Friday | March 27, 2026 |

ಇನಾಂ ದತ್ತಾತ್ರೇಯ ಪೀಠದ ಸರ್ಕಾರಿ ಜಮೀನು ಮಾರಾಟ; ಗಣಿ ಸಚಿವರ ಪತ್ರ ಆಧರಿಸಿ ವರದಿಗೆ ನಿರ್ದೇಶನ

Support THE-FILE

spot_img

ಬೆಂಗಳೂರು; ಚಿಕ್ಕಮಗಳೂರಿನ ಇನಾಂ ದತ್ತಾತ್ರೇಯ ಪೀಠದ ಗ್ರಾಮದ 7 ಸರ್ವೆ ನಂಬರ್‍‌ಗಳಲ್ಲಿನ  ಒಟ್ಟು 28.19 ಎಕರೆ ವಿಸ್ತೀರ್ಣದ ಜಮೀನಿನ ದಾಖಲೆಗಳಲ್ಲಿ ನಮೂದಾಗಿರುವ ‘ಸರ್ಕಾರಿ’ ಎಂಬುದನ್ನು  ತೆಗೆದು ಮಾರಾಟ ಮಾಡಲು ಅನುಮತಿ ನೀಡಲು ಕ್ರಮಕೈಗೊಳ್ಳಬೇಕು ಎಂದು ಗಣಿ, ಭೂ ವಿಜ್ಞಾನ ಸಚಿವ ಎಸ್‌ ಎಸ್‌ ಮಲ್ಲಿಕಾರ್ಜುನ್‌ ಅವರು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

 

ಚಿಕ್ಕಮಗಳೂರು ತಾಲೂಕಿನ ಇನಾಂ ದತ್ತಾತ್ರೇಯ ಪೀಠದ ಗ್ರಾಮದಲ್ಲಿನ 1,861 ಎಕರೆ 31 ಗುಂಟೆ ಜಮೀನಿಗೆ ಸಂಬಂಧಿಸಿದಂತೆ ನಕಲಿ ದಾಖಲೆಗಳನ್ನು ಸೃಷ್ಟಿ ಅಕ್ರಮವಾಗಿ ಖಾತೆ ಮಾಡಿರುವ ಈಗಾಗಲೇ ತನಿಖಾ ವರದಿ ಸಲ್ಲಿಕೆಯಾಗಿದೆ. ಇದರ ಬೆನ್ನಲ್ಲೇ ಸಚಿವ ಎಸ್‌ ಎಸ್‌ ಮಲ್ಲಿಕಾರ್ಜುನ್‌ ಅವರು ಬರೆದಿರುವ ಪತ್ರವು ಮುನ್ನೆಲೆಗೆ ಬಂದಿದೆ.

 

ಈ ಪತ್ರವನ್ನಾಧರಿಸಿ ವಿವರವಾದ ವರದಿಯನ್ನು ಸಲ್ಲಿಸಬೇಕು ಎಂದು ಕಂದಾಯ ಇಲಾಖೆಯು 2024ರ ಮಾರ್ಚ್‌ 16ರಂದು ಪತ್ರ ಬರೆದಿದೆ. ಈ ಪತ್ರಗಳು ಮತ್ತು ಜಮೀನಿಗೆ ಸಂಬಂಧಿಸಿದ ಆರ್‍‌ಟಿಸಿ ಪಹಣಿ ದಾಖಲೆಗಳು ‘ದಿ ಫೈಲ್‌’ಗೆ ಲಭ್ಯವಾಗಿವೆ.

 

ಪ್ರಕರಣದ ವಿವರ

 

ಚಿಕ್ಕಮಗಳೂರು ತಾಲೂಕಿನ ಜಗರಾ ಹೋಬಳಿಯ ಇನಾಂ ದತ್ತಾತ್ರೇಯ ಪೀಠದ ಗ್ರಾಮದ ಸರ್ವೆ ನಂಬರ್‍‌ 61/1, 61/2, 61/3, 65, 66, 105, 108 ಸರ್ವೆ ನಂಬರ್‍‌ಗಳಲ್ಲಿ ಒಟ್ಟಾರೆ 28.19 ಎಕರೆ ವಿಸ್ತೀರ್ಣ ಜಮೀನು ಸರ್ಕಾರಿ ಜಮೀನು ಎಂದು ಆರ್‍‌ಟಿಸಿ ಪಹಣಿ ದಾಖಲೆಗಳಲ್ಲಿ ನಮೂದಾಗಿದೆ.

 

ಸರ್ವೆ ನಂಬರ್‍‌ 61/1 ರಲ್ಲಿ 4.29, ಎಕರೆ

 

 

61/2ರಲ್ಲಿ 2.17 ಎಕರೆ

 

 

ಸರ್ವೇ ನಂಬರ್‍‌ 61/3ರಲ್ಲಿ 3.04 ಎಕರೆ

 

 

ಸರ್ವೆ ನಂಬರ್‍‌ 65ರಲ್ಲಿ 6.00 ಎಕರೆ

 

 

ಸರ್ವೆ ನಂಬರ್‍‌ 66ರಲ್ಲಿ 3.34 ಎಕರೆ

 

 

ಸರ್ವೆ ನಂಬರ್ 105ರಲ್ಲಿ 5.06 ಎಕರೆ

 

 

ಸರ್ವೆ ನಂಬರ್‍‌ 108ರಲ್ಲಿ 4.29

 

 

ಈ ಸರ್ವೆ ನಂಬರ್‍‌ಗಳಲ್ಲಿ ಒಟ್ಟಾರೆ 28.19 ಎಕರೆ ವಿಸ್ತೀರ್ಣವಿರುವುದು ಆರ್‍‌ಟಿಸಿ ದಾಖಲೆಗಳಿಂದ ಗೊತ್ತಾಗಿದೆ.

 

ಈ ಜಮೀನುಗಳ ದಾಖಲೆಗಳಲ್ಲಿ ಈಗಲೂ ಸರ್ಕಾರಿ ಎಂದೇ ನಮೂದಾಗಿದೆ. ಆದರೆ ಈ ಜಮೀನುಗಳನ್ನು ಸೊಕ್ಕಲಿಂಗಂ ಎಂಬುವರು 1994ರ ಜನವರಿ 27ರಂದು ಖರೀದಿಸಿದ್ದರು. 1994ರಿಂದಲೂ ಈಗಿನವರೆಗೂ ಈ ಜಮೀನುಗಳು ಸೊಕ್ಕಲಿಂಗಂ ಎಂಬುವರು ಹಕ್ಕುದಾರರಾಗಿದ್ದಾರೆ ಎಂಬುದು ಪಹಣಿಯಿಂದ ತಿಳಿದು ಬಂದಿದೆ.

 

ಈ ಜಮೀನುಗಳನ್ನು ಸೊಕ್ಕಲಿಂಗಂ ಮಾರಾಟ ಮಾಡುವ ಸಂಬಂಧ ಗಣಿ ಮತ್ತು ಭೂ ವಿಜ್ಞಾನ ಸಚಿವ ಎಸ್‌ ಎಸ್‌ ಮಲ್ಲಿಕಾರ್ಜುನ್‌ ಅವರಿಗೆ ಮನವಿ ಮಾಡಿಕೊಂಡಿದ್ದರು. ಈ ಮನವಿಯನ್ನಾಧರಿಸಿ ಸಚಿವ ಎಸ್‌ ಎಸ್‌ ಮಲ್ಲಿಕಾರ್ಜುನ್‌ ಅವರು 2023ರ ಅಕ್ಟೋಬರ್‍‌ 10ರಂದು ಸಚಿವ ಕೃಷ್ಣಬೈರೇಗೌಡ ಅವರಿಗೆ ಪತ್ರವೊಂದನ್ನು ಬರೆದಿದ್ದರು.

 

ಸೊಕ್ಕಲಿಂಗಂ ಪತ್ರದಲ್ಲೇನಿದೆ?

 

ಚಿಕ್ಕಮಗಳೂರು ತಾಲೂಕು ಜಗರಾ ಹೋಬಳಿಯ ಇನಾಂ ದತ್ತಾತ್ರೇಯ ಪೀಠ ಗ್ರಾಮದ ಸರ್ವೆ ನಂಬರ್‍‌ 61/1, 61/2, 61/3, 65, 66, 105, 108ರಲ್ಲಿನ ಜಮೀನುಗಳಲ್ಲಿ ಕಾಫಿ ಪ್ಲಾಂಟೇಷನ್‌ಗಳಾಗಿವೆ. ಈ ಜಮೀನುಗಳು ಸರ್ಕಾರಿ ಭೂಮಿಯಾಗಿದ್ದು 1986ರ ಜನವರಿ 30ರಂದು ಭೂ ನ್ಯಾಯಾಧೀಕರಣದ ಅಧ್ಯಕ್ಷರ ಆದೇಶದ ಪ್ರಕಾರ ಈ ಸರ್ವೇ ನಂಬರ್‍‌ಗಳು ಸರ್ಕಾರಿ ಜಮೀನುಗಳೆಂದು ನಮೂದಿಸಿ ಆದೇಶ ಮಾಡಿರುತ್ತಾರೆ.

 

1994ರ ಜನವರಿ 27ರಂದು ಈ ಜಮೀನುಗಳನ್ನು ಸೊಕ್ಕಲಿಂಗಂ ಅವರು ಖರೀದಿಗೆ ಪಡೆದಿದ್ದು ಸದರಿ ದಿನಾಂಕದಿಂದ ಇಲ್ಲಿಯವರೆಗೂ ಸಂಪೂರ್ಣ ಹಕ್ಕುದಾರರು, ಅನುಭವದಾರರು ಮತ್ತು ಸ್ವಾಧೀನವುಳ್ಳ ಮಾಲೀಕನಾಗಿರುತ್ತೇನೆ. ನನಗೆ ಗೃಹ ಕೃತ್ಯದ ಖರ್ಚಿಗಾಗಿ ಸಾಲ ತೀರುವಳಿ ಮಾಡುವ ಉದ್ದೇಶವಿರುವುದರಿಂದ ಮತ್ತು ಹಣದ ಅವಶ್ಯಕತೆ ಇರುವುದರಿಂದ ಈ ಜಮೀನುಗಳನ್ನು ಸಚಿನ್‌ ಆಚಾರ್ಯ ಎಂಬುವರಿಗೆ ಮಾರಾಟ ಆಡಲು ಅನುಮತಿ ಕೊಡಿಸಿಕೊಡಬೇಕು ಎಂದು ಸಚಿವ ಎಸ್‌ ಎಸ್‌ ಮಲ್ಲಿಕಾರ್ಜುನ ಅವರಿಗೆ ಕೋರಿದ್ದರು.

 

ಈ ಪತ್ರವನ್ನು ಆಧರಿಸಿ ಸಚಿವ ಎಸ್‌ ಎಸ್‌ ಮಲ್ಲಿಕಾರ್ಜುನ್‌ ಅವರು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರಿಗೆ ಪತ್ರ ಬರೆದಿದ್ದಾರೆ. ಈ ಪತ್ರದ ಮೇಲೆಯೇ ಸಚಿವ ಕೃಷ್ಣ ಬೈರೇಗೌಡ ಅವರು ಚರ್ಚಿಸಿ ಎಂದು ಸೂಚಿಸಿರುವುದು ಪತ್ರದಿಂದ ಗೊತ್ತಾಗಿದೆ.

 

ಅಧಿಕಾರಿಗಳು ಸಚಿವರೊಂದಿಗೆ ಚರ್ಚಿಸಿದ್ದಾರೆ. ಈ ಕುರಿತು ನಿಯಮಾನುಸಾರ ಪರಿಶೀಲಿಸಿ ವಿವರವಾದ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಕಂದಾಯ ಇಅಲಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಚಿಕ್ಕಮಗಳೂರು ಜಿಲ್ಲಾಧಿಕಾರಿಗೆ 2024ರ ಮಾರ್ಚ್‌ 16ರಂದೇ ಪತ್ರ ಬರೆದಿರುವುದು ತಿಳಿದು ಬಂದಿದೆ.

Hot this week

ನರೇಗಾ ವಸತಿ ಕಾಮಗಾರಿಗಳಲ್ಲಿ ಮೋಸದ ಪಾವತಿ; ಚೆಕ್ ಡ್ಯಾಂ ಕಾಮಗಾರಿಯೇ ಇಲ್ಲ, ಆದರೂ ಹಣ ಪಾವತಿ

ಬೆಂಗಳೂರು; 847 ಸಂಖ್ಯೆ ವಸತಿ  ಕಾಮಗಾರಿಗಳಲ್ಲಿ  ಮೋಸದ ಪಾವತಿಗಳಾಗಿರುವುದನ್ನು ಭಾರತದ ಲೆಕ್ಕ...

42,750 ಕೋಟಿ ದೀರ್ಘಾವಧಿ ಸಾಲ, 4,516 ಕೋಟಿ ಆದಾಯ ಕೊರತೆ; ಎಸ್ಕಾಂಗಳ ಆರ್ಥಿಕ ಸ್ಥಿತಿ ಅನಾವರಣ

ಬೆಂಗಳೂರು; ವಿದ್ಯುತ್ ಸರಬರಾಜು ಕಂಪನಿಗಳು ಇದುವರೆಗೆ ಒಟ್ಟಾರೆ 42,750 ಕೋಟಿಗಳಷ್ಟು ದೀರ್ಘಾವಧಿ...

ಹಿಂದುಳಿದ ವರ್ಗ ವಸತಿ ಶಾಲೆ ಕಟ್ಟಡಗಳು ಶಿಥಿಲ; ಕಟ್ಟಡಗಳ ದುರಸ್ತಿಗೂ ಅನುದಾನವಿಲ್ಲ, ‘ಕೈ’ ಎತ್ತಿದ ಸರ್ಕಾರ

ಬೆಂಗಳೂರು;  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವಸತಿ ಶಾಲೆಗಳು ಶಿಥಿಲಗೊಂಡಿದ್ದರೂ...

ನರೇಗಾ ಕಾಮಗಾರಿಗಳ ಆರಂಭದ ದಿನಾಂಕವೂ ಇಲ್ಲ, ದತ್ತಾಂಶವೂ ಇಲ್ಲ; 1,007.83 ಕೋಟಿ ರು. ವೆಚ್ಚದ ಕಾಮಗಾರಿಗಳು ಅಪೂರ್ಣ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡಿದ್ದ ಕಾಮಗಾರಿಗಳ ಪೈಕಿ ಒಂದು ವ‍ರ್ಷಕ್ಕಿಂತಲೂ ಹೆಚ್ಚು...

ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿಗಳ ಕುಟುಂಬ ಸದಸ್ಯರ ಉದ್ಯಮ, ಹಣಕಾಸಿನ ವ್ಯವಹಾರ; ಸದನಕ್ಕೆ ಒದಗಿಸಬಹುದೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಖಿಲ ಭಾರತ...

Topics

ನರೇಗಾ ವಸತಿ ಕಾಮಗಾರಿಗಳಲ್ಲಿ ಮೋಸದ ಪಾವತಿ; ಚೆಕ್ ಡ್ಯಾಂ ಕಾಮಗಾರಿಯೇ ಇಲ್ಲ, ಆದರೂ ಹಣ ಪಾವತಿ

ಬೆಂಗಳೂರು; 847 ಸಂಖ್ಯೆ ವಸತಿ  ಕಾಮಗಾರಿಗಳಲ್ಲಿ  ಮೋಸದ ಪಾವತಿಗಳಾಗಿರುವುದನ್ನು ಭಾರತದ ಲೆಕ್ಕ...

42,750 ಕೋಟಿ ದೀರ್ಘಾವಧಿ ಸಾಲ, 4,516 ಕೋಟಿ ಆದಾಯ ಕೊರತೆ; ಎಸ್ಕಾಂಗಳ ಆರ್ಥಿಕ ಸ್ಥಿತಿ ಅನಾವರಣ

ಬೆಂಗಳೂರು; ವಿದ್ಯುತ್ ಸರಬರಾಜು ಕಂಪನಿಗಳು ಇದುವರೆಗೆ ಒಟ್ಟಾರೆ 42,750 ಕೋಟಿಗಳಷ್ಟು ದೀರ್ಘಾವಧಿ...

ಹಿಂದುಳಿದ ವರ್ಗ ವಸತಿ ಶಾಲೆ ಕಟ್ಟಡಗಳು ಶಿಥಿಲ; ಕಟ್ಟಡಗಳ ದುರಸ್ತಿಗೂ ಅನುದಾನವಿಲ್ಲ, ‘ಕೈ’ ಎತ್ತಿದ ಸರ್ಕಾರ

ಬೆಂಗಳೂರು;  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವಸತಿ ಶಾಲೆಗಳು ಶಿಥಿಲಗೊಂಡಿದ್ದರೂ...

ನರೇಗಾ ಕಾಮಗಾರಿಗಳ ಆರಂಭದ ದಿನಾಂಕವೂ ಇಲ್ಲ, ದತ್ತಾಂಶವೂ ಇಲ್ಲ; 1,007.83 ಕೋಟಿ ರು. ವೆಚ್ಚದ ಕಾಮಗಾರಿಗಳು ಅಪೂರ್ಣ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡಿದ್ದ ಕಾಮಗಾರಿಗಳ ಪೈಕಿ ಒಂದು ವ‍ರ್ಷಕ್ಕಿಂತಲೂ ಹೆಚ್ಚು...

ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿಗಳ ಕುಟುಂಬ ಸದಸ್ಯರ ಉದ್ಯಮ, ಹಣಕಾಸಿನ ವ್ಯವಹಾರ; ಸದನಕ್ಕೆ ಒದಗಿಸಬಹುದೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಖಿಲ ಭಾರತ...

ನರೇಗಾ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಿಯಮ ಉಲ್ಲಂಘನೆ; 86.67 ಕೋಟಿ ರು ಅಕ್ರಮ ಪತ್ತೆ ಹಚ್ಚಿದ ಸಿಎಜಿ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಮಾನವ ಸಂಪನ್ಮೂಲ ಬಳಕೆಗಾಗಿ ಮಾಡಿಕೊಂಡಿದ್ದ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಡೆದಿದ್ದ...

ಮೋಸದ ವಹಿವಾಟು, ಹೆಚ್ಚಿನ ಪಾವತಿ, ಅಕ್ರಮ ವೆಚ್ಚ; ನರೇಗಾದ ಮತ್ತೊಂದು ಮುಖ ಬಯಲು ಮಾಡಿದ ಸಿಎಜಿ

ಬೆಂಗಳೂರು; ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೈಗೊಂಡಿದ್ದ ಕಾಮಗಾರಿಗಳು...

ಗೃಹಜ್ಯೋತಿ; 23,823.06 ಮಿಲಿಯನ್ ಯೂನಿಟ್ ವಿದ್ಯುತ್ ಬಳಕೆ, ಎಸ್ಕಾಂಗಳಿಗೆ 631.75 ಕೋಟಿ ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಗೃಹ ಜ್ಯೋತಿ ಯೋಜನೆ ಅನುಷ್ಠಾನಗೊಳಿಸಿರುವ ವಿದ್ಯುತ್ ಸರಬರಾಜು ಕಂಪನಿಗಳಿಗೆ ಸರ್ಕಾರವು...

Related Articles

Popular Categories

error: Content is protected !!