Saturday | March 28, 2026 |

ರಾಮ್ ಲಲ್ಲಾನ ವಿಡಿಯೋ ಪ್ರಸ್ತುತಿಪಡಿಸಿದ್ದ ಶೀಟೇಲ್ಸ್‌ಗೆ 4(ಜಿ) ವಿನಾಯಿತಿ; ಮತದಾರರ ಜಾಗೃತಿಗೆ 49 ಲಕ್ಷ ವೆಚ್ಚ

Support THE-FILE

spot_img

ಬೆಂಗಳೂರು; ಫೇಸ್‌ಬುಕ್‌ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಮತದಾರರ ಜಾಗೃತಿ, ಮತದಾರರನ್ನು ಸೆಳೆಯಲು ಶೀತಲ್‌ ಶೆಟ್ಟಿ ಅವರ ಶೀ ಟೇಲ್ಸ್‌ ಎಂಟರ್‌ಟೈನ್‌ಮೆಂಟ್‌ ಪ್ರೈವೈಟ್‌ ಲಿಮಿಟೆಡ್‌ ಸೇವೆ ಪಡೆಯಲು ರಾಜ್ಯ ಕಾಂಗ್ರೆಸ್‌ ಸರ್ಕಾರವು ಮುಂದಾಗಿದೆ.

 

ಶೀ ಟೇಲ್ಸ್‌ ಎಂಟರ್‌ಟೈನ್‌ಮೆಂಟ್‌ ಪ್ರೈವೈಟ್‌ ಲಿಮಿಟೆಡ್‌ನಿಂದ ಮೂರು ತಿಂಗಳವರೆಗೆ ಸೇವೆ ಪಡೆಯಲಿರುವ ಸರ್ಕಾರವು ಇದಕ್ಕಾಗಿ 49.00 ಲಕ್ಷ ರು. ವೆಚ್ಚ ಮಾಡುತ್ತಿದೆ. ಈ ಸಂಬಂಧ 2024ರ ಫೆ.28ರಂದು ಅಧಿಸೂಚನೆ ಹೊರಡಿಸಿದೆ. ಅಧಿಸೂಚನೆ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಅಧಿಸೂಚನೆಯಲ್ಲೇನಿದೆ?

 

ಸಾರ್ವತ್ರಿಕ ಲೋಕಸಭೆ ಚುನಾವಣೆ 2024ರ ಸಂದರ್ಭದಲ್ಲಿ ಮತದಾರರ ಜಾಗೃತಿಗಾಗಿ ಹಾಗೂ ಮತದಾರರನ್ನು ಹಾಗೂ ನಗರವಾಸಿಗಳನ್ನು ಸೆಳೆಯಲು ಇನ್‌ಸ್ಟಾಗ್ರಾಂ, ಫೇಸ್‌ ಬುಕ್‌, ಟ್ವಿಟರ್‌, ಯೂಟ್ಯೂಬ್‌, ಸೋಷಿಯಲ್ ಮೀಡಿಯಾ ಜಾಲತಾಣ ಮಾಧ್ಯಮಗಳ ಮೂಲಕ ವ್ಯಾಪಕ ಪ್ರಚಾರ ಕೈಗೊಳ್ಳಲು ಶೀ ಟೇಲ್ಸ್‌ ಎಂಟರ್‌ಟೈನ್‌ಮೆಂಟ್‌ ಪ್ರೈವೈಟ್‌ ಲಿಮಿಟೆಡ್‌ ಸಂಸ್ಥೆಯ ಸೇವೆಯನ್ನು ಪಡೆಯಲು 49,00,540 ರು. ವೆಚ್ಚದಲ್ಲಿ ಮೂರು ತಿಂಗಳ ಅವಧಿಗೆ 2024ರ ಮಾರ್ಚ್‌ 1ರಿಂದ 2024ರ ಮೇ 31ರವರೆಗೆ ಪಡೆಯಲು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ 1999ರ ಕಲಂ 4(ಜಿ) ಅಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಗೆ ವಿನಾಯಿತಿ ನೀಡಿದೆ.

 

ಇದೇ ಏಪ್ರಿಲ್‌ ಮತ್ತು ಜೂನ್‌ನಲ್ಲಿ ಲೋಕಸಭೆ ಚುನಾವಣೆಗಳು ನಡೆಯಲಿವೆ ಎಂದು ಗೊತ್ತಿದ್ದರೂ ಸಹ ಸರ್ಕಾರವು ಈ ಸಂಬಂಧ ಪೂರ್ವಭಾವಿ ಸಿದ್ಧತೆಗಳನ್ನು ಮಾಡಿಕೊಂಡಿರಲಿಲ್ಲ. ಅಲ್ಲದೇ ಯಾವುದೇ ಟೆಂಡರ್‌ ಆಗಲೀ, ಅಲ್ಪಾವಧಿ ಟೆಂಡರ್‌, ಆಸಕ್ತಿ ವ್ಯಕ್ತಪಡಿಸುವಿಕೆ (ಇಒಐ)ಯನ್ನೂ ಆಹ್ವಾನಿಸಿರಲಿಲ್ಲ ಎಂದು ಗೊತ್ತಾಗಿದೆ.

 

ಮೂಲತಃ ಶೀ ಟೇಲ್ಸ್‌ ಎಂಟರ್‌ಟೈನ್‌ಮೆಂಟ್‌ ಪ್ರೈವೈಟ್‌ ಲಿಮಿಟೆಡ್‌, ಸಿನಿಮಾ ಸೇರಿದಂತೆ ಮನರಂಜನೆ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದೆ. ಮತದಾರರ ಜಾಗೃತಿ ಕುರಿತು ಸರ್ಕಾರದ ಯೋಜನೆಗಳಲ್ಲಿ ತೊಡಗಿಸಿಕೊಂಡಿರುವುದು ಕಂಡುಬಂದಿಲ್ಲ. ಶೀ ಟೇಲ್ಸ್‌ ಎಂಟರ್‌ಟೈನ್‌ಮೆಂಟ್‌ನ ಅಧಿಕೃತ ವೆಬ್‌ಸೈಟ್‌ನಲ್ಲಿಯೂ ಈ ಬಗ್ಗೆ ಯಾವುದೇ ಮಾಹಿತಿ, ವಿವರಗಳಿಲ್ಲ.

 

ಶೀತಲ್‌ ಶ್ರೀಧರ್‌ ಶೆಟ್ಟಿ ಎಂಬುವರು ಶೀ ಟೇಲ್ಸ್‌ ಎಂಟರ್‌ಟೈನ್‌ಮೆಂಟ್‌ ಪ್ರೈವೈಟ್‌ ಲಿಮಿಟೆಡ್‌ನ್ನು ಮುನ್ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

 

ವಿಶೇಷವೆಂದರೇ ಶೀ ಟೇಲ್ಸ್‌ ಎಂಟರ್‌ಟೈನ್‌ಮೆಂಟ್‌ ಪ್ರೈವೈಟ್‌ ಲಿಮಿಟೆಡ್‌ ಕಂಪನಿಯು ಅಯೋಧ್ಯೆಯ ರಾಮ ಲಲ್ಲಾನ ಕುರಿತು ವಿಡಿಯೋವನ್ನು ಜನವರಿ 2024ರಲ್ಲಿ ಪ್ರಸ್ತುತಿ ಪಡಿಸಿತ್ತು.

 

‘ಪ್ರತಿ ಸ್ವರದಲ್ಲಿ ಸಂಭ್ರಮ, ಆಲಾಪದಲ್ಲಿ ಜೋಗುಳ, ನೂರಾರು ಕಾಲ ಕಾದು ಕುಳಿತ ಜನರಿಗೆ ಎದ್ದು ಕುಣಿದು ಜೈ ಶ್ರೀ ರಾಮ್ ಎನ್ನುತ್ತಾ ಅದ್ಧೂರಿಯಾಗಿ ಆಯೋಧ್ಯೆಗೆ ರಾಮ ಲಲ್ಲಾನನ್ನು ಈ ಹಾಡಿನೊಂದಿಗೆ ಬರ ಮಾಡಿಕೊಳ್ಳುವ ಸಮಯ. ಘರ್ಜಿಸಿ ಹೇಳಿ, ಜೈ ಶ್ರೀ ರಾಮ್!!,’ ಎಂದು ಪ್ರಚುರಪಡಿಸಿರುವುದು ಕಂಪನಿಯ ಸಾಮಾಜಿಕ ಜಾಲತಾಣಗಳಿಂದ ಕಂಡು ಬಂದಿದೆ.

Hot this week

ಮನೆಗಳ ಹಂಚಿಕೆಯಲ್ಲಿ ಭ್ರಷ್ಟಾಚಾರ, ಹಣಕ್ಕೆ ಬೇಡಿಕೆ; ಪಾಟೀಲರ ಆರೋಪ, ಲೋಕಾ ತನಿಖೆಯಿಂದ ಸಾಬೀತು

ಬೆಂಗಳೂರು; ರಾಜೀವ್‌ ಗಾಂಧಿ ವಸತಿ ನಿಗಮದ ವ್ಯಾಪ್ತಿಯಲ್ಲಿ ಹಣ ಕೊಟ್ಟರಷ್ಟೇ ಮನೆಗಳನ್ನು ...

ಕದಂಬೋತ್ಸವ ಸೇರಿ ಸಾಂಸ್ಕೃತಿಕ ಉತ್ಸವಗಳಿಗೆ ಅನುದಾನ; 12.50 ಕೋಟಿ ರು ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಮೈಸೂರು ದಸರಾ ಸೇರಿದಂತೆ ಇನ್ನಿತರೆ ಜಿಲ್ಲಾಮಟ್ಟದ ವಿವಿಧ ಉತ್ಸವಗಳಿಗೆ 2024-25ಮತ್ತು...

ಪ್ರಚೋದನಕಾರಿ ಭಾಷಣ, ಕೋಮು ಗಲಭೆ; 3 ವರ್ಷದಲ್ಲಿ 50 ಪ್ರಕರಣಗಳು ದಾಖಲು, ಪಟ್ಟಿ ಬಹಿರಂಗ

ಬೆಂಗಳೂರು; ರಾಜ್ಯದ  ಕರಾವಳಿ ಭಾಗ ಸೇರಿದಂತೆ ವಿವಿಧೆಡೆ ಪ್ರಚೋದನಾಕಾರಿ ಭಾಷಣ ಮಾಡಿದವರು...

ನರೇಗಾ ವಸತಿ ಕಾಮಗಾರಿಗಳಲ್ಲಿ ಮೋಸದ ಪಾವತಿ; ಚೆಕ್ ಡ್ಯಾಂ ಕಾಮಗಾರಿಯೇ ಇಲ್ಲ, ಆದರೂ ಹಣ ಪಾವತಿ

ಬೆಂಗಳೂರು; 847 ಸಂಖ್ಯೆ ವಸತಿ  ಕಾಮಗಾರಿಗಳಲ್ಲಿ  ಮೋಸದ ಪಾವತಿಗಳಾಗಿರುವುದನ್ನು ಭಾರತದ ಲೆಕ್ಕ...

42,750 ಕೋಟಿ ದೀರ್ಘಾವಧಿ ಸಾಲ, 4,516 ಕೋಟಿ ಆದಾಯ ಕೊರತೆ; ಎಸ್ಕಾಂಗಳ ಆರ್ಥಿಕ ಸ್ಥಿತಿ ಅನಾವರಣ

ಬೆಂಗಳೂರು; ವಿದ್ಯುತ್ ಸರಬರಾಜು ಕಂಪನಿಗಳು ಇದುವರೆಗೆ ಒಟ್ಟಾರೆ 42,750 ಕೋಟಿಗಳಷ್ಟು ದೀರ್ಘಾವಧಿ...

Topics

ಮನೆಗಳ ಹಂಚಿಕೆಯಲ್ಲಿ ಭ್ರಷ್ಟಾಚಾರ, ಹಣಕ್ಕೆ ಬೇಡಿಕೆ; ಪಾಟೀಲರ ಆರೋಪ, ಲೋಕಾ ತನಿಖೆಯಿಂದ ಸಾಬೀತು

ಬೆಂಗಳೂರು; ರಾಜೀವ್‌ ಗಾಂಧಿ ವಸತಿ ನಿಗಮದ ವ್ಯಾಪ್ತಿಯಲ್ಲಿ ಹಣ ಕೊಟ್ಟರಷ್ಟೇ ಮನೆಗಳನ್ನು ...

ಕದಂಬೋತ್ಸವ ಸೇರಿ ಸಾಂಸ್ಕೃತಿಕ ಉತ್ಸವಗಳಿಗೆ ಅನುದಾನ; 12.50 ಕೋಟಿ ರು ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಮೈಸೂರು ದಸರಾ ಸೇರಿದಂತೆ ಇನ್ನಿತರೆ ಜಿಲ್ಲಾಮಟ್ಟದ ವಿವಿಧ ಉತ್ಸವಗಳಿಗೆ 2024-25ಮತ್ತು...

ಪ್ರಚೋದನಕಾರಿ ಭಾಷಣ, ಕೋಮು ಗಲಭೆ; 3 ವರ್ಷದಲ್ಲಿ 50 ಪ್ರಕರಣಗಳು ದಾಖಲು, ಪಟ್ಟಿ ಬಹಿರಂಗ

ಬೆಂಗಳೂರು; ರಾಜ್ಯದ  ಕರಾವಳಿ ಭಾಗ ಸೇರಿದಂತೆ ವಿವಿಧೆಡೆ ಪ್ರಚೋದನಾಕಾರಿ ಭಾಷಣ ಮಾಡಿದವರು...

ನರೇಗಾ ವಸತಿ ಕಾಮಗಾರಿಗಳಲ್ಲಿ ಮೋಸದ ಪಾವತಿ; ಚೆಕ್ ಡ್ಯಾಂ ಕಾಮಗಾರಿಯೇ ಇಲ್ಲ, ಆದರೂ ಹಣ ಪಾವತಿ

ಬೆಂಗಳೂರು; 847 ಸಂಖ್ಯೆ ವಸತಿ  ಕಾಮಗಾರಿಗಳಲ್ಲಿ  ಮೋಸದ ಪಾವತಿಗಳಾಗಿರುವುದನ್ನು ಭಾರತದ ಲೆಕ್ಕ...

42,750 ಕೋಟಿ ದೀರ್ಘಾವಧಿ ಸಾಲ, 4,516 ಕೋಟಿ ಆದಾಯ ಕೊರತೆ; ಎಸ್ಕಾಂಗಳ ಆರ್ಥಿಕ ಸ್ಥಿತಿ ಅನಾವರಣ

ಬೆಂಗಳೂರು; ವಿದ್ಯುತ್ ಸರಬರಾಜು ಕಂಪನಿಗಳು ಇದುವರೆಗೆ ಒಟ್ಟಾರೆ 42,750 ಕೋಟಿಗಳಷ್ಟು ದೀರ್ಘಾವಧಿ...

ಹಿಂದುಳಿದ ವರ್ಗ ವಸತಿ ಶಾಲೆ ಕಟ್ಟಡಗಳು ಶಿಥಿಲ; ಕಟ್ಟಡಗಳ ದುರಸ್ತಿಗೂ ಅನುದಾನವಿಲ್ಲ, ‘ಕೈ’ ಎತ್ತಿದ ಸರ್ಕಾರ

ಬೆಂಗಳೂರು;  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವಸತಿ ಶಾಲೆಗಳು ಶಿಥಿಲಗೊಂಡಿದ್ದರೂ...

ನರೇಗಾ ಕಾಮಗಾರಿಗಳ ಆರಂಭದ ದಿನಾಂಕವೂ ಇಲ್ಲ, ದತ್ತಾಂಶವೂ ಇಲ್ಲ; 1,007.83 ಕೋಟಿ ರು. ವೆಚ್ಚದ ಕಾಮಗಾರಿಗಳು ಅಪೂರ್ಣ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡಿದ್ದ ಕಾಮಗಾರಿಗಳ ಪೈಕಿ ಒಂದು ವ‍ರ್ಷಕ್ಕಿಂತಲೂ ಹೆಚ್ಚು...

ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿಗಳ ಕುಟುಂಬ ಸದಸ್ಯರ ಉದ್ಯಮ, ಹಣಕಾಸಿನ ವ್ಯವಹಾರ; ಸದನಕ್ಕೆ ಒದಗಿಸಬಹುದೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಖಿಲ ಭಾರತ...

Related Articles

Popular Categories

error: Content is protected !!