Sunday | March 22, 2026 |

ಕರಾವಳಿ ನಿಯಂತ್ರಣ ವಲಯದಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಶೇಖರಣೆ; ಸಲ್ಲಿಕೆಯಾಗದ ವರದಿ

Support THE-FILE

spot_img

ಬೆಂಗಳೂರು;  ಕರಾವಳಿ ನಿಯಂತ್ರಣ ವಲಯದಲ್ಲಿ ಕಾರ್ಬನ್ ಬ್ಲ್ಯಾಕ್ ಫೀಡ್ ಸ್ಟಾಕ್ ಮತ್ತು ಎನ್-ಪ್ಯಾರಾಫಿನ್ ಉತ್ಪನ್ನಗಳನ್ನು  ಶೇಖರಣೆ ಮಾಡಲು ವಿಧಿಸಿರುವ ನಿರ್ಬಂಧ ತೆರವುಗೊಳಿಸುವ ಸಂಬಂಧ ಪ್ರಾದೇಶಿಕ ನಿರ್ದೇಶಕರುಗಳು ಏಳೆಂಟು  ತಿಂಗಳಾದರೂ ಸರ್ಕಾರಕ್ಕೆ ವರದಿ ಸಲ್ಲಿಸಿಲ್ಲ.

 

ನಿರ್ಬಂಧ ತೆಗೆದುಹಾಕಬೇಕು ಎಂದು ಅದಾನಿ ಪೋರ್ಟ್ಸ್‌ ಅಂಡ್‌ ಲಾಜಿಸ್ಟಿಕ್ಸ್‌ ಸಂಸ್ಥೆಯು ಕೇಂದ್ರಕ್ಕೆ ಮನವಿ  ಸಲ್ಲಿಸಿತ್ತು. ಇದನ್ನಾಧರಿಸಿ  ವರದಿ ಸಲ್ಲಿಸಲು ಸಕ್ಷಮ ಪ್ರಾಧಿಕಾರಗಳಿಗೆ ರಾಜ್ಯ ಕಾಂಗ್ರೆಸ್‌ ಸರ್ಕಾರವು 2023ರ ಸೆ.2ರಂದು   ನಿರ್ದೇಶನ ನೀಡಿತ್ತು. ಇದುವರೆಗೂ ವರದಿ ನೀಡದ ಕಾರಣ 2024ರ ಜನವರಿ 17ರಂದು ಮತ್ತೊಂದು ಪತ್ರವನ್ನು ಬರೆದಿದೆ.

 

ಈ ಕುರಿತು ‘ದಿ ಫೈಲ್‌’ ಆರ್‌ಟಿಐ ಅಡಿಯಲ್ಲಿ ಕಡತವನ್ನು ಪಡೆದುಕೊಂಡಿದೆ.

 

‘ಪೆಟ್ರೋಲಿಯಂ ಉತ್ಪನ್ನಗಳಾದ ಕಾರ್ಬನ್ ಬ್ಲ್ಯಾಕ್ ಫೀಡ್ ಸ್ಟಾಕ್ ಮತ್ತು ಎನ್-ಪ್ಯಾರಾಫಿನ್ ಉತ್ಪನ್ನಗಳನ್ನು ಕರಾವಳಿ ನಿಯಂತ್ರಣ ವಲಯ ಪ್ರದೇಶದಲ್ಲಿ ಶೇಖರಣೆಗಾಗಿ ಅಧಿಸೂಚನೆಯಲ್ಲಿ ಸೇರ್ಪಡೆಗೊಳಿಸುವ ಕುರಿತು ಅಭಿಪ್ರಾಯ/ವರದಿ ಸಲ್ಲಿಸಬೇಕು ಎಂದು 2023ರ ಸೆ.2ರಂದು ಸೂಚಿಸಲಾಗಿತ್ತು. ಆದರೆ ಸರ್ಕಾರಕ್ಕೆ ಇದುವರೆಗೂ ಸ್ಪಷ್ಟ ಅಭಿಪ್ರಾಯ, ವರದಿಯು ಸ್ವೀಕೃತವಾಗಿಲ್ಲ. ಆದ್ದರಿಂದ ಈ ವಿಷಯದ ಕುರಿತು ಆದ್ಯತೆ ಮೇರೆಗೆ ಪರಿಗಣಿಸಿ ಅಪೇಕ್ಷಿತ ಅಭಿಪ್ರಾಯ, ವರದಿಯನ್ನು ಸರ್ಕಾರಕ್ಕೆ ಕೂಡಲೇ ಸಲ್ಲಿಸಬೇಕು,’ ಎಂದು ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಯು 2024ರ ಜನವರಿ 17ರಂದು  ನಿರ್ದೇಶಿಸಿರುವುದು ಪತ್ರದಿಂದ ಗೊತ್ತಾಗಿದೆ.

 

ಅದಾನಿ ಕಂಪನಿ ಮತ್ತು ಅದಾನಿ ಚಟುವಟಿಕೆಗಳನ್ನು ರಾಹುಲ್‌ ಗಾಂಧಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಬಲವಾಗಿ ಟೀಕಿಸುತ್ತಿರುವ ನಡುವೆಯೇ ಅದಾನಿ ಕಂಪನಿಯ ಮನವಿ ಆಧರಿಸಿ ರಾಜ್ಯ ಕಾಂಗ್ರೆಸ್‌ ಸರ್ಕಾರವು ತಾಂತ್ರಿಕ ವರದಿ ಕೇಳಿರುವುದು ಚರ್ಚೆಗೆ ಗ್ರಾಸವಾಗಿತ್ತು.   ಈ ಕುರಿತು ‘ದಿ ಫೈಲ್‌’ ದಾಖಲೆ ಸಹಿತ ವರದಿ ಪ್ರಕಟಿಸಿತ್ತು.

 

ಕಾರ್ಬನ್ ಬ್ಲ್ಯಾಕ್ ಫೀಡ್, ಪ್ಯಾರಾಫಿನ್ ಉತ್ಪನ್ನ ಶೇಖರಣೆ; ನಿರ್ಬಂಧ ತೆರವಿಗೆ ಅದಾನಿ ಮನವಿ, ವರದಿಗೆ ನಿರ್ದೇಶನ

 

ಪೆಟ್ರೋಲಿಯಂ ಉತ್ನನ್ನಗಳಾದ ಕಾರ್ಬನ್‌ ಬ್ಲಾಕ್‌ ಫೀಡ್‌ ಸ್ಟಾಕ್‌ ಮತ್ತು ಎನ್‌ ಫ್ಯಾರಾಫಿನ್‌ಗಳ ಶೇಖರಣೆಗಾಗಿ ಕರಾವಳಿ ನಿಯಂತ್ರಣ ವಲಯದ 2019ರ ಅಧಿಸೂಚನೆಯಲ್ಲಿ ಸೇರ್ಪಡೆಗೊಳಿಸಲು ಅದಾನಿ ಕಂಪನಿಯು ಸದರನ್‌ ಗುಜರಾತ್‌ ಛೇಂಬರ್‌ ಆಫ್‌ ಕಾಮರ್ಸ್‌ ಇಂಡಸ್ಟ್ರೀಸ್‌ ಮೂಲಕ ಕೇಂದ್ರ ಸರ್ಕಾರದ ಮೊರೆ ಹೊಕ್ಕಿತ್ತು.

 

 

ಅದಾನಿ- ಸದರನ್‌ ಗುಜರಾತ್‌ ಛೇಂಬರ್‌ ಆಫ್‌ ಕಾಮರ್ಸ್‌ ಇಂಡಸ್ಟ್ರೀಸ್‌ ಪತ್ರದಲ್ಲೇನಿದೆ?

 

ಕಾರ್ಬನ್ ಬ್ಲ್ಯಾಕ್ ಫೀಡ್ ಸ್ಟಾಕ್ ಮತ್ತು ಎನ್-ಪ್ಯಾರಾಫಿನ್ ಕೆಲವು ಉತ್ಪನ್ನಗಳಾಗಿದ್ದು, ಇವುಗಳನ್ನು ಶೇಖರಿಸಲು ಸಿಆರ್‌ಝಡ್‌ ಅಧಿಸೂಚನೆಯ ಅಡಿಯಲ್ಲಿ ನಿರ್ಬಂಧಿಸಲಾಗಿದೆ. ಫೋ ಮತ್ತು ಬಿಟುಮೆನ್ ನಂತಹ ಇತರ ರೀತಿಯ ಉತ್ಪನ್ನಗಳನ್ನು ಅನುಮತಿಸಲಾಗಿದೆ. ಇವು ಬಹುತೇಕ ಒಂದೇ ರೀತಿಯ ಗುಣಲಕ್ಷಣಗಳನ್ನು ಹೊಂದಿವೆ. ಪೆಟ್ರೋಲಿಯಂನ ಹಲವು ಉತ್ಪನ್ನಗಳನ್ನು ಈಗಾಗಲೇ ಸಿಆರ್‌ಝಡ್‌ ಅಡಿಯಲ್ಲಿ ಶೇಖರಿಸಲು ಅನುಮೋದಿಸಲಾಗಿದೆ.

 

ಭಾರತದಲ್ಲಿ ಉತ್ಪಾದನೆಯಾಗದ ಹೆಚ್ಚಿನ ರಾಸಾಯನಿಕ ಉತ್ಪನ್ನಗಳನ್ನು ನಮ್ಮ ಪ್ರದೇಶದ ಕೈಗಾರಿಕೆಗಳಿಂದ ಹೆಚ್ಚಾಗಿ ಆಮದು ಮಾಡಿಕೊಳ್ಳಲಾಗುತ್ತದೆ ಮತ್ತು ಈ ಆಮದುಗಳು ಪ್ರದೇಶದ ಅತಿದೊಡ್ಡದಾದ ಅದಾನಿ ಬಂದರಿನಲ್ಲಿ ನಡೆಯುತ್ತದೆ. ಆದರೆ ಸಿಆರ್‌ಝಡ್‌ ಅಧಿಸೂಚನೆ ಪ್ರಕಾರ ಅವುಗಳಿಗೆ ಕೆಲವು ಮಿತಿಗಳನ್ನು ಹೇರಲಾಗಿದೆ. ನಮ್ಮ ಪ್ರದೇಶದಲ್ಲಿ ಪ್ರಾಮುಖ್ಯತೆ ಹೊಂದಿರುವ ಕೆಲವು ಸರಕುಗಳು ಅವರ ಬಂದರು ಅಂತಹ ವರ್ಗದ ಅಡಿಯಲ್ಲಿ ಬರುವುದರಿಂದ ಅವುಗಳನ್ನು ಸಾಗಿಸಲು ಬದ್ಧವಾಗಿಲ್ಲ.

 

 

ಈ ನಿಟ್ಟಿನಲ್ಲಿ ಸ್ಥಳೀಯ ಉದ್ಯಮವು ಹಜಿರಾ ಬಂದರು ಅಧಿಕಾರಿಗಳೊಂದಿಗೆ ನಮ್ಮನ್ನು ಸಂಪರ್ಕಿಸಿದೆ. ಆದ್ದರಿಂದ ಈ ಉತ್ಪನ್ನಗಳನ್ನು ಸಿಆರ್‌ಝಡ್ ಅಧಿಸೂಚನೆಯಲ್ಲಿ ಸೇರಿಸಬೇಕು. ಕಾರ್ಬನ್ ಕಪ್ಪು ಫೀಡ್‌ನ್ನು ಪ್ರಾಥಮಿಕವಾಗಿ ಟೈರ್ ಉದ್ಯಮದಲ್ಲಿ ಕಾರ್ಬನ್ ಕಪ್ಪು ತಯಾರಿಸಲು ಬಳಸಲಾಗುತ್ತದೆ. ರಬ್ಬರ್ ಪ್ರಕ್ರಿಯೆ ತೈಲ, ಅಗರಬತ್ತಿ ಎಣ್ಣೆ ತಯಾರಿಸಲಾಗುತ್ತದೆ.

 

ಮೇಲಿನ ಎಲ್ಲಾ ರಾಸಾಯನಿಕ ದ್ರವಗಳು ಆರೋಗ್ಯಕ್ಕೆ ಕಡಿಮೆ ಅಪಾಯಕಾರಿ. ಕಡಿಮೆ ಬಾಷ್ಪಶೀಲ ಮತ್ತು ಈಗಾಗಲೇ ಅನುಮೋದಿತ ದ್ರವಗಳಿಗಿಂತ ಕಡಿಮೆ ದಹನಕಾರಿ. ಪ್ರಸ್ತಾವಿತ ದ್ರವಗಳು ಮೇಕ್ ಇನ್ ಇಂಡಿಯಾವನ್ನು ಬೆಂಬಲಿಸಲು ಪ್ರಮುಖವಾಗಿವೆ.

 

ದೇಶೀಯ ಉತ್ಪಾದನೆ ಮತ್ತು ಬಳಕೆಯಲ್ಲಿ ದೊಡ್ಡ ಅಂತರವಿದೆ. ಇತರ ಅನುಮೋದಿತ ದ್ರವಗಳಿಗೆ ಸಿಆರ್‌ಝಡ್‌ನಲ್ಲಿ ಅಭಿವೃದ್ಧಿಪಡಿಸಿದ ಟ್ಯಾಂಕ್‌ಗಳಲ್ಲಿನ ಶೇಖರಿಸಿದರೆ ಆಮದುದಾರರಿಗೆ ತಕ್ಷಣದ ಪರಿಹಾರವನ್ನು ನೀಡುತ್ತದೆ ಎಂದು ಪತ್ರದಲ್ಲಿ ವಿವರಿಸಿರುವುದು ಗೊತ್ತಾಗಿದೆ.

Hot this week

ಬೆಳೆ ಹವಾಮಾನ ನಿಗಾ ಸಭೆ ನಡೆಸಿಲ್ಲ, ಮಾಹಿತಿ ವ್ಯವಸ್ಥೆಯೂ ಇಲ್ಲ; ಸಿಎಜಿಯನ್ನೂ ತಪ್ಪುದಾರಿಗೆಳೆದ ಸರ್ಕಾರ

ಬೆಂಗಳೂರು;  ರಾಜ್ಯದಲ್ಲಿ ಬರ ಪರಿಸ್ಥಿತಿ ಮೇಲ್ವಿಚಾರಣೆ ಮಾಡಲು ಬೆಳೆ ಹವಾಮಾನ ನಿಗಾ...

ರಾಡಾರ್ ಸ್ಟ್ರೀಮ್‌ ಗೇಜ್‌, ವೈರ್‍‌ಲೆಸ್‌ ಸಾಧನ ಅಳವಡಿಕೆ; ನಡೆಯದ ತಾಂತ್ರಿಕ ಪರಿಶೀಲನೆ, 3.54 ಕೋಟಿ ವ್ಯರ್ಥ

ಬೆಂಗಳೂರು;  ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಪ್ರವಾಹದ ಮುನ್ನೆಚ್ಚರಿಕೆಗಾಗಿ 2.45 ಕೋಟಿ...

ಎಂ ಆರ್ ಸೀತಾರಾಂ ಕುಟುಂಬ ಸದಸ್ಯರ ವಿರುದ್ಧ ಭೂಕಬಳಿಕೆ ಆರೋಪ; ದೂರು ಮರೆಮಾಚಿತ್ತೇ ಕಂದಾಯ ಇಲಾಖೆ?

ಬೆಂಗಳೂರು; ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕಸಬಾ ಹೋಬಳಿ ಅಕ್ಲೇನಹಳ್ಳಿ...

ನರೇಗಾ ಅಕ್ರಮ; 2 ವರ್ಷದಲ್ಲಿ 105.1 ಕೋಟಿ ದುರುಪಯೋಗ, 12.34 ಕೋಟಿಯಷ್ಟೇ ವಸೂಲು

  ಬೆಂಗಳೂರು; ಕಳೆದ ಮೂರು ವರ್ಷಗಳಲ್ಲಿ  ಮಹಾತ್ಮಗಾಂಧಿ ನರೇಗಾ ಯೋಜನೆಯಡಿ 64,806 ಪ್ರಕರಣಗಳಲ್ಲಿ...

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ...

Topics

ಬೆಳೆ ಹವಾಮಾನ ನಿಗಾ ಸಭೆ ನಡೆಸಿಲ್ಲ, ಮಾಹಿತಿ ವ್ಯವಸ್ಥೆಯೂ ಇಲ್ಲ; ಸಿಎಜಿಯನ್ನೂ ತಪ್ಪುದಾರಿಗೆಳೆದ ಸರ್ಕಾರ

ಬೆಂಗಳೂರು;  ರಾಜ್ಯದಲ್ಲಿ ಬರ ಪರಿಸ್ಥಿತಿ ಮೇಲ್ವಿಚಾರಣೆ ಮಾಡಲು ಬೆಳೆ ಹವಾಮಾನ ನಿಗಾ...

ರಾಡಾರ್ ಸ್ಟ್ರೀಮ್‌ ಗೇಜ್‌, ವೈರ್‍‌ಲೆಸ್‌ ಸಾಧನ ಅಳವಡಿಕೆ; ನಡೆಯದ ತಾಂತ್ರಿಕ ಪರಿಶೀಲನೆ, 3.54 ಕೋಟಿ ವ್ಯರ್ಥ

ಬೆಂಗಳೂರು;  ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಪ್ರವಾಹದ ಮುನ್ನೆಚ್ಚರಿಕೆಗಾಗಿ 2.45 ಕೋಟಿ...

ಎಂ ಆರ್ ಸೀತಾರಾಂ ಕುಟುಂಬ ಸದಸ್ಯರ ವಿರುದ್ಧ ಭೂಕಬಳಿಕೆ ಆರೋಪ; ದೂರು ಮರೆಮಾಚಿತ್ತೇ ಕಂದಾಯ ಇಲಾಖೆ?

ಬೆಂಗಳೂರು; ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕಸಬಾ ಹೋಬಳಿ ಅಕ್ಲೇನಹಳ್ಳಿ...

ನರೇಗಾ ಅಕ್ರಮ; 2 ವರ್ಷದಲ್ಲಿ 105.1 ಕೋಟಿ ದುರುಪಯೋಗ, 12.34 ಕೋಟಿಯಷ್ಟೇ ವಸೂಲು

  ಬೆಂಗಳೂರು; ಕಳೆದ ಮೂರು ವರ್ಷಗಳಲ್ಲಿ  ಮಹಾತ್ಮಗಾಂಧಿ ನರೇಗಾ ಯೋಜನೆಯಡಿ 64,806 ಪ್ರಕರಣಗಳಲ್ಲಿ...

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ...

ರೋಹಿತ್ ವೇಮುಲ ಕಾಯ್ದೆ; ವ್ಯಾಖ್ಯಾನಗಳು ಅಸ್ಪಷ್ಟ, ಕಾನೂನು ಬಲವಿಲ್ಲ, ವಿಧೇಯಕವೇ ಅಪೂರ್ಣ

ಬೆಂಗಳೂರು; ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಯಾರೊಬ್ಬರೂ ಜಾತಿ ಆಧಾರದಲ್ಲಿ ತಾರತಮ್ಯ ಎದುರಿಸಬಾರದು...

ಗ್ರಾಮಠಾಣ ಜಮೀನು ಅದಲು-ಬದಲು; ಆರ್ಥಿಕ ಇಲಾಖೆ ಆಕ್ಷೇಪ ಬದಿಗೊತ್ತಿ ಎಂ ಆರ್ ಸೀತಾರಾಂ ಕುಟುಂಬದ ಬೆನ್ನಿಗೆ ನಿಂತ ಸರ್ಕಾರ

ಬೆಂಗಳೂರು; ಸರ್ಕಾರಿ ಭೂಮಿಗೆ ರಸ್ತೆಯ ಸಂಪರ್ಕ ಹೊಂದಿಲ್ಲದಿರುವ, ರಸ್ತೆ ಸಂಪರ್ಕ ಕಲ್ಪಿಸದೇ...

ಅದಾನಿ ಎಸಿಸಿ ಲಿಮಿಟೆಡ್‌ನಿಂದ ಅಕ್ರಮ ಗಣಿಗಾರಿಕೆ; ನಿರ್ದೇಶಕರು, ಅಧಿಕಾರಿಗಳ ವಿರುದ್ಧ ಲೋಕಾ ತನಿಖೆಗೆ ಶಿಫಾರಸ್ಸು, ಕಡತಕ್ಕೆ ಧೂಳು

ಬೆಂಗಳೂರು;  ಕಲ್ಬುರ್ಗಿಯ ವಾಡಿಯಲ್ಲಿ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್ ಪ್ರೈವೈಟ್ ಲಿಮಿಟೆಡ್...

Related Articles

Popular Categories

error: Content is protected !!