Wednesday | March 25, 2026 |

1,494 ಕೋಟಿ ರು ಜಮೆ; ಸಿಎಂ ಸಹಿಯೊಂದಿಗೆ ಉತ್ತರಿಸಿದ್ದ ಕಡತ ತೆರೆದಿಲ್ಲವೆಂದು ಸುಳ್ಳು ಹೇಳಿದ ಸರ್ಕಾರ

Support THE-FILE

spot_img

ಬೆಂಗಳೂರು; ತಾಲೂಕು ಪಂಚಾಯ್ತಿಗಳಲ್ಲಿ ಖರ್ಚಾಗದೇ ಉಳಿದಿರುವ 1,494 ಕೋಟಿ ರು ಕುರಿತಂತೆ ವಿಧಾನ ಪರಿಷತ್‌ ಸದಸ್ಯ ಡಿ ಎಸ್‌ ಅರುಣ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೇಳಿದ್ದ  ಪ್ರಶ್ನೆಗೆ ಉತ್ತರಿಸಲು ಕಡತ ತೆರೆದಿದ್ದ ಆರ್ಥಿಕ ಇಲಾಖೆಯು ಇದೀಗ ಕಡತವನ್ನೇ ಸೃಜಿಸಿಲ್ಲ ಎಂದು ಆರ್‌ಟಿಐ ಅಡಿಯಲ್ಲಿ ಮಾಹಿತಿ ಒದಗಿಸಿದೆ.

 

ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿಗಳಲ್ಲಿ ಉಳಿಕೆಯಾಗಿರುವ ಅನುದಾನ ಮತ್ತು ಸಂಚಿತ ನಿಧಿಗೆ ಜಮೆ ಮಾಡುತ್ತಿರುವ ಕುರಿತು ಅರ್ಥ ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿ ಅಧಿವೇಶನದಲ್ಲಿ ಉತ್ತರಿಸಿದ್ದರು. ಕಡತ ಸಂಖ್ಯೆಯೊಂದಿಗೆ ಉತ್ತರಕ್ಕೆ ಸಹಿ ಮಾಡಿ ವಿಧಾನ ಮಂಡಲದಲ್ಲಿ ಮಂಡಿಸಿದ್ದರು.

 

ಇದೇ ಕಡತ ಸಂಖ್ಯೆಯನ್ನು ನಮೂದಿಸಿ ‘ದಿ ಫೈಲ್‌’ ಆರ್‌ಟಿಐ ಅರ್ಜಿ  ಸಲ್ಲಿಸಿತ್ತು.  ಇದಕ್ಕೆ  ಆರ್ಥಿಕ ಇಲಾಖೆಯು ಕಡತವನ್ನೇ ಸೃಜಿಸಿಲ್ಲ ಎಂದು ಮಾಹಿತಿ ಒದಗಿಸಿದೆ.

 

ಆರ್ಥಿಕ ಇಲಾಖೆಯು ನೀಡಿರುವ ಉತ್ತರವು ವಾಸ್ತವಾಂಶವನ್ನು ಮರೆಮಾಚಿಸಲು ಯತ್ನಿಸುತ್ತಿದೆಯೇ ಅಥವಾ ಕಡತವನ್ನೇ  ನಾಪತ್ತೆಯಾಗಿಸಿದೆಯೇ ಎಂಬ ಅನುಮಾನಗಳು ವ್ಯಕ್ತವಾಗುತ್ತಿವೆ.

 

ವಿಧಾನ ಪರಿಷತ್‌ ಸದಸ್ಯ ಡಿ ಎಸ್‌ ಅರುಣ್‌ ಅವರು 2023ರ ಡಿಸೆಂಬರ್‌ನಲ್ಲಿ ನಡೆದಿದ್ದ ಅಧಿವೇಶನದಲ್ಲಿ ಚುಕ್ಕೆ ಗುರುತಿನ ಪ್ರಶ್ನೆ (ಪ್ರಶ್ನೆ ಸಂಖ್ಯೆ 454)  ಕೇಳಿದ್ದರು.

 

ಈ ಪ್ರಶ್ನೆಗೆ ಉತ್ತರಿಸುವ ಸಂಬಂಧ ಆರ್ಥಿಕ ಇಲಾಖೆಯು ಆಇ 917-ವೆಚ್ಚ-6/2023 ಸಂಖ್ಯೆಯಲ್ಲಿ ಕಡತ  ತೆರೆದಿತ್ತು. ಈ ಕಡತದಲ್ಲಿ ಅಧಿಕಾರಿಗಳು ನೀಡಿದ್ದ ಉತ್ತರವನ್ನೇ ವಿಧಾನಸಭೆ ಅಧಿವೇಶನದಲ್ಲಿ 2023ರ ಡಿಸೆಂಬರ್‌ 7ರಂದು  ಮಂಡಿಸಲಾಗಿತ್ತು. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಸಹಿ ಮಾಡಿದ್ದಾರೆ. ಈ ಉತ್ತರವನ್ನು ಮಂಡಿಸಲು ಆರ್ಥಿಕ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್‌ ಕೆ ಅತೀಕ್‌ ಅವರೂ ಸಹ ಅನುಮೋದಿಸಿದ್ದರು ಎಂದು ಗೊತ್ತಾಗಿದೆ.

 

 

 

ಆದರೀಗ ಈ ಕಡತವನ್ನೇ ತೆರೆದಿಲ್ಲ ಎಂದು ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ವಿದ್ಯಾ ಹೆಚ್‌ ಪೈ ಅವರು 2024ರ ಜೂನ್‌ 19ರಂದು ಉತ್ತರ ನೀಡಿದ್ದಾರೆ.

 

 

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ಉತ್ತರ ನೀಡಿರುವ ಕಡತವನ್ನೇ ಸೃಜಿಸಿಲ್ಲ ಎಂದು ಆರ್ಥಿಕ ಇಲಾಖೆಯು ಮಾಹಿತಿ ಒದಗಿಸಿರುವುದು ಈಗಾಗಲೇ ಎದ್ದಿರುವ  ಅನುಮಾನಗಳನ್ನು ಮತ್ತಷ್ಟು ಬಲಪಡಿಸಿದಂತಾಗಿದೆ.

 

ರಾಜ್ಯದ ತಾಲೂಕು ಪಂಚಾಯ್ತಿಗಳಲ್ಲಿ 2022-23ನೇ ಸಾಲಿನಲ್ಲಿ ಖರ್ಚಾಗದೇ ಉಳಿಕೆಯಾಗಿದ್ದ 1,494 ಕೋಟಿ ರು ಮೊತ್ತವು ರಾಜ್ಯ ಖಜಾನೆಯಲ್ಲಿ ಸ್ವೀಕೃತವಾಗಿಲ್ಲ. ಸಂಚಿತ ನಿಧಿಗೆ ಸೇರಬೇಕಿದ್ದ ಈ ಮೊತ್ತವನ್ನು Recovery of overpayment ಎಂದು ಹೊಸದಾಗಿ ವ್ಯಾಖ್ಯಾನಿಸಿತ್ತು.

 

ಈ ಮೊತ್ತಗಳನ್ನು ಸಂಚಿತ ನಿಧಿಯಿಂದ ಹೊರಗೆ ಇರಿಸಿ ವ್ಯವಹರಿಸಿದೆಯೇ ಎಂಬ ಅನುಮಾನವೂ ಇದೆ.  ಸರ್ಕಾರವು ಈ ರೀತಿ  ಸಾವಿರಾರು ಕೋಟಿ ರುಪಾಯಿಗಳನ್ನು ಸಂಚಿತ ನಿಧಿಯಿಂದ ಹೊರಗೆ ಇರಿಸಿ ವ್ಯವಹರಿಸಿರುವುದು ಸಂಚಿತ ನಿಧಿಯ ಕಳ್ಳತನ ಮಾಡಿದಷ್ಟೇ ಗಂಭೀರ ಅಪರಾಧಿಕ ಕೃತ್ಯ ಎಂಬ ಆರೋಪವೂ ಕೇಳಿ ಬಂದಿತ್ತು.

 

ವಾಲ್ಮೀಕಿ ಪರಿಶಿಷ್ಟ ಅಭಿವೃದ್ಧಿ ನಿಗಮದಲ್ಲಿದ್ದ ಕೋಟ್ಯಂತರ ರುಪಾಯಿ ಮೊತ್ತವು ಅನಧಿಕೃತ ಖಾತೆಗಳಿಗೆ ವರ್ಗಾವಣೆ ಆಗಿರುವ ಪ್ರಕರಣದ ಕುರಿತು ಪ್ರತಿಪಕ್ಷಗಳು ರಾಜ್ಯ ಕಾಂಗ್ರೆಸ್‌ ಸರ್ಕಾರದ ಮೇಲೆ ಮುಗಿಬಿದ್ದಿವೆ. ಇದರ ಬೆನ್ನಲ್ಲೇ ಇದೀಗ 1,494 ಕೋಟಿ ರುಪಾಯಿ ರಾಜ್ಯ ಖಜಾನೆಯಲ್ಲಿ ಸ್ವೀಕೃತವಾಗಿಲ್ಲ ಎಂಬ ಮಾಹಿತಿಯು ಸರ್ಕಾರವನ್ನು ಮತ್ತಷ್ಟು ಇಕ್ಕಟ್ಟಿಗೆ ಸಿಲುಕಿಸಿತ್ತು.

 

ರಾಜ್ಯ ಖಜಾನೆಗೆ ಸ್ವೀಕೃತವಾಗದ 1,494 ಕೋಟಿ; ಸಂಚಿತ ನಿಧಿಯಿಂದ ಹೊರಗಿರಿಸಿ ವ್ಯವಹರಿಸಿದೆಯೇ ಸರ್ಕಾರ?

ರಾಜ್ಯದ ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿಗಳ Fund II ನಲ್ಲಿ ಖರ್ಚಾಗದೇ ಉಳಿಕೆ ಇರುವ ಮೊತ್ತವು ಸಂಚಿತ ನಿಧಿಗೆ ಜಮೆಯಾಗಿದೆಯೇ ಇಲ್ಲವೇ ಎಂಬ ಕುರಿತು ಶಿವಮೊಗ್ಗ ಮೂಲದ ವಕೀಲ ಹಾಗೂ ಖಜಾನೆ ಇಲಾಖೆಯ ನಿವೃತ್ತ ಅಧಿಕಾರಿ ಪ್ರಾಣೇಶ್‌ ಎ ಎನ್‌ ಎಂಬುವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಕಾನೂನು ಸೂಚನಾ ಪತ್ರ ನೀಡಿದ್ದರು. ಇದರ ಬೆನ್ನಲ್ಲೇ  ರಾಜ್ಯ ಖಜಾನೆ ಇಲಾಖೆಯು ನೀಡಿರುವ  ಮಾಹಿತಿಗೆ ಮಹತ್ವ ಬಂದಿತ್ತು.

 

‘Redumption in Expenditure ಯಾವತ್ತೂ ಸಹ ರಾಜ್ಯದ ರೆವಿನ್ಯೂ ಆಗಿರುವುದಿಲ್ಲ. ಇದು ಸಂಚಿತ ನಿಧಿಗೆ ಸೇರಬೇಕಾದ ಹಣ ಆಗಿರುತ್ತದೆ. ಆದರೆ ಸರ್ಕಾರವು ಇದೇ ಮೊತ್ತಗಳನ್ನು Recovery of overpayment ಎಂದು ಹೊಸದಾಗಿ ವ್ಯಾಖ್ಯಾನಿಸಿದೆ. ಈ ಮೊತ್ತಗಳನ್ನು ಸಂಚಿತ ನಿಧಿಯಿಂದ ಹೊರಗೆ ಇರಿಸಿ ವ್ಯವಹರಿಸುತ್ತಿದೆ. ಇದುಸಂವಿಧಾನ ಬಾಹಿರ ಕೃತ್ಯವಾಗಿರುತ್ತದೆ. ಇದು ಒಂದು ರೀತಿಯಲ್ಲಿ ನಿಧಿಯನ್ನು ಮಾರ್ಗಪಲ್ಲಟ ಮಾಡಿದಂತಾಗುತ್ತದೆ. ವಿಧಾನಮಂಡಲದ ಗಮನಕ್ಕೆ ತಾರದೇ ಸರ್ಕಾರವು ತಾನೇ ಹಣಕಾಸನ್ನು ಬಳಸಿದಂತಾಗಿರುತ್ತದೆ,’ ಎಂದು ಖಜಾನೆ ಇಲಾಖೆಯ ನಿವೃತ್ತ ಅಧಿಕಾರಿ ಹಾಗೂ ವಕೀಲ  ಪ್ರಾಣೇಶ್‌ ಅವರು ಅನುಮಾನಿಸಿದ್ದನ್ನು ಸ್ಮರಿಸಬಹುದು.

Hot this week

ನರೇಗಾ ಕಾಮಗಾರಿಗಳ ಆರಂಭದ ದಿನಾಂಕವೂ ಇಲ್ಲ, ದತ್ತಾಂಶವೂ ಇಲ್ಲ; 1,007.83 ಕೋಟಿ ರು. ವೆಚ್ಚದ ಕಾಮಗಾರಿಗಳು ಅಪೂರ್ಣ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡಿದ್ದ ಕಾಮಗಾರಿಗಳ ಪೈಕಿ ಒಂದು ವ‍ರ್ಷಕ್ಕಿಂತಲೂ ಹೆಚ್ಚು...

ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿಗಳ ಕುಟುಂಬ ಸದಸ್ಯರ ಉದ್ಯಮ, ಹಣಕಾಸಿನ ವ್ಯವಹಾರ; ಸದನಕ್ಕೆ ಒದಗಿಸಬಹುದೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಖಿಲ ಭಾರತ...

ನರೇಗಾ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಿಯಮ ಉಲ್ಲಂಘನೆ; 86.67 ಕೋಟಿ ರು ಅಕ್ರಮ ಪತ್ತೆ ಹಚ್ಚಿದ ಸಿಎಜಿ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಮಾನವ ಸಂಪನ್ಮೂಲ ಬಳಕೆಗಾಗಿ ಮಾಡಿಕೊಂಡಿದ್ದ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಡೆದಿದ್ದ...

ಮೋಸದ ವಹಿವಾಟು, ಹೆಚ್ಚಿನ ಪಾವತಿ, ಅಕ್ರಮ ವೆಚ್ಚ; ನರೇಗಾದ ಮತ್ತೊಂದು ಮುಖ ಬಯಲು ಮಾಡಿದ ಸಿಎಜಿ

ಬೆಂಗಳೂರು; ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೈಗೊಂಡಿದ್ದ ಕಾಮಗಾರಿಗಳು...

ಗೃಹಜ್ಯೋತಿ; 23,823.06 ಮಿಲಿಯನ್ ಯೂನಿಟ್ ವಿದ್ಯುತ್ ಬಳಕೆ, ಎಸ್ಕಾಂಗಳಿಗೆ 631.75 ಕೋಟಿ ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಗೃಹ ಜ್ಯೋತಿ ಯೋಜನೆ ಅನುಷ್ಠಾನಗೊಳಿಸಿರುವ ವಿದ್ಯುತ್ ಸರಬರಾಜು ಕಂಪನಿಗಳಿಗೆ ಸರ್ಕಾರವು...

Topics

ನರೇಗಾ ಕಾಮಗಾರಿಗಳ ಆರಂಭದ ದಿನಾಂಕವೂ ಇಲ್ಲ, ದತ್ತಾಂಶವೂ ಇಲ್ಲ; 1,007.83 ಕೋಟಿ ರು. ವೆಚ್ಚದ ಕಾಮಗಾರಿಗಳು ಅಪೂರ್ಣ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡಿದ್ದ ಕಾಮಗಾರಿಗಳ ಪೈಕಿ ಒಂದು ವ‍ರ್ಷಕ್ಕಿಂತಲೂ ಹೆಚ್ಚು...

ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿಗಳ ಕುಟುಂಬ ಸದಸ್ಯರ ಉದ್ಯಮ, ಹಣಕಾಸಿನ ವ್ಯವಹಾರ; ಸದನಕ್ಕೆ ಒದಗಿಸಬಹುದೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಖಿಲ ಭಾರತ...

ನರೇಗಾ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಿಯಮ ಉಲ್ಲಂಘನೆ; 86.67 ಕೋಟಿ ರು ಅಕ್ರಮ ಪತ್ತೆ ಹಚ್ಚಿದ ಸಿಎಜಿ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಮಾನವ ಸಂಪನ್ಮೂಲ ಬಳಕೆಗಾಗಿ ಮಾಡಿಕೊಂಡಿದ್ದ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಡೆದಿದ್ದ...

ಮೋಸದ ವಹಿವಾಟು, ಹೆಚ್ಚಿನ ಪಾವತಿ, ಅಕ್ರಮ ವೆಚ್ಚ; ನರೇಗಾದ ಮತ್ತೊಂದು ಮುಖ ಬಯಲು ಮಾಡಿದ ಸಿಎಜಿ

ಬೆಂಗಳೂರು; ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೈಗೊಂಡಿದ್ದ ಕಾಮಗಾರಿಗಳು...

ಗೃಹಜ್ಯೋತಿ; 23,823.06 ಮಿಲಿಯನ್ ಯೂನಿಟ್ ವಿದ್ಯುತ್ ಬಳಕೆ, ಎಸ್ಕಾಂಗಳಿಗೆ 631.75 ಕೋಟಿ ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಗೃಹ ಜ್ಯೋತಿ ಯೋಜನೆ ಅನುಷ್ಠಾನಗೊಳಿಸಿರುವ ವಿದ್ಯುತ್ ಸರಬರಾಜು ಕಂಪನಿಗಳಿಗೆ ಸರ್ಕಾರವು...

ವಿನಾಶಕಾರಿ ಭೂ ಕುಸಿತ; ಕೊಡಗು ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರದಲ್ಲಿ ಸಭೆಯೇ ನಡೆದಿಲ್ಲ, ಪುರಾವೆಯೂ ಇಲ್ಲ

ಬೆಂಗಳೂರು; ಕೊಡಗಿನಲ್ಲಿ 2018-19ನೇ ಸಾಲಿನಲ್ಲಿ  ಭಾರೀ ಪ್ರಮಾಣದ ವಿನಾಶಕಾರಿ ಭೂ ಕುಸಿತಗಳಾಗಿದ್ದರೂ ...

ಭೂ ಸ್ವಾಧೀನ, ಪರಿಹಾರದಲ್ಲಿ ಅಕ್ರಮ; ಬಿಸ್ವಾಸ್ ವರದಿ ಮೂಲೆಗುಂಪು, 29.96 ಕೋಟಿ ನಷ್ಟ ಪ್ರಕರಣಕ್ಕೆ ಕ್ಲೀನ್ ಚಿಟ್

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಸಾಬೀತಾಗಿದ್ದ  ಬೆಳಗಾವಿ ಜಿಲ್ಲೆ ಹುಕ್ಕೇರಿ...

ಬೆಳೆ ಹವಾಮಾನ ನಿಗಾ ಸಭೆ ನಡೆಸಿಲ್ಲ, ಮಾಹಿತಿ ವ್ಯವಸ್ಥೆಯೂ ಇಲ್ಲ; ಸಿಎಜಿಯನ್ನೂ ತಪ್ಪುದಾರಿಗೆಳೆದ ಸರ್ಕಾರ

ಬೆಂಗಳೂರು;  ರಾಜ್ಯದಲ್ಲಿ ಬರ ಪರಿಸ್ಥಿತಿ ಮೇಲ್ವಿಚಾರಣೆ ಮಾಡಲು ಬೆಳೆ ಹವಾಮಾನ ನಿಗಾ...

Related Articles

Popular Categories

error: Content is protected !!