Tuesday | May 5, 2026 |

ಮತದಾರರಿಗೆ ಲಂಚ, ಆಮಿಷ ಆರೋಪ; ಡಾ ಕೆ ಸುಧಾಕರ್‍‌ ವಿರುದ್ಧ ಎಫ್‌ಐಆರ್‍‌, 4.8 ಕೋಟಿ ನಗದು ವಶ

ಬೆಂಗಳೂರು; ಮತದಾರರಿಗೆ ಲಂಚ, ಆಮಿಷ ಮತ್ತು ಪ್ರಭಾವ ಬೀರಿದ್ದಾರೆ ಎಂಬ ಆರೋಪದಡಿಯಲ್ಲಿ ಚಿಕ್ಕಬಳ್ಳಾಪುರ ಸಂಸದೀಯ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಮಾಜಿ ಸಚಿವ ಡಾ ಕೆ ಸುಧಾಕರ್‍‌ ಅವರ ವಿರುದ್ಧ ಎಫ್‌ಐಆರ್‍‌ ದಾಖಲಾಗಿದೆ.

 

ಮತದಾರರಿಗೆ ಆಮಿಷ ಮತ್ತು ಅನಗತ್ಯ ಪ್ರಭಾವ ಆರೋಪಕ್ಕಾಗಿ ಜನತಾ ಪ್ರಾತಿನಿಧ್ಯ ಕಾಯ್ದೆ ಮತ್ತು ಐಪಿಸಿಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಮಾದನಾಯಕನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದೆ.

 

ಎಫ್‌ಐಆರ್‍‌ ಪ್ರತಿ ಮತ್ತು ಈ ಸಂಬಂಧ ಸಲ್ಲಿಕೆಯಾಗಿರುವ ದೂರಿನ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಸುಧಾಕರ್‍‌ ಅವರ ಆಪ್ತರು ಎನ್ನಲಾದ ಮಾದಾವರ ಗೋವಿಂದಪ್ಪ ನಿವಾಸದ ಮೇಲೆ ಐಟಿ ದಾಳಿ ನಡೆದಿತ್ತು. ಈ ವೇಳೆ 4.8 ಕೋಟಿ ರು. ಮೌಲ್ಯದ ನಗದನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

 

ಡಾ ಕೆ ಸುಧಾಕರ್‍‌ ವಿರುದ್ದ ಆರ್‍‌ಪಿ ಕಾಯ್ದೆ 1951ರ ಅಡಿಯಲ್ಲಿ ಅನುಚಿತ ಪ್ರಭಾವ, ಲಂಚ ಮತ್ತು ಭ್ರಷ್ಟಾಚಾರದ ಪ್ರಯತ್ನಕ್ಕಾಗಿ ಕಲಂ 171 ಬಿ 171ಸಿ 171 ಇ, 171 ಎಫ್‌ ಭಾರತೀಯ ದಂಡ ಸಂಹಿತೆ ಹಾಗೂ ಕಲಂ 123 ಆರ್‍‌ಪಿ ಕಾಯ್ದೆ 1951ರ ರೀತಿ ಪ್ರಕರಣವನ್ನು ದಾಖಲಿಸಿಕೊಂಡಿರುವುದು ಎಫ್‌ಐಆರ್‍‌ನಿಂದ ತಿಳಿದು ಬಂದಿದೆ.

 

ಬಿಜೆಪಿಯ ಮಾಜಿ ಜಿಲ್ಲಾಧ್ಯಕ್ಷರೂ ಆಗಿರುವ ಗೋವಿಂದಪ್ಪನವರ ನೆಲಮಂಗಲದ ಮನೆಯಲ್ಲಿ ಹಣ ಇದೆ ಎಂದು ಖಚಿತಪಡಿಸಿಕೊಂಡ ನಂತರ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. 10 ಮಂದಿ ಐಟಿ ಅಧಿಕಾರಿಗಳ ತಂಡ ಮನೆಯನ್ನು ಪರಿಶೀಲಿಸಿದೆ ಎಂದು ಗೊತ್ತಾಗಿದೆ.

 

ದಾಳಿ ವೇಳೆ ಕೋಟ್ಯಾಂತರ ರೂಪಾಯಿ ನಗದು ಹಣ ಹಾಗೂ ಚಿನ್ನಾಭರಣೆ ಪತ್ತೆಯಾಗಿದೆ. ನೋಟು ಎಣಿಕೆ ವೇಳೆ ಮನೆಯಲ್ಲಿ ದಾಖಲೆ ಇಲ್ಲದೆ ಬರೋಬ್ಬರಿ 4 ಕೋಟಿ 80 ಲಕ್ಷ ರೂ. ಹಣವನ್ನು ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿರುವುದು ತಿಳಿದು ಬಂದಿದೆ.

 

ಮತದಾರರಿಗೆ ಲಂಚ ನೀಡಲು ಮತ್ತು ಚುನಾವಣಾ ಸಮಯದಲ್ಲಿ ದುರುಪಯೋಗಪಡಿಸಿಕೊಳ್ಳುವುದಕ್ಕಾಗಿ 10 ಕೋಟಿ ರು.ಗಳನ್ನು ಸಂಗ್ರಹಿಸಲಾಗಿದೆ ಎಂದು ಚಿಕ್ಕಬಳ್ಳಾಪುರ ನೋಡಲ್‌ ಅಧಿಕಾರಿ ಐಎಎಸ್‌ ಮುನೀಶ್‌ ಮೌದ್ಗಿಲ್‌ ಅವರ ಮೊಬೈಲ್‌ಗೆ ದೂರು ಬಂದಿತ್ತು.

 

ಮೌದ್ಗಿಲ್‌ ಅವರ ಸೂಚನೆ ಮೇರೆಗೆ ಫ್ಲೈಯಿಂಗ್‌ ಸ್ಕ್ಯಾಡ್‌ನ ಅಧಿಕಾರಿ ದಶರಥ್‌ ವಿ ಕುಂಬಾರ್‍‌ ಎಂಬುವರು ಸ್ಥಳವನ್ನು ಪರಿಶೀಲಿಸಿ ಮಾಹಿತಿಯನ್ನು ಖಚಿತಪಡಿಸಿದ್ದರು. ಯಲಹಂಕ ವಿಧಾನಸಭೆ ಕ್ಷೇತ್ರದ ಎಂಸಿಸಿ ನೋಡಲ್ ಅಧಿಕಾರಿಗ ಮಾಹಿತಿ ನೀಡಲಾಗಿತ್ತು.

 

ನಂತರ ಆದಾಯ ತೆರಿಗೆ ಅಧಿಕಾರಿಗಳ ನೆರವಿನೊಂದಿಗೆ ಶೋಧ ನಡೆಸಲಾಗಿತ್ತು. ಈ ವೇಳೆ 4.8 ಕೋಟಿ ರು.ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂಬುದು ಎಫ್‌ಐಆರ್‍‌ನಿಂದ ಗೊತ್ತಾಗಿದೆ.

Hot this week

ಅನುದಾನ ಬಿಡುಗಡೆಯಾಗಿದ್ದರೂ ಪೂರ್ಣಗೊಳ್ಳದ ಕಾಮಗಾರಿ; ತನಿಖಾ ವರದಿಗೆ ಮೆತ್ತಿಕೊಂಡ ಧೂಳು, ಕ್ರಮಕೈಗೊಳ್ಳದ ಸಚಿವ

ಬೆಂಗಳೂರು; ತುಮಕೂರು ಜಿಲ್ಲೆಯ ಶಿರಾ ಪಟ್ಟಣದಲ್ಲಿರುವ ಕಸ್ತೂರಿ ರಂಗಪ್ಪ ನಾಯಕ ಕೋಟೆಯ...

ಧರ್ಮಸ್ಥಳ ಪ್ರಕರಣಗಳ ತನಿಖೆ; ಎಸ್‌ಐಟಿ ವರದಿ ಪ್ರತಿ ಒದಗಿಸದ ಸರ್ಕಾರ, ಗೃಹ ಇಲಾಖೆ ಶಾಖೆಯಲ್ಲಿ ಸಭೆ ನಡವಳಿಯೂ ಲಭ್ಯವಿಲ್ಲ

ಬೆಂಗಳೂರು: ಧರ್ಮಸ್ಥಳದ ಸುತ್ತಮುತ್ತ ನಡೆದಿರುವ ಮಹಿಳೆಯರು ಮತ್ತು ಯುವತಿಯರ ಮೇಲಿನ ದೌರ್ಜನ್ಯ/ಕೊಲೆ,...

ವೈಟ್‌ ಟ್ಯಾಪಿಂಗ್‌ ಗೋಲ್ಮಾಲ್‌; ಅಗತ್ಯವಿರದಿದ್ದರೂ ಕಾಮಗಾರಿ, ತಾಂತ್ರಿಕ ಪರಿಶೀಲನೆಯಿಲ್ಲದಿದ್ದರೂ ಹೆಚ್ಚುವರಿ ವೆಚ್ಚ, ಗುತ್ತಿಗೆದಾರರಿಗೆ ಲಾಭ

ಬೆಂಗಳೂರು;  ವೈಟ್‌ ಟ್ಯಾಪಿಂಗ್ ಅಗತ್ಯವಿಲ್ಲದಿದ್ದರೂ  ಕಾಮಗಾರಿ ಆರಂಭಿಸಿದ ನಂತರ ತಾಂತ್ರಿಕ ಮಂಜೂರಾತಿ...
Please Scan to make Your Contribution

Topics

ಅನುದಾನ ಬಿಡುಗಡೆಯಾಗಿದ್ದರೂ ಪೂರ್ಣಗೊಳ್ಳದ ಕಾಮಗಾರಿ; ತನಿಖಾ ವರದಿಗೆ ಮೆತ್ತಿಕೊಂಡ ಧೂಳು, ಕ್ರಮಕೈಗೊಳ್ಳದ ಸಚಿವ

ಬೆಂಗಳೂರು; ತುಮಕೂರು ಜಿಲ್ಲೆಯ ಶಿರಾ ಪಟ್ಟಣದಲ್ಲಿರುವ ಕಸ್ತೂರಿ ರಂಗಪ್ಪ ನಾಯಕ ಕೋಟೆಯ...

ಧರ್ಮಸ್ಥಳ ಪ್ರಕರಣಗಳ ತನಿಖೆ; ಎಸ್‌ಐಟಿ ವರದಿ ಪ್ರತಿ ಒದಗಿಸದ ಸರ್ಕಾರ, ಗೃಹ ಇಲಾಖೆ ಶಾಖೆಯಲ್ಲಿ ಸಭೆ ನಡವಳಿಯೂ ಲಭ್ಯವಿಲ್ಲ

ಬೆಂಗಳೂರು: ಧರ್ಮಸ್ಥಳದ ಸುತ್ತಮುತ್ತ ನಡೆದಿರುವ ಮಹಿಳೆಯರು ಮತ್ತು ಯುವತಿಯರ ಮೇಲಿನ ದೌರ್ಜನ್ಯ/ಕೊಲೆ,...

ವೈಟ್‌ ಟ್ಯಾಪಿಂಗ್‌ ಗೋಲ್ಮಾಲ್‌; ಅಗತ್ಯವಿರದಿದ್ದರೂ ಕಾಮಗಾರಿ, ತಾಂತ್ರಿಕ ಪರಿಶೀಲನೆಯಿಲ್ಲದಿದ್ದರೂ ಹೆಚ್ಚುವರಿ ವೆಚ್ಚ, ಗುತ್ತಿಗೆದಾರರಿಗೆ ಲಾಭ

ಬೆಂಗಳೂರು;  ವೈಟ್‌ ಟ್ಯಾಪಿಂಗ್ ಅಗತ್ಯವಿಲ್ಲದಿದ್ದರೂ  ಕಾಮಗಾರಿ ಆರಂಭಿಸಿದ ನಂತರ ತಾಂತ್ರಿಕ ಮಂಜೂರಾತಿ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕದಲ್ಲಿ ಡಿಸಿಎಂ ಮೇಲುಗೈ, ಜಾರಕಿಹೊಳಿ ಮೌನ; ಕೆಟ್ಟ ಪೂರ್ವ ನಿದರ್ಶನಕ್ಕೆ ನಾಂದಿ ಹಾಡಿದ ಸಿಎಂ

ಬೆಂಗಳೂರು;  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿರುವ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ...

ಕಲ್ಬುರ್ಗಿ ಡಿಸಿಸಿ ಬ್ಯಾಂಕ್‌ನಲ್ಲಿ ಬಹು ಕೋಟಿ ಅಕ್ರಮ; ತನಿಖೆಗೆ ಮುಂದಾಗದ ಸರ್ಕಾರ, ತೆವಳುತ್ತಿದೆ ಕಡತ

ಬೆಂಗಳೂರು;  ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ...

Related Articles

Popular Categories

error: Content is protected !!