Wednesday | June 17, 2026 |

ಮತದಾರರಿಗೆ ಲಂಚ, ಆಮಿಷ ಆರೋಪ; ಡಾ ಕೆ ಸುಧಾಕರ್‍‌ ವಿರುದ್ಧ ಎಫ್‌ಐಆರ್‍‌, 4.8 ಕೋಟಿ ನಗದು ವಶ

ಬೆಂಗಳೂರು; ಮತದಾರರಿಗೆ ಲಂಚ, ಆಮಿಷ ಮತ್ತು ಪ್ರಭಾವ ಬೀರಿದ್ದಾರೆ ಎಂಬ ಆರೋಪದಡಿಯಲ್ಲಿ ಚಿಕ್ಕಬಳ್ಳಾಪುರ ಸಂಸದೀಯ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಮಾಜಿ ಸಚಿವ ಡಾ ಕೆ ಸುಧಾಕರ್‍‌ ಅವರ ವಿರುದ್ಧ ಎಫ್‌ಐಆರ್‍‌ ದಾಖಲಾಗಿದೆ.

 

ಮತದಾರರಿಗೆ ಆಮಿಷ ಮತ್ತು ಅನಗತ್ಯ ಪ್ರಭಾವ ಆರೋಪಕ್ಕಾಗಿ ಜನತಾ ಪ್ರಾತಿನಿಧ್ಯ ಕಾಯ್ದೆ ಮತ್ತು ಐಪಿಸಿಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಮಾದನಾಯಕನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದೆ.

 

ಎಫ್‌ಐಆರ್‍‌ ಪ್ರತಿ ಮತ್ತು ಈ ಸಂಬಂಧ ಸಲ್ಲಿಕೆಯಾಗಿರುವ ದೂರಿನ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಸುಧಾಕರ್‍‌ ಅವರ ಆಪ್ತರು ಎನ್ನಲಾದ ಮಾದಾವರ ಗೋವಿಂದಪ್ಪ ನಿವಾಸದ ಮೇಲೆ ಐಟಿ ದಾಳಿ ನಡೆದಿತ್ತು. ಈ ವೇಳೆ 4.8 ಕೋಟಿ ರು. ಮೌಲ್ಯದ ನಗದನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

 

ಡಾ ಕೆ ಸುಧಾಕರ್‍‌ ವಿರುದ್ದ ಆರ್‍‌ಪಿ ಕಾಯ್ದೆ 1951ರ ಅಡಿಯಲ್ಲಿ ಅನುಚಿತ ಪ್ರಭಾವ, ಲಂಚ ಮತ್ತು ಭ್ರಷ್ಟಾಚಾರದ ಪ್ರಯತ್ನಕ್ಕಾಗಿ ಕಲಂ 171 ಬಿ 171ಸಿ 171 ಇ, 171 ಎಫ್‌ ಭಾರತೀಯ ದಂಡ ಸಂಹಿತೆ ಹಾಗೂ ಕಲಂ 123 ಆರ್‍‌ಪಿ ಕಾಯ್ದೆ 1951ರ ರೀತಿ ಪ್ರಕರಣವನ್ನು ದಾಖಲಿಸಿಕೊಂಡಿರುವುದು ಎಫ್‌ಐಆರ್‍‌ನಿಂದ ತಿಳಿದು ಬಂದಿದೆ.

 

ಬಿಜೆಪಿಯ ಮಾಜಿ ಜಿಲ್ಲಾಧ್ಯಕ್ಷರೂ ಆಗಿರುವ ಗೋವಿಂದಪ್ಪನವರ ನೆಲಮಂಗಲದ ಮನೆಯಲ್ಲಿ ಹಣ ಇದೆ ಎಂದು ಖಚಿತಪಡಿಸಿಕೊಂಡ ನಂತರ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. 10 ಮಂದಿ ಐಟಿ ಅಧಿಕಾರಿಗಳ ತಂಡ ಮನೆಯನ್ನು ಪರಿಶೀಲಿಸಿದೆ ಎಂದು ಗೊತ್ತಾಗಿದೆ.

 

ದಾಳಿ ವೇಳೆ ಕೋಟ್ಯಾಂತರ ರೂಪಾಯಿ ನಗದು ಹಣ ಹಾಗೂ ಚಿನ್ನಾಭರಣೆ ಪತ್ತೆಯಾಗಿದೆ. ನೋಟು ಎಣಿಕೆ ವೇಳೆ ಮನೆಯಲ್ಲಿ ದಾಖಲೆ ಇಲ್ಲದೆ ಬರೋಬ್ಬರಿ 4 ಕೋಟಿ 80 ಲಕ್ಷ ರೂ. ಹಣವನ್ನು ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿರುವುದು ತಿಳಿದು ಬಂದಿದೆ.

 

ಮತದಾರರಿಗೆ ಲಂಚ ನೀಡಲು ಮತ್ತು ಚುನಾವಣಾ ಸಮಯದಲ್ಲಿ ದುರುಪಯೋಗಪಡಿಸಿಕೊಳ್ಳುವುದಕ್ಕಾಗಿ 10 ಕೋಟಿ ರು.ಗಳನ್ನು ಸಂಗ್ರಹಿಸಲಾಗಿದೆ ಎಂದು ಚಿಕ್ಕಬಳ್ಳಾಪುರ ನೋಡಲ್‌ ಅಧಿಕಾರಿ ಐಎಎಸ್‌ ಮುನೀಶ್‌ ಮೌದ್ಗಿಲ್‌ ಅವರ ಮೊಬೈಲ್‌ಗೆ ದೂರು ಬಂದಿತ್ತು.

 

ಮೌದ್ಗಿಲ್‌ ಅವರ ಸೂಚನೆ ಮೇರೆಗೆ ಫ್ಲೈಯಿಂಗ್‌ ಸ್ಕ್ಯಾಡ್‌ನ ಅಧಿಕಾರಿ ದಶರಥ್‌ ವಿ ಕುಂಬಾರ್‍‌ ಎಂಬುವರು ಸ್ಥಳವನ್ನು ಪರಿಶೀಲಿಸಿ ಮಾಹಿತಿಯನ್ನು ಖಚಿತಪಡಿಸಿದ್ದರು. ಯಲಹಂಕ ವಿಧಾನಸಭೆ ಕ್ಷೇತ್ರದ ಎಂಸಿಸಿ ನೋಡಲ್ ಅಧಿಕಾರಿಗ ಮಾಹಿತಿ ನೀಡಲಾಗಿತ್ತು.

 

ನಂತರ ಆದಾಯ ತೆರಿಗೆ ಅಧಿಕಾರಿಗಳ ನೆರವಿನೊಂದಿಗೆ ಶೋಧ ನಡೆಸಲಾಗಿತ್ತು. ಈ ವೇಳೆ 4.8 ಕೋಟಿ ರು.ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂಬುದು ಎಫ್‌ಐಆರ್‍‌ನಿಂದ ಗೊತ್ತಾಗಿದೆ.

Hot this week

ಸಿದ್ದರಾಮಯ್ಯರಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್‌ನಲ್ಲಿ ಲೋಪ!; ಬಹಿರಂಗವಾಗದ ಹೈಕ್ರಾಫ್ಟ್ ಏವಿಯೇಷನ್ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್‌ನ ವರದಿ

ಬೆಂಗಳೂರು; ಸಿದ್ದರಾಮಯ್ಯ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‍‌, ಅನುಮೋದಿತ ಸ್ಥಳದಲ್ಲಿ ಇಳಿಯದೇ ಬೇರೆ...

ಪಠ್ಯಪುಸ್ತಕ ಪರಿಷ್ಕರಣೆ; ರಾಜಕೀಯ ನಾಯಕತ್ವ ಸ್ಥಾಪಿಸಿದ ತಾತ್ಕಾಲಿಕ ಸಮಿತಿಗಳಿಂದ ನಿರ್ವಹಣೆಗೆ ಆಯೋಗ ಆಕ್ಷೇಪ

ಬೆಂಗಳೂರು; ಕರ್ನಾಟಕದಲ್ಲಿ ಪಠ್ಯಕ್ರಮ ಅಭಿವೃದ್ಧಿ, ಪಠ್ಯಪುಸ್ತಕ ತಯಾರಿಕೆ ಮತ್ತು ಇತರೆ ಸಂಬಂಧಿತ...
Please Scan to make Your Contribution

Topics

ಸಿದ್ದರಾಮಯ್ಯರಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್‌ನಲ್ಲಿ ಲೋಪ!; ಬಹಿರಂಗವಾಗದ ಹೈಕ್ರಾಫ್ಟ್ ಏವಿಯೇಷನ್ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್‌ನ ವರದಿ

ಬೆಂಗಳೂರು; ಸಿದ್ದರಾಮಯ್ಯ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‍‌, ಅನುಮೋದಿತ ಸ್ಥಳದಲ್ಲಿ ಇಳಿಯದೇ ಬೇರೆ...

ಪಠ್ಯಪುಸ್ತಕ ಪರಿಷ್ಕರಣೆ; ರಾಜಕೀಯ ನಾಯಕತ್ವ ಸ್ಥಾಪಿಸಿದ ತಾತ್ಕಾಲಿಕ ಸಮಿತಿಗಳಿಂದ ನಿರ್ವಹಣೆಗೆ ಆಯೋಗ ಆಕ್ಷೇಪ

ಬೆಂಗಳೂರು; ಕರ್ನಾಟಕದಲ್ಲಿ ಪಠ್ಯಕ್ರಮ ಅಭಿವೃದ್ಧಿ, ಪಠ್ಯಪುಸ್ತಕ ತಯಾರಿಕೆ ಮತ್ತು ಇತರೆ ಸಂಬಂಧಿತ...

ಮಾನ್ಸೂನ್ ಅಧಿವೇಶನವೋ, ವಿಸ್ತರಿಸಿದ ಅಧಿವೇಶನವೋ: ಸಚಿವ ಸಂಪುಟ ಮಾರ್ಗದರ್ಶನ ಕೋರಿದ ಸಂಸದೀಯ ಇಲಾಖೆ

ಬೆಂಗಳೂರು; ಕರ್ನಾಟಕ ವಿಧಾನಸಭೆ ಮತ್ತು ಕರ್ನಾಟಕ ವಿಧಾನ ಪರಿಷತ್ತಿನ ಅಧಿವೇಶನ ಅನಿರ್ದಿಷ್ಟಾವಧಿಗೆ...

ಆರ್ಥಿಕ ಬಿಕ್ಕಟ್ಟು; ಶಿಕ್ಷಕರ ನೇಮಕಾತಿ, ವೃತ್ತಿಪರತೆ ಅಭಿವೃದ್ಧಿ ವೆಚ್ಚಕ್ಕೆ ತಡೆಹಿಡಿದಿತ್ತೇ ಸರ್ಕಾರ?

ಬೆಂಗಳೂರು; ರಾಜ್ಯದ ಹೆಚ್ಚಿನ ಸರ್ಕಾರಿ ಶಾಲೆಗಳು ಆರ್‍‌ಟಿಇ ಕಾಯ್ದೆಯು ಭೌತಿಕ ಮೂಲಸೌಕರ್ಯಗಳು...

Related Articles

Popular Categories

error: Content is protected !!