Thursday | April 16, 2026 |

16,625 ಕೆರೆಗಳಲ್ಲಿ ಶೇಕಡ 30ಕ್ಕಿಂತಲೂ ಕಡಿಮೆ ಪ್ರಮಾಣದ ನೀರು; ಜನ, ಜಾನುವಾರುಗಳಿಗೆ ಸಂಕಷ್ಟ

ಬೆಂಗಳೂರು; ತೀವ್ರ ಬರಗಾಲಕ್ಕೆ ತುತ್ತಾಗಿರುವ ರಾಜ್ಯದಲ್ಲಿ ಹನಿ ನೀರಿಗೂ ತತ್ವಾರ ಶುರುವಾಗಿದೆ. ಇದರ ಮಧ್ಯೆಯೇ ರಾಜ್ಯದ 16,625 ಕೆರೆಗಳಲ್ಲಿ ಶೇಕಡ 30ಕ್ಕಿಂತಲೂ ಕಡಿಮೆ ಪ್ರಮಾಣದ ನೀರಿದೆ. ಹೀಗಾಗಿ ನಗರ ಪ್ರದೇಶಗಳನ್ನೂ ಒಳಗೊಂಡಂತೆ ಕೆರೆ ಸುತ್ತಮುತ್ತಲಿನ ಜನ-ಜಾನುವಾರುಗಳಿಗೆ ಕುಡಿಯಲು ನೀರಿಲ್ಲದಂತಾಗುವ ಪರಿಸ್ಥಿತಿ ತಲೆದೋರಿದೆ.

 

ಕೆರೆಗಳಲ್ಲಿ ನೀರು ಖಾಲಿ ಆಗುತ್ತಿರುವ ಕುರಿತು ಅಭಿವೃದ್ಧಿ ಆಯುಕ್ತರಾದ ಡಾ ಶಾಲಿನಿ ರಜನೀಶ್‌ ಅವರ ಅಧ್ಯಕ್ಷತೆಯಲ್ಲಿ ನಡೆದಿದ್ದ ಹವಮಾನ ಅವಲೋಕನ ಸಮಿತಿ ಸಭೆಯಲ್ಲಿ ಕೆರೆಗಳಲ್ಲಿನ ನೀರಿನ ಪರಿಸ್ಥಿತಿ ಕುರಿತು ಚರ್ಚೆಯಾಗಿದೆ. 2024ರ ಮಾರ್ಚ್‌ 28ರಂದು ನಡೆದಿದ್ದ ಸಭೆಯ ನಡವಳಿಗಳು ‘ದಿ ಫೈಲ್‌’ ಗೆ ಲಭ್ಯವಾಗಿದೆ.

 

ಮುಂಗಾರಿಗಿಂತ ಮುಂಚಿತವಾಗಿ ಕೆರೆಗಳಿಗೆ ಸಾಕಷ್ಟು ಮಳೆ ನೀರು ಸಂಗ್ರಹಣೆ ಮಾಡಲು ಅಗತ್ಯವಿರುವ ಎಲ್ಲಾ ಕಾಮಗಾರಿಗಳನ್ನು ವಿವಿಧ ಇಲಾಖೆಗಳ ಯೋಜನೆಗಳಡಿಯಲ್ಲಿ ಕೈಗೆತ್ತಿಕೊಳ್ಳಬೇಕು ಎಂದು ಡಾ ಶಾಲಿನಿ ರಜನೀಶ್‌ ಅವರು 2024ರ ಮಾರ್ಚ್‌ 30ರಂದು ಎಲ್ಲಾ ಇಲಾಖೆಗಳ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ.

 

ರಾಜ್ಯದಲ್ಲಿ ಜಿಲ್ಲಾ ಪಂಚಾಯ್ತಿಗಳ ವ್ಯಾಪ್ತಿಯಲ್ಲಿ 12,657, ಸಣ್ಣ ನೀರಾವರಿ ಇಲಾಖೆಯಲ್ಲಿ 3,252, ಜಲಸಂಪನ್ಮೂಲ ಇಲಾಖೆಯಲ್ಲಿ 85, ಪೌರಾಡಳಿತ ಇಲಾಖೆ ವ್ಯಾಪ್ತಿಯಲ್ಲಿ 248, ಕರ್ನಾಟಕ ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿ 377, ಕೆಪಿಸಿಎಲ್‌ ವ್ಯಾಪ್ತಿಯಲ್ಲಿ 6 ಕೆರೆ ಸೇರಿದಂತೆ ಒಟ್ಟಾರೆ 16,625 ಕೆರೆಗಳಿವೆ. ಈ ಕೆರೆಗಳಲ್ಲಿ ಸುಮಾರು ಶೇಕಡಾ 30ಕ್ಕಿಂತಲೂ ಕಡಿಮೆ ಪ್ರಮಾಣದ ನೀರಿದೆ ಎಂದು ಪತ್ರದಲ್ಲಿ ವಿವರಿಸಲಾಗಿದೆ.

 

ಕರ್ನಾಟಕ ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿನ ಕೆರೆಗಳ ಪೈಕಿ ಚಿತ್ರದುರ್ಗದಲ್ಲಿ 25, ಕೋಲಾರದಲ್ಲಿ 15, ಶಿವಮೊಗ್ಗದಲ್ಲಿ 75, ತುಮಕೂರಿನಲ್ಲಿ 27, ಉತ್ತರ ಕನ್ನಡದಲ್ಲಿ 28 ಕೆರೆಗಳಿವೆ. ಈ ಕೆರೆಗಳಲ್ಲಿಯೂ ಶೇ.30ಕ್ಕಿಂತಲೂ ಕಡಿಮೆ ನೀರಿದೆ ಎಂಬುದು ಪತ್ರದಿಂದ ಗೊತ್ತಾಗಿದೆ.

 

2023ರ ಡಿಸೆಂಬರ್‍‌ ಅಂತ್ಯಕ್ಕೆ ರಾಜ್ಯದ ಸುಮಾರು 1,288ಕ್ಕೂ ಹೆಚ್ಚು ಕೆರೆಗಳಲ್ಲಿ ಶೇ.30ರಷ್ಟು ಮಾತ್ರ ನೀರಿತ್ತು. ಇದರಲ್ಲಿ 425ಕ್ಕೂ ಹೆಚ್ಚು ಕೆರೆಗಳಲ್ಲಿ ಒಂದು ಹನಿಯೂ ನೀರಿರಲಿಲ್ಲ. 1033 ಕೆರೆಗಳಲ್ಲಿ ಶೇ.31 ರಿಂದ 50 ರಷ್ಟು ನೀರಿತ್ತು. 760 ಕೆರೆಯಲ್ಲಿ ಶೇ.51 ರಿಂದ 99 ಭಾಗ ನೀರಿತ್ತು.

 

ತುಮಕೂರು ಜಿಲ್ಲೆಯಲ್ಲಿ 371 ಕೆರೆಗಳಿವೆ. ಇದರಲ್ಲಿ ಡಿಸೆಂಬರ್‍‌ ಅಂತ್ಯಕ್ಕೇ 68 ಕೆರೆಯಲ್ಲಿ ನೀರಿರಲಿಲ್ಲ. ಬೆಳಗಾವಿ ಜಿಲ್ಲೆಯಲ್ಲಿ 290 ಕೆರೆಗಳ ಪೈಕಿ 113 ಕೆರೆಯಲ್ಲಿ ನೀರಿಲ್ಲದಂತಾಗಿತ್ತು. ವಿಜಯಪುರ, ಬಾಗಲಕೋಟೆ, ಚಾಮರಾಜನಗರ, ಕಲಬುರಗಿ, ಬಳ್ಳಾರಿ, ವಿಜಯನಗರ ಮತ್ತಿತರ ಜಿಲ್ಲೆಗಳಲ್ಲೂ ಇಂತದ್ದೇ ಪರಿಸ್ಥಿತಿ ಇತ್ತು.

 

ಬೆಂಗಳೂರು ನಗರ ಜಿಲ್ಲೆಯಲ್ಲಿ 149 ಕೆರೆಗಳ ಜೀರ್ಣೋದ್ಧಾರಕ್ಕೆ ಮುಂದಾಗಿರುವ ಸರ್ಕಾರವು ಇದಕ್ಕಾಗಿ 910.70 ಕೋಟಿ ರು ಅಂದಾಜು ವೆಚ್ಚದ ಕಾರ್ಯ ಯೋಜನೆಯನ್ನು ಸಿದ್ಧಪಡಿಸಿದೆ. ಇದರಲ್ಲಿ ಕೆರೆಗಳ ನೀರಿನ ಸಾಮರ್ಥ್ಯ ಸೇರಿದಂತೆ ಇನ್ನಿತರೆ ಮೂಲ ಸೌಕರ್ಯ ಅಭಿವೃದ್ಧಿ ಕಾಮಗಾರಿಗಳಿಗೆ 656.15 ಕೋಟಿ ರು., ಇತರೆ ಕಾಮಗಾರಿಗಳಿಗೆ 254.56 ಕೋಟಿ ರು ಸೇರಿದೆ.

 

ಬೆಂಗಳೂರು ದಕ್ಷಿಣ ವ್ಯಾಪ್ತಿಯ ಕೆರೆಗಳಿಗೆ 69.68 ಕೋಟಿ ರು., ಬೆಂಗಳೂರು ಪೂರ್ವಕ್ಕೆ 73.97 ಕೋಟಿ ರು., ಬೆಂಗಳೂರು ಉತ್ತರಕ್ಕೆ 102.75 ಕೋಟಿ ರು., ಆನೇಕಲ್‌ ತಾಲೂಕಿನಲ್ಲಿನ ಮೂರು ಘಟಕಗಳಿಗೆ 421.6 ಕೋಟಿ ರು., ಯಲಹಂಕದ 2 ಘಟಕಗಳಲ್ಲಿ 242.4 ಕೋಟಿ ರು ಅಂದಾಜಿಸಿದೆ.

Hot this week

ಪಿಂಚಣಿಗೆ ಕೇಳಿದ್ದು 5.63 ಕೋಟಿ, ಬಜೆಟ್‌ನಲ್ಲಿ ನಿಗದಿಪಡಿಸಿದ್ದು ಕೇವಲ 1 ಲಕ್ಷ; ಆರ್ಥಿಕ ಮುಗ್ಗಟ್ಟಿಗೆ ಸಿಲುಕಲಿದೆಯೇ ವಿಶ್ವವಿದ್ಯಾಲಯ?

ಬೆಂಗಳೂರು; ಬೋಧಕ, ಬೋಧಕೇತರ ಸಿಬ್ಬಂದಿಗಳಿಗೆ ಪಿಂಚಣಿ  ಪಾವತಿಸಲು ವಿಶ್ವವಿದ್ಯಾಲಯಗಳು ಕೇಳಿದ್ದ ಸಹಾಯಾನುದಾನದ...

ಗ್ಯಾರಂಟಿ ಯೋಜನೆಗಳಿಗೆ ಜಾಹೀರಾತು; 3 ವರ್ಷದಲ್ಲಿ 348.25 ಕೋಟಿ ವೆಚ್ಚ

ಬೆಂಗಳೂರು; ಗ್ಯಾರಂಟಿ ಯೋಜನೆ ಜಾರಿಯಾದ ದಿನದಿಂದ ಜನವರಿ ಅಂತ್ಯದವರೆಗೆ ಜಾಹೀರಾತುಗಳ ಮೂಲಕ...

11,721 ಟ್ರಾನ್ಸ್‌ಫಾರ್ಮ್‌ರ್ ಖರೀದಿ; ಕೇರಳ ವಿದ್ಯುತ್ ಕಂಪನಿಗೆ 4 ಜಿ ವಿನಾಯಿತಿ ಅಧಿಸೂಚನೆ, ಕವಿಕಾಕ್ಕೆ 174.73 ಕೋಟಿ ಆದಾಯ ತಪ್ಪಿಸಿತೇ ಕಾಂಗ್ರೆಸ್ ಸರ್ಕಾರ?

ಬೆಂಗಳೂರು;  ರಾಜ್ಯದ ಬೆಂಗಳೂರು, ಹುಬ್ಬಳ್ಳಿ, ಮಂಗಳೂರು ವಿದ್ಯುತ್ ಸರಬರಾಜು ಕಂಪನಿಗಳಿಗೆ ಅವಶ್ಯಕವಿರುವ 11,721...

ಗಾಲ್ಫ್‌ ಅಸೋಸಿಯೇಷನ್‌ನ ಜಮೀನಿನ ಸರ್ವೇ, ಆದಾಯ ಪರಿಶೀಲನೆ; ಜಿಬಿಎ ಮುಖ್ಯ ಆಯುಕ್ತ, ಜಿಲ್ಲಾಧಿಕಾರಿಗೆ ಪತ್ರ ಬರೆದ ಸರ್ಕಾರ

ಬೆಂಗಳೂರು;  ಕರ್ನಾಟಕ ಗಾಲ್ಫ್‌ ಅಸೋಸಿಯೇಷನ್ ಸಂಸ್ಥೆಗೆ ನೀಡಲಾಗಿರುವ ಜಮೀನಿನ ಸರ್ವೇ ನಡೆಸಲು...

Topics

ಪಿಂಚಣಿಗೆ ಕೇಳಿದ್ದು 5.63 ಕೋಟಿ, ಬಜೆಟ್‌ನಲ್ಲಿ ನಿಗದಿಪಡಿಸಿದ್ದು ಕೇವಲ 1 ಲಕ್ಷ; ಆರ್ಥಿಕ ಮುಗ್ಗಟ್ಟಿಗೆ ಸಿಲುಕಲಿದೆಯೇ ವಿಶ್ವವಿದ್ಯಾಲಯ?

ಬೆಂಗಳೂರು; ಬೋಧಕ, ಬೋಧಕೇತರ ಸಿಬ್ಬಂದಿಗಳಿಗೆ ಪಿಂಚಣಿ  ಪಾವತಿಸಲು ವಿಶ್ವವಿದ್ಯಾಲಯಗಳು ಕೇಳಿದ್ದ ಸಹಾಯಾನುದಾನದ...

ಗ್ಯಾರಂಟಿ ಯೋಜನೆಗಳಿಗೆ ಜಾಹೀರಾತು; 3 ವರ್ಷದಲ್ಲಿ 348.25 ಕೋಟಿ ವೆಚ್ಚ

ಬೆಂಗಳೂರು; ಗ್ಯಾರಂಟಿ ಯೋಜನೆ ಜಾರಿಯಾದ ದಿನದಿಂದ ಜನವರಿ ಅಂತ್ಯದವರೆಗೆ ಜಾಹೀರಾತುಗಳ ಮೂಲಕ...

11,721 ಟ್ರಾನ್ಸ್‌ಫಾರ್ಮ್‌ರ್ ಖರೀದಿ; ಕೇರಳ ವಿದ್ಯುತ್ ಕಂಪನಿಗೆ 4 ಜಿ ವಿನಾಯಿತಿ ಅಧಿಸೂಚನೆ, ಕವಿಕಾಕ್ಕೆ 174.73 ಕೋಟಿ ಆದಾಯ ತಪ್ಪಿಸಿತೇ ಕಾಂಗ್ರೆಸ್ ಸರ್ಕಾರ?

ಬೆಂಗಳೂರು;  ರಾಜ್ಯದ ಬೆಂಗಳೂರು, ಹುಬ್ಬಳ್ಳಿ, ಮಂಗಳೂರು ವಿದ್ಯುತ್ ಸರಬರಾಜು ಕಂಪನಿಗಳಿಗೆ ಅವಶ್ಯಕವಿರುವ 11,721...

ಗಾಲ್ಫ್‌ ಅಸೋಸಿಯೇಷನ್‌ನ ಜಮೀನಿನ ಸರ್ವೇ, ಆದಾಯ ಪರಿಶೀಲನೆ; ಜಿಬಿಎ ಮುಖ್ಯ ಆಯುಕ್ತ, ಜಿಲ್ಲಾಧಿಕಾರಿಗೆ ಪತ್ರ ಬರೆದ ಸರ್ಕಾರ

ಬೆಂಗಳೂರು;  ಕರ್ನಾಟಕ ಗಾಲ್ಫ್‌ ಅಸೋಸಿಯೇಷನ್ ಸಂಸ್ಥೆಗೆ ನೀಡಲಾಗಿರುವ ಜಮೀನಿನ ಸರ್ವೇ ನಡೆಸಲು...

866.59 ಕೋಟಿ ರು ಮೊತ್ತದ 399 ಬಳಕೆ ಪ್ರಮಾಣ ಪತ್ರಗಳ ಸಲ್ಲಿಕೆಗೆ ಬಾಕಿ ಉಳಿಸಿಕೊಂಡ ಇಲಾಖೆಗಳು; ಅನುದಾನ ದುರುಪಯೋಗ ಸಾಧ್ಯತೆ?

ಬೆಂಗಳೂರು; ರಾಜ್ಯದ ಹಲವು ಇಲಾಖೆಗಳು ಬಳಕೆ ಪ್ರಮಾಣ ಪತ್ರಗಳನ್ನು ಸಲ್ಲಿಕೆಯಲ್ಲಿ ತೀವ್ರ...

ಸರ್ಕಾರಿ ಸೇವೆ; ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಪ್ರಾತಿನಿಧ್ಯ ಎರಡು ವರ್ಷದಲ್ಲಿ ಇಳಿಕೆಯಾಗಿದೆಯೇ?

ಬೆಂಗಳೂರು; ರಾಜ್ಯ ಸರ್ಕಾರದ ಶಿಕ್ಷಣ, ಒಳಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ...

Related Articles

Popular Categories

error: Content is protected !!