Thursday | July 16, 2026 |

ಯುವ ನಿಧಿ; 2,409 ಅರ್ಜಿಗಳು ತಿರಸ್ಕೃತ, ಮೂರು ತಿಂಗಳಲ್ಲಿ 15.89 ಕೋಟಿ ನಿರುದ್ಯೋಗ ಭತ್ಯೆ ಪಾವತಿ

ಬೆಂಗಳೂರು; ಪದವೀಧರರಿಗೆ ನಿರುದ್ಯೋಗಿ ಭತ್ಯೆ ನೀಡುವ ಯುವ ನಿಧಿ ಯೋಜನೆಗೆ ಮಾರ್ಚ್‌ 13ರ ಅಂತ್ಯಕ್ಕೆ ಒಟ್ಟು 2,409 ಅರ್ಜಿಗಳು ತಿರಸ್ಕೃತಗೊಂಡಿವೆ. ಈ ಪೈಕಿ 1,645 ಫಲಾನುಭವಿಗಳ ಆಧಾರ್‌ ಸಂಖ್ಯೆಯು ಬ್ಯಾಂಕ್‌ ಖಾತೆಯೊಡನೆ ಸೀಡ್‌ ಆಗಿರದ ಕಾರಣ ನೇರ ನಗದು ವರ್ಗಾವಣೆ ಆಗಿಲ್ಲ.

 

ಯುವ ನಿಧಿ ಯೋಜನೆಯಡಿ ಪದವಿಧರರಿಗೆ/ಸ್ನಾತಕೋತ್ತರ ಪದವೀಧರರಿಗೆ ಪ್ರತಿ ತಿಂಗಳು 3,000 ರು ಮತ್ತು ಡಿಪ್ಲೋಮಾ ತೇರ್ಗಡೆಯಾದವರಿಗೆ ಪ್ರತಿ ತಿಂಗಳು 1,500 ರು. ನಿರುದ್ಯೋಗ ಭತ್ಯೆ ಯೋಜನೆಯಡಿ ಒಟ್ಟಾರೆ 1,43,549 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ಧಾರೆ. ಈ ಪೈಕಿ ನ್ಯಾಡ್‌ ಪೋರ್ಟಲ್‌ನಲ್ಲಿ 38,511 ಅಭ್ಯರ್ಥಿಗಳು ಡಿಪ್ಲೋಮಾ ಪ್ರಮಾಣ ಪತ್ರಗಳನ್ನು ಅಪ್‌ಲೋಡ್‌ ಮಾಡಿದ್ದಾರೆ.

 

ಇದಕ್ಕೆ ಸಂಬಂಧಿಸಿದಂತೆ ಇಲಾಖೆಯ ಅಂಕಿ ಅಂಶಗಳು ‘ದಿ ಫೈಲ್‌’ಗೆ ಲಭ್ಯವಾಗಿವೆ.

 

ವಿವಿಧ ಹಂತಗಳಲ್ಲಿ ಒಟ್ಟಾರೆ 2,409 ಅಭ್ಯರ್ಥಿಗಳ ಅರ್ಜಿಗಳು ತಿರಸ್ಕೃತಗೊಂಡಿವೆ. ಆಧಾರ ಸಂಖ್ಯೆಯು ಬ್ಯಾಂಕ್‌ ಖಾತೆಯೊಡನೆ ಸೀಡ್‌ ಆಗಿರದ ಕಾರಣ 1,645 ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆಯಾಗಿಲ್ಲ ಎಂಬುದು ತಿಳಿದು ಬಂದಿದೆ.

 

 

 

ಮಾರ್ಚ್‌ ತಿಂಗಳಲ್ಲಿ 62,995 ಪದವೀಧರರಿಗೆ 18.90 ಕೋಟಿ ರು, ಮತ್ತು 2,010 ಡಿಪ್ಲೋಮಾದಾರರಿಗೆ .30 ಕೋಟಿ ರು ಸೇರಿದಂತೆ ಒಟ್ಟಾರೆ 65,005 ಫಲಾನುಭವಿ ಅಭ್ಯರ್ಥಿಗಳಿಗೆ 19.20 ಕೋಟಿ ರು. ವೆಚ್ಚವಾಗಲಿದೆ ಎಂದು ತಿಳಿದು ಬಂದಿದೆ.

 

 

2023ರ ಡಿಸೆಂಬರ್‍‌ ಅಂತ್ಯಕ್ಕೆ 2,617 ಅಭ್ಯರ್ಥಿಗಳು 0.79 ಕೋಟಿ ರು., ಜನವರಿ 2024ರಲ್ಲಿ 21,858 ಅಭ್ಯರ್ಥಿಗಳು 6.56 ಕೋಟಿ ರು., ಫೆಬ್ರುವರಿಯ್ಲಿ 28,926 ಅಭ್ಯರ್ಥಿಗಳು 8.55 ಕೋಟಿ ರು ಸೇರಿ ಒಟ್ಟಾರೆ 15.89 ಕೋಟಿ ರು.ಮೊತ್ತದ ನಿರುದ್ಯೋಗ ಭತ್ಯೆ ಪಡೆದಿರುವುದು ಗೊತ್ತಾಗಿದೆ.

 

38,511 ಅಭ್ಯರ್ಥಿಗಳ ಪೈಕಿ ತಾಂತ್ರಿಕ ಶಿಕ್ಷಣ ಇಲಾಖೆಯು 16,863, ಪ್ಯಾರಾ ಮೆಡಿಕಲ್‌ ಬೋರ್ಡ್‌ 10,254, ಜಿಟಿಟಿಸಿ 825, ಕರ್ನಾಟಕ ನರ್ಸಿಂಗ್‌ ಡಿಪ್ಲೋಮಾ ಪರೀಕ್ಷಾ ಮಂಡಳಿಯು 6,769, ಡಿ ಫಾರ್ಮಾದ 3,800 ಅಭ್ಯರ್ಥಿಗಳಿದ್ದಾರೆ.ಪದವೀಧರರ ಪೈಕಿ 4,84,981 ಅಭ್ಯರ್ಥಿಗಳು ಸೇರಿ ಒಟ್ಟಾರೆ 5,23, 492 ಅಭ್ಯರ್ಥಿಗಳ ಪ್ರಮಾಣ ಪತ್ರಗಳು ನ್ಯಾಡ್‌ ಪೋರ್ಟಲ್‌ನಲ್ಲಿ ಅಪ್ಲೋಡ್‌ ಆಗಿರುವುದು ತಿಳಿದು ಬಂದಿದೆ.

 

ವಿಟಿಯುನಲ್ಲಿ 49,961, ಗುಲ್ಬರ್ಗಾ ವಿವಿಯಲ್ಲಿ 46,448, ರಾಜೀವ್‌ಗಾಂಧಿ ಆರೋಗ್ಯ ವಿವಿ 36,494, ಬೆಂಗಳೂರು ವಿವಿ 27,440, ಮೈಸೂರು ವಿವಿ 20,500, ಬೆಂಗಳೂರು ನಗರ ವಿವಿ 20,159, ಮಂಗಳೂರು ವಿವಿ 19,092, ಬೆಂಗಳೂರು ಉತ್ತರ 17,458, ಕರ್ನಾಟಕ ವಿವಿ ಧಾರವಾಡ 17,009, ವಿಜಯನಗರ ಕೃಷ್ಣದೇವರಾಯ ವಿವಿ 15,738, ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿವಿ 15,571, ಕುವೆಂಪು ವಿವಿ 15,277, ದಾವಣಗೆರೆ ವಿವಿ 14,982, ತುಮಕೂರು ವಿವಿ 11,711, ಕರ್ನಾಟಕ ರಾಜ್ಯ ಮುಕ್ತ ವಿವಿ 8,823, ಕ್ರೈಸ್ಟ್‌ ವಿವಿ 8,460, ಜೈನ್‌ ವಿವಿ 7,815, ಮಣಿಪಾಲ್ ಅಕಾಡೆಮಿ ಆಫ್‌ ಹೈಯರ್‍‌ ಎಜುಕೇಷನ್‌ 6,512, ಕರ್ನಾಟಕ ಕಾನೂನು ವಿವಿ 4,729, ರೇವಾ ವಿವಿ 4,120 ವಿದ್ಯಾರ್ಥಿಗಳ ವಿವರಗಳನ್ನು ಒದಗಿಸಿದೆ.

 

ಅದೇ ರೀತಿ ಪಿಇಎಸ್‌ನಲ್ಲಿ 3,918, ಪ್ರೆಸಿಡೆನ್ಸಿ ವಿವಿ 3,693, ಜೆಎಸ್‌ಎಸ್‌ ಅಕಾಡೆಮಿ ಆಫ್‌ ಹೈಯರ್‍‌ ಎಜುಕೇಷನ್‌ನಲ್ಲಿ 2,751, ಯೇನಪೋವದಲ್ಲಿ 2,252, ಸುರತ್ಕಲ್‌ನ ಎನ್‌ಐಐಟಿಯಲ್ಲಿ 2,008, ದಯಾನಂದ ಸಾಗರ್‍‌ ವಿವಿಯಲ್ಲಿ 1,857, ಎಂ ಎಸ್‌ ರಾಮಯ್ಯ ವಿವಿ 1,834, ಶರಣಬಸವ ವಿವಿ 1,631, ಕೆಎಲ್‌ಇ ಬೆಳಗಾವಿಯಲ್ಲಿ 1,535, ನಿಟ್ಟೆ ಮಂಗಳೂರು 1,254, ಬೆಂಗಳೂರು ಕೃಷಿ ವಿವಿಯಲ್ಲಿ 1,251, ಜೆಎಸ್‌ಎಸ್‌ ವಿಜ್ಞಾನ ಮತ್ತು ತಾಂತ್ರಿಕ ವಿವಿ 1,090, ಅಲೈಯನ್ಸ್‌ ವಿವಿ 1,042, ಸಿದ್ದಾರ್ಥ ಅಕಾಡೆಮಿ ಹೈಯರ್‍‌ ಎಜುಕೇಷನ್‌ 986, ಆದಿಚುಂಚನಗಿರಿ ವಿಇ 970, ಧಾರವಾಡ ಕೃಷಿ ವಿವಿ 952, ಐಐಎಸ್ಸಿ ಬೆಂಗಳೂರು 930, ಸಿಎಂಆರ್‍‌ ವಿವಿ 928, ಮಂಡ್ಯ ವಿವಿ 838, ಶ್ರೀನಿವಾಸ ವಿವಿ 799, ಗಾರ್ಡನ್‌ ಸಿಟಿ ವಿವಿ 737 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ.

 

ಹಾಗೆಯೇ ಬಾಗಲಕೋಟೆಯ ತೋಟಗಾರಿಕೆ ವಿವಿಯಲ್ಲಿ 663, ಪಶುವೈದ್ಯಕೀಯ ಮೀನುಗಾರಿಕೆ ವಿವಿಯ 55, ನೃಪತುಂಗ ವಿವಿ 510, ಕೇಂದ್ರೀಯ ವಿವಿ 508, ಸಂಸ್ಕೃತ ವಿವಿ 507, ಅಜೀಂ ಪ್ರೇಮ್‌ ಜಿ ವಿವಿ 506, ಶಿವಮೊಗ್ಗ ಕೃಷಿ ವಿವಿ 496, ಖ್ವಾಜಾ ಬಂದೇ ನವಾಜ್‌ ವಿವಿ 411, ದೇವರಾಜ ಅರಸ್‌ ಅಕಾಡೆಮಿ ಆಫ್‌ ಹೈಯರ್‍‌ ಎಜುಕೇಷನ್‌ 400, ಬಿಎಲ್‌ಡಿಇ ವಿವಿ 356, ಬೆಂಗಳೂರಿನ ಇಂಟರ್‍‌ ನ್ಯಾಷನಲ್‌ ಇನ್ಸಿಟಿಟ್ಯೂಟ್‌ ಆಫ್‌ ಇನ್ಪರ್ಮಶನ್‌ ಟೆಕ್ನಾಲಜಿ 332, ಧರ್ಮಸ್ಥಳ ಮಂಜುನಾಥ ವಿವಿ 229, ಕರ್ನಾಟಕ ಪಂಚಾಯತ್‌ರಾಜ್‌ ವಿವಿ 229, ನಿಮ್ಹಾನ್ಸ್‌ 170, ಸ್ವಾಮಿ ವಿವೇಕಾನಂದ ಯೋಗ ಅನುಶಾಸನ ಸಂಸ್ಥೆ 160, ಶ್ರೀ ಸತ್ಯಸಾಯಿ ಯುನಿವರ್ಸಿಟಿ ಆಫ್‌ ಹ್ಯೂಮನ್‌ ಎಕ್ಸ್‌ಲೆನ್ಸ್‌ 123, ಜವಾಹರ್‍‌ಲಾಲ್‌ ನೆಹರು ಸೆಂಟರ್‍‌ ಆಫ್‌ ಅಡ್ವಾನ್ಸ್ಡ್ ಸೈಂಟಿಫೀಕ್‌ ರೀಸರ್ಚ್‌ 83, ರೈ ಟೆಕ್ನಾಲಜಿ 77, ಡಾ ಬಿ ಆರ್‍‌ ಅಂಬೇಡ್ಕರ್‍‌ ಆಫ್‌ ಸ್ಕೂಲ್‌ ಆಫ್‌ ಎಕನಾಮಿಕ್ಸ್‌ ವಿವಿ 41, ಗಂಗೂಬಾಯಿ ಸಂಗೀತ ವಿವಿ 16, ಸ್ವಾಯತ್ತ ಕಾಲೇಜುಗಳು 37,747 ವಿದ್ಯಾರ್ಥಿಗಳ ವಿವರಗಳನ್ನು ನ್ಯಾಡ್‌ ಪೋರ್ಟಲ್‌ನಲ್ಲಿ ಅಪ್ಲೋಡ್‌ ಮಾಡಿರುವುದು ಗೊತ್ತಾಗಿದೆ.

 

ಇನ್ನು ಫೆಬ್ರುವರಿ ಅಂತ್ಯಕ್ಕೆ 5,561 ಅಭ್ಯರ್ಥಿಗಳು, ಮಾರ್ಚ್‌ 13ರ ಅಂತ್ಯಕ್ಕೆ 3,675 ಆಭ್ಯರ್ಥಿಗಳೂ ಸ್ವಯಂ ಘೋಷಣೆ ನೀಡಿಲ್ಲ.

 

 

ಯುವ ನಿಧಿ ಯೋಜನೆಗೆ ಜಿಲ್ಲಾವಾರು ಪಟ್ಟಿಯಲ್ಲಿ ಬೆಳಗಾವಿಯಲ್ಲಿ 13,326, ಬೆಂಗಳೂರು ನಗರ 10,363, ಕಲ್ಬುರ್ಗಿಯಲ್ಲಿ 9,583, ರಾಯಚೂರು 9,323 ನೋಂದಣಿ ಆಗಿರುವುದು ತಿಳಿದು ಬಂದಿದೆ.

Hot this week

35,280 ಚಾಲ್ತಿಯಲ್ಲಿಲ್ಲದ ಬ್ಯಾಂಕ್‌ ಖಾತೆಗಳಲ್ಲಿ 239.66 ಕೋಟಿ; ಅಭಿವೃದ್ಧಿ ಯೋಜನೆಗಳಿಗೆ ಬಳಸದೇ ನಿರ್ಲಕ್ಷ್ಯ, 14.37 ಕೋಟಿ ಬಡ್ಡಿ ನಷ್ಟ

ಬೆಂಗಳೂರು; ರಾಜ್ಯದ ಗ್ರಾಮ ಪಂಚಾಯ್ತಿಗಳು  ಚಾಲ್ತಿಯಲ್ಲೇ ಇಲ್ಲದ 35,280  ಬ್ಯಾಂಕ್‌ ಖಾತೆಗಳಲ್ಲಿ ...

ಸರ್ಕಾರಿ ಲೆಕ್ಕಪತ್ರಗಳ ಮರು ಹೊಂದಾಣಿಕೆಯಲ್ಲಿ ಲೋಪ; ಆದಾಯ, ಸ್ವೀಕೃತಿ, ಬಂಡವಾಳ ವೆಚ್ಚದಲ್ಲಿ ವ್ಯತ್ಯಾಸ, ಕಳವಳ ವ್ಯಕ್ತಪಡಿಸಿದ ಲೆಕ್ಕಪರಿಶೋಧನಾ ಮಹಾನಿರ್ದೇಶಕ

ಬೆಂಗಳೂರು; ಸರ್ಕಾರಿ ಲೆಕ್ಕಪತ್ರಗಳಲ್ಲಿ ಸಂಪೂರ್ಣ ನಿಖರತೆ, ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಖಚಿತಪಡಿಸಬೇಕಿದ್ದ...

ಕಲ್ಲು ಸಕ್ಕರೆ, ಖರ್ಜೂರ ಪ್ರಸಾದ; ದುಪ್ಪಟ್ಟು ದರದಲ್ಲಿ ಮಾರಾಟ, ಭಕ್ತರಿಗೆ ಅನಗತ್ಯ ಆರ್ಥಿಕ ಹೊರೆ, ನ್ಯಾಯಾಲಯ ಆದೇಶವೂ ಉಲ್ಲಂಘನೆ

ಬೆಂಗಳೂರು; ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯ ಪ್ರಾಧಿಕಾರವು ನಿಗದಿತ ದರಕ್ಕಿಂತಲೂ ಹೆಚ್ಚುವರಿ ಅಂದರೇ...

ನ್ಯಾಕ್‌, ಎನ್‌ಐಆರ್‍‌ಎಫ್‌ ಮಾನದಂಡ; ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟ ಆತಂಕದ ಪ್ರವೃತ್ತಿ, ಆಯೋಗ ಕಳವಳ

ಬೆಂಗಳೂರು; ನ್ಯಾಕ್‌ ಮತ್ತು ಎನ್‌ಐಆರ್‍‌ಎಫ್‌ ಪ್ರಕಾರ ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟವು...

ಎಬಿ-ಎಆರ್‍‌ಕೆ ಯೋಜನೆಯಲ್ಲಿ ಅಕ್ರಮ; ಜಿಮ್ಸ್‌ ಸಿಬ್ಬಂದಿ, ಖಾಸಗಿ ಆಸ್ಪತ್ರೆ ಶಾಮೀಲು, ರಾಜೀನಾಮೆ ನೀಡಿದ್ದ ವೈದ್ಯರ ಹೆಸರಿನಲ್ಲೂ ನಕಲಿ ಓಆರ್‍‌ಎಸ್‌ ಸೃಜನೆ; ತನಿಖಾ ವರದಿ

ಬೆಂಗಳೂರು; ಆಯುಷ್ಮಾನ್‌ ಭಾರತ್ ಮತ್ತು  ಎಆರ್‍‌ಕೆ ಯೋಜನೆಯಡಿಯಲ್ಲಿ  ಕಲ್ಬುರ್ಗಿ ಜಿಲ್ಲಾ  ಆಸ್ಪತ್ರೆಯಿಂದ...
Please Scan to make Your Contribution

Topics

35,280 ಚಾಲ್ತಿಯಲ್ಲಿಲ್ಲದ ಬ್ಯಾಂಕ್‌ ಖಾತೆಗಳಲ್ಲಿ 239.66 ಕೋಟಿ; ಅಭಿವೃದ್ಧಿ ಯೋಜನೆಗಳಿಗೆ ಬಳಸದೇ ನಿರ್ಲಕ್ಷ್ಯ, 14.37 ಕೋಟಿ ಬಡ್ಡಿ ನಷ್ಟ

ಬೆಂಗಳೂರು; ರಾಜ್ಯದ ಗ್ರಾಮ ಪಂಚಾಯ್ತಿಗಳು  ಚಾಲ್ತಿಯಲ್ಲೇ ಇಲ್ಲದ 35,280  ಬ್ಯಾಂಕ್‌ ಖಾತೆಗಳಲ್ಲಿ ...

ಸರ್ಕಾರಿ ಲೆಕ್ಕಪತ್ರಗಳ ಮರು ಹೊಂದಾಣಿಕೆಯಲ್ಲಿ ಲೋಪ; ಆದಾಯ, ಸ್ವೀಕೃತಿ, ಬಂಡವಾಳ ವೆಚ್ಚದಲ್ಲಿ ವ್ಯತ್ಯಾಸ, ಕಳವಳ ವ್ಯಕ್ತಪಡಿಸಿದ ಲೆಕ್ಕಪರಿಶೋಧನಾ ಮಹಾನಿರ್ದೇಶಕ

ಬೆಂಗಳೂರು; ಸರ್ಕಾರಿ ಲೆಕ್ಕಪತ್ರಗಳಲ್ಲಿ ಸಂಪೂರ್ಣ ನಿಖರತೆ, ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಖಚಿತಪಡಿಸಬೇಕಿದ್ದ...

ಕಲ್ಲು ಸಕ್ಕರೆ, ಖರ್ಜೂರ ಪ್ರಸಾದ; ದುಪ್ಪಟ್ಟು ದರದಲ್ಲಿ ಮಾರಾಟ, ಭಕ್ತರಿಗೆ ಅನಗತ್ಯ ಆರ್ಥಿಕ ಹೊರೆ, ನ್ಯಾಯಾಲಯ ಆದೇಶವೂ ಉಲ್ಲಂಘನೆ

ಬೆಂಗಳೂರು; ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯ ಪ್ರಾಧಿಕಾರವು ನಿಗದಿತ ದರಕ್ಕಿಂತಲೂ ಹೆಚ್ಚುವರಿ ಅಂದರೇ...

ನ್ಯಾಕ್‌, ಎನ್‌ಐಆರ್‍‌ಎಫ್‌ ಮಾನದಂಡ; ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟ ಆತಂಕದ ಪ್ರವೃತ್ತಿ, ಆಯೋಗ ಕಳವಳ

ಬೆಂಗಳೂರು; ನ್ಯಾಕ್‌ ಮತ್ತು ಎನ್‌ಐಆರ್‍‌ಎಫ್‌ ಪ್ರಕಾರ ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟವು...

ಜಿಎಸ್‌ಡಿಪಿ 23,34,000 ಕೋಟಿ, ಉನ್ನತ ಶಿಕ್ಷಣಕ್ಕಾಗಿ ಕೇವಲ 5,646 ಕೋಟಿ ರು ಖರ್ಚು; ಇತರೆ ರಾಜ್ಯಗಳಿಗಿಂತ ಕೆಳಗಿಳಿದ ಕರ್ನಾಟಕ

ಬೆಂಗಳೂರು; ಸಿದ್ದರಾಮಯ್ಯ ಅವರು ಎರಡನೇ ಬಾರಿ ಮುಖ್ಯಮಂತ್ರಿ ಆಗಿದ್ದ ಮೊದಲನೇ ಆರ್ಥಿಕ...

Related Articles

Popular Categories

error: Content is protected !!