ ಡಬಲ್‌ ಬೆಡ್‌ಶೀಟ್‌, 250 ಸಂಖ್ಯೆ ಟರ್ಕಿ ಟವಲ್‌, 600 ಸಂಖ್ಯೆಯ ಉಲ್ಲನ್‌ ಬೆಡ್‌ ಶೀಟ್‌, ಬ್ಲಾಂಕೇಟ್‌ಗಳನ್ನು ಕೊಯಮತ್ತೂರಿನ ರಿಪೋಸ್‌ ಮ್ಯಾಟ್ರಸ್‌ ಪ್ರೈವೈಟ್‌ ಲಿಮಿಟೆಡ್‌ನಿಂದ ನೇರವಾಗಿ ಖರೀದಿಸಲು ಪ್ರಸ್ತಾವನೆಯಲ್ಲಿ ಕೋರಿದ್ದರು ಎಂಬುದು ತಿಳಿದು ಬಂದಿದೆ.

 

ರೆಸ್ಟೋಲೆಕ್ಸ್‌, ಬೆಂಗಳೂರಿನ ಸದಾಶಿವನಗರದಲ್ಲಿರುವ ಜತ್ತಿ ಟ್ರಾಕ್ಸ್‌ ಎಲ್ಎಲ್‌ಪಿ ನಿಂದ ದರ ಪಟ್ಟಿ ಪಡೆದಿತ್ತು. ಈ ಪೈಕಿ ರಿಪೋಸ್‌ ಮ್ಯಾಟ್ರಸ್‌ ಪ್ರೈವೈಟ್‌ ಲಿಮಿಟೆಡ್‌ಗೆ ಕಾರ್ಯಾದೇಶ ನೀಡಿದೆ ಎಂಬುದು ಗೊತ್ತಾಗಿದೆ.

Hot this week

ಬೆಳೆ ಹವಾಮಾನ ನಿಗಾ ಸಭೆ ನಡೆಸಿಲ್ಲ, ಮಾಹಿತಿ ವ್ಯವಸ್ಥೆಯೂ ಇಲ್ಲ; ಸಿಎಜಿಯನ್ನೂ ತಪ್ಪುದಾರಿಗೆಳೆದ ಸರ್ಕಾರ

ಬೆಂಗಳೂರು;  ರಾಜ್ಯದಲ್ಲಿ ಬರ ಪರಿಸ್ಥಿತಿ ಮೇಲ್ವಿಚಾರಣೆ ಮಾಡಲು ಬೆಳೆ ಹವಾಮಾನ ನಿಗಾ...

ರಾಡಾರ್ ಸ್ಟ್ರೀಮ್‌ ಗೇಜ್‌, ವೈರ್‍‌ಲೆಸ್‌ ಸಾಧನ ಅಳವಡಿಕೆ; ನಡೆಯದ ತಾಂತ್ರಿಕ ಪರಿಶೀಲನೆ, 3.54 ಕೋಟಿ ವ್ಯರ್ಥ

ಬೆಂಗಳೂರು;  ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಪ್ರವಾಹದ ಮುನ್ನೆಚ್ಚರಿಕೆಗಾಗಿ 2.45 ಕೋಟಿ...

ಎಂ ಆರ್ ಸೀತಾರಾಂ ಕುಟುಂಬ ಸದಸ್ಯರ ವಿರುದ್ಧ ಭೂಕಬಳಿಕೆ ಆರೋಪ; ದೂರು ಮರೆಮಾಚಿತ್ತೇ ಕಂದಾಯ ಇಲಾಖೆ?

ಬೆಂಗಳೂರು; ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕಸಬಾ ಹೋಬಳಿ ಅಕ್ಲೇನಹಳ್ಳಿ...

ನರೇಗಾ ಅಕ್ರಮ; 2 ವರ್ಷದಲ್ಲಿ 105.1 ಕೋಟಿ ದುರುಪಯೋಗ, 12.34 ಕೋಟಿಯಷ್ಟೇ ವಸೂಲು

  ಬೆಂಗಳೂರು; ಕಳೆದ ಮೂರು ವರ್ಷಗಳಲ್ಲಿ  ಮಹಾತ್ಮಗಾಂಧಿ ನರೇಗಾ ಯೋಜನೆಯಡಿ 64,806 ಪ್ರಕರಣಗಳಲ್ಲಿ...

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ...

Topics

ಬೆಳೆ ಹವಾಮಾನ ನಿಗಾ ಸಭೆ ನಡೆಸಿಲ್ಲ, ಮಾಹಿತಿ ವ್ಯವಸ್ಥೆಯೂ ಇಲ್ಲ; ಸಿಎಜಿಯನ್ನೂ ತಪ್ಪುದಾರಿಗೆಳೆದ ಸರ್ಕಾರ

ಬೆಂಗಳೂರು;  ರಾಜ್ಯದಲ್ಲಿ ಬರ ಪರಿಸ್ಥಿತಿ ಮೇಲ್ವಿಚಾರಣೆ ಮಾಡಲು ಬೆಳೆ ಹವಾಮಾನ ನಿಗಾ...

ರಾಡಾರ್ ಸ್ಟ್ರೀಮ್‌ ಗೇಜ್‌, ವೈರ್‍‌ಲೆಸ್‌ ಸಾಧನ ಅಳವಡಿಕೆ; ನಡೆಯದ ತಾಂತ್ರಿಕ ಪರಿಶೀಲನೆ, 3.54 ಕೋಟಿ ವ್ಯರ್ಥ

ಬೆಂಗಳೂರು;  ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಪ್ರವಾಹದ ಮುನ್ನೆಚ್ಚರಿಕೆಗಾಗಿ 2.45 ಕೋಟಿ...

ಎಂ ಆರ್ ಸೀತಾರಾಂ ಕುಟುಂಬ ಸದಸ್ಯರ ವಿರುದ್ಧ ಭೂಕಬಳಿಕೆ ಆರೋಪ; ದೂರು ಮರೆಮಾಚಿತ್ತೇ ಕಂದಾಯ ಇಲಾಖೆ?

ಬೆಂಗಳೂರು; ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕಸಬಾ ಹೋಬಳಿ ಅಕ್ಲೇನಹಳ್ಳಿ...

ನರೇಗಾ ಅಕ್ರಮ; 2 ವರ್ಷದಲ್ಲಿ 105.1 ಕೋಟಿ ದುರುಪಯೋಗ, 12.34 ಕೋಟಿಯಷ್ಟೇ ವಸೂಲು

  ಬೆಂಗಳೂರು; ಕಳೆದ ಮೂರು ವರ್ಷಗಳಲ್ಲಿ  ಮಹಾತ್ಮಗಾಂಧಿ ನರೇಗಾ ಯೋಜನೆಯಡಿ 64,806 ಪ್ರಕರಣಗಳಲ್ಲಿ...

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ...

ರೋಹಿತ್ ವೇಮುಲ ಕಾಯ್ದೆ; ವ್ಯಾಖ್ಯಾನಗಳು ಅಸ್ಪಷ್ಟ, ಕಾನೂನು ಬಲವಿಲ್ಲ, ವಿಧೇಯಕವೇ ಅಪೂರ್ಣ

ಬೆಂಗಳೂರು; ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಯಾರೊಬ್ಬರೂ ಜಾತಿ ಆಧಾರದಲ್ಲಿ ತಾರತಮ್ಯ ಎದುರಿಸಬಾರದು...

ಗ್ರಾಮಠಾಣ ಜಮೀನು ಅದಲು-ಬದಲು; ಆರ್ಥಿಕ ಇಲಾಖೆ ಆಕ್ಷೇಪ ಬದಿಗೊತ್ತಿ ಎಂ ಆರ್ ಸೀತಾರಾಂ ಕುಟುಂಬದ ಬೆನ್ನಿಗೆ ನಿಂತ ಸರ್ಕಾರ

ಬೆಂಗಳೂರು; ಸರ್ಕಾರಿ ಭೂಮಿಗೆ ರಸ್ತೆಯ ಸಂಪರ್ಕ ಹೊಂದಿಲ್ಲದಿರುವ, ರಸ್ತೆ ಸಂಪರ್ಕ ಕಲ್ಪಿಸದೇ...

ಅದಾನಿ ಎಸಿಸಿ ಲಿಮಿಟೆಡ್‌ನಿಂದ ಅಕ್ರಮ ಗಣಿಗಾರಿಕೆ; ನಿರ್ದೇಶಕರು, ಅಧಿಕಾರಿಗಳ ವಿರುದ್ಧ ಲೋಕಾ ತನಿಖೆಗೆ ಶಿಫಾರಸ್ಸು, ಕಡತಕ್ಕೆ ಧೂಳು

ಬೆಂಗಳೂರು;  ಕಲ್ಬುರ್ಗಿಯ ವಾಡಿಯಲ್ಲಿ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್ ಪ್ರೈವೈಟ್ ಲಿಮಿಟೆಡ್...

Related Articles

Popular Categories

error: Content is protected !!