Friday | March 27, 2026 |

ದಲಿತ ವಿದ್ಯಾರ್ಥಿಗಳಿಗೆ ‘ವಿಶ್ವಾಸ ಕಿರಣ’ವಿಲ್ಲ!; ಬಜೆಟ್‌ನಲ್ಲಿ ಲ್ಯಾಪ್‌ಟಾಪ್‌ ಯೋಜನೆ ಪ್ರಸ್ತಾವವಿಲ್ಲ

Support THE-FILE

spot_img

ಬೆಂಗಳೂರು; ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ 2024-25ನೇ ಸಾಲಿನಲ್ಲಿ ಉಚಿತವಾಗಿ ಲ್ಯಾಪ್‌ಟಾಪ್‌ ವಿತರಣೆ ಮಾಡುವ ಸಂಬಂಧ ಪದವಿಪೂರ್ವ ಶಿಕ್ಷಣ ಮಂಡಳಿಯ ಮುಂದುವರೆದ  ಯೋಜನೆಯ ಕುರಿತಾಗಿ  ಬಜೆಟ್‌ನಲ್ಲಿ ಪ್ರಸ್ತಾವಿಸಿಲ್ಲ.

 

ವಿಶ್ವಾಸ ಕಿರಣ ಹೆಸರಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್‌ಟಾಪ್‌ ವಿತರಿಸುವ ಸಂಬಂಧ 9 ಕೋಟಿ ರು. ಅಂದಾಜು ವೆಚ್ಚದ ಪ್ರಸ್ತಾವನೆಯನ್ನು  ಪದವಿಪೂರ್ವ ಶಿಕ್ಷಣ ಮಂಡಳಿಯ ಉಪನಿರ್ದೇಶಕರು (ಶೈಕ್ಷಣಿಕ) ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ 2024ರ ಜನವರಿ 16ರಂದೇ ಪ್ರಸ್ತಾವನೆ ಸಲ್ಲಿಸಿದ್ದರು.

 

2024-25ನೇ ಸಾಲಿನ ಆಯವ್ಯಯದಲ್ಲಿ ಈ ಯೋಜನೆಗೆ ಅನುದಾನ ಲಭ್ಯವಾಗಲಿದೆ  ಎಂದು ಮಂಡಳಿಯು ಎದುರು ನೋಡಿತ್ತು. ಆದರೀಗ ಬಜೆಟ್‌ನಲ್ಲಿ ಉಚಿತ ಲ್ಯಾಪ್‌ಟಾಪ್‌ ವಿತರಣೆ ಯೋಜನೆ ಬಗ್ಗೆ ಪ್ರಸ್ತಾವಿಸಿಲ್ಲ.

 

2023-24ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿರುವ  ಪರಿಶಿಷ್ಟ ಜಾತಿ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಪೈಕಿ ಅತಿ ಹೆಚ್ಚು ಅಂಕಗಳನ್ನು ಪಡೆಯುವ ವಿದ್ಯಾರ್ಥಿಗಳಿಗೆ ವಿಶ್ವಾಸ ಕಿರಣ ಹೆಸರಿನಲ್ಲಿ ಲ್ಯಾಪ್‌ಟಾಪ್‌ ವಿತರಣೆ ಯೋಜನೆ ಹಮ್ಮಿಕೊಂಡಿತ್ತು.

 

ಪ.ಜಾತಿಯ ಪ್ರತಿ ವಿಭಾಗದ 5 ವಿದ್ಯಾರ್ಥಿಗಳಿಗೆ 15 ಹಾಗೂ ಕಲಾ, ವಾಣಿಜ್ಯ, ವಿಜ್ಞಾನ ವಿಭಾಗದಲ್ಲಿ ಪರಿಶಿಷ್ಟ ಪಂಗಡದ ಪ್ರತಿ ವಿಭಾಗದ 3 ವಿದ್ಯಾರ್ಥಿಗಳಿಗೆ ಒಟ್ಟು 09 ಲ್ಯಾಪ್‌ಟಾಪ್‌ಗಳನ್ನು ಬಹುಮಾನವಾಗಿ ನೀಡಲಿತ್ತು.  ಇದಕ್ಕಾಗಿ ಪಿಯು  ಮಂಡಳಿಯು ಕ್ರಿಯಾ ಯೋಜನೆ ರೂಪಿಸಿತ್ತು.

 

ಒಟ್ಟು 32 ಶೈಕ್ಷಣಿಕ ಜಿಲ್ಲೆಗಳಲ್ಲಿ 2023-24ನೇ ಸಾಲಿಗೆ   768 ಲ್ಯಾಪ್‌ಟಾಪ್‌ ಖರೀದಿಸಲು ಪ್ರಸ್ತಾವಿಸಿದೆ. ಪ್ರತಿ ಲ್ಯಾಪ್‌ಟಾಪ್‌ಗೆ  60,000 ರು.ನಂತೆ ಎಸ್‌ಸಿಪಿ ಅಡಿಯಲ್ಲಿ 480 ಲ್ಯಾಪ್‌ಟಾಪ್‌ಗಳಿಗೆ 2.88 ಕೋಟಿ ರು., ಟಿಎಸ್‌ಪಿ ಅಡಿಯಲ್ಲಿ 288 ಲ್ಯಾಪ್‌ಟಾಪ್‌ಗಳಿಗೆ 1.72 ಕೋಟಿ ರು. ಒಟ್ಟಾರೆ 4.60 ಕೋಟಿ ರು. ಅನುದಾನ ಕೋರಿತ್ತು.

768 ಲ್ಯಾಪ್‌ಟಾಪ್‌ ಖರೀದಿ; ಪ್ರಸ್ತಾವದಲ್ಲೇ ತಲಾ 60,000 ರು. ನಿಗದಿಗೊಳಿಸಿದ ಪಿಯು ಮಂಡಳಿ

ಅದೇ ರೀತಿ 2024-25ನೇ ಸಾಲಿಗೆ ವಿಶ್ವಾಸ  ಕಿರಣ ಯೋಜನೆಯಡಿಯಲ್ಲಿ  4.06 ಕೋಟಿ ರು, ಲ್ಯಾಪ್‌ಟಾಪ್‌ ಯೋಜನೆಯಡಿಯಲ್ಲಿ 2.88 ಕೋಟಿ ರು., ಸೇರಿ 6.98 ಕೋಟಿ ರು.,  (ಎಸ್‌ಸಿಪಿ), ಟಿಎಸ್‌ಪಿ ಅಡಿಯಲ್ಲಿ ವಿಶ್ವಾಸ ಕಿರಣ ಯೋಜನೆಯಡಿಯಲ್ಲಿ 1.08 ಕೋಟಿ ರು., ಲ್ಯಾಪ್‌ಟಾಪ್‌ ಯೋಜನೆಯಡಿಯಲ್ಲಿ 1.72 ಕೋಟಿ ರು. ಸೇರಿ ಒಟ್ಟಾರೆ 9.76 ಕೋಟಿ ರು. ಅನುದಾನ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು.

 

ಪದವಿಪೂರ್ವ ಶಿಕ್ಷಣ ಮಂಡಳಿಯು ತಲಾ ಲ್ಯಾಪ್‌ಟಾಪ್‌ವೊಂದಕ್ಕೆ 60,000 ರು. ದರ ಎಂದು ನಿಗದಿಪಡಿಸಿರುವುದು ಮಾರುಕಟ್ಟೆಯಲ್ಲಿರುವ ದರಕ್ಕಿಂತಲೂ ದುಪ್ಪಟ್ಟಾಗಿತ್ತು.  ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಗಿರಿಜನ ಉಪಯೋಜನೆ ಕಾರ್ಯಕ್ರಮದಡಿಯಲ್ಲಿ ಪಿಯುಸಿ 2024ನೇ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆಯುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಬುಡಕಟ್ಟು ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ನೀಡುವ ಯೋಜನೆಯ ಭಾಗವಾಗಿ ಅನುದಾನ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಿತ್ತು.

 

ಘೋಷಣೆಯಾಗಿರುವುದೇನು?

 

ರಾಜ್ಯದ ಸರ್ಕಾರಿ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಲ್ಲಿ ಶೌಚಾಲಯ ಸೇರಿದಂತೆ ಇನ್ನಿತರೆ  ಮೂಲಭೂತ ಸೌಕರ್ಯಗಳನ್ನು ಒದಗಿಸಲು 850 ಕೋಟಿ ರು. ವೆಚ್ಚದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಿದೆ. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಸಹಯೋಗದಲ್ಲಿ ಹೊಸದಾಗಿ ಸರ್ಕಾರಿ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳನ್ನು ಆರಂಭಿಸಲಿದೆ. ರಾಜ್ಯದಲ್ಲಿರುವ 74 ಆದರ್ಶ ವಿದ್ಯಾಲಯಗಳನ್ನು ವಾಣಿಜ್ಯ ಮತ್ತು ವಿಜ್ಞಾನ ವಿಷಯಗಳಲ್ಲಿ ಪದವಿಪೂರ್ವ ಕಾಲೇಜುಗಳನ್ನಾಗಿ ಉನ್ನತೀಕರಿಸಲಾಗುವುದು ಎಂದು ಬಜೆಟ್‌ನಲ್ಲಿ ಘೋಷಿಸಿದ್ದಾರೆ.

 

ವಿದ್ಯಾರ್ಥಿಗಳ ಸಂಖ್ಯಾಬಲ ಹೆಚ್ಚಿರುವ ಆಯ್ದ 100 ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ 10 ಕೋಟಿ ರು ವೆಚ್ಚದಲ್ಲಿ ಗಣಕ ವಿಜ್ಙಾನ ಸಂಯೋಜನೆ ಆರಂಭಿಸಲಿದೆ. ವಿಜ್ಞಾನ ವಿಷಯಗಳಲ್ಲಿ 400ಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ವಿಜ್ಙಾನ ಪ್ರಯೋಗಾಲಯಗಳ್ನು ಉನ್ನತೀಕರಿಸಲು ತಲಾ 10 ಲಕ್ಷ ರು.ನಂತೆ ಅನುದಾನ ಒದಗಿಸಲಿದೆ.

 

ಅದೇ ರೀತಿ ರಾಜ್ಯದ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ವಿಜ್ಙಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ಅಂದಾಜು 20,000 ವಿದ್ಯಾರ್ಥಿಗಳೀಗೆ ನೀಟ್, ಜೆಇಇ, ಸಿಇಟಿ ತರಬೇತಿ ಕಾರ್ಯಕ್ರಮಗಳಿಗಾಗಿ 10 ಕೋಟಿ ರು. ನೀಡಲಾಗುವುದು ಎಂದು ಘೋಷಿಸಿದ್ದಾರೆ. ಹಾಗೆಯೇ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಲ್ಲಿ ಉಚಿತ ವಿದ್ಯುತ್‌ ಮತ್ತು  ನೀರಿನ ಸೌಲಭ್ಯವನ್ನು ಒದಗಿಸಲು 25 ಕೋಟಿ ರು. ವೆಚ್ಚವಾಗಲಿದೆ ಎಂದು ಹೇಳಿದೆ.

Hot this week

ನರೇಗಾ ವಸತಿ ಕಾಮಗಾರಿಗಳಲ್ಲಿ ಮೋಸದ ಪಾವತಿ; ಚೆಕ್ ಡ್ಯಾಂ ಕಾಮಗಾರಿಯೇ ಇಲ್ಲ, ಆದರೂ ಹಣ ಪಾವತಿ

ಬೆಂಗಳೂರು; 847 ಸಂಖ್ಯೆ ವಸತಿ  ಕಾಮಗಾರಿಗಳಲ್ಲಿ  ಮೋಸದ ಪಾವತಿಗಳಾಗಿರುವುದನ್ನು ಭಾರತದ ಲೆಕ್ಕ...

42,750 ಕೋಟಿ ದೀರ್ಘಾವಧಿ ಸಾಲ, 4,516 ಕೋಟಿ ಆದಾಯ ಕೊರತೆ; ಎಸ್ಕಾಂಗಳ ಆರ್ಥಿಕ ಸ್ಥಿತಿ ಅನಾವರಣ

ಬೆಂಗಳೂರು; ವಿದ್ಯುತ್ ಸರಬರಾಜು ಕಂಪನಿಗಳು ಇದುವರೆಗೆ ಒಟ್ಟಾರೆ 42,750 ಕೋಟಿಗಳಷ್ಟು ದೀರ್ಘಾವಧಿ...

ಹಿಂದುಳಿದ ವರ್ಗ ವಸತಿ ಶಾಲೆ ಕಟ್ಟಡಗಳು ಶಿಥಿಲ; ಕಟ್ಟಡಗಳ ದುರಸ್ತಿಗೂ ಅನುದಾನವಿಲ್ಲ, ‘ಕೈ’ ಎತ್ತಿದ ಸರ್ಕಾರ

ಬೆಂಗಳೂರು;  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವಸತಿ ಶಾಲೆಗಳು ಶಿಥಿಲಗೊಂಡಿದ್ದರೂ...

ನರೇಗಾ ಕಾಮಗಾರಿಗಳ ಆರಂಭದ ದಿನಾಂಕವೂ ಇಲ್ಲ, ದತ್ತಾಂಶವೂ ಇಲ್ಲ; 1,007.83 ಕೋಟಿ ರು. ವೆಚ್ಚದ ಕಾಮಗಾರಿಗಳು ಅಪೂರ್ಣ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡಿದ್ದ ಕಾಮಗಾರಿಗಳ ಪೈಕಿ ಒಂದು ವ‍ರ್ಷಕ್ಕಿಂತಲೂ ಹೆಚ್ಚು...

ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿಗಳ ಕುಟುಂಬ ಸದಸ್ಯರ ಉದ್ಯಮ, ಹಣಕಾಸಿನ ವ್ಯವಹಾರ; ಸದನಕ್ಕೆ ಒದಗಿಸಬಹುದೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಖಿಲ ಭಾರತ...

Topics

ನರೇಗಾ ವಸತಿ ಕಾಮಗಾರಿಗಳಲ್ಲಿ ಮೋಸದ ಪಾವತಿ; ಚೆಕ್ ಡ್ಯಾಂ ಕಾಮಗಾರಿಯೇ ಇಲ್ಲ, ಆದರೂ ಹಣ ಪಾವತಿ

ಬೆಂಗಳೂರು; 847 ಸಂಖ್ಯೆ ವಸತಿ  ಕಾಮಗಾರಿಗಳಲ್ಲಿ  ಮೋಸದ ಪಾವತಿಗಳಾಗಿರುವುದನ್ನು ಭಾರತದ ಲೆಕ್ಕ...

42,750 ಕೋಟಿ ದೀರ್ಘಾವಧಿ ಸಾಲ, 4,516 ಕೋಟಿ ಆದಾಯ ಕೊರತೆ; ಎಸ್ಕಾಂಗಳ ಆರ್ಥಿಕ ಸ್ಥಿತಿ ಅನಾವರಣ

ಬೆಂಗಳೂರು; ವಿದ್ಯುತ್ ಸರಬರಾಜು ಕಂಪನಿಗಳು ಇದುವರೆಗೆ ಒಟ್ಟಾರೆ 42,750 ಕೋಟಿಗಳಷ್ಟು ದೀರ್ಘಾವಧಿ...

ಹಿಂದುಳಿದ ವರ್ಗ ವಸತಿ ಶಾಲೆ ಕಟ್ಟಡಗಳು ಶಿಥಿಲ; ಕಟ್ಟಡಗಳ ದುರಸ್ತಿಗೂ ಅನುದಾನವಿಲ್ಲ, ‘ಕೈ’ ಎತ್ತಿದ ಸರ್ಕಾರ

ಬೆಂಗಳೂರು;  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವಸತಿ ಶಾಲೆಗಳು ಶಿಥಿಲಗೊಂಡಿದ್ದರೂ...

ನರೇಗಾ ಕಾಮಗಾರಿಗಳ ಆರಂಭದ ದಿನಾಂಕವೂ ಇಲ್ಲ, ದತ್ತಾಂಶವೂ ಇಲ್ಲ; 1,007.83 ಕೋಟಿ ರು. ವೆಚ್ಚದ ಕಾಮಗಾರಿಗಳು ಅಪೂರ್ಣ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡಿದ್ದ ಕಾಮಗಾರಿಗಳ ಪೈಕಿ ಒಂದು ವ‍ರ್ಷಕ್ಕಿಂತಲೂ ಹೆಚ್ಚು...

ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿಗಳ ಕುಟುಂಬ ಸದಸ್ಯರ ಉದ್ಯಮ, ಹಣಕಾಸಿನ ವ್ಯವಹಾರ; ಸದನಕ್ಕೆ ಒದಗಿಸಬಹುದೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಖಿಲ ಭಾರತ...

ನರೇಗಾ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಿಯಮ ಉಲ್ಲಂಘನೆ; 86.67 ಕೋಟಿ ರು ಅಕ್ರಮ ಪತ್ತೆ ಹಚ್ಚಿದ ಸಿಎಜಿ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಮಾನವ ಸಂಪನ್ಮೂಲ ಬಳಕೆಗಾಗಿ ಮಾಡಿಕೊಂಡಿದ್ದ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಡೆದಿದ್ದ...

ಮೋಸದ ವಹಿವಾಟು, ಹೆಚ್ಚಿನ ಪಾವತಿ, ಅಕ್ರಮ ವೆಚ್ಚ; ನರೇಗಾದ ಮತ್ತೊಂದು ಮುಖ ಬಯಲು ಮಾಡಿದ ಸಿಎಜಿ

ಬೆಂಗಳೂರು; ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೈಗೊಂಡಿದ್ದ ಕಾಮಗಾರಿಗಳು...

ಗೃಹಜ್ಯೋತಿ; 23,823.06 ಮಿಲಿಯನ್ ಯೂನಿಟ್ ವಿದ್ಯುತ್ ಬಳಕೆ, ಎಸ್ಕಾಂಗಳಿಗೆ 631.75 ಕೋಟಿ ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಗೃಹ ಜ್ಯೋತಿ ಯೋಜನೆ ಅನುಷ್ಠಾನಗೊಳಿಸಿರುವ ವಿದ್ಯುತ್ ಸರಬರಾಜು ಕಂಪನಿಗಳಿಗೆ ಸರ್ಕಾರವು...

Related Articles

Popular Categories

error: Content is protected !!