Sunday | April 19, 2026 |

ಬರ, ಆರ್ಥಿಕ ಬಿಕ್ಕಟ್ಟಿನಲ್ಲೂ ಸಮಿತಿ ಸದಸ್ಯ ಶಾಸಕರಿಂದ ವಿದೇಶ ಪ್ರವಾಸಕ್ಕೆ ಸಜ್ಜು; ಸ್ಪೀಕರ್ ಒಪ್ಪಿಗೆ?

ಬೆಂಗಳೂರು; ರಾಜ್ಯದ 216ಕ್ಕೂ ಹೆಚ್ಚು ತಾಲೂಕುಗಳಲ್ಲಿ ಬರ ಪರಿಸ್ಥಿತಿ ಮತ್ತು ಸಂತ್ರಸ್ತರಿಗೆ ಪೂರ್ಣ ಪ್ರಮಾಣದಲ್ಲಿ ಬರ ಪರಿಹಾರ ವಿತರಣೆ ಆಗದೇ ಇದ್ದರೂ ಸಹ ಕರ್ನಾಟಕ ವಿಧಾನಮಂಡಲದ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಸೇರಿದಂತೆ ಇನ್ನಿತರೆ ಸಮಿತಿಗಳ ಸದಸ್ಯ ಶಾಸಕರುಗಳು ಅಧ್ಯಯನ ಹೆಸರಿನಲ್ಲಿ ಯೂರೋಪ್‌ ಸೇರಿದಂತೆ ವಿದೇಶಗಳಿಗೆ ಪ್ರವಾಸ ಕೈಗೊಳ್ಳಲು ತಯಾರಿ ನಡೆಸಿದ್ದಾರೆ.

 

ಗ್ಯಾರಂಟಿ ಯೋಜನೆಗಳಿಗೆ ಸಂಪನ್ಮೂಲಗಳ ಕ್ರೋಢೀಕರಣ ಮಾಡಲು  ಆಸ್ತಿ ನಗದೀಕರಣ ಮಾಡಿಕೊಳ್ಳಲು ಹೊರಟಿರುವುದು ಮತ್ತು ಪೆಟ್ರೋಲ್‌ ಮೇಲಿನ ತೆರಿಗೆ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್‌ ಸರ್ಕಾರವು ಈಗಾಗಲೇ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. ಅಲ್ಲದೇ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅನುಮೋದನೆ ದೊರೆತಿದ್ದರೂ ಸಹ ಅನುದಾನ ಬಿಡುಗಡೆ ಮಾಡದೆಯೇ ಶಾಸಕರ ಆಕ್ರೋಶಕ್ಕೂ ತುತ್ತಾಗಿದೆ. ಈ ಬೆಳವಣಿಗೆಗಳ ಮಧ್ಯೆಯೇ ವಿದೇಶ ಪ್ರವಾಸ ಕೈಗೊಳ್ಳಲು ಸಮಿತಿ ಸದಸ್ಯ ಶಾಸಕರು ಮುಂದಾಗಿರುವುದು ಆಕ್ರೋಶದ ಬೆಂಕಿಗೆ ತುಪ್ಪ ಸುರಿದಂತಾಗಲಿದೆ.

 

ಸಾರ್ವಜನಿಕ ಲೆಕ್ಕಪತ್ರ ಸಮಿತಿ, ಸಭೆಯ ಮುಂದಿಡಲಾದ ಕಾಗದ ಪತ್ರಗಳ ಸಮಿತಿ, ಅನುಸೂಚಿತ ಜಾತಿ ಮತ್ತು ಪಂಗಡಗಳ ಸಮಿತಿ ಸೇರಿದಂತೆ ಇನ್ನಿತರೆ ಸಮಿತಿಗಳ ಅಧ್ಯಕ್ಷರು ಮತ್ತು ಸದಸ್ಯರು 15 ದಿನಗಳ ಕಾಲ ವಿದೇಶ ಪ್ರವಾಸ ಕೈಗೊಳ್ಳಲು ಅಣಿಯಾಗಿದ್ದಾರೆ. ಈ ಸಂಬಂಧ ಸ್ಪೀಕರ್‍‌ ಯು ಟಿ ಖಾದರ್‍‌ ಅವರಿಗೆ 2024ರ ಜೂನ್‌ 11 ಮತ್ತು 13ರಂದು ಪತ್ರ ಬರೆದಿದ್ದಾರೆ. ಈ ಪತ್ರಗಳ ಪ್ರತಿಗಳು ‘ದಿ ಫೈಲ್‌’ಗೆ ಲಭ್ಯವಾಗಿವೆ.

 

ವಿದೇಶ ಪ್ರವಾಸ ಕೈಗೊಳ್ಳುವ ಸಂಬಂಧ ವಿವಿಧ ಸಮಿತಿಗಳಲ್ಲಿ ಚರ್ಚೆಯಾಗಿವೆ. ಅಲ್ಲದೇ ವಿದೇಶ ಪ್ರವಾಸ ಕೈಗೊಳ್ಳಲು ಸದಸ್ಯ ಶಾಸಕರುಗಳು ತೀರ್ಮಾನಿಸಿದ್ದಾರೆ.  ಸಮಿತಿಗಳ ಅಧ್ಯಕ್ಷರು ಸಲ್ಲಿಸಿರುವ ಎಲ್ಲಾ ಮನವಿ ಪತ್ರಗಳ ಮೇಲೆ ಸ್ಪೀಕರ್‍‌ ಯು ಟಿ ಖಾದರ್‍‌ ಅವರು ಅಗತ್ಯ ಕ್ರಮಕ್ಕಾಗಿ ಎಂದು ಷರಾ ಬರೆದಿದ್ದಾರೆ ಎಂದು ತಿಳಿದು ಬಂದಿದೆ.

 

ಸ್ಪೀಕರ್‍‌ ಅವರ ಸೂಚನೆಯಂತೆ ಕಾರ್ಯದರ್ಶಿ ಎಂ ಕೆ ವಿಶಾಲಾಕ್ಷಿ ಅವರು ವಿದೇಶ ಪ್ರವಾಸ ಕೈಗೊಳ್ಳಲು ತಗಲುವ ಖರ್ಚು ವೆಚ್ಚದ ಕುರಿತು ಅಂದಾಜು ಪಟ್ಟಿ ಸಿದ್ದಪಡಿಸಿದ್ದಾರೆ. ಥಾಮಸ್‌ ಕುಕ್‌ ಸೇರಿದಂತೆ ಇನ್ನಿತರೆ ಏಜೆನ್ಸಿಗಳಿಂದ ದರ ಪಟ್ಟಿಯನ್ನೂ ಪಡೆದಿದ್ದಾರೆ ಎಂದು ಗೊತ್ತಾಗಿದೆ.

 

ಎಕಾನಮಿ ದರ್ಜೆಯಲ್ಲಿ ಪ್ರಯಾಣಕ್ಕೆ ಸಂಬಂಧಿಸಿದಂತೆ ದರ ಪಟ್ಟಿ ಪಡೆದಿದ್ದಾರೆ. ಇದರ ಪ್ರಕಾರ ಒಬ್ಬರಿಗೆ 4,48,000 ರು ಮತ್ತು 5,18,000 ರು. ದರವಿದೆ. ನೆದರ್ ಲ್ಯಾಂಡ್‌, ಹಾಲೆಂಡ್‌, ಜರ್ಮನಿ, ಸ್ವಿಟ್ಜರ್‍‌ ಲ್ಯಾಂಡ್‌, ಬೆಲ್ಜಿಯಂ, ಫ್ರಾನ್ಸ್‌, ಇಟಲಿ, ಪ್ಯಾರೀಸ್‌ ಸೇರಿದಂತೆ ಇನ್ನಿತರೆ ರಾಷ್ಟ್ರಗಳ ಪಟ್ಟಿಯನ್ನೂ ಸಿದ್ಧಪಡಿಸಲಾಗಿದೆ ಎಂದು ತಿಳಿದು ಬಂದಿದೆ.

 

ಸಮಿತಿಗಳ ಸದಸ್ಯರ ಶಾಸಕರ ಉದ್ದೇಶಿತ ವಿದೇಶ ಪ್ರವಾಸಕ್ಕೆ ಆರ್ಥಿಕ ಇಲಾಖೆಯು ಒಂದೊಮ್ಮೆ ಅನುಮತಿ ನೀಡದೇ ಇದ್ದಲ್ಲಿ ವಿಶೇಷ ಮಂಡಳಿಯಲ್ಲಿ ಒಪ್ಪಿಗೆ ಪಡೆದುಕೊಳ್ಳಬೇಕು ಎಂದೂ ಸಲಹೆ ನೀಡಲಾಗಿದೆ. ಇದಕ್ಕೆ ಸ್ಪೀಕರ್‍‌ ಯು ಟಿ ಖಾದರ್‍‌ ಕೂಡ ಒಪ್ಪಿಗೆ ಸೂಚಿಸಿದ್ದಾರೆ ಎಂದು ಗೊತ್ತಾಗಿದೆ.

 

‘ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಯು ಮಹತ್ವದ ಸಮಿತಿಯಾಗಿದ್ದು ಪ್ರಮುಖವಾಗಿ ಭಾರತದ ಲೆಕ್ಕ ನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರ ವರದಿಗಳ ಕುರಿತು ಚರ್ಚೆ ನಡೆಸುತ್ತದೆ. ಪ್ರಪಂಚದ ಹಲವು ರಾಷ್ಟ್ರಗಳು ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಯ ಸಮಿತಿಯ ವ್ಯವಸ್ಥೆಯನ್ನು ಅಳವಡಿಸಿಕೊಂಡಿವೆ. ವಿವಿಧ ರಾಷ್ಟ್ರಗಳ ಶಾಸಕಾಂಗ ವ್ಯವಸ್ಥೆ, ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿ ಮತ್ತು ಆ ರಾಷ್ಟ್ರಗಳ ತಂತ್ರಜ್ಞಾನ ವ್ಯವಸ್ಥೆಯನ್ನು ಅಧ್ಯಯನ ಮಾಡುವ ಉದ್ದೇಶದಿಂದ ವಿದೇಶ ಪ್ರವಾಸ ಕೈಗೊಳ್ಳುವುದು ಅವಶ್ಯವಿರುತ್ತದೆ. ಆದ್ದರಿಂದ ಸಮಿತಿಯು ವರ್ಷದಲ್ಲಿ ಒಮ್ಮೆ ವಿದೇಶ ಪ್ರವಾಸವನ್ನು ಕೈಗೊಳ್ಳಲು ಅನುಮತಿ ನೀಡಬೇಕು’ ಎಂದು ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಅಧ್ಯಕ್ಷ ಸಿ ಸಿ ಪಾಟೀಲ್‌ ಅವರು ಸ್ಪೀಕರ್‍‌ ಅವರಿಗೆ 2024ರ ಜೂನ್‌ 11ರಂದು ಬರೆದಿರುವ ಪತ್ರದಲ್ಲಿ ಕೋರಿರುವುದು ತಿಳಿದು ಬಂದಿದೆ.

 

ಇದಕ್ಕೆ ಜೆಡಿಎಸ್‌ನ ಜಿ ಟಿ ದೇವೇಗೌಡ, ವಿ ಸುನೀಲ್‌ಕುಮಾರ್‍‌ ಸೇರಿದಂತೆ ಹಲವು ಸದಸ್ಯರು ಸಹಿ ಹಾಕಿರುವುದು ಗೊತ್ತಾಗಿದೆ.

 

ಅದೇ ರೀತಿ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಸಮಿತಿಯ ಅಧ್ಯಕ್ಷ ಪಿ ಎಂ ನರೇಂದ್ರಸ್ವಾಮಿ ಅವರು ಸಹ ಸ್ಪೀಕರ್‍‌ ಅವರಿಗೆ 2024ರ ಜೂನ್‌ 13ರಂದು ಪತ್ರ ಬರೆದಿದ್ದಾರೆ. ಈ ಪತ್ರದ ಪ್ರತಿಯೂ ‘ದಿ ಫೈಲ್‌’ಗೆ ಲಭ್ಯವಾಗಿದೆ.

 

‘ಸಮಿತಿಯ ಸದಸ್ಯರುಗಳು ಇನ್ನು ಹೆಚ್ಚು ಪರಿಣಾಮಕಾರಿಯಾಗಿ ಸಮಿತಿಯಲ್ಲಿ ಕಾರ್ಯನಿರ್ವಹಿಸಲು ಅನುಕೂಲವಾಗುವಂತೆ ವಿದೇಶದಲ್ಲಿ ಅಧ್ಯಯನ ಪ್ರವಾಸ ಕೈಗೊಂಡು ಅಲ್ಲಿರುವ ಯೋಜನೆಗಳು, ಕಾರ್ಯಕ್ರಮಗಳ ಬಗ್ಗೆ ಅಧ್ಯಯನ ಮಾಡಲು ಇಚ್ಛಿಸಿರುತ್ತಾರೆ. ಆದ ಕಾರಣ ಕರ್ನಾಟಕ ವಿಧಾನ ಮಂಡಲದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಮಿತಿಯ ಅಧ್ಯಕ್ಷರು, ಸದಸ್ಯರು ಹೊರ ದೇಶಕ್ಕೆ ಭೇಟಿ ನೀಡಿ ಅಲ್ಲಿರುವ ಯೋಜನೆಗಳು, ಕಾರ್ಯಕ್ರಮಗಳನನು ಅಧ್ಯಯನ ಮಾಡುವ ಸಲುವಾಗಿ ಹೊರದೇಶಕ್ಕೆ ಪ್ರವಾಸ ಮಾಡಲು ಅನುಮತಿ ನೀಡಬೇಕು,’ ಎಂದು ಸಮಿತಿಯ ಅಧ್ಯಕ್ಷ ಪಿ ಎಂ ನರೇಂದ್ರಸ್ವಾಮಿ ಅವರು ಪತ್ರದಲ್ಲಿ ಕೋರಿರುವುದು ತಿಳಿದು ಬಂದಿದೆ.

 

ಈ ಪತ್ರಕ್ಕೆ ಸದಸ್ಯ ಶಾಸಕ ಪ್ರಕಾಶ್‌ ಕೋಳಿವಾಡ, ಅರವಿಂದಕುಮಾರ್‍‌ ಅರಳಿ ಸೇರಿದಂತೆ ಇನ್ನಿತರೆ ಶಾಸಕರು ಸಹಿ ಹಾಕಿರುವುದು ಗೊತ್ತಾಗಿದೆ.

 

ಸಭೆಯ ಮುಂದಿಡಲಾದ ಕಾಗದ ಪತ್ರಗಳ ಸಮಿತಿಯ ಅಧ್ಯಕ್ಷರೂ ಸಹ ಸ್ಪೀಕರ್‍‌ ಅವರಿಗೆ 2024ರ ಜೂನ್‌ 14ರಂದು ಪತ್ರ ಬರೆದಿದ್ದಾರೆ. ಹೊರದೇಶಕ್ಕೆ ಭೇಟಿ ನೀಡಿ ಅಲ್ಲಿನ ಯೋಜನೆ ಮತ್ತು ಕಾರ್ಯಕ್ರಮಗಳನ್ನು ಅಧ್ಯಯನ ಮಾಡುವ ಸಲುವಾಗಿ ಪ್ರವಾಸ ಮಾಡಲು ಅನುಮತಿ ನೀಡಬೇಕು ಎಂದು ಸಮಿತಿಯ ಅಧ್ಯಕ್ಷ ಹೆಚ್‌ ಡಿ ರೇವಣ್ಣ ಅವರು ಪತ್ರ ಬರೆದಿರುವುದು ತಿಳಿದು ಬಂದಿದೆ.

 

ಇದಕ್ಕೆ ಸದಸ್ಯ ಶಾಸಕ ಬಿ ದೇವೇಂದ್ರಪ್ಪ, ಡಾ ಶೈಲೇಂದ್ರ ಬೆಲ್ದಾಳೆ ಮತ್ತಿತರೆ ಸದಸ್ಯ ಶಾಸಕರು ಸಹಿ ಮಾಡಿರುವುದು ಗೊತ್ತಾಗಿದೆ. ಅದೇ ರೀತಿ ಸದಸ್ಯರಿಗೆ ಪ್ರವಾಸ ಭತ್ಯೆ, ದಿನ ಭತ್ಯೆಗಳನ್ನೂ ಪರಿಷ್ಕರಿಸಿ ಹೆಚ್ಚಳ ಮಾಡಬೇಕು ಎಂದೂ ಸ್ಪೀಕರ್‍‌ಗೆ ಪತ್ರ ಬರೆದಿರುವುದು ತಿಳಿದು ಬಂದಿದೆ.

 

ಸಿದ್ದರಾಮಯ್ಯ ಅವರು ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿಯೂ ತೀವ್ರ ಬರ ಪರಿಸ್ಥಿತಿ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಅಂದಿನ ಸ್ಪೀಕರ್‍‌ ಕಾಗೋಡು ತಿಮ್ಮಪ್ಪ ಅವರು ವಿದೇಶ ಪ್ರವೇಶಕ್ಕೆ ಅನುಮತಿ ನೀಡಿರಲಿಲ್ಲ.

 

ಅ ನಂತರ ಬಂದಿದ್ದ ಸರ್ಕಾರವೂ ಸಹ ನೂರು ಶಾಸಕರ ವಿದೇಶ ಪ್ರವಾಸವನ್ನು ಎರಡು ತಿಂಗಳು ಮುಂದೂಡಿತ್ತು. ಅಂದಿನ ಸ್ಪೀಕರ್ ಕೆ.ಜಿ. ಬೋಪಯ್ಯ, ಸಭಾಪತಿ ಡಿ.ಎಚ್. ಶಂಕರಮೂರ್ತಿ ಹಾಗೂ ಅಂದಿನ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ನಡೆಸಿದ್ದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿತ್ತು.

Hot this week

ಹಾರೋಹಳ್ಳಿ ಭೂ ಹಗರಣ; ದಿ ಫೈಲ್ ವರದಿ ಬೆನ್ನಲ್ಲೇ 108 ಕೋಟಿ ಮೌಲ್ಯದ ಜಮೀನು ಸರ್ಕಾರದ ಹೆಸರಿಗೆ ದಾಖಲು

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತವರು ಕ್ಷೇತ್ರದಲ್ಲಿಯೇ  ನಕಲಿ...

ಸರ್ಕಾರದ ಪೂರ್ವಾನುಮೋದನೆ ಇಲ್ಲದಿದ್ದರೂ ದಲಿತರ ಜಮೀನು ಭೂಪರಿವರ್ತನೆಗೆ ಶಿಫಾರಸ್ಸು; ತಹಶೀಲ್ದಾರ್ ಭಾಗಿ!

ಬೆಂಗಳೂರು; ಪಿಟಿಸಿಎಲ್ ಕಾಯ್ದೆ,  ಸರ್ಕಾರಿ ಗೋಮಾಳ ಮತ್ತು ಅರಣ್ಯ ಪ್ರದೇಶದ ಜಮೀನುಗಳ...

ಕೋಲಾರ ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್‌ನಲ್ಲಿ ಬಹುಕೋಟಿ ಹಗರಣ; ಲೋಕಾಯುಕ್ತದಿಂದ ತನಿಖೆ, ಹೊರಬಿದ್ದ ಆದೇಶ

ಬೆಂಗಳೂರು; ಕೋಲಾರ ಮತ್ತು ಚಿಕ್ಕಬಳ್ಳಾಪುರ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ಹಿಂದಿನ ಕಾಂಗ್ರೆಸ್‌...

ಪುರಾತತ್ವ ಇಲಾಖೆಯಲ್ಲಿಯೂ ಶೇ.60ರಷ್ಟು ಕಮಿಷನ್‌ಗೆ ಬೇಡಿಕೆ; ಲಂಚದ ಪ್ರಮಾಣ ಕಡಿಮೆ ಮಾಡಿಸಲು ಅಲವತ್ತುಕೊಂಡ ಗುತ್ತಿಗೆದಾರರು

ಬೆಂಗಳೂರು; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲಿ ಕಚೇರಿ ಹೊಂದಿರುವ  ಪುರಾತತ್ವ...

Topics

ಹಾರೋಹಳ್ಳಿ ಭೂ ಹಗರಣ; ದಿ ಫೈಲ್ ವರದಿ ಬೆನ್ನಲ್ಲೇ 108 ಕೋಟಿ ಮೌಲ್ಯದ ಜಮೀನು ಸರ್ಕಾರದ ಹೆಸರಿಗೆ ದಾಖಲು

ಬೆಂಗಳೂರು; ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತವರು ಕ್ಷೇತ್ರದಲ್ಲಿಯೇ  ನಕಲಿ...

ಸರ್ಕಾರದ ಪೂರ್ವಾನುಮೋದನೆ ಇಲ್ಲದಿದ್ದರೂ ದಲಿತರ ಜಮೀನು ಭೂಪರಿವರ್ತನೆಗೆ ಶಿಫಾರಸ್ಸು; ತಹಶೀಲ್ದಾರ್ ಭಾಗಿ!

ಬೆಂಗಳೂರು; ಪಿಟಿಸಿಎಲ್ ಕಾಯ್ದೆ,  ಸರ್ಕಾರಿ ಗೋಮಾಳ ಮತ್ತು ಅರಣ್ಯ ಪ್ರದೇಶದ ಜಮೀನುಗಳ...

ಕೋಲಾರ ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್‌ನಲ್ಲಿ ಬಹುಕೋಟಿ ಹಗರಣ; ಲೋಕಾಯುಕ್ತದಿಂದ ತನಿಖೆ, ಹೊರಬಿದ್ದ ಆದೇಶ

ಬೆಂಗಳೂರು; ಕೋಲಾರ ಮತ್ತು ಚಿಕ್ಕಬಳ್ಳಾಪುರ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ಹಿಂದಿನ ಕಾಂಗ್ರೆಸ್‌...

ಪುರಾತತ್ವ ಇಲಾಖೆಯಲ್ಲಿಯೂ ಶೇ.60ರಷ್ಟು ಕಮಿಷನ್‌ಗೆ ಬೇಡಿಕೆ; ಲಂಚದ ಪ್ರಮಾಣ ಕಡಿಮೆ ಮಾಡಿಸಲು ಅಲವತ್ತುಕೊಂಡ ಗುತ್ತಿಗೆದಾರರು

ಬೆಂಗಳೂರು; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲಿ ಕಚೇರಿ ಹೊಂದಿರುವ  ಪುರಾತತ್ವ...

1704.69 ಕೋಟಿ ರು ಗೆ ಆಕ್ಷೇಪಣೆ; ಸಾವಿರಾರು ಕೋಟಿ ವೆಚ್ಚವಾಗಿದ್ದರೂ ಬಂಡವಾಳ ವೆಚ್ಚ ಕಾಮಗಾರಿಗೆ ಅತ್ಯಲ್ಪ ಮೊತ್ತ ಪರಿಗಣನೆ

ಬೆಂಗಳೂರು; ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಸಾಮಾನ್ಯ ಆಡಳಿತ, ಕಾಮಗಾರಿ, ಆರೋಗ್ಯ, ಕಂದಾಯ,...

ಪಿಂಚಣಿಗೆ ಕೇಳಿದ್ದು 5.63 ಕೋಟಿ, ಬಜೆಟ್‌ನಲ್ಲಿ ನಿಗದಿಪಡಿಸಿದ್ದು ಕೇವಲ 1 ಲಕ್ಷ; ಆರ್ಥಿಕ ಮುಗ್ಗಟ್ಟಿಗೆ ಸಿಲುಕಲಿದೆಯೇ ವಿಶ್ವವಿದ್ಯಾಲಯ?

ಬೆಂಗಳೂರು; ಬೋಧಕ, ಬೋಧಕೇತರ ಸಿಬ್ಬಂದಿಗಳಿಗೆ ಪಿಂಚಣಿ  ಪಾವತಿಸಲು ವಿಶ್ವವಿದ್ಯಾಲಯಗಳು ಕೇಳಿದ್ದ ಸಹಾಯಾನುದಾನದ...

Related Articles

Popular Categories

error: Content is protected !!