Thursday | June 11, 2026 |

ಸರ್ಕಾರಿ ಕೆರೆ ಒತ್ತುವರಿ ಜಾಗದಲ್ಲಿದ್ದ ಕಟ್ಟಡ ದಾನಪತ್ರ; ಸಚಿವ ಚಲುವರಾಯಸ್ವಾಮಿ ವಿರುದ್ಧ ಲೋಕಾಯುಕ್ತಕ್ಕೆ ದೂರು

ಬೆಂಗಳೂರು; ಸರ್ಕಾರಿ ಕೆರೆ ಜಾಗ ಒತ್ತುವರಿ ಮಾಡಿರುವ ಸ್ಥಳದಲ್ಲಿ ನಿರ್ಮಾಣವಾಗಿದೆ ಎನ್ನಲಾಗಿರುವ ಸುಮಾರು 70 ಕೋಟಿ ರು. ಬೆಲೆಬಾಳುವ ಕಟ್ಟಡವನ್ನೇ ದಾನದ ರೂಪದಲ್ಲಿ ಪಡೆದಿರುವ ಕೃಷಿ ಸಚಿವ ಎನ್‌ ಚೆಲುವರಾಯಸ್ವಾಮಿ ಅವರ ವಿರುದ್ಧ ಇದೀಗ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ.

 

ರಾಮಮೂರ್ತಿ ಗೌಡ ಎಂಬುವರು ಲೋಕಾಯುಕ್ತಕ್ಕೆ ದಾಖಲೆಗಳ ಸಹಿತ ದೂರು ದಾಖಲಿಸಿದ್ದಾರೆ. ಈ ದೂರಿನ ಪ್ರತಿ ಮತ್ತು ಇದಕ್ಕೆ ಸಂಬಂಧಿಸಿದ ಕಂದಾಯ ದಾಖಲೆಗಳು ‘ದಿ ಫೈಲ್‌’ಗೆ ಲಭ್ಯವಾಗಿವೆ.

 

ಪ್ರಕರಣದಲ್ಲಿ ಕೃಷಿ ಸಚಿವ ಎನ್‌ ಚೆಲುವರಾಯಸ್ವಾಮಿ ಅವರನ್ನು ಮೊದಲನೇ ಪ್ರತಿವಾದಿಯನ್ನಾಗಿಸಲಾಗಿದೆ. ಉಳಿದಂತೆ ಐಎಎಸ್‌ ಅಧಿಕಾರಿ ರವೀಂದ್ರ, ಬೆಂಗಳೂರು ಉತ್ತರ ವಿಭಾಗದ ಸಹಾಯಕ ಆಯುಕ್ತ, ಹಾಗೂ ತಹಶೀಲ್ದಾರ್‍‌ ಅವರನ್ನು ಪ್ರತಿವಾದಿಯನ್ನಾಗಿಸಲಾಗಿದೆ.

 

ಪ್ರಕರಣದ ವಿವರ

 

ಬೆಂಗಳೂರು ನಗರ ಜಿಲ್ಲೆಯ ದಾಸನಪುರ ಹೋಬಳಿ ಮಾಕಳಿ ಗ್ರಾಮದ ಸರ್ವೆ ನಂಬರ್‍‌ 13 ರಲ್ಲಿ 3.31 ಕುಂಟೆ ಸರ್ಕಾರಿ ಕೆರೆ ಜಾಗವಿದೆ.  ಲಕ್ಷ್ಮಿಕಾಂತ ಎಂಬುವರು ಸ್ವಯಾರ್ಜಿತವಾಗಿ ಖರೀದಿಸಿದ್ದರು ಎನ್ನಲಾಗಿದೆ. ಆದರೆ ಈ ಕೆರೆ ಜಾಗವನ್ನು ಮೊದಲು ಯಾರು ಖರೀದಿಸಿದ್ದರು ಎಂಬ ಮಾಹಿತಿ ಲಭ್ಯವಾಗಿಲ್ಲ. ಅಲ್ಲದೇ ಈ ಸರ್ಕಾರಿ ಜಾಗವು ಈ ಹಿಂದೆ ಯಾರ್‍ಯಾರ ಹೆಸರಿನಲ್ಲಿ ನೋಂದಣಿ ಆಗಿತ್ತು ಎಂಬ ಮಾಹಿತಿಯೂ ತಿಳಿದು ಬಂದಿಲ್ಲ.

 

ಹಾಲಿ ಕೃಷಿ ಸಚಿವ ಎನ್‌ ಚೆಲುವರಾಯಸ್ವಾಮಿ ಅವರಿಗೆ  2021ರ ಜುಲೈ 27ರಂದು ದಾನ ಪತ್ರ ಮುಖಾಂತರ ನೋಂದಣಿ ಮಾಡಿಕೊಟ್ಟಿರುವುದು ದಾಖಲೆಯಿಂದ ತಿಳಿದು ಬಂದಿದೆ. ಮತ್ತೊಂದು ವಿಶೇಷವೆಂದರೇ ದಾನ ನೀಡಿರುವ ಲಕ್ಷ್ಮಿಕಾಂತ ಅವರು ಸಚಿವ ಚೆಲುವರಾಯಸ್ವಾಮಿ ಅವರ ಸೋದರ ಎಂದು ಗೊತ್ತಾಗಿದೆ.

 

ಬೆಂಗಳೂರು ಉತ್ತರ ತಾಲೂಕು ಭೂ ದಾಖಲೆಗಳ ಸಹಾಯ ನಿರ್ದೇಶಕರು 2022ರ ಅಕ್ಟೋಬರ್‍‌ 13ರಲ್ಲಿ ಈ ಸರ್ವೆ ನಂಬರ್‍‌ನಲ್ಲಿ ಕೆರೆ ಎಂದು ದೃಢೀಕರಿಸಿರುವುದು ಗೊತ್ತಾಗಿದೆ.

 

ಎರಡನೇ ರೀ ಕ್ಲಾಸಿಫಿಕೇಷನ್‌ ಪುಸ್ತಕದಲ್ಲೂ ಈ ಸರ್ವೆ ನಂಬರ್‍‌ ಖರಾಬು ಕೆರೆ ಎಂದು ನಮೂದಾಗಿರುವುದು ದಾಖಲೆಯಿಂದ ಗೊತ್ತಾಗಿದೆ.

 

ಆರ್‍‌ಟಿಸಿಯಲ್ಲಿಯೂ ಚೆಲುವರಾಯಸ್ವಾಮಿ ಅವರ ಹೆಸರು ನಮೂದಾಗಿದೆ.

 

 

ಅಲ್ಲದೇ ಈ ಜಮೀನಿನ ಮೇಲೆ ತುಮಕೂರಿನ ಎಸ್‌ ಎಸ್‌ ಪುರದ ಕೆನರಾಬ್ಯಾಕ್‌ ಶಾಖೆಯಲ್ಲಿ 12,45,000 ರು. ಸಾಲ ಪಡೆದಿದ್ದಾರೆ ಎಂಬ ಆರೋಪ ಕೇಳ ಬಂದಿದೆ.

 

ಕೆರೆ ಜಾಗವನ್ನು ಒತ್ತುವರಿ ಮಾಡಿ ಈ ಜಾಗದಲ್ಲಿ ಹಿಮಾಲಯ ಡ್ರಗ್‌ ಹೌಸ್‌ ಕಟ್ಟಡ ನಿರ್ಮಾಣ ಮಾಡಲಾಗಿದೆ. ತಿಂಗಳೀಗೆ 10 ಲಕ್ಷ ರು. ಬಾಡಿಗೆ ಪಡೆಯುತ್ತಿದ್ದಾರೆ ಎಂದು ದೂರುದಾರ ರಾಮಮೂರ್ತಿ ಗೌಡ ದೂರಿನಲ್ಲಿ ತಿಳಿಸಿದ್ದಾರೆ.

Hot this week

ತ್ಯಾಜ್ಯ ವಿಲೇವಾರಿ ಟೆಂಡರ್ ಪ್ರಕ್ರಿಯೆಗಳಲ್ಲಿ ಅಕ್ರಮ ಆರೋಪ; ಮಧ್ಯಪ್ರವೇಶಕ್ಕೆ ಲೋಕಭವನ ಕದ ತಟ್ಟಿದ ಬಿಜೆಪಿ, ಸ್ವತಂತ್ರ ತನಿಖೆಗೆ ಮುಂದಾಗುವರೇ?

ಬೆಂಗಳೂರು; ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಸಮಗ್ರ ಘನ ತ್ಯಾಜ್ಯ ನಿರ್ವಹಣಾ...

ಕಸ ವಿಲೇವಾರಿ ಟೆಂಡರ್‍‌ನಲ್ಲಿ ಅಕ್ರಮ; 10,000 ಕೋಟಿ ಕಿಕ್‌ ಬ್ಯಾಕ್‌ ಆರೋಪ, ಹೈಕಮಾಂಡ್ ಕಪ್ಪದ ಟೆಂಡರ್, ರಾಜ್ಯಪಾಲರಿಗೆ ದೂರು, ದಿ ಫೈಲ್ ವರದಿ ಬೆನ್ನಲ್ಲೇ ತುಟಿ ಬಿಚ್ಚಿದ ಆರ್ ಅಶೋಕ್

ಬೆಂಗಳೂರು; ಸಮಗ್ರ ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯೂಎಂಎಲ್‌ ಯೋಜಿಸಿದ್ದ ಟೆಂಡರ್ ಪ್ಯಾಕೇಜ್‌ಗಳಲ್ಲಿ...

ಒಂದು ರಾಷ್ಟ್ರ ಒಂದು ಚುನಾವಣೆ; ಸಂಸತ್‌ ಜಂಟಿ ಸಮಿತಿಗೆ 5 ತಿಂಗಳಾದರೂ ಮಾಹಿತಿ ನೀಡದ ರಾಜ್ಯ

ಬೆಂಗಳೂರು; ಒಂದು ರಾಷ್ಟ್ರ ಒಂದು ಚುನಾವಣೆಗೆ ಸಂಬಂಧಿಸಿದಂತೆ ಸಂವಿಧಾನದ 129ನೇ ತಿದ್ದುಪಡಿ...

ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌, ಸಿಎಂ ಜನಸ್ಪಂದನ, ಸಿ ಎಸ್ ಕಚೇರಿಯಲ್ಲಿ ಇತ್ಯರ್ಥವಾಗದ 37,782 ಅರ್ಜಿಗಳು; ನಿಷ್ಕ್ರೀಯವಾಯಿತೇ ಆಡಳಿತ?

ಬೆಂಗಳೂರು;  ಸಾರ್ವಜನಿಕರು ವಿವಿಧ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌,...
Please Scan to make Your Contribution

Topics

ಕಸ ವಿಲೇವಾರಿ ಟೆಂಡರ್‍‌ನಲ್ಲಿ ಅಕ್ರಮ; 10,000 ಕೋಟಿ ಕಿಕ್‌ ಬ್ಯಾಕ್‌ ಆರೋಪ, ಹೈಕಮಾಂಡ್ ಕಪ್ಪದ ಟೆಂಡರ್, ರಾಜ್ಯಪಾಲರಿಗೆ ದೂರು, ದಿ ಫೈಲ್ ವರದಿ ಬೆನ್ನಲ್ಲೇ ತುಟಿ ಬಿಚ್ಚಿದ ಆರ್ ಅಶೋಕ್

ಬೆಂಗಳೂರು; ಸಮಗ್ರ ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯೂಎಂಎಲ್‌ ಯೋಜಿಸಿದ್ದ ಟೆಂಡರ್ ಪ್ಯಾಕೇಜ್‌ಗಳಲ್ಲಿ...

ಒಂದು ರಾಷ್ಟ್ರ ಒಂದು ಚುನಾವಣೆ; ಸಂಸತ್‌ ಜಂಟಿ ಸಮಿತಿಗೆ 5 ತಿಂಗಳಾದರೂ ಮಾಹಿತಿ ನೀಡದ ರಾಜ್ಯ

ಬೆಂಗಳೂರು; ಒಂದು ರಾಷ್ಟ್ರ ಒಂದು ಚುನಾವಣೆಗೆ ಸಂಬಂಧಿಸಿದಂತೆ ಸಂವಿಧಾನದ 129ನೇ ತಿದ್ದುಪಡಿ...

ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌, ಸಿಎಂ ಜನಸ್ಪಂದನ, ಸಿ ಎಸ್ ಕಚೇರಿಯಲ್ಲಿ ಇತ್ಯರ್ಥವಾಗದ 37,782 ಅರ್ಜಿಗಳು; ನಿಷ್ಕ್ರೀಯವಾಯಿತೇ ಆಡಳಿತ?

ಬೆಂಗಳೂರು;  ಸಾರ್ವಜನಿಕರು ವಿವಿಧ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌,...

ಅತಿಥಿ ಶಿಕ್ಷಕರ ನೇಮಕ ಪದ್ಧತಿಗೆ ರಾಜ್ಯ ಶಿಕ್ಷಣ ನೀತಿ ಆಯೋಗ ವಿರೋಧ; ಪದ್ದತಿ ಸಂಪೂರ್ಣವಾಗಿ ತೆಗೆದು ಹಾಕದೇ ವರದಿಯನ್ನೇ ಮೂಲೆಗುಂಪು ಮಾಡಿತೇ ಸರ್ಕಾರ?

ಬೆಂಗಳೂರು; 'ರಾಜ್ಯದಲ್ಲಿ   ಬೇರೂರಿದ ಗುತ್ತಿಗೆ ಶಿಕ್ಷಕ ನೇಮಕ ಪದ್ಧತಿಯಿಂದಾಗಿ  ವೃತ್ತಿಪರತೆಯ ಕೊರತೆ...

ಕಸ ವಿಲೇವಾರಿ ಟೆಂಡರ್ ಪ್ರಕ್ರಿಯೆಗಳಲ್ಲಿ ಬಹುಕೋಟಿ ಮೊತ್ತದ ಹಗರಣ; ಯತ್ನಾಳ್, ಶೋಭಾ ನಂತರ ಧೀರಜ್ ಮುನಿರಾಜು ದೂರು, ತುಟಿಬಿಚ್ಚದ ಪ್ರತಿಪಕ್ಷ ನಾಯಕ ಅಶೋಕ್

ಬೆಂಗಳೂರು; ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬೆಂಗಳೂರಿನ ಸಮಗ್ರ ಘನತ್ಯಾಜ್ಯ ನಿರ್ವಹಣೆಗೆ...

ಈಗಲ್‌ಟನ್‌ ರೆಸಾರ್ಟ್‌ನಿಂದ ಸರ್ಕಾರಿ ಜಮೀನು ಒತ್ತುವರಿ; 29 ವರ್ಷಗಳಾದರೂ ಪ್ರಕರಣ ಇತ್ಯರ್ಥವಾಗಿಲ್ಲ, 982 ಕೋಟಿಯೂ ವಸೂಲಾಗಿಲ್ಲ

ಬೆಂಗಳೂರು; ರಾಮನಗರ ತಾಲೂಕು ಬಿಡದಿ ಹೋಬಳಿ ಶ್ಯಾನುಮಂಗಲ, ಬಿಲ್ಲಕೆಂಪನಹಳ್ಳಿ, ಬಾನಂದೂರು ಗ್ರಾಮದ...

Related Articles

Popular Categories

error: Content is protected !!