Thursday | March 26, 2026 |

ಖರ್ಗೆ ಕುಟುಂಬ ಸದಸ್ಯರ ಟ್ರಸ್ಟ್‌ಗೆ 5 ಎಕರೆ ಜಮೀನು; ಅಧಿಕಾರ ದುರುಪಯೋಗ, ಹಿತಾಸಕ್ತಿ ಸಂಘರ್ಷ?

Support THE-FILE

spot_img

ಬೆಂಗಳೂರು; ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆ ಸದಸ್ಯ  ಮಲ್ಲಿಕಾರ್ಜುನ ಖರ್ಗೆ, ಕಲ್ಬುರ್ಗಿ  ಸಂಸದ ಹಾಗೂ ಅಳಿಯ  ರಾಧಾಕೃಷ್ಣ ಮತ್ತು ಸಚಿವ ಪ್ರಿಯಾಂಕ್‌ ಖರ್ಗೆ ಅವರು ಟ್ರಸ್ಟಿಯಾಗಿರುವ  ಸಿದ್ದಾರ್ಥ ವಿಹಾರ ಟ್ರಸ್ಟ್‌ಗೆ ಪರಿಶಿಷ್ಟ ಜಾತಿ ಕೋಟಾದಡಿಯಲ್ಲಿ  5 ಎಕರೆ ಜಮೀನು ಮಂಜೂರಾಗಿರುವುದು ವಿವಾದಕ್ಕೆ ಕಾರಣವಾಗಿದೆ.

 

ಈ  ಪ್ರಕರಣದಲ್ಲಿಅವರ ಸಚಿವ ಪ್ರಿಯಾಂಕ್‌ ಖರ್ಗೆ ಸೇರಿದಂತೆ ಕುಟುಂಬ ಸದಸ್ಯರ  ವಿರುದ್ಧ  ಹಿತಾಸಕ್ತಿ ಸಂಘರ್ಷ,  ಸ್ವಜನಪಕ್ಷಪಾತ, ಅಧಿಕಾರ ದುರುಪಯೋಗ ಆರೋಪವೂ ಕೇಳಿ ಬಂದಿದೆ.

 

ಕರ್ನಾಟಕ ಕೈಗಾರಿಕೆ ಪ್ರದೇಶಾಭಿವೃದ್ಧಿ ಮಂಡಳಿಯು ಹೈಟೆಕ್  ಡಿಫೆನ್ಸ್‌ ಏರೋಸ್ಪೇಸ್‌ ಪಾರ್ಕ್‌ನಲ್ಲಿ ಹಂಚಿಕೆ ಮಾಡಿದ್ದ 45.94 ಎಕರೆ ವಿಸ್ತೀರ್ಣದ ಪೈಕಿ 5 ಎಕರೆ ಜಮೀನು ಮಂಜೂರು ಮಾಡಿಸಿಕೊಂಡಿರುವ ಸಿದ್ದಾರ್ಥ ವಿಹಾರ್‍‌ ಟ್ರಸ್ಟ್‌ನಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬ ಸದಸ್ಯರೇ ಟ್ರಸ್ಟಿಗಳಾಗಿರುವ ಕಾರಣ ಈ ಪ್ರಕರಣವು ರಾಜಕೀಯ ವಲಯದಲ್ಲಿ  ಹೆಚ್ಚು ಚರ್ಚೆಗೆ ಗ್ರಾಸವಾಗಿದೆ.

 

ಕೈಗಾರಿಕೆಯನ್ನು ನಡೆಸದೇ ಇರುವ ಸಂಘ ಸಂಸ್ಥೆಗಳಿಗೆ ಕೈಗಾರಿಕೆ ಪ್ರದೇಶದಲ್ಲಿನ ನಾಗರಿಕ ಸೌಲಭ್ಯ ನಿವೇಶನ ನೀಡಲಾಗಿದೆ. ಇದರ ಹಿಂದೆ ಅಧಿಕಾರ ದುರುಪಯೋಗ, ಭ್ರಷ್ಟಾಚಾರ ನಡೆದಿದೆ  ಎಂದು ದಿನೇಶ್‌ ಕಲ್ಲಹಳ್ಳಿ ಎಂಬುವರು ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದರು. ಇದೀಗ ಸಿದ್ದಾರ್ಥ ವಿಹಾರ ಟ್ರಸ್ಟ್‌ಗೆ 5 ಎಕರೆ ಜಮೀನು ಮಂಜೂರು ಮಾಡಿರುವ ಪ್ರಕರಣದಲ್ಲಿಯೂ ಅಧಿಕಾರ ದುರುಪಯೋಗ, ಸ್ವಜನಪಕ್ಷಪಾತ ಮತ್ತು ಹಿತಾಸಕ್ತಿ ಸಂಘರ್ಷವಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ.

 

ಸಿದ್ದಾರ್ಥ ವಿಹಾರ್ ಟ್ರಸ್ಟ್‌ ಗೆ ಸಂಬಂಧಿಸಿದ ಡೀಡ್‌ ಕೂಡ ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಯ ಹೈಟೆಕ್‌ ಡಿಫೆನ್ಸ್‌ ಏರೋಸ್ಪೇಸ್‌ ಪಾರ್ಕ್‌ನಲ್ಲಿ ಹಂಚಿಕೆಯಾಗಿರುವ 45.94 ಎಕರೆ ವಿಸ್ತೀರ್ಣದ ಪೈಕಿ ರಾಹುಲ್‌ ಎಂ ಖರ್ಗೆ ಅವರು ಟ್ರಸ್ಟಿಯಾಗಿರುವ ಸಿದ್ಧಾರ್ಥ ವಿಹಾರ್‍‌ ಟ್ರಸ್ಟ್‌ಗೆ ಪರಿಶಿಷ್ಟ ಜಾತಿ ಕೋಟಾದಡಿಯಲ್ಲಿ  5 ಎಕರೆ ವಿಸ್ತಿರ್ಣ ಜಾಗವನ್ನು ಮಂಜೂರು ಮಾಡಿತ್ತು. ಈ ಕುರಿತು ‘ದಿ ಫೈಲ್‌’ ವರದಿ ಪ್ರಕಟಿಸಿತ್ತು.

ರಾಹುಲ್‌ ಎಂ ಖರ್ಗೆ ಟ್ರಸ್ಟಿಯಾಗಿರುವ ಸಿದ್ದಾರ್ಥ ವಿಹಾರ್‍‌ ಟ್ರಸ್ಟ್‌ಗೆ ಪ.ಜಾತಿ ಕೋಟಾದಲ್ಲಿ 5 ಎಕರೆ ಮಂಜೂರು

 

ಈ ವರದಿ ಪ್ರಕಟವಾದ ಬೆನ್ನಲ್ಲೇ ಇದೀಗ ಸಿದ್ದಾರ್ಥ ವಿಹಾರ ಟ್ರಸ್ಟ್‌ ನ ಡೀಡ್‌ ಕೂಡ ಮುನ್ನೆಲೆಗೆ ಬಂದಿದೆ.

 

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಇವರ ಪತ್ನಿ ರಾಧಾಭಾಯಿ ಖರ್ಗೆ, ಕಲ್ಬುರ್ಗಿ ಸಂಸದ ಹಾಗೂ ಅವರ ಅಳಿಯ ರಾಧಾಕೃಷ್ಣ,

 

 

 

 

ಸಚಿವ ಪ್ರಿಯಾಂಕ್‌ ಖರ್ಗೆ ಅವರೂ ಸಹ ಇರುವುದು ಟ್ರಸ್ಟ್‌ ಡೀಡ್‌ನಿಂದ ಗೊತ್ತಾಗಿದೆ.

 

 

ಕೈಗಾರಿಕೆ ಪ್ರದೇಶಗಳಲ್ಲಿ ನಾಗರಿಕ ಸೌಲಭ್ಯಗಳಿಗೆ (ಸಿ.ಎ) ಮೀಸಲಿಟ್ಟ ನಿವೇಶನಗಳ ಹಂಚಿಕೆಯಲ್ಲಿ ಒಳಸಂಚು ಮತ್ತು ಭಾರೀ ಪ್ರಮಾಣದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ದಿನೇಶ್‌ ಕಲ್ಲಹಳ್ಳಿ ಅವರು ರಾಜ್ಯಪಾಲರಿಗೆ ದೂರು ನೀಡಿದ್ದರು.  ಇದರ ಬೆನ್ನಲ್ಲೇ ಬಹಿರಂಗವಾಗಿರುವ  ಮಲ್ಲಿಕಾರ್ಜುನ ಖರ್ಗೆ ಅವರೂ ಸೇರಿದಂತೆ ಅವರ ಕುಟುಂಬದ ಸದಸ್ಯರು  ಟ್ರಸ್ಟಿಯಾಗಿರುವ ಸಿದ್ದಾರ್ಥ ವಿಹಾರ್‍‌ ಟ್ರಸ್ಟ್‌ ಡೀಡ್‌ ದಾಖಲೆಗಳು ಪ್ರತಿಪಕ್ಷಗಳ ಕೈಗೆ ಮತ್ತೊಂದು ಬಲವಾದ ಅಸ್ತ್ರವೊಂದನ್ನು ನೀಡಿದಂತಾಗಿದೆ.

 

ಹೈಟೆಕ್‌ ಡಿಫೆನ್ಸ್‌ ಏರೋ ಸ್ಪೇಸ್‌ ಪಾರ್ಕ್‌ನಲ್ಲಿ ಸಿದ್ದಾರ್ಥ ವಿಹಾರ ಟ್ರಸ್ಟ್‌  ಸಂಶೋಧನೆ ಮತ್ತು ಅಭಿವೃದ್ಧಿ, ತರಬೇತಿ ಸಂಸ್ಥೆಗಳ ಸ್ಥಾಪನೆಗಾಗಿ ಜಾಗ ಮಂಜೂರಾತಿಗೆ ಕೋರಿತ್ತು. ಅದರಂತೆ ಸಚಿವ ಎಂ ಬಿ ಪಾಟೀಲ್‌ ಅಧ್ಯಕ್ಷತೆಯ ಸಭೆಯು ಸಿದ್ದಾರ್ಥ ವಿಹಾರ್‍‌ ಟ್ರಸ್ಟ್‌ಗೆ 5 ಎಕರೆ ಜಾಗವನ್ನು ಮಂಜೂರು ಮಾಡಿತ್ತು. ಸಭೆ ನಡವಳಿಯಲ್ಲಿ ರಾಹುಲ್‌ ಖರ್ಗೆ ಅವರ ಹೆಸರನ್ನಷ್ಟೇ ಉಲ್ಲೇಖಿಸಿತ್ತು.

 

ತರಬೇತಿ ಮತ್ತು ಸಂಶೋಧನೆ ಸಂಸ್ಥೆಗಳ ಸ್ಥಾಪನೆಗಾಗಿ ಈ ಜಾಗದಲ್ಲಿ ಒಟ್ಟು 25 ಕೋಟಿ ರು ಗಳನ್ನು ಹೂಡಿಕೆ ಮಾಡಲಿದ್ದಾರೆ ಎಂಬುದು ನಡವಳಿಯಲ್ಲಿ ಉಲ್ಲೇಖಿಸಿರುವುದು ತಿಳಿದು ಬಂದಿದೆ.

 

 

ಒಟ್ಟಾರೆ 45.94 ಎಕರೆ ವಿಸ್ತೀರ್ಣದ ಜಾಗದಲ್ಲಿ ಸಿದ್ದಾರ್ಥ ವಿಹಾರ್‍‌ ಟ್ರಸ್ಟ್‌ ಸೇರಿದಂತೆ ಒಟ್ಟಾರೆ  11 ಕಂಪನಿಗಳು 1,204.85 ಕೋಟಿ ರು. ಹೂಡಿಕೆಯಾಗಲಿದೆ. ಅದೇ ರೀತಿ ಎಸ್‌ಸಿ ಮತ್ತು ಎಸ್‌ ಟಿ ಕೋಟಾದಡಿಯಲ್ಲಿ ಎಂಎಂಆರ್‍‌ ಸ್ಕೈಯರ್‍‌ ಗೆ 2.41 ಎಕರೆ ಮಂಜೂರಾಗಿದೆ. ಈ ಜಾಗದಲ್ಲಿ ಹೋಟೆಲ್‌, ರೆಸಾರ್ಟ್‌ ಮತ್ತು ಕಾಟೇಜ್‌ ನಿರ್ಮಾಣಕ್ಕೆ 17.50 ಕೋಟಿ ರು. ಹೂಡಿಕೆಯಾಗಲಿದೆ.

 

ಅದೇ ರೀತಿ ಎಸ್‌ಸಿ ಕೋಟಾದಡಿಯಲ್ಲಿ ಅದ್ವಿಕ್‌ ಗೇಟ್‌ವೇ ನ ಮಂಜುನಾಥ್‌ ಅವರಿಗೆ 2.17 ಎಕರೆ ಮಂಜೂರಾಗಿದೆ.  ಈ ಪ್ರದೇಶದಲ್ಲಿ ರೆಸಿಡೆನ್ಷಿಯಲ್‌ ಅಪಾರ್ಟ್‌ಮೆಂಟ್‌ ಉದ್ದೇಶಕ್ಕೆ 47.92 ಕೋಟಿ ರು. ಹೂಡಿಕೆ ಮಾಡಲಿದೆ ಎಂದು ನಡವಳಿಯಿಂದ ತಿಳಿದು ಬಂದಿದೆ.

 

ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ದಿ ಮಂಡಳಿಯು ರಚಿಸಿರುವ ಕೈಗಾರಿಕೆ ಪ್ರದೇಶಗಳಲ್ಲಿ ನಾಗರಿಕ ಸೌಲಭ್ಯಗಳಿಗೆ ಮೀಸಲಿಟ್ಟ ನಿವೇಶನಗಳನ್ನು ಪಾರದರ್ಶಕವಾಗಿ ಹಂಚಿಕೆ ಮಾಡಿಲ್ಲ. ಅಧಿಕಾರ ದುರ್ಬಳಕೆ ಮಾಡಿಕೊಂಡು ಅವ್ಯವಹಾರ, ಅಕ್ರಮ, ಕ್ರಿಮಿನಲ್‌ ಒಳಸಂಚು ನಡೆಸಿ ಭಾರೀ ಪ್ರಮಾಣದ ಭ್ರಷ್ಟಾಚಾರ ನಡೆಸಿದ್ದಾರೆ. ಇದರಿಂದ ಕೆಐಎಡಿಬಿಗೆ ಕೋಟ್ಯಂತರ ರುಪಾಯಿ ನಷ್ಟವುಂಟಾಗಿದೆ. ಇದರಲ್ಲಿ ಭಾರೀ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ದಿ ಸಚಿವ ಎಂ ಬಿ ಪಾಟೀಲ್‌ ಅವರು ಭಾಗಿಯಾಗಿದ್ದಾರೆ. ಇವರ ವಿರುದ್ಧ ಭ್ರಷ್ಟಾಚಾರದ ಆರೋಪಗಳಿಗಾಗಿ ಕಾನೂನು ಕ್ರಮ ಜರುಗಿಸಬೇಕು ಎಂದು ಕೋರಿದ್ದರು.

 

 

ಹಂಚಿಕೆಯಾಗಿರುವ ಇತರೆ  ಕಂಪನಿಗಳ ಪಟ್ಟಿ

 

ಕರ್ನಾಟಕ ಡ್ರಗ್ಸ್‌ ಫಾರ್ಮಾಸ್ಯುಟಿಕಲ್ಸ್‌, ಕರ್ನಾಟಕ ಡ್ರಗ್ಸ್‌, ಕಾಫಿ ಪಾಯಿಮಟ್‌, ಪಾಟೀಲ್‌ ಅಂಡ್‌ ಪಾಟೀಲ್‌ ಇನ್ಫ್ರಾಸ್ಚಕ್ಟರ್‍‌, ಎನ್‌ಸಿಎಲ್‌ ಎಂಟರ್‍‌ ಪ್ರೈಸೆಸ್‌, ವಿನಾಯಕ ಪ್ರಿಸೆನ್ಸ್‌, ಹೋಟೆಲ್‌ ಇಪ್ಕಾನ್‌, ದಿತ್ಯ ಇಂಟಿರೀಯರ್‍‌ ಕನ್ಸ್‌ಟ್ರಕ್ಷನ್ಸ್‌, ಮೋಹನ್‌ ಕುಮಾರ್‍‌ ವೈ ಎನ್‌, ಶ್ರೀ ಶ್ಯಾಮ್‌ ಇನ್ಪ್ರಾಸ್ಟಕ್ಚರ್‍ಸ್‌, ಬಯೋ ತೆರೆಪಿಕ್ಸ್‌ ಪ್ರೈವೈಟ್‌ ಲಿಮಿಟೆಡ್‌, ಸೃಜನ್‌ ಇನ್ಫ್ರಾಸ್ಷಕ್ಚರ್‍ಸ್‌, ಏರ್‍‌ವೈ ಎಂಟರ್‍‌ ಪ್ರೈಸೆಸ್‌, ಬ್ರೋನ್‌, ಟ್ರೀ ಹಾಸ್ಪಿಟಲ್ಸ್‌, ಶರಾವತಿ ಬಿಪಿಒ ಸರ್ವಿಸ್‌, ಡಿಸ್ಕವರಿ ಇನ್ಫ್ರಾ ವೆಂಚರ್‍ಸ್‌, ಟ್ರೈಡೆಂಡ್‌ ಡೆವೆಲೆಪರ್ಸ್‌, ಎಡಿಯು ಇನ್ಪ್ರಾ, ರೇಖಾ ಎಂಟರ್‍‌ ಪ್ರೈಸೆಸ್‌, ಸಿದ್ದಾರ್ಥ ಎಂ ವಿಹಾರ್‍‌ ಟ್ರಸ್ಟ್‌, ಎಡಿಯು ಇನ್ಫ್ರಾ ಅರುನ್‌ ಪಾರ್ಟನಕ್‌, ವೈಗೈ ಇನ್‌ವೆಸ್ಟ್‌ಮೆಂಟ್ಸ್‌, ಅರವ್‌ ಎಂಟರ್‍‌ ಪ್ರೈಸೆಸ್‌, ಹರಿತಾ ಲಾಜಿಸ್ಟಿಕ್‌ ವೇರ್‍‌ಹೌಸಿಂಗ್‌ ಪ್ರೈವೈಟ್‌ ಲಿಮಿಟೆಡ್‌, ಅದ್ವೈಕ್‌ ಗೇಟ್‌ವೇ, ಸಫ್ರಾನ್‌ ಎಂಟರ್‍‌ ಪ್ರೈಸೆಸ್‌, ಮೆಕ್‌ ಇಂಜಿನಿಯರಿಂಗ್‌ ಪವರ್‍‌ ಸರ್ವಿಸ್‌, ವೆಂಕಟೇಶ್ವರ ಹೋಟೆಲ್‌, ಸಂಜೀವಿನಿ ಮಲ್ಟಿಸ್ಪೆಷಾಲಿಟಿ ಹಾಸ್ಪಿಟಲ್‌, ಶುಭದಾ ಸಂತೋಷ್‌ ಗಣಿ, ಸಿಎಂ ಕಿರಣ್‌ , ಎಕೋಲೈಫ್‌ ಪ್ರಾಜೆಕ್ಟ್ಸ್‌, ವಿ ಎನ್‌ ಹೋಟೆಲ್‌ ಫ್ಲಾಟ್‌, ಜಿ ಎನ್‌ ಮೂರ್ತಿ, ನಕ್ಷ್‌ ಎಂಟರ್‍‌ ಪ್ರೈಸೆಸ್‌, ಶಿವಗಂಗಾ ಎಂಟರ್‍‌ ಪ್ರೈಸೆಸ್‌, ಸಪ್ತಗಿರಿ ಇನ್‌, ರಾಷ್ಟ್ರೀಯ ಗ್ರೂಪ್ಸ್‌, ಸಿಂಫೊಸಿಸ್‌ ಹೆಲ್ತ್‌ ಕೇರ್‍‌ ಕಂಪನಿಗಳಿಗೆ ಸಿ ಎ ನಿವೇಶನ ಹಂಚಿಕೆ ಮಾಡಲಾಗಿದೆ ಎಂದು ರಾಜ್ಯಪಾಲರಿಗೆ ಪಟ್ಟಿಯನ್ನು ಒದಗಿಸಿರುವುದು ಗೊತ್ತಾಗಿದೆ.

 

ಅಲ್ಲದೇ ಭಾರತೀಯ ನಾಘರಿಕ ಸುರಕ್ಷಾ ಸಂಹಿತೆ, 2023ರ ಸೆಕ್ಷನ್‌ 218 ಮತ್ತು ಭ್ರಷ್ಟಾಚಾರ ತಡೆ ಕಾಯ್ದೆ 1988ರ ಸೆಕ್ಷನ್‌ 17 ಎ ಮತ್ತು 19ರ ಅಡಿಯಲ್ಲಿ ಸಚಿವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಅನುಮತಿ ನೀಡಬೇಕು ಎಂದು ಕೋರಿದ್ದನ್ನು ಸ್ಮರಿಸಬಹುದು.

ಸಿಎ ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ; ಸಿದ್ದರಾಮಯ್ಯ ಬೆನ್ನಲ್ಲೇ ಎಂ ಬಿ ಪಾಟೀಲ್‌ಗೂ ಸಂಕಷ್ಟ

ಇಂತಹ ನಿವೇಶನವನ್ನು ಹರಾಜು ಮೂಲಕ ಹಂಚಿಕೆ ದರದ ದುಪ್ಪಟ್ಟು ದರದಲ್ಲಿ ಅಥವಾ ಹಂಚಿಕೆ ದರದ ಶೇಕಡಾ 1 ½ ಹಂಚಿಕೆಯ ದರದಲ್ಲಿ ಹಂಚಿಕೆ ಮಾಡಬೇಕಾಗಿತ್ತು. ಆದರೆ ಕೆಐಡಿಬಿಯು ನಿಯಮಗಳನ್ನು ಪಾಲಿಸದೇ ಹಂಚಿಕೆ ದರದಲ್ಲಿಯೇ ಸಿಎ ನಿವೇಶನವನ್ನು ಹಂಚಿಕೆ ದರದಲ್ಲಿ ಹಂಚಿಕೆ ಮಾಡುತ್ತಿದ್ದು, ಇದರಿಂದ ಕೆಐಡಿಬಿಗೆ ಕೋಟ್ಯಾಂತರ ರುಪಾಯಿಗಳು ನಷ್ಟವುಂಟಾಗಿದೆ ಎಂದು ದಿನೇಶ್‌ ಆರೋಪಿಸಿದ್ದರು.

 

ಕೆಐಎಡಿಬಿ ಅಭಿವೃದ್ಧಿಪಡಿಸಿದ್ದ ಕೈಗಾರಿಕಾ ಬಡಾವಣೆಗಳಲ್ಲಿ ಎಲ್ಲಾ ಕಾನೂನುಗಳನ್ನು ಗಾಳಿಗೆ ತೂರಲಾಗಿದೆ. ಎಕರೆಗಟ್ಟಲೆ ಜಮೀನುಗಳನ್ನು ಗುತ್ತಿಗೆ ಹಾಗೂ ಮಾರಾಟದ ಕರಾರುಗಳಿಗೆ ಒಳಪಟ್ಟು ತರಾತುರಿಯಲ್ಲಿ ಹಲವು ಕಂಪನಿಗಳಿಗೆ ಹಂಚಿಕೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

Hot this week

ಹಿಂದುಳಿದ ವರ್ಗ ವಸತಿ ಶಾಲೆ ಕಟ್ಟಡಗಳು ಶಿಥಿಲ; ಕಟ್ಟಡಗಳ ದುರಸ್ತಿಗೂ ಅನುದಾನವಿಲ್ಲ, ‘ಕೈ’ ಎತ್ತಿದ ಸರ್ಕಾರ

ಬೆಂಗಳೂರು;  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವಸತಿ ಶಾಲೆಗಳು ಶಿಥಿಲಗೊಂಡಿದ್ದರೂ...

ನರೇಗಾ ಕಾಮಗಾರಿಗಳ ಆರಂಭದ ದಿನಾಂಕವೂ ಇಲ್ಲ, ದತ್ತಾಂಶವೂ ಇಲ್ಲ; 1,007.83 ಕೋಟಿ ರು. ವೆಚ್ಚದ ಕಾಮಗಾರಿಗಳು ಅಪೂರ್ಣ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡಿದ್ದ ಕಾಮಗಾರಿಗಳ ಪೈಕಿ ಒಂದು ವ‍ರ್ಷಕ್ಕಿಂತಲೂ ಹೆಚ್ಚು...

ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿಗಳ ಕುಟುಂಬ ಸದಸ್ಯರ ಉದ್ಯಮ, ಹಣಕಾಸಿನ ವ್ಯವಹಾರ; ಸದನಕ್ಕೆ ಒದಗಿಸಬಹುದೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಖಿಲ ಭಾರತ...

ನರೇಗಾ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಿಯಮ ಉಲ್ಲಂಘನೆ; 86.67 ಕೋಟಿ ರು ಅಕ್ರಮ ಪತ್ತೆ ಹಚ್ಚಿದ ಸಿಎಜಿ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಮಾನವ ಸಂಪನ್ಮೂಲ ಬಳಕೆಗಾಗಿ ಮಾಡಿಕೊಂಡಿದ್ದ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಡೆದಿದ್ದ...

ಮೋಸದ ವಹಿವಾಟು, ಹೆಚ್ಚಿನ ಪಾವತಿ, ಅಕ್ರಮ ವೆಚ್ಚ; ನರೇಗಾದ ಮತ್ತೊಂದು ಮುಖ ಬಯಲು ಮಾಡಿದ ಸಿಎಜಿ

ಬೆಂಗಳೂರು; ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೈಗೊಂಡಿದ್ದ ಕಾಮಗಾರಿಗಳು...

Topics

ಹಿಂದುಳಿದ ವರ್ಗ ವಸತಿ ಶಾಲೆ ಕಟ್ಟಡಗಳು ಶಿಥಿಲ; ಕಟ್ಟಡಗಳ ದುರಸ್ತಿಗೂ ಅನುದಾನವಿಲ್ಲ, ‘ಕೈ’ ಎತ್ತಿದ ಸರ್ಕಾರ

ಬೆಂಗಳೂರು;  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವಸತಿ ಶಾಲೆಗಳು ಶಿಥಿಲಗೊಂಡಿದ್ದರೂ...

ನರೇಗಾ ಕಾಮಗಾರಿಗಳ ಆರಂಭದ ದಿನಾಂಕವೂ ಇಲ್ಲ, ದತ್ತಾಂಶವೂ ಇಲ್ಲ; 1,007.83 ಕೋಟಿ ರು. ವೆಚ್ಚದ ಕಾಮಗಾರಿಗಳು ಅಪೂರ್ಣ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡಿದ್ದ ಕಾಮಗಾರಿಗಳ ಪೈಕಿ ಒಂದು ವ‍ರ್ಷಕ್ಕಿಂತಲೂ ಹೆಚ್ಚು...

ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿಗಳ ಕುಟುಂಬ ಸದಸ್ಯರ ಉದ್ಯಮ, ಹಣಕಾಸಿನ ವ್ಯವಹಾರ; ಸದನಕ್ಕೆ ಒದಗಿಸಬಹುದೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಖಿಲ ಭಾರತ...

ನರೇಗಾ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಿಯಮ ಉಲ್ಲಂಘನೆ; 86.67 ಕೋಟಿ ರು ಅಕ್ರಮ ಪತ್ತೆ ಹಚ್ಚಿದ ಸಿಎಜಿ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಮಾನವ ಸಂಪನ್ಮೂಲ ಬಳಕೆಗಾಗಿ ಮಾಡಿಕೊಂಡಿದ್ದ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಡೆದಿದ್ದ...

ಮೋಸದ ವಹಿವಾಟು, ಹೆಚ್ಚಿನ ಪಾವತಿ, ಅಕ್ರಮ ವೆಚ್ಚ; ನರೇಗಾದ ಮತ್ತೊಂದು ಮುಖ ಬಯಲು ಮಾಡಿದ ಸಿಎಜಿ

ಬೆಂಗಳೂರು; ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೈಗೊಂಡಿದ್ದ ಕಾಮಗಾರಿಗಳು...

ಗೃಹಜ್ಯೋತಿ; 23,823.06 ಮಿಲಿಯನ್ ಯೂನಿಟ್ ವಿದ್ಯುತ್ ಬಳಕೆ, ಎಸ್ಕಾಂಗಳಿಗೆ 631.75 ಕೋಟಿ ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಗೃಹ ಜ್ಯೋತಿ ಯೋಜನೆ ಅನುಷ್ಠಾನಗೊಳಿಸಿರುವ ವಿದ್ಯುತ್ ಸರಬರಾಜು ಕಂಪನಿಗಳಿಗೆ ಸರ್ಕಾರವು...

ವಿನಾಶಕಾರಿ ಭೂ ಕುಸಿತ; ಕೊಡಗು ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರದಲ್ಲಿ ಸಭೆಯೇ ನಡೆದಿಲ್ಲ, ಪುರಾವೆಯೂ ಇಲ್ಲ

ಬೆಂಗಳೂರು; ಕೊಡಗಿನಲ್ಲಿ 2018-19ನೇ ಸಾಲಿನಲ್ಲಿ  ಭಾರೀ ಪ್ರಮಾಣದ ವಿನಾಶಕಾರಿ ಭೂ ಕುಸಿತಗಳಾಗಿದ್ದರೂ ...

ಭೂ ಸ್ವಾಧೀನ, ಪರಿಹಾರದಲ್ಲಿ ಅಕ್ರಮ; ಬಿಸ್ವಾಸ್ ವರದಿ ಮೂಲೆಗುಂಪು, 29.96 ಕೋಟಿ ನಷ್ಟ ಪ್ರಕರಣಕ್ಕೆ ಕ್ಲೀನ್ ಚಿಟ್

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಸಾಬೀತಾಗಿದ್ದ  ಬೆಳಗಾವಿ ಜಿಲ್ಲೆ ಹುಕ್ಕೇರಿ...

Related Articles

Popular Categories

error: Content is protected !!