Wednesday | May 6, 2026 |

ಜ್ಞಾನಗಂಗಾ ಸೊಸೈಟಿಗೆ 848 ನಿವೇಶನ; ನ್ಯಾಯಾಲಯದ ಪ್ರಕರಣಗಳನ್ನೇ ಮರೆಮಾಚಿದ್ದ ಮೂಡಾ?

ಬೆಂಗಳೂರು; ಮೈಸೂರಿನ ಜ್ಞಾನಗಂಗಾ ಗೃಹ ನಿರ್ಮಾಣ ಸಹಕಾರ ಸಂಘಕ್ಕೆ ಮೂಡಾವು ನಿಯಮಬಾಹಿರವಾಗಿ ಬಡಾವಣೆ ಹಂಚಿಕೆ ಮಾಡಿ ಅಕ್ರಮವೆಸಗಿರುವುದನ್ನು ತಾಂತ್ರಿಕ ಸಮಿತಿಯು ಬಯಲು ಮಾಡಿದೆ.

 

ಈ ಸಂಘಕ್ಕೆ ಒಂದೆರಡು ದಿನದಲ್ಲಿಯೇ 848 ನಿವೇಶನಗಳನ್ನು ಬಿಡುಗಡೆಗೊಳಿಸಿ ಖಾತೆ ಮಾಡಿಕೊಟ್ಟಿರುವುದು ಮತ್ತು ಬೇರೊಂದು ಪ್ರಕರಣದಲ್ಲಿ ಅರ್ಜಿದಾರರಿಂದ 3.32 ಕೋಟಿ ರು. ದಂಡ ಶುಲ್ಕ ಪಾವತಿಸಿಕೊಳ್ಳದೆಯೇ ನಿವೇಶನಗಳನ್ನು ಬಿಡುಗಡೆ ಮಾಡಿರುವುದನ್ನೂ  ತಾಂತ್ರಿಕ ಸಮಿತಿಯು ಹೊರಗೆಡವಿದೆ.

ಬದಲಿ ನಿವೇಶನ ಹಂಚಿಕೆ ಹಿಂದಿನ ಕರಾಮತ್ತು ಬಯಲು; ನಕ್ಷೆಯಿಲ್ಲ, ಭೂ ಪರಿಹಾರದ ವಿವರಗಳೂ ಇಲ್ಲ

ಮೂಡಾದಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತಾದ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಬೇಕು ಎಂದು ಪ್ರತಿಪಕ್ಷಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವ ಬೈರತಿ ಸುರೇಶ್‌ ಅವರ ಮೇಲೆ ಪ್ರತಿಪಕ್ಷಗಳು ಮುಗಿಬಿದ್ದಿರುವ ಬೆನ್ನಲ್ಲೇ ಮುಡಾದ ಮತ್ತೊಂದು ಅಕ್ರಮ ಪ್ರಕರಣವು ಮುನ್ನೆಲೆಗೆ ಬಂದಿದೆ.

ನಿಯಮ ಮೀರಿ 250 ಕೋಟಿ ನಿಶ್ಚಿತ ಠೇವಣಿ; ಮೂಡಾ ಅಕ್ರಮ ಪತ್ತೆ ಹಚ್ಚಿದ ತಾಂತ್ರಿಕ ಸಮಿತಿ

ತಾಂತ್ರಿಕ ಸಮಿತಿಯು ನೀಡಿರುವ ವರದಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಪ್ರಕರಣದ ವಿವರ

 

ಮೈಸೂರು ತಾಲೂಕು ಜಯಪುರ ಹೋಬಳಿ ಕೇರ್ಗಳ್ಳಿ ಗ್ರಾಮದ ವಿವಿಧ ಸರ್ವೇ ನಂಬರ್‍‌ಗಳಲ್ಲಿ ಒಟ್ಟು 230 ಎಕರೆ 01 ಗುಂಟೆ ಜಮೀನಿನಲ್ಲಿ ಬಡಾವಣೆ ರಚಿಸಿತ್ತು. ವಿವಿಧ ಅಳತೆಯ ನಿವೇಶನಗಳ ಪೈಕಿ ಎರಡನೇ ಕಂತಿನ (ಶೇ.30) ನಿವೇಶನಗಳನ್ನು ಬಿಡುಗಡೆ ಮಾಡುವ ಬಗ್ಗೆ ಮತ್ತು ವಿಷಯ ಸಂಖ್ಯೆ 8(1)(ಎ)ನಲ್ಲಿ ಚರ್ಚಿಸಿ ತೀರ್ಮಾನಿಸಲಾಗಿತ್ತು.

848 ನಿವೇಶನ ಬಿಡುಗಡೆ; ಮೂಡಾದಿಂದ ಸಾಂವಿಧಾನಿಕ ಸಂಸ್ಥೆಗಳ ಅಧಿಕಾರ ವ್ಯಾಪ್ತಿ ಅತಿಕ್ರಮಣ

ಈ ನಾಲ್ಕು ವಿನ್ಯಾಸ ಪ್ರಕರಣಗಳನ್ನು ಸಭೆಯ ಮುಂದೆ ಮಂಡಿಸಲಾಗಿತ್ತು. ಸಭೆಯ ನಿರ್ಣಯದ ಪ್ರಕಾರ ಎರಡನೇ ಹಂತದ ಶೆ.30ರಷಟು ನಿವೇಶನಗಳನ್ನು ಬಿಡುಗಡೆ ಮಾಡಲು ತಾಂತ್ರಿಕ ಶಾಖೆ ಅಧಿಕಾರಿಗಳಿಗೆ ಕಡತ ಮಂಡನೆಯಾಗಿತ್ತು. ಇದರಲ್ಲಿ ಆಯುಕ್ತರು ಒಪ್ಪಿಗೆ ಸೂಚಿಸುವ ರುಜು ಮಾಡಿದ್ದರು. ಆಯುಕ್ತರ ಅನುಮೋದನೆಯಂತೆ ನಿವೇಶನಗಳನ್ನು ಬಿಡುಗಡೆ ಮಾಡಲಾಗಿತ್ತು.

 

ಜ್ಞಾನಗಂಗಾ ಗೃಹ ನಿರ್ಮಾಣ ಸಹಕಾರ ಸಂಘಕ್ಕೆ ಸಂಬಂಧಿಸಿದಂತೆ 252 ಎಕರೆ 10 ಗುಂಟೆ ಪೈಕಿ ಕೆಲವು ಸರ್ವೆ ನಂಬರ್‍‌ಗಳ ಮೇಲೆ ಸಿವಿಲ್‌ ನ್ಯಾಯಾಲಯದಲ್ಲಿ 2019ರಲ್ಲೇ ಅಸಲು ದಾವೆ (1041/2019) ಹೂಡಲಾಗಿತ್ತು. ಈ ಬಡಾವಣೆಯ ನಿವೇಶನಗಳ ಹಕ್ಕು ವರ್ಗಾವಣೆ ಮಾಡಬಾರದು ಎಂದು ಸಿವಿಲ್‌ ನ್ಯಾಯಾಲಯವು ನಿರ್ದೇಶಿಸಿತ್ತು.

ಒಂದೇ ದಿನದಲ್ಲಿ 10 ನಿವೇಶನ ಬಿಡುಗಡೆ; ದೃಢೀಕೃತ ಪ್ರಮಾಣಪತ್ರವಿಲ್ಲ, ಅನುಮೋದನೆಯೂ ಇಲ್ಲ

ಅದೇ ರೀತಿ ಅಸಲು ದಾವೆಗೆ ಸಂಬಂಧಿಸಿದಂತೆ ತಾತ್ಕಾಲಿಕ ನಿರ್ಬಂಧಕಾಜ್ಞೆ ಆದೇಶವಿತ್ತು. ಆದರೂ ಅದನ್ನು ಮರೆಮಾಚಿ ಮೂಡಾ ಅಧಿಕಾರಿಗಳ ಮೇಲೆ ಒತ್ತಡ ಹೇರಿ ನಿವೇಶನ ಬಿಡುಗಡೆ ಮಾಡಲಾಗಿದೆ ಎಂದು ದೂರು ಸಲ್ಲಿಕೆಯಾಗಿತ್ತು.

 

ಈ ದೂರನ್ನು ತಾಂತ್ರಿಕ ಸಮಿತಿಯು ವಿವರವಾಗಿ ಪರಿಶೀಲಿಸಿದೆ. ನ್ಯಾಯಾಲಯದಲ್ಲಿ ಪ್ರಕರಣಗಳು ದಾಖಲಾಗಿರುವುದು ಮತ್ತು ಸರ್ಕಾರದ ನಿರ್ದೇಶನಗಳ ಬಗ್ಗೆ ಟಿಪ್ಪಣಿಯಲ್ಲಿ ಯಾವುದೇ ಅಂಶಗಳನ್ನು ನಮೂದಿಸಿಲ್ಲ ಎಂಬುದನ್ನು ತಾಂತ್ರಿಕ ಸಮಿತಿಯು ಪತ್ತೆ ಹಚ್ಚಿದೆ.

 

ಅಲ್ಲದೇ ಕಡತದ ಕಂಡಿಕೆಗಳಲ್ಲಿ ಒಪ್ಪಿಗೆ ಸೂಚಿಸುವ ‘ರುಜು’ ಮಾಡಲಾಗಿದೆ. ಸಭೆಯ ನಡವಳಿಗಳಲ್ಲಿಯೂ ಕೂಡ ಈ ಅಂಶಗಳನ್ನು ಪ್ರಸ್ತಾಪಿಸಿ ಚರ್ಚಿಸಿಲ್ಲ. ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರದ ಕಾಯ್ದೆ ಕಲಂ 13(1) ಅನ್ವಯ ಪ್ರಾಧಿಕಾರದ ಆಯುಕ್ತರು ವಲಯ ನಿಯಮಾವಳಿಗಳಿಗೆ ಅನುಗುಣವಾಗಿ ಕಾರ್ಯನಿರ್ವಹಿಸಬೇಕಾಗಿತ್ತು. ಆದರೆ ಇದಕ್ಕೆ ಪ್ರಾಧಿಕಾರದ ಆಯುಕ್ತರು ವ್ಯತಿರಿಕ್ತವಾಗಿ ಕಾರ್ಯನಿರ್ವಹಿಸಿದ್ದಾರೆ ಎಂದು ತಾಂತ್ರಿಕ ಸಮಿತಿಯು ವರದಿಯಲ್ಲಿ ಉಲ್ಲೇಖಿಸಿದೆ.

 

ಅದೇ ರೀತಿ ಪ್ರಾಧಿಕಾರವು ಅರ್ಜಿದಾರರಿದಂದ ಎರಡನೇ ಮತ್ತು ಅಂತಿಮ ಹಂತದ ನಿವೇಶನಗಳನ್ನು ಬಿಡುಗಡೆ ಮಾಡುವ ಪೂರ್ವದಲ್ಲಿಯೇ ದಂಡ ಶುಲ್ಕವನ್ನು ಪಾವತಿಸಿಕೊಳ್ಳಬೇಕು.

ಆದರೆ 3,37,78,314 ರು.ಗಳನ್ನು ಪಾವತಿಸಿಕೊಳ್ಳದೆಯೇ ನಿವೇಶನಗಳನ್ನು ಬಿಡುಗಡೆ ಮಾಡಿತ್ತು. ಇದರಿಂದ ಪ್ರಾಧಿಕಾರಕ್ಕೆ ಆರ್ಥಿಕ ನಷ್ಟವುಂಟಾಗಿದೆ ಎಂದು ತಾಂತ್ರಿಕ ಸಮಿತಿಯು ವರದಿಯಲ್ಲಿ ವಿವರಿಸಿದೆ.

Hot this week

ಬಿಜೆಪಿ ಅವಧಿಯಲ್ಲಿದ್ದ 120 ಎಕರೆ ಗೋಮಾಳ, ಕಾಂಗ್ರೆಸ್‌ ಅವಧಿಯಲ್ಲಿ ಕಣ್ಮರೆ!; 24 ಕೋಟಿ ಮೌಲ್ಯದ ಜಮೀನು, ಖಾಸಗಿ ವ್ಯಕ್ತಿಗಳ ಪಾಲು?

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ...

ಒಂದೇ ಜಾಗದಲ್ಲಿ ಎರಡು ಫ್ಲೈ ಓವರ್, ಶೇ.50ರಷ್ಟು ಕಾಮಗಾರಿಯಾಗಿದ್ದರೂ ಪೂರ್ಣ ಪಾವತಿ; ಬ್ಯಾಂಕ್‌ ಗ್ಯಾರಂಟಿ ಮುಟ್ಟುಗೋಲಿಲ್ಲ, ಗುತ್ತಿಗೆದಾರರಿಗೆ ಲಾಭ, ಬಿಬಿಎಂಪಿ ನಿಧಿಗೆ ನಷ್ಟ

ಬೆಂಗಳೂರು;  ಈಜಿಪುರ ಮೇಲ್ಸೇತುವೆ ಎಲಿವೇಟೆಡ್‌ ಕಾರಿಡಾರ್  ಕಾಮಗಾರಿಯನ್ನು ನಿಗದಿತ ಅವಧಿಯಲ್ಲಿ  ಪೂರ್ಣಗೊಳಿಸದ...

ಅನುದಾನ ಬಿಡುಗಡೆಯಾಗಿದ್ದರೂ ಪೂರ್ಣಗೊಳ್ಳದ ಕಾಮಗಾರಿ; ತನಿಖಾ ವರದಿಗೆ ಮೆತ್ತಿಕೊಂಡ ಧೂಳು, ಕ್ರಮಕೈಗೊಳ್ಳದ ಸಚಿವ

ಬೆಂಗಳೂರು; ತುಮಕೂರು ಜಿಲ್ಲೆಯ ಶಿರಾ ಪಟ್ಟಣದಲ್ಲಿರುವ ಕಸ್ತೂರಿ ರಂಗಪ್ಪ ನಾಯಕ ಕೋಟೆಯ...
Please Scan to make Your Contribution

Topics

ಬಿಜೆಪಿ ಅವಧಿಯಲ್ಲಿದ್ದ 120 ಎಕರೆ ಗೋಮಾಳ, ಕಾಂಗ್ರೆಸ್‌ ಅವಧಿಯಲ್ಲಿ ಕಣ್ಮರೆ!; 24 ಕೋಟಿ ಮೌಲ್ಯದ ಜಮೀನು, ಖಾಸಗಿ ವ್ಯಕ್ತಿಗಳ ಪಾಲು?

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ...

ಅನುದಾನ ಬಿಡುಗಡೆಯಾಗಿದ್ದರೂ ಪೂರ್ಣಗೊಳ್ಳದ ಕಾಮಗಾರಿ; ತನಿಖಾ ವರದಿಗೆ ಮೆತ್ತಿಕೊಂಡ ಧೂಳು, ಕ್ರಮಕೈಗೊಳ್ಳದ ಸಚಿವ

ಬೆಂಗಳೂರು; ತುಮಕೂರು ಜಿಲ್ಲೆಯ ಶಿರಾ ಪಟ್ಟಣದಲ್ಲಿರುವ ಕಸ್ತೂರಿ ರಂಗಪ್ಪ ನಾಯಕ ಕೋಟೆಯ...

ಧರ್ಮಸ್ಥಳ ಪ್ರಕರಣಗಳ ತನಿಖೆ; ಎಸ್‌ಐಟಿ ವರದಿ ಪ್ರತಿ ಒದಗಿಸದ ಸರ್ಕಾರ, ಗೃಹ ಇಲಾಖೆ ಶಾಖೆಯಲ್ಲಿ ಸಭೆ ನಡವಳಿಯೂ ಲಭ್ಯವಿಲ್ಲ

ಬೆಂಗಳೂರು: ಧರ್ಮಸ್ಥಳದ ಸುತ್ತಮುತ್ತ ನಡೆದಿರುವ ಮಹಿಳೆಯರು ಮತ್ತು ಯುವತಿಯರ ಮೇಲಿನ ದೌರ್ಜನ್ಯ/ಕೊಲೆ,...

ವೈಟ್‌ ಟ್ಯಾಪಿಂಗ್‌ ಗೋಲ್ಮಾಲ್‌; ಅಗತ್ಯವಿರದಿದ್ದರೂ ಕಾಮಗಾರಿ, ತಾಂತ್ರಿಕ ಪರಿಶೀಲನೆಯಿಲ್ಲದಿದ್ದರೂ ಹೆಚ್ಚುವರಿ ವೆಚ್ಚ, ಗುತ್ತಿಗೆದಾರರಿಗೆ ಲಾಭ

ಬೆಂಗಳೂರು;  ವೈಟ್‌ ಟ್ಯಾಪಿಂಗ್ ಅಗತ್ಯವಿಲ್ಲದಿದ್ದರೂ  ಕಾಮಗಾರಿ ಆರಂಭಿಸಿದ ನಂತರ ತಾಂತ್ರಿಕ ಮಂಜೂರಾತಿ...

Related Articles

Popular Categories

error: Content is protected !!