Wednesday | May 27, 2026 |

ಕೇಂದ್ರ ಪುರಸ್ಕೃತ 7 ಕಾರ್ಯಕ್ರಮಗಳಿಗೆ ಬಿಡಿಗಾಸು ನೀಡದ ಕೇಂದ್ರ ಮತ್ತು ರಾಜ್ಯ ಸರ್ಕಾರ

ಬೆಂಗಳೂರು; ಅಮೃತ್‌ ಮಿಷನ್‌, ತುಂಗಾ ಮೇಲ್ದಂಡೆ ಯೋಜನೆ, ಹಿಂದುಳಿದ ವರ್ಗಗಳ ಮೆಟ್ರಿಕ್‌ ನಂತರದ ವಿದ್ಯಾರ್ಥಿ ವೇತನ ಸೇರಿದಂತೆ ಒಟ್ಟು ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರವು ತನ್ನ ಪಾಲಿನ ಅನುದಾನದಲ್ಲಿ  ಬಿಡಿಗಾಸನ್ನೂ ಒದಗಿಸಿಲ್ಲ.

 

ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳ ಪೈಕಿ 7 ಕಾರ್ಯಕ್ರಮಗಳಿಗೆ ರಾಜ್ಯ ಸರ್ಕಾರವು 2023-24ನೇ ಸಾಲಿನಲ್ಲಿ 1,221.49 ಕೋಟಿ ರು. ಅನುದಾನ ಒದಗಿಸಿಕೊಂಡಿತ್ತು. ಕೇಂದ್ರ ಸರ್ಕಾರವು ಇವೇ ಕಾರ್ಯಕ್ರಮಗಳಿಗೆ 1,917.48 ಕೋಟಿ ರು. ಅನುದಾನ ಮೀಸಲಿರಿಸಿತ್ತು. ಆದರೆ ಈ ಕಾರ್ಯಕ್ರಮಗಳಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರವು ಡಿಸೆಂಬರ್‌ ಅಂತ್ಯಕ್ಕೆ ನಯಾ ಪೈಸೆಯನ್ನೂ ಬಿಡುಗಡೆ ಮಾಡಿಲ್ಲ.

 

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ 2024ರ ಜನವರಿ 25ರಂದು ನಡೆದ ಇಲಾಖೆಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿಗಳ ಸಭೆಯಲ್ಲಿ ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳ ಕುರಿತಾಗಿ ಚರ್ಚೆ ನಡೆದಿದೆ. ಈ ಸಭೆಯಲ್ಲಿ ಮಂಡಿಸಿದ್ದ ಅಂಕಿ ಅಂಶಗಳು ‘ದಿ ಫೈಲ್‌’ಗೆ ಲಭ್ಯವಾಗಿವೆ.

 

20 ಇಲಾಖೆಗಳಲ್ಲಿ ಅನುಷ್ಠಾನಗೊಂಡಿರುವ ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳಿಗೆ ಕೇಂದ್ರ ಸರ್ಕಾರವು 2023-24ನೇ ಸಾಲಿಗೆ 5,980.79 ಕೋಟಿ ರು. ಅನುದಾನ ಒದಗಿಸಿಕೊಂಡಿತ್ತು. ಇದರಲ್ಲಿ ಡಿಸೆಂಬರ್‌ ಅಂತ್ಯಕ್ಕೆ 1,566.76 ಕೋಟಿ ರು. ಮಾತ್ರ ಬಿಡುಗಡೆ ಮಾಡಿದೆ. ಇನ್ನು 4,414.03 ಕೋಟಿ ರು.ಗಳನ್ನು ಬಿಡುಗಡೆಗೆ ಬಾಕಿ ಇರಿಸಿಕೊಂಡಿರುವುದು ಗೊತ್ತಾಗಿದೆ.

 

ಅದೇ ರೀತಿ ರಾಜ್ಯ ಸರ್ಕಾರವು ಇದೇ 20 ಇಲಾಖೆಗಳಲ್ಲಿ ಅನುಷ್ಠಾನಗೊಂಡಿರುವ ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳಿಗೆ 2023-24ನೇ ಸಾಲಿಗೆ 9,511.38 ಕೋಟಿ ರು. ಅನುದಾನ ಒದಗಿಸಿತ್ತು. ಈ ಪೈಕಿ ಡಿಸೆಂಬರ್‌ ಅಂತ್ಯಕ್ಕೆ 7,064.03 ಕೋಟಿ ರು. ಬಿಡುಗಡೆ ಮಾಡಿದೆ. 2,447.35 ಕೋಟಿ ರು.ಗಳನ್ನು ಬಿಡುಗಡೆಗೆ ಬಾಕಿ ಉಳಿಸಿಕೊಂಡಿದೆ.

 

ಶೂನ್ಯ ಬಿಡುಗಡೆ

 

ನಗರಾಭಿವೃದ್ಧಿ ಇಲಾಖೆಯ ವ್ಯಾಪ್ತಿಯಲ್ಲಿನ ಅಮೃತ್‌ ಮಿಷನ್‌ ಯೋಜನೆಗೆ ರಾಜ್ಯವು 320.00 ಕೋಟಿ ರು., ಕೇಂದ್ರವು 480.00 ಕೋಟಿ ರು., ಪ್ರಾಥಮಿಕ ಶಿಲ್ಕು 1,538.35 ಕೋಟಿ ರು ಸೇರಿ ಒಟ್ಟಾರೆ 2,338.05 ಕೋಟಿ ರು. ಒಟ್ಟು ಅನುದಾನವಿದೆ. ಈ ಯೋಜನೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರವು ಡಿಸೆಂಬರ್‌ ಅಂತ್ಯಕ್ಕೆ ಬಿಡಿಗಾಸನ್ನೂ ನೀಡಿಲ್ಲ.

 

ಗ್ರಾಮೀಣಾಭಿವೃದ್ಧಿ ಇಲಾಖೆಯ ಪ್ರಧಾನ ಮಂತ್ರಿ ಗ್ರಾಮ ಸಡಕ್‌ ಯೋಜನೆಗೆ ರಾಜ್ಯವು 316.00 ಕೋಟಿ ರು., ಕೇಂದ್ರವು 474.00 ಕೋಟಿ ರು.,ಪ್ರಾಥಮಿಕ ಶಿಲ್ಕು 355.31 ಕೋಟಿ ರು ಸೇರಿ ಒಟ್ಟಾರೆ 1,145.31 ಕೋಟಿ ರು. ಅನುದಾನ ಲಭ್ಯವಾಗಿಸಿಕೊಂಡಿದೆ. ಇದರಲ್ಲಿಯೂ ಕೇಂದ್ರ ಮತ್ತು ರಾಜ್ಯ ಸರ್ಕಾರವು ತನ್ನ ಪಾಲಿನ ಅನುದಾನದ ಬಿಡುಗಡೆಯಲ್ಲಿ ಶೂನ್ಯ ಸಂಪಾದಿಸಿದೆ.

 

ಜಲಸಂಪನ್ಮೂಲ ಇಲಾಖೆಯ ನಾರಾಯಣಪುರ ಎಡದಂಡೆ ಕಾಲುವೆ ಯೋಜನೆಯಲ್ಲಿ (ಇಆರ್‌ಎಂ)ನಲ್ಲಿ ರಾಜ್ಯವು 100 ಕೋಟಿ ರು.,. ಕೇಂದ್ರ ಸರ್ಕಾರವು 250 ಕೋಟಿ ರು., ಸೇರಿ ಒಟ್ಟಾರೆ 350 ಕೋಟಿ ರು. ಅನುದಾನ ಒದಗಿಸಿಕೊಂಡಿದೆ. ಕೇಂದ್ರ ಮತ್ತು ರಾಜ್ಯವು ಈ ಯೋಜನೆಗೂ ತನ್ನ ಪಾಲಿನಲ್ಲಿ ನಯಾ ಪೈಸೆ ನೀಡಿಲ್ಲ.

 

ವಸತಿ ಇಲಾಖೆಯ ಪ್ರಧಾನಮಂತ್ರಿ ಆವಾಜ್‌ ಯೋಜನೆ (ಗ್ರಾಮೀಣ)ಯಲ್ಲಿ ರಾಜ್ಯವು 164.00 ಕೋಟಿ ರು., ಕೇಂದ್ರವು 246.00 ಕೋಟಿ ರು, ಪ್ರಾಥಮಿಕ ಶಿಲ್ಕು 838.10 ಕೋಟಿ ರು ಸೇರಿ ಒಟ್ಟು 1,248.10 ಕೋಟಿ ರು. ಅನುದಾನವಿದೆ. ಇಲ್ಲಿಯೂ ಕೇಂದ್ರ ಮತ್ತು ರಾಜ್ಯ ಸರ್ಕಾರವು ತನ್ನ ಪಾಲಿನ ಹಣವನ್ನು ನೀಡಿಲ್ಲ.

 

ನಗರಾಭಿವೃದ್ಧಿ ಇಲಾಖೆಯ ಸ್ವಚ್ಛ ಭಾರತ (ನಗರ) ಯೋಜನೆಗೆ ರಾಜ್ಯವು 90 ಕೋಟಿ ರು., ಕೇಂದ್ರವು 200 ಕೋಟಿ ರು., ಪ್ರಾಥಮಿಕ ಶಿಲ್ಕು 747.75 ಕೋಟಿ ರು. ಅನುದಾನವಿದೆ. ಸ್ವಚ್ಛ ಭಾರತ ಯೋಜನೆಗೂ ಕೇಂದ್ರ ಸರ್ಕಾರವು ಬಿಡಿಗಾಸನ್ನು ನೀಡಿಲ್ಲ. ರಾಜ್ಯವೂ ಇದೇ ಹಾದಿಯನ್ನೇ ಹಿಡಿದಿದೆ.

 

ಜಲಸಂಪನ್ಮೂಲ ಇಲಾಖೆಯಡಿಯಲ್ಲಿ ತುಂಗಾ ಮೇಲ್ದಂಡೆ ಯೋಜನೆಗೆ ರಾಜ್ಯವು 100.49 ಕೋಟಿ ರು., ಕೇಂದ್ರ ಸರ್ಕಾರವು 112.46 ಕೋಟಿ ರು ಸೇರಿ ಒಟ್ಟು 212.97 ಕೋಟಿ ರು. ಅನುದಾನ ನಿಗದಿಪಡಿಸಿಕೊಂಡಿದೆ. ಇದರಲ್ಲಿಯೂ ಎರಡೂ ಸರ್ಕಾರಗಳು ನಯಾಪೈಸೆಯನ್ನು ನೀಡಿಲ್ಲ.

 

ಸಮಾಜ ಕಲ್ಯಾಣ ಇಲಾಖೆಯಲ್ಲಿ ಪ್ರಧಾನಮಂತ್ರಿ ಆದರ್ಶ ಯೋಜನೆಗೆ ಕೇಂದ್ರವು 100 ಕೋಟಿ ರು. ನೀಡಿದೆಯಾದರೂ ಡಿಸೆಂಬರ್‌ ಅಂತ್ಯಕ್ಕೆ ಬಿಡಿಗಾಸು ನೀಡಿಲ್ಲ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಮೆಟ್ರಿಕ್‌ ನಂತರದ ವಿದ್ಯಾರ್ಥಿ ವೇತನಕ್ಕೆ ರಾಜ್ಯವು 131 ಕೋಟಿ ರು., ಕೇಂದ್ರವು 55 ಕೋಟಿ ರು. ಸೇರಿ ಒಟ್ಟಾರೆ 186 ಕೋಟಿ ರು. ಅನುದಾನ ನೀಡಬೇಕಿತ್ತು. ಆದರೆ ಡಿಸೆಂಬರ್‌ ಅಂತ್ಯಕ್ಕೆ ನಯಾಪೈಸೆಯೂ ಬಿಡುಗಡೆಯಾಗಿಲ್ಲ.

Hot this week

ಸರ್ಕಾರದ ಹಿತಾಸಕ್ತಿ, ಘನತೆಗೆ ಧಕ್ಕೆ ನೆಪ; ಸಮಿತಿ ರಚನೆಯಿಲ್ಲದೇ 21 ಪ್ಯಾಕೇಜ್‌ ಟೆಂಡರ್ ಅನುಮೋದನೆ, 4,791.95 ಕೋಟಿ ರು ಹಗರಣ?

ಬೆಂಗಳೂರು; ಘನತ್ಯಾಜ್ಯ ನಿರ್ವಹಣೆಯ 21  ಪ್ಯಾಕೇಜ್‌ಗಳಿಗೆ ಟೆಂಡರ್‌ ಪ್ರಕ್ರಿಯೆಗೆ ಸಂಬಂಧಿಸಿದಂತೆ  ಐಎಎಸ್...

ಐಎಎಸ್‌ ವೃಂದದಲ್ಲಿ ಅನರ್ಹ 7 ಅಧಿಕಾರಿಗಳು ಮುಂದುವರಿಕೆ; ಬಂಡೆದ್ದ 25 ಕೆಎಎಸ್‌ ಅಧಿಕಾರಿಗಳು, ಅಖಾಡಕ್ಕಿಳಿದ ಡಿ ಕೆ ಶಿವಕುಮಾರ್

ಬೆಂಗಳೂರು;  ಕನಿಷ್ಟ 8 ವರ್ಷಗಳ ನಿಯಮಿತವಾಗಿ ಸೇವೆ ಸಲ್ಲಿಸಿರುವ  ಕೆಎಎಸ್‌ ಅಧಿಕಾರಿಗಳಿಗೆ...
Please Scan to make Your Contribution

Topics

ಸರ್ಕಾರದ ಹಿತಾಸಕ್ತಿ, ಘನತೆಗೆ ಧಕ್ಕೆ ನೆಪ; ಸಮಿತಿ ರಚನೆಯಿಲ್ಲದೇ 21 ಪ್ಯಾಕೇಜ್‌ ಟೆಂಡರ್ ಅನುಮೋದನೆ, 4,791.95 ಕೋಟಿ ರು ಹಗರಣ?

ಬೆಂಗಳೂರು; ಘನತ್ಯಾಜ್ಯ ನಿರ್ವಹಣೆಯ 21  ಪ್ಯಾಕೇಜ್‌ಗಳಿಗೆ ಟೆಂಡರ್‌ ಪ್ರಕ್ರಿಯೆಗೆ ಸಂಬಂಧಿಸಿದಂತೆ  ಐಎಎಸ್...

ಐಎಎಸ್‌ ವೃಂದದಲ್ಲಿ ಅನರ್ಹ 7 ಅಧಿಕಾರಿಗಳು ಮುಂದುವರಿಕೆ; ಬಂಡೆದ್ದ 25 ಕೆಎಎಸ್‌ ಅಧಿಕಾರಿಗಳು, ಅಖಾಡಕ್ಕಿಳಿದ ಡಿ ಕೆ ಶಿವಕುಮಾರ್

ಬೆಂಗಳೂರು;  ಕನಿಷ್ಟ 8 ವರ್ಷಗಳ ನಿಯಮಿತವಾಗಿ ಸೇವೆ ಸಲ್ಲಿಸಿರುವ  ಕೆಎಎಸ್‌ ಅಧಿಕಾರಿಗಳಿಗೆ...

‘ನಾನು ಹೇಳೋವರೆಗೂ ಕೂಡಂಗಿಲ್ಲ, ಗೆಟ್‌ ಔಟ್‌, ಗೆಟ್‌ ಔಟ್’; ಮಂಡಳಿ ಕಾರ್ಯದರ್ಶಿಯಿಂದಲೇ ಪ್ರಾಜೆಕ್ಟ್ ಇಂಜಿನಿಯರ್ ಸಮೀರ್ ಗೆ ಅವಮಾನ?

ಬೆಂಗಳೂರು; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧ್ಯಕ್ಷರಾಗಿರುವ  ಕರ್ನಾಟಕ ರಾಜ್ಯ ವಿಜ್ಞಾನ ಮತ್ತು...

52 ಕ್ರಿಮಿನಲ್ ಪ್ರಕರಣಗಳ ಹಿಂತೆಗೆತಕ್ಕೆ ಮತ್ತೆ ಚಾಲನೆ; ಡಿಜಿಐಜಿಪಿ, ಕಾನೂನು ಇಲಾಖೆ ಅಸಮ್ಮತಿ ನಡುವೆಯೂ ಪ್ರಸ್ತಾವ

ಬೆಂಗಳೂರು; ರಾಜ್ಯದ ವಿವಿಧ ಪೊಲೀಸ್‌ ಠಾಣೆಗಳಲ್ಲಿ  ಜನಪ್ರತಿನಿಧಿಗಳ ವಿರುದ್ಧ  ದಾಖಲಾಗಿರುವ ಮತ್ತು...

Related Articles

Popular Categories

error: Content is protected !!