Thursday | May 14, 2026 |

ಕ್ರಿಡಿಲ್‌ ಗುತ್ತಿಗೆದಾರನ ಆತ್ಮಹತ್ಯೆ; 7 ಕಾಮಗಾರಿ ಒಗ್ಗೂಡಿಸಿ ಒಂದೇ ಕಾಮಗಾರಿಗೆ ಬದಲಾಯಿಸಿದ್ದ ಸರ್ಕಾರ

ಬೆಂಗಳೂರು; ದಾವಣಗೆರೆ ಜಿಲ್ಲೆಯ ಸಂತೆಬೆನ್ನೂರು ಗ್ರಾಮದ ಗುತ್ತಿಗೆದಾರ ಪಿ ಎಸ್‌ ಗೌಡರ್‍‌ ಆತ್ಮಹತ್ಯೆ ಪ್ರಕರಣವು ರಾಜಕೀಯಕರಣಗೊಂಡಿರುವ ಬೆನ್ನಲ್ಲೇ ಇದೇ ಪ್ರಕರಣದಲ್ಲಿ ಕ್ರಿಡಿಲ್‌ 7 ಕಾಮಗಾರಿಗಳನ್ನು ಒಗ್ಗೂಡಿಸಿ ಒಂದೇ ಕಾಮಗಾರಿಯನ್ನಾಗಿ ಬದಲಾವಣೆ ಮಾಡಿಕೊಂಡಿತ್ತು ಎಂಬುದು ಇದೀಗ ಬಹಿರಂಗವಾಗಿದೆ.

 

ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯ ವಿಶೇಷ ಕಾರ್ಯದರ್ಶಿ ಚಂದ್ರಶೇಖರ್‍‌ ಅಧ್ಯಕ್ಷತೆಯಲ್ಲಿ ತ್ರಿಸದಸ್ಯರ ಸಮಿತಿ ರಚಿಸಿ 2024ರ ಮೇ 30ರಂದು ಹೊರಡಿಸಿರುವ ಆದೇಶದಲ್ಲಿ ಈ ಮಾಹಿತಿ ಇದೆ. ಇದರ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ಕಾಮಗಾರಿಗಳನ್ನು ನಡೆಸಲಾಗಿತ್ತು ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಅವರು ಹೇಳಿಕೆ ನೀಡಿದ್ದರು. ಆದರೆ 7 ಕಾಮಗಾರಿಗಳನ್ನು ಒಂದೇ ಕಾಮಗಾರಿಗೆ ಒಗ್ಗೂಡಿಸಿ ಸಲ್ಲಿಸಿದ್ದ ಅಂದಾಜು ಪಟ್ಟಿಗೆ 2024ರ ಫೆ.14ರಂದು ಆಡಳಿತಾತ್ಮಕ ಅನುಮೋದನೆ ನೀಡಿತ್ತು ಎಂಬುದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

 

ಪ್ರಿಯಾಂಕ್‌ ಖರ್ಗೆ ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಗೆ ಸಚಿವರಾದ ಅತ್ಯಲ್ಪ ಅವಧಿಯಲ್ಲಿ ಒಂದೇ ಕಾಮಗಾರಿಗೆ ಬದಲಾವಣೆಗೆ ಮಾಡುವ ಪ್ರಸ್ತಾವನೆಯನ್ನು ಕ್ರಿಡಿಲ್‌ ಸಲ್ಲಿಸಿತ್ತು ಎಂಬುದು ಆದೇಶದಿಂದ ಗೊತ್ತಾಗಿದೆ.

 

ವಿಶೇಷವೆಂದರೇ ಈ ಪ್ರಕರಣದ ಕುರಿತು ತನಿಖೆ ನಡೆಸಲು ತ್ರಿಸದಸ್ಯರ ಸಮಿತಿ ರಚಿಸಿ ಆದೇಶ ಹೊರಬಿದ್ದ ದಿನದಂದೇ ಕ್ರಿಡಿಲ್‌ನ ಕೇಂದ್ರ ಕಚೇರಿಯು 2024ರ ಮೇ 30ರಂದು ಈ ಅನುದಾನವನ್ನು ಬಿಡುಗಡೆ ಮಾಡಿತ್ತು.

 

ಆದೇಶದಲ್ಲೇನಿದೆ?

 

ಕೆಆರ್‍‌ಐಡಿಎಲ್‌ (ದಾವಣಗೆರೆ) ಕಾರ್ಯಪಾಲಕ ಅಭಿಯಂತರರು ತಲಾ 5.00 ಲಕ್ಷ ರು. ವೆಚ್ಚದಲ್ಲಿ 7 ಕಾಮಗಾರಿಗಳ ಬದಲಾಗಿ ಸದರಿ ಕಾಮಗಾರಿಗಳನ್ನು ಒಗ್ಗೂಡಿಸಿ 35.00 ಲಕ್ಷ ರು.ಗಳ ಒಂದೇ ಕಾಮಗಾರಿಗೆ ಬದಲಾವಣೆ ಮಾಡಿ ಅನುಮೋದನೆ ನೀಡಲು 2023ರ ಜುಲೈ 29ರಂದು ಕೋರಿದ್ದರು. ಈ ಸಂಬಂಧ 2023ರ ಅಕ್ಟೋಬರ್‍‌ 7ರಂದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. 2024ರ ಜನವರಿ 20ರಂದು 7 ಕಾಮಗಾರಿಗಳನ್ನು ಒಟ್ಟು 35.00 ಲಕ್ಷ ರು. ಒಂದೇ ಕಾಮಗಾರಿಗೆ ಬದಲಾವಣೆ ಮಾಡಿ ಅನುಮೋದನೆ ನೀಡಲಾಗಿತ್ತು ಎಂಬುದು ಆದೇಶದಿಂದ ತಿಳಿದು ಬಂದಿದೆ.

 

ಆ ನಂತರ ಕ್ರಿಡಿಲ್‌ನ ಕಾರ್ಯಪಾಲಕ ಅಭಿಯಂತರರು 7 ಕಾಮಗಾರಿಗಳನ್ನು ಒಗ್ಗೂಡಿಸಿ 35.00 ಲಕ್ಷ ರು. ಗಳ ಒಂದೇ ಕಾಮಗಾರಿಯ ಅಂದಾಜು ಪಟ್ಟಿಯನ್ನು ತಯಾರಿಸಿ 2024ರ ಫೆ.3ರಂದು ಅನುಮೋದನೆ ಕೋರಿ ಪ್ರಸ್ತಾವನೆ ಸಲ್ಲಿಸಿತ್ತು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯು 2024ರ ಫೆ.14ರಂದು ಈ ಅಂದಾಜುಪಟ್ಟಿಗೆ ಆಡಳಿತಾತ್ಮಕ ಅನುಮೋದನೆ ದೊರೆತಿತ್ತು ಎಂಬುದು ಗೊತ್ತಾಗಿದೆ.

 

ಅನುಮೋದನೆಯಾದ 7 ಕಾಮಗಾರಿಗಳ ಅನುಷ್ಠಾನಕ್ಕೆ ಬಿಡುಗಡೆಯಾದ ಅನುದಾನವನ್ನು ಬದಲಾವಣೆಯಾದ ಒಂದು ಕಾಮಗಾರಿಗ ಪಾವತಿಸಲು ಫಾರಂ 9 ಪಡೆಯುವ ಉದ್ದೇಶಕ್ಕಾಗಿ ಕ್ರಿಡಿಲ್‌ನ ಕಾರ್ಯಪಾಲಕ ಅಭಿಯಂತರರು 2024ರ ಫೆ.27ರಂದು ಕೇಂದ್ರ ಕಚೇರಿಗೆ ಹಿಂದಿರುಗಿಸಿದ್ದರು. ಕೇಂದ್ರ ಕಚೇರಿಯು 2024ರ ಮೇ 30ರಂದು ಈ ಅನುದಾನವನ್ನು ಬಿಡುಗಡೆ ಮಾಡಿತ್ತು.

 

ದಾವಣಗೆರೆ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪಿ ಎಸ್‌ ಗೌಡರ್‍‌ ಅವರು 2024ರ ಮೇ 26ರಂದು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣದ ಬಗ್ಗೆ ವರದಿ ಸಲ್ಲಿಸಿದ್ದಾರೆ. ಈ ಕುರಿತು ತನಿಖೆ ನಡೆಸಲು ಇಲಾಖೆಯ ವಿಶೇ‍ಷ ಕಾರ್ಯದರ್ಶಿ ಚಂದ್ರಶೇಖರ್‍‌ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ 2024ರ ಮೇ 30ರಂದು ಆದೇಶ ಹೊರಡಿಸಿದ್ದಾರೆ.

 

ಇಲಾಖೆಯ ಆಂತರಿಕ ಆರ್ಥಿಕ ಸಲಹೆಗಾರಾದ ಪ್ರಿಯಾಂಕ ನೀಷ್ಮಾ ಡಿ ಕೋಸ್ಟ, ಪ್ರಭಾರ ಅಧೀಕ್ಷಕ ಇಂಜಿನಿಯರ್‍‌ ಅಮರಪ್ಪ ಅವರು ಸಮಿತಿ ಸದಸ್ಯರಾಗಿದ್ದಾರೆ.

ಕ್ರಿಡಿಲ್‌ನಿಂದ ಬಾರದ ಬಾಕಿ ಹಣ; ಆತ್ಮಹತ್ಯೆಗೆ ಶರಣಾದ ಗುತ್ತಿಗೆದಾರ, ಪ್ರತಿಪಕ್ಷಗಳ ಕೈಗೆ ಮತ್ತೊಂದು ಅಸ್ತ್ರ

ಗುತ್ತಿಗೆದಾರ ಪಿ ಎಸ್‌ ಗೌಡರ್ ಎಂಬುವರು 2024ರ ಮೇ 26ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಕಾಮಗಾರಿ ನಡೆಸಿದ್ದರ ಸಂಬಂಧ ಹಣ ಬಿಡುಗಡೆ ಮಾಡಿಲ್ಲ, ಅಧಿಕಾರಿಗಳು ಮಾನಸಿಕ ಹಿಂಸೆ ನೀಡಿದ್ದಾರೆ ಎಂದು ಪಿ ಎಸ್‌ ಗೌಡರ್‍‌ ಡೆತ್‌ ನೋಟ್‌ನಲ್ಲಿ ಉಲ್ಲೇಖಿಸಿರುವುದನ್ನು ಸ್ಮರಿಸಬಹುದು.

Hot this week

ಕೋಟ್ಯಂತರ ರು ಮೌಲ್ಯದ ನಿವೇಶನ ನಿಯಮಬಾಹಿರ ಮಂಜೂರು, ಅಕ್ರಮ ಲಾಭ; ಕೆಎಎಸ್ ಅಧಿಕಾರಿ ವಿರುದ್ಧ ಲೋಕಾಯುಕ್ತ ವಿಚಾರಣೆಗೆ ಅನುಮತಿ

ಬೆಂಗಳೂರು; ಕೋಟ್ಯಂತರ ರುಪಾಯಿ ಮೌಲ್ಯದ ನಿವೇಶನಗಳನ್ನು ನಿಯಮಬಾಹಿರವಾಗಿ ಮಂಜೂರು ಮಾಡಿ ಖಾಸಗಿಯವರಿಗೆ...

ರಾಮಕೃಷ್ಣ ಹೆಗಡೆ ಕುಟುಂಬಕ್ಕೆ ಖರಾಬು ಗುಂಡು ತೋಪು ಜಮೀನು ಮಂಜೂರಿಗೆ ಕೋರಿಕೆ; ಸಿದ್ದು ಭೇಟಿ ಬೆನ್ನಲ್ಲೇ ಬಹಿರಂಗವಾದ ಪತ್ರ

ಬೆಂಗಳೂರು; ಬೆಂಗಳೂರು ಉತ್ತರ ತಾಲೂಕಿನಲ್ಲಿ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರು...

ಘನತ್ಯಾಜ್ಯ ವಿಲೇವಾರಿ ಟಿಪ್ಪಿಂಗ್ ಶುಲ್ಕ; ರಾಮ್ಕಿ ಗ್ರೂಪ್‌ಗೆ ಅನುಕೂಲಕರ, ರಾಜ್ಯ ಸರ್ಕಾರವನ್ನು ಆರ್ಥಿಕ ದಿವಾಳಿತನದತ್ತ ತಳ್ಳಲಾಗಿದೆಯೇ?

ಬೆಂಗಳೂರು; ಘನತ್ಯಾಜ್ಯ ನಿರ್ವಹಣಾ ಸೌಲಭ್ಯಗಳನ್ನು ಕಾರ್ಯಗತಗೊಳಿಸಲು ಟಿಪ್ಪಿಂಗ್ ಶುಲ್ಕದ ಆಧಾರದ ಮೇಲೆ...

ಶಾಂತಿನಗರ ಹೌಸಿಂಗ್‌ ಸೊಸೈಟಿ ಅಕ್ರಮ; 2,900 ಕೋಟಿ ಅಧಿಕ ಮೊತ್ತದ ಹಗರಣ ಕೆದಕಿದರೇ ಸತೀಶ್ ಜಾರಕಿಹೊಳಿ?

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‍‌ ಅವರೊಂದಿಗೆ ತಳಕು ಹಾಕಿಕೊಂಡಿದ್ದ...

ಎಲ್‌ 1 ತಿರಸ್ಕೃತವಾದರೂ ನಡೆಯದ ಮರು ಟೆಂಡರ್, ಎಲ್ 2 ಗೆ ನೇರವಾಗಿ ಗುತ್ತಿಗೆಗೆ ಪರಿಗಣನೆ; 2,477.90 ಕೋಟಿ ರು ಹಗರಣ!

ಬೆಂಗಳೂರು; ಮಾಲೂರು-ಹೊಸಕೋಟೆ ವ್ಯಾಪ್ತಿಯನ್ನೂ ಸೇರಿದಂತೆ ಒಟ್ಟಾರೆ 123 ಕಿ ಮೀ ರಸ್ತೆಯನ್ನು ...
Please Scan to make Your Contribution

Topics

ಕೋಟ್ಯಂತರ ರು ಮೌಲ್ಯದ ನಿವೇಶನ ನಿಯಮಬಾಹಿರ ಮಂಜೂರು, ಅಕ್ರಮ ಲಾಭ; ಕೆಎಎಸ್ ಅಧಿಕಾರಿ ವಿರುದ್ಧ ಲೋಕಾಯುಕ್ತ ವಿಚಾರಣೆಗೆ ಅನುಮತಿ

ಬೆಂಗಳೂರು; ಕೋಟ್ಯಂತರ ರುಪಾಯಿ ಮೌಲ್ಯದ ನಿವೇಶನಗಳನ್ನು ನಿಯಮಬಾಹಿರವಾಗಿ ಮಂಜೂರು ಮಾಡಿ ಖಾಸಗಿಯವರಿಗೆ...

ರಾಮಕೃಷ್ಣ ಹೆಗಡೆ ಕುಟುಂಬಕ್ಕೆ ಖರಾಬು ಗುಂಡು ತೋಪು ಜಮೀನು ಮಂಜೂರಿಗೆ ಕೋರಿಕೆ; ಸಿದ್ದು ಭೇಟಿ ಬೆನ್ನಲ್ಲೇ ಬಹಿರಂಗವಾದ ಪತ್ರ

ಬೆಂಗಳೂರು; ಬೆಂಗಳೂರು ಉತ್ತರ ತಾಲೂಕಿನಲ್ಲಿ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರು...

ಘನತ್ಯಾಜ್ಯ ವಿಲೇವಾರಿ ಟಿಪ್ಪಿಂಗ್ ಶುಲ್ಕ; ರಾಮ್ಕಿ ಗ್ರೂಪ್‌ಗೆ ಅನುಕೂಲಕರ, ರಾಜ್ಯ ಸರ್ಕಾರವನ್ನು ಆರ್ಥಿಕ ದಿವಾಳಿತನದತ್ತ ತಳ್ಳಲಾಗಿದೆಯೇ?

ಬೆಂಗಳೂರು; ಘನತ್ಯಾಜ್ಯ ನಿರ್ವಹಣಾ ಸೌಲಭ್ಯಗಳನ್ನು ಕಾರ್ಯಗತಗೊಳಿಸಲು ಟಿಪ್ಪಿಂಗ್ ಶುಲ್ಕದ ಆಧಾರದ ಮೇಲೆ...

ಶಾಂತಿನಗರ ಹೌಸಿಂಗ್‌ ಸೊಸೈಟಿ ಅಕ್ರಮ; 2,900 ಕೋಟಿ ಅಧಿಕ ಮೊತ್ತದ ಹಗರಣ ಕೆದಕಿದರೇ ಸತೀಶ್ ಜಾರಕಿಹೊಳಿ?

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‍‌ ಅವರೊಂದಿಗೆ ತಳಕು ಹಾಕಿಕೊಂಡಿದ್ದ...

ಎಲ್‌ 1 ತಿರಸ್ಕೃತವಾದರೂ ನಡೆಯದ ಮರು ಟೆಂಡರ್, ಎಲ್ 2 ಗೆ ನೇರವಾಗಿ ಗುತ್ತಿಗೆಗೆ ಪರಿಗಣನೆ; 2,477.90 ಕೋಟಿ ರು ಹಗರಣ!

ಬೆಂಗಳೂರು; ಮಾಲೂರು-ಹೊಸಕೋಟೆ ವ್ಯಾಪ್ತಿಯನ್ನೂ ಸೇರಿದಂತೆ ಒಟ್ಟಾರೆ 123 ಕಿ ಮೀ ರಸ್ತೆಯನ್ನು ...

ನಕಲಿ ಶಿಕ್ಷಕರಿಗೆ ವೇತನ ಪಾವತಿ; ಆರೋಪಿತ ಅಧಿಕಾರಿಗಳ ವಿರುದ್ಧ ಇಲಾಖೆ ವಿಚಾರಣೆ ಕೈಬಿಟ್ಟ ಸರ್ಕಾರ!

ಬೆಂಗಳೂರು; ರಾಮನಗರ ಜಿಲ್ಲೆಯಲ್ಲಿ  2011ರಿಂದ 2014ರವರೆಗೆ ಹೆಚ್‌ಆರ್‍ಎಂಎಸ್‌ ಮೂಲಕ ನಕಲಿ ಶಿಕ್ಷಕರ...

120 ಎಕರೆ ಗೋಮಾಳ ಕಬಳಿಕೆ ಪ್ರಕರಣ; ಕಂದಾಯ ನಿರೀಕ್ಷಕರ ವರದಿಯನ್ನೇ ಮುಚ್ಚಿಟ್ಟ ತಹಶೀಲ್ದಾರ್, ಸಚಿವರ ಒತ್ತಡ?

ಬೆಂಗಳೂರು; ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ ಗ್ರಾಮದ ವಿವಿಧ ಸರ್ವೆ ನಂಬರ್‍‌ಗಳಲ್ಲಿರುವ...

ಕೌನ್ಸಲಿಂಗ್‌ಗೂ ಮುನ್ನವೇ ಪಿಡಿಒಗಳ ವರ್ಗಾವಣೆ; ಹಣ ಕೊಟ್ಟವರಿಗೆ ಆದೇಶ, ಕೊಡದವರಿಗೆ ಕೌನ್ಸಲಿಂಗ್, ಆರೋಪ

ಬೆಂಗಳೂರು; ಪಂಚಾಯ್ತಿ ಅಭಿವೃದ್ದಿ ಅಧಿಕಾರಿಗಳ ವರ್ಗಾವಣೆಯನ್ನು ಕೌನ್ಸಲಿಂಗ್‌ ಮೂಲಕವೇ ನಡೆಸಲಾಗುವುದು ಎಂದು...

Related Articles

Popular Categories

error: Content is protected !!