Thursday | March 26, 2026 |

ಕೇಂದ್ರ ಪುರಸ್ಕೃತ 7 ಕಾರ್ಯಕ್ರಮಗಳಿಗೆ ಬಿಡಿಗಾಸು ನೀಡದ ಕೇಂದ್ರ ಮತ್ತು ರಾಜ್ಯ ಸರ್ಕಾರ

Support THE-FILE

spot_img

ಬೆಂಗಳೂರು; ಅಮೃತ್‌ ಮಿಷನ್‌, ತುಂಗಾ ಮೇಲ್ದಂಡೆ ಯೋಜನೆ, ಹಿಂದುಳಿದ ವರ್ಗಗಳ ಮೆಟ್ರಿಕ್‌ ನಂತರದ ವಿದ್ಯಾರ್ಥಿ ವೇತನ ಸೇರಿದಂತೆ ಒಟ್ಟು ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರವು ತನ್ನ ಪಾಲಿನ ಅನುದಾನದಲ್ಲಿ  ಬಿಡಿಗಾಸನ್ನೂ ಒದಗಿಸಿಲ್ಲ.

 

ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳ ಪೈಕಿ 7 ಕಾರ್ಯಕ್ರಮಗಳಿಗೆ ರಾಜ್ಯ ಸರ್ಕಾರವು 2023-24ನೇ ಸಾಲಿನಲ್ಲಿ 1,221.49 ಕೋಟಿ ರು. ಅನುದಾನ ಒದಗಿಸಿಕೊಂಡಿತ್ತು. ಕೇಂದ್ರ ಸರ್ಕಾರವು ಇವೇ ಕಾರ್ಯಕ್ರಮಗಳಿಗೆ 1,917.48 ಕೋಟಿ ರು. ಅನುದಾನ ಮೀಸಲಿರಿಸಿತ್ತು. ಆದರೆ ಈ ಕಾರ್ಯಕ್ರಮಗಳಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರವು ಡಿಸೆಂಬರ್‌ ಅಂತ್ಯಕ್ಕೆ ನಯಾ ಪೈಸೆಯನ್ನೂ ಬಿಡುಗಡೆ ಮಾಡಿಲ್ಲ.

 

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ 2024ರ ಜನವರಿ 25ರಂದು ನಡೆದ ಇಲಾಖೆಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿಗಳ ಸಭೆಯಲ್ಲಿ ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳ ಕುರಿತಾಗಿ ಚರ್ಚೆ ನಡೆದಿದೆ. ಈ ಸಭೆಯಲ್ಲಿ ಮಂಡಿಸಿದ್ದ ಅಂಕಿ ಅಂಶಗಳು ‘ದಿ ಫೈಲ್‌’ಗೆ ಲಭ್ಯವಾಗಿವೆ.

 

20 ಇಲಾಖೆಗಳಲ್ಲಿ ಅನುಷ್ಠಾನಗೊಂಡಿರುವ ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳಿಗೆ ಕೇಂದ್ರ ಸರ್ಕಾರವು 2023-24ನೇ ಸಾಲಿಗೆ 5,980.79 ಕೋಟಿ ರು. ಅನುದಾನ ಒದಗಿಸಿಕೊಂಡಿತ್ತು. ಇದರಲ್ಲಿ ಡಿಸೆಂಬರ್‌ ಅಂತ್ಯಕ್ಕೆ 1,566.76 ಕೋಟಿ ರು. ಮಾತ್ರ ಬಿಡುಗಡೆ ಮಾಡಿದೆ. ಇನ್ನು 4,414.03 ಕೋಟಿ ರು.ಗಳನ್ನು ಬಿಡುಗಡೆಗೆ ಬಾಕಿ ಇರಿಸಿಕೊಂಡಿರುವುದು ಗೊತ್ತಾಗಿದೆ.

 

ಅದೇ ರೀತಿ ರಾಜ್ಯ ಸರ್ಕಾರವು ಇದೇ 20 ಇಲಾಖೆಗಳಲ್ಲಿ ಅನುಷ್ಠಾನಗೊಂಡಿರುವ ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳಿಗೆ 2023-24ನೇ ಸಾಲಿಗೆ 9,511.38 ಕೋಟಿ ರು. ಅನುದಾನ ಒದಗಿಸಿತ್ತು. ಈ ಪೈಕಿ ಡಿಸೆಂಬರ್‌ ಅಂತ್ಯಕ್ಕೆ 7,064.03 ಕೋಟಿ ರು. ಬಿಡುಗಡೆ ಮಾಡಿದೆ. 2,447.35 ಕೋಟಿ ರು.ಗಳನ್ನು ಬಿಡುಗಡೆಗೆ ಬಾಕಿ ಉಳಿಸಿಕೊಂಡಿದೆ.

 

ಶೂನ್ಯ ಬಿಡುಗಡೆ

 

ನಗರಾಭಿವೃದ್ಧಿ ಇಲಾಖೆಯ ವ್ಯಾಪ್ತಿಯಲ್ಲಿನ ಅಮೃತ್‌ ಮಿಷನ್‌ ಯೋಜನೆಗೆ ರಾಜ್ಯವು 320.00 ಕೋಟಿ ರು., ಕೇಂದ್ರವು 480.00 ಕೋಟಿ ರು., ಪ್ರಾಥಮಿಕ ಶಿಲ್ಕು 1,538.35 ಕೋಟಿ ರು ಸೇರಿ ಒಟ್ಟಾರೆ 2,338.05 ಕೋಟಿ ರು. ಒಟ್ಟು ಅನುದಾನವಿದೆ. ಈ ಯೋಜನೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರವು ಡಿಸೆಂಬರ್‌ ಅಂತ್ಯಕ್ಕೆ ಬಿಡಿಗಾಸನ್ನೂ ನೀಡಿಲ್ಲ.

 

ಗ್ರಾಮೀಣಾಭಿವೃದ್ಧಿ ಇಲಾಖೆಯ ಪ್ರಧಾನ ಮಂತ್ರಿ ಗ್ರಾಮ ಸಡಕ್‌ ಯೋಜನೆಗೆ ರಾಜ್ಯವು 316.00 ಕೋಟಿ ರು., ಕೇಂದ್ರವು 474.00 ಕೋಟಿ ರು.,ಪ್ರಾಥಮಿಕ ಶಿಲ್ಕು 355.31 ಕೋಟಿ ರು ಸೇರಿ ಒಟ್ಟಾರೆ 1,145.31 ಕೋಟಿ ರು. ಅನುದಾನ ಲಭ್ಯವಾಗಿಸಿಕೊಂಡಿದೆ. ಇದರಲ್ಲಿಯೂ ಕೇಂದ್ರ ಮತ್ತು ರಾಜ್ಯ ಸರ್ಕಾರವು ತನ್ನ ಪಾಲಿನ ಅನುದಾನದ ಬಿಡುಗಡೆಯಲ್ಲಿ ಶೂನ್ಯ ಸಂಪಾದಿಸಿದೆ.

 

ಜಲಸಂಪನ್ಮೂಲ ಇಲಾಖೆಯ ನಾರಾಯಣಪುರ ಎಡದಂಡೆ ಕಾಲುವೆ ಯೋಜನೆಯಲ್ಲಿ (ಇಆರ್‌ಎಂ)ನಲ್ಲಿ ರಾಜ್ಯವು 100 ಕೋಟಿ ರು.,. ಕೇಂದ್ರ ಸರ್ಕಾರವು 250 ಕೋಟಿ ರು., ಸೇರಿ ಒಟ್ಟಾರೆ 350 ಕೋಟಿ ರು. ಅನುದಾನ ಒದಗಿಸಿಕೊಂಡಿದೆ. ಕೇಂದ್ರ ಮತ್ತು ರಾಜ್ಯವು ಈ ಯೋಜನೆಗೂ ತನ್ನ ಪಾಲಿನಲ್ಲಿ ನಯಾ ಪೈಸೆ ನೀಡಿಲ್ಲ.

 

ವಸತಿ ಇಲಾಖೆಯ ಪ್ರಧಾನಮಂತ್ರಿ ಆವಾಜ್‌ ಯೋಜನೆ (ಗ್ರಾಮೀಣ)ಯಲ್ಲಿ ರಾಜ್ಯವು 164.00 ಕೋಟಿ ರು., ಕೇಂದ್ರವು 246.00 ಕೋಟಿ ರು, ಪ್ರಾಥಮಿಕ ಶಿಲ್ಕು 838.10 ಕೋಟಿ ರು ಸೇರಿ ಒಟ್ಟು 1,248.10 ಕೋಟಿ ರು. ಅನುದಾನವಿದೆ. ಇಲ್ಲಿಯೂ ಕೇಂದ್ರ ಮತ್ತು ರಾಜ್ಯ ಸರ್ಕಾರವು ತನ್ನ ಪಾಲಿನ ಹಣವನ್ನು ನೀಡಿಲ್ಲ.

 

ನಗರಾಭಿವೃದ್ಧಿ ಇಲಾಖೆಯ ಸ್ವಚ್ಛ ಭಾರತ (ನಗರ) ಯೋಜನೆಗೆ ರಾಜ್ಯವು 90 ಕೋಟಿ ರು., ಕೇಂದ್ರವು 200 ಕೋಟಿ ರು., ಪ್ರಾಥಮಿಕ ಶಿಲ್ಕು 747.75 ಕೋಟಿ ರು. ಅನುದಾನವಿದೆ. ಸ್ವಚ್ಛ ಭಾರತ ಯೋಜನೆಗೂ ಕೇಂದ್ರ ಸರ್ಕಾರವು ಬಿಡಿಗಾಸನ್ನು ನೀಡಿಲ್ಲ. ರಾಜ್ಯವೂ ಇದೇ ಹಾದಿಯನ್ನೇ ಹಿಡಿದಿದೆ.

 

ಜಲಸಂಪನ್ಮೂಲ ಇಲಾಖೆಯಡಿಯಲ್ಲಿ ತುಂಗಾ ಮೇಲ್ದಂಡೆ ಯೋಜನೆಗೆ ರಾಜ್ಯವು 100.49 ಕೋಟಿ ರು., ಕೇಂದ್ರ ಸರ್ಕಾರವು 112.46 ಕೋಟಿ ರು ಸೇರಿ ಒಟ್ಟು 212.97 ಕೋಟಿ ರು. ಅನುದಾನ ನಿಗದಿಪಡಿಸಿಕೊಂಡಿದೆ. ಇದರಲ್ಲಿಯೂ ಎರಡೂ ಸರ್ಕಾರಗಳು ನಯಾಪೈಸೆಯನ್ನು ನೀಡಿಲ್ಲ.

 

ಸಮಾಜ ಕಲ್ಯಾಣ ಇಲಾಖೆಯಲ್ಲಿ ಪ್ರಧಾನಮಂತ್ರಿ ಆದರ್ಶ ಯೋಜನೆಗೆ ಕೇಂದ್ರವು 100 ಕೋಟಿ ರು. ನೀಡಿದೆಯಾದರೂ ಡಿಸೆಂಬರ್‌ ಅಂತ್ಯಕ್ಕೆ ಬಿಡಿಗಾಸು ನೀಡಿಲ್ಲ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಮೆಟ್ರಿಕ್‌ ನಂತರದ ವಿದ್ಯಾರ್ಥಿ ವೇತನಕ್ಕೆ ರಾಜ್ಯವು 131 ಕೋಟಿ ರು., ಕೇಂದ್ರವು 55 ಕೋಟಿ ರು. ಸೇರಿ ಒಟ್ಟಾರೆ 186 ಕೋಟಿ ರು. ಅನುದಾನ ನೀಡಬೇಕಿತ್ತು. ಆದರೆ ಡಿಸೆಂಬರ್‌ ಅಂತ್ಯಕ್ಕೆ ನಯಾಪೈಸೆಯೂ ಬಿಡುಗಡೆಯಾಗಿಲ್ಲ.

Hot this week

ನರೇಗಾ ವಸತಿ ಕಾಮಗಾರಿಗಳಲ್ಲಿ ಮೋಸದ ಪಾವತಿ; ಚೆಕ್ ಡ್ಯಾಂ ಕಾಮಗಾರಿಯೇ ಇಲ್ಲ, ಆದರೂ ಹಣ ಪಾವತಿ

ಬೆಂಗಳೂರು; 847 ಸಂಖ್ಯೆ ವಸತಿ  ಕಾಮಗಾರಿಗಳಲ್ಲಿ  ಮೋಸದ ಪಾವತಿಗಳಾಗಿರುವುದನ್ನು ಭಾರತದ ಲೆಕ್ಕ...

42,750 ಕೋಟಿ ದೀರ್ಘಾವಧಿ ಸಾಲ, 4,516 ಕೋಟಿ ಆದಾಯ ಕೊರತೆ; ಎಸ್ಕಾಂಗಳ ಆರ್ಥಿಕ ಸ್ಥಿತಿ ಅನಾವರಣ

ಬೆಂಗಳೂರು; ವಿದ್ಯುತ್ ಸರಬರಾಜು ಕಂಪನಿಗಳು ಇದುವರೆಗೆ ಒಟ್ಟಾರೆ 42,750 ಕೋಟಿಗಳಷ್ಟು ದೀರ್ಘಾವಧಿ...

ಹಿಂದುಳಿದ ವರ್ಗ ವಸತಿ ಶಾಲೆ ಕಟ್ಟಡಗಳು ಶಿಥಿಲ; ಕಟ್ಟಡಗಳ ದುರಸ್ತಿಗೂ ಅನುದಾನವಿಲ್ಲ, ‘ಕೈ’ ಎತ್ತಿದ ಸರ್ಕಾರ

ಬೆಂಗಳೂರು;  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವಸತಿ ಶಾಲೆಗಳು ಶಿಥಿಲಗೊಂಡಿದ್ದರೂ...

ನರೇಗಾ ಕಾಮಗಾರಿಗಳ ಆರಂಭದ ದಿನಾಂಕವೂ ಇಲ್ಲ, ದತ್ತಾಂಶವೂ ಇಲ್ಲ; 1,007.83 ಕೋಟಿ ರು. ವೆಚ್ಚದ ಕಾಮಗಾರಿಗಳು ಅಪೂರ್ಣ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡಿದ್ದ ಕಾಮಗಾರಿಗಳ ಪೈಕಿ ಒಂದು ವ‍ರ್ಷಕ್ಕಿಂತಲೂ ಹೆಚ್ಚು...

ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿಗಳ ಕುಟುಂಬ ಸದಸ್ಯರ ಉದ್ಯಮ, ಹಣಕಾಸಿನ ವ್ಯವಹಾರ; ಸದನಕ್ಕೆ ಒದಗಿಸಬಹುದೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಖಿಲ ಭಾರತ...

Topics

ನರೇಗಾ ವಸತಿ ಕಾಮಗಾರಿಗಳಲ್ಲಿ ಮೋಸದ ಪಾವತಿ; ಚೆಕ್ ಡ್ಯಾಂ ಕಾಮಗಾರಿಯೇ ಇಲ್ಲ, ಆದರೂ ಹಣ ಪಾವತಿ

ಬೆಂಗಳೂರು; 847 ಸಂಖ್ಯೆ ವಸತಿ  ಕಾಮಗಾರಿಗಳಲ್ಲಿ  ಮೋಸದ ಪಾವತಿಗಳಾಗಿರುವುದನ್ನು ಭಾರತದ ಲೆಕ್ಕ...

42,750 ಕೋಟಿ ದೀರ್ಘಾವಧಿ ಸಾಲ, 4,516 ಕೋಟಿ ಆದಾಯ ಕೊರತೆ; ಎಸ್ಕಾಂಗಳ ಆರ್ಥಿಕ ಸ್ಥಿತಿ ಅನಾವರಣ

ಬೆಂಗಳೂರು; ವಿದ್ಯುತ್ ಸರಬರಾಜು ಕಂಪನಿಗಳು ಇದುವರೆಗೆ ಒಟ್ಟಾರೆ 42,750 ಕೋಟಿಗಳಷ್ಟು ದೀರ್ಘಾವಧಿ...

ಹಿಂದುಳಿದ ವರ್ಗ ವಸತಿ ಶಾಲೆ ಕಟ್ಟಡಗಳು ಶಿಥಿಲ; ಕಟ್ಟಡಗಳ ದುರಸ್ತಿಗೂ ಅನುದಾನವಿಲ್ಲ, ‘ಕೈ’ ಎತ್ತಿದ ಸರ್ಕಾರ

ಬೆಂಗಳೂರು;  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವಸತಿ ಶಾಲೆಗಳು ಶಿಥಿಲಗೊಂಡಿದ್ದರೂ...

ನರೇಗಾ ಕಾಮಗಾರಿಗಳ ಆರಂಭದ ದಿನಾಂಕವೂ ಇಲ್ಲ, ದತ್ತಾಂಶವೂ ಇಲ್ಲ; 1,007.83 ಕೋಟಿ ರು. ವೆಚ್ಚದ ಕಾಮಗಾರಿಗಳು ಅಪೂರ್ಣ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡಿದ್ದ ಕಾಮಗಾರಿಗಳ ಪೈಕಿ ಒಂದು ವ‍ರ್ಷಕ್ಕಿಂತಲೂ ಹೆಚ್ಚು...

ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿಗಳ ಕುಟುಂಬ ಸದಸ್ಯರ ಉದ್ಯಮ, ಹಣಕಾಸಿನ ವ್ಯವಹಾರ; ಸದನಕ್ಕೆ ಒದಗಿಸಬಹುದೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಖಿಲ ಭಾರತ...

ನರೇಗಾ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಿಯಮ ಉಲ್ಲಂಘನೆ; 86.67 ಕೋಟಿ ರು ಅಕ್ರಮ ಪತ್ತೆ ಹಚ್ಚಿದ ಸಿಎಜಿ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಮಾನವ ಸಂಪನ್ಮೂಲ ಬಳಕೆಗಾಗಿ ಮಾಡಿಕೊಂಡಿದ್ದ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಡೆದಿದ್ದ...

ಮೋಸದ ವಹಿವಾಟು, ಹೆಚ್ಚಿನ ಪಾವತಿ, ಅಕ್ರಮ ವೆಚ್ಚ; ನರೇಗಾದ ಮತ್ತೊಂದು ಮುಖ ಬಯಲು ಮಾಡಿದ ಸಿಎಜಿ

ಬೆಂಗಳೂರು; ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೈಗೊಂಡಿದ್ದ ಕಾಮಗಾರಿಗಳು...

ಗೃಹಜ್ಯೋತಿ; 23,823.06 ಮಿಲಿಯನ್ ಯೂನಿಟ್ ವಿದ್ಯುತ್ ಬಳಕೆ, ಎಸ್ಕಾಂಗಳಿಗೆ 631.75 ಕೋಟಿ ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಗೃಹ ಜ್ಯೋತಿ ಯೋಜನೆ ಅನುಷ್ಠಾನಗೊಳಿಸಿರುವ ವಿದ್ಯುತ್ ಸರಬರಾಜು ಕಂಪನಿಗಳಿಗೆ ಸರ್ಕಾರವು...

Related Articles

Popular Categories

error: Content is protected !!