Monday | March 30, 2026 |

ಕೆಪಿಎಸ್ಸಿಗೆ ಕಳಂಕಿತರ ನೇಮಕಕ್ಕೆ ಕಾಂಗ್ರೆಸ್‌ ಸರ್ಕಾರದಿಂದ ಎರಡನೇ ಯತ್ನ; ಸಿಎಂ ಟಿಪ್ಪಣಿ ಬಹಿರಂಗ

Support THE-FILE

spot_img

ಬೆಂಗಳೂರು; ಅಕ್ರಮ ಮರಗಳ ಕಡಿತಲೆಯಲ್ಲಿ ಭಾಗಿಯಾಗಿದ್ದಾರೆ ಎಂಬುದು ಸೇರಿದಂತೆ ಇನ್ನಿತರೆ ಗಂಭೀರ ಮತ್ತು ಗುರುತರವಾದ ಆರೋಪಗಳಿಗೆ ಗುರಿಯಾಗಿರುವ ಕುವೆಂಪು ವಿಶ್ವವಿದ್ಯಾಲಯದ ಕೈಗಾರಿಕೆ ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿರುವ ಡಾ ಹೆಚ್‌ ಎಸ್ ಭೋಜ್ಯನಾಯ್ಕ ಇವರನ್ನು ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯರನ್ನಾಗಿ ನೇಮಿಸಲು ಕಾಂಗ್ರೆಸ್‌ ಸರ್ಕಾರವು ಮತ್ತೊಮ್ಮೆ  ಮುಂದಾಗಿದೆ.

 

ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಬೋಜ್ಯನಾಯ್ಕ ಅವರನ್ನು ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯರನ್ನಾಗಿಸಲು ಮುಂದಾಗಿತ್ತು. ಆಗಲೂ ವಿರೋಧ ವ್ಯಕ್ತವಾಗಿತ್ತು. ಹೀಗಾಗಿ ಇವರ ನೇಮಕವನ್ನು ಮುಂದೂಡಲಾಗಿತ್ತು. ಬೋಜ್ಯನಾಯ್ಕ ಅವರನ್ನು ಕೈ ಬಿಟ್ಟು ಅದೇ ಪಟ್ಟಿಯಲ್ಲಿದ್ದ ಕಾವಲಮ್ಮ ಅವರನ್ನು ಆಯೋಗದ ಸದಸ್ಯರನ್ನಾಗಿಸಿ ನೇಮಿಸಿದೆ.

 

ಇದೀಗ ಪ್ರೊ ಹೆಚ್‌ ಎಸ್‌ ಬೋಜ್ಯನಾಯ್ಕ ಅವರನ್ನು ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯರನ್ನಾಗಿಸಲು ಎರಡನೇ ಬಾರಿಗೆ ಮುಂದಾಗಿರುವುದು ಗೊತ್ತಾಗಿದೆ. ಬೋಜ್ಯನಾಯ್ಕ್ ಅವರನ್ನು ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯರನ್ನಾಗಿಸಲು ಸಚಿವರೊಬ್ಬರು ಸಿದ್ದರಾಮಯ್ಯ ಅವರ ಮೇಲೆ ಒತ್ತಡ ಹೇರಿದ್ದಾರೆ ಎಂದು ತಿಳಿದು ಬಂದಿದೆ.

 

ಈ ಕುರಿತು ಕಡತ ಮಂಡಿಸಲು ಮುಖ್ಯ ಕಾರ್ಯದರ್ಶಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ. 2024ರ ಜೂನ್‌ 19ರಂದು ಹೊರಡಿಸಿರುವ ಟಿಪ್ಪಣಿ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಕುವೆಂಪು ವಿಶ್ವವಿದ್ಯಾಲಯದ ಪ್ರೊ ಹೆಚ್‌ ಎಸ್‌ ಬೋಜ್ಯನಾಯ್ಕ್ ಅವರ ವಿರುದ್ಧದ ಪ್ರಕರಣವೊಂದರಲ್ಲಿ ದೋಷಾರೋಪಣೆ ಪಟ್ಟಿ ಸಲ್ಲಿಸಲು ಅನುಮತಿ ನೀಡುವ ಸಂಬಂಧ ಸರ್ಕಾರದ ಹಂತದಲ್ಲಿ ಇನ್ನೂ ಯಾವುದೇ ಅಂತಿಮ ತೀರ್ಮಾನ ಕೈಗೊಂಡಿಲ್ಲ.

 

ಹೀಗಿದ್ದರೂ ಅವರು ಹೆಚ್‌ ಎಸ್‌ ಬೋಜ್ಯನಾಯ್ಕ್ ಅವರನ್ನು ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯರನ್ನಾಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿರುವುದು ಚರ್ಚೆಗೆ ಗ್ರಾಸವಾಗಿದೆಯಲ್ಲದೇ ಹಲವು ಅನುಮಾನಗಳಿಗೆ ದಾರಿಮಾಡಿಕೊಟ್ಟಿದೆ.

 

ವಿಶೇಷವೆಂದರೇ ಬೋಜ್ಯನಾಯ್ಕ್ ಅವರ ವಿರುದ್ಧ ಕೇಳಿ ಬಂದಿರುವ ಆರೋಪಗಳು ಮತ್ತು ದೋಷಾರೋಪಣೆ ಪಟ್ಟಿ ಕುರಿತು ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ಕೆಲವು ತಿಂಗಳಲ್ಲಿ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್‍ ಅವರು ‌ ಸಂಪೂರ್ಣ ಮಾಹಿತಿಯನ್ನು ಸಲ್ಲಿಸಿದ್ದಾರೆ. 2023ರ ಸೆ.16ರಂದು ಸಲ್ಲಿಸಿರುವ ಮಾಹಿತಿ ಪ್ರತಿಯೂ ‘ದಿ ಫೈಲ್‌’ಗೆ ಲಭ್ಯವಾಗಿದೆ.

ಲಕ್ಕವಳ್ಳಿ ವನ್ಯಜೀವಿ ವಲಯ ವ್ಯಾಪ್ತಿಯ ಕುವೆಂಪು ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಅಕ್ರಮ ಮರಗಳ ಕಡಿತಲೆಯಲ್ಲಿ ಭಾಗಿಯಾಗಿರುವ ಆರೋಪಕ್ಕೆ ಹೆಚ್‌ ಎಸ್‌ ಬೋಜ್ಯನಾಯ್ಕ ಅವರು ಗುರಿಯಾಗಿದ್ದಾರೆ. ಈ ಪ್ರಕರಣದಲ್ಲಿ ಬೋಜ್ಯನಾಯ್ಕ ಅವರು ಎರಡನೇ ಆರೋಪಿ ಎಂದು ಗುರುತಿಸಿರುವುದು ಗೊತ್ತಾಗಿದೆ.

 

 

ಎರಡನೇ ಆರೋಪಿಯಾಗಿರುವ ಬೋಜ್ಯನಾಯ್ಕ ಅವರೂ ಸೇರಿದಂತೆ ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿರುವ ವಿವಿಯ ಇಬ್ಬರು ಸಿಬ್ಬಂದಿ ವಿರುದ್ಧ ನ್ಯಾಯಾಲಯದಲ್ಲಿ ದೋಷಾರೋಪಣೆ ಪಟ್ಟಿ ಸಲ್ಲಿಸಲು ಉನ್ನತ ಶಿಕ್ಷಣ ಇಲಾಖೆಯು ಸರ್ಕಾರವನ್ನು 4 ವರ್ಷಗಳ ಹಿಂದೆಯೇ ಕೋರಿತ್ತು.

 

ಅದರಂತೆ ಮೂವರು ಆರೋಪಿಗಳ ವಿರುದ್ಧ ದೋಷಾರೋಪಣೆ ಪಟ್ಟಿ ಸಲ್ಲಿಸಲು ಕುವೆಂಪು ವಿವಿಯ ಸಿಂಡಿಕೇಟ್‌ ಸಭೆಯು 2021ರ ಜನವರಿ 21ರಂದು ಅನುಮತಿ ನೀಡಿರಲಿಲ್ಲ. ಆದರೆ ಸರ್ಕಾರವು ದೋಷಾರೋಪಣೆ ಪಟ್ಟಿ ಸಲ್ಲಿಸಲು ಅರಣ್ಯ ಇಲಾಖೆಗೆ 2021ರ ನವೆಂಬರ್‍‌ 2021ರಂದು ಅನುಮತಿ ನೀಡಿತ್ತು ಎಂಬುದು ತಿಳಿದು ಬಂದಿದೆ. ಮತ್ತೊಂದು ವಿಶೇಷವೆಂದರೇ 2022ರ ಫೆ.28ರಂದು ಕುವೆಂಪು ವಿವಿ ಸಿಂಡಿಕೇಟ್‌ ಸಭೆಯು ಈ ಬಗ್ಗೆ ಸರ್ಕಾರದ ಹಂತದಲ್ಲಿಯೇ ಮುಂದಿನ ಕ್ರಮ ಕೈಗೊಳ್ಳಬೇಕು ಎಂದು ಕೋರಿ ಪತ್ರ ಬರೆದಿತ್ತು.

 

2023ರಲ್ಲಿಯೂ ಜೈ ಭೀಮ್‌ ಕನ್ನಡ ಜಾಗೃತಿ ವೇದಿಕೆಯು ಹೆಚ್‌ ಎಸ್‌ ಬೋಜ್ಯನಾಯ್ಕ ಅವರ ವಿರುದ್ಧ ಸರ್ಕಾರಕ್ಕೆ ದೂರು ನೀಡಿತ್ತು. ಈ ದೂರಿನ ಕುರಿತು ಸತ್ಯಾಸತ್ಯತೆ ಕಂಡುಕೊಳ್ಳಲು ಇದೇ ಕಾಂಗ್ರೆಸ್‌ ಸರ್ಕಾರವು 2023ರ ಮೇ 6ರಂದು ಪ್ರಾಥಮಿಕ ತನಿಖೆ ಸಮಿತಿ ರಚಿಸಿತ್ತು. ಈ ಸಮಿತಿಯು ಈಗಾಗಲೇ ತನಿಖೆ ಪೂರ್ಣಗೊಳಿಸಿ 2023ರ ಜುಲೈ 17ರಂದೇ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ.

 

ಹಾಗೆಯೇ ಪರೀಕ್ಷಾ ವಿಭಾಗದ ಅಂಕಪಟ್ಟಿಗಳು, ದಾಖಲಾತಿಗಳ ಡಿಜಿಟಿಲೀಕರಣ ಮತ್ತು ಇ-ವೆರಿಫಿಕೇಷನ್ ಗೆ ಸಂಬಂಧಿಸಿದಂತೆ ಬೋಜ್ಯನಾಯ್ಕ ಅವರ ವಿರುದ್ಧ ಎಸಿಬಿಗೆ ದೂರು ದಾಖಲಾಗಿತ್ತು. 2023ರವರೆಗೂ ಇವರ ವಿರುದ್ಧ ವಿಚಾರಣೆ, ತನಿಖೆ ನಡೆಸಲು ಸರ್ಕಾರವು ಅನುಮತಿ ನೀಡಿರಲಿಲ್ಲ.

 

ಅಷ್ಟೇ ಅಲ್ಲದೇ ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಹುದ್ದೆಗೆ ಬೋಜ್ಯನಾಯ್ಕ ಅವರ ಹೆಸರಿತ್ತು.

 

ಆದರೆ ಶೋಧನಾ ಸಮಿತಿಯು ಇವರ ವಿರುದ್ಧದ ಆರೋಪಗಳು ಮತ್ತು ವಿಚಾರಣೆ ಬಾಕಿ ಇದ್ದದ್ದರಿಂದ ಇವರ ಹೆಸರನ್ನು ಶಿಫಾರಸ್ಸು ಮಾಡಿರಲಿಲ್ಲ ಎಂಬುದು ಗೊತ್ತಾಗಿದೆ.

Hot this week

1,094.81 ಕೋಟಿಯಷ್ಟು ಭೂ ಕಂದಾಯ ಬಾಕಿ; ವಸೂಲಾತಿಗೆ ರೇರಾ ಮೀನಮೇಷ

ಬೆಂಗಳೂರು; ರೇರಾ ಕಾಯ್ದೆ ಮತ್ತು ನಿಯಮಗಳನ್ನು ಉಲ್ಲಂಘಿಸುವ ಪ್ರಕರಣಗಳು ವರ್ಷದಿಂದ ವರ್ಷಕ್ಕೆ...

ಮನೆಗಳ ಹಂಚಿಕೆಯಲ್ಲಿ ಭ್ರಷ್ಟಾಚಾರ, ಹಣಕ್ಕೆ ಬೇಡಿಕೆ; ಪಾಟೀಲರ ಆರೋಪ, ಲೋಕಾ ತನಿಖೆಯಿಂದ ಸಾಬೀತು

ಬೆಂಗಳೂರು; ರಾಜೀವ್‌ ಗಾಂಧಿ ವಸತಿ ನಿಗಮದ ವ್ಯಾಪ್ತಿಯಲ್ಲಿ ಹಣ ಕೊಟ್ಟರಷ್ಟೇ ಮನೆಗಳನ್ನು ...

ಕದಂಬೋತ್ಸವ ಸೇರಿ ಸಾಂಸ್ಕೃತಿಕ ಉತ್ಸವಗಳಿಗೆ ಅನುದಾನ; 12.50 ಕೋಟಿ ರು ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಮೈಸೂರು ದಸರಾ ಸೇರಿದಂತೆ ಇನ್ನಿತರೆ ಜಿಲ್ಲಾಮಟ್ಟದ ವಿವಿಧ ಉತ್ಸವಗಳಿಗೆ 2024-25ಮತ್ತು...

ಪ್ರಚೋದನಕಾರಿ ಭಾಷಣ, ಕೋಮು ಗಲಭೆ; 3 ವರ್ಷದಲ್ಲಿ 50 ಪ್ರಕರಣಗಳು ದಾಖಲು, ಪಟ್ಟಿ ಬಹಿರಂಗ

ಬೆಂಗಳೂರು; ರಾಜ್ಯದ  ಕರಾವಳಿ ಭಾಗ ಸೇರಿದಂತೆ ವಿವಿಧೆಡೆ ಪ್ರಚೋದನಾಕಾರಿ ಭಾಷಣ ಮಾಡಿದವರು...

ನರೇಗಾ ವಸತಿ ಕಾಮಗಾರಿಗಳಲ್ಲಿ ಮೋಸದ ಪಾವತಿ; ಚೆಕ್ ಡ್ಯಾಂ ಕಾಮಗಾರಿಯೇ ಇಲ್ಲ, ಆದರೂ ಹಣ ಪಾವತಿ

ಬೆಂಗಳೂರು; 847 ಸಂಖ್ಯೆ ವಸತಿ  ಕಾಮಗಾರಿಗಳಲ್ಲಿ  ಮೋಸದ ಪಾವತಿಗಳಾಗಿರುವುದನ್ನು ಭಾರತದ ಲೆಕ್ಕ...

Topics

1,094.81 ಕೋಟಿಯಷ್ಟು ಭೂ ಕಂದಾಯ ಬಾಕಿ; ವಸೂಲಾತಿಗೆ ರೇರಾ ಮೀನಮೇಷ

ಬೆಂಗಳೂರು; ರೇರಾ ಕಾಯ್ದೆ ಮತ್ತು ನಿಯಮಗಳನ್ನು ಉಲ್ಲಂಘಿಸುವ ಪ್ರಕರಣಗಳು ವರ್ಷದಿಂದ ವರ್ಷಕ್ಕೆ...

ಮನೆಗಳ ಹಂಚಿಕೆಯಲ್ಲಿ ಭ್ರಷ್ಟಾಚಾರ, ಹಣಕ್ಕೆ ಬೇಡಿಕೆ; ಪಾಟೀಲರ ಆರೋಪ, ಲೋಕಾ ತನಿಖೆಯಿಂದ ಸಾಬೀತು

ಬೆಂಗಳೂರು; ರಾಜೀವ್‌ ಗಾಂಧಿ ವಸತಿ ನಿಗಮದ ವ್ಯಾಪ್ತಿಯಲ್ಲಿ ಹಣ ಕೊಟ್ಟರಷ್ಟೇ ಮನೆಗಳನ್ನು ...

ಕದಂಬೋತ್ಸವ ಸೇರಿ ಸಾಂಸ್ಕೃತಿಕ ಉತ್ಸವಗಳಿಗೆ ಅನುದಾನ; 12.50 ಕೋಟಿ ರು ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಮೈಸೂರು ದಸರಾ ಸೇರಿದಂತೆ ಇನ್ನಿತರೆ ಜಿಲ್ಲಾಮಟ್ಟದ ವಿವಿಧ ಉತ್ಸವಗಳಿಗೆ 2024-25ಮತ್ತು...

ಪ್ರಚೋದನಕಾರಿ ಭಾಷಣ, ಕೋಮು ಗಲಭೆ; 3 ವರ್ಷದಲ್ಲಿ 50 ಪ್ರಕರಣಗಳು ದಾಖಲು, ಪಟ್ಟಿ ಬಹಿರಂಗ

ಬೆಂಗಳೂರು; ರಾಜ್ಯದ  ಕರಾವಳಿ ಭಾಗ ಸೇರಿದಂತೆ ವಿವಿಧೆಡೆ ಪ್ರಚೋದನಾಕಾರಿ ಭಾಷಣ ಮಾಡಿದವರು...

ನರೇಗಾ ವಸತಿ ಕಾಮಗಾರಿಗಳಲ್ಲಿ ಮೋಸದ ಪಾವತಿ; ಚೆಕ್ ಡ್ಯಾಂ ಕಾಮಗಾರಿಯೇ ಇಲ್ಲ, ಆದರೂ ಹಣ ಪಾವತಿ

ಬೆಂಗಳೂರು; 847 ಸಂಖ್ಯೆ ವಸತಿ  ಕಾಮಗಾರಿಗಳಲ್ಲಿ  ಮೋಸದ ಪಾವತಿಗಳಾಗಿರುವುದನ್ನು ಭಾರತದ ಲೆಕ್ಕ...

42,750 ಕೋಟಿ ದೀರ್ಘಾವಧಿ ಸಾಲ, 4,516 ಕೋಟಿ ಆದಾಯ ಕೊರತೆ; ಎಸ್ಕಾಂಗಳ ಆರ್ಥಿಕ ಸ್ಥಿತಿ ಅನಾವರಣ

ಬೆಂಗಳೂರು; ವಿದ್ಯುತ್ ಸರಬರಾಜು ಕಂಪನಿಗಳು ಇದುವರೆಗೆ ಒಟ್ಟಾರೆ 42,750 ಕೋಟಿಗಳಷ್ಟು ದೀರ್ಘಾವಧಿ...

ಹಿಂದುಳಿದ ವರ್ಗ ವಸತಿ ಶಾಲೆ ಕಟ್ಟಡಗಳು ಶಿಥಿಲ; ಕಟ್ಟಡಗಳ ದುರಸ್ತಿಗೂ ಅನುದಾನವಿಲ್ಲ, ‘ಕೈ’ ಎತ್ತಿದ ಸರ್ಕಾರ

ಬೆಂಗಳೂರು;  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವಸತಿ ಶಾಲೆಗಳು ಶಿಥಿಲಗೊಂಡಿದ್ದರೂ...

ನರೇಗಾ ಕಾಮಗಾರಿಗಳ ಆರಂಭದ ದಿನಾಂಕವೂ ಇಲ್ಲ, ದತ್ತಾಂಶವೂ ಇಲ್ಲ; 1,007.83 ಕೋಟಿ ರು. ವೆಚ್ಚದ ಕಾಮಗಾರಿಗಳು ಅಪೂರ್ಣ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡಿದ್ದ ಕಾಮಗಾರಿಗಳ ಪೈಕಿ ಒಂದು ವ‍ರ್ಷಕ್ಕಿಂತಲೂ ಹೆಚ್ಚು...

Related Articles

Popular Categories

error: Content is protected !!