Sunday | June 7, 2026 |

ಕ್ರಿಡಿಲ್‌ ಗುತ್ತಿಗೆದಾರನ ಆತ್ಮಹತ್ಯೆ; 7 ಕಾಮಗಾರಿ ಒಗ್ಗೂಡಿಸಿ ಒಂದೇ ಕಾಮಗಾರಿಗೆ ಬದಲಾಯಿಸಿದ್ದ ಸರ್ಕಾರ

ಬೆಂಗಳೂರು; ದಾವಣಗೆರೆ ಜಿಲ್ಲೆಯ ಸಂತೆಬೆನ್ನೂರು ಗ್ರಾಮದ ಗುತ್ತಿಗೆದಾರ ಪಿ ಎಸ್‌ ಗೌಡರ್‍‌ ಆತ್ಮಹತ್ಯೆ ಪ್ರಕರಣವು ರಾಜಕೀಯಕರಣಗೊಂಡಿರುವ ಬೆನ್ನಲ್ಲೇ ಇದೇ ಪ್ರಕರಣದಲ್ಲಿ ಕ್ರಿಡಿಲ್‌ 7 ಕಾಮಗಾರಿಗಳನ್ನು ಒಗ್ಗೂಡಿಸಿ ಒಂದೇ ಕಾಮಗಾರಿಯನ್ನಾಗಿ ಬದಲಾವಣೆ ಮಾಡಿಕೊಂಡಿತ್ತು ಎಂಬುದು ಇದೀಗ ಬಹಿರಂಗವಾಗಿದೆ.

 

ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯ ವಿಶೇಷ ಕಾರ್ಯದರ್ಶಿ ಚಂದ್ರಶೇಖರ್‍‌ ಅಧ್ಯಕ್ಷತೆಯಲ್ಲಿ ತ್ರಿಸದಸ್ಯರ ಸಮಿತಿ ರಚಿಸಿ 2024ರ ಮೇ 30ರಂದು ಹೊರಡಿಸಿರುವ ಆದೇಶದಲ್ಲಿ ಈ ಮಾಹಿತಿ ಇದೆ. ಇದರ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ಕಾಮಗಾರಿಗಳನ್ನು ನಡೆಸಲಾಗಿತ್ತು ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಅವರು ಹೇಳಿಕೆ ನೀಡಿದ್ದರು. ಆದರೆ 7 ಕಾಮಗಾರಿಗಳನ್ನು ಒಂದೇ ಕಾಮಗಾರಿಗೆ ಒಗ್ಗೂಡಿಸಿ ಸಲ್ಲಿಸಿದ್ದ ಅಂದಾಜು ಪಟ್ಟಿಗೆ 2024ರ ಫೆ.14ರಂದು ಆಡಳಿತಾತ್ಮಕ ಅನುಮೋದನೆ ನೀಡಿತ್ತು ಎಂಬುದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

 

ಪ್ರಿಯಾಂಕ್‌ ಖರ್ಗೆ ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಗೆ ಸಚಿವರಾದ ಅತ್ಯಲ್ಪ ಅವಧಿಯಲ್ಲಿ ಒಂದೇ ಕಾಮಗಾರಿಗೆ ಬದಲಾವಣೆಗೆ ಮಾಡುವ ಪ್ರಸ್ತಾವನೆಯನ್ನು ಕ್ರಿಡಿಲ್‌ ಸಲ್ಲಿಸಿತ್ತು ಎಂಬುದು ಆದೇಶದಿಂದ ಗೊತ್ತಾಗಿದೆ.

 

ವಿಶೇಷವೆಂದರೇ ಈ ಪ್ರಕರಣದ ಕುರಿತು ತನಿಖೆ ನಡೆಸಲು ತ್ರಿಸದಸ್ಯರ ಸಮಿತಿ ರಚಿಸಿ ಆದೇಶ ಹೊರಬಿದ್ದ ದಿನದಂದೇ ಕ್ರಿಡಿಲ್‌ನ ಕೇಂದ್ರ ಕಚೇರಿಯು 2024ರ ಮೇ 30ರಂದು ಈ ಅನುದಾನವನ್ನು ಬಿಡುಗಡೆ ಮಾಡಿತ್ತು.

 

ಆದೇಶದಲ್ಲೇನಿದೆ?

 

ಕೆಆರ್‍‌ಐಡಿಎಲ್‌ (ದಾವಣಗೆರೆ) ಕಾರ್ಯಪಾಲಕ ಅಭಿಯಂತರರು ತಲಾ 5.00 ಲಕ್ಷ ರು. ವೆಚ್ಚದಲ್ಲಿ 7 ಕಾಮಗಾರಿಗಳ ಬದಲಾಗಿ ಸದರಿ ಕಾಮಗಾರಿಗಳನ್ನು ಒಗ್ಗೂಡಿಸಿ 35.00 ಲಕ್ಷ ರು.ಗಳ ಒಂದೇ ಕಾಮಗಾರಿಗೆ ಬದಲಾವಣೆ ಮಾಡಿ ಅನುಮೋದನೆ ನೀಡಲು 2023ರ ಜುಲೈ 29ರಂದು ಕೋರಿದ್ದರು. ಈ ಸಂಬಂಧ 2023ರ ಅಕ್ಟೋಬರ್‍‌ 7ರಂದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. 2024ರ ಜನವರಿ 20ರಂದು 7 ಕಾಮಗಾರಿಗಳನ್ನು ಒಟ್ಟು 35.00 ಲಕ್ಷ ರು. ಒಂದೇ ಕಾಮಗಾರಿಗೆ ಬದಲಾವಣೆ ಮಾಡಿ ಅನುಮೋದನೆ ನೀಡಲಾಗಿತ್ತು ಎಂಬುದು ಆದೇಶದಿಂದ ತಿಳಿದು ಬಂದಿದೆ.

 

ಆ ನಂತರ ಕ್ರಿಡಿಲ್‌ನ ಕಾರ್ಯಪಾಲಕ ಅಭಿಯಂತರರು 7 ಕಾಮಗಾರಿಗಳನ್ನು ಒಗ್ಗೂಡಿಸಿ 35.00 ಲಕ್ಷ ರು. ಗಳ ಒಂದೇ ಕಾಮಗಾರಿಯ ಅಂದಾಜು ಪಟ್ಟಿಯನ್ನು ತಯಾರಿಸಿ 2024ರ ಫೆ.3ರಂದು ಅನುಮೋದನೆ ಕೋರಿ ಪ್ರಸ್ತಾವನೆ ಸಲ್ಲಿಸಿತ್ತು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆಯು 2024ರ ಫೆ.14ರಂದು ಈ ಅಂದಾಜುಪಟ್ಟಿಗೆ ಆಡಳಿತಾತ್ಮಕ ಅನುಮೋದನೆ ದೊರೆತಿತ್ತು ಎಂಬುದು ಗೊತ್ತಾಗಿದೆ.

 

ಅನುಮೋದನೆಯಾದ 7 ಕಾಮಗಾರಿಗಳ ಅನುಷ್ಠಾನಕ್ಕೆ ಬಿಡುಗಡೆಯಾದ ಅನುದಾನವನ್ನು ಬದಲಾವಣೆಯಾದ ಒಂದು ಕಾಮಗಾರಿಗ ಪಾವತಿಸಲು ಫಾರಂ 9 ಪಡೆಯುವ ಉದ್ದೇಶಕ್ಕಾಗಿ ಕ್ರಿಡಿಲ್‌ನ ಕಾರ್ಯಪಾಲಕ ಅಭಿಯಂತರರು 2024ರ ಫೆ.27ರಂದು ಕೇಂದ್ರ ಕಚೇರಿಗೆ ಹಿಂದಿರುಗಿಸಿದ್ದರು. ಕೇಂದ್ರ ಕಚೇರಿಯು 2024ರ ಮೇ 30ರಂದು ಈ ಅನುದಾನವನ್ನು ಬಿಡುಗಡೆ ಮಾಡಿತ್ತು.

 

ದಾವಣಗೆರೆ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪಿ ಎಸ್‌ ಗೌಡರ್‍‌ ಅವರು 2024ರ ಮೇ 26ರಂದು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣದ ಬಗ್ಗೆ ವರದಿ ಸಲ್ಲಿಸಿದ್ದಾರೆ. ಈ ಕುರಿತು ತನಿಖೆ ನಡೆಸಲು ಇಲಾಖೆಯ ವಿಶೇ‍ಷ ಕಾರ್ಯದರ್ಶಿ ಚಂದ್ರಶೇಖರ್‍‌ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ 2024ರ ಮೇ 30ರಂದು ಆದೇಶ ಹೊರಡಿಸಿದ್ದಾರೆ.

 

ಇಲಾಖೆಯ ಆಂತರಿಕ ಆರ್ಥಿಕ ಸಲಹೆಗಾರಾದ ಪ್ರಿಯಾಂಕ ನೀಷ್ಮಾ ಡಿ ಕೋಸ್ಟ, ಪ್ರಭಾರ ಅಧೀಕ್ಷಕ ಇಂಜಿನಿಯರ್‍‌ ಅಮರಪ್ಪ ಅವರು ಸಮಿತಿ ಸದಸ್ಯರಾಗಿದ್ದಾರೆ.

ಕ್ರಿಡಿಲ್‌ನಿಂದ ಬಾರದ ಬಾಕಿ ಹಣ; ಆತ್ಮಹತ್ಯೆಗೆ ಶರಣಾದ ಗುತ್ತಿಗೆದಾರ, ಪ್ರತಿಪಕ್ಷಗಳ ಕೈಗೆ ಮತ್ತೊಂದು ಅಸ್ತ್ರ

ಗುತ್ತಿಗೆದಾರ ಪಿ ಎಸ್‌ ಗೌಡರ್ ಎಂಬುವರು 2024ರ ಮೇ 26ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಕಾಮಗಾರಿ ನಡೆಸಿದ್ದರ ಸಂಬಂಧ ಹಣ ಬಿಡುಗಡೆ ಮಾಡಿಲ್ಲ, ಅಧಿಕಾರಿಗಳು ಮಾನಸಿಕ ಹಿಂಸೆ ನೀಡಿದ್ದಾರೆ ಎಂದು ಪಿ ಎಸ್‌ ಗೌಡರ್‍‌ ಡೆತ್‌ ನೋಟ್‌ನಲ್ಲಿ ಉಲ್ಲೇಖಿಸಿರುವುದನ್ನು ಸ್ಮರಿಸಬಹುದು.

Hot this week

ಮಾಜಿ ಸಿಎಂ ಸಿದ್ದರಾಮಯ್ಯ, ಪಾರ್ವತಿ ವಿರುದ್ಧ ಭ್ರಷ್ಟಾಚಾರ, ಅಧಿಕಾರ ದುರುಪಯೋಗ ಆರೋಪ; 2 ವರ್ಷದಲ್ಲಿ 16 ಬಾರಿ ವಿಚಾರಣೆ, ಜುಲೈ 9ಕ್ಕೆ ವಿಚಾರಣೆಗೆ ದಿನಾಂಕ ನಿಗದಿ

ಬೆಂಗಳೂರು;  ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ಬದಲಿ ನಿವೇಶನ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಯಾಗಿದ್ದ...

ಎಂಎಸ್‌ಐಎಲ್‌ನಲ್ಲಿ ಅಕ್ರಮ; ನಿವೃತ್ತ ಐಎಎಸ್‌ ಜಿ ಸಿ ಪ್ರಕಾಶ್‌ ಸೇರಿ 7 ಮಂದಿ ಅಧಿಕಾರಿಗಳ ವಿರುದ್ಧ ಸಲ್ಲಿಕೆಯಾಗದ ಚಾರ್ಜ್‌ಶೀಟ್‌

ಬೆಂಗಳೂರು; ಮೈಸೂರು ಸೇಲ್ಸ್‌ ಇಂಟರ್ ನ್ಯಾ‍ಷನಲ್‌ ಲಿಮಿಟೆಡ್‌ನಲ್ಲಿ ನಡೆದಿದೆ ಎನ್ನಲಾದ ವಿವಿಧ...

ಮತದಾರರ ಪಟ್ಟಿ ಪರಿಷ್ಕರಣೆ; ಹಲವು ಜಿಲ್ಲೆಗಳಲ್ಲಿ ವರ್ಷವಾದರೂ ನೇಮಕವಾಗದ ಬಿಎಲ್‌ಒ, ಕಾಲಕಸವಾಯಿತೇ ಆಯೋಗದ ಪತ್ರ?

ಬೆಂಗಳೂರು; ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಮತ್ತು ವಿಶೇಷ ಸಂಕ್ಷಿಪ್ತ...

ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧದ ಪ್ರಕರಣ; 6 ವರ್ಷವಾದರೂ ಹೈಕೋರ್ಟ್‌ನಲ್ಲಿ ವಿಚಾರಣೆಗೆ ನಿಗದಿಯಾಗದ ದಿನಾಂಕ

ಬೆಂಗಳೂರು;  ಹಾಲಿ ಮುಖ್ಯಮಂತ್ರಿ  ಡಿ ಕೆ ಶಿವಕುಮಾರ್ ಅವರು ಸೇರಿದಂತೆ ಅವರ...
Please Scan to make Your Contribution

Topics

ಮಾಜಿ ಸಿಎಂ ಸಿದ್ದರಾಮಯ್ಯ, ಪಾರ್ವತಿ ವಿರುದ್ಧ ಭ್ರಷ್ಟಾಚಾರ, ಅಧಿಕಾರ ದುರುಪಯೋಗ ಆರೋಪ; 2 ವರ್ಷದಲ್ಲಿ 16 ಬಾರಿ ವಿಚಾರಣೆ, ಜುಲೈ 9ಕ್ಕೆ ವಿಚಾರಣೆಗೆ ದಿನಾಂಕ ನಿಗದಿ

ಬೆಂಗಳೂರು;  ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ಬದಲಿ ನಿವೇಶನ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಯಾಗಿದ್ದ...

ಎಂಎಸ್‌ಐಎಲ್‌ನಲ್ಲಿ ಅಕ್ರಮ; ನಿವೃತ್ತ ಐಎಎಸ್‌ ಜಿ ಸಿ ಪ್ರಕಾಶ್‌ ಸೇರಿ 7 ಮಂದಿ ಅಧಿಕಾರಿಗಳ ವಿರುದ್ಧ ಸಲ್ಲಿಕೆಯಾಗದ ಚಾರ್ಜ್‌ಶೀಟ್‌

ಬೆಂಗಳೂರು; ಮೈಸೂರು ಸೇಲ್ಸ್‌ ಇಂಟರ್ ನ್ಯಾ‍ಷನಲ್‌ ಲಿಮಿಟೆಡ್‌ನಲ್ಲಿ ನಡೆದಿದೆ ಎನ್ನಲಾದ ವಿವಿಧ...

ಮತದಾರರ ಪಟ್ಟಿ ಪರಿಷ್ಕರಣೆ; ಹಲವು ಜಿಲ್ಲೆಗಳಲ್ಲಿ ವರ್ಷವಾದರೂ ನೇಮಕವಾಗದ ಬಿಎಲ್‌ಒ, ಕಾಲಕಸವಾಯಿತೇ ಆಯೋಗದ ಪತ್ರ?

ಬೆಂಗಳೂರು; ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಮತ್ತು ವಿಶೇಷ ಸಂಕ್ಷಿಪ್ತ...

ಆರ್‍‌ಬಿಎಸ್‌ಎಸ್ಎನ್‌ ಗಣಿ ಕಂಪನಿಗೆ 64.50 ಎಕರೆ ವಿಸ್ತೀರ್ಣದ ಸರ್ಕಾರಿ ಜಮೀನು; 3 ಬಾರಿ ಪ್ರಸ್ತಾವ ತಿರಸ್ಕೃತವಾದರೂ ಸಚಿವ ಸಂಪುಟಕ್ಕೆ ಮಂಡಿಸಲು ಸಿಎಂ ನಿರ್ದೇಶನ

ಬೆಂಗಳೂರು; ಕಾನೂನುಬಾಹಿರವಾಗಿ ಗಣಿಗಾರಿಕೆ ನಡೆಸುತ್ತಿದೆ ಎಂಬ ಗಂಭೀರ ಆರೋಪಕ್ಕೆ ಗುರಿಯಾಗಿರುವ ಆರ್‍‌ಬಿಎಸ್‌ಎನ್‌...

ಶೈಕ್ಷಣಿಕ ಅಸಮಾನತೆ ಹೆಚ್ಚಳ; ರಾಜ್ಯದ ಆರ್ಥಿಕ ಪ್ರಗತಿಗೆ ಬೆದರಿಕೆ ಹಾಕುವ ಸಾಧ್ಯತೆ, ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಆಯೋಗ

ಬೆಂಗಳೂರು; ಪ್ರಾಥಮಿಕ ಶಾಲೆ ಮತ್ತು ವಿಶ್ವವಿದ್ಯಾಲಯ ಮಟ್ಟಗಳೆರಡರಲ್ಲೂ ಸಾಂಸ್ಥಿಕ ಮೂಲ ಸೌಕರ್ಯಗಳ...

Related Articles

Popular Categories

error: Content is protected !!