Friday | May 1, 2026 |

ಮುಡಾ ಪ್ರಕರಣ; ಲೋಕಾಯುಕ್ತದ ಮೇಲೆ ಅವಿಶ್ವಾಸ, ಸಿಬಿಐ ತನಿಖೆಗಾಗಿ ಹೈಕೋರ್ಟ್ ಮೊರೆ ಹೊಕ್ಕ ದೂರುದಾರ

ಬೆಂಗಳೂರು; ಬದಲಿ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ ಹಾಗೂ ಭಾವಮೈದುನ ಮಲ್ಲಿಕಾರ್ಜುನ ಸ್ವಾಮಿ ಮತ್ತಿತರರ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್‌ಐಆರ್‍‌ ದಾಖಲಿಸಿರುವ ಬೆನ್ನಲ್ಲೇ ಇದೀಗ ದೂರುದಾರ ಸ್ನೇಹಮಯಿ ಕೃ‍ಷ್ಣ ಅವರು ಇಡೀ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಹೈಕೋರ್ಟ್‌ನ ಮೊರೆ ಹೊಕ್ಕಿದ್ದಾರೆ.

 

ಲೋಕಾಯುಕ್ತ ಮತ್ತು ಅಲ್ಲಿನ ಪೊಲೀಸ್‌ ವಿಭಾಗವು ನಡೆಸುವ ತನಿಖೆ ಮೇಲೆ ಸ್ನೇಹಮಯಿ ಕೃಷ್ಣ ಅವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

 

ಅಲ್ಲದೇ ರಾಜ್ಯದ ಮುಖ್ಯಮಂತ್ರಿಯೇ ನೇರವಾಗಿ ಭಾಗಿ ಆಗಿರುವ ಕಾರಣ ರಾಜ್ಯ ಇಲಾಖೆಗಳ ಮೇಲೆ, ವಿಶೇಷವಾಗಿ ರಾಜ್ಯ ತನಿಖಾ ಸಂಸ್ಥೆಗಳಾದ ಪೊಲೀಸ್ ಅಧಿಕಾರಿಗಳು ಮತ್ತು ವಿಶೇಷವಾಗಿ ಕರ್ನಾಟಕ ಲೋಕಾಯುಕ್ತ ಪೊಲೀಸರ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ. ಹೀಗಾಗಿ ಸಿಬಿಐ ಮೂಲಕವೇ ತನಿಖೆ ನಡೆಸಬೇಕು ಎಂದು ನ್ಯಾಯಾಲಯದ ಮುಂದೆ ರಿಟ್‌ ಅರ್ಜಿ ಸಲ್ಲಿಸಿದ್ದಾರೆ.

 

ಸ್ನೇಹಮಯಿ ಕೃಷ್ಣ ಅವರು ಹೈಕೋರ್ಟ್‌ನಲ್ಲಿ ಸಲ್ಲಿಸಿರುವ ರಿಟ್‌ ಅರ್ಜಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

 

 

ಸಾರ್ವಜನಿಕ ಕಚೇರಿಯಿಂದ ದುರುಪಯೋಗಪಡಿಸಿಕೊಳ್ಳುವ ಮೂಲಕ ಸಾರ್ವಜನಿಕ ಉದ್ದೇಶವನ್ನು ಸೋಲಿಸುತ್ತದೆ. ಆದ್ದರಿಂದ ಇದು ಕೇಂದ್ರ ಏಜೆನ್ಸಿಯಿಂದ ತನಿಖೆಗೆ ಯೋಗ್ಯವಾದ ಪ್ರಕರಣವಾಗಿದ್ದು, ಅಧಿಕಾರ ಮತ್ತು ಕ್ರಮದ ಸ್ಪಷ್ಟ ದುರುಪಯೋಗಕ್ಕೆ ಜವಾಬ್ದಾರರಾಗಿರುವ ವ್ಯಕ್ತಿಗಳನ್ನು ಹೊಣೆಗಾರರನ್ನಾಗಿ ಮಾಡಬಹುದು ಮತ್ತು ಹಗರಣದ ಪ್ರಮಾಣವನ್ನು ನಿರ್ಧರಿಸಬಹುದು ಎಂದು ಅರ್ಜಿಯಲ್ಲಿ ಹೇಳಿರುವುದು ಗೊತ್ತಾಗಿದೆ.

 

ಈ ರಿಟ್‌ ಅರ್ಜಿಯಲ್ಲಿ ಕೇಂದ್ರ ಸರ್ಕಾರವನ್ನು ಮೊದಲ ಪ್ರತಿವಾದಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು 9ನೇ ಪ್ರತಿವಾದಿಯನ್ನಾಗಿಸಿದ್ದಾರೆ. 10ನೇ ಪ್ರತಿವಾದಿಯನ್ನಾಗಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಮತ್ತು ಅವರ ಭಾಮೈದುನ ಮಲ್ಲಿಕಾರ್ಜುನ ಸ್ವಾಮಿ 11ನೇ ಪ್ರತಿವಾದಿಯನ್ನಾಗಿಸಿರುವುದು ಗೊತ್ತಾಗಿದೆ.

 

 

ಇನ್ನುಳಿದಂತೆ ಎರಡನೇ ಪ್ರತಿವಾದಿಯನ್ನಾಗಿ ರಾಜ್ಯ ಸರ್ಕಾರದ ಗೃಹ ಇಲಾಖೆ, ಮೂರನೇ ಪ್ರತಿವಾದಿಯನ್ನಾಗಿ ಸಿಬಿಐನ ನಿರ್ದೇಶಕರು, ಮತ್ತು 4ನೇ ಪ್ರತಿವಾದಿಯನ್ನಾಗಿ ಸಿಬಿಐನ ಎಸ್‌ಪಿ, ಕರ್ನಾಟಕ ಲೋಕಾಯುಕ್ತ ಎಸ್‌ ಪಿ (ಮೈಸೂರು) ಐದನೇ ಪ್ರತಿವಾದಿಯನ್ನಾಗಿಸಲಾಗಿದೆ.

 

ಲೋಕಾಯುಕ್ತ ಹುದ್ದೆಗೆ ಸಿದ್ದರಾಮಯ್ಯರಿಂದಲೂ ಬಿ ಎಸ್‌ ಪಾಟೀಲ್‌ ಹೆಸರು ಶಿಫಾರಸ್ಸು; ತನಿಖೆ ಮೇಲೆ ಪ್ರಭಾವ?

‘9ನೇ ಪ್ರತಿವಾದಿ ಪ್ರಸ್ತುತ ಕರ್ನಾಟಕದ ಮುಖ್ಯಮಂತ್ರಿಯಾಗಿದ್ದಾರೆ. ಅವರು ರಾಜ್ಯ ಇಲಾಖೆಗಳ ಮೇಲೆ ವಿಶೇಷವಾಗಿ ರಾಜ್ಯ ತನಿಖಾ ಸಂಸ್ಥೆಗಳಾದ ಪೊಲೀಸ್ ಅಧಿಕಾರಿಗಳು ಮತ್ತು ಕರ್ನಾಟಕ ಲೋಕಾಯುಕ್ತ ಪೊಲೀಸರ ಮೇಲೆ ಅಪಾರ ಅಧಿಕಾರ ಮತ್ತು ಪ್ರಭಾವವನ್ನು ಹೊಂದಿದ್ದಾರೆ. ಮುಖ್ಯಮಂತ್ರಿಯ ವಿರುದ್ಧ ಮಾಡಿರುವ ಆರೋಪಗಳ ಬಗ್ಗೆ ಈ ಎರಡೂ ಸಂಸ್ಥೆಗಳು ನಡೆಸಿದ ಯಾವುದೇ ತನಿಖೆಯು ನಿಷ್ಪಕ್ಷಪಾತ ತನಿಖೆಯಾಗುವುದಿಲ್ಲ,’ ಎಂದು ಅರ್ಜಿಯಲ್ಲಿ ವಿವರಿಸಿರುವುದು ತಿಳಿದು ಬಂದಿದೆ.

 

 

9ನೇ ಪ್ರತಿವಾದಿ ರಾಜ್ಯದ ಮುಖ್ಯಸ್ಥರಾಗಿದ್ದಾರೆ. ಹೀಗಾಗಿ ನೇರವಾಗಿ ಅಥವಾ ಪರೋಕ್ಷವಾಗಿ ರಾಜ್ಯ ಆಡಳಿತದ ಮೇಲೆ ಪ್ರಭಾವ ಬೀರುತ್ತದೆ. ತನಿಖಾಧಿಕಾರಿಗಳ ಮೇಲೆ ಅಂತಹ ಪ್ರಭಾವವನ್ನು ಬೀರಿದಾಗ, ತನಿಖೆಯ ಫಲಿತಾಂಶವು ನ್ಯಾಯಯುತ ಮತ್ತು ನಿಷ್ಪಕ್ಷಪಾತ ವರದಿ/ಶೋಧನೆಯಾಗುವುದಿಲ್ಲ ಎಂಬುದು ಸ್ಪಷ್ಟ. ಮುಡಾ ನಿವೇಶನ ಹಂಚಿಕೆ ಅಕ್ರಮಗಳ ತನಿಖೆಯನ್ನು ಸರಿಯಾದ ಮತ್ತು ನ್ಯಾಯಸಮ್ಮತವಾದ ತನಿಖೆಗಾಗಿ, ಕಾಲಮಿತಿಯಲ್ಲಿ ಪೂರ್ಣಗೊಳಿಸಲು ಸ್ವತಂತ್ರ ತನಿಖೆಗೆ ಒಪ್ಪಿಸಲು ನ್ಯಾಯಾಲಯವು ನಿರ್ದೇಶನ ನೀಡಬೇಕು ಎಂದೂ ಕೋರಿರುವುದು ಗೊತ್ತಾಗಿದೆ.

 

 

ಅದೇ ರೀತಿ ಭಾರತದ ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ನ್ಯಾಯಯುತ, ತ್ವರಿತ ಮತ್ತು ಪಾರದರ್ಶಕ ತನಿಖೆ ಮತ್ತು ವಿಚಾರಣೆಯು ಮೂಲಭೂತ ಹಕ್ಕಾಗಿದೆ. ಈ ವಿಷಯವು ದೇಶದ ನಾಗರಿಕರ ಸಾಮೂಹಿಕ ಮೂಲಭೂತ ಹಕ್ಕುಗಳನ್ನು ಒಳಗೊಂಡಿರುತ್ತದೆ. ಏಕೆಂದರೆ ಆರೋಪಗಳು ರಾಜ್ಯದ ಮುಖ್ಯಮಂತ್ರಿ ಮತ್ತು ಅವರ ಕುಟುಂಬ ಸದಸ್ಯರು ಮತ್ತು ಇತರ ಸರ್ಕಾರಿ ಅಧಿಕಾರಿಗಳ ವಿರುದ್ಧವೂ ಇವೆ ಎಂದು ಸಂವಿಧಾನದ ವಿಧಿಯನ್ನು ಉಲ್ಲೇಖಿಸಿರುವುದು ತಿಳಿದು ಬಂದಿದೆ.

 

ಮಿತಿಲೇಶ್ ಕುಮಾರ್ ಸಿಂಗ್ ಮತ್ತು ಇತರರು v/s ರಾಜಸ್ಥಾನ ಸರ್ಕಾರ ಮತ್ತು ಇತರರು ಪ್ರಕರಣದಲ್ಲಿ (20156 ರ ಎಸ್‌ಸಿ 795)ನ ತೀರ್ಪಿನಲ್ಲಿ ಸಿಬಿಐ ತನಿಖೆ ಸಂಬಂಧ ಸುಪ್ರೀಂ ಕೋರ್ಟ್ ಸಂತ್ರಸ್ತರ ಸಂವೇದನಾಶೀಲತೆ ಅಥವಾ ಅವರ ಮುಂದಿನ ಸಂಬಂಧಿಗಳ ಪ್ರಾಣಹಾನಿ, ಕ್ಷುಲ್ಲಕ ಮತ್ತು ಪಕ್ಷಪಾತದ ತನಿಖೆ ಇತ್ಯಾದಿ ವಿಷಯಗಳ ಸಂವೇದನೆ ಸ್ವತಂತ್ರ ಏಜೆನ್ಸಿಯಿಂದ ಉತ್ತಮವಾಗಿದೆ ಮತ್ತು ನ್ಯಾಯಸಮ್ಮತವಲ್ಲದ ತನಿಖೆಯು ವಿಚಾರಣೆಯ ನ್ಯಾಯಸಮ್ಮತತೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಿರುವುದನ್ನೂ ಅರ್ಜಿಯಲ್ಲಿ ಸ್ನೇಹಮಯಿ ಕೃಷ್ಣ ಅವರು ಉಲ್ಲೇಖಿಸಿದ್ದಾರೆ.

 

 

ಪ್ರಸ್ತುತ ಪ್ರಕರಣದಲ್ಲಿ 9ನೇ ಪ್ರತಿವಾದಿ ಮತ್ತು ಅವರ ಕುಟುಂಬದ ಸದಸ್ಯರು ಸಾರ್ವಜನಿಕ ಕಚೇರಿಯ ದುರ್ಬಳಕೆ ಮಾಡಿಕೊಂಡಿದ್ದಾರೆ. ಇದು ಅವರ ಅಧಿಕಾರದ ಪ್ರಭಾವ ಮತ್ತು ಉನ್ನತ ಸ್ಥಾನದಲ್ಲಿರುವ ವ್ಯಕ್ತಿಗಳಿಗೆ ಒಲವು ತೋರಿದ್ದಾರೆ. ಮತ್ತು ಅಧಿಕಾರವನ್ನು ನಿರ್ದಾಕ್ಷಿಣ್ಯವಾಗಿ ದುರುಪಯೋಗಪಡಿಸಿಕೊಂಡಿದ್ದಾರೆ.

 

ಆ ಮೂಲಕ ಅವರಿಗೆ ಅನಪೇಕ್ಷಿತ ಲಾಭಕ್ಕೆ ಕಾರಣರಾಗಿದ್ದಾರೆ. ಇದರಿಂದ ಮುಡಾ ಮತ್ತು ಸರ್ಕಾರದ ಬೊಕ್ಕಸಕ್ಕೆ ಆರ್ಥಿಕ ನಷ್ಟವುಂಟಾಗಿದೆ ಎಂದು ಹೇಳಿದ್ದಾರೆ.

Hot this week

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕದಲ್ಲಿ ಡಿಸಿಎಂ ಮೇಲುಗೈ, ಜಾರಕಿಹೊಳಿ ಮೌನ; ಕೆಟ್ಟ ಪೂರ್ವ ನಿದರ್ಶನಕ್ಕೆ ನಾಂದಿ ಹಾಡಿದ ಸಿಎಂ

ಬೆಂಗಳೂರು;  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿರುವ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ...

ಕಲ್ಬುರ್ಗಿ ಡಿಸಿಸಿ ಬ್ಯಾಂಕ್‌ನಲ್ಲಿ ಬಹು ಕೋಟಿ ಅಕ್ರಮ; ತನಿಖೆಗೆ ಮುಂದಾಗದ ಸರ್ಕಾರ, ತೆವಳುತ್ತಿದೆ ಕಡತ

ಬೆಂಗಳೂರು;  ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕಕ್ಕೆ ಒತ್ತಡ; ವಿವಾದಕ್ಕೆ ದಾರಿಯಾದ ಡಿಸಿಎಂ ಟಿಪ್ಪಣಿ, ನಿಯಮ ಉಲ್ಲಂಘನೆ?

ಬೆಂಗಳೂರು; ಬಿಬಿಎಂಪಿ ವೃಂದಕ್ಕೆ ಸೇರಿರುವ ಮುಖ್ಯ ಇಂಜಿನಿಯರ್  ಪ್ರವೀಣ್ ಲಿಂಗಯ್ಯ ಅವರನ್ನು...

ಆಧಾರ್ ಕಾರ್ಡ್‌ಗಿಂತಲೂ ಶಕ್ತಿ ಸ್ಮಾರ್ಟ್‌ ದುಬಾರಿ, ಎಸ್‌ಪಿವಿ ರಚನೆಯಾದರೂ ಸಿಗದ ಕಾರ್ಡ್‌; 185 ಕೋಟಿ ವೆಚ್ಚ ಭರಿಸುವವರಾರು?

ಬೆಂಗಳೂರು; ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ  ಸೌಲಭ್ಯ ಕಲ್ಪಿಸುವ 'ಶಕ್ತಿ'...

Topics

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕದಲ್ಲಿ ಡಿಸಿಎಂ ಮೇಲುಗೈ, ಜಾರಕಿಹೊಳಿ ಮೌನ; ಕೆಟ್ಟ ಪೂರ್ವ ನಿದರ್ಶನಕ್ಕೆ ನಾಂದಿ ಹಾಡಿದ ಸಿಎಂ

ಬೆಂಗಳೂರು;  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿರುವ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ...

ಕಲ್ಬುರ್ಗಿ ಡಿಸಿಸಿ ಬ್ಯಾಂಕ್‌ನಲ್ಲಿ ಬಹು ಕೋಟಿ ಅಕ್ರಮ; ತನಿಖೆಗೆ ಮುಂದಾಗದ ಸರ್ಕಾರ, ತೆವಳುತ್ತಿದೆ ಕಡತ

ಬೆಂಗಳೂರು;  ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಗಳ...

ಬಿಡಿಎ ಇಂಜಿನಿಯರ್ ಮೆಂಬರ್ ಹುದ್ದೆಗೆ ಪ್ರವೀಣ್‌ ಲಿಂಗಯ್ಯ ನೇಮಕಕ್ಕೆ ಒತ್ತಡ; ವಿವಾದಕ್ಕೆ ದಾರಿಯಾದ ಡಿಸಿಎಂ ಟಿಪ್ಪಣಿ, ನಿಯಮ ಉಲ್ಲಂಘನೆ?

ಬೆಂಗಳೂರು; ಬಿಬಿಎಂಪಿ ವೃಂದಕ್ಕೆ ಸೇರಿರುವ ಮುಖ್ಯ ಇಂಜಿನಿಯರ್  ಪ್ರವೀಣ್ ಲಿಂಗಯ್ಯ ಅವರನ್ನು...

ಆಧಾರ್ ಕಾರ್ಡ್‌ಗಿಂತಲೂ ಶಕ್ತಿ ಸ್ಮಾರ್ಟ್‌ ದುಬಾರಿ, ಎಸ್‌ಪಿವಿ ರಚನೆಯಾದರೂ ಸಿಗದ ಕಾರ್ಡ್‌; 185 ಕೋಟಿ ವೆಚ್ಚ ಭರಿಸುವವರಾರು?

ಬೆಂಗಳೂರು; ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ  ಸೌಲಭ್ಯ ಕಲ್ಪಿಸುವ 'ಶಕ್ತಿ'...

ಟೆಲಿಕಾಂ ಕಂಪನಿಯಿಂದ ವಿಧಾನಸೌಧ ಟರೇಸ್‌ ಅನಧಿಕೃತ ಬಳಕೆ; ವಸೂಲಾಗದ ನೆಲಬಾಡಿಗೆ, ನಿಯಮ ಉಲ್ಲಂಘಿಸಿದ್ದರೂ ಕ್ರಮವಿಲ್ಲ

ಬೆಂಗಳೂರು; ಟೆಲಿಕಾಂ ಮೂಲಸೌಕರ್ಯ ಕಂಪನಿಗಳಲ್ಲಿ ಖ್ಯಾತಿ ಹೊಂದಿರುವ ಆಂಧ್ರ ಪ್ರದೇಶ ಮೂಲದ...

ನೀಟ್‌, ಕೆ-ಸಿಇಟಿ ತರಬೇತಿ; ಅಲ್ಪಸಂಖ್ಯಾತರ ಇಲಾಖೆಯಲ್ಲಿ ಟೆಂಡರ್ ನಿಯಮ ಉಲ್ಲಂಘನೆ, ನಿಯಮಬಾಹಿರ ಚಟುವಟಿಕೆ, ಸರ್ಕಾರಕ್ಕೆ ಲೀಗಲ್ ನೋಟೀಸ್‌

ಬೆಂಗಳೂರು; ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ವಸತಿ ಕಾಲೇಜು ವಿದ್ಯಾರ್ಥಿಗಳಿಗೆ ಆಫ್‌ಲೈನ್ ಮಾದರಿಯಲ್ಲಿ...

ವರ್ಗಾವಣೆ ರದ್ದುಗೊಳಿಸಲು ತಲಾ 20 ಲಕ್ಷಕ್ಕೆ ಬೇಡಿಕೆ ಆರೋಪ; ಟೆಂಡರ್ ಕಮಿಷನ್ ಆಪಾದನೆ ಬೆನ್ನಲ್ಲೇ ಕರೀಗೌಡರ ವಿರುದ್ಧ ದೂರು

ಬೆಂಗಳೂರು; ಒಂದೆಡೆ ಮಂಜೂರಾಗಿರುವ ಹುದ್ದೆಗಳನ್ನು  ಭರ್ತಿ ಮಾಡುತ್ತಿಲ್ಲ, ಶೇ. 40ರಷ್ಟು ಹುದ್ದೆಗಳು...

Related Articles

Popular Categories

error: Content is protected !!