Saturday | March 21, 2026 |

ಕೋಟಿ ರು. ಸಮೀಕ್ಷೆ; 20 ಲಕ್ಷರು ಮುಂಗಡ ನೀಡಿ ದಾಖಲೆಗಳನ್ನೇ ಒದಗಿಸದ ಕೆಎಸ್‌ಆರ್‍‌ಟಿಸಿ

Support THE-FILE

spot_img

ಬೆಂಗಳೂರು; ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆ ಸಮೀಕ್ಷೆ ನಡೆಸಲು ಎಂ2ಎಂ ಮೀಡಿಯಾ ನೆಟ್‌ವರ್ಕ್‌ ಕಂಪನಿಗೆ ಮುಂಗಡವಾಗಿ 20 ಲಕ್ಷ ರು. ಬಿಡುಗಡೆ ಮಾಡಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಈ ಸಂಬಂಧ ಯಾವುದೇ ದಾಖಲೆಗಳನ್ನೂ ಒದಗಿಸಿಲ್ಲ.

 

ಗೃಹ ಜ್ಯೋತಿ ಮತ್ತು ಅನ್ನಭಾಗ್ಯ ಯೋಜನೆಯ ಸಮೀಕ್ಷೆ ಸಂಬಂಧವೂ ಎರಡೂ ಇಲಾಖೆಗಳೂ ಆರ್‍‌ಟಿಐ ಅಡಿ ಯಾವುದೇ ದಾಖಲೆಗಳನ್ನೂ ನೀಡಿಲ್ಲ. ಇದರ ನಡುವೆಯೇ ಸಾರಿಗೆ ಇಲಾಖೆಯು ಸಹ 20 ಲಕ್ಷ ರು. ಮುಂಗಡವಾಗಿ ಬಿಡುಗಡೆ ಮಾಡಿರುವ ಸಂಬಂಧದ ಕಡತವನ್ನೇ ಒದಗಿಸಿಲ್ಲ. ಬದಲಿಗೆ ಸಾರಿಗೆ ಇಲಾಖೆಯು ಹೊರಡಿಸಿದ್ದ ಆದೇಶವನ್ನೇ ಒದಗಿಸಿ ಕೈ ತೊಳೆದುಕೊಂಡಿದೆ.

 

ಆರ್ಥಿಕ ಇಲಾಖೆಯ ಅಧಿಸೂಚನೆಯನ್ನಾಧರಿಸಿ ಸಮೀಕ್ಷೆ ನಡೆಸಲು ಸಾರಿಗೆ ಇಲಾಖೆಯು ಎಂ2ಎಂ ಮೀಡಿಯಾ ನೆಟ್‌ವರ್ಕ್‌ ಲಿಮಿಟೆಡ್‌ಗೆ 2023ರ ಸೆ.20ರಂದು ಆದೇಶ ನೀಡಿತ್ತು. 25 ಲಕ್ಷ ರು.ಗಳನ್ನು ಕೆಎಸ್‌ಆರ್‍‌ಟಿಸಿ ಸಂಸ್ಥೆಗೆ ಬಿಡುಗಡೆಗೊಳಿಸಿತ್ತು.

 

ಎಂ2ಎಂ ಮೀಡಿಯಾ ನೆಟ್‌ವರ್ಕ್‌ ಕಂಪನಿಗೆ ಶೇ.80ರಷ್ಟು ಮೊತ್ತವನ್ನು ಬಿಡುಗಡೆಗೊಳಿಸಬೇಕು ಎಂದು ಸಾರಿಗೆ ಇಲಾಖೆಯು ಆದೇಶಿಸಿತ್ತು.

 

ಕರ್ನಾಟಕ ಸರ್ಕಾರದಿಂದ ಅನುಷ್ಠಾನಗೊಳಿಸಿರುವ ನಾಲ್ಕು ಖಾತರಿಗಳ ಕುರಿತು ಎಂ2ಎಂ ಮೀಡಿಯಾ ನೆಟ್‌ವರ್ಕ್ ಲಿಮಿಟೆಡ್‌ನಿಂದ ಸಮೀಕ್ಷೆ ನಡೆಸಲು ಸಾರಿಗೆ ಇಲಾಖೆಯ ಪಾಲಿನ ಮೊತ್ತವಾದ 25 ಲಕ್ಷ ರು.ಗಳ ಅನುದಾನವನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನಿಗಮಕ್ಕೆ ಬಿಡುಗಡೆಗೊಳಿಸಿ ಆದೇಶಿಸಲಾಗಿದೆ.ಬಿಡುಗಡೆ ಮಾಡಿರುವ ಶೇ.80ರಷ್ಟು ಮೊತ್ತವನ್ನು ಎಂ2ಎಂ ಮೀಡಿಯಾ ನೆಟ್‌ವರ್ಕ್‌ ಎಲ್‌ಎಲ್‌ಪಿಗೆ ಕೂಡಲೇ ಪಾವತಿಸಿ ಸರ್ಕಾರಕ್ಕೆ ಸೂಕ್ತ ದಾಖಲೆಗಳನ್ನು ಒದಗಿಸಬೇಕು. ಉಳಿದ ಶೇ.20ರಷ್ಟು ಮೊತ್ತವನ್ನು ಸೆ.2023ರ ಒಳಗಾಗಿ ಪಾವತಿಸಿ ಸರ್ಕಾರಕ್ಕೆ ಸೂಕ್ತ ದಾಖಲೆ ಒದಗಿಸಬೇಕು ಎಂದು ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಪುಷ್ಪ ವಿ ಎಸ್‌ ಅವರು 2023ರ ಸೆ.20ರಂದು ಆದೇಶದಲ್ಲಿ ಸೂಚಿಸಿದ್ದರು.

ಕೋಟಿ ರು. ವೆಚ್ಚದ ಸಮೀಕ್ಷೆ; ಎಂ2ಎಂ ಕಂಪನಿಗೆ ನೀಡಿರುವ ಆದೇಶದ ಸಮಗ್ರ ಕಡತವನ್ನೇ ಮುಚ್ಚಿಟ್ಟ ಬೆಸ್ಕಾಂ

‘ಅನುದಾನ ಬಿಡುಗಡೆ ಮಾಡಲು ಆದೇಶ ಹೊರಡಿಸಲಾಗಿದೆ. ಆದರೆ ವರದಿಯನ್ನು ಸಾರಿಗೆ ಇಲಾಖೆಗೆ ಸಲ್ಲಿಸಬೇಕೇ ಅಥವಾ ಸರ್ಕಾರಕ್ಕೆ ಸಲ್ಲಿಸಬೇಕೇ ಎಂಬ ಬಗ್ಗೆ ಯಾವುದೇ ಮಾಹಿತಿಯಿಲ್ಲ. ಹೀಗಾಗಿ  ಸಮೀಕ್ಷೆ ವರದಿ ಬಗ್ಗೆ ನಮಗೇನು ಮಾಹಿತಿಯಿಲ್ಲ,’ ಎಂದು ಗ್ಯಾರಂಟಿ ಅನುಷ್ಠಾನ ಹೊಣೆ ಹೊತ್ತಿರುವ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ‘ದಿ ಫೈಲ್‌’ಗೆ ತಿಳಿಸಿದ್ದರು.

 

ಆದರೆ ಈ ಸಂಬಂಧ ಕೆಎಸ್‌ಆರ್‍‌ಟಿಸಿಯು ಸಾರಿಗೆ ಇಲಾಖೆಯು ಹೊರಡಿಸಿರುವ ಆದೇಶವನ್ನು ಹೊರತುಪಡಿಸಿ ನಿಗಮದಲ್ಲಿ ನಡೆದಿರುವ ಪತ್ರ ವ್ಯವಹಾರಗಳು, ವ್ಯವಹಾರ ಪುಟಗಳು, ಟಿಪ್ಪಣಿ ಹಾಳೆಗಳು, ಎಂ2ಎಂ ಮೀಡಿಯಾ ನೆಟ್‌ವರ್ಕ್‌ನೊಂದಿಗೆ ಮಾಡಿಕೊಂಡಿರುವ ಎಂಒಯು ಸೇರಿದಂತೆ ಒಂದೇ ಒಂದು ದಾಖಲೆಯನ್ನೂ ನೀಡಿಲ್ಲ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಈ ನಡೆಯು ಸಂಶಯಗಳಿಗೆ ದಾರಿಮಾಡಿಕೊಟ್ಟಿದೆ.

 

ಸಚಿವ ರಾಮಲಿಂಗಾರೆಡ್ಡಿ ಮತ್ತು ನಿಗಮದ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್‌ ಅವರ ಪ್ರತಿಕ್ರಿಯೆಗಾಗಿ ‘ದಿ ಫೈಲ್‌’ ಪ್ರಯತ್ನಿಸಿತು. ಆದರೆ ಇಬ್ಬರೂ ಸಂಪರ್ಕಕ್ಕೆ ಸಿಗಲಿಲ್ಲ. ಪ್ರತಿಕ್ರಿಯೆ ದೊರಕಿದ ಬಳಿಕ ಈ ವರದಿಯನ್ನು ನವೀಕರಿಸಲಾಗುತ್ತದೆ.

 

ಟೆಂಡರ್‌, ದರಪಟ್ಟಿ ಅಹ್ವಾನವಿಲ್ಲ

 

ಇನ್ನು, ಸಮೀಕ್ಷೆ ವೆಚ್ಚವು 5 ಲಕ್ಷ ರು. ಮಿತಿ ದಾಟಿರುವ ಕಾರಣ ಸರ್ಕಾರವು ಟೆಂಡರ್‌, ದರಪಟ್ಟಿ ಆಹ್ವಾನಿಸಬೇಕಿತ್ತು. ಆದರೆ ಈ ಎಲ್ಲಾ ಪ್ರಕ್ರಿಯೆಗಳನ್ನು ಬದಿಗೊತ್ತಿ ನೇರವಾಗಿ ಎಂ2ಎಂ ಮೀಡಿಯಾ ನೆಟ್‌ವರ್ಕ್‌ ಕಂಪನಿಗೆ ಸಮೀಕ್ಷೆ ಹೊಣೆಗಾರಿಕೆ ವಹಿಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿತ್ತು.  ಅಲ್ಲದೇ ಈ  ಪ್ರಕರಣದಲ್ಲಿ 4(ಜಿ) ವಿನಾಯಿತಿಯನ್ನೂ ಸರ್ಕಾರವು  ದುರ್ಬಳಕೆ ಮಾಡಿಕೊಂಡಿತ್ತು ಎಂಬ ಆರೋಪ ಕೇಳಿ ಬಂದಿತ್ತು.

 

5 ಲಕ್ಷ ರು. ಮೇಲ್ಪಟ್ಟ ಕೆಲಸವಾಗಿರುವುದರಿಂದ ಕೆಟಿಪಿಪಿ ಕಾಯ್ದೆ ಪ್ರಕಾರ ಟೆಂಡರ್‍‌ ಕರೆಯಲು ಆರ್ಥಿಕ ಇಲಾಖೆಯು ಸೂಚಿಸಬೇಕಿತ್ತು. ಮೇಲಾಗಿ ಗ್ಯಾರಂಟಿ ಯೋಜನೆಗಳ ಕುರಿತಾಗಿ ನಡೆಸುವ ಸಮೀಕ್ಷೆಯು ಅತ್ಯಂತ ಅಗತ್ಯ ಮತ್ತು ತುರ್ತಿನ ಕಾಮಗಾರಿ, ಅಥವಾ ಸಂಗ್ರಹಣೆ ಅಲ್ಲದಿದ್ದರೂ ಇದೇ ಕಂಪನಿಗೇ ಆರ್ಥಿಕ ಇಲಾಖೆಯು 4 (ಜಿ) ವಿನಾಯಿತಿ ನೀಡಿದ್ದು ಸಂಶಯಗಳಿಗೆ ಕಾರಣವಾಗಿತ್ತು.

Hot this week

ಎಂ ಆರ್ ಸೀತಾರಾಂ ಕುಟುಂಬ ಸದಸ್ಯರ ವಿರುದ್ಧ ಭೂಕಬಳಿಕೆ ಆರೋಪ; ದೂರು ಮರೆಮಾಚಿತ್ತೇ ಕಂದಾಯ ಇಲಾಖೆ?

ಬೆಂಗಳೂರು; ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕಸಬಾ ಹೋಬಳಿ ಅಕ್ಲೇನಹಳ್ಳಿ...

ನರೇಗಾ ಅಕ್ರಮ; 2 ವರ್ಷದಲ್ಲಿ 105.1 ಕೋಟಿ ದುರುಪಯೋಗ, 12.34 ಕೋಟಿಯಷ್ಟೇ ವಸೂಲು

  ಬೆಂಗಳೂರು; ಕಳೆದ ಮೂರು ವರ್ಷಗಳಲ್ಲಿ  ಮಹಾತ್ಮಗಾಂಧಿ ನರೇಗಾ ಯೋಜನೆಯಡಿ 64,806 ಪ್ರಕರಣಗಳಲ್ಲಿ...

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ...

ರೋಹಿತ್ ವೇಮುಲ ಕಾಯ್ದೆ; ವ್ಯಾಖ್ಯಾನಗಳು ಅಸ್ಪಷ್ಟ, ಕಾನೂನು ಬಲವಿಲ್ಲ, ವಿಧೇಯಕವೇ ಅಪೂರ್ಣ

ಬೆಂಗಳೂರು; ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಯಾರೊಬ್ಬರೂ ಜಾತಿ ಆಧಾರದಲ್ಲಿ ತಾರತಮ್ಯ ಎದುರಿಸಬಾರದು...

ಗ್ರಾಮಠಾಣ ಜಮೀನು ಅದಲು-ಬದಲು; ಆರ್ಥಿಕ ಇಲಾಖೆ ಆಕ್ಷೇಪ ಬದಿಗೊತ್ತಿ ಎಂ ಆರ್ ಸೀತಾರಾಂ ಕುಟುಂಬದ ಬೆನ್ನಿಗೆ ನಿಂತ ಸರ್ಕಾರ

ಬೆಂಗಳೂರು; ಸರ್ಕಾರಿ ಭೂಮಿಗೆ ರಸ್ತೆಯ ಸಂಪರ್ಕ ಹೊಂದಿಲ್ಲದಿರುವ, ರಸ್ತೆ ಸಂಪರ್ಕ ಕಲ್ಪಿಸದೇ...

Topics

ಎಂ ಆರ್ ಸೀತಾರಾಂ ಕುಟುಂಬ ಸದಸ್ಯರ ವಿರುದ್ಧ ಭೂಕಬಳಿಕೆ ಆರೋಪ; ದೂರು ಮರೆಮಾಚಿತ್ತೇ ಕಂದಾಯ ಇಲಾಖೆ?

ಬೆಂಗಳೂರು; ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕಸಬಾ ಹೋಬಳಿ ಅಕ್ಲೇನಹಳ್ಳಿ...

ನರೇಗಾ ಅಕ್ರಮ; 2 ವರ್ಷದಲ್ಲಿ 105.1 ಕೋಟಿ ದುರುಪಯೋಗ, 12.34 ಕೋಟಿಯಷ್ಟೇ ವಸೂಲು

  ಬೆಂಗಳೂರು; ಕಳೆದ ಮೂರು ವರ್ಷಗಳಲ್ಲಿ  ಮಹಾತ್ಮಗಾಂಧಿ ನರೇಗಾ ಯೋಜನೆಯಡಿ 64,806 ಪ್ರಕರಣಗಳಲ್ಲಿ...

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ...

ರೋಹಿತ್ ವೇಮುಲ ಕಾಯ್ದೆ; ವ್ಯಾಖ್ಯಾನಗಳು ಅಸ್ಪಷ್ಟ, ಕಾನೂನು ಬಲವಿಲ್ಲ, ವಿಧೇಯಕವೇ ಅಪೂರ್ಣ

ಬೆಂಗಳೂರು; ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಯಾರೊಬ್ಬರೂ ಜಾತಿ ಆಧಾರದಲ್ಲಿ ತಾರತಮ್ಯ ಎದುರಿಸಬಾರದು...

ಗ್ರಾಮಠಾಣ ಜಮೀನು ಅದಲು-ಬದಲು; ಆರ್ಥಿಕ ಇಲಾಖೆ ಆಕ್ಷೇಪ ಬದಿಗೊತ್ತಿ ಎಂ ಆರ್ ಸೀತಾರಾಂ ಕುಟುಂಬದ ಬೆನ್ನಿಗೆ ನಿಂತ ಸರ್ಕಾರ

ಬೆಂಗಳೂರು; ಸರ್ಕಾರಿ ಭೂಮಿಗೆ ರಸ್ತೆಯ ಸಂಪರ್ಕ ಹೊಂದಿಲ್ಲದಿರುವ, ರಸ್ತೆ ಸಂಪರ್ಕ ಕಲ್ಪಿಸದೇ...

ಅದಾನಿ ಎಸಿಸಿ ಲಿಮಿಟೆಡ್‌ನಿಂದ ಅಕ್ರಮ ಗಣಿಗಾರಿಕೆ; ನಿರ್ದೇಶಕರು, ಅಧಿಕಾರಿಗಳ ವಿರುದ್ಧ ಲೋಕಾ ತನಿಖೆಗೆ ಶಿಫಾರಸ್ಸು, ಕಡತಕ್ಕೆ ಧೂಳು

ಬೆಂಗಳೂರು;  ಕಲ್ಬುರ್ಗಿಯ ವಾಡಿಯಲ್ಲಿ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್ ಪ್ರೈವೈಟ್ ಲಿಮಿಟೆಡ್...

1,260 ಕೋಟಿ ಮೊತ್ತದ ಹಗರಣ; 3 ವರ್ಷವಾದರೂ ಕಾಣದ ತಾರ್ಕಿಕ ಅಂತ್ಯ, ತೆವಳಿದ ಲೋಕಾ ತನಿಖೆ

ಬೆಂಗಳೂರು;  1,260 ಕೋಟಿ ರು ಮೊತ್ತದಲ್ಲಿ  108 ಆರೋಗ್ಯ ಕವಚ ಆಂಬ್ಯುಲೆನ್ಸ್‌ಗಳನ್ನು...

ಶೈಕ್ಷಣಿಕ ಸಂಯೋಜಕ ಹುದ್ದೆ; 88.06 ಕೋಟಿ ಹೊರೆ, ಅರ್ಹ 1,500 ಅತಿಥಿ ಉಪನ್ಯಾಸಕರ ಹುದ್ದೆ ಕಿತ್ತುಕೊಂಡಿತೇ?

ಬೆಂಗಳೂರು; ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ದ  ನಿಗದಿತ ವಿದ್ಯಾರ್ಹತೆ ಹೊಂದದ...

Related Articles

Popular Categories

error: Content is protected !!