Thursday | April 16, 2026 |

ಮಹಿಳೆಗೆ ಕಪಾಳ ಮೋಕ್ಷ; ವಿ ಸೋಮಣ್ಣ ವಿರುದ್ಧ ಪ್ರಕರಣಕ್ಕೆ ಮಾನವ ಹಕ್ಕುಗಳ ಆಯೋಗದಿಂದ ಕ್ಲೀನ್‌ ಚಿಟ್‌

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದ ಸೋಮಣ್ಣ ಅವರು ಮಹಿಳೆಯೊಬ್ಬರಿಗೆ ಕಪಾಳ ಮೋಕ್ಷ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೂರಕ ದಾಖಲೆಗಳು ಇಲ್ಲ ಎಂದು ಚಾಮರಾಜನಗರ ಜಿಲ್ಲೆಯ ಉಪ ವಿಭಾಗದ ಡಿವೈಎಸ್ಪಿ ಅವರು ನೀಡಿದ್ದ ವರದಿಯನ್ನೇ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗವು ಎತ್ತಿ ಹಿಡಿದಿದೆ.

 

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ವಸತಿ ಹಕ್ಕು ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಕೆಂಪಮ್ಮ ಎಂಬುವರಿಗೆ ಅಂದು ಸಚಿವರಾಗಿದ್ದ ವಿ ಸೋಮಣ್ಣ ಅವರು ಕಪಾಳ ಮೋಕ್ಷ ಮಾಡಿದ್ದಾರೆ ಎನ್ನಲಾದ ವಿಡಿಯೋ ವೈರಲ್‌ ಆಗಿತ್ತು.

 

ಈ ಪ್ರಕರಣವನ್ನು ಅಸ್ತ್ರವನ್ನಾಗಿ ಬಳಸಿಕೊಂಡಿದ್ದ ಪ್ರತಿಪಕ್ಷ ಕಾಂಗ್ರೆಸ್‌, ವಿ ಸೋಮಣ್ಣ ಅವರ ರಾಜೀನಾಮೆಗೆ ಆಗ್ರಹಿಸಿತ್ತು. ಅಂದು  ಪ್ರತಿಪಕ್ಷ ನಾಯಕರಾಗಿದ್ದ  ಸಿದ್ದರಾಮಯ್ಯ, ರಣದೀಪ್‌ ಸುರ್ಜೇವಾಲಾ, ಕಾಂಗ್ರೆಸ್‌ನ ಮಹಿಳಾ ವಿಭಾಗ ಸೇರಿದಂತೆ ಹಲವು ಸಂಘಟನೆಗಳು ದೂರು ಸಲ್ಲಿಸಿದ್ದವು.

 

ವಿಶೇಷವೆಂದರೇ ಕಾಂಗ್ರೆಸ್‌ ಅಧಿಕಾರದಲ್ಲಿರುವಾಗಲೇ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಹಂಗಾಮಿ ಅಧ್ಯಕ್ಷ ಟಿ ಶಾಮ ಭಟ್‌ ಅವರು ಚಾಮರಾಜನಗರ ಉಪ ವಿಭಾಗದ ಡಿವೈಎಸ್ಪಿ ನೀಡಿದ್ದ ವರದಿಯನ್ನೇ ಎತ್ತಿ ಹಿಡಿದಿದ್ದಾರೆ.

 

ಈ ಸಂಬಂಧ 2024ರ ಏಪ್ರಿಲ್‌ 29ರಂದು ಟಿ ಶಾಮ ಭಟ್‌ ಅವರು ಆದೇಶ ಹೊರಡಿಸಿದ್ದಾರೆ. ಈ ಆದೇಶದ ಪ್ರತಿ ಮತ್ತು ಡಿವೈಎಸ್ಪಿ ನೀಡಿರುವ ವರದಿಯ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಈ ದೂರಿನ ಕುರಿತು ವಿಚಾರಣೆ ನಡೆಸಿದ್ದ ಚಾಮರಾಜನಗರ ಜಿಲ್ಲಾ ಪೊಲೀಸ್‌ ಅಧಿಕಾರಿಗಳು ಪ್ರಕರಣದಲ್ಲಿ ಪೂರಕ ಆಧಾರಗಳಿಲ್ಲ ಎಂದು ವರದಿ ಸಲ್ಲಿಸಿದ್ದರು. ಆದರೆ ಈ ವರದಿಯನ್ನು ಬೆಂಗಳೂರು ಮೂಲದ ನೈಜ ಹೋರಾಟಗಾರರ ವೇದಿಕೆಯ ಹೆಚ್‌ ಎಂ ವೆಂಕಟೇಶ್‌ ಅವರು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ  ಮೆಟ್ಟಿಲೇರಿದ್ದರು.

 

ಈ ಪ್ರಕರಣದ ಕುರಿತು ತನಿಖೆ ನಡೆಸಲು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಶಿಫಾರಸ್ಸು ಮಾಡಿತ್ತು. ಆದರೀಗ ಈ ಪ್ರಕರಣದ ಕುರಿತು ವಿಚಾರಣೆ ನಡೆಸಿರುವ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಹಂಗಾಮಿ ಅಧ್ಯಕ್ಷ ಟಿ ಶಾಮ್‌ ಭಟ್‌ ಅವರು ಚಾಮರಾಜನಗರ ಜಿಲ್ಲೆಯ ಉಪ ವಿಭಾಗದ ಡಿವೈಎಸ್ಪಿ ಅವರು ನೀಡಿದ್ದ ವರದಿಯನ್ನೇ ಎತ್ತಿ ಹಿಡಿದಿರುವುದು ಚರ್ಚೆಗೆ ಗ್ರಾಸವಾಗಿದೆ.

 

ಆಯೋಗದ ಆದೇಶದಲ್ಲೇನಿದೆ?

 

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯ ಹಂಗಳ ಗ್ರಾಮದ ಘಟನೆ ಕುರಿತು ಹಲವು ಸಂಘಟನೆಗಳು ಅರ್ಜಿ ಸಲ್ಲಿಸಿದ್ದು ಈ ಬಗ್ಗೆ ಸದರಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಗಣ್ಯರು, ಸ್ಥಳೀಯ ಜನಪ್ರತಿನಿಧಿಗಳು ಮತ್ತು ಬಂದೋಬಸ್ತ್‌ನಲ್ಲಿದ್ದ ಅಧಿಕಾರಿಗಳನ್ನು ಒಳಗೊಂಡಂತೆ ನೊಂದ ಮಹಿಳೆಯರನ್ನು ಸಹ ವಿಚಾರಣೆ ಮಾಡಲಾಗಿದ್ದು ವಿಚಾರಣೆ ಸಂದರ್ಭದಲ್ಲಿ ಸಚಿವರು ನೊಂದ ಮಹಿಳೆಯಾದ ಕೆಂಪಮ್ಮ ಅವರಿಗೆ ಸಾರ್ವಜನಿಕವಾಗಿ ಕಪಾಳ ಮೋಕ್ಷ ಮಾಡಿರುವ ಕುರಿತು ಯಾವುದೇ ಪೂರಕ ಆಧಾರಗಳು ಕಂಡುಬಂದಿರುವುದಿಲ್ಲ.

 

ಈ ಬಗ್ಗೆ ಸ್ವತಃ ಕೆಂಪಮ್ಮ ಅವರೇ ವಿಚಾರಣೆ ಸಂದರ್ಭದಲ್ಲಿ ಹೇಳಿಕೆ ನೀಡಿರುವುದರಿಂದ ಹಾಗೂ ಕಪಾಳ ಮೋಕ್ಷ ಮಾಡಿರುವಂತೆ ದೂರು ನೀಡಲು ಕೆಲವು ಸಂಘಟನೆಗಳು ಕೆಂಪಮ್ಮ ಅವರಿಗೆ ಕುಮ್ಮಕ್ಕು ನೀಡಿರುವುದು ಮೇಲ್ನೋಟಕ್ಕೆ ಕಂಡುಬಂದ ಮೇರೆಗೆ ಗುಂಡ್ಲುಪೇಟೆ ಠಾಣೆಯಲ್ಲಿ ಕಲಂ 506ರಂತೆ ಮೊಕದ್ದಮೆ (ಸಂಖ್ಯೆ;301/2023) ದಾಖಲಿಸಿಕೊಂಡು ತನಿಖೆ ಕೈಗೊಂಡಿತ್ತು.

 

ಈ ವರದಿಯ ಪ್ರತಿಯನ್ನು ದೂರುದಾರ ಅಭಿಪ್ರಾಯಕ್ಕಾಗಿ ಕಳಿಸಲಾಗಿತ್ತು. ದೂರುದಾರರು ಇ ಮೇಲ್‌ ಮುಖಾಂತರ ಹೆಚ್ಚಿನ ಕಾಲಾವಕಾಶ ನೀಡಲು ಕೋರಿದ್ದು ಸಾಕಷ್ಟು ಕಾಲಾವಕಾಶ ನೀಡಿದರೂ ಸಹ ಇದುವರೆಗೂ ದೂರುದಾರರು ಯಾವುದೇ ಅಭಿಪ್ರಾಯ ಸಲ್ಲಿಸಿರುವುದಿಲ್ಲ.

 

ದೂರು ಹಾಗೂ ವರದಿಯನ್ನು ಪರಿಶೀಲಿಸಲಾಗಿ ದೂರುದಾರರು ಅರ್ಜಿಯಲ್ಲಿ ಮಾಡಿರುವ ಆರೋಪಕ್ಕೆ ಯಾವುದೇ ಪೂರಕ ದಾಖಲಾತಿಗಳನ್ನು ಒದಗಿಸದೇ ವರದಿಯ ಮೇಲೆ ಅಭಿಪ್ರಾಯ ಸಲ್ಲಿಸದೇ ಇರುವುದರಿಂದ ವರದಿ ಅನ್ವಯ ಪ್ರಕರಣವನ್ನು ಮುಕ್ತಾಯ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಹಂಗಾಮಿ ಅಧ್ಯಕ್ಷ ಟಿ ಶಾಮ ಭಟ್‌ ಅವರು 2024ರ ಏಪ್ರಿಲ್‌27ರಂದು ಹೊರಡಿಸಿರುವ ಆದೇಶದಲ್ಲಿ ವಿವರಿಸಿದ್ದಾರೆ.

 

ಏನಿದು‌ ಘಟನೆ‌?

 

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ವಸತಿ ಹಕ್ಕು ಪತ್ರ ವಿತರಣೆ ಕಾರ್ಯಕ್ರಮದ ಸಂದರ್ಭದಲ್ಲಿ ವಸತಿ ದೊರೆಯದ ಮಹಿಳೆಯೊಬ್ಬರು ಜೋರಾಗಿ ಮಾತನಾಡುತ್ತಾ ಸಚಿವರ ಬಳಿ ಬಂದಾಗ ಸೋಮಣ್ಣ ಅವರು ಆಕೆಯ ಕಪಾಳಕ್ಕೆ ಹೊಡೆದಿದ್ದರು ಎನ್ನಲಾಗಿತ್ತು.

 

ಈ ಬಗ್ಗೆ ಸ್ಪಷ್ಟನೆ ನೀಡಿದ್ದ ಸಚಿವ ವಿ. ಸೋಮಣ್ಣ, ನಿವೇಶನಕ್ಕಾಗಿ ನಾಲ್ಕೂವರೆ ಸಾವಿರ ರೂ.ಗಳನ್ನು ನಾನು ಮದ್ಯವರ್ತಿಯೊಬ್ಬರಿಗೆ ನೀಡಿದ್ದೇನೆ ಎಂದು ಮಹಿಳೆ ಅಲವತ್ತುಕೊಂಡಿದ್ದರು. ಆಗ ನಾನೇ ಅವರಿಗೆ ಅವರು ಕಳೆದುಕೊಂಡಿದ್ದ ಹಣ ನೀಡಿದ್ದೆ. ನಾನು ಎಲ್ಲಾ ಹೆಣ್ಣುಮಕ್ಕಳನ್ನು ಸೋದರಿಯರಂತೆ ಗೌರವ ಭಾವನೆಯಿಂದ ನೋಡುತ್ತೇನೆ. ಆದರೆ, ಇಲ್ಲಿ ಅವರು ಪದೇ ಪದೇ ಕಾಲಿಗೆ ಬೀಳುವುದು ಮಾಡಿದರು. ಆಗ, ಅವರನ್ನು ತಡೆಯುವ ಭರದಲ್ಲಿ ಜೋರಾಗಿ ಕೈ ತಾಗಿದೆ,‌ಬದಲಾಗಿ ಅದು ಹೊಡೆದದ್ದಲ್ಲ ಎಂದಿದ್ದರು.

 

ಈ ಪ್ರಕರಣ ಸಾಕಷ್ಟು ವಿವಾದಕ್ಕೆ ಎಡೆಮಾಡಿಕೊಟ್ಟಿತ್ತು. ಮಹಿಳೆಯ ಕೆನ್ನೆಗೆ ಹೊಡೆದ ವಿ. ಸೋಮಣ್ಣ ಅವರನ್ನು ಸಚಿವ ಸ್ಥಾನದಿಂದ ಅಮಾನತು ಮಾಡಿ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಆಗ್ರಹಿಸಿದ್ದರು. ಈ ಕುರಿತಾಗಿ ಟ್ವೀಟ್ ಮಾಡಿದ್ದ ಅವರು ಸಚಿವ ವಿ ಸೋಮಣ್ಣ ಚಾಮರಾಜನಗರದಲ್ಲಿ ಸಹಾಯ ಯಾಚಿಸಿ ಬಂದ ಮಹಿಳೆಯ ಕೆನ್ನೆಗೆ ಹೊಡೆದಿದ್ದು ಬಿಜೆಪಿಯ ನಡವಳಿಕೆಯನ್ನು ತೋರಿಸುತ್ತೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

 

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮಹಿಳಾ ಸುರಕ್ಷತೆಯ ಬಗ್ಗೆ ಮಾತನಾಡುತ್ತಾರೆ. ಕೆಂಪು ಕೋಟೆಯಲ್ಲಿ ನಿಂತು ಮಹಿಳೆಯರಿಗೆ ಗೌರವ ನೀಡಬೇಕೆಂದು ಭಾಷಣ ಮಾಡುತ್ತಾರೆ. ಹಾಗಾದರೆ ಇದೇನಾ ಬಿಜೆಪಿ ಮಹಿಳೆಯರಿಗೆ ಕೊಡುತ್ತಿರುವ ಗೌರವ ಹಾಗಾದರೆ? ಇದೇನಾ ಬಿಜೆಪಿ ಮಹಿಳೆಯರಿಗೆ ಕೊಡುತ್ತಿರುವ ಸುರಕ್ಷತೆ? ಎಂದು ಪ್ರಶ್ನಿಸಿದ್ದರು.

 

ಸಚಿವರಿಂದ ಹಲ್ಲೆಗೊಳಗಾದ ಮಹಿಳೆಗೆ ನ್ಯಾಯ ಬೇಕು. ಈ ಘಟನೆಯ ಬಗ್ಗೆ ಸಂತ್ರಸ್ತ ಮಹಿಳೆಗೆ ನ್ಯಾಯ ಸಿಗಬೇಕೆ ಹೊರತು ಬಿಜೆಪಿಯ ಸಮರ್ಥನೆಯಲ್ಲ, ಸಚಿವ ಸೋಮಣ್ಣ ಅವರನ್ನು ಪ್ರಧಾನಿ ಮೋದಿಯವರು ಸಚಿವ ಸ್ಥಾನದಿಂದ ಅಮಾನತು ಮಾಡಬೇಕು. ಈ ಘಟನೆಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಹೊಣೆ ಹೋರಬೇಕು. ಇವತ್ತೆ ಸಚಿವ ಸೋಮಣ್ಣ ಅವರನ್ನು ಸ್ಥಾನದಿಂದ ಕೆಳಗಿಳಿಸಬೇಕು ಎಂದು ಒತ್ತಾಯಿಸಿದ್ದನ್ನು ಸ್ಮರಿಸಬಹುದು.

Hot this week

ಪಿಂಚಣಿಗೆ ಕೇಳಿದ್ದು 5.63 ಕೋಟಿ, ಬಜೆಟ್‌ನಲ್ಲಿ ನಿಗದಿಪಡಿಸಿದ್ದು ಕೇವಲ 1 ಲಕ್ಷ; ಆರ್ಥಿಕ ಮುಗ್ಗಟ್ಟಿಗೆ ಸಿಲುಕಲಿದೆಯೇ ವಿಶ್ವವಿದ್ಯಾಲಯ?

ಬೆಂಗಳೂರು; ಬೋಧಕ, ಬೋಧಕೇತರ ಸಿಬ್ಬಂದಿಗಳಿಗೆ ಪಿಂಚಣಿ  ಪಾವತಿಸಲು ವಿಶ್ವವಿದ್ಯಾಲಯಗಳು ಕೇಳಿದ್ದ ಸಹಾಯಾನುದಾನದ...

ಗ್ಯಾರಂಟಿ ಯೋಜನೆಗಳಿಗೆ ಜಾಹೀರಾತು; 3 ವರ್ಷದಲ್ಲಿ 348.25 ಕೋಟಿ ವೆಚ್ಚ

ಬೆಂಗಳೂರು; ಗ್ಯಾರಂಟಿ ಯೋಜನೆ ಜಾರಿಯಾದ ದಿನದಿಂದ ಜನವರಿ ಅಂತ್ಯದವರೆಗೆ ಜಾಹೀರಾತುಗಳ ಮೂಲಕ...

11,721 ಟ್ರಾನ್ಸ್‌ಫಾರ್ಮ್‌ರ್ ಖರೀದಿ; ಕೇರಳ ವಿದ್ಯುತ್ ಕಂಪನಿಗೆ 4 ಜಿ ವಿನಾಯಿತಿ ಅಧಿಸೂಚನೆ, ಕವಿಕಾಕ್ಕೆ 174.73 ಕೋಟಿ ಆದಾಯ ತಪ್ಪಿಸಿತೇ ಕಾಂಗ್ರೆಸ್ ಸರ್ಕಾರ?

ಬೆಂಗಳೂರು;  ರಾಜ್ಯದ ಬೆಂಗಳೂರು, ಹುಬ್ಬಳ್ಳಿ, ಮಂಗಳೂರು ವಿದ್ಯುತ್ ಸರಬರಾಜು ಕಂಪನಿಗಳಿಗೆ ಅವಶ್ಯಕವಿರುವ 11,721...

ಗಾಲ್ಫ್‌ ಅಸೋಸಿಯೇಷನ್‌ನ ಜಮೀನಿನ ಸರ್ವೇ, ಆದಾಯ ಪರಿಶೀಲನೆ; ಜಿಬಿಎ ಮುಖ್ಯ ಆಯುಕ್ತ, ಜಿಲ್ಲಾಧಿಕಾರಿಗೆ ಪತ್ರ ಬರೆದ ಸರ್ಕಾರ

ಬೆಂಗಳೂರು;  ಕರ್ನಾಟಕ ಗಾಲ್ಫ್‌ ಅಸೋಸಿಯೇಷನ್ ಸಂಸ್ಥೆಗೆ ನೀಡಲಾಗಿರುವ ಜಮೀನಿನ ಸರ್ವೇ ನಡೆಸಲು...

Topics

ಪಿಂಚಣಿಗೆ ಕೇಳಿದ್ದು 5.63 ಕೋಟಿ, ಬಜೆಟ್‌ನಲ್ಲಿ ನಿಗದಿಪಡಿಸಿದ್ದು ಕೇವಲ 1 ಲಕ್ಷ; ಆರ್ಥಿಕ ಮುಗ್ಗಟ್ಟಿಗೆ ಸಿಲುಕಲಿದೆಯೇ ವಿಶ್ವವಿದ್ಯಾಲಯ?

ಬೆಂಗಳೂರು; ಬೋಧಕ, ಬೋಧಕೇತರ ಸಿಬ್ಬಂದಿಗಳಿಗೆ ಪಿಂಚಣಿ  ಪಾವತಿಸಲು ವಿಶ್ವವಿದ್ಯಾಲಯಗಳು ಕೇಳಿದ್ದ ಸಹಾಯಾನುದಾನದ...

ಗ್ಯಾರಂಟಿ ಯೋಜನೆಗಳಿಗೆ ಜಾಹೀರಾತು; 3 ವರ್ಷದಲ್ಲಿ 348.25 ಕೋಟಿ ವೆಚ್ಚ

ಬೆಂಗಳೂರು; ಗ್ಯಾರಂಟಿ ಯೋಜನೆ ಜಾರಿಯಾದ ದಿನದಿಂದ ಜನವರಿ ಅಂತ್ಯದವರೆಗೆ ಜಾಹೀರಾತುಗಳ ಮೂಲಕ...

11,721 ಟ್ರಾನ್ಸ್‌ಫಾರ್ಮ್‌ರ್ ಖರೀದಿ; ಕೇರಳ ವಿದ್ಯುತ್ ಕಂಪನಿಗೆ 4 ಜಿ ವಿನಾಯಿತಿ ಅಧಿಸೂಚನೆ, ಕವಿಕಾಕ್ಕೆ 174.73 ಕೋಟಿ ಆದಾಯ ತಪ್ಪಿಸಿತೇ ಕಾಂಗ್ರೆಸ್ ಸರ್ಕಾರ?

ಬೆಂಗಳೂರು;  ರಾಜ್ಯದ ಬೆಂಗಳೂರು, ಹುಬ್ಬಳ್ಳಿ, ಮಂಗಳೂರು ವಿದ್ಯುತ್ ಸರಬರಾಜು ಕಂಪನಿಗಳಿಗೆ ಅವಶ್ಯಕವಿರುವ 11,721...

ಗಾಲ್ಫ್‌ ಅಸೋಸಿಯೇಷನ್‌ನ ಜಮೀನಿನ ಸರ್ವೇ, ಆದಾಯ ಪರಿಶೀಲನೆ; ಜಿಬಿಎ ಮುಖ್ಯ ಆಯುಕ್ತ, ಜಿಲ್ಲಾಧಿಕಾರಿಗೆ ಪತ್ರ ಬರೆದ ಸರ್ಕಾರ

ಬೆಂಗಳೂರು;  ಕರ್ನಾಟಕ ಗಾಲ್ಫ್‌ ಅಸೋಸಿಯೇಷನ್ ಸಂಸ್ಥೆಗೆ ನೀಡಲಾಗಿರುವ ಜಮೀನಿನ ಸರ್ವೇ ನಡೆಸಲು...

866.59 ಕೋಟಿ ರು ಮೊತ್ತದ 399 ಬಳಕೆ ಪ್ರಮಾಣ ಪತ್ರಗಳ ಸಲ್ಲಿಕೆಗೆ ಬಾಕಿ ಉಳಿಸಿಕೊಂಡ ಇಲಾಖೆಗಳು; ಅನುದಾನ ದುರುಪಯೋಗ ಸಾಧ್ಯತೆ?

ಬೆಂಗಳೂರು; ರಾಜ್ಯದ ಹಲವು ಇಲಾಖೆಗಳು ಬಳಕೆ ಪ್ರಮಾಣ ಪತ್ರಗಳನ್ನು ಸಲ್ಲಿಕೆಯಲ್ಲಿ ತೀವ್ರ...

ಸರ್ಕಾರಿ ಸೇವೆ; ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಪ್ರಾತಿನಿಧ್ಯ ಎರಡು ವರ್ಷದಲ್ಲಿ ಇಳಿಕೆಯಾಗಿದೆಯೇ?

ಬೆಂಗಳೂರು; ರಾಜ್ಯ ಸರ್ಕಾರದ ಶಿಕ್ಷಣ, ಒಳಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ...

Related Articles

Popular Categories

error: Content is protected !!