Monday | April 6, 2026 |

ಜಮೀನು ಖರೀದಿ, ಚುನಾವಣೆ ತಕರಾರು; ಸಚಿವದ್ವಯರ ವಿರುದ್ಧ ಪ್ರಾಣಬೆದರಿಕೆ ಆರೋಪ, ರಾಜ್ಯಪಾಲರಿಗೆ ದೂರು

ಬೆಂಗಳೂರು; ಜಮೀನು ಖರೀದಿ ಮತ್ತು ಚುನಾವಣೆ ತಕರಾರು ಅರ್ಜಿ ಸಲ್ಲಿಸಿರುವುದಕ್ಕೆ ಸಂಬಂಧಿಸಿದಂತೆ ಅರಣ್ಯ ಸಚಿವ ಈಶ್ವರ್‍‌ ಖಂಡ್ರೆ ಮತ್ತು ಪೌರಾಡಳಿತ ಸಚಿವ ರಹೀಂ ಖಾನ್‌ ಅವರು ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಿ ಬೀದರ್‍‌ನ ಶಶಿಕುಮಾರ್‍‌ ಪಾಟೀಲ ಎಂಬುವರು ರಾಜ್ಯಪಾಲರು, ಗೃಹ ಸಚಿವ ಮತ್ತು ಪೊಲೀಸ್‌ ಮಹಾನಿರ್ದೇಶಕರಿಗೆ ಲಿಖಿತ ದೂರು ಸಲ್ಲಿಸಿದ್ದಾರೆ.

 

ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ ಸಚಿವ ಈಶ್ವರ್‍‌ ಖಂಡ್ರೆ ಅವರ ವಿರುದ್ಧ ಇತ್ತೀಚೆಗಷ್ಟೇ ಅರಣ್ಯ ಒತ್ತುವರಿ ಆರೋಪ ಕೇಳಿ ಬಂದಿತ್ತು.  ಇದರ ಬೆನ್ನಲ್ಲೇ  ಜಮೀನಿನ ವಿಚಾರಕ್ಕೆ ಸಂಬಂಧಿಸಿದಂತೆಯೇ ಶಶಿಕುಮಾರ್‍‌ ಪಾಟೀಲ್‌ ಎಂಬುವರಿಗೆ ಅಧಿಕಾರಿಗಳ ಮೂಲಕ ಕಿರುಕುಳ, ಮಾನಸಿಕ ತೊಂದರೆ ಮತ್ತು ಪ್ರಚೋದನೆಗೆ ಕುಮ್ಮಕ್ಕು ನೀಡಿದ್ದಾರೆ ಎಂದು ಆರೋಪಿಸಿ ಸಲ್ಲಿಕೆಯಾಗಿರುವ ದೂರರ್ಜಿ ಮುನ್ನೆಲೆಗೆ ಬಂದಿದೆ. ಈ ದೂರರ್ಜಿಯ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಅದೇ ರೀತಿ ಸಚಿವ ರಹೀಂ ಖಾನ್‌ ಅವರ ವಿರುದ್ಧವೂ ಶಶಿಕುಮಾರ್‍‌ ಅವರು ಚುನಾವಣೆ ತಕರಾರು ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣವು ಹೈಕೋರ್ಟ್‌ ವಿಚಾರಣೆಯಲ್ಲಿದೆ. ಹೀಗಿದ್ದರೂ ಈ ಅರ್ಜಿಯನ್ನು ಹಿಂಪಡೆದುಕೊಳ್ಳಬೇಕು ಎಂದು ಒತ್ತಡ ಹೇರುತ್ತಿದ್ದಾರೆ ಎಂದು ಶಶಿಕುಮಾರ್‍‌ ಅವರು ದೂರಿನಲ್ಲಿ ಉಲ್ಲೇಖಿಸಿರುವುದು ತಿಳಿದು ಬಂದಿದೆ.

 

 

ದೂರಿನಲ್ಲೇನಿದೆ?

 

ಬೀದರ್‍‌ ಗ್ರಾಮದ ಗುಲ್ಲರ ಹವೇಲಿ, ದೇವಿ ಕಾಲೋನಿಯ ಸರ್ವೆ ನಂಬರ್‍‌ 60/1ರಲ್ಲಿನ ಈಶ್ವರ ಖಂಡ್ರೆ ಅವರ ಜಮೀನಿನ ಪಕ್ಕದಲ್ಲಿದೆ. ಈ ಜಮೀನು ಖರೀದಿ ಮಾಡುವ ಮುನ್ನ ಅವರನ್ನು ಕೇಳಿದ್ದೆ. ಅವರು ಇದಕ್ಕೆ ತಕರಾರು ಇಲ್ಲ ಎಂದಿದ್ದರು. ನೀನು ಖರೀದಿ ಮಾಡಬಹುದು ಎಂದು ಹೇಳಿದ್ದರು. ಹೀಗಾಗಿ ಈ ಜಮೀನನ್ನು ಖರೀದಿ ಮಾಡಿದ್ದೆ ಎಂದು ದೂರಿನಲ್ಲಿ ಉಲ್ಲೇಖಿಸಿರುವುದು ತಿಳಿದು ಬಂದಿದೆ.

 

ಆದರೀಗ ರಾಜಕೀಯ ಉದ್ದೇಶದಿಂದ ಈಗ ಇದೇ ಜಮೀನಿನ ವಿಚಾರದಲ್ಲಿ ಮಧ್ಯ ಪ್ರವೇಶಿಸಿದ್ದಾರೆ. ಆ ಜಮೀನು ಖರೀದಿ ಮಾಡಲು ಈಶ್ವರ್ ಖಂಡ್ರೆ ಅವರು ಯತ್ನಿಸುತ್ತಿದ್ದಾರೆ. ಮತ್ತು ಪೊಲೀಸ್‌ ಠಾಣೆಯಲ್ಲಿ ವಿನಾ ಕಾರಣ ದೂರು ಕೊಡಿಸಿ ಅದಕ್ಕೆ ಪೊಲೀಸ್‌ ಅಧಿಕಾರಿಗಳಿಂದ ಕಿರುಕುಳ ನೀಡುತ್ತಿದ್ಧಾರೆ. ಮಾನಸಿಕ ತೊಂದರೆ ಮತ್ತು ಪ್ರಚೋದನೆಗೆ ಕುಮ್ಮಕ್ಕು ಕೊಡುತ್ತಿದ್ದಾರೆ ಎಂದು ಶಶಿಕುಮಾರ್‍‌ ಅವರು ದೂರಿನಲ್ಲಿ ಆಪಾದಿಸಿರುವುದು ಗೊತ್ತಾಗಿದೆ.

 

 

‘ಅಲ್ಲದೇ ನನಗೆ ಅವರೇ ಫೋನ್‌ ಮಾಡಿ ಆ ಜಮೀನಿನ ಬಗ್ಗೆ ನೀನು ಖರೀದಿ ಮಾಡಿದ ಜಮೀನಿನ ಹಣ ತೆಗೆದುಕೋ, ಆ ಜಮೀನು ಬಿಟ್ಟು ಕೊಡು, ನೀನು ಕೊಟ್ಟ ಹಣ ತೆಗೆದುಕೋ ಎಂದು ದಬ್ಬಾಳಿಕೆ ಹಾಕುತ್ತಿದ್ದಾರೆ. ಇಲ್ಲದಿದ್ದರೇ ನಿನ್ನನ್ನು ನೋಡಿಕೊಳ್ಳುತ್ತೇನೆಂದು ಒತ್ತಡ ಹೇರಿದ್ದಾರೆಂದು ದೂರಿನಲ್ಲಿ ಆರೋಪಿಸಿದ್ದಾರೆ.

 

ಹಾಗೆಯೇ ಪೌರಾಡಳಿತ ಸಚಿವ ರಹೀಂ ಖಾನ್‌ ವಿರುದ್ಧವೂ ಇದೇ ದೂರಿನಲ್ಲಿ ಆಪಾದಿಸಿದ್ದಾರೆ.

 

‘ನಾನು ಚುನಾವಣೆ ತಕರಾರು ಅರ್ಜಿ ಹೂಡಿದ್ದೇನೆ. ಇದು ಹೈಕೋರ್ಟ್‌ ವಿಚಾರಣೆಯಲ್ಲಿದೆ. ಹೀಗಾಗಿ ಇವರೂ ಸಹ ಮಾನಸಿಕ ಹಿಂಸೆ ಕಿರಕುಳ ನೀಡುತ್ತಿದ್ಧಾರೆ. ಕೇಸ್‌ ವಾಪಸ್‌ ತೆಗದುಕೋ ಆ ಕೇಸಿನ ವಿಚಾರಣೆ ಬಿಟ್ಟುಕೊಡು. ಅದನ್ನು ಹಿಂಪಡೆದುಕೋ  ಎಂದು ದಬ್ಬಾಳಿಕೆ ಮಾಡುತ್ತಿದ್ದಾರೆ. ಇಲ್ಲದಿದ್ದರೇ ನಿನ್ನನ್ನು ನೋಡಿಕೊಳ್ಳುತ್ತೇನೆ, ಬಾಜಾ ಬಜಾತು ಎಂದು ಒತ್ತಡ ಹೇರುತ್ತಿದ್ದಾರೆ,’ ಎಂದು ಆಪಾದಿಸಿರುವುದು ತಿಳಿದು ಬಂದಿದೆ.

 

ಯಾವುದೇ ಅಹಿತಕರ ಘಟನೆ ನಡೆದರೆ ಅದಕ್ಕೆ ಪೂರ್ಣ ಜವಾಬ್ದಾರಿ ಖಂಡ್ರೆ ಅವರೇ ಆಗಿರಲಿದ್ಧಾರೆ ಎಂದು ದೂರಿನಲ್ಲಿ ಹೇಳಿರುವ ಶಶಿಕುಮಾರ್‍‌ ಅವರು ನನ್ನ ಜೀವ ಮತ್ತು ನನ್ನ ಕುಟುಂಬದ ಸದಸ್ಯರಿಗೆ ಯಾವುದೇ ಹಾನಿ ಆದರೆ ಸಂಫೂರ್ಣ ಹೊಣೆಗಾರಿಕೆ ಈಶ್ವರ್‍‌ ಖಂಡ್ರೆ ಮತ್ತು ರಹೀಂ ಖಾನ್‌ ಅವರದ್ದೇ ಅವರೇ ಹೊಣೆಗಾರರಾಗಿದ್ದಾರೆ ಎಂದೂ ತಿಳಿಸಿದ್ದಾರೆ.

Hot this week

96.73 ಕೋಟಿ ರು ರಿಯಾಯಿತಿ ಕೋರಿದ ದಾಲ್ಮಿಯಾ ಸಿಮೆಂಟ್ಸ್‌; ನಿಯಮ ಪಾಲನೆಯೋ, ಉಲ್ಲಂಘನೆಯೋ?

ಬೆಂಗಳೂರು; ಗಣಿಗಾರಿಕೆ ಉದ್ಯಮದಲ್ಲಿ  ಆಂಧ್ರ ಪ್ರದೇಶ, ರಾಜಸ್ತಾನ ಸರ್ಕಾರವು ನೀಡಿರುವ ರಿಯಾಯಿತಿಯನ್ನು...

ಬ್ಯಾಕ್‌ ಟು ಬ್ಯಾಕ್ ಸಾಲ,12 ಪ್ರತಿಶತದಷ್ಟು ಹೆಚ್ಚಳ, ಅಸಲನ್ನೂ ಮೀರಿಸಲಿದೆಯೆ ಬಡ್ಡಿ ಮರುಪಾವತಿ?

ಬೆಂಗಳೂರು; 2024-25ನೇ ಸಾಲಿನಲ್ಲಿ ರಾಜ್ಯ ಕಾಂಗ್ರೆಸ್‌ ಸರ್ಕಾರವು ಪಡೆದಿರುವ ಸಾರ್ವಜನಿಕ ಸಾಲವು...

1.16 ಕೋಟಿ ನಿಷ್ಕ್ರೀಯ ಖಾತೆಗಳಲ್ಲಿದೆ 3,403 ಕೋಟಿ; ಪರಿಣಾಮ ಬೀರದ ಆರ್‍‌ಬಿಐ ಮೇಲ್ವಿಚಾರಣೆ

ಬೆಂಗಳೂರು; ಸರ್ಕಾರಿ ಸೌಲಭ್ಯ ಪಡೆಯಲು ರಾಜ್ಯದ ರಾಷ್ಟ್ರೀಕೃತ ಮತ್ತಿತರೆ ಖಾಸಗಿ ಬ್ಯಾಂಕ್‌ಗಳಲ್ಲಿ...

ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌ನ 850 ಕೋಟಿ ಬಾಕಿ ಪ್ರಕರಣ; ಕೇಂದ್ರ, ರಾಜ್ಯ ಸರ್ಕಾರಕ್ಕೆ ಲೀಗಲ್ ನೋಟೀಸ್‌

ಬೆಂಗಳೂರು; ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌ ಲಿಮಿಟೆಡ್‌ಗೆ ನಿಯಮಬಾಹಿರವಾಗಿ ಲೆಟರ್ ಆಫ್‌...

ಪ್ರಧಾನಮಂತ್ರಿ ಜೀವನ ಜ್ಯೋತಿ, ಸುರಕ್ಷಾ ವಿಮೆ ಯೋಜನೆ; ಕಲ್ಬುರ್ಗಿ ಸೇರಿ 12 ಜಿಲ್ಲೆಗಳಲ್ಲಿ ಕಳಪೆ ಪ್ರದರ್ಶನ

ಬೆಂಗಳೂರು; ಜೀವ ವಿಮೆ ರಕ್ಷಣೆ ನೀಡುವ ಪ್ರಧಾನ ಮಂತ್ರಿ ಸುರಕ್ಷಾ ವಿಮಾ...

Topics

96.73 ಕೋಟಿ ರು ರಿಯಾಯಿತಿ ಕೋರಿದ ದಾಲ್ಮಿಯಾ ಸಿಮೆಂಟ್ಸ್‌; ನಿಯಮ ಪಾಲನೆಯೋ, ಉಲ್ಲಂಘನೆಯೋ?

ಬೆಂಗಳೂರು; ಗಣಿಗಾರಿಕೆ ಉದ್ಯಮದಲ್ಲಿ  ಆಂಧ್ರ ಪ್ರದೇಶ, ರಾಜಸ್ತಾನ ಸರ್ಕಾರವು ನೀಡಿರುವ ರಿಯಾಯಿತಿಯನ್ನು...

ಬ್ಯಾಕ್‌ ಟು ಬ್ಯಾಕ್ ಸಾಲ,12 ಪ್ರತಿಶತದಷ್ಟು ಹೆಚ್ಚಳ, ಅಸಲನ್ನೂ ಮೀರಿಸಲಿದೆಯೆ ಬಡ್ಡಿ ಮರುಪಾವತಿ?

ಬೆಂಗಳೂರು; 2024-25ನೇ ಸಾಲಿನಲ್ಲಿ ರಾಜ್ಯ ಕಾಂಗ್ರೆಸ್‌ ಸರ್ಕಾರವು ಪಡೆದಿರುವ ಸಾರ್ವಜನಿಕ ಸಾಲವು...

1.16 ಕೋಟಿ ನಿಷ್ಕ್ರೀಯ ಖಾತೆಗಳಲ್ಲಿದೆ 3,403 ಕೋಟಿ; ಪರಿಣಾಮ ಬೀರದ ಆರ್‍‌ಬಿಐ ಮೇಲ್ವಿಚಾರಣೆ

ಬೆಂಗಳೂರು; ಸರ್ಕಾರಿ ಸೌಲಭ್ಯ ಪಡೆಯಲು ರಾಜ್ಯದ ರಾಷ್ಟ್ರೀಕೃತ ಮತ್ತಿತರೆ ಖಾಸಗಿ ಬ್ಯಾಂಕ್‌ಗಳಲ್ಲಿ...

ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌ನ 850 ಕೋಟಿ ಬಾಕಿ ಪ್ರಕರಣ; ಕೇಂದ್ರ, ರಾಜ್ಯ ಸರ್ಕಾರಕ್ಕೆ ಲೀಗಲ್ ನೋಟೀಸ್‌

ಬೆಂಗಳೂರು; ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌ ಲಿಮಿಟೆಡ್‌ಗೆ ನಿಯಮಬಾಹಿರವಾಗಿ ಲೆಟರ್ ಆಫ್‌...

ಕೆಎಎಸ್ 2011ರ ನೇಮಕಾತಿ ಅಕ್ರಮದ ತನಿಖಾ ವರದಿಗೆ ಕೊನೆ ಮೊಳೆ; ವಿಚಾರಣೆಯಿಲ್ಲದೇ ಪ್ರಕರಣ ಹಿಂಪಡೆಯುವ ಪ್ರಕ್ರಿಯೆಗೆ ಚಾಲನೆ

ಬೆಂಗಳೂರು; 2011ನೇ ಸಾಲಿನ ಗೆಜೆಟೆಡ್‌ ಪ್ರೊಬೆಷನರ್ಸ್ ಆಯ್ಕೆ ಪ್ರಕ್ರಿಯೆಯಲ್ಲಿ ಅವ್ಯವಹಾರಗಳಲ್ಲಿ ಭಾಗಿಯಾಗಿದ್ದಾರೆ...

ಗಂಗಾ ಕಲ್ಯಾಣ ಯೋಜನೆ ವಿದ್ಯುದ್ದೀಕರಣ; ವಾಸ್ತವಿಕ ವೆಚ್ಚದಲ್ಲಿ ಏರಿಕೆ, ಎಸ್ಕಾಂಗಳಿಗೆ ಆರ್ಥಿಕ ಸಂಕಷ್ಟ

ಬೆಂಗಳೂರು; ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿಗಳ ವಿದ್ಯುದ್ದೀಕರಣ ವಿದ್ಯುತ್ ಸರಬರಾಜು...

ಅಂಬೇಡ್ಕರ್, ಜಗಜೀವನ್ ರಾಂ ಪ್ರಶಸ್ತಿಗೆ ಲಾಬಿ!; ಸರಜೂ ಕಾಟ್ಕರ್ ಸೇರಿ ಹಲವರಿಂದ ಅರ್ಜಿ ಸಲ್ಲಿಕೆ

ಬೆಂಗಳೂರು; ಸಮಾಜ ಕಲ್ಯಾಣ ಇಲಾಖೆಯು ಪ್ರತೀ ಏಪ್ರಿಲ್ ತಿಂಗಳಲ್ಲಿ ನೀಡುವ ಡಾ...

Related Articles

Popular Categories

error: Content is protected !!