Saturday | March 28, 2026 |

ವಿಧಾನಮಂಡಲ ಅಧಿವೇಶನಕ್ಕೆ ಖಾಸಗಿ ಶ್ವಾನದಳ ಸೇವೆ!; ರಾಜ್ಯ ಪೊಲೀಸ್ ಶ್ವಾನ ದಳದ ಮೇಲೆ ಅವಿಶ್ವಾಸವೇ?

Support THE-FILE

spot_img

ಬೆಂಗಳೂರು; ಕರ್ನಾಟಕ ರಾಜ್ಯ  ಪೊಲೀಸ್ ಶ್ವಾನ ದಳವು ಅಪರಾಧಗಳ ಪತ್ತೆದಾರಿಕೆಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದ್ದರೂ ಸಹ ಕರ್ನಾಟಕ ವಿಧಾನಸಭೆ ಸಚಿವಾಲಯವು ಖಾಸಗಿ ಕಂಪನಿಯ ಶ್ವಾನ ದಳದ ಸೇವೆ ಪಡೆಯಲು ಮುಂದಾಗಿದೆ.

 

ಇದೇ 15ರಿಂದ ನಡೆಯಲಿರುವ ವಿಧಾನಮಂಡಲದ ಅಧಿವೇಶನಕ್ಕೆ ಖಾಸಗಿ ಕಂಪನಿಯ ಶ್ವಾನ ದಳದ ಸೇವೆ ಪಡೆಯುವ ಸಂಬಂಧ ವಿಧಾನಸಭೆ ಸಚಿವಾಲಯವು ಈಗಾಗಲೇ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಡಿಜಿಪಿ ಮತ್ತು ಬೆಂಗಳೂರು ನಗರದ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದೆ ಎಂದು ಗೊತ್ತಾಗಿದೆ.

 

ಖಾಸಗಿ ಕಂಪನಿಯಿಂದ ಶ್ವಾನ ದಳದ ಸೇವೆ ಪಡೆಯಲು ಅಂದಾಜು 4.00 ಲಕ್ಷ ವೆಚ್ಚವಾಗಲಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ  ವಿಧಾನಸಭೆ ಸಭಾಧ್ಯಕ್ಷ ಯು ಟಿ ಖಾದರ್‍‌ ಅವರು ಅಧಿಕಾರಿಗಳೊಂದಿಗೆ ಚರ್ಚಿಸಿದ್ದಾರೆ ಎಂದು ಗೊತ್ತಾಗಿದೆ.

 

ಈ ಕುರಿತು ವಿಧಾನಸಭೆ ಸ್ಪೀಕರ್‍‌ ಅವರ ಆಪ್ತ ಕಾರ್ಯದರ್ಶಿ ಮಹೇಶ್‌ ಕರ್ಜಗಿ ಮತ್ತು ವಿಧಾನಸಭೆ ಸಚಿವಾಲಯದ ಕಾರ್ಯದರ್ಶಿ ಎಂ ಕೆ ವಿಶಾಲಾಕ್ಷಿ  ಅವರನ್ನು ‘ದಿ ಫೈಲ್‌’ ಸಂಪರ್ಕಿಸಿತ್ತು. ಖಾಸಗಿ ಕಂಪನಿಯ ಶ್ವಾನ ದಳ ಸೇವೆ ಪಡೆಯುವ ಸಂಬಂಧ ಪ್ರಸ್ತಾವನೆ ಇರುವುದನ್ನು ಖಚಿತಪಡಿಸಿದರು. ಆದರೆ ಇದುವರೆಗೂ ಯಾವುದೇ ತೀರ್ಮಾನವಾಗಿಲ್ಲ ಎಂದಷ್ಟೇ ಪ್ರತಿಕ್ರಿಯಿಸಿದರು.  ಖಾಸಗಿ ಕಂಪನಿಯ ಹೆಸರನ್ನು ಬಹಿರಂಗಪಡಿಸಲು ನಿರಾಕರಿಸಿದರು.

 

ವಿಧಾನಮಂಡಲದ ಅಧಿವೇಶನದ ಸಂದರ್ಭದಲ್ಲಿ ಮಾತ್ರವಲ್ಲದೇ ವಿಧಾನಸೌಧ, ವಿಕಾಸಸೌಧ, ಬಹುಮಹಡಿ ಕಟ್ಟಡ ಸೇರಿದಂತೆ ಹಲವೆಡೆ ವಿಶೇಷ ಕಾರ್ಯಕ್ರಮ, ಸಮಾರಂಭ ಇದ್ದಾಗಲೆಲ್ಲಾ ಕರ್ನಾಟಕ ಪೊಲೀಸ್‌ನ ಶ್ವಾನ ದಳದಿಂದಲೇ ತಪಾಸಣೆ ನಡೆಸಲಾಗುತ್ತಿದೆ. ಆದರೆ ಇದೇ ಮೊದಲ ಬಾರಿಗೆ ವಿಧಾನಮಂಡಲದ ಅಧಿವೇಶನಕ್ಕೆ ಖಾಸಗಿ ಕಂಪನಿಯ ಶ್ವಾನ ದಳದ ಸೇವೆ ಪಡೆಯಲು ಮುಂದಾಗಿರುವುದು ಚರ್ಚೆಗೆ ಗ್ರಾಸವಾಗಿದೆ.

 

‘ಕರ್ನಾಟಕ ಪೊಲೀಸ್‌ ಶ್ವಾನ ದಳವು ಅನೇಕ ಅಪರಾಧಿಗಳನ್ನು ಪತ್ತೆ ಹಚ್ಚಿದೆ. ಸಾಕಷ್ಟು ತರಬೇತಿಯನ್ನೂ ನೀಡಲಾಗಿದೆ. ಅತ್ಯಂತ ವಿಶ್ವಾಸಾರ್ಹ ದಳವೂ ಹೌದು. ಹೀಗಿದ್ದರೂ ಖಾಸಗಿ ಕಂಪನಿಯ ಶ್ವಾನ ದಳದ ಸೇವೆ ಪಡೆಯಲು ಮುಂದಾಗಿರುವುದು, ನಮ್ಮ ಕರ್ನಾಟಕ ಪೊಲೀಸ್‌ ಶ್ವಾನದಳದ ಕಾರ್ಯಕ್ಷಮತೆ ಬಗ್ಗೆ ವಿಧಾನಸಭೆ ಸಚಿವಾಲಯಕ್ಕೆ ವಿಶ್ವಾಸವಿಲ್ಲ ಎಂಬುದನ್ನು ಪರೋಕ್ಷವಾಗಿ ಸೂಚಿಸಿದಂತಾಗುತ್ತದೆ,’ ಎನ್ನುತ್ತಾರೆ ವಿಧಾನಸಭೆ ಸಚಿವಾಲಯದ ಉನ್ನತ ಅಧಿಕಾರಿಯೊಬ್ಬರು.

 

ಸ್ಫೋಟಕ, ಮಾದಕ ವಸ್ತುಗಳು, ಅಪರಾಧಿಗಳ ಪತ್ತೆದಾರಿಕೆಯಲ್ಲಿ ಕರ್ನಾಟಕ ಪೊಲೀಸ್‌ ಶ್ವಾನ ದಳವು ಮಹತ್ವದ ಪಾತ್ರ ವಹಿಸುತ್ತಿದೆ. ಜರ್ಮನ್‌ ಶೆಪರ್ಡ್, ಲಾಬ್ರೆಡಾರ್‍‌, ಬೆಲ್ಜಿಯಂ ಮಾಲಿನೋಯಿಸ್‌, ಗೋಲ್ಡನ್‌ ರಿಟ್ರೇವರ್‍‌, ಡಾಬರ್‍‌ವುನ್‌ ತಳಿ ಸೇರಿದಂತೆ ಒಟ್ಟು 55ಕ್ಕೂ ಹೆಚ್ಚು ಶ್ವಾನಗಳಿವೆ.

 

ಸ್ಫೋಟಕ ವಸ್ತುಗಳ ಕುರಿತು ಹಾಗೂ ಕೊಲೆ, ಸುಲಿಗೆ, ದರೋಡೆ, ಕಳ್ಳತನ ಮತ್ತು ಗಾಂಜಾ, ಅಫೀಮುಳಂತಹ ಅಪರಾಧ ಪ್ರಕರಣಗಳನ್ನು ಪತ್ತೆ ಹಚ್ಚಲು ವಿಶಿಷ್ಟ ಮತ್ತು ವಿನೂತನವಾದ ತರಬೇತಿ ಕೊಡಲಾಗುತ್ತದೆ.

 

ಇಲ್ಲಿ ಲ್ಯಾಬ್ರಿಡರ್, ಜರ್ಮನ್ ಶೆಪರ್ಡ್, ಡಾಬರ್ ಮನ್ ತಳಿಯ ಒಟ್ಟು 58 ಶ್ವಾನಗಳು ಇದ್ದು, ದೇಶ-ವಿದೇಶಗಳಿಂದ ಬರುವ ಗಣ್ಯ, ಅತಿ ಗಣ್ಯ ವ್ಯಕ್ತಿಗಳಿಗೆ ವಿಶೇಷ ಭದ್ರತೆ ಮತ್ತು ಸಿಎಂ ನಿವಾಸ, ರಾಜಭವನ, ವಿಧಾನಸೌಧ, ವಿಕಾಸಸೌಧ, ಹೈಕೋರ್ಟ್, ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾ, ರೈಲ್ವೆ ನಿಲ್ದಾಣಗಳು, ಮೆಟ್ರೋ, ಬಸ್ ನಿಲ್ದಾಣಗಳು ಹಾಗೂ ರಾಜಧಾನಿಯ ಸೂಕ್ಷ್ಮ ಸ್ಥಳಗಳು, ಪ್ರವಾಸಿ ತಾಣಗಳು, ಮತ್ತು ರಾಜ್ಯಪಾಲರು, ಮುಖ್ಯಮಂತ್ರಿಗಳು ಭಾಗವಹಿಸುವ ಸ್ಥಳೀಯ ಕಾರ್ಯಕ್ರಮಗಳಲ್ಲಿ ವಿಶೇಷ ತಪಾಸಣಾ ಕಾರ್ಯವನ್ನು ರಾಜ್ಯ ಪೊಲೀಸ್ ಶ್ವಾನ ದಳ ಯಶಸ್ವಿಯಾಗಿ ನಿರ್ವಹಿಸುತ್ತಿರುವುದನ್ನು ಸ್ಮರಿಸಬಹುದು.

Hot this week

ಮನೆಗಳ ಹಂಚಿಕೆಯಲ್ಲಿ ಭ್ರಷ್ಟಾಚಾರ, ಹಣಕ್ಕೆ ಬೇಡಿಕೆ; ಪಾಟೀಲರ ಆರೋಪ, ಲೋಕಾ ತನಿಖೆಯಿಂದ ಸಾಬೀತು

ಬೆಂಗಳೂರು; ರಾಜೀವ್‌ ಗಾಂಧಿ ವಸತಿ ನಿಗಮದ ವ್ಯಾಪ್ತಿಯಲ್ಲಿ ಹಣ ಕೊಟ್ಟರಷ್ಟೇ ಮನೆಗಳನ್ನು ...

ಕದಂಬೋತ್ಸವ ಸೇರಿ ಸಾಂಸ್ಕೃತಿಕ ಉತ್ಸವಗಳಿಗೆ ಅನುದಾನ; 12.50 ಕೋಟಿ ರು ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಮೈಸೂರು ದಸರಾ ಸೇರಿದಂತೆ ಇನ್ನಿತರೆ ಜಿಲ್ಲಾಮಟ್ಟದ ವಿವಿಧ ಉತ್ಸವಗಳಿಗೆ 2024-25ಮತ್ತು...

ಪ್ರಚೋದನಕಾರಿ ಭಾಷಣ, ಕೋಮು ಗಲಭೆ; 3 ವರ್ಷದಲ್ಲಿ 50 ಪ್ರಕರಣಗಳು ದಾಖಲು, ಪಟ್ಟಿ ಬಹಿರಂಗ

ಬೆಂಗಳೂರು; ರಾಜ್ಯದ  ಕರಾವಳಿ ಭಾಗ ಸೇರಿದಂತೆ ವಿವಿಧೆಡೆ ಪ್ರಚೋದನಾಕಾರಿ ಭಾಷಣ ಮಾಡಿದವರು...

ನರೇಗಾ ವಸತಿ ಕಾಮಗಾರಿಗಳಲ್ಲಿ ಮೋಸದ ಪಾವತಿ; ಚೆಕ್ ಡ್ಯಾಂ ಕಾಮಗಾರಿಯೇ ಇಲ್ಲ, ಆದರೂ ಹಣ ಪಾವತಿ

ಬೆಂಗಳೂರು; 847 ಸಂಖ್ಯೆ ವಸತಿ  ಕಾಮಗಾರಿಗಳಲ್ಲಿ  ಮೋಸದ ಪಾವತಿಗಳಾಗಿರುವುದನ್ನು ಭಾರತದ ಲೆಕ್ಕ...

42,750 ಕೋಟಿ ದೀರ್ಘಾವಧಿ ಸಾಲ, 4,516 ಕೋಟಿ ಆದಾಯ ಕೊರತೆ; ಎಸ್ಕಾಂಗಳ ಆರ್ಥಿಕ ಸ್ಥಿತಿ ಅನಾವರಣ

ಬೆಂಗಳೂರು; ವಿದ್ಯುತ್ ಸರಬರಾಜು ಕಂಪನಿಗಳು ಇದುವರೆಗೆ ಒಟ್ಟಾರೆ 42,750 ಕೋಟಿಗಳಷ್ಟು ದೀರ್ಘಾವಧಿ...

Topics

ಮನೆಗಳ ಹಂಚಿಕೆಯಲ್ಲಿ ಭ್ರಷ್ಟಾಚಾರ, ಹಣಕ್ಕೆ ಬೇಡಿಕೆ; ಪಾಟೀಲರ ಆರೋಪ, ಲೋಕಾ ತನಿಖೆಯಿಂದ ಸಾಬೀತು

ಬೆಂಗಳೂರು; ರಾಜೀವ್‌ ಗಾಂಧಿ ವಸತಿ ನಿಗಮದ ವ್ಯಾಪ್ತಿಯಲ್ಲಿ ಹಣ ಕೊಟ್ಟರಷ್ಟೇ ಮನೆಗಳನ್ನು ...

ಕದಂಬೋತ್ಸವ ಸೇರಿ ಸಾಂಸ್ಕೃತಿಕ ಉತ್ಸವಗಳಿಗೆ ಅನುದಾನ; 12.50 ಕೋಟಿ ರು ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಮೈಸೂರು ದಸರಾ ಸೇರಿದಂತೆ ಇನ್ನಿತರೆ ಜಿಲ್ಲಾಮಟ್ಟದ ವಿವಿಧ ಉತ್ಸವಗಳಿಗೆ 2024-25ಮತ್ತು...

ಪ್ರಚೋದನಕಾರಿ ಭಾಷಣ, ಕೋಮು ಗಲಭೆ; 3 ವರ್ಷದಲ್ಲಿ 50 ಪ್ರಕರಣಗಳು ದಾಖಲು, ಪಟ್ಟಿ ಬಹಿರಂಗ

ಬೆಂಗಳೂರು; ರಾಜ್ಯದ  ಕರಾವಳಿ ಭಾಗ ಸೇರಿದಂತೆ ವಿವಿಧೆಡೆ ಪ್ರಚೋದನಾಕಾರಿ ಭಾಷಣ ಮಾಡಿದವರು...

ನರೇಗಾ ವಸತಿ ಕಾಮಗಾರಿಗಳಲ್ಲಿ ಮೋಸದ ಪಾವತಿ; ಚೆಕ್ ಡ್ಯಾಂ ಕಾಮಗಾರಿಯೇ ಇಲ್ಲ, ಆದರೂ ಹಣ ಪಾವತಿ

ಬೆಂಗಳೂರು; 847 ಸಂಖ್ಯೆ ವಸತಿ  ಕಾಮಗಾರಿಗಳಲ್ಲಿ  ಮೋಸದ ಪಾವತಿಗಳಾಗಿರುವುದನ್ನು ಭಾರತದ ಲೆಕ್ಕ...

42,750 ಕೋಟಿ ದೀರ್ಘಾವಧಿ ಸಾಲ, 4,516 ಕೋಟಿ ಆದಾಯ ಕೊರತೆ; ಎಸ್ಕಾಂಗಳ ಆರ್ಥಿಕ ಸ್ಥಿತಿ ಅನಾವರಣ

ಬೆಂಗಳೂರು; ವಿದ್ಯುತ್ ಸರಬರಾಜು ಕಂಪನಿಗಳು ಇದುವರೆಗೆ ಒಟ್ಟಾರೆ 42,750 ಕೋಟಿಗಳಷ್ಟು ದೀರ್ಘಾವಧಿ...

ಹಿಂದುಳಿದ ವರ್ಗ ವಸತಿ ಶಾಲೆ ಕಟ್ಟಡಗಳು ಶಿಥಿಲ; ಕಟ್ಟಡಗಳ ದುರಸ್ತಿಗೂ ಅನುದಾನವಿಲ್ಲ, ‘ಕೈ’ ಎತ್ತಿದ ಸರ್ಕಾರ

ಬೆಂಗಳೂರು;  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವಸತಿ ಶಾಲೆಗಳು ಶಿಥಿಲಗೊಂಡಿದ್ದರೂ...

ನರೇಗಾ ಕಾಮಗಾರಿಗಳ ಆರಂಭದ ದಿನಾಂಕವೂ ಇಲ್ಲ, ದತ್ತಾಂಶವೂ ಇಲ್ಲ; 1,007.83 ಕೋಟಿ ರು. ವೆಚ್ಚದ ಕಾಮಗಾರಿಗಳು ಅಪೂರ್ಣ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡಿದ್ದ ಕಾಮಗಾರಿಗಳ ಪೈಕಿ ಒಂದು ವ‍ರ್ಷಕ್ಕಿಂತಲೂ ಹೆಚ್ಚು...

ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿಗಳ ಕುಟುಂಬ ಸದಸ್ಯರ ಉದ್ಯಮ, ಹಣಕಾಸಿನ ವ್ಯವಹಾರ; ಸದನಕ್ಕೆ ಒದಗಿಸಬಹುದೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಖಿಲ ಭಾರತ...

Related Articles

Popular Categories

error: Content is protected !!