Friday | April 17, 2026 |

ಕರ್ನಾಟಕ ಭವನಕ್ಕೆ ಕಾರು ಖರೀದಿ; ಹೊಟ್ಟೆಗೆ ಹಿಟ್ಟಿಲ್ಲದಿದ್ದರೂ ಜುಟ್ಟಿಗೆ ಮಲ್ಲಿಗೆ ಹೂ ಎಂದು ಜರಿದ ಬಿಜೆಪಿ

ಬೆಂಗಳೂರು; ನವದೆಹಲಿಯಲ್ಲಿರುವ ಕರ್ನಾಟಕ ಭವನಕ್ಕೆ ಹೊಸದಾಗಿ 7 ಕಾರುಗಳನ್ನು ಖರೀದಿಸಲು ಅಧಿಸೂಚನೆ ಹೊರಡಿಸಿರುವ ಸರ್ಕಾರದ ನಡೆಯನ್ನು  ರಾಜ್ಯ ಬಿಜೆಪಿಯು ಟೀಕಿಸಿದೆ. ಈ ಕುರಿತು ‘ದಿ ಫೈಲ್‌’ ಪ್ರಕಟಿಸಿದ್ದ ವರದಿಯನ್ನು ಅಧಿಕೃತ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿರುವ ಬಿಜೆಪಿಯು ಹೊಟ್ಟೆಗೆ ಹಿಟ್ಟಿಲ್ಲದಿದ್ದರೂಈ ಜುಟ್ಟಿಗೆ ಮಲ್ಲಿಗೆ ಹೂ ಎಂದು ಜರಿದಿದೆ.

 

ರಾಜ್ಯದಲ್ಲಿ ಎದುರಾಗಿರುವ ಭೀಕರ ಬರಗಾಲ ಪರಿಸ್ಥಿತಿ ನಿಭಾಯಿಸಲು ಹಣದ ಕೊರತೆ ಮತ್ತು ಕೇಂದ್ರ ಸರ್ಕಾರವು ನೀಡುತ್ತಿರುವ ಪರಿಹಾರದ ಮೊತ್ತ ಸಾಕಾಗುತ್ತಿಲ್ಲ ಎಂದು ಪದೇ ಪದೇ ಬೀದಿಗಿಳಿಯುತ್ತಿರುವ ಹೊತ್ತಿನಲ್ಲೇ ಇದೀಗ ನವದೆಹಲಿಯ ಕರ್ನಾಟಕ ಭವನಕ್ಕೆ ಹೊಸದಾಗಿ 7 ಕಾರುಗಳನ್ನು ಖರೀದಿಸಲು ಅಧಿಸೂಚನೆ ಹೊರಡಿಸಿತ್ತು. ಈ ಕುರಿತು ರಾಜ್ಯ ಬಿಜೆಪಿಯು ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ಟೀಕಿಸಿದೆ.

 

‘ಹೊಟ್ಟೆಗೆ ಹಿಟ್ಟಿಲ್ಲದಿದ್ದರೂ ಜುಟ್ಟಿಗೆ ಮಲ್ಲಿಗೆ ಹೂವು” ಇದು ಸರ್ಕಾರ ರಾಜ್ಯವನ್ನು ದಿವಾಳಿ ಮಾಡುತ್ತಿರುವ ಪರಿ. ಶತಮಾನದಲ್ಲಿಯೇ ಕಂಡು ಕೇಳರಿಯದಂತಹ ಭೀಕರ ಬರ ಎದುರಾದರೂ ರೈತರಿಗೆ ಬರ ಪರಿಹಾರ ನೀಡುವಲ್ಲಿ ರಾಜಕೀಯ ಮಾಡಿದ ಸಿಎಂ ಅವರು, ದೆಹಲಿಯ ಕರ್ನಾಟಕ ಭವನಕ್ಕೆ ಹೊಸದಾಗಿ 7 ದುಬಾರಿ ಕಾರುಗಳನ್ನು ಖರೀದಿಸಲು ಅನುಮೋದನೆ ನೀಡಿದ್ದಾರೆ. ಕೋಟಿಗಟ್ಟಲೆ ಹಣ ವ್ಯಯಿಸಿ ದುಬಾರಿ ಕಾರುಗಳನ್ನು ಖರೀದಿಸುವ ಬದಲು, ಅದೇ ದುಡ್ಡಿನಲ್ಲಿ ರೈತರಿಗೆ ಬರ ಪರಿಹಾರ ನೀಡಲು ರೈತ ವಿರೋಧಿ ಸಿದ್ದರಾಮಯ್ಯನವರ ಮನಸ್ಥಿತಿ ಒಪ್ಪುತ್ತಿಲ್ಲ. ಇಂತಹ ರೈತ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಮೇ 7 ರಂದು ಪ್ರತಿಯೊಬ್ಬ ನಾಡಿನ ಹೆಮ್ಮೆಯ ರೈತರು ತಕ್ಕ ಉತ್ತರ ನೀಡಬೇಕು,’  ಎಂದು ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದೆ.

 

 

ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ಅಲ್ಪಾವಧಿಯಲ್ಲೇ ಸಚಿವರಿಗೆ 9.90 ಕೋಟಿ ರು. ವೆಚ್ಚದಲ್ಲಿ ಹೊಸದಾಗಿ ಕಾರುಗಳನ್ನು ಖರೀದಿಸಿತ್ತು. ಅದೇ ಸಂದರ್ಭದಲ್ಲೂ ನವದೆಹಲಿಯಲ್ಲಿರುವ ಕರ್ನಾಟಕ ಭವನಕ್ಕೂ ಕಾರುಗಳನ್ನು ಖರೀದಿಸಿತ್ತು.

 

 

ಭೀಕರ ಬರದ ನಡುವೆಯೂ 1.36 ಕೋಟಿ ರು ವೆಚ್ಚದಲ್ಲಿ 7 ಹೊಸ ಕಾರುಗಳ ಖರೀದಿ

ನವದೆಹಲಿಯಲ್ಲಿರುವ ಕರ್ನಾಟಕ ಭವನಕ್ಕೆ ಅವಶ್ಯಕವಿರುವ 7 ವಾಹನಗಳನ್ನು ಪ್ರತಿ ವಾಹನಕ್ಕೆ  19,46,421 ರು.ಗಳಂತೆ ಒಟ್ಟಾರೆ 1,36,24,947 ರು.ಗಳ ವೆಚ್ಚದಲ್ಲಿ ಖರೀದಿಸಲು ಕೆಟಿಪಿಪಿ ಕಾಯ್ದೆ ಅಡಿ 4(ಜಿ) ವಿನಾಯಿತಿ ನೀಡಿತ್ತು.

 

ಗ್ಯಾರಂಟಿ ಯೋಜನೆಗಳಿಗೆ ಸಂಪನ್ಮೂಲ ಕ್ರೋಢೀಕರಣ ಮತ್ತು ಸದ್ಯ ಎದುರಾಗಿರುವ ಬರ ಪರಿಸ್ಥಿತಿ, ಬರ ಪರಿಹಾರಕ್ಕೆ ಅನುದಾನ ಒದಗಿಸಲು ಏದುಸಿರು ಬಿಡುತ್ತಿದೆ. ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ ಟ್ರಾಮಾ ಕೇರ್‍‌ ಕೇಂದ್ರಕ್ಕೆ ಅನುದಾನವನ್ನೂ ಕಡಿತಗೊಳಿಸಿತ್ತು.

ಟ್ರಾಮಾ ಕೇರ್ ಕೇಂದ್ರಕ್ಕೆ ಶೇ.60ರಷ್ಟು ಅನುದಾನ ಕಡಿತ; ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಹಣವಿಲ್ಲವೇ?

ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯ ಅವರು ನವದೆಹಲಿಯಲ್ಲಿ ಓಡಾಟ ನಡೆಸಲು 2023ರಲ್ಲೇ ಹೊಸ ಕಾರನ್ನು ಖರೀದಿಸಲಾಗಿತ್ತು. ಅಲ್ಲದೇ  ಅನುದಾನ ಲಭ್ಯವಿಲ್ಲದಿದ್ದರೂ ಎಲ್ಲಾ  ಸಚಿವರಿಗೆ ಹೊಸ ಕಾರು ಖರೀದಿಸಲು ಹೆಚ್ಚುವರಿಯಾಗಿ ಅನುದಾನ ಒದಗಿಸಿತ್ತು.  ಅಲ್ಲದೇ ಹಳೆಯ ವಾಹನಗಳನ್ನು ಬದಲಾಯಿಸುವುದನ್ನು ಒಳಗೊಂಡಂತೆ ಹೊಸ ವಾಹನಗಳನ್ನು ಖರೀದಿಸಲು ಸಂಪೂರ್ಣವಾಗಿ ತಡೆಹಿಡಿಯಲಾಗಿತ್ತು. ಆದರೂ ರಾಜ್ಯ ಕಾಂಗ್ರೆಸ್‌ ಸರ್ಕಾರವು ಅನುದಾನವಿಲ್ಲದಿದ್ದರೂ  ಸಚಿವರಿಗೆ ಹೊಸ  ಕಾರುಗಳನ್ನು ಖರೀದಿಸಲು  9.90 ಕೋಟಿ ರು. ಅನುದಾನ ಒದಗಿಸಿತ್ತು.

 

ಸಚಿವರಿಗೆ ಹೊಸ ಕಾರುಗಳು; ಹೆಚ್ಚುವರಿ ಅನುದಾನ, ಖರೀದಿ ಮೊತ್ತ ಮಿತಿಯೂ ಹೆಚ್ಚಳ, ಸುತ್ತೋಲೆ ಉಲ್ಲಂಘನೆ

ಈ ಲೆಕ್ಕ ಶೀರ್ಷಿಕೆ ( 4070-00-800-0-10ಯಲ್ಲಿ )ಯಲ್ಲಿ 500.00 ಲಕ್ಷ ರು. ಮಾತ್ರ ಅನುದಾನವಿತ್ತು. ಆದರೆ 2023ರ ಆಗಸ್ಟ್‌ 13ರವರೆಗೆ 64.94 ಲಕ್ಷ ರು. ವೆಚ್ಚವಾಗಿ 435.06 ಲಕ್ಷ ರು. ಮಾತ್ರ ಲಭ್ಯವಿತ್ತು. ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರ ಹಾಗೂ ಶಾಸಕರೂ ಆಗಿರುವ ಎ ಎಸ್‌ ಪೊನ್ನಣ್ಣ ಅವರಿಗೆ ಹೊಸ ವಾಹನ ಒದಗಿಸಲು ಆರ್ಥಿಕ ಇಲಾಖೆಯು ಸಹಮತಿ ವ್ಯಕ್ತಪಡಿಸಿತ್ತು.

 

ಇದಕ್ಕಾಗಿ 30.00 ಲಕ್ಷ ರು.ಗಳನ್ನು ಕಾಯ್ದಿರಿಸಿದ್ದಲ್ಲಿ ಈ ಲೆಕ್ಕ ಶೀರ್ಷಿಕೆಯಲ್ಲಿ 405.06 ಲಕ್ಷ ರು. ಮಾತ್ರ ಲಭ್ಯವಿತ್ತು. ಹೀಗಾಗಿ ಸಚಿವರಿಗೆ ಹೊಸ ಕಾರುಗಳನ್ನು ಖರೀದಿಸಲು ಅನುದಾನವೇ ಇರಲಿಲ್ಲ.

Hot this week

1704.69 ಕೋಟಿ ರು ಗೆ ಆಕ್ಷೇಪಣೆ; ಸಾವಿರಾರು ಕೋಟಿ ವೆಚ್ಚವಾಗಿದ್ದರೂ ಬಂಡವಾಳ ವೆಚ್ಚ ಕಾಮಗಾರಿಗೆ ಅತ್ಯಲ್ಪ ಮೊತ್ತ ಪರಿಗಣನೆ

ಬೆಂಗಳೂರು; ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಸಾಮಾನ್ಯ ಆಡಳಿತ, ಕಾಮಗಾರಿ, ಆರೋಗ್ಯ, ಕಂದಾಯ,...

ಪಿಂಚಣಿಗೆ ಕೇಳಿದ್ದು 5.63 ಕೋಟಿ, ಬಜೆಟ್‌ನಲ್ಲಿ ನಿಗದಿಪಡಿಸಿದ್ದು ಕೇವಲ 1 ಲಕ್ಷ; ಆರ್ಥಿಕ ಮುಗ್ಗಟ್ಟಿಗೆ ಸಿಲುಕಲಿದೆಯೇ ವಿಶ್ವವಿದ್ಯಾಲಯ?

ಬೆಂಗಳೂರು; ಬೋಧಕ, ಬೋಧಕೇತರ ಸಿಬ್ಬಂದಿಗಳಿಗೆ ಪಿಂಚಣಿ  ಪಾವತಿಸಲು ವಿಶ್ವವಿದ್ಯಾಲಯಗಳು ಕೇಳಿದ್ದ ಸಹಾಯಾನುದಾನದ...

ಗ್ಯಾರಂಟಿ ಯೋಜನೆಗಳಿಗೆ ಜಾಹೀರಾತು; 3 ವರ್ಷದಲ್ಲಿ 348.25 ಕೋಟಿ ವೆಚ್ಚ

ಬೆಂಗಳೂರು; ಗ್ಯಾರಂಟಿ ಯೋಜನೆ ಜಾರಿಯಾದ ದಿನದಿಂದ ಜನವರಿ ಅಂತ್ಯದವರೆಗೆ ಜಾಹೀರಾತುಗಳ ಮೂಲಕ...

11,721 ಟ್ರಾನ್ಸ್‌ಫಾರ್ಮ್‌ರ್ ಖರೀದಿ; ಕೇರಳ ವಿದ್ಯುತ್ ಕಂಪನಿಗೆ 4 ಜಿ ವಿನಾಯಿತಿ ಅಧಿಸೂಚನೆ, ಕವಿಕಾಕ್ಕೆ 174.73 ಕೋಟಿ ಆದಾಯ ತಪ್ಪಿಸಿತೇ ಕಾಂಗ್ರೆಸ್ ಸರ್ಕಾರ?

ಬೆಂಗಳೂರು;  ರಾಜ್ಯದ ಬೆಂಗಳೂರು, ಹುಬ್ಬಳ್ಳಿ, ಮಂಗಳೂರು ವಿದ್ಯುತ್ ಸರಬರಾಜು ಕಂಪನಿಗಳಿಗೆ ಅವಶ್ಯಕವಿರುವ 11,721...

Topics

1704.69 ಕೋಟಿ ರು ಗೆ ಆಕ್ಷೇಪಣೆ; ಸಾವಿರಾರು ಕೋಟಿ ವೆಚ್ಚವಾಗಿದ್ದರೂ ಬಂಡವಾಳ ವೆಚ್ಚ ಕಾಮಗಾರಿಗೆ ಅತ್ಯಲ್ಪ ಮೊತ್ತ ಪರಿಗಣನೆ

ಬೆಂಗಳೂರು; ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಸಾಮಾನ್ಯ ಆಡಳಿತ, ಕಾಮಗಾರಿ, ಆರೋಗ್ಯ, ಕಂದಾಯ,...

ಪಿಂಚಣಿಗೆ ಕೇಳಿದ್ದು 5.63 ಕೋಟಿ, ಬಜೆಟ್‌ನಲ್ಲಿ ನಿಗದಿಪಡಿಸಿದ್ದು ಕೇವಲ 1 ಲಕ್ಷ; ಆರ್ಥಿಕ ಮುಗ್ಗಟ್ಟಿಗೆ ಸಿಲುಕಲಿದೆಯೇ ವಿಶ್ವವಿದ್ಯಾಲಯ?

ಬೆಂಗಳೂರು; ಬೋಧಕ, ಬೋಧಕೇತರ ಸಿಬ್ಬಂದಿಗಳಿಗೆ ಪಿಂಚಣಿ  ಪಾವತಿಸಲು ವಿಶ್ವವಿದ್ಯಾಲಯಗಳು ಕೇಳಿದ್ದ ಸಹಾಯಾನುದಾನದ...

ಗ್ಯಾರಂಟಿ ಯೋಜನೆಗಳಿಗೆ ಜಾಹೀರಾತು; 3 ವರ್ಷದಲ್ಲಿ 348.25 ಕೋಟಿ ವೆಚ್ಚ

ಬೆಂಗಳೂರು; ಗ್ಯಾರಂಟಿ ಯೋಜನೆ ಜಾರಿಯಾದ ದಿನದಿಂದ ಜನವರಿ ಅಂತ್ಯದವರೆಗೆ ಜಾಹೀರಾತುಗಳ ಮೂಲಕ...

11,721 ಟ್ರಾನ್ಸ್‌ಫಾರ್ಮ್‌ರ್ ಖರೀದಿ; ಕೇರಳ ವಿದ್ಯುತ್ ಕಂಪನಿಗೆ 4 ಜಿ ವಿನಾಯಿತಿ ಅಧಿಸೂಚನೆ, ಕವಿಕಾಕ್ಕೆ 174.73 ಕೋಟಿ ಆದಾಯ ತಪ್ಪಿಸಿತೇ ಕಾಂಗ್ರೆಸ್ ಸರ್ಕಾರ?

ಬೆಂಗಳೂರು;  ರಾಜ್ಯದ ಬೆಂಗಳೂರು, ಹುಬ್ಬಳ್ಳಿ, ಮಂಗಳೂರು ವಿದ್ಯುತ್ ಸರಬರಾಜು ಕಂಪನಿಗಳಿಗೆ ಅವಶ್ಯಕವಿರುವ 11,721...

ಗಾಲ್ಫ್‌ ಅಸೋಸಿಯೇಷನ್‌ನ ಜಮೀನಿನ ಸರ್ವೇ, ಆದಾಯ ಪರಿಶೀಲನೆ; ಜಿಬಿಎ ಮುಖ್ಯ ಆಯುಕ್ತ, ಜಿಲ್ಲಾಧಿಕಾರಿಗೆ ಪತ್ರ ಬರೆದ ಸರ್ಕಾರ

ಬೆಂಗಳೂರು;  ಕರ್ನಾಟಕ ಗಾಲ್ಫ್‌ ಅಸೋಸಿಯೇಷನ್ ಸಂಸ್ಥೆಗೆ ನೀಡಲಾಗಿರುವ ಜಮೀನಿನ ಸರ್ವೇ ನಡೆಸಲು...

866.59 ಕೋಟಿ ರು ಮೊತ್ತದ 399 ಬಳಕೆ ಪ್ರಮಾಣ ಪತ್ರಗಳ ಸಲ್ಲಿಕೆಗೆ ಬಾಕಿ ಉಳಿಸಿಕೊಂಡ ಇಲಾಖೆಗಳು; ಅನುದಾನ ದುರುಪಯೋಗ ಸಾಧ್ಯತೆ?

ಬೆಂಗಳೂರು; ರಾಜ್ಯದ ಹಲವು ಇಲಾಖೆಗಳು ಬಳಕೆ ಪ್ರಮಾಣ ಪತ್ರಗಳನ್ನು ಸಲ್ಲಿಕೆಯಲ್ಲಿ ತೀವ್ರ...

Related Articles

Popular Categories

error: Content is protected !!