Sunday | September 20, 2026 |

ನಿರಂತರ ಏರಿಕೆ; ಎಂಟೇ ತಿಂಗಳಲ್ಲಿ 32,289.99 ಕೋಟಿ ರು. ಸಾರ್ವಜನಿಕ ಸಾಲ

ಬೆಂಗಳೂರು: ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿದ್ದ ಹಿಂದಿನ ಬಿಜೆಪಿ ಸರ್ಕಾರವು ಅಧಿಕಾರದಿಂದ ಕೆಳಗಿಳಿಯುವ ಮುನ್ನ ಇದ್ದ 262 ಕೋಟಿ ರು ಸಾರ್ವಜನಿಕ ಸಾಲವು ಈಗ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ 8 ತಿಂಗಳಲ್ಲೇ 32,289.99 ಕೋಟಿ  ರೂ.ಗಳಿಗೆ ತಲುಪಿದೆ.

 

ಗ್ಯಾರಂಟಿ ಯೋಜನೆಗಳಿಗೆ ಸಂಪನ್ಮೂಲ ಕ್ರೋಢೀಕರಣ, ವೆಚ್ಚವನ್ನು ತಗ್ಗಿಸಲು ಹರಸಾಹಸ ಪಡುತ್ತಿರುವ ಬೆನ್ನಲ್ಲೇ ಸಾರ್ವಜನಿಕ ಸಾಲದ ಪ್ರಮಾಣವು ನಿರಂತರವಾಗಿ ಏರಿಕೆ ಕಾಣುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ.

 

2023ರ ಫೆಬ್ರುವರಿಯ ಅಂತ್ಯಕ್ಕೆ ರಾಜ್ಯ ಸರ್ಕಾರದ ಸಾಲವು 262 ಕೋಟಿ ರು. ಇತ್ತು. 2024ರ ಡಿಸೆಂಬರ್‍‌ ಅಂತ್ಯಕ್ಕೆ 32,289.99 ರೂ.ಗಳಿಗೆ ಮುಟ್ಟಿದೆ. ಈ 8 ತಿಂಗಳಲ್ಲಿ 32,027.99 ಕೋಟಿ ರು. ಸಾಲ ಪಡೆದುಕೊಂಡಿದೆ. ಬಸವರಾಜ ಬೊಮ್ಮಾಯಿ ಅವರ ಅಧಿಕಾರವಾಧಿ ನಂತರದ ತಿಂಗಳುಗಳಲ್ಲಿ ಸಾರ್ವಜನಿಕ  ಸಾಲ ನಿರಂತರವಾಗಿ ಏರಿಕೆ ಕಾಣುತ್ತಿರುವುದು ಆರ್ಥಿಕ ಇಲಾಖೆಯ ಅಧಿಕೃತ ಜಾಲತಾಣದಿಂದ ತಿಳಿದು ಬಂದಿದೆ.

 

ಮೇ ತಿಂಗಳಲ್ಲಿ 443.82 ಕೋಟಿಗೆ ಏರಿಕೆ ಕಂಡಿದ್ದ ಸಾರ್ವಜನಿಕ ಸಾಲವು  ಜೂನ್‌ ತಿಂಗಳಲ್ಲಿ 602.29 ಕೋಟಿ ರೂ.ಗಳಿಗೆ ಹೆಚ್ಚಳವಾಗಿತ್ತು. ಮುಂದುವರೆದ ಈ ಏರಿಕೆ ಜುಲೈ ಮಾಹೆಯಲ್ಲಿ 643.02 ಕೋಟಿಗೆ ತಲುಪಿತ್ತು. ಆಗಸ್ಟ್‌ ತಿಂಗಳಲ್ಲಿ 871.01 ಕೋಟಿ ರೂ.ಗಳಿಗೆ ಮುಟ್ಟಿತ್ತು. ಸೆಪ್ಟೆಂಬರ್‍‌ ತಿಂಗಳಲ್ಲಿ ಹೆಚ್ಚಿನ ಏರಿಕೆ ಕಂಡಿದ್ದು 1,191.10 ಕೋಟಿ ರೂಗಳಿಗೆ.  ಅಕ್ಟೋಬರ್‍‌ನಲ್ಲಿ ಗಣನೀಯ ಏರಿಕೆ ಕಂಡಿದ್ದ ಸಾರ್ವಜನಿಕ ಸಾಲವು  7,399.60 ಕೋಟಿ ರೂಗಳಿಗೆ ತಲುಪಿತ್ತು.

 

ಇದೇ ಪ್ರವೃತ್ತಿಯು ನವೆಂಬರ್‍‌ನಲ್ಲಿಯೂ ಮುಂದುವರೆದಿತ್ತಲ್ಲದೇ ಸಾರ್ವಜನಿಕ ಸಾಲದ ಪ್ರಮಾಣದಲ್ಲಿ  ಭಾರಿ ಏರಿಕೆ ಕಂಡು 16,711.19 ಕೋಟಿ ರೂ.ಗಳಿಗೆ ತಲುಪಿತ್ತು. ಒಂದೇ ತಿಂಗಳಲ್ಲೇ ಅಂದರೆ  ಡಿಸೆಂಬರ್‍‌ ಅಂತ್ಯಕ್ಕೆ ಇದರ ಪ್ರಮಾಣವು  15,578.8 ಕೋಟಿ ರು.ಗೆ ಏರಿಕೆ ಕಂಡಿತ್ತು. ಹೀಗೆ ಪ್ರತಿ ತಿಂಗಳೂ ಸಾಲದ ಪ್ರಮಾಣವು ಏರುತ್ತಾ ಸಾಗಿರುವುದು ಕಂಡು ಬಂದಿದೆ.

 

2022-23ರಲ್ಲಿ ಹಿಂದಿನ ಬಿಜೆಪಿ ಸರ್ಕಾರವು 72,000.46 ಕೋಟಿ ರು. ಸಾರ್ವಜನಿಕ ಸಾಲ ಪಡೆಯುವುದಾಗಿ ಬಜೆಟ್‌ನಲ್ಲಿ ಘೋಷಿಸಿತ್ತು. 2022ರ ಏಪ್ರಿಲ್‌ನಿಂದ 2022ರ ಡಿಸೆಂಬರ್‍‌ ಅಂತ್ಯಕ್ಕೆ 37,601.49 ಕೋಟಿ ರು. ಸಾಲ ಪಡೆದಿತ್ತು. 2023-24ನೇ ಆರ್ಥಿಕ ಸಾಲಿಗೆ ಕಾಂಗ್ರೆಸ್‌ ಸರ್ಕಾರವು 85,811.00 ಕೋಟಿ ರು. ಸಾರ್ವಜನಿಕ ಸಾಲ ಪಡೆಯುವುದಾಗಿ ಘೋಷಿಸಿದೆ. 2023ರ ಏಪ್ರಿಲ್‌ನಿಂದ ಡಿಸೆಂಬರ್‍‌ ಅಂತ್ಯಕ್ಕೆ 32,289.99 ಕೋಟಿ ರು. ಸಾಲ ಪಡೆದಿರುವುದು ಆರ್ಥಿಕ ಇಲಾಖೆಯ ಅಧಿಕೃತ ಜಾಲತಾಣದಿಂದ ತಿಳಿದು ಬಂದಿದೆ.

7 ತಿಂಗಳಲ್ಲಿ 7,399.60 ಕೋಟಿ ರು ಸಾಲ; ಬಿಜೆಪಿ ಅವಧಿಗೆ ಹೋಲಿಸಿದರೆ 2,576.82 ಕೋಟಿ ರು. ಅಧಿಕ

ರಾಜ್ಯ ಸರ್ಕಾರದ ಸಾಲ ದಿನೇ ದಿನೇ ಏರತೊಡಗಿದೆ. ವಿವಿಧ ಗ್ಯಾರಂಟಿಗಳಿಂದಾಗಿ ಸರ್ಕಾರವು  ಈಗಾಗಲೆ ಹೆಣಗಾಡುತ್ತಿದೆ. ಕೇಂದ್ರ ಸರ್ಕಾರ ತನ್ನ ಪಾಲಿನ ಹಣವನ್ನು ಇನ್ನೂ ಬಿಡುಗಡೆ ಮಾಡಿಲ್ಲ. ಈ ಸಂಬಂಧ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶಗೊಂಡಿರುವ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಇತ್ತೀಚೆಗೆ ನವದೆಹಲಿಯ ಜಂತರ್‍‌ಮಂತರ್‍‌ನಲ್ಲಿ ಸಾಂಕೇತಿಕವಾಗಿ ಪ್ರತಿಭಟನೆಯನ್ನೂ ಮಾಡಿತ್ತು.

 

ಸಿದ್ದರಾಮಯ್ಯ ಮುಂದಿರುವ ಅತ್ಯಂತ ದುಬಾರಿ ವೆಚ್ಚ ಎಂದರೆ ಗ್ಯಾರಂಟಿಗಳಿಗೆ 60,000 ಕೋಟಿಯನ್ನು ಹೊಂದಿಸುವುದು. ಇದು ಸಣ್ಣ ಮೊತ್ತವಲ್ಲ. ಇದು ಭಾರಿ ಮೊತ್ತವಾಗಿದ್ದು ಬಜೆಟ್‌ ಮೇಲೆ ಹೆಚ್ಚಿನ ಹೊರೆಯಾಗಿದೆ. ರಾಜ್ಯದ ಮೇಲೆ ಭೀಕರ ಬರ ಬಂದೆರಗಿದೆ. 223 ಕ್ಕೂ ಹೆಚ್ಚು ತಾಲ್ಲೂಕುಗಳು ಬರಪೀಡಿತವಾಗಿದೆ. ಇದರ ಜೊತೆಗೆ ಎನ್‌ಡಿಆರ್‍‌ಎಫ್‌ ( ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ) ಮೂಲಕ ಕೇಂದ್ರ ಸರ್ಕಾರ ಅಗತ್ಯ ಪ್ರಮಾಣದಲ್ಲಿ ಪರಿಹಾರ ಬಿಡುಗಡೆ ಮಾಡದಿರುವುದು ಚಿಂತೆಗೆ ಕಾರಣವಾಗಿದೆ. ಹೀಗೆ ಹತ್ತು ಹಲವು ಸಮಸ್ಯೆಗಳ ನಡುವೆ ಸಿದ್ದರಾಮಯ್ಯ ಅವರು  ಈ ಬಜೆಟ್‌ ಮಂಡಿಸಬೇಕಾಗಿದೆ.

ಮೊದಲ ತ್ರೈಮಾಸಿಕದ ಹಣಕಾಸು ಪರಿಸ್ಥಿತಿ;18,952 ಕೋಟಿ ರು. ರಾಜಸ್ವ ಕೊರತೆ, 7,270.69 ಕೋಟಿ ರು. ವ್ಯತ್ಯಾಸ

ಗ್ಯಾರಂಟಿಗಳನ್ನು ಈಗಾಗಲೆ ಘೋಷಿಸಿ ಅನುಷ್ಠಾನಕ್ಕೆ ತಂದಿರುವುದರಿಂದ ಹೊಸದಾಗಿ ಯಾವುದೇ ಜನಪ್ರಿಯ  ಯೋಜನೆಗಳನ್ನು ಪ್ರಕಟಿಸುವ ಸಾಧ್ಯತೆಗಳಿರುವುದಿಲ್ಲ. ಆದರೂ ಅತ್ಯಂತ ಪ್ರಮುಖವಾಗಿ ನೀರಾವರಿ, ವಿದ್ಯುತ್‌, ಮೂಲಸೌಕರ್ಯದಂತಹ ಪ್ರಮುಖ ಕ್ಷೇತ್ರಗಳನ್ನು ಕಡೆಗಣಿಸುವಂತಿಲ್ಲ. ಇದರಿಂದ ಒಂದು ಕಡೆ ಸಾಲ ಮತ್ತೊಂದು ಕಡೆ ಬಂಡವಾಳ ಕೊರತೆ ಮುಖ್ಯಮಂತ್ರಿಗಳ ನಿದ್ದೆಗೆಡಿಸಿದೆ. ಒಂದು ಕಡೆ ಬೃಹದಾಕಾರವಾಗಿ ಬೆಳೆಯುತ್ತಿರುವ ಸಾಲ, ಮತ್ತೊಂದು ಕಡೆ ಕೇಂದ್ರ ಸರ್ಕಾರದ ಅಸಹಕಾರ ರಾಜ್ಯದ ಬಜೆಟ್‌ಗೆ ಭಾರಿ ಹೊಡೆತ ನೀಡಿದೆ.

ಸಂಪನ್ಮೂಲ ಸಂಗ್ರಹಣೆ ಸರಳವಲ್ಲ, ಮಿತಿಮೀರಿದೆ ಸಾಲ, ಎದೆ ನಡುಗಿಸಿದೆ ಕೊರತೆ ಮೊತ್ತ, ಖಜಾನೆಯಲ್ಲೆಲ್ಲಿದೆ ಹಣ?

ಈಗಿನ ಪರಿಸ್ಥಿತಿಯಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಮುಂದಿರುವ ದಾರಿ ಎಂದರೆ ಆರ್ಥಿಕ ವ್ಯವಸ್ಥೆಯನ್ನು ಆಮೂಲಾಗ್ರವಾಗಿ ಬದಲಾಯಿಸುವುದು. ಇದರ ಮೂಲಕ ಸಂಪನ್ಮೂಲವನ್ನು ಕ್ರೋಢೀಕರಿಸುವುದು. ರಾಜ್ಯದಲ್ಲಿ ಹಣಕಾಸು ಶಿಸ್ತು ಹದಗೆಟ್ಟಿದೆ. ಅಂಕಿಅಂಶಗಳೇ ಇದನ್ನು ನಿರೂಪಿಸುತ್ತಿವೆ.

 

2017-18ರಲ್ಲಿ  ರಾಜಸ್ವ  ಕೊರತೆ ರೂ.4,518 ಕೋಟಿ  ಇದ್ದದ್ದು 2020-21ಕ್ಕೆ ರೂ.19,338 ಕೋಟಿಗೆ ಹೆಚ್ಚಿದೆ. ಅದೇ ರೀತಿ 2021-22ರಲ್ಲಿ 23,666 ಕೋಟಿ ಇದ್ದದು 2023-24ಕ್ಕೆ  12,522 ಕೋಟಿ ರು.ಗೆ ಇಳಿದಿದೆ.  ಇದೇ ರೀತಿ ಪ್ರತಿ ವರ್ಷ ಮಾಡುವ ಸಾಲದ ಪ್ರಮಾಣವೂ ನಿರಂತರವಾಗಿ ಏರಿಕೆ ಕಂಡಿದೆ.

 

ಹೀಗಾಗಿ ಸಿದ್ದರಾಮಯ್ಯನವರ ಮುಂದಿನ ಹಾದಿ ಸುಲಭವಾಗಿಲ್ಲ. ರಾಜ್ಯದ ವಿತ್ತೀಯ ಕೊರತೆಯ ಹಣಕಾಸು ಜವಾಬ್ದಾರಿ ಮತ್ತು ಬಜೆಟ್‌ ನಿರ್ವಹಣೆ (ಎಫ್‌ಆರ್‍‌ಬಿಎಂ) ವ್ಯಾಪ್ತಿಯಲ್ಲೇ ಇದೆ. ಆದರೆ ಕೊರತೆಯ ಮೊತ್ತ ಸಿದ್ದರಾಮಯ್ಯ ಅವರು ನಡುಗುವಂತೆ ಮಾಡಿದೆ.

 

ಹೀಗಾಗಿ ಸಿದ್ದರಾಮಯ್ಯ ಅವರು ಮಂಡಿಸಲು 2024-25ನೇ ಸಾಲಿನ ಬಜೆಟ್‌ ಸವಾಲಿನದಾಗಿದೆ. ಅತಿ ಮುಖ್ಯವಾಗಿ ಯಾವುದೇ ಹೊಸ ಯೋಜನೆಗಳನ್ನು ಪ್ರಕಟಣೆ ಮಾಡುವುದಿಲ್ಲ ಮತ್ತು ಬಜೆಟ್‌ ತುಂಬಲು ಹೊಸ ತೆರಿಗೆಗಳನ್ನು ಹಾಕುವ ನಿರೀಕ್ಷೆಗಳಿವೆ ಎನ್ನಲಾಗಿದೆ.

Hot this week

ಖರ್ಗೆ ಕುಟುಂಬ ಸದಸ್ಯರ ಸಿದ್ದಾರ್ಥ ವಿಹಾರ ಟ್ರಸ್ಟ್‌; ಪ್ರಕರಣ ಮುಂದುವರಿಕೆ, ಲೋಕಾಯುಕ್ತ ಎಸ್‌ಪಿ ಗೆ ನೋಟೀಸ್‌ ನೀಡಿದ ನ್ಯಾಯಾಲಯ

ಬೆಂಗಳೂರು;  ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ,...

ಪಿಎಸ್‌ಐ ನೇಮಕಾತಿ ಹಗರಣ; ಅಮೃತ್‌ ಪೌಲ್‌ ವಿರುದ್ಧ ಇಲಾಖೆ ವಿಚಾರಣೆ, ವಿಚಾರಣಾಧಿಕಾರಿಗೆ 15 ಲಕ್ಷ ರು ಸಂಭಾವನೆ

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾಗಿರುವ ಪಿಎಸ್‌ಐಗಳ ನೇಮಕಾತಿಯಲ್ಲಿನ...

ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆ; ದೇಸೀಯ ಹೆಸರು ಮರು ನಾಮಕರಣಕ್ಕೆ ಎನ್‌ಒಸಿ ಪಡೆಯಲು ಪ್ರಸ್ತಾವ, ಇಂದು ನಿರ್ಧಾರ!

ಬೆಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯ ಹೆಸರು ಬದಲಾವಣೆ ಮಾಡಲು ರಾಜ್ಯ ಕಾಂಗ್ರೆಸ್‌...
Please Scan to make Your Contribution

Topics

ಪಿಎಸ್‌ಐ ನೇಮಕಾತಿ ಹಗರಣ; ಅಮೃತ್‌ ಪೌಲ್‌ ವಿರುದ್ಧ ಇಲಾಖೆ ವಿಚಾರಣೆ, ವಿಚಾರಣಾಧಿಕಾರಿಗೆ 15 ಲಕ್ಷ ರು ಸಂಭಾವನೆ

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾಗಿರುವ ಪಿಎಸ್‌ಐಗಳ ನೇಮಕಾತಿಯಲ್ಲಿನ...

ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆ; ದೇಸೀಯ ಹೆಸರು ಮರು ನಾಮಕರಣಕ್ಕೆ ಎನ್‌ಒಸಿ ಪಡೆಯಲು ಪ್ರಸ್ತಾವ, ಇಂದು ನಿರ್ಧಾರ!

ಬೆಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯ ಹೆಸರು ಬದಲಾವಣೆ ಮಾಡಲು ರಾಜ್ಯ ಕಾಂಗ್ರೆಸ್‌...

ಅನಂತ್‌ ನಾಗ್‌ ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಗೌರವ; 8 ವರ್ಷದ ಹಿಂದಿನ ವಿಸ್ತೃತ ಸಂದರ್ಶನ

ಬೆಂಗಳೂರು;  ಕನ್ನಡ ಚಿತ್ರರಂಗದ  ಹಿರಿಯ ನಟ ಅನಂತ್ ನಾಗ್ ಅವರಿಗೆ 2024ರ...

ಭೂಗತ ಸುರಂಗ ಮಾರ್ಗ; ರಿಯಾಯಿತಿ ಅವಧಿಯಲ್ಲೇ ಗರಿಷ್ಠ ಟೋಲ್‌ ಸಂಗ್ರಹಣೆ, ದರ ಪರಿಷ್ಕರಣೆಯ ಹಿಂದಿನ ರಹಸ್ಯ ಬಯಲು

ಬೆಂಗಳೂರು; ಭೂಗತ ಸುರಂಗ ಮಾರ್ಗದಲ್ಲಿ ರಿಯಾಯಿತಿ ಅವಧಿಯಲ್ಲಿ ಗರಿಷ್ಠ ಟೋಲ್‌ ಸಂಗ್ರಹಣೆ...

Related Articles

Popular Categories

error: Content is protected !!