Saturday | April 11, 2026 |

ಮುಕ್ತ ಮಾರುಕಟ್ಟೆಯಿಂದ 58,000 ಕೋಟಿ ರು. ಸಾಲ ಎತ್ತುವಳಿ; ಆರ್‍‌ಬಿಐ ಕದ ತಟ್ಟಿದ ಸರ್ಕಾರ

ಬೆಂಗಳೂರು; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಕಾಂಗ್ರೆಸ್‌ ಸರ್ಕಾರವು ಎಂಟು ತಿಂಗಳಲ್ಲಿ ಸಾರ್ವಜನಿಕ ಸಾಲವಾಗಿ   32,289 ಕೋಟಿ ರು.ಗಳನ್ನು  ಎತ್ತಿತ್ತು. ಇದರ  ಬೆನ್ನಲ್ಲೇ ಇದೀಗ ಭಾರತೀಯ ರಿಸರ್ವ್‌ ಬ್ಯಾಂಕ್‌ ಮೂಲಕ ಮುಕ್ತ ಮಾರುಕಟ್ಟೆಯಿಂದ ಕೊನೆಯ  ತ್ರೈಮಾಸಿಕದಲ್ಲಿ  58,000 ಕೋಟಿ ರು‌.  ಎತ್ತುವಳಿ ಮಾಡಲು ಹೊರಟಿದೆ.

 

ಕರ್ನಾಟಕ ಸರ್ಕಾರ ಸೇರಿದಂತೆ ಇತರೆ ರಾಜ್ಯಗಳು ಸಹ 2024 ಜನವರಿ ಮತ್ತು ಮಾರ್ಚ್‌ ಅಂತ್ಯಕ್ಕೆ ಒಟ್ಟಾರೆ 4,13,452 ಕೋಟಿ ರು.ಗಳ ಸಾಲವನ್ನು ಎತ್ತುವಳಿ ಮಾಡಲಾಗುವುದು ಎಂದು ಆರ್‍‌ಬಿಐಗೆ ತಿಳಿಸಿವೆ. ಈ ಪೈಕಿ ಕರ್ನಾಟಕ ಸರ್ಕಾರವು ಅಭಿವೃದ್ಧಿ ಯೋಜನೆಗಳಿಗಾಗಿ ಮುಕ್ತ ಮಾರುಕಟ್ಟೆಯಿಂದ 58,000 ಕೋಟಿ ರು ಸಾಲ ಪಡೆಯುವುದಾಗಿ  ಆರ್‍‌ಬಿಐಗೆ ತಿಳಿಸಿದೆ. ದಕ್ಷಿಣದ ನೆರೆಯ ರಾಜ್ಯಗಳಿಗಿಂತಲೂ ಕರ್ನಾಟಕವು ಅತೀ ಹೆಚ್ಚಿನ ಮೊತ್ತದಲ್ಲಿ ಮುಕ್ತ ಮಾರುಕಟ್ಟೆಯಿಂದ ಸಾಲ ಪಡೆಯಲು ಮುಂದಾಗಿರುವುದು ಗೊತ್ತಾಗಿದೆ.

 

ಈ ಸಂಬಂಧ ಭಾರತೀಯ ರಿಸರ್ವ್‌ ಬ್ಯಾಂಕ್‌ 2023ರ ಡಿಸೆಂಬರ್‍‌ 29ರಂದೇ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದೆ. ಇದರ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಗ್ಯಾರಂಟಿ ಯೋಜನೆಗಳಿಗೆ ಸಾಲದ ಮೂಲಕ ಅನುದಾನ ಒದಗಿಸಲಾಗುವುದು ಎಂದು 2023ರ ಜುಲೈನಲ್ಲಿ ನಡೆದಿದ್ದ ವಿಧಾನಮಂಡಲದ ಅಧಿವೇಶನದಲ್ಲಿ ವಿಧಾನ ಪರಿಷತ್‌ ಸದಸ್ಯ ಡಿ ಎಸ್‌ ಅರುಣ್‌ ಅವರು ಕೇಳಿದ್ದ ಪ್ರಶ್ನೆಗೆ ಸಿದ್ದರಾಮಯ್ಯ ಅವರು ಉತ್ತರಿಸಿದ್ದರು. ಇದರ ಬೆನ್ನಲ್ಲೇ  ಆರ್ಥಿಕ ವರ್ಷ ಪೂರ್ಣಗೊಳ್ಳುವ ಮುನ್ನವೇ ಮಾರುಕಟ್ಟೆ ಸಾಲದ ರೂಪದಲ್ಲಿ ಆರ್‍‌ಬಿಐನಿಂದ 58,000 ಕೋಟಿ ರು. ಸಾಲ ಎತ್ತಲು ಮುಂದಾಗಿರುವುದು ಚರ್ಚೆಗೆ ಗ್ರಾಸವಾಗಿದೆ.

 

2023-24 ಸಾಲಿನ ಆರ್ಥಿಕ ವರ್ಷದಲ್ಲಿ ಕೇಂದ್ರ ಸರ್ಕಾರದಿಂದ 6,254 ಕೋಟಿ ರೂ. ಸಾಲ ಎತ್ತುವಳಿ ಮಾಡಲು ಮುಂದಾಗಿದೆ. ಅಲ್ಲದೇ ಮುಕ್ತ ಮಾರುಕಟ್ಟೆಯಲ್ಲಿ 78,363 ಕೋಟಿ ರು., ಸಾಲ ಎತ್ತುವಳಿ ಮಾಡಲು ಅಂದಾಜಿಸಿದೆ. ಉಳಿದಂತೆ ಎಲ್ಐಸಿ, ಎನ್ ಎಸ್ಎಸ್ಎಫ್, ಎನ್ ಸಿಡಿಸಿಯಿಂದ 1,201 ಕೋಟಿ ರೂ. ಸಾಲವಾಗಿ ಒಟ್ಟು ಅಂದಾಜು 85,818 ಕೋಟಿ ರೂ. ಸಾಲ ಮಾಡಲು ಅಂದಾಜಿಸಿತ್ತು ಎಂದು ತಿಳಿದು ಬಂದಿದೆ.

 

2024ರ ಜನವರಿ 2ರಿಂದ ಜನವರಿ 30ರ ಅಂತ್ಯಕ್ಕೆ ಒಟ್ಟಾರೆ ಅಂತ್ಯಕ್ಕೆ 26,000 ಕೋಟಿ ರು. ಸಾಲ ಎತ್ತಲು ಆರ್‍‌ಬಿಐನ ಕದ ತಟ್ಟಿತ್ತು. ಜನವರಿ 2ರಂದು 6,000 ಕೋಟಿ ರು., ಜನವರಿ 9ರಂದು 7,000 ಕೋಟಿ ರು., ಜನವರಿ 16ರಂದು 5,000 ಕೋಟಿ ರು., ಜನವರಿ 23ರಂದು 5,000 ಕೋಟಿ ರು, ಜನವರಿ 30ರಂದು 3,000 ಕೋಟಿ ರು. ಸಾಲದ ಮೊತ್ತವನ್ನು ನಮೂದಿಸಿರುವುದು ಪತ್ರಿಕೆ ಹೇಳಿಕೆಯಿದ ತಿಳಿದು ಬಂದಿದೆ.

 

ಫೆಬ್ರುವರಿ 6ರಂದು 5,000 ಕೋಟಿ ರು., ಫೆ.13ರಂದು 5,000 ಕೋಟಿ ರು., ಫೆ.20ರಂದು 5,000 ಕೋಟಿ ರು., ಫೆ.27ರಂದು 5,000 ಕೋಟಿ ರು.,

 

ಮಾರ್ಚ್‌ 5ರಂದು 5,000 ಕೋಟಿ ರು., ಮಾರ್ಚ್‌ 12 ರಂದು 4,000 ಕೋಟಿ ರು., ಮಾರ್ಚ್‌ 19ರಂದು 3,000 ಕೋಟಿ ರು., ಸಾಲ ಎತ್ತಲು ತಿಳಿಸಿದೆ.

 

ವಿಶೇಷವೆಂದರೇ ರಾಜ್ಯ ಕಾಂಗ್ರೆಸ್‌ ಸರ್ಕಾರವು ಅಕ್ಟೋಬರ್ 17ರಿಂದಲೇ ಆರ್‍‌ಬಿಐ ಮೂಲಕ ರಾಜ್ಯ ಅಭಿವೃದ್ಧಿ ಸಾಲದ ರೂಪದಲ್ಲಿ ಮುಕ್ತ ಮಾರುಕಟ್ಟೆಯಿಂದ ಸಾಲದ ಎತ್ತುವಳಿ ಆರಂಭಿಸಿತ್ತು.

7 ತಿಂಗಳಲ್ಲಿ 7,399.60 ಕೋಟಿ ರು ಸಾಲ; ಬಿಜೆಪಿ ಅವಧಿಗೆ ಹೋಲಿಸಿದರೆ 2,576.82 ಕೋಟಿ ರು. ಅಧಿಕ

ರಾಜ್ಯ ಸರ್ಕಾರವು ಅಕ್ಟೋಬರ್‌ 17ರಿಂದಲೇ  ಆರ್‍‌ಬಿಐ ಮೂಲಕ ಬಹಿರಂಗ ಮಾರುಕಟ್ಟೆಯಲ್ಲಿ  1,000 ಕೋಟಿ ರೂ. ಸಾಲ ಎತ್ತುವಳಿ  ಮಾಡಿದೆ. ಅ.23ರಂದು 2,000 ಕೋಟಿ ರೂ., ಅ.31ರಂದು 2,000 ಕೋಟಿ ರೂ., ನ.1ರಂದು 3,000 ಕೋಟಿ ರೂ., ನ.21ರಂದು 1,000 ಕೋಟಿ ರೂ., ಡಿ.5ರಂದು 4,000 ಕೋಟಿ ರೂ., ಡಿ.12ರಂದು 4,000 ಕೋಟಿ ರೂ. ಸಾಲ ಎತ್ತುವಳಿ ಮಾಡಿದೆ. ಡಿ.19ರಂದು 4,000 ಕೋಟಿ ರೂ. ಡಿ.26ರ‌ಂದು 3,000 ಕೋಟಿ ರೂ. ಸೇರಿದಂತೆ 23,000 ಕೋಟಿ ರು. ಸಾಲ ಮಾಡಿರುವುದು ಗೊತ್ತಾಗಿದೆ.

ನಿರಂತರ ಏರಿಕೆ; ಎಂಟೇ ತಿಂಗಳಲ್ಲಿ 32,289.99 ಕೋಟಿ ರು. ಸಾರ್ವಜನಿಕ ಸಾಲ

ಇದೇ ತ್ರೈಮಾಸಿಕದಲ್ಲಿ ಆಂಧ್ರಪ್ರದೇಶ 16,000 ಕೋಟಿ ರು. ಸಾಲ ಎತ್ತುವಳಿ ಮಾಡಿದೆ.ಕೇರಳ ಸರ್ಕಾರವು 7,600 ಕೋಟಿ ರು., ತೆಲಂಗಾಣವು 13,000 ಕೋಟಿ ರು., ತಮಿಳುನಾಡು 37,000 ಕೋಟಿ ರು., ಸಾಲ ಮಾಡಲಿದೆ.

Hot this week

ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ; ಅಧಿಕಾರಿಗಳ ವಿರುದ್ಧ ದಾಖಲಾಗದ ಎಫ್‌ಐಆರ್, ವರದಿ ಸಲ್ಲಿಸಲು ಸೂಚನೆ

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ತವರು ಕ್ಷೇತ್ರದಲ್ಲಿ...

13 ಪರ್ಸೆಂಟ್ ಕಮಿಷನ್‌ಗೆ ಬೇಡಿಕೆ; ಗುತ್ತಿಗೆದಾರರ ಸಂಘದಿಂದ ಮತ್ತೊಂದು ಪತ್ರ, ಕೋರ್ಟ್‌ ಕದ ತಟ್ಟಿದ ಗುತ್ತಿಗೆದಾರರು

ಬೆಂಗಳೂರು;  ಮಹಾತ್ಮಗಾಂಂಧಿ ನಗರ ವಿಕಾಸ ಯೋಜನೆ -1 ರ ಅಡಿಯಲ್ಲಿ ಕಾಮಗಾರಿ...

ಬಳಕೆಯಾಗದ ಅನುದಾನ; ಸರ್ಕಾರದ ಬೊಕ್ಕಸಕ್ಕೆ ಸಂದಾಯವಾಗಿಲ್ಲ 10,546.42 ಕೋಟಿ, ಸಿಎಜಿ ಆಕ್ಷೇಪಣೆ

ಬೆಂಗಳೂರು; ಕೃಷಿ ಮತ್ತು ತೋಟಗಾರಿಕೆ ಇಲಾಖೆ ಸೇರಿದಂತೆ 2024-25ನೇ ಸಾಲಿನಲ್ಲಿ   ಒಟ್ಟು...

ತರಕಾರಿ ಬೀಜಗಳ ಕಿಟ್ ವಿತರಣೆ; ದಾಸ್ತಾನು ಇಲ್ಲದ ಏಜೆನ್ಸಿಗೆ 4 ಜಿ ವಿನಾಯಿತಿ, ಬಹುಕೋಟಿ ಅಕ್ರಮ, ಭ್ರಷ್ಟಾಚಾರ ಸುಳಿಯಲ್ಲಿ ಸರ್ಕಾರ?

ಬೆಂಗಳೂರು; 2023-24 ಮತ್ತು 2025-26ನೇ ಸಾಲಿನವರೆಗೆ  ತೋಟಗಾರಿಕೆ ಇಲಾಖೆಯು ಜಾರಿಗೊಳಿಸಿದ್ದ  ...

Topics

ಬಳಕೆಯಾಗದ ಅನುದಾನ; ಸರ್ಕಾರದ ಬೊಕ್ಕಸಕ್ಕೆ ಸಂದಾಯವಾಗಿಲ್ಲ 10,546.42 ಕೋಟಿ, ಸಿಎಜಿ ಆಕ್ಷೇಪಣೆ

ಬೆಂಗಳೂರು; ಕೃಷಿ ಮತ್ತು ತೋಟಗಾರಿಕೆ ಇಲಾಖೆ ಸೇರಿದಂತೆ 2024-25ನೇ ಸಾಲಿನಲ್ಲಿ   ಒಟ್ಟು...

13,646.51 ಕೋಟಿ ಹೆಚ್ಚುವರಿ ವೆಚ್ಚ; ಗೃಹ ಲಕ್ಷ್ಮಿಯದ್ದೇ ಸಿಂಹಪಾಲು, ಹೆಚ್ಚುವರಿ ಖರ್ಚಿಗೆ ಕಾರಣಗಳೇ ಇಲ್ಲ, ಸಿಎಜಿ ಆಕ್ಷೇಪ

ಬೆಂಗಳೂರು;  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ದಿ ಇಲಾಖೆಯು 2024-25ನೇ ಸಾಲಿನಲ್ಲಿ ...

2,298 ಕೋಟಿ ರು ಮೊತ್ತದ ಬಿಲ್‌ ಬಾಕಿ; 276 ಕಾಮಗಾರಿ ಅಪೂರ್ಣ, ಬೊಕ್ಕಸ ಬರಿದಾಯಿತೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು ಕೈಗೆತ್ತಿಕೊಂಡಿದ್ದ  ಕಾಮಗಾರಿಗಳು ನಿಗದಿತ ಅವಧಿಯಲ್ಲಿ...

ಪುಸ್ತಕಗಳ ಖರೀದಿಯಲ್ಲಿ ವಂಚನೆ, ಭ್ರಷ್ಟಾಚಾರ ಆರೋಪ;ಎಚ್ ಟಿ ಪೋತೆ ಅವರ ವಿರುದ್ಧ ಕ್ರಮಕ್ಕೆ ಮೀನಮೇಷ

ಬೆಂಗಳೂರು;  ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ...

Related Articles

Popular Categories

error: Content is protected !!