Friday | March 6, 2026 |

ಹೊಂಬೆಳಕು, ಪ್ರಗತಿ, ಕಲ್ಯಾಣ ಪಥ; ಹೊಸ ಯೋಜನೆಗಳ ಅನುಷ್ಠಾನಕ್ಕೆ 1,914.02 ಕೋಟಿ ರು. ಅಂದಾಜು

Support THE-FILE

spot_img

ಬೆಂಗಳೂರು; ಹಿಂದಿನ ವರ್ಷದಲ್ಲಿ ಪೂರ್ಣಗೊಂಡಿರುವ ಕಾಮಗಾರಿ, ಚಾಲ್ತಿಯಲ್ಲಿರುವ ಕಾಮಗಾರಿ ಮತ್ತು ಸಚಿವರೂ ಸೇರಿದಂತೆ ಚುನಾಯಿತ ಜನಪ್ರತಿನಿಧಿಗಳ ಕೋರಿಕೆಗೆ ಅನುದಾನ ಲಭ್ಯವಿಲ್ಲ ಎಂದು ಕೈಚೆಲ್ಲಿರುವ ಗ್ರಾಮೀಣಾಭಿವೃದ್ಧಿ ಪಂಚಾಯತ್‌ರಾಜ್‌ ಇಲಾಖೆಯು 2024-25ನೇ ಸಾಲಿಗೆ 1,914.02 ಕೋಟಿ ರು. ಮೊತ್ತದ ಹೊಸ ಯೋಜನೆಗಳನ್ನು ಪ್ರಸ್ತಾವಿಸಿದೆ.

 

ಪ್ರತಿ ಗ್ರಾಮ ಪಂಚಾಯ್ತಿಗಳಲ್ಲಿ ಸೋಲಾರ್‌ ದೀಪ ಅಳವಡಿಸುವ ಹೊಂಬೆಳಕು, ಪ್ರಗತಿ ಪಥ, ಕಲ್ಯಾಣ ಪಥ, ಇ -ಆಡಳಿತ, ಸ್ಥಳೀಯ ಆಡಳಿತ ಕೋಶ, ಅರಿವು ಕೇಂದ್ರಗಳಿಗೆ ಕಟ್ಟಡ ನಿರ್ಮಾಣ, ವಿದ್ಯುತ್‌ ಬಿಲ್ಲಿಂಗ್ ಪ್ರಮಾಣೀಕರಣ ಕುರಿತಾದ ಹೊಸ ಯೋಜನೆಗಳನ್ನು ಸರ್ಕಾರದ ಮುಂದಿರಿಸಿದೆ.

 

ಗ್ರಾಮೀಣಾಭಿವೃದ್ಧಿ ಪಂಚಾಯತ್‌ರಾಜ್‌ ಇಲಾಖೆಯು 2024-25ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಲು ಸರ್ಕಾರದ ಮುಂದಿರಿಸಿರುವ ಹೊಸ ಯೋಜನೆಗಳ ಪಟ್ಟಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಪ್ರತಿ ಗ್ರಾಮ ಪಂಚಾಯ್ತಿಗಳಲ್ಲಿ 25,000 ರು. ವೆಚ್ಚದಲ್ಲಿ 500 ಗ್ರಾಮ ಪಂಚಾಯ್ತಿಗಳಲ್ಲಿ ಒಟ್ಟು 200 ಸೋಲಾರ್‌ ಪೋಲ್‌ಗಳನ್ನು ಅಳವಡಿಸಲು 250 ಕೋಟಿ ರು. ಬೇಕಿದೆ. ಪ್ರತಿ ಗ್ರಾಮೀಣ ವಿಧಾನಸಭೆ ಕ್ಷೇತ್ರದಲ್ಲಿ 60 ಕಿ ಮೀ ಗ್ರಾಮೀಣ ರಸ್ತೆ ಅಭಿವೃದ್ಧಿ, ಹಾಲಿ ಡಾಂಬರು ಮೇಲ್ಮೈ, ಜಲ್ಲಿ ಮೇಲ್ಮೈ ಹೊಂದಿರುವ ರಸ್ತೆಗಳು, ಡಿಆರ್‌ಆರ್‌ಪಿ ಪ್ರಮುಖ ಅರ್ಹ ಗ್ರಾಮೀಣ ರಸ್ತೆಗಳ ನಿರ್ಮಾಣಕ್ಕೆ ಪ್ರಗತಿ ಪಥ ಯೋಜನೆ ಹಂತ-1ರಲ್ಲಿ 500 ಕೋಟಿ ರು ಬೇಕಿದೆ ಎಂದು ಪ್ರಸ್ತಾವಿಸಿದೆ.

 

‘ಪ್ರತಿ ವರ್ಷ 3,800 ಕಿ ಮೀಗಳಂತೆ ಆರ್ಥಿಕವಾಗಿ ಪ್ರಾಮುಖ್ಯತೆಯುಳ್ಳ ರಸ್ತೆಗಳನ್ನು ಆಯ್ಕೆ ಮಾಡಲಾಗುವುದು. ಮೊದಲ ವರ್ಷ ಪ್ರತಿಕಿ ಮೀ ಗೆ 82.6 ಲಕ್ಷ ರು. ಮೊತ್ತದಲ್ಲಿ ಪ್ರಧಾನ ಮಂತ್ರಿ ಗ್ರಾಮ ಸಡಕ್‌ ಯೋಜನೆಯ ಮಾನದಂಡದಂತೆ ಅಭಿವೃದ್ಧಿಪಡಿಸಲಾಗುವುದು,’ ಎಂದು ಹೊಸ ಯೋಜನೆ ಕುರಿತು ವಿವರಿಸಿದೆ.

 

ಪ್ರತಿ ವರ್ಷ 3,800 ಕಿ ಮೀ ಗಳಂತೆ 3 ವರ್ಷದ ಕಾಲಾವಧಿಯಲ್ಲಿ ಒಟ್ಟಾರೆ 11,400 ಕಿ ಮೀ ರಸ್ತೆ ಅಭಿವೃದ್ಧಿ, ಈ ರಸ್ತೆಗಳನ್ನು 5 ವರ್ಷಗಳ ಕಾಲ ಮೂಲ ಗುತ್ತಿಗೆದಾರರಿಂದ ನಿರ್ವಹಣೆ ಮಾಡಲಾಗುವುದು. 6ನೇ ವರ್ಷದಲ್ಲಿ ಮರು ಡಾಂಬರೀಕರಣ ಮಾಡುವ ಈ ಯೋಜನೆಗೆ 9 ವರ್ಷಗಳಲ್ಲಿ 12,580.87 ಕೋಟಿ ರು. ಅನುದಾನದ ಅವಶ್ಯಕತೆ ಇದೆ. 2024-25ನೇ ಸಾಲಿಗೆ ಇದಕ್ಕಾಗಿ 500 ಕೋಟಿ ರು.ಗಳನ್ನು ನಿಗದಿಪಡಿಸಿರುವುದು ಗೊತ್ತಾಗಿದೆ.

 

ಕಲ್ಯಾಣ ಕರ್ನಾಟಕ ಗ್ರಾಮೀಣ ಪ್ರದೇಶಗಳಲ್ಲಿ ಪ್ರಧಾನಮಂತ್ರಿ ಗ್ರಾಮೀಣ ಸಡಕ್‌ ಯೋಜನೆ ಮಾದರಿಯಲ್ಲಿ ಪ್ರತಿ ತಾಲೂಕಿಗೆ 23 ಕಿ ಮೀ ನಂತೆ ಒಟ್ಟಾರೆ 1,150 ಕಿ ಮೀ ರಸ್ತೆಗಳನ್ನು ಕಲ್ಯಾಣ ಪಥದ ಹೆಸರಿನಲ್ಲಿ ಅಭಿವೃದ್ಧಿಪಡಿಸಲಿದೆ. ಇದಕ್ಕಾಗಿ 2024-25ನೇ ಸಾಲಿನಲ್ಲಿ 1,000 ಕೋಟಿ ರು ಅಂದಾಜಿಸಿದೆ.

 

ಗ್ರಾಮ ಪಂಚಾಯ್ತಿಗಳಲ್ಲಿ ಆಸ್ತಿ ಸಮೀಕ್ಷೆ ಪ್ರಾರಂಭಿಸಲು ಉದ್ದೇಶಿಸಿದೆ. 2023-24ನೇ ಸಾಲಿನಲ್ಲಿ 1,230 ಕೋಟಿ ರು. ತೆರಿಗೆ ಸಂಗ್ರಹವಾಗಿದೆ. ಗ್ರಾಮ ಪಂಚಾಯ್ತಿಗಳಲ್ಲಿ ಸಂಪನ್ಮೂಲಗಳನ್ನು ಮತ್ತಷ್ಟು ಹೆಚ್ಚಿಸಲು ಆಸ್ತಿಯನ್ನು ನಗದೀಕರಿಸಿ ಆದಾಯ ಗಳಿಸುವ ನೀತಿಯನ್ನು ಜಾರಿಗೆ ತರಲು 1.00 ಕೋಟಿ ರು. ಒದಗಿಸಲಾಗುವುದು ಎಂದು ಪ್ರಸ್ತಾವಿಸಿದೆ.

 

ಪ್ರತಿ ಗ್ರಾಮ ಪಂಚಾಯ್ತಿ ಆಡಳಿತದಲ್ಲಿ ಇ-ಕಚೇರಿ ಆರಂಭಕ್ಕೆ 5,951 ಗ್ರಾಮ ಪಂಚಾಯ್ತಿಗಳಿಗೆ ಒಟ್ಟು 2.15 ಕೋಟಿ, ಪಿಡಿಒ, ಕಾರ್ಯದರ್ಶಿ ಮತ್ತು ಎರಡನೇ ವಿಭಾಗದ ಲೆಕ್ಕ ಸಹಾಯಕರನ್ನು ಕೌನ್ಸಲಿಂಗ್‌ ಮೂಲಕ ವರ್ಗಾವಣೆ ಪ್ರಕ್ರಿಯೆಗೆ 1. 00 ಕೋಟಿ ರು. ಸೇರಿ ಒಟ್ಟಾರೆ 4.15 ಕೋಟಿ ರು. ಬೇಕಿದೆ ಎಂದು ಅಂದಾಜಿಸಿರುವುದು ತಿಳಿದು ಬಂದಿದೆ.

 

ಅದೇ ರೀತಿ ಪ್ರತಿ ಗ್ರಾಮ ಪಂಚಾಯ್ತಿಗಳಲ್ಲಿ ಸಾಮಾಜಿಕವಾಗಿ ಸ್ಪಂದಿಸುವ ಆಡಳಿತ ಕೋಶವನ್ನು ತೆರೆಯಲು ಉದ್ದೇಶಿಸಿದೆ. ಆಯ್ದ 100 ಗ್ರಾಮ ಪಂಚಾಯ್ತಿಗಳಲ್ಲಿ ಗ್ರಾಮೀಣ ನಾಗರಿಕರಿಗೆ ಜೀವನ ಅಂತ್ಯದ ಆರೈಕೆ, ಉಪ ಶಮನ ಆರೈಕೆಗಾಗಿ 1.00 ಕೋಟಿ ರು. ವೆಚ್ಚವಾಗಲಿದೆ.

 

ಸ್ವಸಹಾಯ ಸಂಘಗಳ ಸಬಲೀಕರಣಕ್ಕಾಗಿ ಸಾವಿತ್ರಿಬಾಯಿ ಪುಲೆ ಹೆಸರಿನಲ್ಲಿ ಮಹಿಳಾ ಸಬಲೀಕರಣಕ್ಕಾಗಿ 100 ಪಂಚಾಯ್ತಿಗಳಲ್ಲಿ ಕೌಶಲ್ಯ ಅಭಿವೃದ್ಧಿ ಚಟುವಟಿಕೆಗಳಿಗೆ 1 ಕೋಟಿ, ಜೀತ ಕಾರ್ಮಿಕ ಪದ್ದತಿಯಿಂದ ಬಿಡುಗಡೆಗೊಂಡ ಕಾರ್ಮಿಕರ ಪುನರ್ವಸತಿಗಾಗಿ ನೀಡುವ ಮಾಸಿಕ ಭತ್ಯೆಯನ್ನು 1,000 ರು.ನಿಂದ 2000 ರು.ಹೆಚ್ಚಳ, ಈ ಎಲ್ಲಾ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ 14.87 ಕೋಟಿ ರು. ಅನುದಾನ ಅಗತ್ಯವಿದೆ ಎಂದು ವಿವರಿಸಿದೆ.

 

ಗ್ರಾಮೀಣ ಪ್ರದೇಶಗಳಲ್ಲಿ ಘನತ್ಯಾಜ್ಯ ನಿರ್ವಹಣೆಗಾಗಿ ವರ್ತುಲ ಆರ್ಥಿಕತೆ ವ್ಯವಸ್ಥೆ ನಿರ್ಮಾಣಕ್ಕಾಗಿ 239 ಗ್ರಾಮ ಪಂಚಾಯ್ತಿಗಳಲ್ಲಿ ಕಾರ್ಯಕ್ರಮ ಅನುಷ್ಠಾನಗೊಳಿಸಲಿದೆ. ಪ್ರತಿ ಗ್ರಾಮ ಪಂಚಾಯ್ತಿಗೆ 10 ಲಕ್ಷ ರು.ನಂತೆ 23.90 ಕೋಟಿ ರು., ಯೋಜನಾ ಅನುದಾನ ಒದಗಿಸಲಿದೆ. ಅರಿವು ಕೇಂದ್ರಗಳಿಗೆ ಕಟ್ಟಡ ನಿರ್ಮಾಣಕ್ಕಾಗಿ ಮಹತ್ವಾಕಾಂಕ್ಷೆ ತಾಲೂಕುಗಳ 100 ಗ್ರಾಮ ಪಂಚಾಯ್ತಿಗಳಲ್ಲಿ ರಾಜ್ಯವಲಯದ ಮೂಲಕ ಒಟ್ಟು 68 ಕೋಟಿ ರು. ಒದಗಿಸಬೇಕು ಎಂದು ಕೋರಿರುವುದು ಗೊತ್ತಾಗಿದೆ.

 

ಅತೀ ಹೆಚ್ಚು ವಿದ್ಯುತ್‌ ಬಿಲ್‌ ಬಾಕಿ ಇರುವ 200 ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗ್ರಾಮಗಳಿಗೆ ಮೂರನೇ ವಿದ್ಯುತ್‌ ಲೈನ್ ಒದಗಿಸಲಿದೆ. ಇದಕ್ಕಾಗಿ ಪ್ರತಿ ಗ್ರಾಮಕ್ಕೆ 5 ಲಕ್ಷ ರು. ನಂತೆ ಒಟ್ಟು 1,000 ಗ್ರಾಮಗಳಿಗೆ ವಿದ್ಯುತ್‌ ಬಿಲ್ಲಿಂಗ್‌ ಪ್ರಮಾಣೀಕರಣ ಯೋಜನೆಯಡಿ 50 ಕೋಟಿ ರು. ಒದಗಿಸಲು ಪ್ರಸ್ತಾವಿಸಿದೆ.

Hot this week

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

Topics

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ದೋಷಮುಕ್ತ; ಉಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಕೆಗೆ ಅನುಮೋದನೆ

ಬೆಂಗಳೂರು; ವಸತಿ ನಿಲಯದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ...

ವಿಪತ್ತು ಅಪಾಯ ತಡೆಗಟ್ಟುವ ನಿಧಿ; ಬಹುಕೋಟಿ ಬಳಕೆಗೆ ಪ್ರಮಾಣಪತ್ರವೇ ಸಲ್ಲಿಸದ ರಾಜ್ಯ

ಬೆಂಗಳೂರು; ವಿಪತ್ತುಗಳ ಅಪಾಯವನ್ನು ತಡೆಗಟ್ಟುವುದು ಮತ್ತು ಕಡಿಮೆ ಮಾಡುವ ಉದ್ದೇಶದಿಂದ ಕರ್ನಾಟಕ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ...

ವಿಪತ್ತು ನಿರ್ವಹಣೆ; ಕಳೆದು ಹೋದ 12 ಕೋಟಿ, ಹೆಸರಿಗಷ್ಟೇ ಆಪ್ತಮಿತ್ರ, ಎನ್‌ಡಿಆರ್‍ಎಫ್‌ ನಿಧಿ ದುರುಪಯೋಗ?

ಬೆಂಗಳೂರು; ವಿಪತ್ತು ನಿರ್ವಹಣೆ ಸಾಮರ್ಥ್ಯ ವೃದ್ಧಿಗೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದ...

Related Articles

Popular Categories

spot_imgspot_img
error: Content is protected !!