Monday | August 24, 2026 |

ರಸ್ತೆ ಅಭಿವೃದ್ಧಿಗೆ 245.37 ಕೋಟಿ ರು. ಅನುದಾನ ಲಭ್ಯವಿಲ್ಲ; ಕೈಚೆಲ್ಲಿದ ಇಲಾಖೆ, ಶಾಸಕರ ಕೆಂಗಣ್ಣು!

ಬೆಂಗಳೂರು; ರಾಜ್ಯದ ವಿವಿಧ ಜಿಲ್ಲೆಗಳ ಸಚಿವರು, ಶಾಸಕರು, ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರು ರಸ್ತೆ ಅಭಿವೃದ್ದಿ ಕಾಮಗಾರಿ ಕೈಗೊಳ್ಳಲು ಸಲ್ಲಿಸಿರುವ ಕೋರಿಕೆ ಈಡೇರಿಸಲು ಸರ್ಕಾರದ ಬಳಿ 245.37 ಕೋಟಿ ರು. ಅನುದಾನವೂ ಇಲ್ಲ.

 

ಅಷ್ಟೇ ಅಲ್ಲ ಹಿಂದಿನ ವರ್ಷದ ಹಾಗೂ ಪ್ರಸಕ್ತ ಸಾಲಿನಲ್ಲಿ (ಲೆಕ್ಕ ಶೀರ್ಷಿಕೆ;5054) ಮಂಜೂರಾತಿ ದೊರೆತಿರುವ ಕಾಮಗಾರಿ ಬಾಕಿ ಬಿಲ್‌ ಪಾವತಿಸಲು 5,210 ಕೋಟಿ ರು. ಬೇಕಿದೆ. ಹಾಗೂ ಲೆಕ್ಕ ಶೀರ್ಷಿಕೆ 3054 ರ ಅಡಿ ಮಂಜೂರಾತಿ ದೊರೆತಿರುವ ಕಾಮಗಾರಿಗಳ ಬಾಕಿ ಬಿಲ್‌ ಪಾವತಿಸಲು 700 ಕೋಟಿ ರು. ಸೇರಿ 5,820 ಕೋಟಿ ರು. ಅನುದಾನ ಹೊಂದಿಸಲೇಬೇಕಾದ ಅನಿವಾರ್ಯ ಸ್ಥಿತಿ ನಿರ್ಮಾಣವಾಗಿದೆ.

 

ಒಟ್ಟಾರೆ 5,820 ಕೋಟಿ ರು. ಹೊಂದಿಸಬೇಕಿರುವ ಅನಿವಾರ್ಯತೆಯಲ್ಲಿರುವ ಸರ್ಕಾರವು ಇದೀಗ ಸಚಿವರು, ಶಾಸಕರು, ಚುನಾಯಿತ ಜನಪ್ರತಿನಿಧಿಗಳು ಸಲ್ಲಿಸಿರುವ ಕೋರಿಕೆಯನ್ನು ಈಡೇರಿಸಲು ಅಸಹಾಯಕತೆ ವ್ಯಕ್ತಪಡಿಸಿರುವುದು ತಿಳಿದು ಬಂದಿದೆ.

 

ಇದರ ಟಿಪ್ಪಣಿಯ ಪ್ರತಿಯೊಂದು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಕಳೆದ ನವೆಂಬರ್‌ನಿಂದಲೂ ಸಚಿವರು, ಶಾಸಕರು ಸಲ್ಲಿಸಿರುವ ಕೋರಿಕೆ, ಮನವಿಗಳು, ಪ್ರಸ್ತಾವನೆಗಳನ್ನು ಕ್ರೋಢಿಕರಿಸಿರುವ ಇಲಾಖೆಯ ಅಧಿಕಾರಿಗಳು, 245.37 ಕೋಟಿ ರು. ಹೊಂದಿಸುವ ಬಗ್ಗೆ ಕಸರತ್ತು ನಡೆಸಿದ್ದಾರೆ. ಈ ಕುರಿತು ಸಚಿವ ಪ್ರಿಯಾಂಕ್‌ ಖರ್ಗೆ ಅವರೊಂದಿಗೆ ಅಧಿಕಾರಿಗಳು ಹಲವು ಸುತ್ತಿನ ಮಾತುಕತೆ ನಡೆಸಿದ್ದಾರೆ ಎಂದು ಗೊತ್ತಾಗಿದೆ.

 

ಈ ಕುರಿತು ನವೆಂಬರ್‌ 23ರಿಂದಲೂ ಅಧಿಕಾರಿಗಳ ಹಂತದಲ್ಲಿ ನಿರಂತರವಾಗಿ ಸಭೆ ನಡೆಯುತ್ತಲೇ ಇದೆ. ಅದರೆ 245.37 ಕೋಟಿ ರು. ಅನುದಾನವಿಲ್ಲ ಎಂದು ಅಧಿಕಾರಿಗಳು ಸಭೆಯಲ್ಲಿ ಬಹಿರಂಗಪಡಿಸಿದ್ದಾರೆ.

 

‘ಸಚಿವರು, ಶಾಸಕರು, ಜನಪ್ರತಿನಿಧಿಗಳು ಸಲ್ಲಿಸಿರುವ ಕೋರಿಕೆಗಳನ್ನು ಪರಿಶೀಲಿಸಲಾಗಿ ಇವರು ಕೋರಿರುವ 245.37 ಕೋಟಿ ರು.ಗಳ ಅನುದಾನ ಲಭ್ಯವಿಲ್ಲದೇ ಇರುವುದರಿಂದ ಹೆಚ್ಚುವರಿಯಾಗಿ ಅನುದಾನ ಮಂಜೂರಾತಿಗಾಗಿ ಆರ್ಥಿಕ ಇಲಾಖೆಗೆ ಕೋರಬೇಕಿದೆ,’ ಎಂದು ಟಿಪ್ಪಣಿಯಲ್ಲಿ ವಿವರಿಸಿರುವುದು ಗೊತ್ತಾಗಿದೆ.

 

ಇದಲ್ಲದೇ ಮುಖ್ಯಮಂತ್ರಿಗಳ ವಿಶೇಷ ಮಂಜೂರಾತಿ, ಮಳೆ ಪರಿಹಾರ ಕಾರ್ಯಕ್ರಮ ಮತ್ತು ಗ್ರಾಮೀಣ ರಸ್ತೆಗಳ ಕಾರ್ಯಕ್ರಮದಡಿಯಲ್ಲಿ ಇದುವರೆಗೂ 5,543.82 ಕೋಟಿ ರು. ಬಿಡುಗಡೆಯಾಗಿದೆ. ಆದರೂ ಇನ್ನೂ ಹೆಚ್ಚುವರಿಯಾಗಿ 4,961.20 ಕೋಟಿ ರು. ಅನುದಾನದ ಅವಶ್ಯಕತೆ ಇದೆ ಎಂದು ತಿಳಿದು ಬಂದಿದೆ.

 

ಗ್ರಾಮೀಣ ರಸ್ತೆಗಳಿಗಾಗಿ (ಲೆಕ್ಕ ಶೀರ್ಷಿಕೆ;5054-03-337-0-75) ಅಡಿಯಲ್ಲಿ 2023-24ರಲ್ಲಿ ಒದಗಿಸಿದ್ದ 700 ಕೋಟಿ ರು. ಪೈಕಿ 320.86 ಕೋಟಿ ರು. ವೆಚ್ಚವಾಗಿದೆ. ಹೀಗಾಗಿ 2024-25ನೇ ಸಾಲಿನಲ್ಲಿ 4,961.20 ಕೋಟಿ ರು. ಒದಗಿಸಬೇಕು ಎಂದು ಇಲಾಖೆಯು ಪ್ರಸ್ತಾವಿಸಿದೆ ಎಂದು ಗೊತ್ತಾಗಿದೆ.

 

‘ಸದ್ಯ ರಾಜ್ಯದಲ್ಲಿ ಬರಗಾಲ ಪರಿಸ್ಥಿತಿ ಇದೆ. ಗ್ರಾಮೀಣ ಪ್ರದೇಶದ ಒಟ್ಟು 33,500 ಕೆರೆಗಳನ್ನು ಪುನರುಜ್ಜೀವನಗೊಳಿಸಬೇಕಿದೆ. ಕೆರೆಗಳ ಜೀರ್ಣೋದ್ಧಾರ ಮಾಡಿ ಜನ, ಜಾನುವಾರುಗಳಿಗೆ ನೀರು ಒದಗಿಸಬೇಕು. ಇಂತಹ ಪರಿಸ್ಥಿತಿಯಲ್ಲಿ ರಸ್ತೆ ಕಾಮಗಾರಿಗಳಿಗೆ ಹೆಚ್ಚುವರಿ ಅನುದಾನ, ಗುತ್ತಿಗೆದಾರರಿಗೆ ಬಾಕಿ ಬಿಲ್‌ ಪಾವತಿಸುವುದು ಅಷ್ಟೊಂದು ಸುಲಭವಲ್ಲ,’ ಎಂದು ಹೆಸರು ಹೇಳಲಿಚ್ಛಿಸದ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ‘ದಿ ಫೈಲ್‌’ಗೆ ಪ್ರತಿಕ್ರಿಯಿಸಿದ್ದಾರೆ.

Hot this week

ಮಹರ್ಷಿ ವಾಲ್ಮೀಕಿ ವಿ.ವಿ.ಯಲ್ಲಿ 38.98 ಕೋಟಿ ರು ಗೆ ಆಕ್ಷೇಪಣೆ; ವಾರ್ಷಿಕ ಲೆಕ್ಕಪತ್ರಗಳಲ್ಲಿ ಬ್ಯಾಂಕ್‌ ಖಾತೆಗಳ ವಿವರ ಒದಗಿಸಿಲ್ಲವೇಕೆ?

ಬೆಂಗಳೂರು;  ರಾಯಚೂರಿನಲ್ಲಿರುವ  ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಟೆಂಡರ್ ಕರೆಯದೇ ನೇರವಾಗಿ ಏಜೆನ್ಸಿ...

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ, ಜನಸೇವಾ ಟ್ರಸ್ಟ್‌ಗೆ 121 ಎಕರೆ ಜಮೀನು ಮಂಜೂರು; ಸದನಕ್ಕೆ ಪಟ್ಟಿ ಒದಗಿಸಿದ ಸರ್ಕಾರ

ಬೆಂಗಳೂರು; ಕಳೆದ 16 ವರ್ಷಗಳಲ್ಲಿ  ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಸಂಘ ಪರಿವಾರದ...

ಸಿಎಂ ಮಾಧ್ಯಮ ಕಾರ್ಯದರ್ಶಿಗಳಿಗೆ ಮಾಸಿಕ 3 ಲಕ್ಷ ರು ವೇತನ; ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು, ಅಧಿಕಾರಿವರ್ಗದಲ್ಲಿ ಚರ್ಚೆ

ಬೆಂಗಳೂರು;  ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಮತ್ತು ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಅನುದಾನ...

ನೀಟ್‌ ಪರೀಕ್ಷೆಯಿಂದ ವಿನಾಯಿತಿ; ತಮಿಳುನಾಡು ಮಾದರಿಯಲ್ಲಿ ನಿರ್ಣಯ ಮಂಡಿಸಲು ರಾಜ್ಯ ಸಜ್ಜು, ಕಾನೂನುಬದ್ಧ ವಿನಾಯಿತಿಗೆ ಪ್ರಸ್ತಾವ

ಬೆಂಗಳೂರು; ಕರ್ನಾಟಕ ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶ ವ್ಯವಸ್ಥೆಯು ರಾಜ್ಯದ ಶೈಕ್ಷಣಿಕ...
Please Scan to make Your Contribution

Topics

ಮಹರ್ಷಿ ವಾಲ್ಮೀಕಿ ವಿ.ವಿ.ಯಲ್ಲಿ 38.98 ಕೋಟಿ ರು ಗೆ ಆಕ್ಷೇಪಣೆ; ವಾರ್ಷಿಕ ಲೆಕ್ಕಪತ್ರಗಳಲ್ಲಿ ಬ್ಯಾಂಕ್‌ ಖಾತೆಗಳ ವಿವರ ಒದಗಿಸಿಲ್ಲವೇಕೆ?

ಬೆಂಗಳೂರು;  ರಾಯಚೂರಿನಲ್ಲಿರುವ  ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಟೆಂಡರ್ ಕರೆಯದೇ ನೇರವಾಗಿ ಏಜೆನ್ಸಿ...

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ, ಜನಸೇವಾ ಟ್ರಸ್ಟ್‌ಗೆ 121 ಎಕರೆ ಜಮೀನು ಮಂಜೂರು; ಸದನಕ್ಕೆ ಪಟ್ಟಿ ಒದಗಿಸಿದ ಸರ್ಕಾರ

ಬೆಂಗಳೂರು; ಕಳೆದ 16 ವರ್ಷಗಳಲ್ಲಿ  ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಸಂಘ ಪರಿವಾರದ...

ಸಿಎಂ ಮಾಧ್ಯಮ ಕಾರ್ಯದರ್ಶಿಗಳಿಗೆ ಮಾಸಿಕ 3 ಲಕ್ಷ ರು ವೇತನ; ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು, ಅಧಿಕಾರಿವರ್ಗದಲ್ಲಿ ಚರ್ಚೆ

ಬೆಂಗಳೂರು;  ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಮತ್ತು ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಅನುದಾನ...

ನೀಟ್‌ ಪರೀಕ್ಷೆಯಿಂದ ವಿನಾಯಿತಿ; ತಮಿಳುನಾಡು ಮಾದರಿಯಲ್ಲಿ ನಿರ್ಣಯ ಮಂಡಿಸಲು ರಾಜ್ಯ ಸಜ್ಜು, ಕಾನೂನುಬದ್ಧ ವಿನಾಯಿತಿಗೆ ಪ್ರಸ್ತಾವ

ಬೆಂಗಳೂರು; ಕರ್ನಾಟಕ ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶ ವ್ಯವಸ್ಥೆಯು ರಾಜ್ಯದ ಶೈಕ್ಷಣಿಕ...

2 ಕಂಪನಿಗಳಿಂದ 400 ಕೋಟಿ ರು ವಹಿವಾಟು ಆರೋಪ; ಐಜಿಪಿ ಚಂದ್ರಶೇಖರ್ ಪ್ರಕರಣದಲ್ಲಿ ವರದಿ ನೀಡಲು ಸರ್ಕಾರದ ನಿರ್ದೇಶನ

ಬೆಂಗಳೂರು; ಸರ್ಕಾರದ ಪೂರ್ವಾನುಮತಿ ಪಡೆಯದೇ ಹಾಗೂ ಸರ್ಕಾರಕ್ಕೆ ವರದಿಯನ್ನು ಸಲ್ಲಿಸದೇ ಕುಟುಂಬ...

ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ತೀವ್ರ ಕೊರತೆ; ಹಲವು ಟೆಂಡರ್‍‌ಗಳಿಗೆ ಬಿಡ್ಡರ್‍‌ಗಳೇ ಇಲ್ಲ, ಮರು ಟೆಂಡರ್‍ ಹಿಂದಿದೆಯೇ ಲಂಚಾವತಾರ?

ಬೆಂಗಳೂರು; ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ತೀವ್ರ ಕೊರತೆ ಕಾಣಿಸಿಕೊಂಡಿದೆ....

Related Articles

Popular Categories

error: Content is protected !!