Sunday | July 26, 2026 |

ಪೆಟ್ರೋಲ್‌ ಉತ್ಪನ್ನದ ಮೇಲೆ 1ರು ತೆರಿಗೆ, ಆಸ್ತಿ ತೆರಿಗೆ ಮರು ವಿನಿಯೋಗ; ಸಂಪನ್ಮೂಲ ಕ್ರೋಢೀಕರಣಕ್ಕೆ ಹೊಸ ದಾರಿ

ಬೆಂಗಳೂರು; ಅತ್ತ ಕೇಂದ್ರ ಸರ್ಕಾರವು ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ಇಳಿಕೆ ಮಾಡಲು ಚಿಂತಿಸುತ್ತಿದ್ದರೇ ಇತ್ತ ರಾಜ್ಯ ಕಾಂಗ್ರೆಸ್‌ ಸರ್ಕಾರವು ಪೆಟ್ರೋಲ್‌, ಡೀಸೆಲ್‌, ಇಥೆನಾಲ್ ಸೇರಿದಂತೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ತೆರಿಗೆ ವಿಧಿಸಲು ಮುಂದಾಗಿದೆ. ಅಲ್ಲದೇ ಸ್ಥಳೀಯ ಸಂಸ್ಥೆಗಳು ಸಂಗ್ರಹಿಸುತ್ತಿರುವ ಆಸ್ತಿ ತೆರಿಗೆಯಲ್ಲಿ ಮರು ವಿನಿಯೋಗದ ಮೂಲಕ ಸಂಪನ್ಮೂಲ ಕ್ರೋಢೀಕರಿಸಲು ಹೊರಟಿದೆ.

 

ಅಂದಾಜು 90 ಲಕ್ಷ ಅಸಂಘಟಿತ ಕಾರ್ಮಿಕರನ್ನು ಸಾಮಾಜಿಕ ಭದ್ರತಾ ಯೋಜನೆಗೆ ಒಳಪಡಿಸಲು ಮುಂದಾಗಿರುವ ಸರ್ಕಾರವು ಇದಕ್ಕಾಗಿ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ತೆರಿಗೆ ವಿಧಿಸುವ ಮೂಲಕ ಸಂಪನ್ಮೂಲ ಕ್ರೋಢೀಕರಿಸಲಿದೆ.

 

ಇದೇ ಫೆಬ್ರುವರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಲಿರುವ 2024-25ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಲಿದ್ದಾರೆ. ಕಾರ್ಮಿಕ ಇಲಾಖೆಯ ಹೊಸ ಯೋಜನೆಗಳ ಪಟ್ಟಿಯಲ್ಲಿ ಈ ಬಗ್ಗೆ ವಿಸ್ತೃತವಾಗಿ ಹೇಳಲಾಗಿದೆ. ಇದರ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ರಾಜ್ಯದಲ್ಲಿರುವ ಸುಮಾರು 90 ಲಕ್ಷ ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಮತ್ತು ಕಲ್ಯಾಣ ಕಾರ್ಯಕ್ರಮಗಳಿಗಾಗಿ ಕಾರ್ಮಿಕ ಇಲಾಖೆಯು ಹೊಸ ಯೋಜನೆ ರೂಪಿಸಿದೆ. ಈ ಯೋಜನೆ ಅನುಷ್ಠಾನದಿಂದ ರಾಜ್ಯದ ಮೇಲೆ ಯಾವುದೇ ಆರ್ಥಿಕ ಹೊರೆ ಉಂಟಾಗುವುದಿಲ್ಲ ಎಂದು ಕಾರ್ಮಿಕ ಇಲಾಖೆಯು ಹೊಸ ಯೋಜನೆ ಪಟ್ಟಿಯಲ್ಲಿ ಹೇಳಿದೆ. ಆದರೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ತೆರಿಗೆ ವಿಧಿಸುವ ಮೂಲಕ ಈ ಯೋಜನೆಗೆ ತಗಲುವ ವೆಚ್ಚವನ್ನು ಸರಿದೂಗಿಸಲಿದೆ.

 

ಕಾರ್ಮಿಕ ಇಲಾಖೆಯು ರೂಪಿಸಿರುವ ಈ ಯೋಜನೆಗೆ ಸಚಿವ ಸಂತೋಷ್‌ ಲಾಡ್‌ ಅವರು ಸಮ್ಮತಿ ವ್ಯಕ್ತಪಡಿಸಿದ್ದಾರೆ ಎಂದು ಗೊತ್ತಾಗಿದೆ.

 

ಇಲಾಖೆಯ ಪ್ರಸ್ತಾವನೆಯಲ್ಲೇನಿದೆ?

 

ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರು, ಮೋಟಾರು ಸಾರಿಗೆ ಹಾಗೂ ಇತರೆ ಕಾರ್ಮಿಕರನ್ನು ಹೊರತುಪಡಿಸಿ ರಾಜ್ಯದಲ್ಲಿ ಅಂದಾಜು 90 ಲಕ್ಷ ಅಸಂಘಟಿತ ಕಾರ್ಮಿಕರಿದ್ದಾರೆ. ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಕಾಯ್ದೆ ಅಡಿಯಲ್ಲಿ ಅಪಘಾತ ಪರಿಹಾರ, ಶೈಕ್ಷಣಿಕ ಧನ ಸಹಾಯ, ಹೆರಿಗೆ ಸಹಾಯಧನ, ಶವ ಸಂಸ್ಕಾರ ಧನ ಸಹಾಯ ಒದಗಿಸಲು ಹೊಸ ಯೋಜನೆ ರೂಪಿಸುವ ಮೂಲಕ ಸಮಗ್ರ ಯೋಜನೆ ರೂಪಿಸಲು ಪ್ರಸ್ತಾಪಿಸಲಾಗಿದೆ.

 

ರಾಜ್ಯಾದ್ಯಂತ ಮಾರಾಟವಾಗುವ ಪೆಟ್ರೋಲ್‌, ಡೀಸೆಲ್‌, ಇಥೆನಾಲ್ ಸೇರಿ ಪೆಟ್ರೋಲಿಯಂ ಇನ್ನಿತರೆ ಉತ್ಪನ್ನಗಳ ಮೇಲೆ ಪ್ರತಿ ಲೀಟರ್‍‌ಗೆ 1 ರು.ನಷ್ಟು ಸೆಸ್‌ ವಿಧಿಸುವ ಮೂಲಕ ಸಂಪನ್ಮೂಲ ಕ್ರೋಢೀಕರಿಸಲು ಉದ್ದೇಶಿಸಿದೆ. ಆದ್ದರಿಂದ ಸರ್ಕಾರದ ಮೇಲೆ ಯಾವುದೇ ಆರ್ಥಿಕ ಹೊರೆ ಉಂಟಾಗುವುದಿಲ್ಲ ಎಂದು ಕಾರ್ಮಿಕ ಇಲಾಖೆಯು ಹೊಸ ಯೋಜನೆ ಪಟ್ಟಿಯಲ್ಲಿ ವಿವರಿಸಿರುವುದು ಗೊತ್ತಾಗಿದೆ.

 

ಪೆಟ್ರೋಲಿಯಂ ಇನ್ನಿತರೆ ಉತ್ಪನ್ನಗಳ ಮೇಲೆ ಪ್ರತಿ ಲೀಟರ್‍‌ಗೆ 1 ರು.ನಷ್ಟು ಸೆಸ್‌ ವಿಧಿಸಿದರೆ ವರ್ಷಕ್ಕೆ ಸುಮಾರು 2,000 ಕೋಟಿ ಆದಾಯ ಕ್ರೋಢೀಕರಣವಾಗಲಿದೆ ಎಂದು ಅಧಿಕಾರಿಗಳು ಮೌಖಿಕವಾಗಿ ವಿವರಿಸಿದ್ದಾರೆ ಎಂದು ತಿಳಿದು ಬಂದಿದೆ.

 

ಅದೇ ರೀತಿ ಇವೇ ಸೌಲಭ್ಯಗಳಿಗೆ ಹಣ ಹೊಂದಿಸಲು ಸ್ಥಳೀಯ ಸಂಸ್ಥೆಗಳು ಸಂಗ್ರಹಿಸುತ್ತಿರುವ ಆಸ್ತಿ ತೆರಿಗೆಗೂ ಸರ್ಕಾರವು ಕೈ ಹಾಕಿದೆ. ಸ್ಥಳೀಯ ಸಂಸ್ಥೆಗಳು ಈಗಾಗಲೇ ಸಂಗ್ರಹಿಸುತ್ತಿರುವ ಆಸ್ತಿ ತೆರಿಗೆಯನ್ನು ಮರು ವಿನಿಯೋಗ ಮಾಡುವ ಮೂಲಕ ಸಂಪನ್ಮೂಲ ಕ್ರೋಢೀಕರಣಕ್ಕೆ ದಾರಿ ಹುಡುಕಿಕೊಂಡಿದೆ.

 

2024ರ ಮೊದಲಾರ್ಧದಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ಹೀಗಾಗಿ ಕೇಂದ್ರ ಸರ್ಕಾರವು ಪ್ರತಿ ಲೀಟರ್‌ಗೆ 4 ರಿಂದ 6 ರೂಪಾಯಿಗಳವರೆಗೆ ಬೆಲೆ ಇಳಿಕೆ ಮಾಡಲಿದೆ ಎಂದು ಹೇಳಲಾಗುತ್ತಿದೆ. ಈಗಾಗಲೇ ತೈಲ ಮಾರುಕಟ್ಟೆ ಕಂಪನಿಗಳೊಂದಿಗೆ ಚರ್ಚೆ ಮುಂದುವರೆಸಿದೆ. ಬೆಲೆ ಕಡಿತದ ಸಮಾನ ಹೊರೆಯನ್ನು ಸರ್ಕಾರ ಮತ್ತು ಒಎಂಸಿಗಳಿಗೆ ವಹಿಸುವ ಪ್ರಸ್ತಾವನೆಯೂ ಸಲ್ಲಿಕೆಯಾಗಿದೆ ಎಂದು ಗೊತ್ತಾಗಿದೆ.

 

ಪ್ರತಿ ಲೀಟರ್‍‌ಗೆ 10 ರು.ವರೆಗೆ ಹೆಚ್ಚಿನ ಬೆಲೆ ಕಡಿತಗೊಳಿಸಬಹುದು. ಇಂಧನ ಬೆಲೆ ಕಡಿತವು ಮೂರು ತಂಗಳ ಗರಿಷ್ಠ ಶೇ.5.55ಕ್ಕೆ ಏರಿದರೆ ಚಿಲ್ಲರೆ ಹಣದುಬ್ಬರವನ್ನು ತಗ್ಗಿಸುತ್ತದೆ. ಕಳೆದ ಮೂರು ತಿಂಗಳಿನಿಂದ ಕಚ್ಚಾ ತೈಲ ಬೆಲೆ ಪ್ರತಿ ಬ್ಯಾರೆಲ್‌ಗೆ 70-80 ಡಾಲರ್‌ಗಳ ವ್ಯಾಪ್ತಿಯಲ್ಲಿ ತೂಗಾಡುತ್ತಿದೆ. ಹೀಗಾಗಿ ಕೇಂದ್ರ ಸರ್ಕಾರವು ಇಂಧನ ಬೆಲೆ ಕಡಿತದ ಪರವಾಗಿದೆ ಎಂದು ಹೇಳಲಾಗುತ್ತಿದೆ.

 

ನವೆಂಬರ್ 2021 ಮತ್ತು ಮೇ 2022 ರಲ್ಲಿ ಎರಡು ಕಂತುಗಳಲ್ಲಿ ಕ್ರಮವಾಗಿ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಪ್ರತಿ ಲೀಟರ್‌ಗೆ ಒಟ್ಟು 13 ರು ಮತ್ತು 16 ರು ನಷ್ಟು ಕಡಿಮೆ ಮಾಡಿತ್ತು.

Hot this week

ದೇಶದಲ್ಲಿ 5.64 ಕೋಟಿ, ರಾಜ್ಯದಲ್ಲಿ 23.21 ಲಕ್ಷ ಪ್ರಕರಣಗಳು ವಿಚಾರಣೆಗೆ ಬಾಕಿ; ನ್ಯಾಯಾಲಯಗಳಲ್ಲಿ ಕೆಲಸದ ಒತ್ತಡ, ನ್ಯಾಯದಾನವೂ ವಿಳಂಬ

ಬೆಂಗಳೂರು: ದೇಶದ ವಿವಿಧ ನ್ಯಾಯಾಲಯಗಳಲ್ಲಿ ಒಟ್ಟು 5.64 ಕೋಟಿಗೂ ಅಧಿಕ ಪ್ರಕರಣಗಳು...

15ನೇ ಹಣಕಾಸು ಆಯೋಗ; ಗುಜರಾತ್‌ಗೆ ಅತೀ ಕಡಿಮೆ, ಕರ್ನಾಟಕಕ್ಕೆ ಅತೀ ಹೆಚ್ಚು ಮೊತ್ತ ಬಿಡುಗಡೆಗೆ ಬಾಕಿ

ಬೆಂಗಳೂರು; ಕರ್ನಾಟಕ ರಾಜ್ಯವೂ ಸೇರಿದಂತೆ ದೇಶದ 28 ರಾಜ್ಯಗಳಲ್ಲಿರುವ ಗ್ರಾಮ ಪಂಚಾಯ್ತಿಗಳಿಗೆ...

ಪೋಕ್ಸೋ; ಕರ್ನಾಟಕದಲ್ಲಿ 21,436 ಪ್ರಕರಣಗಳು ವಿಚಾರಣೆಗೆ ಬಾಕಿ, ದೇಶದಲ್ಲಿ ಪ್ರಕರಣಗಳ ಸಂಖ್ಯೆಯಲ್ಲಿ ಶೇ.48ರಷ್ಟು ಹೆಚ್ಚಳ

ಬೆಂಗಳೂರು:  ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ವಿರುದ್ಧದ ಪೋಕ್ಸೋ...

ಮುದ್ರಾ ಯೋಜನೆ ಸಾಲದ ಖಾತೆ ತೆರೆಯುವಲ್ಲಿ ಹಿಂದುಳಿದ 8 ಜಿಲ್ಲೆ; ಸಾಲ ನೀಡುವಲ್ಲಿ ಖಾಸಗಿ ಬ್ಯಾಂಕ್‌ಗಳದ್ದೇ ಮೇಲುಗೈ

ಬೆಂಗಳೂರು; ಮುದ್ರಾ ಸಾಲ ಸಹಿತ ವಿವಿಧ ಸ್ವಯಂ ಉದ್ಯಮ ಯೋಜನೆಗಳಡಿ ಕರ್ನಾಟಕ...
Please Scan to make Your Contribution

Topics

15ನೇ ಹಣಕಾಸು ಆಯೋಗ; ಗುಜರಾತ್‌ಗೆ ಅತೀ ಕಡಿಮೆ, ಕರ್ನಾಟಕಕ್ಕೆ ಅತೀ ಹೆಚ್ಚು ಮೊತ್ತ ಬಿಡುಗಡೆಗೆ ಬಾಕಿ

ಬೆಂಗಳೂರು; ಕರ್ನಾಟಕ ರಾಜ್ಯವೂ ಸೇರಿದಂತೆ ದೇಶದ 28 ರಾಜ್ಯಗಳಲ್ಲಿರುವ ಗ್ರಾಮ ಪಂಚಾಯ್ತಿಗಳಿಗೆ...

ಪೋಕ್ಸೋ; ಕರ್ನಾಟಕದಲ್ಲಿ 21,436 ಪ್ರಕರಣಗಳು ವಿಚಾರಣೆಗೆ ಬಾಕಿ, ದೇಶದಲ್ಲಿ ಪ್ರಕರಣಗಳ ಸಂಖ್ಯೆಯಲ್ಲಿ ಶೇ.48ರಷ್ಟು ಹೆಚ್ಚಳ

ಬೆಂಗಳೂರು:  ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ವಿರುದ್ಧದ ಪೋಕ್ಸೋ...

ಕರ್ನಾಟಕ ವೈದ್ಯಕೀಯ ಸರಬರಾಜು ನಿಗಮ ವ್ಯವಸ್ಥಾಪಕ ನಿರ್ದೇಶಕರ ಬದಲಾವಣೆಗೆ ಸಚಿವರ ಪಟ್ಟು; ಐಎಎಸ್‌, ಕೆಎಎಸ್‌ಯೇತರ ಅಧಿಕಾರಿ ನೇಮಕಕ್ಕೆ ಮುಂದಾಗಿರುವುದೇಕೆ?

ಬೆಂಗಳೂರು; ತಮಿಳುನಾಡು ಮಾದರಿಯಲ್ಲಿ ಕರ್ನಾಟಕದ ವೈದ್ಯಕೀಯ ಸರಬರಾಜು ನಿಗಮವನ್ನು ಸ್ಥಾಪಿಸಿರುವ ರಾಜ್ಯ...

ರೈಲ್ವೇ ಯೋಜನೆಗಳಿಗೆ ಗ್ರಹಣ; 7,748 ಕೋಟಿ ರು ಅನುದಾನವಿದ್ದರೂ ಬಿರುಸುಗೊಳ್ಳದ ಭೂಸ್ವಾಧೀನ ಪ್ರಕ್ರಿಯೆ, ರಾಜ್ಯದತ್ತಲೇ ಬೊಟ್ಟು ಮಾಡಿದ ಕೇಂದ್ರ ಸರ್ಕಾರ

ಬೆಂಗಳೂರು; ಕರ್ನಾಟಕದಲ್ಲಿ  ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಗೆ ಕೇಂದ್ರ ಸರ್ಕಾರವು  2026-27ನೇ ಸಾಲಿನಲ್ಲಿ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಸೇರದ ಭದ್ರಾ ಮೇಲ್ದಂಡೆ ಯೋಜನೆ; ಸಹಾಯಧನ ಬಿಡುಗಡೆ ವಿಳಂಬಕ್ಕೆ ನೆಪವೊಡ್ಡಿದ ಕೇಂದ್ರ

ಬೆಂಗಳೂರು; ರಾಜ್ಯದ ಮಹತ್ವಾಕಾಂಕ್ಷೆ ನೀರಾವರಿ ಯೋಜನೆ ಭದ್ರಾ ಮೇಲ್ದಂಡೆ ಯೋಜನೆಯ ಅಂದಾಜು...

Related Articles

Popular Categories

error: Content is protected !!