Thursday | March 26, 2026 |

16,625 ಕೆರೆಗಳಲ್ಲಿ ಶೇಕಡ 30ಕ್ಕಿಂತಲೂ ಕಡಿಮೆ ಪ್ರಮಾಣದ ನೀರು; ಜನ, ಜಾನುವಾರುಗಳಿಗೆ ಸಂಕಷ್ಟ

Support THE-FILE

spot_img

ಬೆಂಗಳೂರು; ತೀವ್ರ ಬರಗಾಲಕ್ಕೆ ತುತ್ತಾಗಿರುವ ರಾಜ್ಯದಲ್ಲಿ ಹನಿ ನೀರಿಗೂ ತತ್ವಾರ ಶುರುವಾಗಿದೆ. ಇದರ ಮಧ್ಯೆಯೇ ರಾಜ್ಯದ 16,625 ಕೆರೆಗಳಲ್ಲಿ ಶೇಕಡ 30ಕ್ಕಿಂತಲೂ ಕಡಿಮೆ ಪ್ರಮಾಣದ ನೀರಿದೆ. ಹೀಗಾಗಿ ನಗರ ಪ್ರದೇಶಗಳನ್ನೂ ಒಳಗೊಂಡಂತೆ ಕೆರೆ ಸುತ್ತಮುತ್ತಲಿನ ಜನ-ಜಾನುವಾರುಗಳಿಗೆ ಕುಡಿಯಲು ನೀರಿಲ್ಲದಂತಾಗುವ ಪರಿಸ್ಥಿತಿ ತಲೆದೋರಿದೆ.

 

ಕೆರೆಗಳಲ್ಲಿ ನೀರು ಖಾಲಿ ಆಗುತ್ತಿರುವ ಕುರಿತು ಅಭಿವೃದ್ಧಿ ಆಯುಕ್ತರಾದ ಡಾ ಶಾಲಿನಿ ರಜನೀಶ್‌ ಅವರ ಅಧ್ಯಕ್ಷತೆಯಲ್ಲಿ ನಡೆದಿದ್ದ ಹವಮಾನ ಅವಲೋಕನ ಸಮಿತಿ ಸಭೆಯಲ್ಲಿ ಕೆರೆಗಳಲ್ಲಿನ ನೀರಿನ ಪರಿಸ್ಥಿತಿ ಕುರಿತು ಚರ್ಚೆಯಾಗಿದೆ. 2024ರ ಮಾರ್ಚ್‌ 28ರಂದು ನಡೆದಿದ್ದ ಸಭೆಯ ನಡವಳಿಗಳು ‘ದಿ ಫೈಲ್‌’ ಗೆ ಲಭ್ಯವಾಗಿದೆ.

 

ಮುಂಗಾರಿಗಿಂತ ಮುಂಚಿತವಾಗಿ ಕೆರೆಗಳಿಗೆ ಸಾಕಷ್ಟು ಮಳೆ ನೀರು ಸಂಗ್ರಹಣೆ ಮಾಡಲು ಅಗತ್ಯವಿರುವ ಎಲ್ಲಾ ಕಾಮಗಾರಿಗಳನ್ನು ವಿವಿಧ ಇಲಾಖೆಗಳ ಯೋಜನೆಗಳಡಿಯಲ್ಲಿ ಕೈಗೆತ್ತಿಕೊಳ್ಳಬೇಕು ಎಂದು ಡಾ ಶಾಲಿನಿ ರಜನೀಶ್‌ ಅವರು 2024ರ ಮಾರ್ಚ್‌ 30ರಂದು ಎಲ್ಲಾ ಇಲಾಖೆಗಳ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ.

 

ರಾಜ್ಯದಲ್ಲಿ ಜಿಲ್ಲಾ ಪಂಚಾಯ್ತಿಗಳ ವ್ಯಾಪ್ತಿಯಲ್ಲಿ 12,657, ಸಣ್ಣ ನೀರಾವರಿ ಇಲಾಖೆಯಲ್ಲಿ 3,252, ಜಲಸಂಪನ್ಮೂಲ ಇಲಾಖೆಯಲ್ಲಿ 85, ಪೌರಾಡಳಿತ ಇಲಾಖೆ ವ್ಯಾಪ್ತಿಯಲ್ಲಿ 248, ಕರ್ನಾಟಕ ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿ 377, ಕೆಪಿಸಿಎಲ್‌ ವ್ಯಾಪ್ತಿಯಲ್ಲಿ 6 ಕೆರೆ ಸೇರಿದಂತೆ ಒಟ್ಟಾರೆ 16,625 ಕೆರೆಗಳಿವೆ. ಈ ಕೆರೆಗಳಲ್ಲಿ ಸುಮಾರು ಶೇಕಡಾ 30ಕ್ಕಿಂತಲೂ ಕಡಿಮೆ ಪ್ರಮಾಣದ ನೀರಿದೆ ಎಂದು ಪತ್ರದಲ್ಲಿ ವಿವರಿಸಲಾಗಿದೆ.

 

ಕರ್ನಾಟಕ ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿನ ಕೆರೆಗಳ ಪೈಕಿ ಚಿತ್ರದುರ್ಗದಲ್ಲಿ 25, ಕೋಲಾರದಲ್ಲಿ 15, ಶಿವಮೊಗ್ಗದಲ್ಲಿ 75, ತುಮಕೂರಿನಲ್ಲಿ 27, ಉತ್ತರ ಕನ್ನಡದಲ್ಲಿ 28 ಕೆರೆಗಳಿವೆ. ಈ ಕೆರೆಗಳಲ್ಲಿಯೂ ಶೇ.30ಕ್ಕಿಂತಲೂ ಕಡಿಮೆ ನೀರಿದೆ ಎಂಬುದು ಪತ್ರದಿಂದ ಗೊತ್ತಾಗಿದೆ.

 

2023ರ ಡಿಸೆಂಬರ್‍‌ ಅಂತ್ಯಕ್ಕೆ ರಾಜ್ಯದ ಸುಮಾರು 1,288ಕ್ಕೂ ಹೆಚ್ಚು ಕೆರೆಗಳಲ್ಲಿ ಶೇ.30ರಷ್ಟು ಮಾತ್ರ ನೀರಿತ್ತು. ಇದರಲ್ಲಿ 425ಕ್ಕೂ ಹೆಚ್ಚು ಕೆರೆಗಳಲ್ಲಿ ಒಂದು ಹನಿಯೂ ನೀರಿರಲಿಲ್ಲ. 1033 ಕೆರೆಗಳಲ್ಲಿ ಶೇ.31 ರಿಂದ 50 ರಷ್ಟು ನೀರಿತ್ತು. 760 ಕೆರೆಯಲ್ಲಿ ಶೇ.51 ರಿಂದ 99 ಭಾಗ ನೀರಿತ್ತು.

 

ತುಮಕೂರು ಜಿಲ್ಲೆಯಲ್ಲಿ 371 ಕೆರೆಗಳಿವೆ. ಇದರಲ್ಲಿ ಡಿಸೆಂಬರ್‍‌ ಅಂತ್ಯಕ್ಕೇ 68 ಕೆರೆಯಲ್ಲಿ ನೀರಿರಲಿಲ್ಲ. ಬೆಳಗಾವಿ ಜಿಲ್ಲೆಯಲ್ಲಿ 290 ಕೆರೆಗಳ ಪೈಕಿ 113 ಕೆರೆಯಲ್ಲಿ ನೀರಿಲ್ಲದಂತಾಗಿತ್ತು. ವಿಜಯಪುರ, ಬಾಗಲಕೋಟೆ, ಚಾಮರಾಜನಗರ, ಕಲಬುರಗಿ, ಬಳ್ಳಾರಿ, ವಿಜಯನಗರ ಮತ್ತಿತರ ಜಿಲ್ಲೆಗಳಲ್ಲೂ ಇಂತದ್ದೇ ಪರಿಸ್ಥಿತಿ ಇತ್ತು.

 

ಬೆಂಗಳೂರು ನಗರ ಜಿಲ್ಲೆಯಲ್ಲಿ 149 ಕೆರೆಗಳ ಜೀರ್ಣೋದ್ಧಾರಕ್ಕೆ ಮುಂದಾಗಿರುವ ಸರ್ಕಾರವು ಇದಕ್ಕಾಗಿ 910.70 ಕೋಟಿ ರು ಅಂದಾಜು ವೆಚ್ಚದ ಕಾರ್ಯ ಯೋಜನೆಯನ್ನು ಸಿದ್ಧಪಡಿಸಿದೆ. ಇದರಲ್ಲಿ ಕೆರೆಗಳ ನೀರಿನ ಸಾಮರ್ಥ್ಯ ಸೇರಿದಂತೆ ಇನ್ನಿತರೆ ಮೂಲ ಸೌಕರ್ಯ ಅಭಿವೃದ್ಧಿ ಕಾಮಗಾರಿಗಳಿಗೆ 656.15 ಕೋಟಿ ರು., ಇತರೆ ಕಾಮಗಾರಿಗಳಿಗೆ 254.56 ಕೋಟಿ ರು ಸೇರಿದೆ.

 

ಬೆಂಗಳೂರು ದಕ್ಷಿಣ ವ್ಯಾಪ್ತಿಯ ಕೆರೆಗಳಿಗೆ 69.68 ಕೋಟಿ ರು., ಬೆಂಗಳೂರು ಪೂರ್ವಕ್ಕೆ 73.97 ಕೋಟಿ ರು., ಬೆಂಗಳೂರು ಉತ್ತರಕ್ಕೆ 102.75 ಕೋಟಿ ರು., ಆನೇಕಲ್‌ ತಾಲೂಕಿನಲ್ಲಿನ ಮೂರು ಘಟಕಗಳಿಗೆ 421.6 ಕೋಟಿ ರು., ಯಲಹಂಕದ 2 ಘಟಕಗಳಲ್ಲಿ 242.4 ಕೋಟಿ ರು ಅಂದಾಜಿಸಿದೆ.

Hot this week

ನರೇಗಾ ವಸತಿ ಕಾಮಗಾರಿಗಳಲ್ಲಿ ಮೋಸದ ಪಾವತಿ; ಚೆಕ್ ಡ್ಯಾಂ ಕಾಮಗಾರಿಯೇ ಇಲ್ಲ, ಆದರೂ ಹಣ ಪಾವತಿ

ಬೆಂಗಳೂರು; 847 ಸಂಖ್ಯೆ ವಸತಿ  ಕಾಮಗಾರಿಗಳಲ್ಲಿ  ಮೋಸದ ಪಾವತಿಗಳಾಗಿರುವುದನ್ನು ಭಾರತದ ಲೆಕ್ಕ...

42,750 ಕೋಟಿ ದೀರ್ಘಾವಧಿ ಸಾಲ, 4,516 ಕೋಟಿ ಆದಾಯ ಕೊರತೆ; ಎಸ್ಕಾಂಗಳ ಆರ್ಥಿಕ ಸ್ಥಿತಿ ಅನಾವರಣ

ಬೆಂಗಳೂರು; ವಿದ್ಯುತ್ ಸರಬರಾಜು ಕಂಪನಿಗಳು ಇದುವರೆಗೆ ಒಟ್ಟಾರೆ 42,750 ಕೋಟಿಗಳಷ್ಟು ದೀರ್ಘಾವಧಿ...

ಹಿಂದುಳಿದ ವರ್ಗ ವಸತಿ ಶಾಲೆ ಕಟ್ಟಡಗಳು ಶಿಥಿಲ; ಕಟ್ಟಡಗಳ ದುರಸ್ತಿಗೂ ಅನುದಾನವಿಲ್ಲ, ‘ಕೈ’ ಎತ್ತಿದ ಸರ್ಕಾರ

ಬೆಂಗಳೂರು;  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವಸತಿ ಶಾಲೆಗಳು ಶಿಥಿಲಗೊಂಡಿದ್ದರೂ...

ನರೇಗಾ ಕಾಮಗಾರಿಗಳ ಆರಂಭದ ದಿನಾಂಕವೂ ಇಲ್ಲ, ದತ್ತಾಂಶವೂ ಇಲ್ಲ; 1,007.83 ಕೋಟಿ ರು. ವೆಚ್ಚದ ಕಾಮಗಾರಿಗಳು ಅಪೂರ್ಣ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡಿದ್ದ ಕಾಮಗಾರಿಗಳ ಪೈಕಿ ಒಂದು ವ‍ರ್ಷಕ್ಕಿಂತಲೂ ಹೆಚ್ಚು...

ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿಗಳ ಕುಟುಂಬ ಸದಸ್ಯರ ಉದ್ಯಮ, ಹಣಕಾಸಿನ ವ್ಯವಹಾರ; ಸದನಕ್ಕೆ ಒದಗಿಸಬಹುದೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಖಿಲ ಭಾರತ...

Topics

ನರೇಗಾ ವಸತಿ ಕಾಮಗಾರಿಗಳಲ್ಲಿ ಮೋಸದ ಪಾವತಿ; ಚೆಕ್ ಡ್ಯಾಂ ಕಾಮಗಾರಿಯೇ ಇಲ್ಲ, ಆದರೂ ಹಣ ಪಾವತಿ

ಬೆಂಗಳೂರು; 847 ಸಂಖ್ಯೆ ವಸತಿ  ಕಾಮಗಾರಿಗಳಲ್ಲಿ  ಮೋಸದ ಪಾವತಿಗಳಾಗಿರುವುದನ್ನು ಭಾರತದ ಲೆಕ್ಕ...

42,750 ಕೋಟಿ ದೀರ್ಘಾವಧಿ ಸಾಲ, 4,516 ಕೋಟಿ ಆದಾಯ ಕೊರತೆ; ಎಸ್ಕಾಂಗಳ ಆರ್ಥಿಕ ಸ್ಥಿತಿ ಅನಾವರಣ

ಬೆಂಗಳೂರು; ವಿದ್ಯುತ್ ಸರಬರಾಜು ಕಂಪನಿಗಳು ಇದುವರೆಗೆ ಒಟ್ಟಾರೆ 42,750 ಕೋಟಿಗಳಷ್ಟು ದೀರ್ಘಾವಧಿ...

ಹಿಂದುಳಿದ ವರ್ಗ ವಸತಿ ಶಾಲೆ ಕಟ್ಟಡಗಳು ಶಿಥಿಲ; ಕಟ್ಟಡಗಳ ದುರಸ್ತಿಗೂ ಅನುದಾನವಿಲ್ಲ, ‘ಕೈ’ ಎತ್ತಿದ ಸರ್ಕಾರ

ಬೆಂಗಳೂರು;  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವಸತಿ ಶಾಲೆಗಳು ಶಿಥಿಲಗೊಂಡಿದ್ದರೂ...

ನರೇಗಾ ಕಾಮಗಾರಿಗಳ ಆರಂಭದ ದಿನಾಂಕವೂ ಇಲ್ಲ, ದತ್ತಾಂಶವೂ ಇಲ್ಲ; 1,007.83 ಕೋಟಿ ರು. ವೆಚ್ಚದ ಕಾಮಗಾರಿಗಳು ಅಪೂರ್ಣ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡಿದ್ದ ಕಾಮಗಾರಿಗಳ ಪೈಕಿ ಒಂದು ವ‍ರ್ಷಕ್ಕಿಂತಲೂ ಹೆಚ್ಚು...

ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿಗಳ ಕುಟುಂಬ ಸದಸ್ಯರ ಉದ್ಯಮ, ಹಣಕಾಸಿನ ವ್ಯವಹಾರ; ಸದನಕ್ಕೆ ಒದಗಿಸಬಹುದೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಖಿಲ ಭಾರತ...

ನರೇಗಾ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಿಯಮ ಉಲ್ಲಂಘನೆ; 86.67 ಕೋಟಿ ರು ಅಕ್ರಮ ಪತ್ತೆ ಹಚ್ಚಿದ ಸಿಎಜಿ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಮಾನವ ಸಂಪನ್ಮೂಲ ಬಳಕೆಗಾಗಿ ಮಾಡಿಕೊಂಡಿದ್ದ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಡೆದಿದ್ದ...

ಮೋಸದ ವಹಿವಾಟು, ಹೆಚ್ಚಿನ ಪಾವತಿ, ಅಕ್ರಮ ವೆಚ್ಚ; ನರೇಗಾದ ಮತ್ತೊಂದು ಮುಖ ಬಯಲು ಮಾಡಿದ ಸಿಎಜಿ

ಬೆಂಗಳೂರು; ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೈಗೊಂಡಿದ್ದ ಕಾಮಗಾರಿಗಳು...

ಗೃಹಜ್ಯೋತಿ; 23,823.06 ಮಿಲಿಯನ್ ಯೂನಿಟ್ ವಿದ್ಯುತ್ ಬಳಕೆ, ಎಸ್ಕಾಂಗಳಿಗೆ 631.75 ಕೋಟಿ ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಗೃಹ ಜ್ಯೋತಿ ಯೋಜನೆ ಅನುಷ್ಠಾನಗೊಳಿಸಿರುವ ವಿದ್ಯುತ್ ಸರಬರಾಜು ಕಂಪನಿಗಳಿಗೆ ಸರ್ಕಾರವು...

Related Articles

Popular Categories

error: Content is protected !!