Saturday | May 9, 2026 |

1,494 ಕೋಟಿ ರು ಜಮೆ; ಸಿಎಂ ಸಹಿಯೊಂದಿಗೆ ಉತ್ತರಿಸಿದ್ದ ಕಡತ ತೆರೆದಿಲ್ಲವೆಂದು ಸುಳ್ಳು ಹೇಳಿದ ಸರ್ಕಾರ

ಬೆಂಗಳೂರು; ತಾಲೂಕು ಪಂಚಾಯ್ತಿಗಳಲ್ಲಿ ಖರ್ಚಾಗದೇ ಉಳಿದಿರುವ 1,494 ಕೋಟಿ ರು ಕುರಿತಂತೆ ವಿಧಾನ ಪರಿಷತ್‌ ಸದಸ್ಯ ಡಿ ಎಸ್‌ ಅರುಣ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೇಳಿದ್ದ  ಪ್ರಶ್ನೆಗೆ ಉತ್ತರಿಸಲು ಕಡತ ತೆರೆದಿದ್ದ ಆರ್ಥಿಕ ಇಲಾಖೆಯು ಇದೀಗ ಕಡತವನ್ನೇ ಸೃಜಿಸಿಲ್ಲ ಎಂದು ಆರ್‌ಟಿಐ ಅಡಿಯಲ್ಲಿ ಮಾಹಿತಿ ಒದಗಿಸಿದೆ.

 

ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿಗಳಲ್ಲಿ ಉಳಿಕೆಯಾಗಿರುವ ಅನುದಾನ ಮತ್ತು ಸಂಚಿತ ನಿಧಿಗೆ ಜಮೆ ಮಾಡುತ್ತಿರುವ ಕುರಿತು ಅರ್ಥ ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿ ಅಧಿವೇಶನದಲ್ಲಿ ಉತ್ತರಿಸಿದ್ದರು. ಕಡತ ಸಂಖ್ಯೆಯೊಂದಿಗೆ ಉತ್ತರಕ್ಕೆ ಸಹಿ ಮಾಡಿ ವಿಧಾನ ಮಂಡಲದಲ್ಲಿ ಮಂಡಿಸಿದ್ದರು.

 

ಇದೇ ಕಡತ ಸಂಖ್ಯೆಯನ್ನು ನಮೂದಿಸಿ ‘ದಿ ಫೈಲ್‌’ ಆರ್‌ಟಿಐ ಅರ್ಜಿ  ಸಲ್ಲಿಸಿತ್ತು.  ಇದಕ್ಕೆ  ಆರ್ಥಿಕ ಇಲಾಖೆಯು ಕಡತವನ್ನೇ ಸೃಜಿಸಿಲ್ಲ ಎಂದು ಮಾಹಿತಿ ಒದಗಿಸಿದೆ.

 

ಆರ್ಥಿಕ ಇಲಾಖೆಯು ನೀಡಿರುವ ಉತ್ತರವು ವಾಸ್ತವಾಂಶವನ್ನು ಮರೆಮಾಚಿಸಲು ಯತ್ನಿಸುತ್ತಿದೆಯೇ ಅಥವಾ ಕಡತವನ್ನೇ  ನಾಪತ್ತೆಯಾಗಿಸಿದೆಯೇ ಎಂಬ ಅನುಮಾನಗಳು ವ್ಯಕ್ತವಾಗುತ್ತಿವೆ.

 

ವಿಧಾನ ಪರಿಷತ್‌ ಸದಸ್ಯ ಡಿ ಎಸ್‌ ಅರುಣ್‌ ಅವರು 2023ರ ಡಿಸೆಂಬರ್‌ನಲ್ಲಿ ನಡೆದಿದ್ದ ಅಧಿವೇಶನದಲ್ಲಿ ಚುಕ್ಕೆ ಗುರುತಿನ ಪ್ರಶ್ನೆ (ಪ್ರಶ್ನೆ ಸಂಖ್ಯೆ 454)  ಕೇಳಿದ್ದರು.

 

ಈ ಪ್ರಶ್ನೆಗೆ ಉತ್ತರಿಸುವ ಸಂಬಂಧ ಆರ್ಥಿಕ ಇಲಾಖೆಯು ಆಇ 917-ವೆಚ್ಚ-6/2023 ಸಂಖ್ಯೆಯಲ್ಲಿ ಕಡತ  ತೆರೆದಿತ್ತು. ಈ ಕಡತದಲ್ಲಿ ಅಧಿಕಾರಿಗಳು ನೀಡಿದ್ದ ಉತ್ತರವನ್ನೇ ವಿಧಾನಸಭೆ ಅಧಿವೇಶನದಲ್ಲಿ 2023ರ ಡಿಸೆಂಬರ್‌ 7ರಂದು  ಮಂಡಿಸಲಾಗಿತ್ತು. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಸಹಿ ಮಾಡಿದ್ದಾರೆ. ಈ ಉತ್ತರವನ್ನು ಮಂಡಿಸಲು ಆರ್ಥಿಕ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್‌ ಕೆ ಅತೀಕ್‌ ಅವರೂ ಸಹ ಅನುಮೋದಿಸಿದ್ದರು ಎಂದು ಗೊತ್ತಾಗಿದೆ.

 

 

 

ಆದರೀಗ ಈ ಕಡತವನ್ನೇ ತೆರೆದಿಲ್ಲ ಎಂದು ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ವಿದ್ಯಾ ಹೆಚ್‌ ಪೈ ಅವರು 2024ರ ಜೂನ್‌ 19ರಂದು ಉತ್ತರ ನೀಡಿದ್ದಾರೆ.

 

 

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ಉತ್ತರ ನೀಡಿರುವ ಕಡತವನ್ನೇ ಸೃಜಿಸಿಲ್ಲ ಎಂದು ಆರ್ಥಿಕ ಇಲಾಖೆಯು ಮಾಹಿತಿ ಒದಗಿಸಿರುವುದು ಈಗಾಗಲೇ ಎದ್ದಿರುವ  ಅನುಮಾನಗಳನ್ನು ಮತ್ತಷ್ಟು ಬಲಪಡಿಸಿದಂತಾಗಿದೆ.

 

ರಾಜ್ಯದ ತಾಲೂಕು ಪಂಚಾಯ್ತಿಗಳಲ್ಲಿ 2022-23ನೇ ಸಾಲಿನಲ್ಲಿ ಖರ್ಚಾಗದೇ ಉಳಿಕೆಯಾಗಿದ್ದ 1,494 ಕೋಟಿ ರು ಮೊತ್ತವು ರಾಜ್ಯ ಖಜಾನೆಯಲ್ಲಿ ಸ್ವೀಕೃತವಾಗಿಲ್ಲ. ಸಂಚಿತ ನಿಧಿಗೆ ಸೇರಬೇಕಿದ್ದ ಈ ಮೊತ್ತವನ್ನು Recovery of overpayment ಎಂದು ಹೊಸದಾಗಿ ವ್ಯಾಖ್ಯಾನಿಸಿತ್ತು.

 

ಈ ಮೊತ್ತಗಳನ್ನು ಸಂಚಿತ ನಿಧಿಯಿಂದ ಹೊರಗೆ ಇರಿಸಿ ವ್ಯವಹರಿಸಿದೆಯೇ ಎಂಬ ಅನುಮಾನವೂ ಇದೆ.  ಸರ್ಕಾರವು ಈ ರೀತಿ  ಸಾವಿರಾರು ಕೋಟಿ ರುಪಾಯಿಗಳನ್ನು ಸಂಚಿತ ನಿಧಿಯಿಂದ ಹೊರಗೆ ಇರಿಸಿ ವ್ಯವಹರಿಸಿರುವುದು ಸಂಚಿತ ನಿಧಿಯ ಕಳ್ಳತನ ಮಾಡಿದಷ್ಟೇ ಗಂಭೀರ ಅಪರಾಧಿಕ ಕೃತ್ಯ ಎಂಬ ಆರೋಪವೂ ಕೇಳಿ ಬಂದಿತ್ತು.

 

ವಾಲ್ಮೀಕಿ ಪರಿಶಿಷ್ಟ ಅಭಿವೃದ್ಧಿ ನಿಗಮದಲ್ಲಿದ್ದ ಕೋಟ್ಯಂತರ ರುಪಾಯಿ ಮೊತ್ತವು ಅನಧಿಕೃತ ಖಾತೆಗಳಿಗೆ ವರ್ಗಾವಣೆ ಆಗಿರುವ ಪ್ರಕರಣದ ಕುರಿತು ಪ್ರತಿಪಕ್ಷಗಳು ರಾಜ್ಯ ಕಾಂಗ್ರೆಸ್‌ ಸರ್ಕಾರದ ಮೇಲೆ ಮುಗಿಬಿದ್ದಿವೆ. ಇದರ ಬೆನ್ನಲ್ಲೇ ಇದೀಗ 1,494 ಕೋಟಿ ರುಪಾಯಿ ರಾಜ್ಯ ಖಜಾನೆಯಲ್ಲಿ ಸ್ವೀಕೃತವಾಗಿಲ್ಲ ಎಂಬ ಮಾಹಿತಿಯು ಸರ್ಕಾರವನ್ನು ಮತ್ತಷ್ಟು ಇಕ್ಕಟ್ಟಿಗೆ ಸಿಲುಕಿಸಿತ್ತು.

 

ರಾಜ್ಯ ಖಜಾನೆಗೆ ಸ್ವೀಕೃತವಾಗದ 1,494 ಕೋಟಿ; ಸಂಚಿತ ನಿಧಿಯಿಂದ ಹೊರಗಿರಿಸಿ ವ್ಯವಹರಿಸಿದೆಯೇ ಸರ್ಕಾರ?

ರಾಜ್ಯದ ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿಗಳ Fund II ನಲ್ಲಿ ಖರ್ಚಾಗದೇ ಉಳಿಕೆ ಇರುವ ಮೊತ್ತವು ಸಂಚಿತ ನಿಧಿಗೆ ಜಮೆಯಾಗಿದೆಯೇ ಇಲ್ಲವೇ ಎಂಬ ಕುರಿತು ಶಿವಮೊಗ್ಗ ಮೂಲದ ವಕೀಲ ಹಾಗೂ ಖಜಾನೆ ಇಲಾಖೆಯ ನಿವೃತ್ತ ಅಧಿಕಾರಿ ಪ್ರಾಣೇಶ್‌ ಎ ಎನ್‌ ಎಂಬುವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಕಾನೂನು ಸೂಚನಾ ಪತ್ರ ನೀಡಿದ್ದರು. ಇದರ ಬೆನ್ನಲ್ಲೇ  ರಾಜ್ಯ ಖಜಾನೆ ಇಲಾಖೆಯು ನೀಡಿರುವ  ಮಾಹಿತಿಗೆ ಮಹತ್ವ ಬಂದಿತ್ತು.

 

‘Redumption in Expenditure ಯಾವತ್ತೂ ಸಹ ರಾಜ್ಯದ ರೆವಿನ್ಯೂ ಆಗಿರುವುದಿಲ್ಲ. ಇದು ಸಂಚಿತ ನಿಧಿಗೆ ಸೇರಬೇಕಾದ ಹಣ ಆಗಿರುತ್ತದೆ. ಆದರೆ ಸರ್ಕಾರವು ಇದೇ ಮೊತ್ತಗಳನ್ನು Recovery of overpayment ಎಂದು ಹೊಸದಾಗಿ ವ್ಯಾಖ್ಯಾನಿಸಿದೆ. ಈ ಮೊತ್ತಗಳನ್ನು ಸಂಚಿತ ನಿಧಿಯಿಂದ ಹೊರಗೆ ಇರಿಸಿ ವ್ಯವಹರಿಸುತ್ತಿದೆ. ಇದುಸಂವಿಧಾನ ಬಾಹಿರ ಕೃತ್ಯವಾಗಿರುತ್ತದೆ. ಇದು ಒಂದು ರೀತಿಯಲ್ಲಿ ನಿಧಿಯನ್ನು ಮಾರ್ಗಪಲ್ಲಟ ಮಾಡಿದಂತಾಗುತ್ತದೆ. ವಿಧಾನಮಂಡಲದ ಗಮನಕ್ಕೆ ತಾರದೇ ಸರ್ಕಾರವು ತಾನೇ ಹಣಕಾಸನ್ನು ಬಳಸಿದಂತಾಗಿರುತ್ತದೆ,’ ಎಂದು ಖಜಾನೆ ಇಲಾಖೆಯ ನಿವೃತ್ತ ಅಧಿಕಾರಿ ಹಾಗೂ ವಕೀಲ  ಪ್ರಾಣೇಶ್‌ ಅವರು ಅನುಮಾನಿಸಿದ್ದನ್ನು ಸ್ಮರಿಸಬಹುದು.

Hot this week

120 ಎಕರೆ ಗೋಮಾಳ ಕಬಳಿಕೆ ಪ್ರಕರಣ; ಕಂದಾಯ ನಿರೀಕ್ಷಕರ ವರದಿಯನ್ನೇ ಮುಚ್ಚಿಟ್ಟ ತಹಶೀಲ್ದಾರ್, ಸಚಿವರ ಒತ್ತಡ?

ಬೆಂಗಳೂರು; ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ ಗ್ರಾಮದ ವಿವಿಧ ಸರ್ವೆ ನಂಬರ್‍‌ಗಳಲ್ಲಿರುವ...

ಕೌನ್ಸಲಿಂಗ್‌ಗೂ ಮುನ್ನವೇ ಪಿಡಿಒಗಳ ವರ್ಗಾವಣೆ; ಹಣ ಕೊಟ್ಟವರಿಗೆ ಆದೇಶ, ಕೊಡದವರಿಗೆ ಕೌನ್ಸಲಿಂಗ್, ಆರೋಪ

ಬೆಂಗಳೂರು; ಪಂಚಾಯ್ತಿ ಅಭಿವೃದ್ದಿ ಅಧಿಕಾರಿಗಳ ವರ್ಗಾವಣೆಯನ್ನು ಕೌನ್ಸಲಿಂಗ್‌ ಮೂಲಕವೇ ನಡೆಸಲಾಗುವುದು ಎಂದು...

ಪಿಟಿಸಿಎಲ್, ಗೋಮಾಳ, ಅರಣ್ಯ ಜಮೀನು ಸ್ವರೂಪ ಮರೆಮಾಚಿ ಪರಿವರ್ತನೆ; ದಿ ಫೈಲ್ ವರದಿ ಬೆನ್ನಲ್ಲೇ ಸರ್ಕಾರದ ಮೆಟ್ಟಿಲೇರಿದ ಕೆಆರ್‍‌ಎಸ್‌

ಬೆಂಗಳೂರು; ಪಿಟಿಸಿಎಲ್,  ಸರ್ಕಾರಿ ಗೋಮಾಳ ಮತ್ತು ಅರಣ್ಯ ಪ್ರದೇಶದ ಜಮೀನುಗಳ ಸ್ವರೂಪವನ್ನೇ...

30 ವರ್ಷಗಳ ನಂತರ ಎಲ್‌ಎಸಿ ಪ್ರಕರಣ ದಾಖಲು; ಸರ್ಕಾರದ ಬೊಕ್ಕಸಕ್ಕೆ 80 ಕೋಟಿ ಆರ್ಥಿಕ ಹೊರೆ

ಬೆಂಗಳೂರು; ಮಂಡ್ಯ ತಾಲೂಕು ಕೊತ್ತತ್ತಿ ಹೋಬಳಿಯ ಗುತ್ತಲು ಗ್ರಾಮದಲ್ಲಿ 30 ವರ್ಷಗಳ...
Please Scan to make Your Contribution

Topics

120 ಎಕರೆ ಗೋಮಾಳ ಕಬಳಿಕೆ ಪ್ರಕರಣ; ಕಂದಾಯ ನಿರೀಕ್ಷಕರ ವರದಿಯನ್ನೇ ಮುಚ್ಚಿಟ್ಟ ತಹಶೀಲ್ದಾರ್, ಸಚಿವರ ಒತ್ತಡ?

ಬೆಂಗಳೂರು; ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ ಗ್ರಾಮದ ವಿವಿಧ ಸರ್ವೆ ನಂಬರ್‍‌ಗಳಲ್ಲಿರುವ...

ಕೌನ್ಸಲಿಂಗ್‌ಗೂ ಮುನ್ನವೇ ಪಿಡಿಒಗಳ ವರ್ಗಾವಣೆ; ಹಣ ಕೊಟ್ಟವರಿಗೆ ಆದೇಶ, ಕೊಡದವರಿಗೆ ಕೌನ್ಸಲಿಂಗ್, ಆರೋಪ

ಬೆಂಗಳೂರು; ಪಂಚಾಯ್ತಿ ಅಭಿವೃದ್ದಿ ಅಧಿಕಾರಿಗಳ ವರ್ಗಾವಣೆಯನ್ನು ಕೌನ್ಸಲಿಂಗ್‌ ಮೂಲಕವೇ ನಡೆಸಲಾಗುವುದು ಎಂದು...

ಪಿಟಿಸಿಎಲ್, ಗೋಮಾಳ, ಅರಣ್ಯ ಜಮೀನು ಸ್ವರೂಪ ಮರೆಮಾಚಿ ಪರಿವರ್ತನೆ; ದಿ ಫೈಲ್ ವರದಿ ಬೆನ್ನಲ್ಲೇ ಸರ್ಕಾರದ ಮೆಟ್ಟಿಲೇರಿದ ಕೆಆರ್‍‌ಎಸ್‌

ಬೆಂಗಳೂರು; ಪಿಟಿಸಿಎಲ್,  ಸರ್ಕಾರಿ ಗೋಮಾಳ ಮತ್ತು ಅರಣ್ಯ ಪ್ರದೇಶದ ಜಮೀನುಗಳ ಸ್ವರೂಪವನ್ನೇ...

30 ವರ್ಷಗಳ ನಂತರ ಎಲ್‌ಎಸಿ ಪ್ರಕರಣ ದಾಖಲು; ಸರ್ಕಾರದ ಬೊಕ್ಕಸಕ್ಕೆ 80 ಕೋಟಿ ಆರ್ಥಿಕ ಹೊರೆ

ಬೆಂಗಳೂರು; ಮಂಡ್ಯ ತಾಲೂಕು ಕೊತ್ತತ್ತಿ ಹೋಬಳಿಯ ಗುತ್ತಲು ಗ್ರಾಮದಲ್ಲಿ 30 ವರ್ಷಗಳ...

ಶೌಚಾಲಯ, ಸ್ನಾನದ ಗೃಹ, ಮೂತ್ರಾಲಯ ಶುಲ್ಕ ವಸೂಲಿ; ಸುಲಭ್‌ ಇಂಟರ್ ನ್ಯಾಷನಲ್‌, ಬಿಬಿಎಂಪಿ ಖಾತೆಗೆ ಹಣ ಜಮೆ ಮಾಡಿದೆಯೇ, ನುಂಗಿದೆಯೇ?

ಬೆಂಗಳೂರು;  ಸುಲಭ್ ಶೌಚಾಲಯ ಮತ್ತು ಸಾರ್ವಜನಿಕ ಮೂತ್ರಾಲಯ  ನಿರ್ವಹಣೆಗೆ ಸಂಬಂಧಿಸಿದಂತೆ ಗುತ್ತಿಗೆದಾರರು...

ಬಿಜೆಪಿ ಅವಧಿಯಲ್ಲಿದ್ದ 120 ಎಕರೆ ಗೋಮಾಳ, ಕಾಂಗ್ರೆಸ್‌ ಅವಧಿಯಲ್ಲಿ ಕಣ್ಮರೆ!; 24 ಕೋಟಿ ಮೌಲ್ಯದ ಜಮೀನು, ಖಾಸಗಿ ವ್ಯಕ್ತಿಗಳ ಪಾಲು?

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ...

Related Articles

Popular Categories

error: Content is protected !!