Saturday | May 9, 2026 |

ರಾಮ್ ಲಲ್ಲಾನ ವಿಡಿಯೋ ಪ್ರಸ್ತುತಿಪಡಿಸಿದ್ದ ಶೀಟೇಲ್ಸ್‌ಗೆ 4(ಜಿ) ವಿನಾಯಿತಿ; ಮತದಾರರ ಜಾಗೃತಿಗೆ 49 ಲಕ್ಷ ವೆಚ್ಚ

ಬೆಂಗಳೂರು; ಫೇಸ್‌ಬುಕ್‌ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಮತದಾರರ ಜಾಗೃತಿ, ಮತದಾರರನ್ನು ಸೆಳೆಯಲು ಶೀತಲ್‌ ಶೆಟ್ಟಿ ಅವರ ಶೀ ಟೇಲ್ಸ್‌ ಎಂಟರ್‌ಟೈನ್‌ಮೆಂಟ್‌ ಪ್ರೈವೈಟ್‌ ಲಿಮಿಟೆಡ್‌ ಸೇವೆ ಪಡೆಯಲು ರಾಜ್ಯ ಕಾಂಗ್ರೆಸ್‌ ಸರ್ಕಾರವು ಮುಂದಾಗಿದೆ.

 

ಶೀ ಟೇಲ್ಸ್‌ ಎಂಟರ್‌ಟೈನ್‌ಮೆಂಟ್‌ ಪ್ರೈವೈಟ್‌ ಲಿಮಿಟೆಡ್‌ನಿಂದ ಮೂರು ತಿಂಗಳವರೆಗೆ ಸೇವೆ ಪಡೆಯಲಿರುವ ಸರ್ಕಾರವು ಇದಕ್ಕಾಗಿ 49.00 ಲಕ್ಷ ರು. ವೆಚ್ಚ ಮಾಡುತ್ತಿದೆ. ಈ ಸಂಬಂಧ 2024ರ ಫೆ.28ರಂದು ಅಧಿಸೂಚನೆ ಹೊರಡಿಸಿದೆ. ಅಧಿಸೂಚನೆ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಅಧಿಸೂಚನೆಯಲ್ಲೇನಿದೆ?

 

ಸಾರ್ವತ್ರಿಕ ಲೋಕಸಭೆ ಚುನಾವಣೆ 2024ರ ಸಂದರ್ಭದಲ್ಲಿ ಮತದಾರರ ಜಾಗೃತಿಗಾಗಿ ಹಾಗೂ ಮತದಾರರನ್ನು ಹಾಗೂ ನಗರವಾಸಿಗಳನ್ನು ಸೆಳೆಯಲು ಇನ್‌ಸ್ಟಾಗ್ರಾಂ, ಫೇಸ್‌ ಬುಕ್‌, ಟ್ವಿಟರ್‌, ಯೂಟ್ಯೂಬ್‌, ಸೋಷಿಯಲ್ ಮೀಡಿಯಾ ಜಾಲತಾಣ ಮಾಧ್ಯಮಗಳ ಮೂಲಕ ವ್ಯಾಪಕ ಪ್ರಚಾರ ಕೈಗೊಳ್ಳಲು ಶೀ ಟೇಲ್ಸ್‌ ಎಂಟರ್‌ಟೈನ್‌ಮೆಂಟ್‌ ಪ್ರೈವೈಟ್‌ ಲಿಮಿಟೆಡ್‌ ಸಂಸ್ಥೆಯ ಸೇವೆಯನ್ನು ಪಡೆಯಲು 49,00,540 ರು. ವೆಚ್ಚದಲ್ಲಿ ಮೂರು ತಿಂಗಳ ಅವಧಿಗೆ 2024ರ ಮಾರ್ಚ್‌ 1ರಿಂದ 2024ರ ಮೇ 31ರವರೆಗೆ ಪಡೆಯಲು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ 1999ರ ಕಲಂ 4(ಜಿ) ಅಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಗೆ ವಿನಾಯಿತಿ ನೀಡಿದೆ.

 

ಇದೇ ಏಪ್ರಿಲ್‌ ಮತ್ತು ಜೂನ್‌ನಲ್ಲಿ ಲೋಕಸಭೆ ಚುನಾವಣೆಗಳು ನಡೆಯಲಿವೆ ಎಂದು ಗೊತ್ತಿದ್ದರೂ ಸಹ ಸರ್ಕಾರವು ಈ ಸಂಬಂಧ ಪೂರ್ವಭಾವಿ ಸಿದ್ಧತೆಗಳನ್ನು ಮಾಡಿಕೊಂಡಿರಲಿಲ್ಲ. ಅಲ್ಲದೇ ಯಾವುದೇ ಟೆಂಡರ್‌ ಆಗಲೀ, ಅಲ್ಪಾವಧಿ ಟೆಂಡರ್‌, ಆಸಕ್ತಿ ವ್ಯಕ್ತಪಡಿಸುವಿಕೆ (ಇಒಐ)ಯನ್ನೂ ಆಹ್ವಾನಿಸಿರಲಿಲ್ಲ ಎಂದು ಗೊತ್ತಾಗಿದೆ.

 

ಮೂಲತಃ ಶೀ ಟೇಲ್ಸ್‌ ಎಂಟರ್‌ಟೈನ್‌ಮೆಂಟ್‌ ಪ್ರೈವೈಟ್‌ ಲಿಮಿಟೆಡ್‌, ಸಿನಿಮಾ ಸೇರಿದಂತೆ ಮನರಂಜನೆ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದೆ. ಮತದಾರರ ಜಾಗೃತಿ ಕುರಿತು ಸರ್ಕಾರದ ಯೋಜನೆಗಳಲ್ಲಿ ತೊಡಗಿಸಿಕೊಂಡಿರುವುದು ಕಂಡುಬಂದಿಲ್ಲ. ಶೀ ಟೇಲ್ಸ್‌ ಎಂಟರ್‌ಟೈನ್‌ಮೆಂಟ್‌ನ ಅಧಿಕೃತ ವೆಬ್‌ಸೈಟ್‌ನಲ್ಲಿಯೂ ಈ ಬಗ್ಗೆ ಯಾವುದೇ ಮಾಹಿತಿ, ವಿವರಗಳಿಲ್ಲ.

 

ಶೀತಲ್‌ ಶ್ರೀಧರ್‌ ಶೆಟ್ಟಿ ಎಂಬುವರು ಶೀ ಟೇಲ್ಸ್‌ ಎಂಟರ್‌ಟೈನ್‌ಮೆಂಟ್‌ ಪ್ರೈವೈಟ್‌ ಲಿಮಿಟೆಡ್‌ನ್ನು ಮುನ್ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

 

ವಿಶೇಷವೆಂದರೇ ಶೀ ಟೇಲ್ಸ್‌ ಎಂಟರ್‌ಟೈನ್‌ಮೆಂಟ್‌ ಪ್ರೈವೈಟ್‌ ಲಿಮಿಟೆಡ್‌ ಕಂಪನಿಯು ಅಯೋಧ್ಯೆಯ ರಾಮ ಲಲ್ಲಾನ ಕುರಿತು ವಿಡಿಯೋವನ್ನು ಜನವರಿ 2024ರಲ್ಲಿ ಪ್ರಸ್ತುತಿ ಪಡಿಸಿತ್ತು.

 

‘ಪ್ರತಿ ಸ್ವರದಲ್ಲಿ ಸಂಭ್ರಮ, ಆಲಾಪದಲ್ಲಿ ಜೋಗುಳ, ನೂರಾರು ಕಾಲ ಕಾದು ಕುಳಿತ ಜನರಿಗೆ ಎದ್ದು ಕುಣಿದು ಜೈ ಶ್ರೀ ರಾಮ್ ಎನ್ನುತ್ತಾ ಅದ್ಧೂರಿಯಾಗಿ ಆಯೋಧ್ಯೆಗೆ ರಾಮ ಲಲ್ಲಾನನ್ನು ಈ ಹಾಡಿನೊಂದಿಗೆ ಬರ ಮಾಡಿಕೊಳ್ಳುವ ಸಮಯ. ಘರ್ಜಿಸಿ ಹೇಳಿ, ಜೈ ಶ್ರೀ ರಾಮ್!!,’ ಎಂದು ಪ್ರಚುರಪಡಿಸಿರುವುದು ಕಂಪನಿಯ ಸಾಮಾಜಿಕ ಜಾಲತಾಣಗಳಿಂದ ಕಂಡು ಬಂದಿದೆ.

Hot this week

120 ಎಕರೆ ಗೋಮಾಳ ಕಬಳಿಕೆ ಪ್ರಕರಣ; ಕಂದಾಯ ನಿರೀಕ್ಷಕರ ವರದಿಯನ್ನೇ ಮುಚ್ಚಿಟ್ಟ ತಹಶೀಲ್ದಾರ್, ಸಚಿವರ ಒತ್ತಡ?

ಬೆಂಗಳೂರು; ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ ಗ್ರಾಮದ ವಿವಿಧ ಸರ್ವೆ ನಂಬರ್‍‌ಗಳಲ್ಲಿರುವ...

ಕೌನ್ಸಲಿಂಗ್‌ಗೂ ಮುನ್ನವೇ ಪಿಡಿಒಗಳ ವರ್ಗಾವಣೆ; ಹಣ ಕೊಟ್ಟವರಿಗೆ ಆದೇಶ, ಕೊಡದವರಿಗೆ ಕೌನ್ಸಲಿಂಗ್, ಆರೋಪ

ಬೆಂಗಳೂರು; ಪಂಚಾಯ್ತಿ ಅಭಿವೃದ್ದಿ ಅಧಿಕಾರಿಗಳ ವರ್ಗಾವಣೆಯನ್ನು ಕೌನ್ಸಲಿಂಗ್‌ ಮೂಲಕವೇ ನಡೆಸಲಾಗುವುದು ಎಂದು...

ಪಿಟಿಸಿಎಲ್, ಗೋಮಾಳ, ಅರಣ್ಯ ಜಮೀನು ಸ್ವರೂಪ ಮರೆಮಾಚಿ ಪರಿವರ್ತನೆ; ದಿ ಫೈಲ್ ವರದಿ ಬೆನ್ನಲ್ಲೇ ಸರ್ಕಾರದ ಮೆಟ್ಟಿಲೇರಿದ ಕೆಆರ್‍‌ಎಸ್‌

ಬೆಂಗಳೂರು; ಪಿಟಿಸಿಎಲ್,  ಸರ್ಕಾರಿ ಗೋಮಾಳ ಮತ್ತು ಅರಣ್ಯ ಪ್ರದೇಶದ ಜಮೀನುಗಳ ಸ್ವರೂಪವನ್ನೇ...

30 ವರ್ಷಗಳ ನಂತರ ಎಲ್‌ಎಸಿ ಪ್ರಕರಣ ದಾಖಲು; ಸರ್ಕಾರದ ಬೊಕ್ಕಸಕ್ಕೆ 80 ಕೋಟಿ ಆರ್ಥಿಕ ಹೊರೆ

ಬೆಂಗಳೂರು; ಮಂಡ್ಯ ತಾಲೂಕು ಕೊತ್ತತ್ತಿ ಹೋಬಳಿಯ ಗುತ್ತಲು ಗ್ರಾಮದಲ್ಲಿ 30 ವರ್ಷಗಳ...
Please Scan to make Your Contribution

Topics

120 ಎಕರೆ ಗೋಮಾಳ ಕಬಳಿಕೆ ಪ್ರಕರಣ; ಕಂದಾಯ ನಿರೀಕ್ಷಕರ ವರದಿಯನ್ನೇ ಮುಚ್ಚಿಟ್ಟ ತಹಶೀಲ್ದಾರ್, ಸಚಿವರ ಒತ್ತಡ?

ಬೆಂಗಳೂರು; ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ ಗ್ರಾಮದ ವಿವಿಧ ಸರ್ವೆ ನಂಬರ್‍‌ಗಳಲ್ಲಿರುವ...

ಕೌನ್ಸಲಿಂಗ್‌ಗೂ ಮುನ್ನವೇ ಪಿಡಿಒಗಳ ವರ್ಗಾವಣೆ; ಹಣ ಕೊಟ್ಟವರಿಗೆ ಆದೇಶ, ಕೊಡದವರಿಗೆ ಕೌನ್ಸಲಿಂಗ್, ಆರೋಪ

ಬೆಂಗಳೂರು; ಪಂಚಾಯ್ತಿ ಅಭಿವೃದ್ದಿ ಅಧಿಕಾರಿಗಳ ವರ್ಗಾವಣೆಯನ್ನು ಕೌನ್ಸಲಿಂಗ್‌ ಮೂಲಕವೇ ನಡೆಸಲಾಗುವುದು ಎಂದು...

ಪಿಟಿಸಿಎಲ್, ಗೋಮಾಳ, ಅರಣ್ಯ ಜಮೀನು ಸ್ವರೂಪ ಮರೆಮಾಚಿ ಪರಿವರ್ತನೆ; ದಿ ಫೈಲ್ ವರದಿ ಬೆನ್ನಲ್ಲೇ ಸರ್ಕಾರದ ಮೆಟ್ಟಿಲೇರಿದ ಕೆಆರ್‍‌ಎಸ್‌

ಬೆಂಗಳೂರು; ಪಿಟಿಸಿಎಲ್,  ಸರ್ಕಾರಿ ಗೋಮಾಳ ಮತ್ತು ಅರಣ್ಯ ಪ್ರದೇಶದ ಜಮೀನುಗಳ ಸ್ವರೂಪವನ್ನೇ...

30 ವರ್ಷಗಳ ನಂತರ ಎಲ್‌ಎಸಿ ಪ್ರಕರಣ ದಾಖಲು; ಸರ್ಕಾರದ ಬೊಕ್ಕಸಕ್ಕೆ 80 ಕೋಟಿ ಆರ್ಥಿಕ ಹೊರೆ

ಬೆಂಗಳೂರು; ಮಂಡ್ಯ ತಾಲೂಕು ಕೊತ್ತತ್ತಿ ಹೋಬಳಿಯ ಗುತ್ತಲು ಗ್ರಾಮದಲ್ಲಿ 30 ವರ್ಷಗಳ...

ಶೌಚಾಲಯ, ಸ್ನಾನದ ಗೃಹ, ಮೂತ್ರಾಲಯ ಶುಲ್ಕ ವಸೂಲಿ; ಸುಲಭ್‌ ಇಂಟರ್ ನ್ಯಾಷನಲ್‌, ಬಿಬಿಎಂಪಿ ಖಾತೆಗೆ ಹಣ ಜಮೆ ಮಾಡಿದೆಯೇ, ನುಂಗಿದೆಯೇ?

ಬೆಂಗಳೂರು;  ಸುಲಭ್ ಶೌಚಾಲಯ ಮತ್ತು ಸಾರ್ವಜನಿಕ ಮೂತ್ರಾಲಯ  ನಿರ್ವಹಣೆಗೆ ಸಂಬಂಧಿಸಿದಂತೆ ಗುತ್ತಿಗೆದಾರರು...

ಬಿಜೆಪಿ ಅವಧಿಯಲ್ಲಿದ್ದ 120 ಎಕರೆ ಗೋಮಾಳ, ಕಾಂಗ್ರೆಸ್‌ ಅವಧಿಯಲ್ಲಿ ಕಣ್ಮರೆ!; 24 ಕೋಟಿ ಮೌಲ್ಯದ ಜಮೀನು, ಖಾಸಗಿ ವ್ಯಕ್ತಿಗಳ ಪಾಲು?

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ...

Related Articles

Popular Categories

error: Content is protected !!