Sunday | September 6, 2026 |

ಶಾಲಾ ಮಕ್ಕಳ ಉತ್ತರ ಪತ್ರಿಕೆಗಳಿಗೆ ಹಣವಿಲ್ಲವೆಂದ ಸರ್ಕಾರ, ದೇಗುಲ-ಮಠಗಳಿಗೆ ಕೊಟ್ಟಿದ್ದು 25.82 ಕೋಟಿ

ಬೆಂಗಳೂರು; ಪ್ರಸ್ತುತ ವರ್ಷದಲ್ಲಿ ದೇವಾಲಯ ಮತ್ತು ಮಠಗಳಿಗೆ ಸಹಾಯಾನುದಾನ ಕೋರಿ ಸಲ್ಲಿಸುವ ಪ್ರಸ್ತಾವನೆಗಳನ್ನು ಮುಂದೂಡಬೇಕು ಎಂದು ಆರ್ಥಿಕ ಇಲಾಖೆ ಅಭಿಪ್ರಾಯ ನೀಡಿದ ಕೆಲವೇ ದಿನಗಳಲ್ಲಿ ರಾಜ್ಯ ಕಾಂಗ್ರೆಸ್‌ ಸರ್ಕಾರವು ಒಟ್ಟಾರೆ 25.82 ಕೋಟಿ ರು. ಅನುದಾನ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ.

 

ಶಾಲಾ ಮಕ್ಕಳಿಗೆ ಉತ್ತಮ ಗುಣಮಟ್ಟದ ಶೂ ಖರೀದಿಸಲು ದಾನಿಗಳ ಮುಂದೆ ಕೈಯೊಡ್ಡಿಸಿದ್ದು ಮತ್ತು ಉತ್ತರ ಪತ್ರಿಕೆಗಳ ವೆಚ್ಚವನ್ನು ಭರಿಸಲು ವಿದ್ಯಾರ್ಥಿಗಳ ಜೇಬಿಗೆ ಕೈ ಹಾಕಿದ್ದರ ಬೆನ್ನಲ್ಲೇ ಮಠ, ದೇಗುಲ, ಧಾರ್ಮಿಕ ಸಂಸ್ಥೆಗಳಿಗೆ 25.82 ಕೋಟಿ ರು. ಅನುದಾನ ಬಿಡುಗಡೆ ಮಾಡಿರುವುದು ಚರ್ಚೆಗೆ ಗ್ರಾಸವಾಗಿದೆ.

 

ವಿಶೇಷವೆಂದರೇ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ಕೆಲವೇ ಕೆಲವು ತಿಂಗಳಲ್ಲಿ ಮಠ, ದೇವಸ್ಥಾನಗಳ ಜೀರ್ಣೋದ್ಧಾರಕ್ಕಾಗಿ 3.99 ಕೋಟಿ ರು. ಅನುದಾನ ಬಿಡುಗಡೆ ಮಾಡಿ ಆದೇಶ ಹೊರಡಿಸಿತ್ತು. ಈ ಪೈಕಿ ಮುಖ್ಯಮಂತ್ರಿ  ಸಿದ್ದರಾಮಯ್ಯ ಅವರು ಪ್ರತಿನಿಧಿಸಿರುವ ವರುಣ ವಿಧಾನಸಭೆ ಕ್ಷೇತ್ರಕ್ಕೆ 1.50 ಕೋಟಿ ರು ಮಂಜೂರಾಗಿತ್ತು. ಇದು ಒಟ್ಟು ಅನುದಾನದಲ್ಲಿ ಸಿಂಹಪಾಲು ವರುಣ ಕ್ಷೇತ್ರಕ್ಕೆ ದಕ್ಕಿದಂತಾಗಿತ್ತು.

 

ರಾಜ್ಯದ ವಿವಿಧ ಜಿಲ್ಲೆಗಳ ದೇವಸ್ಥಾನ, ಮಠ, ಧಾರ್ಮಿಕ ಸಂಸ್ಥೆಗಳ ಜೀರ್ಣೋದ್ಧಾರ, ಮೂಲಭೂತ ಸೌಕರ್ಯ ಅಭಿವೃದ್ಧಿ ಕಾಮಗಾರಿಗಳಿಗೆ  2024ರ ಮಾರ್ಚ್‌ 2ರಂದುದ 10.83 ಕೋಟಿ ರು., ಮಾರ್ಚ್‌ 5ರಂದು 7.86 ಕೋಟಿ ರು., ಮಾರ್ಚ್‌ 6ರಂದು 7.13 ಕೋಟಿ ರು. ಅನುದಾನ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ. ಈ ಆದೇಶಗಳ ಪ್ರತಿಗಳು ‘ದಿ ಫೈಲ್‌’ಗೆ ಲಭ್ಯವಾಗಿವೆ.

 

ಮಾರ್ಚ್‌ 2ರಂದು ಹೊರಡಿಸಿರುವ ಆದೇಶದ ಪ್ರಕಾರ ಒಟ್ಟು 197 ದೇಗುಲ, ಮಠ, ಧಾರ್ಮಿಕ ಸಂಸ್ಥೆಗಳಿಗೆ 10.86 ಕೋಟಿ ರು. ಮಂಜೂರು ಮಾಡಿದೆ.

 

ಮಾರ್ಚ್‌ 5ರಂದು 137 ದೇವಸ್ಥಾನಗಳಿಗೆ 7.86 ಕೋಟಿ ರು.

 

6ರಂದು ಹೊರಡಿಸಿರುವ ಆದೇಶದಂತೆ 136 ದೇವಾಲಯಗಳಿಗೆ 7.13 ಕೋಟಿ ರು. ಅನುದಾನ ಬಿಡುಗಡೆ ಮಾಡ ಆದೇಶ ಹೊರಡಿಸಿದೆ.

 

ವಿಶೇಷವೆಂದರೇ ದೇವಾಲಯ ಮತ್ತು ಮಠಗಳಿಗೆ ಸಹಾಯಾನುದಾನ ಕೋರಿ ಶಾಸಕರು ಅನೇಕ ಪ್ರಸ್ತಾವನೆ ಸಲ್ಲಿಸಿದ್ದರು. ಇದನ್ನು ಪರಿಶೀಲಿಸಿದ್ದ ಆರ್ಥಿಕ ಇಲಾಖೆಯು ತಳ್ಳಿ ಹಾಕಿತ್ತು. ‘ಆಡಳಿತ ಇಲಾಖೆಯ ಪ್ರಸ್ತಾವನೆಯನ್ನು ಪರಿಶೀಲಿಸಿದೆ. ಪ್ರಸ್ತುತ ವರ್ಷದಲ್ಲಿ ಹೊಸದಾಗಿ ಶಾಸಕರುಗಳಿಂದ, ಸಂಸ್ಥೆಗಳಿಂದ ದೇವಾಲಯ, ಮಠಗಳಿಗೆ ಸಹಾಯಾನುದಾನ ಕೋರಿ ಸಲ್ಲಿಸುವ ಪ್ರಸ್ತಾವನೆಗಳ ಬಗ್ಗೆ ಸದ್ಯಕ್ಕೆ ಕ್ರಮ ವಹಿಸಬಾರದು ಮತ್ತು ಆ ಎಲ್ಲಾ ಪ್ರಸ್ತಾವನೆಗಳನ್ನು ಮುಂದೂಡಬೇಕು,’ ಎಂದು 2024ರ ಫೆ.14ರಂದೇ ಆರ್ಥಿಕ ಇಲಾಖೆಯು (ಸಂಖ್ಯೆ; ಆಇ 183 ವೆಚ್ಚ-7/ 2024)  ಕಂದಾಯ ಇಲಾಖೆಗೆ ತಿಳಿಸಿತ್ತು.

 

ಬೀದರ್‌, ದಾವಣಗೆರೆ, ವರುಣ, ವಿಜಯಪುರ, ಹಾಸನ ಜಿಲ್ಲೆಯ ಹಲವು ದೇವಸ್ಥಾನ ಮತ್ತು ಮಠಗಳಿಗೆ ಬಿಡುಗಡೆ ಮಾಡಿರುವ ಒಟ್ಟು 3.99 ಕೋಟಿ ರು. ಅನುದಾನದ ಪೈಕಿ ಸಿದ್ದರಾಮಯ್ಯ ಅವರು ಪ್ರತಿನಿಧಿಸಿರುವ  ಮೈಸೂರಿನ ವರುಣ ವಿಧಾನಸಭೆ ಕ್ಷೇತ್ರಕ್ಕೆ ಆರಂಂಭದಲ್ಲೇ  ಸಿಂಹಪಾಲು ದಕ್ಕಿತ್ತು.

 

ದೇಗುಲ, ಮಠಗಳಿಗೆ 3.99 ಕೋಟಿ ರು. ಅನುದಾನ; ಸಿಂಹಪಾಲು ಪಡೆದ ವರುಣ ಕ್ಷೇತ್ರ

ಹಿಂದಿನ ಬಿಜೆಪಿ ಸರ್ಕಾರದ ಕೊನೇ ದಿನಗಳಲ್ಲಿ 116 ಕೋಟಿ ರು. ಅನುದಾನವನ್ನು ಒದಗಿಸಿತ್ತು.

 

 

 

ಮಕ್ಕಳಿಗೆ ನೂರು ದಿನ ಮೊಟ್ಟೆ, ಗುಣಮಟ್ಟದ ಶೂ ನೀಡದ ಸರ್ಕಾರದಿಂದ ದೇಗುಲಗಳ ಅಭಿವೃದ್ಧಿಗೆ 116 ಕೋಟಿ

ಅಲ್ಲದೆ ಫಲಿಮಾರು ಮಠ ಸೇರಿ ಇನ್ನಿತರೆ 178 ಮಠಗಳಿಗೆ 108.24 ಕೋಟಿ ರು. ಅನುದಾನ ಒದಗಿಸಿತ್ತು.

 

ಪಲಿಮಾರು, ಮುರುಘಾ, ಶೃಂಗೇರಿ, ಆದಿಚುಂಚನಗಿರಿ ಸೇರಿ 178 ಮಠಗಳಿಗೆ 108.24 ಕೋಟಿ ರು ಅನುದಾನ

 

ಬೀದರ್‌ನ ಶಿವಾನಂದಸ್ವಾಮಿ ಶಾಂತ ಆಶ್ರಮ ಬ್ಯಾಲಹಳ್ಳಿಗೆ 5 ಲಕ್ಷ ರು., ಕೋಲಾರ ತಾಲೂಕಿನ ಚೌಡದೇನಹಳ್ಳಿ ಗ್ರಾಮದ ವೇಣುಗೋಪಾಲಸ್ವಾಮಿ ಮತ್ತು ಆಂಜನೇಯಸ್ವಾಮಿ ದೇವಸ್ಥಾನಕ್ಕೆ 12 ಲಕ್ಷ ರು., ಹಾಸನ ತಾಲೂಕಿನ ಮಲ್ಲಿಗೆವಾಳು ಗ್ರಾಮದ ಮಲ್ಲೆಶ್ವರ ಸ್ವಾಮಿ ದೇವಸ್ಥಾನಕ್ಕೆ 5 ಲಕ್ಷ ರು. ಸೇರಿ ಒಟ್ಟಾರೆ 22 ಲಕ್ಷ ರು. ಗಳನ್ನು ಒದಗಿಸಿತ್ತು.

Hot this week

2,500 ಕೋಟಿ ರು ಮೂಲ ಬೆಲೆಯ ಮೇಲೆ 350 ಕೋಟಿ ಪ್ರೀಮಿಯಂ; ನಾಗರೀಕರ ಮೇಲೆ ಹೊರೆ ಸೃಷ್ಟಿಸಿತೇ ಬಿಎಸ್‌ಡಬ್ಲ್ಯೂಎಂಎಲ್?

ಬೆಂಗಳೂರು;  ಪ್ರಾಥಮಿಕ ಹಂತದ ಕಸ ಸಂಗ್ರಹಣೆ ಮತ್ತು ಸಾಗಾಣಿಕೆಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯುಎಂಎಲ್‌...

ಬುಕ್ ಬ್ರಹ್ಮ ಸಾಹಿತ್ಯ ಉತ್ಸವಕ್ಕೆ 5 ಲಕ್ಷ ರು ಅನುದಾನ; ನೋಂದಣಿಯಾಗಿ 3 ವ‍ರ್ಷ ಪೂರೈಸದ ಬುಕ್‌ ಬ್ರಹ್ಮ ಫೌಂಡೇಷನ್‌ಗೆ ಒಂದು ಬಾರಿ ವಿನಾಯಿತಿ

ಬೆಂಗಳೂರು;  ಅನುದಾನ ಪಡೆಯುವ ಸಂಘ, ಸಂಸ್ಥೆಗಳು ನೋಂದಣಿಯಾಗಿ  3 ವರ್ಷಗಳನ್ನು ಪೂರೈಸಿರಬೇಕು...

ಘನತ್ಯಾಜ್ಯ ಸಂಗ್ರಹಣೆ, ಸಾಗಾಣಿಕೆಗೆ ವಾಹನಗಳ ಬಾಡಿಗೆ ವೆಚ್ಚ; ದರಗಳ ಪರಿಷ್ಕರಣೆಗೆ ಅನುಸರಿಸಿರುವ ಮಾನದಂಡದಲ್ಲಿ ಲೋಪವಿದೆಯೇ?

ಬೆಂಗಳೂರು; ಘನತ್ಯಾಜ್ಯ ಸಂಗ್ರಹಣೆ ಮತ್ತು ಸಾಗಾಣಿಕೆಗೆ ವಾಹನಗಳ ಬಾಡಿಗೆ ವೆಚ್ಚ ದರಗಳ...

ಭ್ರಷ್ಟಾಚಾರ, ಅಧಿಕ ಆಸ್ತಿ ಗಳಿಕೆ ಆರೋಪ; 4 ವರ್ಷಗಳಲ್ಲಿ 1,248 ಪ್ರಕರಣ ದಾಖಲು, ಸಿ ಗುಂಪಿನ ನೌಕರರೇ ಹೆಚ್ಚು

ಬೆಂಗಳೂರು; ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ, ಲಂಚಕ್ಕಾಗಿ ಬೇಡಿಕೆಯಿಟ್ಟ  ಆರೋಪಗಳಿಗೆ ಸಂಬಂಧಿಸಿದಂತೆ ...

ಕನ್ಸೋರ್ಟಿಯಂ ಷರತ್ತು, ಸದಸ್ಯರ ಷೇರು; ಅಂಜುಂ ಪರ್ವೇಜ್ ಸಮಿತಿಯ ಆಕ್ಷೇಪಣೆ ತಳ್ಳಿ ಹಾಕಿದ ಘನತ್ಯಾಜ್ಯ ನಿರ್ವಹಣೆ ಮಂಡಳಿ

ಬೆಂಗಳೂರು; ಕಸ ಸಂಗ್ರಹಣೆ ಮತ್ತು ಸಾಗಾಣಿಕೆಗೆ 21 ಪ್ಯಾಕೇಜ್‌ಗಳಲ್ಲಿ ರೂಪಿಸಿರುವ  ಕನ್ಸೋರ್ಟಿಯಂನಲ್ಲಿ...
Please Scan to make Your Contribution

Topics

2,500 ಕೋಟಿ ರು ಮೂಲ ಬೆಲೆಯ ಮೇಲೆ 350 ಕೋಟಿ ಪ್ರೀಮಿಯಂ; ನಾಗರೀಕರ ಮೇಲೆ ಹೊರೆ ಸೃಷ್ಟಿಸಿತೇ ಬಿಎಸ್‌ಡಬ್ಲ್ಯೂಎಂಎಲ್?

ಬೆಂಗಳೂರು;  ಪ್ರಾಥಮಿಕ ಹಂತದ ಕಸ ಸಂಗ್ರಹಣೆ ಮತ್ತು ಸಾಗಾಣಿಕೆಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯುಎಂಎಲ್‌...

ಘನತ್ಯಾಜ್ಯ ಸಂಗ್ರಹಣೆ, ಸಾಗಾಣಿಕೆಗೆ ವಾಹನಗಳ ಬಾಡಿಗೆ ವೆಚ್ಚ; ದರಗಳ ಪರಿಷ್ಕರಣೆಗೆ ಅನುಸರಿಸಿರುವ ಮಾನದಂಡದಲ್ಲಿ ಲೋಪವಿದೆಯೇ?

ಬೆಂಗಳೂರು; ಘನತ್ಯಾಜ್ಯ ಸಂಗ್ರಹಣೆ ಮತ್ತು ಸಾಗಾಣಿಕೆಗೆ ವಾಹನಗಳ ಬಾಡಿಗೆ ವೆಚ್ಚ ದರಗಳ...

ಭ್ರಷ್ಟಾಚಾರ, ಅಧಿಕ ಆಸ್ತಿ ಗಳಿಕೆ ಆರೋಪ; 4 ವರ್ಷಗಳಲ್ಲಿ 1,248 ಪ್ರಕರಣ ದಾಖಲು, ಸಿ ಗುಂಪಿನ ನೌಕರರೇ ಹೆಚ್ಚು

ಬೆಂಗಳೂರು; ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ, ಲಂಚಕ್ಕಾಗಿ ಬೇಡಿಕೆಯಿಟ್ಟ  ಆರೋಪಗಳಿಗೆ ಸಂಬಂಧಿಸಿದಂತೆ ...

ಕನ್ಸೋರ್ಟಿಯಂ ಷರತ್ತು, ಸದಸ್ಯರ ಷೇರು; ಅಂಜುಂ ಪರ್ವೇಜ್ ಸಮಿತಿಯ ಆಕ್ಷೇಪಣೆ ತಳ್ಳಿ ಹಾಕಿದ ಘನತ್ಯಾಜ್ಯ ನಿರ್ವಹಣೆ ಮಂಡಳಿ

ಬೆಂಗಳೂರು; ಕಸ ಸಂಗ್ರಹಣೆ ಮತ್ತು ಸಾಗಾಣಿಕೆಗೆ 21 ಪ್ಯಾಕೇಜ್‌ಗಳಲ್ಲಿ ರೂಪಿಸಿರುವ  ಕನ್ಸೋರ್ಟಿಯಂನಲ್ಲಿ...

Related Articles

Popular Categories

error: Content is protected !!