Tuesday | August 25, 2026 |

ಬರಪರಿಹಾರ; ಜಂಟಿ ಖಾತೆ ತೆರೆಯಲು ಕೇಂದ್ರದಿಂದ ನಿರ್ದೇಶನವೂ ಇಲ್ಲ, ಅನುದಾನವೂ ಇಲ್ಲ

ಬೆಂಗಳೂರು; ಬರ ಪರಿಹಾರದ ಮೊತ್ತವನ್ನು ಸ್ವೀಕರಿಸಲು ಕೇಂದ್ರ ಮತ್ತು ರಾಜ್ಯ ಜಂಟಿ ಖಾತೆ ತೆರೆಯುವ ಬಗ್ಗೆ ಇದುವರೆಗೂ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಯಾವುದೇ ನಿರ್ದೇಶನವಾಗಲೀ, ಪ್ರಸ್ತಾವವಾಗಲೀ ಬಂದಿಲ್ಲ.

 

ಅಲ್ಲದೇ ಕೇಂದ್ರ ಸರ್ಕಾರದ ಎಸ್‌ಡಿಆರ್‍‌ಎಫ್‌ ಮತ್ತು ಎನ್‌ಡಿಆರ್‍‌ಎಫ್‌ ಮಾರ್ಗಸೂಚಿ ಅನುಸಾರ ರಾಜ್ಯದ ಬರ ನಿರ್ವಹಣೆಗಾಗಿ 18,171.44 ಕೋಟಿ ರು ಆರ್ಥಿಕ ನೆರವು ಕೋರಿ ರಾಜ್ಯ ಸರ್ಕಾರವು ಸಲ್ಲಿಸಿದ್ದ ಮೆಮೊರಾಂಡಮ್‌ಗೆ ಕೇಂದ್ರ ಸರ್ಕಾರವು ಬಿಡಿಗಾಸನ್ನೂ ನೀಡಿಲ್ಲ!

 

ಬರ ಪರಿಹಾರದ ನೆರವು ಬೇಕಾದರೆ ರಾಜ್ಯ-ಕೇಂದ್ರ ಸರ್ಕಾರದ ಹೆಸರಿನಲ್ಲಿ ಜಂಟಿಯಾಗಿ ಬ್ಯಾಂಕ್‌ನಲ್ಲಿ ಖಾತೆ ತೆರೆಯಬೇಕು ಎಂದು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ತಿಂಗಳ ಹಿಂದೆಯಷ್ಟೇ ಹೇಳಿಕೆ ನೀಡಿದ್ದರು.

 

ಆದರೆ ಇದುವರೆಗೂ ಇಂತಹ ಯಾವುದೇ ನಿರ್ದೇಶನವು ರಾಜ್ಯ ಸರ್ಕಾರಕ್ಕೆ ಬಂದಿಲ್ಲ ಎಂದು ಕಂದಾಯ ಇಲಾಖೆಯು ಉತ್ತರವೊಂದನ್ನು ಸಿದ್ಧಪಡಿಸಿದೆ ಎಂದು ಗೊತ್ತಾಗಿದೆ.

 

ಜಂಟಿ ಖಾತೆ ತೆರೆಯುವ ಸಂಬಂಧ ವಿಧಾನಪರಿಷತ್‌ ಸದಸ್ಯ ಡಾ ತಳವಾರ ಸಾಬಣ್ಣ ಮತ್ತು ಡಿ ಎಸ್‌ ಅರುಣ್‌ ಅವರು ವಿಧಾನಪರಿಷತ್‌ನಲ್ಲಿ ಚುಕ್ಕೆ ಗುರುತಿಲ್ಲದ ಪ್ರಶ್ನೆ ಕೇಳಿದ್ದಾರೆ. ಈ ಪ್ರಶ್ನೆಗೆ 2024ರ ಫೆ.14ರಂದು ಸಚಿವ ಕೃಷ್ಣ ಬೈರೇಗೌಡ ಅವರು ಬರ ಪರಿಹಾರ ಮೊತ್ತವನ್ನು ಸ್ವೀಕರಿಸಲು ಜಂಟಿ ಖಾತೆ ತೆರೆಯುವ ಬಗ್ಗೆ ಕೇಂದ್ರದಿಂದ ಯಾವುದೇ ನಿರ್ದೇಶನ ಬಂದಿಲ್ಲ ಎಂದು ಉತ್ತರಿಸಲಿದ್ದಾರೆ ಎಂದು ತಿಳಿದು ಬಂದಿದೆ.

 

ಡಿ ಎಸ್‌ ಅರುಣ್‌ ಕೇಳಿರುವ ಪ್ರಶ್ನೆ

 

ಕೇಂದ್ರ ಸರ್ಕಾರ ನೀಡಿರುವ ಬರಪರಿಹಾರ ಮೊತ್ತವನ್ನು ಕೇಂದ್ರ ಮತ್ತು ರಾಜ್ಯ ಜಂಟಿ ಖಾತೆ ತೆರೆಯಬೇಕೆನ್ನುವ ಕೇಂದ್ರ ಸರ್ಕಾರದ ಪ್ರಸ್ತಾವದ ಬಗ್ಗೆ ಸರ್ಕಾರ ಕೈಗೊಂಡಿರುವ ಕ್ರಮಗಳೇನು?, ಜಂಟಿ ಖಾತೆಯನ್ನು ತೆರೆಯಲು ಸರ್ಕಾರ ಆಸಕ್ತಿ ವಹಿಸದಿರಲು ಕಾರಣಗಳೇನು, ಹೀಗಿದ್ದಾಗ್ಯೂ ಪದೇ ಪದೇ ಕೇಂದ್ರ ಸರ್ಕಾರದ ಮೇಲೆ ಒತ್ತಡವೇರುವುದು ಸರಿಯಾದ ಕ್ರಮವೇ ಎಂದು ಪ್ರಶ್ನೆ ಕೇಳಿರುವುದು ಗೊತ್ತಾಗಿದೆ.

 

ಇದಕ್ಕೆ ‘ ಬರಪರಿಹಾರ ಮೊತ್ತವನ್ನು ಸ್ವೀಕರಿಸಲು ಕೇಂದ್ರ ಮತ್ತು ರಾಜ್ಯ ಜಂಟಿ ಖಾತೆ ತೆರೆಯಲು ಕೇಂದ್ರ ಸರ್ಕಾರದಿಂದ ಯಾವುದೇ ನಿರ್ದೇಶನ ರಾಜ್ಯ ಸರ್ಕಾರಕ್ಕೆ ಬಂದಿಲ್ಲ,’ ಎಂದು ಸಚಿವ ಕೃಷ್ಣ ಬೈರೇಗೌಡ ಅವರು (ಸಂಖ್ಯೆ; ಕಂಇ ಟಿಎನ್‌ಆರ್‍‌ 2023) ಉತ್ತರಿಸಲಿದ್ದಾರೆ.

 

ಜಂಟಿ ಖಾತೆ ತೆರೆದ ತಕ್ಷಣವೇ ಕೇಂದ್ರದಿಂದ ಹಣ ಬಿಡುಗಡೆ ಮಾಡಲಾಗುವುದು ಎಂದು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ತುಮಕೂರಿನಲ್ಲಿ 2024ರ ಜನವರಿ 24ರಂದು ಹೇಳಿಕೆ ನೀಡಿದ್ದರು.

 

‘ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಜಾರಿಯಾಗುತ್ತಿರುವ ಯಾವುದೇ ಯೋಜನೆಗಳಲ್ಲಿ ಅನುದಾನ ಸಿಗಬೇಕಾದರೆ ಇನ್ನು ಮುಂದೆ ಜಂಟಿ ಖಾತೆ ತೆರೆಯುವುದು ಕಡ್ಡಾಯ. ಈ ಬಗ್ಗೆ ನೀತಿ ಆಯೋಗ ಸ್ಪಷ್ಟವಾಗಿ ಸೂಚನೆ ನೀಡಿದೆ. ಕೆಂದ್ರ ಪುರಸ್ಕೃತ ಯೋಜನೆಗಳಿಗೆ ಹಣ ಬಿಡುಗಡೆ ಮಾಡಿದರೂ ಸಾಕಷ್ಟು ಸಂದರ್ಭಗಳಲ್ಲಿ ರಾಜ್ಯ ಸರ್ಕಾರವು ಹಣ ನೀಡುವುದಿಲ್ಲ. ಕೇಂದ್ರದ ಹಣ ವೆಚ್ಚವಾಗಿದ್ದರೂ ಹಣ ಕೊಡದೇ ರಾಜ್ಯ ಸತಾಯಿಸುತ್ತದೆ. ಇದರಿಂದ ಯೋಜನೆ ಜಾರಿ ಮಾಡುವುದು ಕಷ್ಟಕರವಾಗುತ್ತದೆ. ಹಾಗಾಗಿ ಜಂಟಿ ಖಾತೆ ಕಡ್ಡಾಯ ಮಾಡಲಾಗಿದೆ,’ ಎಂದು ಸ್ಪಷ್ಟಪಡಿಸಿದ್ದರು.

 

ಅದೇ ರೀತಿ ರಾಜ್ಯದಲ್ಲಿರುವ ಭೀಕರ ಪರಿಸ್ಥಿತಿ ಅಧ್ಯಯನ ಮಾಡಲು ಕೇಂದ್ರ ಸರ್ಕಾರದ ಅಂತರ ಸಚಿವಾಲಯದ ಕೇಂದ್ರ ತಂಡ (ಐಎಂಸಿಟಿ)ಕ್ಕೆ ಎನ್‌ಡಿಆರ್‍‌ಎಫ್‌ ಮಾರ್ಗಸೂಚಿಯಂತೆ ವಿವಿಧ ಬರ ಪರಿಹಾರ ಕಾರ್ಯಕ್ರಮಗಳಿಗೆ ರಾಜ್ಯ ಸರ್ಕಾರವು ಮೆಮೋರಾಂಡಮ್‌ ಸಲ್ಲಿಸಿತ್ತು. ಕೇಂದ್ರದ ಅಧ್ಯಯನ ತಂಡದ ವರದಿ ಆಧರಿಸಿ ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಕ್ಕೆ ಬಿಡುಗಡೆ ಮಾಡಿರುವ ಆರ್ಥಿಕ ನೆರವು ಎಷ್ಟು ಎಂದು ಪರಿಷತ್‌ ಸದಸ್ಯ ಕೆ ಎ ತಿಪ್ಪೇಸ್ವಾಮಿ ಅವರು ಪ್ರಶ್ನೆ ಕೇಳಿದ್ದಾರೆ.

 

ಇದಕ್ಕೆ ‘ ಕೇಂದ್ರ ಸರ್ಕಾರದ ಎಸ್‌ಡಿಆರ್‍‌ಎಫ್‌, ಎನ್‌ಡಿಆರ್‍‌ಎಫ್‌ ಮಾರ್ಗಸೂಚಿ ಅನುಸಾರ ರಾಜ್ಯದ ಬರ ನಿರ್ವಹಣೆಗಾಗಿ 18,171.44 ಕೋಟಿ ರು. ಆರ್ಥಿಕ ನೆರವು ಕೋರಿ ಮೆಮೋರಾಂಡಮ್‌ ಸಲ್ಲಿಸಲಾಗಿದ್ದು ಕೇಂದ್ರದಿಂದ ಅನುದಾನ ನಿರೀಕ್ಷಿಸಲಾಗಿದೆ,’ ಎಂಬ ಉತ್ತರವನ್ನು ಸಿದ್ಧಪಡಿಸಿರುವುದು ಗೊತ್ತಾಗಿದೆ.

Hot this week

ವಾಲ್ಮೀಕಿ ವಿವಿಯಲ್ಲಿ ಮತ್ತೊಂದು ಲೋಪ; ಹಣ ಪಾವತಿಯಲ್ಲಿ ಸರ್ಕಾರದ ಆದೇಶಗಳ ಉಲ್ಲಂಘನೆ, 51.21 ಕೋಟಿ ಮೊತ್ತದ ವಹಿವಾಟು ಪಾರದರ್ಶಕವಾಗಿವೆಯೇ?

ಬೆಂಗಳೂರು; ರಾಯಚೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು ಹಣ ಪಾವತಿ ಸಂದರ್ಭಗಳಲ್ಲಿ ಸರ್ಕಾರದ...

ಮಹರ್ಷಿ ವಾಲ್ಮೀಕಿ ವಿ.ವಿ.ಯಲ್ಲಿ 38.98 ಕೋಟಿ ರು ಗೆ ಆಕ್ಷೇಪಣೆ; ವಾರ್ಷಿಕ ಲೆಕ್ಕಪತ್ರಗಳಲ್ಲಿ ಬ್ಯಾಂಕ್‌ ಖಾತೆಗಳ ವಿವರ ಒದಗಿಸಿಲ್ಲವೇಕೆ?

ಬೆಂಗಳೂರು;  ರಾಯಚೂರಿನಲ್ಲಿರುವ  ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಟೆಂಡರ್ ಕರೆಯದೇ ನೇರವಾಗಿ ಏಜೆನ್ಸಿ...

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ, ಜನಸೇವಾ ಟ್ರಸ್ಟ್‌ಗೆ 121 ಎಕರೆ ಜಮೀನು ಮಂಜೂರು; ಸದನಕ್ಕೆ ಪಟ್ಟಿ ಒದಗಿಸಿದ ಸರ್ಕಾರ

ಬೆಂಗಳೂರು; ಕಳೆದ 16 ವರ್ಷಗಳಲ್ಲಿ  ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಸಂಘ ಪರಿವಾರದ...

ಸಿಎಂ ಮಾಧ್ಯಮ ಕಾರ್ಯದರ್ಶಿಗಳಿಗೆ ಮಾಸಿಕ 3 ಲಕ್ಷ ರು ವೇತನ; ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು, ಅಧಿಕಾರಿವರ್ಗದಲ್ಲಿ ಚರ್ಚೆ

ಬೆಂಗಳೂರು;  ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಮತ್ತು ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಅನುದಾನ...
Please Scan to make Your Contribution

Topics

ವಾಲ್ಮೀಕಿ ವಿವಿಯಲ್ಲಿ ಮತ್ತೊಂದು ಲೋಪ; ಹಣ ಪಾವತಿಯಲ್ಲಿ ಸರ್ಕಾರದ ಆದೇಶಗಳ ಉಲ್ಲಂಘನೆ, 51.21 ಕೋಟಿ ಮೊತ್ತದ ವಹಿವಾಟು ಪಾರದರ್ಶಕವಾಗಿವೆಯೇ?

ಬೆಂಗಳೂರು; ರಾಯಚೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು ಹಣ ಪಾವತಿ ಸಂದರ್ಭಗಳಲ್ಲಿ ಸರ್ಕಾರದ...

ಮಹರ್ಷಿ ವಾಲ್ಮೀಕಿ ವಿ.ವಿ.ಯಲ್ಲಿ 38.98 ಕೋಟಿ ರು ಗೆ ಆಕ್ಷೇಪಣೆ; ವಾರ್ಷಿಕ ಲೆಕ್ಕಪತ್ರಗಳಲ್ಲಿ ಬ್ಯಾಂಕ್‌ ಖಾತೆಗಳ ವಿವರ ಒದಗಿಸಿಲ್ಲವೇಕೆ?

ಬೆಂಗಳೂರು;  ರಾಯಚೂರಿನಲ್ಲಿರುವ  ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಟೆಂಡರ್ ಕರೆಯದೇ ನೇರವಾಗಿ ಏಜೆನ್ಸಿ...

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ, ಜನಸೇವಾ ಟ್ರಸ್ಟ್‌ಗೆ 121 ಎಕರೆ ಜಮೀನು ಮಂಜೂರು; ಸದನಕ್ಕೆ ಪಟ್ಟಿ ಒದಗಿಸಿದ ಸರ್ಕಾರ

ಬೆಂಗಳೂರು; ಕಳೆದ 16 ವರ್ಷಗಳಲ್ಲಿ  ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಸಂಘ ಪರಿವಾರದ...

ಸಿಎಂ ಮಾಧ್ಯಮ ಕಾರ್ಯದರ್ಶಿಗಳಿಗೆ ಮಾಸಿಕ 3 ಲಕ್ಷ ರು ವೇತನ; ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು, ಅಧಿಕಾರಿವರ್ಗದಲ್ಲಿ ಚರ್ಚೆ

ಬೆಂಗಳೂರು;  ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಮತ್ತು ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಅನುದಾನ...

ನೀಟ್‌ ಪರೀಕ್ಷೆಯಿಂದ ವಿನಾಯಿತಿ; ತಮಿಳುನಾಡು ಮಾದರಿಯಲ್ಲಿ ನಿರ್ಣಯ ಮಂಡಿಸಲು ರಾಜ್ಯ ಸಜ್ಜು, ಕಾನೂನುಬದ್ಧ ವಿನಾಯಿತಿಗೆ ಪ್ರಸ್ತಾವ

ಬೆಂಗಳೂರು; ಕರ್ನಾಟಕ ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶ ವ್ಯವಸ್ಥೆಯು ರಾಜ್ಯದ ಶೈಕ್ಷಣಿಕ...

2 ಕಂಪನಿಗಳಿಂದ 400 ಕೋಟಿ ರು ವಹಿವಾಟು ಆರೋಪ; ಐಜಿಪಿ ಚಂದ್ರಶೇಖರ್ ಪ್ರಕರಣದಲ್ಲಿ ವರದಿ ನೀಡಲು ಸರ್ಕಾರದ ನಿರ್ದೇಶನ

ಬೆಂಗಳೂರು; ಸರ್ಕಾರದ ಪೂರ್ವಾನುಮತಿ ಪಡೆಯದೇ ಹಾಗೂ ಸರ್ಕಾರಕ್ಕೆ ವರದಿಯನ್ನು ಸಲ್ಲಿಸದೇ ಕುಟುಂಬ...

Related Articles

Popular Categories

error: Content is protected !!