Thursday | April 30, 2026 |

ದತ್ತ ಮಾಲಾಧಾರಿಗಳ ವಿರುದ್ಧದ ಪ್ರಕರಣ ಹಿಂಪಡೆದಿದ್ದ ಬಿಜೆಪಿ ಸರ್ಕಾರ; ಮುನ್ನೆಲೆಗೆ ಬಂದ ದಾಖಲೆ

ಬೆಂಗಳೂರು; ದತ್ತ ಪೀಠಕ್ಕೆ ತೆರಳುತ್ತಿದ್ದ ದತ್ತ ಮಾಲಾಧಾರಿಗಳು ಉರೂಸ್‌ ಹಬ್ಬಕ್ಕೆಂದು ಕಟ್ಟಿದ್ದ ಧ್ವಜವನ್ನು ಕಿತ್ತು ಹಾಕಿದ್ದ ಪ್ರಕರಣವು ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದ ವೇಳೆಯಲ್ಲಿಯೇ ಹಿಂದಿನ ಬಿಜೆಪಿ ಸರ್ಕಾರವು ಪ್ರಕರಣವನ್ನು ಹಿಂಪಡೆದಿತ್ತು ಎಂಬುದು ಇದೀಗ ಮುನ್ನೆಲೆಗೆ ಬಂದಿದೆ.

 

ಬಾಬಾಬುಡನ್ ಗಿರಿಯಲ್ಲಿ ಗೋರಿ ಧ್ವಂಸ ಪ್ರಕರಣವನ್ನು ಮರು ತನಿಖೆಗೆ ಆದೇಶ ನೀಡಲಾಗಿದೆ ಎಂದು ಪ್ರಸಾರವಾಗುತ್ತಿರುವ ಸುದ್ದಿಯು ಬಿಜೆಪಿಯನ್ನು ಕೆರಳಿಸಿದೆ. ಆದರೆ ಚಿಕ್ಕಮಗಳೂರಿನ ಬಾಳೆಹೊನ್ನೂರಿನ ಪೊಲೀಸ್‌ ಠಾಣೆಯಲ್ಲಿ ಕಳೆದ 9 ವರ್ಷಗಳ ಹಿಂದೆಯೇ ದತ್ತಮಾಲಾಧಾರಿಗಳ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿಯೇ ಹಿಂಪಡೆಯಲಾಗಿತ್ತು ಎಂಬುದು ಚರ್ಚೆಗೆ ಗ್ರಾಸವಾಗಿದೆ.

 

ಬಾಬಾಬುಡನ್ ಗಿರಿಯಲ್ಲಿ ಗೋರಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ  ದತ್ತಪೀಠ ಹೋರಾಟಗಾರರನ್ನು ವಿಚಾರಣೆ ನಡೆಸಲು 2020ರ ಮಾರ್ಚ್‌ 19ರಂದು ಪೊಲೀಸರು ಸರ್ಕಾರಕ್ಕೆ ಮನವಿ ಮಾಡಿದ್ದರು. ಆದರೆ ಅಂದು ಗೃಹ ಸಚಿವರಾಗಿದ್ದ ಬಸವರಾಜ ಬೊಮ್ಮಾಯಿ  ಅವರು ಈ ಪ್ರಕರಣವನ್ನು ವಿಚಾರಣೆಯಿಂದ ಹಿಂಪಡೆದಿರಲಿಲ್ಲ. ಮತ್ತು ಪೊಲೀಸರ ಮನವಿಯನ್ನು ಪುರಸ್ಕರಿಸಿರಲಿಲ್ಲ ಎಂದು ಗೊತ್ತಾಗಿದೆ.

 

ಬದಲಿಗೆ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ (ಮೊಕದ್ದಮೆ ಸಂಖ್ಯೆ; 114/2014) ಪ್ರಕರಣವನ್ನು 2020ರ ಮಾರ್ಚ್‌ 9ರಂದು ಹಿಂಪಡೆಯಲು ಅನುಮೋದಿಸಿದ್ದರು.

 

ಈ ಕುರಿತು ‘ದಿ ಫೈಲ್‌’ ಆರ್‍‌ಟಿಐ ಅಡಿಯಲ್ಲಿ ದಾಖಲೆಗಳನ್ನು ಪಡೆದುಕೊಂಡಿದೆ.

 

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಯಲ್ಲಿರುವ ಅಪರಾಧ ಪ್ರಕರಣಗಳನ್ನು ಹಿಂಪಡೆಯುವ ಕುರಿತು ಗೃಹ ಸಚಿವರಾಗಿದ್ದ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸಚಿವ ಸಂಪುಟ ಉಪ ಸಮಿತಿಯು 2020ರ ಮಾರ್ಚ್‌ 9ರಂದು ಸಭೆ ನಡೆಸಿತ್ತು. ಈ ಸಭೆಯಲ್ಲಿ ಒಟ್ಟು 164 ಪ್ರಕರಣಗಳಿಗೆ ಸಂಬಂಧಿಸಿದ 19 ಕಡತಗಳನ್ನು ಪರಿಶೀಲನೆಗಾಗಿ ಸಮಿತಿ ಮುಂದೆ ಇರಿಸಿತ್ತು.

 

ಈ ಪೈಕಿ ದತ್ತಮಾಲಾಧಾರಿಗಳ ವಿರುದ್ಧದ ಪ್ರಕರಣದ ಕಡತವೂ ಪಟ್ಟಿಯಲ್ಲಿತ್ತು. 2014ರಲ್ಲಿ ದಾಖಲಾಗಿದ್ದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ದೋಷಾರೋಪಣೆ ಪಟ್ಟಿಯನ್ನು ಸಲ್ಲಿಸಿದ್ದರು. ಆದರೂ ವಿಚಾರಣೆಯಿಂದ ಈ ಪ್ರಕರಣವನ್ನು ಹಿಂಪಡೆಯುವುದು ಸೂಕ್ತ ಎಂದು ಸಭೆಯು ತೀರ್ಮಾನಿಸಿತ್ತು ಎಂಬುದು ಸಭೆಯ ನಡವಳಿಯಿಂದ ತಿಳಿದು ಬಂದಿದೆ.

 

ಪ್ರಕರಣದ ಹಿನ್ನೆಲೆ

 

ಚಿಕ್ಕಮಗಳೂರಿನಲ್ಲಿರುವ ಇನಾಮ್‌ ದತ್ತಾತ್ರೇಯ ಪೀಠ (ದತ್ತ ಪೀಠ)ದಲ್ಲಿ ನಡೆಯುತ್ತಿದ್ದ ದತ್ತ ಜಯಂತಿಯಲ್ಲಿ ಪಾಲ್ಗೊಳ್ಳಲು ಸಹಕಾರ ಸಾರಿಗೆ ಬಸ್‌ನಲ್ಲಿ ( ಕೆಎ 18;7827)ಆರೋಪಿತರು ತೆರಳುತ್ತಿದ್ದರು. ಅ ವೇಳೆಯಲ್ಲಿ ವಾಹನವನ್ನು ನಿಲ್ಲಿಸಿ ಅಕ್ರಮಕೂಟ ಕಟ್ಟಿಕೊಂಡು ಮುಸ್ಲಿಂ ಜನಾಂಗಕ್ಕೆ ಅವಹೇಳನಕಾರಿಯಾಗುವಂತೆ ಕೂಗಿದ್ದರು.

 

‘ಅವರ ದೇವರಾದ ಅಲ್ಲಾನಿಗೆ ಅಲ್ಲಾ ಅಲ್ಲಾ ಅವನೊಬ್ಬ ಕಳ್ಳ, ಮುಸ್ಲಿಂ ಜನಾಂಗಕ್ಕೆ ಧಿಕ್ಕಾರ ಎಂದು ಕೂಗುತ್ತಾ ಉರೂಸ್ ಹಬ್ಬಕ್ಕೆಂದು ಕಟ್ಟಿದ್ದ ಮುಸ್ಲಿಂ ಜನಾಂಗದ ಬಾವುಟ ನೋಡಿ ದತ್ತಪೀಠದಿಂದ ಬರುವಾಗ ಬಾವುಟ ಕಿತ್ತು ಸುಟ್ಟು ಹಾಕುವುದಾಗಿ ಕೂಗಾಡಿದ್ದರು. ಅದೇ ವಾಹನದಲ್ಲಿ ದತ್ತಪೀಠಕ್ಕೆ ಹೋಗಿರುವುದು ತನಿಖೆಯಿಂದ ದೃಢಪಟ್ಟಿದೆ,’ ಎಂದು ಪೊಲೀಸರು ವರದಿ ಮಾಡಿದ್ದರು.

 

ಆರೋಪಿತರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಐಪಿಸಿ 143, 147, 153(ಎ), 504, 506, ರೆ;ವಿ 149 ಅಡಿಯಲ್ಲಿ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು ಎಂಬುದು ದಾಖಲೆಯಿಂದ ತಿಳಿದು ಬಂದಿದೆ.

 

ಈ ಪ್ರಕರಣವು ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿತ್ತು. ಆದರೆ ಅಂದು ಗೃಹ ಸಚಿವರಾಗಿದ್ದ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ 2020ರ ಮಾರ್ಚ್‌ 9ರಂದು ನಡೆದಿದ್ದ ಸಚಿವ ಸಂಪುಟ ಉಪ ಸಮಿತಿಯ ಸಭೆಯು ಈ ಪ್ರಕರಣವನ್ನು ಹಿಂಪಡೆದಿತ್ತು.

 

‘ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಮೊಕದ್ದಮೆ ಸಂಖ್ಯೆ 187/2014, ಬಾಳೆಹೊನ್ನೂರು ಪೊಲೀಸ್‌ ಠಾಣೆ ಮೊಕದ್ದಮೆ ಸಂಖ್ಯೆ 114/2014, 41/2015 ಹಾಗೂ ಹರಿಹರಪುರ ಪೊಲೀಸ್‌ ಠಾಣೆ ಮೊಕದ್ದಮೆ 39/2012ರ ಪ್ರಕರಣಗಳನ್ನು ಅಭಿಯೋಜನೆಯಿಂದ ಹಿಂಪಡೆಯುವುದು ಸೂಕ್ತ ಎಂದು ಅಭಿಪ್ರಾಯಪಟ್ಟು ಸಚಿವ ಸಂಪುಟ ನಿರ್ಣಯಕ್ಕೆ ಮಂಡಿಸಲು ಶಿಫಾರಸ್ಸು ಮಾಡಿತು,’ ಎಂದು ನಡವಳಿಯಲ್ಲಿ ದಾಖಲಿಸಿರುವುದು ಗೊತ್ತಾಗಿದೆ.

 

ಬಾಬಾಬುಡನ್ ಗಿರಿಯಲ್ಲಿ ಗೋರಿ ಧ್ವಂಸ ಪ್ರಕರಣವನ್ನು ಮರುತನಿಖೆಗೆ ಆದೇಶ ನೀಡಲಾಗಿದೆ ಎನ್ನುವ ಸುದ್ದಿ ಪ್ರಸಾರವಾಗುತ್ತಿದ್ದು, ಇದು ತಪ್ಪು ಮಾಹಿತಿ ಹಾಗೂ ಸುಳ್ಳಿನಿಂದ ಕೂಡಿದ್ದಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದನ್ನು ಸ್ಮರಿಸಬಹುದು.

 

‘ಇದು ಸಹಜ ಕಾನೂನು ಪ್ರಕ್ರಿಯೆ, ಇದರಲ್ಲಿ ಸರ್ಕಾರದ ಹಸ್ತಕ್ಷೇಪವಿಲ್ಲ. ರಾಜ್ಯ ಸರ್ಕಾರ ಪ್ರಕರಣದ ಮರು ತನಿಖೆಗೆ ಮುಂದಾಗಿದೆ ಎಂದು ಮಾಧ್ಯಮಗಳು ಸುಳ್ಳು ಸುದ್ದಿ ಬಿತ್ತರಿಸಿ, ಪ್ರಚೋದನೆ ನೀಡುವ ಕೆಲಸ ಮಾಡಬಾರದು. ಇಂತಹ ಸುಳ್ಳು ಸುದ್ದಿ ಪ್ರಸಾರದಿಂದ ಮಾಧ್ಯಮಗಳು ವಿಶ್ವಾಸಾರ್ಹತೆ ಕಳೆದುಕೊಳ್ಳುತ್ತವೆ ಜೊತೆಗೆ ಕಾನೂನು ಸುವ್ಯವಸ್ಥೆ ಕೂಡ ಹದಗೆಡುವ ಸಾಧ್ಯತೆ ಅಲ್ಲಗಳೆಯಲಾಗದು. ಹೀಗಾಗಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು,’ ಎಂದು ಸಿದ್ದರಾಮಯ್ಯ ಅವರು ಹೇಳಿದ್ದರು.

Hot this week

ಕಲ್ಬುರ್ಗಿ ಡಿಸಿಸಿ ಬ್ಯಾಂಕ್‌ನಲ್ಲಿ ಬಹು ಕೋಟಿ ಅಕ್ರಮ; ತನಿಖೆಗೆ ಮುಂದಾಗದ ಸರ್ಕಾರ, ತೆವಳುತ್ತಿದೆ ಕಡತ

ಬೆಂಗಳೂರು;  ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕಕ್ಕೆ ಒತ್ತಡ; ವಿವಾದಕ್ಕೆ ದಾರಿಯಾದ ಡಿಸಿಎಂ ಟಿಪ್ಪಣಿ, ನಿಯಮ ಉಲ್ಲಂಘನೆ?

ಬೆಂಗಳೂರು; ಬಿಬಿಎಂಪಿ ವೃಂದಕ್ಕೆ ಸೇರಿರುವ ಮುಖ್ಯ ಇಂಜಿನಿಯರ್  ಪ್ರವೀಣ್ ಲಿಂಗಯ್ಯ ಅವರನ್ನು...

ಆಧಾರ್ ಕಾರ್ಡ್‌ಗಿಂತಲೂ ಶಕ್ತಿ ಸ್ಮಾರ್ಟ್‌ ದುಬಾರಿ, ಎಸ್‌ಪಿವಿ ರಚನೆಯಾದರೂ ಸಿಗದ ಕಾರ್ಡ್‌; 185 ಕೋಟಿ ವೆಚ್ಚ ಭರಿಸುವವರಾರು?

ಬೆಂಗಳೂರು; ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ  ಸೌಲಭ್ಯ ಕಲ್ಪಿಸುವ 'ಶಕ್ತಿ'...

ಟೆಲಿಕಾಂ ಕಂಪನಿಯಿಂದ ವಿಧಾನಸೌಧ ಟರೇಸ್‌ ಅನಧಿಕೃತ ಬಳಕೆ; ವಸೂಲಾಗದ ನೆಲಬಾಡಿಗೆ, ನಿಯಮ ಉಲ್ಲಂಘಿಸಿದ್ದರೂ ಕ್ರಮವಿಲ್ಲ

ಬೆಂಗಳೂರು; ಟೆಲಿಕಾಂ ಮೂಲಸೌಕರ್ಯ ಕಂಪನಿಗಳಲ್ಲಿ ಖ್ಯಾತಿ ಹೊಂದಿರುವ ಆಂಧ್ರ ಪ್ರದೇಶ ಮೂಲದ...

ನೀಟ್‌, ಕೆ-ಸಿಇಟಿ ತರಬೇತಿ; ಅಲ್ಪಸಂಖ್ಯಾತರ ಇಲಾಖೆಯಲ್ಲಿ ಟೆಂಡರ್ ನಿಯಮ ಉಲ್ಲಂಘನೆ, ನಿಯಮಬಾಹಿರ ಚಟುವಟಿಕೆ, ಸರ್ಕಾರಕ್ಕೆ ಲೀಗಲ್ ನೋಟೀಸ್‌

ಬೆಂಗಳೂರು; ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ವಸತಿ ಕಾಲೇಜು ವಿದ್ಯಾರ್ಥಿಗಳಿಗೆ ಆಫ್‌ಲೈನ್ ಮಾದರಿಯಲ್ಲಿ...

Topics

ಕಲ್ಬುರ್ಗಿ ಡಿಸಿಸಿ ಬ್ಯಾಂಕ್‌ನಲ್ಲಿ ಬಹು ಕೋಟಿ ಅಕ್ರಮ; ತನಿಖೆಗೆ ಮುಂದಾಗದ ಸರ್ಕಾರ, ತೆವಳುತ್ತಿದೆ ಕಡತ

ಬೆಂಗಳೂರು;  ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕಕ್ಕೆ ಒತ್ತಡ; ವಿವಾದಕ್ಕೆ ದಾರಿಯಾದ ಡಿಸಿಎಂ ಟಿಪ್ಪಣಿ, ನಿಯಮ ಉಲ್ಲಂಘನೆ?

ಬೆಂಗಳೂರು; ಬಿಬಿಎಂಪಿ ವೃಂದಕ್ಕೆ ಸೇರಿರುವ ಮುಖ್ಯ ಇಂಜಿನಿಯರ್  ಪ್ರವೀಣ್ ಲಿಂಗಯ್ಯ ಅವರನ್ನು...

ಆಧಾರ್ ಕಾರ್ಡ್‌ಗಿಂತಲೂ ಶಕ್ತಿ ಸ್ಮಾರ್ಟ್‌ ದುಬಾರಿ, ಎಸ್‌ಪಿವಿ ರಚನೆಯಾದರೂ ಸಿಗದ ಕಾರ್ಡ್‌; 185 ಕೋಟಿ ವೆಚ್ಚ ಭರಿಸುವವರಾರು?

ಬೆಂಗಳೂರು; ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ  ಸೌಲಭ್ಯ ಕಲ್ಪಿಸುವ 'ಶಕ್ತಿ'...

ಟೆಲಿಕಾಂ ಕಂಪನಿಯಿಂದ ವಿಧಾನಸೌಧ ಟರೇಸ್‌ ಅನಧಿಕೃತ ಬಳಕೆ; ವಸೂಲಾಗದ ನೆಲಬಾಡಿಗೆ, ನಿಯಮ ಉಲ್ಲಂಘಿಸಿದ್ದರೂ ಕ್ರಮವಿಲ್ಲ

ಬೆಂಗಳೂರು; ಟೆಲಿಕಾಂ ಮೂಲಸೌಕರ್ಯ ಕಂಪನಿಗಳಲ್ಲಿ ಖ್ಯಾತಿ ಹೊಂದಿರುವ ಆಂಧ್ರ ಪ್ರದೇಶ ಮೂಲದ...

ನೀಟ್‌, ಕೆ-ಸಿಇಟಿ ತರಬೇತಿ; ಅಲ್ಪಸಂಖ್ಯಾತರ ಇಲಾಖೆಯಲ್ಲಿ ಟೆಂಡರ್ ನಿಯಮ ಉಲ್ಲಂಘನೆ, ನಿಯಮಬಾಹಿರ ಚಟುವಟಿಕೆ, ಸರ್ಕಾರಕ್ಕೆ ಲೀಗಲ್ ನೋಟೀಸ್‌

ಬೆಂಗಳೂರು; ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ವಸತಿ ಕಾಲೇಜು ವಿದ್ಯಾರ್ಥಿಗಳಿಗೆ ಆಫ್‌ಲೈನ್ ಮಾದರಿಯಲ್ಲಿ...

ವರ್ಗಾವಣೆ ರದ್ದುಗೊಳಿಸಲು ತಲಾ 20 ಲಕ್ಷಕ್ಕೆ ಬೇಡಿಕೆ ಆರೋಪ; ಟೆಂಡರ್ ಕಮಿಷನ್ ಆಪಾದನೆ ಬೆನ್ನಲ್ಲೇ ಕರೀಗೌಡರ ವಿರುದ್ಧ ದೂರು

ಬೆಂಗಳೂರು; ಒಂದೆಡೆ ಮಂಜೂರಾಗಿರುವ ಹುದ್ದೆಗಳನ್ನು  ಭರ್ತಿ ಮಾಡುತ್ತಿಲ್ಲ, ಶೇ. 40ರಷ್ಟು ಹುದ್ದೆಗಳು...

ಈಜಿಪುರ ಮೇಲ್ಸೇತುವೆ ಕಾಮಗಾರಿ; ಪರಿಷ್ಕೃತ ಅಂದಾಜಿನಲ್ಲಿಯೇ ಲೋಪ ಪತ್ತೆ, 8.80 ಕೋಟಿ ಮೊತ್ತಕ್ಕೆ ಲೆಕ್ಕ ಪರಿಶೋಧಕರ ಆಕ್ಷೇಪಣೆ

ಬೆಂಗಳೂರು;  ಈಜಿಪುರ ಎಲಿವೇಟೆಡ್ ಕಾಮಗಾರಿಗೆ ಸಂಬಂಧಿಸಿದಂತೆ ಬೃಹತ್‌ ಬೆಂಗಳೂರು ಮಹಾನಗರಪಾಲಿಕೆಯು ಮಾಡಿದ್ದ...

Related Articles

Popular Categories

error: Content is protected !!