Thursday | July 16, 2026 |

ರಾಮ್ ಲಲ್ಲಾನ ವಿಡಿಯೋ ಪ್ರಸ್ತುತಿಪಡಿಸಿದ್ದ ಶೀಟೇಲ್ಸ್‌ಗೆ 4(ಜಿ) ವಿನಾಯಿತಿ; ಮತದಾರರ ಜಾಗೃತಿಗೆ 49 ಲಕ್ಷ ವೆಚ್ಚ

ಬೆಂಗಳೂರು; ಫೇಸ್‌ಬುಕ್‌ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಮತದಾರರ ಜಾಗೃತಿ, ಮತದಾರರನ್ನು ಸೆಳೆಯಲು ಶೀತಲ್‌ ಶೆಟ್ಟಿ ಅವರ ಶೀ ಟೇಲ್ಸ್‌ ಎಂಟರ್‌ಟೈನ್‌ಮೆಂಟ್‌ ಪ್ರೈವೈಟ್‌ ಲಿಮಿಟೆಡ್‌ ಸೇವೆ ಪಡೆಯಲು ರಾಜ್ಯ ಕಾಂಗ್ರೆಸ್‌ ಸರ್ಕಾರವು ಮುಂದಾಗಿದೆ.

 

ಶೀ ಟೇಲ್ಸ್‌ ಎಂಟರ್‌ಟೈನ್‌ಮೆಂಟ್‌ ಪ್ರೈವೈಟ್‌ ಲಿಮಿಟೆಡ್‌ನಿಂದ ಮೂರು ತಿಂಗಳವರೆಗೆ ಸೇವೆ ಪಡೆಯಲಿರುವ ಸರ್ಕಾರವು ಇದಕ್ಕಾಗಿ 49.00 ಲಕ್ಷ ರು. ವೆಚ್ಚ ಮಾಡುತ್ತಿದೆ. ಈ ಸಂಬಂಧ 2024ರ ಫೆ.28ರಂದು ಅಧಿಸೂಚನೆ ಹೊರಡಿಸಿದೆ. ಅಧಿಸೂಚನೆ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಅಧಿಸೂಚನೆಯಲ್ಲೇನಿದೆ?

 

ಸಾರ್ವತ್ರಿಕ ಲೋಕಸಭೆ ಚುನಾವಣೆ 2024ರ ಸಂದರ್ಭದಲ್ಲಿ ಮತದಾರರ ಜಾಗೃತಿಗಾಗಿ ಹಾಗೂ ಮತದಾರರನ್ನು ಹಾಗೂ ನಗರವಾಸಿಗಳನ್ನು ಸೆಳೆಯಲು ಇನ್‌ಸ್ಟಾಗ್ರಾಂ, ಫೇಸ್‌ ಬುಕ್‌, ಟ್ವಿಟರ್‌, ಯೂಟ್ಯೂಬ್‌, ಸೋಷಿಯಲ್ ಮೀಡಿಯಾ ಜಾಲತಾಣ ಮಾಧ್ಯಮಗಳ ಮೂಲಕ ವ್ಯಾಪಕ ಪ್ರಚಾರ ಕೈಗೊಳ್ಳಲು ಶೀ ಟೇಲ್ಸ್‌ ಎಂಟರ್‌ಟೈನ್‌ಮೆಂಟ್‌ ಪ್ರೈವೈಟ್‌ ಲಿಮಿಟೆಡ್‌ ಸಂಸ್ಥೆಯ ಸೇವೆಯನ್ನು ಪಡೆಯಲು 49,00,540 ರು. ವೆಚ್ಚದಲ್ಲಿ ಮೂರು ತಿಂಗಳ ಅವಧಿಗೆ 2024ರ ಮಾರ್ಚ್‌ 1ರಿಂದ 2024ರ ಮೇ 31ರವರೆಗೆ ಪಡೆಯಲು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ 1999ರ ಕಲಂ 4(ಜಿ) ಅಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಗೆ ವಿನಾಯಿತಿ ನೀಡಿದೆ.

 

ಇದೇ ಏಪ್ರಿಲ್‌ ಮತ್ತು ಜೂನ್‌ನಲ್ಲಿ ಲೋಕಸಭೆ ಚುನಾವಣೆಗಳು ನಡೆಯಲಿವೆ ಎಂದು ಗೊತ್ತಿದ್ದರೂ ಸಹ ಸರ್ಕಾರವು ಈ ಸಂಬಂಧ ಪೂರ್ವಭಾವಿ ಸಿದ್ಧತೆಗಳನ್ನು ಮಾಡಿಕೊಂಡಿರಲಿಲ್ಲ. ಅಲ್ಲದೇ ಯಾವುದೇ ಟೆಂಡರ್‌ ಆಗಲೀ, ಅಲ್ಪಾವಧಿ ಟೆಂಡರ್‌, ಆಸಕ್ತಿ ವ್ಯಕ್ತಪಡಿಸುವಿಕೆ (ಇಒಐ)ಯನ್ನೂ ಆಹ್ವಾನಿಸಿರಲಿಲ್ಲ ಎಂದು ಗೊತ್ತಾಗಿದೆ.

 

ಮೂಲತಃ ಶೀ ಟೇಲ್ಸ್‌ ಎಂಟರ್‌ಟೈನ್‌ಮೆಂಟ್‌ ಪ್ರೈವೈಟ್‌ ಲಿಮಿಟೆಡ್‌, ಸಿನಿಮಾ ಸೇರಿದಂತೆ ಮನರಂಜನೆ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದೆ. ಮತದಾರರ ಜಾಗೃತಿ ಕುರಿತು ಸರ್ಕಾರದ ಯೋಜನೆಗಳಲ್ಲಿ ತೊಡಗಿಸಿಕೊಂಡಿರುವುದು ಕಂಡುಬಂದಿಲ್ಲ. ಶೀ ಟೇಲ್ಸ್‌ ಎಂಟರ್‌ಟೈನ್‌ಮೆಂಟ್‌ನ ಅಧಿಕೃತ ವೆಬ್‌ಸೈಟ್‌ನಲ್ಲಿಯೂ ಈ ಬಗ್ಗೆ ಯಾವುದೇ ಮಾಹಿತಿ, ವಿವರಗಳಿಲ್ಲ.

 

ಶೀತಲ್‌ ಶ್ರೀಧರ್‌ ಶೆಟ್ಟಿ ಎಂಬುವರು ಶೀ ಟೇಲ್ಸ್‌ ಎಂಟರ್‌ಟೈನ್‌ಮೆಂಟ್‌ ಪ್ರೈವೈಟ್‌ ಲಿಮಿಟೆಡ್‌ನ್ನು ಮುನ್ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

 

ವಿಶೇಷವೆಂದರೇ ಶೀ ಟೇಲ್ಸ್‌ ಎಂಟರ್‌ಟೈನ್‌ಮೆಂಟ್‌ ಪ್ರೈವೈಟ್‌ ಲಿಮಿಟೆಡ್‌ ಕಂಪನಿಯು ಅಯೋಧ್ಯೆಯ ರಾಮ ಲಲ್ಲಾನ ಕುರಿತು ವಿಡಿಯೋವನ್ನು ಜನವರಿ 2024ರಲ್ಲಿ ಪ್ರಸ್ತುತಿ ಪಡಿಸಿತ್ತು.

 

‘ಪ್ರತಿ ಸ್ವರದಲ್ಲಿ ಸಂಭ್ರಮ, ಆಲಾಪದಲ್ಲಿ ಜೋಗುಳ, ನೂರಾರು ಕಾಲ ಕಾದು ಕುಳಿತ ಜನರಿಗೆ ಎದ್ದು ಕುಣಿದು ಜೈ ಶ್ರೀ ರಾಮ್ ಎನ್ನುತ್ತಾ ಅದ್ಧೂರಿಯಾಗಿ ಆಯೋಧ್ಯೆಗೆ ರಾಮ ಲಲ್ಲಾನನ್ನು ಈ ಹಾಡಿನೊಂದಿಗೆ ಬರ ಮಾಡಿಕೊಳ್ಳುವ ಸಮಯ. ಘರ್ಜಿಸಿ ಹೇಳಿ, ಜೈ ಶ್ರೀ ರಾಮ್!!,’ ಎಂದು ಪ್ರಚುರಪಡಿಸಿರುವುದು ಕಂಪನಿಯ ಸಾಮಾಜಿಕ ಜಾಲತಾಣಗಳಿಂದ ಕಂಡು ಬಂದಿದೆ.

Hot this week

35,280 ಚಾಲ್ತಿಯಲ್ಲಿಲ್ಲದ ಬ್ಯಾಂಕ್‌ ಖಾತೆಗಳಲ್ಲಿ 239.66 ಕೋಟಿ; ಅಭಿವೃದ್ಧಿ ಯೋಜನೆಗಳಿಗೆ ಬಳಸದೇ ನಿರ್ಲಕ್ಷ್ಯ, 14.37 ಕೋಟಿ ಬಡ್ಡಿ ನಷ್ಟ

ಬೆಂಗಳೂರು; ರಾಜ್ಯದ ಗ್ರಾಮ ಪಂಚಾಯ್ತಿಗಳು  ಚಾಲ್ತಿಯಲ್ಲೇ ಇಲ್ಲದ 35,280  ಬ್ಯಾಂಕ್‌ ಖಾತೆಗಳಲ್ಲಿ ...

ಸರ್ಕಾರಿ ಲೆಕ್ಕಪತ್ರಗಳ ಮರು ಹೊಂದಾಣಿಕೆಯಲ್ಲಿ ಲೋಪ; ಆದಾಯ, ಸ್ವೀಕೃತಿ, ಬಂಡವಾಳ ವೆಚ್ಚದಲ್ಲಿ ವ್ಯತ್ಯಾಸ, ಕಳವಳ ವ್ಯಕ್ತಪಡಿಸಿದ ಲೆಕ್ಕಪರಿಶೋಧನಾ ಮಹಾನಿರ್ದೇಶಕ

ಬೆಂಗಳೂರು; ಸರ್ಕಾರಿ ಲೆಕ್ಕಪತ್ರಗಳಲ್ಲಿ ಸಂಪೂರ್ಣ ನಿಖರತೆ, ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಖಚಿತಪಡಿಸಬೇಕಿದ್ದ...

ಕಲ್ಲು ಸಕ್ಕರೆ, ಖರ್ಜೂರ ಪ್ರಸಾದ; ದುಪ್ಪಟ್ಟು ದರದಲ್ಲಿ ಮಾರಾಟ, ಭಕ್ತರಿಗೆ ಅನಗತ್ಯ ಆರ್ಥಿಕ ಹೊರೆ, ನ್ಯಾಯಾಲಯ ಆದೇಶವೂ ಉಲ್ಲಂಘನೆ

ಬೆಂಗಳೂರು; ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯ ಪ್ರಾಧಿಕಾರವು ನಿಗದಿತ ದರಕ್ಕಿಂತಲೂ ಹೆಚ್ಚುವರಿ ಅಂದರೇ...

ನ್ಯಾಕ್‌, ಎನ್‌ಐಆರ್‍‌ಎಫ್‌ ಮಾನದಂಡ; ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟ ಆತಂಕದ ಪ್ರವೃತ್ತಿ, ಆಯೋಗ ಕಳವಳ

ಬೆಂಗಳೂರು; ನ್ಯಾಕ್‌ ಮತ್ತು ಎನ್‌ಐಆರ್‍‌ಎಫ್‌ ಪ್ರಕಾರ ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟವು...

ಎಬಿ-ಎಆರ್‍‌ಕೆ ಯೋಜನೆಯಲ್ಲಿ ಅಕ್ರಮ; ಜಿಮ್ಸ್‌ ಸಿಬ್ಬಂದಿ, ಖಾಸಗಿ ಆಸ್ಪತ್ರೆ ಶಾಮೀಲು, ರಾಜೀನಾಮೆ ನೀಡಿದ್ದ ವೈದ್ಯರ ಹೆಸರಿನಲ್ಲೂ ನಕಲಿ ಓಆರ್‍‌ಎಸ್‌ ಸೃಜನೆ; ತನಿಖಾ ವರದಿ

ಬೆಂಗಳೂರು; ಆಯುಷ್ಮಾನ್‌ ಭಾರತ್ ಮತ್ತು  ಎಆರ್‍‌ಕೆ ಯೋಜನೆಯಡಿಯಲ್ಲಿ  ಕಲ್ಬುರ್ಗಿ ಜಿಲ್ಲಾ  ಆಸ್ಪತ್ರೆಯಿಂದ...
Please Scan to make Your Contribution

Topics

35,280 ಚಾಲ್ತಿಯಲ್ಲಿಲ್ಲದ ಬ್ಯಾಂಕ್‌ ಖಾತೆಗಳಲ್ಲಿ 239.66 ಕೋಟಿ; ಅಭಿವೃದ್ಧಿ ಯೋಜನೆಗಳಿಗೆ ಬಳಸದೇ ನಿರ್ಲಕ್ಷ್ಯ, 14.37 ಕೋಟಿ ಬಡ್ಡಿ ನಷ್ಟ

ಬೆಂಗಳೂರು; ರಾಜ್ಯದ ಗ್ರಾಮ ಪಂಚಾಯ್ತಿಗಳು  ಚಾಲ್ತಿಯಲ್ಲೇ ಇಲ್ಲದ 35,280  ಬ್ಯಾಂಕ್‌ ಖಾತೆಗಳಲ್ಲಿ ...

ಸರ್ಕಾರಿ ಲೆಕ್ಕಪತ್ರಗಳ ಮರು ಹೊಂದಾಣಿಕೆಯಲ್ಲಿ ಲೋಪ; ಆದಾಯ, ಸ್ವೀಕೃತಿ, ಬಂಡವಾಳ ವೆಚ್ಚದಲ್ಲಿ ವ್ಯತ್ಯಾಸ, ಕಳವಳ ವ್ಯಕ್ತಪಡಿಸಿದ ಲೆಕ್ಕಪರಿಶೋಧನಾ ಮಹಾನಿರ್ದೇಶಕ

ಬೆಂಗಳೂರು; ಸರ್ಕಾರಿ ಲೆಕ್ಕಪತ್ರಗಳಲ್ಲಿ ಸಂಪೂರ್ಣ ನಿಖರತೆ, ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಖಚಿತಪಡಿಸಬೇಕಿದ್ದ...

ಕಲ್ಲು ಸಕ್ಕರೆ, ಖರ್ಜೂರ ಪ್ರಸಾದ; ದುಪ್ಪಟ್ಟು ದರದಲ್ಲಿ ಮಾರಾಟ, ಭಕ್ತರಿಗೆ ಅನಗತ್ಯ ಆರ್ಥಿಕ ಹೊರೆ, ನ್ಯಾಯಾಲಯ ಆದೇಶವೂ ಉಲ್ಲಂಘನೆ

ಬೆಂಗಳೂರು; ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯ ಪ್ರಾಧಿಕಾರವು ನಿಗದಿತ ದರಕ್ಕಿಂತಲೂ ಹೆಚ್ಚುವರಿ ಅಂದರೇ...

ನ್ಯಾಕ್‌, ಎನ್‌ಐಆರ್‍‌ಎಫ್‌ ಮಾನದಂಡ; ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟ ಆತಂಕದ ಪ್ರವೃತ್ತಿ, ಆಯೋಗ ಕಳವಳ

ಬೆಂಗಳೂರು; ನ್ಯಾಕ್‌ ಮತ್ತು ಎನ್‌ಐಆರ್‍‌ಎಫ್‌ ಪ್ರಕಾರ ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟವು...

ಜಿಎಸ್‌ಡಿಪಿ 23,34,000 ಕೋಟಿ, ಉನ್ನತ ಶಿಕ್ಷಣಕ್ಕಾಗಿ ಕೇವಲ 5,646 ಕೋಟಿ ರು ಖರ್ಚು; ಇತರೆ ರಾಜ್ಯಗಳಿಗಿಂತ ಕೆಳಗಿಳಿದ ಕರ್ನಾಟಕ

ಬೆಂಗಳೂರು; ಸಿದ್ದರಾಮಯ್ಯ ಅವರು ಎರಡನೇ ಬಾರಿ ಮುಖ್ಯಮಂತ್ರಿ ಆಗಿದ್ದ ಮೊದಲನೇ ಆರ್ಥಿಕ...

Related Articles

Popular Categories

error: Content is protected !!