Friday | March 20, 2026 |

ಸಮೀಕ್ಷೆಗೆ ಕೋಟಿ ರು.; ಎಂಒಯು ಸೇರಿ ಹಲವು ವಿವರಗಳೇ ಲಭ್ಯವಿಲ್ಲವೆಂದ ಆಹಾರ ಇಲಾಖೆ

Support THE-FILE

spot_img

ಬೆಂಗಳೂರು; ಅನ್ನ ಭಾಗ್ಯ ಯೋಜನೆ ಸಮೀಕ್ಷೆ ನಡೆಸುವ ಸಂಬಂಧ  ಎಂ2ಎಂ ಮೀಡಿಯಾ ನೆಟ್‌ವರ್ಕ್‌ ಕಂಪನಿಗೆ ನೀಡಿರುವ ಕಾರ್ಯಾದೇಶ,  ಎಂಒಯು, ಒಪ್ಪಂದ ಸೇರಿದಂತೆ ಇನ್ನಿತರೆ ಯಾವುದೇ ದಾಖಲೆಗಳು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಬಳಿಯೇ  ಲಭ್ಯವಿಲ್ಲ.

 

ಅನ್ನಭಾಗ್ಯ ಯೋಜನೆ ಸಮೀಕ್ಷೆ ನಡೆಸಲು 25 ಲಕ್ಷ ರು. ಅನುದಾನ ಒದಗಿಸಲು ಆರ್ಥಿಕ ಇಲಾಖೆಯು 4(ಜಿ) ವಿನಾಯಿತಿ ನೀಡಿದೆ.  ಆಹಾರ ಮತ್ತು ನಾಗರಿಕ ಸರಬರಾಜು ಗ್ರಾಹಕ ವ್ಯವಹಾರಗಳ ಇಲಾಖೆಯು ಡಿಸೆಂಬರ್‍‌ ತಿಂಗಳ ಸಮೀಕ್ಷೆಗೆ ಹಣ ಬಿಡುಗಡೆ ಮಾಡುವ ಸಂಬಂಧ 2023ರ ಸೆ.26ರಂದು ಇಲಾಖೆಯ ಆಯುಕ್ತರಿಗೆ ಪತ್ರ ಬರೆದಿತ್ತು.

 

ಈ ಸಂಬಂಧ ಎಂ2ಎಂ ಮೀಡಿಯಾ ನೆಟ್‌ವರ್ಕ್‌ ಕಂಪನಿಯೊಂದಿಗೆ ಮಾಡಿಕೊಂಡಿರುವ ಎಂಒಯು, ಒಪ್ಪಂದ, ಟರ್ಮ್ಸ್‌ ಆಫ್ ರೆಫರೆನ್ಸ್‌, ಟರ್ಮ್ಸ್‌ ಆಫ್‌ ಕಂಡೀಷನ್ಸ್‌ ಸೇರಿದಂತೆ ಇನ್ನಿತರೆ ಸಮಗ್ರ ವಿವರ ಮತ್ತು ಸಮಗ್ರ ಕಡತವನ್ನು ಕೋರಿ ‘ದಿ ಫೈಲ್‌’ 2023ರ ನವೆಂಬರ್‍‌ 9ರಂದು ಆರ್‍‌ಟಿಐ ಅಡಿಯಲ್ಲಿ  ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯನ್ನು ಸರ್ಕಾರವು 2023ರ ನವೆಂಬರ್‍‌ 24ರಂದು ಆಯುಕ್ತರಿಗೆ ವರ್ಗಾಯಿಸಿತ್ತು.

 

ಇದಕ್ಕೆ ಆಯುಕ್ತರ ಕಚೇರಿಯು  2023ರ ಡಿಸೆಂಬರ್‍‌ 19ರಂದು ಉತ್ತರ ನೀಡಿದೆ.

 

ಉತ್ತರದಲ್ಲೇನಿದೆ?

 

ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಆಯುಕ್ತರ ಕಚೇರಿಯಲ್ಲಿ ಎಂಒಯು, ಅಗ್ರಿಮೆಂಟ್‌, ಟರ್ಮ್ಸ್‌ ಆಫ್‌ ರೆಫರೆನ್ಸ್‌, ಟರ್ಮ್ಸ್‌ ಆಫ್‌ ಕಂಡೀಷನ್‌ ವಿವರಗಳು ಲಭ್ಯವಿಲ್ಲ ಎಂಬ ಅಂಶವನ್ನು ತಿಳಿಯಪಡಿಸಿದೆ ಎಂದು ಉತ್ತರ ಒದಗಿಸಿದೆ.

 

 

ಈ ಸಂಬಂಧ ಇಲಾಖೆಯ ಸಚಿವ ಮುನಿಯಪ್ಪ  ಮತ್ತು ಆಯುಕ್ತರೊಂದಿಗೆ  ಚರ್ಚಿಸಿದ ನಂತರ ಅಪರ ನಿರ್ದೇಶಕರು ಈ  ಮಾಹಿತಿ ಒದಗಿಸಿದ್ದಾರೆ ಎಂದು ಗೊತ್ತಾಗಿದೆ.

 

ಅನ್ನಭಾಗ್ಯ ಯೋಜನೆ ಸಮೀಕ್ಷೆ ಸಂಬಂಧ ಎಂ2ಎಂ ಮೀಡಿಯಾ ನೆಟ್‌ವರ್ಕ್‌ ಕಂಪನಿಗೆ 25 ಲಕ್ಷ ರು. ಅನುದಾನ ಒದಗಿಸಲು ಆರ್ಥಿಕ ಇಲಾಖೆಯು 4(ಜಿ) ವಿನಾಯಿತಿ ನೀಡಿತ್ತು. ಈ ಕಂಪನಿಗೆ 25 ಲಕ್ಷ ರು. ಪಾವತಿಸಲು ಇಲಾಖೆಯು ಆಯುಕ್ತರಿಗೆ ಪತ್ರ ಬರೆದಿತ್ತು.

ಗ್ಯಾರಂಟಿಗಳ ಸಮೀಕ್ಷೆ; ಮಾಧ್ಯಮ ಸಂಸ್ಥೆಗೆ ಕೋಟಿ ರು ಕೊಟ್ಟ ಸರ್ಕಾರ

 

ಯಾವುದೇ ಇಲಾಖೆ, ನಿಗಮವು ಮತ್ತೊಂದು ಖಾಸಗಿ ಕಂಪನಿಗೆ ಹಣ ಪಾವತಿಸುವ ಮುನ್ನ ಸಂಬಂಧಪಟ್ಟ ಕಂಪನಿ, ಏಜೆನ್ಸಿಯೊಂದಿಗೆ ಒಪ್ಪಂದ ಮಾಡಿಕೊಳ್ಳುತ್ತದೆ.  ಆದರೆ ಈ ಸಂಬಂಧ   ಆಯುಕ್ತರ ಕಚೇರಿಯಲ್ಲಿಯೂ ಸಮಗ್ರ ವಿವರಗಳೇ ಲಭ್ಯವಿಲ್ಲ ಎಂದು ನೀಡಿರುವ ಉತ್ತರವು ಸಂಶಯಗಳಿಗೆ ಕಾರಣವಾಗಿದೆ.

 

ಗೃಹ ಜ್ಯೋತಿ ಯೋಜನೆ ಸಮೀಕ್ಷೆ ನಡೆಸಲು ಬೆಂಗಳೂರು ವಿದ್ಯುತ್‌ ಸರಬರಾಜು ಕಂಪನಿಯು ಇದೇ ಎಂ2ಎಂ ಮೀಡಿಯಾ ನೆಟ್‌ವರ್ಕ್‌ಗೆ ಕಾರ್ಯಾದೇಶ ನೀಡಿದೆ. ಆದರೆ ಕಡತವನ್ನು ಒದಗಿಸದೇ ಮುಚ್ಚಿಟ್ಟಿತ್ತು.

ಕೋಟಿ ರು. ವೆಚ್ಚದ ಸಮೀಕ್ಷೆ; ಎಂ2ಎಂ ಕಂಪನಿಗೆ ನೀಡಿರುವ ಆದೇಶದ ಸಮಗ್ರ ಕಡತವನ್ನೇ ಮುಚ್ಚಿಟ್ಟ ಬೆಸ್ಕಾಂ

ಅದೇ ರೀತಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಸಹ ಕಾರ್ಯಾದೇಶವೂ ಸೇರಿದಂತೆ ಯಾವುದೇ ದಾಖಲೆಗಳನ್ನೂ ಆರ್‌ಟಿಐ ಅಡಿಯಲ್ಲಿ ಒದಗಿಸಿರಲಿಲ್ಲ.

ಕೋಟಿ ರು. ಸಮೀಕ್ಷೆ; 20 ಲಕ್ಷರು ಮುಂಗಡ ನೀಡಿ ದಾಖಲೆಗಳನ್ನೇ ಒದಗಿಸದ ಕೆಎಸ್‌ಆರ್‍‌ಟಿಸಿ

ನಾಲ್ಕು ಗ್ಯಾರಂಟಿ ಯೋಜನೆಗಳನ್ನು ಸಮೀಕ್ಷೆ ನಡೆಸುವ ಸಂಬಂಧ 4(ಜಿ) ವಿನಾಯಿತಿ ನೀಡಿರುವುದು ಸಾಕಷ್ಟು ಚರ್ಚೆಗೆ ಕಾರಣವಾಗಿರುವುದನ್ನು ಸ್ಮರಿಸಬಹುದು.

Hot this week

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ...

ರೋಹಿತ್ ವೇಮುಲ ಕಾಯ್ದೆ; ವ್ಯಾಖ್ಯಾನಗಳು ಅಸ್ಪಷ್ಟ, ಕಾನೂನು ಬಲವಿಲ್ಲ, ವಿಧೇಯಕವೇ ಅಪೂರ್ಣ

ಬೆಂಗಳೂರು; ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಯಾರೊಬ್ಬರೂ ಜಾತಿ ಆಧಾರದಲ್ಲಿ ತಾರತಮ್ಯ ಎದುರಿಸಬಾರದು...

ಗ್ರಾಮಠಾಣ ಜಮೀನು ಅದಲು-ಬದಲು; ಆರ್ಥಿಕ ಇಲಾಖೆ ಆಕ್ಷೇಪ ಬದಿಗೊತ್ತಿ ಎಂ ಆರ್ ಸೀತಾರಾಂ ಕುಟುಂಬದ ಬೆನ್ನಿಗೆ ನಿಂತ ಸರ್ಕಾರ

ಬೆಂಗಳೂರು; ಸರ್ಕಾರಿ ಭೂಮಿಗೆ ರಸ್ತೆಯ ಸಂಪರ್ಕ ಹೊಂದಿಲ್ಲದಿರುವ, ರಸ್ತೆ ಸಂಪರ್ಕ ಕಲ್ಪಿಸದೇ...

ಅದಾನಿ ಎಸಿಸಿ ಲಿಮಿಟೆಡ್‌ನಿಂದ ಅಕ್ರಮ ಗಣಿಗಾರಿಕೆ; ನಿರ್ದೇಶಕರು, ಅಧಿಕಾರಿಗಳ ವಿರುದ್ಧ ಲೋಕಾ ತನಿಖೆಗೆ ಶಿಫಾರಸ್ಸು, ಕಡತಕ್ಕೆ ಧೂಳು

ಬೆಂಗಳೂರು;  ಕಲ್ಬುರ್ಗಿಯ ವಾಡಿಯಲ್ಲಿ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್ ಪ್ರೈವೈಟ್ ಲಿಮಿಟೆಡ್...

1,260 ಕೋಟಿ ಮೊತ್ತದ ಹಗರಣ; 3 ವರ್ಷವಾದರೂ ಕಾಣದ ತಾರ್ಕಿಕ ಅಂತ್ಯ, ತೆವಳಿದ ಲೋಕಾ ತನಿಖೆ

ಬೆಂಗಳೂರು;  1,260 ಕೋಟಿ ರು ಮೊತ್ತದಲ್ಲಿ  108 ಆರೋಗ್ಯ ಕವಚ ಆಂಬ್ಯುಲೆನ್ಸ್‌ಗಳನ್ನು...

Topics

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ...

ರೋಹಿತ್ ವೇಮುಲ ಕಾಯ್ದೆ; ವ್ಯಾಖ್ಯಾನಗಳು ಅಸ್ಪಷ್ಟ, ಕಾನೂನು ಬಲವಿಲ್ಲ, ವಿಧೇಯಕವೇ ಅಪೂರ್ಣ

ಬೆಂಗಳೂರು; ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಯಾರೊಬ್ಬರೂ ಜಾತಿ ಆಧಾರದಲ್ಲಿ ತಾರತಮ್ಯ ಎದುರಿಸಬಾರದು...

ಗ್ರಾಮಠಾಣ ಜಮೀನು ಅದಲು-ಬದಲು; ಆರ್ಥಿಕ ಇಲಾಖೆ ಆಕ್ಷೇಪ ಬದಿಗೊತ್ತಿ ಎಂ ಆರ್ ಸೀತಾರಾಂ ಕುಟುಂಬದ ಬೆನ್ನಿಗೆ ನಿಂತ ಸರ್ಕಾರ

ಬೆಂಗಳೂರು; ಸರ್ಕಾರಿ ಭೂಮಿಗೆ ರಸ್ತೆಯ ಸಂಪರ್ಕ ಹೊಂದಿಲ್ಲದಿರುವ, ರಸ್ತೆ ಸಂಪರ್ಕ ಕಲ್ಪಿಸದೇ...

ಅದಾನಿ ಎಸಿಸಿ ಲಿಮಿಟೆಡ್‌ನಿಂದ ಅಕ್ರಮ ಗಣಿಗಾರಿಕೆ; ನಿರ್ದೇಶಕರು, ಅಧಿಕಾರಿಗಳ ವಿರುದ್ಧ ಲೋಕಾ ತನಿಖೆಗೆ ಶಿಫಾರಸ್ಸು, ಕಡತಕ್ಕೆ ಧೂಳು

ಬೆಂಗಳೂರು;  ಕಲ್ಬುರ್ಗಿಯ ವಾಡಿಯಲ್ಲಿ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್ ಪ್ರೈವೈಟ್ ಲಿಮಿಟೆಡ್...

1,260 ಕೋಟಿ ಮೊತ್ತದ ಹಗರಣ; 3 ವರ್ಷವಾದರೂ ಕಾಣದ ತಾರ್ಕಿಕ ಅಂತ್ಯ, ತೆವಳಿದ ಲೋಕಾ ತನಿಖೆ

ಬೆಂಗಳೂರು;  1,260 ಕೋಟಿ ರು ಮೊತ್ತದಲ್ಲಿ  108 ಆರೋಗ್ಯ ಕವಚ ಆಂಬ್ಯುಲೆನ್ಸ್‌ಗಳನ್ನು...

ಶೈಕ್ಷಣಿಕ ಸಂಯೋಜಕ ಹುದ್ದೆ; 88.06 ಕೋಟಿ ಹೊರೆ, ಅರ್ಹ 1,500 ಅತಿಥಿ ಉಪನ್ಯಾಸಕರ ಹುದ್ದೆ ಕಿತ್ತುಕೊಂಡಿತೇ?

ಬೆಂಗಳೂರು; ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ದ  ನಿಗದಿತ ವಿದ್ಯಾರ್ಹತೆ ಹೊಂದದ...

ಅರಣ್ಯ ಜಮೀನಿನ ಖಾತೆ ಬದಲಾವಣೆ, ಅಸಮರ್ಪಕ ವರದಿ; ತಡವಾಗಿ ವಿಚಾರಣೆ, ನೋಟೀಸ್ ಜಾರಿ

ಬೆಂಗಳೂರು; ಭಾರತ ಸರ್ಕಾರದ ಅರಣ್ಯ ಸಚಿವಾಲಯದಿಂದ ಯಾವುದೇ ಪೂರ್ವಾನುಮತಿ ಪಡೆಯದೇ ಅಂದಾಜು...

ಸಾಮಾಜಿಕ ಭದ್ರತಾ ಯೋಜನೆ; ಖರ್ಚಾಗದ ಪೂರ್ಣ ಅನುದಾನ, 676.16 ಕೋಟಿ ಉಳಿಕೆ

ಬೆಂಗಳೂರು; ವೃದ್ಧಾಪ್ಯ, ಸಂಧ್ಯಾ ಸುರಕ್ಷಾ ಸೇರಿದಂತೆ ಒಟ್ಟಾರೆ 12 ಸಾಮಾಜಿಕ ಭದ್ರತಾ...

Related Articles

Popular Categories

error: Content is protected !!