Wednesday | September 16, 2026 |

ಹೆಚ್‌ಡಿಕೆ, ಜೊಲ್ಲೆ, ನಿರಾಣಿ, ರೆಡ್ಡಿ ವಿರುದ್ಧ ವಿಚಾರಣೆ; ಆರ್‍‌ಟಿಐ ಅರ್ಜಿ ತಿರಸ್ಕೃತ, ರಾಜ್ಯಪಾಲರಿಂದ ತಾರತಮ್ಯ?

ಬೆಂಗಳೂರು;  ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ, ಮುರುಗೇಶ್‌ ಆರ್‍‌ ನಿರಾಣಿ, ಶಶಿಕಲಾ ಜೊಲ್ಲೆ, ಶಾಸಕ ಜನಾರ್ದನ ರೆಡ್ಡಿ ಅವರ ವಿರುದ್ಧ ವಿಚಾರಣೆಗೆ ಸಂಬಂಧಿಸಿದ ಯಾವುದೇ ಕಡತವೂ   ಕಚೇರಿಯಲ್ಲಿಲ್ಲ ಎಂದು ಕೇವಲ ಒಂಬತ್ತೇ ಒಂಬತ್ತು ದಿನದಲ್ಲಿ  ಆರ್‍‌ಟಿಐ ಅಡಿಯಲ್ಲಿ ಟಿ ಜೆ ಅಬ್ರಾಹಂ ಅವರಿಗೆ  ಮಾಹಿತಿ ಒದಗಿಸಿದ್ದ ರಾಜ್ಯಪಾಲರ ಕಚೇರಿಯು ಇದೀಗ ಇದೇ ಮಾಹಿತಿ ಕೋರಿ ಮತ್ತೊಬ್ಬ ಸಾಮಾಜಿಕ ಹೋರಾಟಗಾರ  ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದೆ.

 

ಥಾವರ್‍‌ ಚಂದ್‌ ಗೆಹ್ಲೋಟ್‌ ಅವರು ಕರ್ನಾಟಕ ರಾಜ್ಯದ ರಾಜ್ಯಪಾಲರಾಗಿ ಅಧಿಕಾರ ವಹಿಸಿಕೊಂಡ ದಿನದಿಂದ ಇಲ್ಲಿಯವರೆಗೆ ಎಚ್‌ ಡಿ ಕುಮಾರಸ್ವಾಮಿ, ಶಶಿಕಲಾ ಜೊಲ್ಲೆ, ಬಿ ಎಸ್‌ ಯಡಿಯೂರಪ್ಪ, ಮುರುಗೇಶ್‌ ನಿರಾಣಿ ಅವರ ವಿರುದ್ಧದ ಭ್ರಷ್ಟಾಚಾರದ ಆರೋಪಗಳ ವಿಷಯದಲ್ಲಿ ರಾಜ್ಯಪಾಲರ ಮುಂದೆ ವಿಚಾರಣೆಗೆ ಅನುಮತಿ ಕೋರಿ ರಾಜ್ಯದ ಸಕ್ಷಮ ಪ್ರಾಧಿಕಾರ, ದೂರುದಾರರು, ನಾಗರೀಕರು, ಲೋಕಾಯುಕ್ತರು, ಸಿಐಡಿ, ಸಿಬಿಐ ಮತ್ತು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಕಚೇರಿಯಿಂದ ಸಲ್ಲಿಸಿದ ಅರ್ಜಿಯ ಪ್ರತಿಗಳನ್ನು ನೀಡುವುದು ಮತ್ತು ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿದ ಪಪತ್ರದ ಪ್ರತಿಯನ್ನು ನೀಡಬೇಕು ಎಂದು ಹೆಚ್‌ ಎಂ ವೆಂಕಟೇಶ್‌ ಅವರು ಕೋರಿದ್ದರು.

 

 

 

ಆದರೆ ರಾಜ್ಯಪಾಲರ ಕಚೇರಿಯು    8(1) (ಹೆಚ್‌) ಅನ್ವಯ ಈ ಅರ್ಜಿಯನ್ನು  ನಿರಾಕರಿಸಿದೆ. ಈ ವಿಚಾರದಲ್ಲಿ  ರಾಜ್ಯಪಾಲರ ಇಬ್ಬಂದಿ ನೀತಿ ಅನುಸರಿಸಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ.

 

ರಾಜಭವನ ನೀಡಿದ ಉತ್ತರದಲ್ಲೇನಿದೆ?

 

ಮಾಹಿತಿ ಹಕ್ಕು ಅಧಿನಿಯಮ 2005ರ ನಿಯಮ 8(1) (ಹೆಚ್‌) ಅನ್ವಯ ತನಿಖಾ ಕ್ರಮಕ್ಕೆ ಅಥವಾ ಪ್ರಾಸಿಕ್ಯೂಷನ್‌ ಕಾರ್ಯಕ್ಕೆ ಅಡಚಣೆಯನ್ನುಂಟು ಮಾಡುವಂತಹ ಯಾವುದೇ ಮಾಹಿತಿಯನ್ನು ಬಹಿರಂಗಪಡಿಸುವುದರಿಂದ ವಿನಾಯಿತಿ ಇರುತ್ತದೆ. ಆದ್ದರಿಂದ ತಾವು ಕೋರಿರುವ ಮಾಹಿತಿಯು ಮಾಹಿತಿ ಹಕ್ಕು ಅಧಿನಿಯಮ 2005ರ ನಿಯಮ 2(ಎಫ್‌) ಅನ್ವಯ ಮಾಹಿತಿ ಪರಿಭಾಷೆಯ ವ್ಯಾಪ್ತಿಗೆ ಒಳಪಡುವುದಿಲ್ಲವಾದ್ದಂರಿದ ನ ಇಮ್ಮ ಮನವಿಯನ್ನು ಪರಿಗಣಿಸಲು ಸಾಧ್ಯವಿರುವುದಿಲ್ಲ ಎಂದು ತಿರಸ್ಕರಿಸಿದೆ.

 

‘ನಾನು ಕೇಳಿರುವ ಮಾಹಿತಿಯು ಅಬ್ರಾಹಂ ಅವರು  ಮಾಹಿತಿಯು ಒಂದೇ ರೀತಿಯಲ್ಲಿದೆ. ಆದರೆ   ಅಬ್ರಾಹಂ  ಕೇಳಿದ್ದ  ಮಾಹಿತಿಯನ್ನು ರಾಜ್ಯಪಾಲರ ಕಚೇರಿಯ ಸಾರ್ವಜನಿಕ ಮಾಹಿತಿ ಅಧಿಕಾರಿ ಒಂಬತ್ತು ದಿನಗಳ ಒಳಗೆ ಅವರಿಗೆ ಸಂಪೂರ್ಣ ಮಾಹಿತಿಯನ್ನು ನೀಡಿದೆ.   ಆದರೆ ನನ್ನ ಅರ್ಜಿಗೆ ತನಿಖೆ ನಡೆಸಲು ಅಥವಾ ಅಪರಾಧಿಗಳ ದಸ್ತಗಿರಿಗೆ ಅಥವಾ prosecution ಕಾರ್ಯಕ್ಕೆ ಅಡಚಣೆ ಉಂಟಾಗುತ್ತದೆ.  ಮಾಹಿತಿಗಳನ್ನು ಒದಗಿಸಲು ಸಾಧ್ಯವಿಲ್ಲ ಎಂದು ಹೇಳಿರುವುದು ರಾಜ್ಯಪಾಲರ ಕಚೇರಿಯ ಸಾರ್ವಜನಿಕ ಮಾಹಿತಿ ಅಧಿಕಾರಿಯ ತಾರತಮ್ಯ ಧೋರಣೆ ಮೇಲ್ನೋಟಕ್ಕೆ ಕಂಡು ಬರುತ್ತಿದೆ,’ ಎನ್ನುತ್ತಾರೆ ಹೆಚ್‌ ಎಂ ವೆಂಕಟೇಶ್‌.
ಕರ್ನಾಟಕ ರಾಜಕೀಯ ವಿವಿಧ ಪಕ್ಷಗಳ ನಾಯಕರುಗಳ ಹಗರಣಗಳಿಗೆ ರಾಜ್ಯಪಾಲರ ಕಚೇರಿಯ ಸಾರ್ವಜನಿಕ ಮಾಹಿತಿ ಅಧಿಕಾರಿಯು ನ್ಯಾಯ ಸಮ್ಮತವಾಗಿ ನನಗೆ ಮಾಹಿತಿ ಕೊಡಬೇಕಾಗಿತ್ತು.  ಅವರು ಕೂಡ  ಏಕ ಪಕ್ಷಿಯವಾಗಿ, ತಾರತಮ್ಯ ಧೋರಣೆಯಿಂದ ವರ್ತಿಸುತ್ತಿರುವುದನ್ನು ನೋಡಿದರೆ ರಾಜ್ಯಪಾಲರ ಕಚೇರಿಯು ರಾಜಕೀಯ ಪಕ್ಷದ ಕಚೇರಿ ಅಂತ ಆಗಿದೆಯೇ ಎಂದು ವೆಂಕಟೇಶ್‌ ಅವರು ಅನುಮಾನ ವ್ಯಕ್ತಪಡಿಸುತ್ತಾರೆ.

 

ವಿವಿಧ ಸಕ್ಷಮ ಪ್ರಾಧಿಕಾರಗಳು ವಿಚಾರಣೆಗೆ ಅನುಮತಿ ಕೋರಿರುವ ಪ್ರಸ್ತಾವನೆಗಳ ಬಾಕಿ ಇರುವ ಕುರಿತಂತೆ  ರಾಜ್ಯಪಾಲರ ಕಚೇರಿಗೆ ಮಾಹಿತಿ ಹಕ್ಕಿನ ಅಡಿಯಲ್ಲಿ ಅರ್ಜಿ ಸಲ್ಲಿಸಿದ್ದರು. ವಿಶೇಷವೆಂದರೇ ಅಬ್ರಾಹಂ ಅವರು ಅರ್ಜಿ ಸಲ್ಲಿಸಿದ್ದ 9 ದಿನದೊಳಗೇ ರಾಜಭವನ ಕಚೇರಿಯು ಮಾಹಿತಿ ಒದಗಿಸಿತ್ತು.

 

 

ಹೆಚ್‌ ಡಿ ಕುಮಾರಸ್ವಾಮಿ, ಶಶಿಕಲಾ ಜೊಲ್ಲೆ, ಜನಾರ್ದನ ರೆಡ್ಡಿ, ಮುರುಗೇಶ್‌ ನಿರಾಣಿ ಅವರ ವಿರುದ್ಧ ವಿಚಾರಣೆಗೆ ಅನುಮತಿ ಕೋರಿರುವ ಯಾವ ಕಡತವೂ ರಾಜ್ಯಪಾಲರ ಕಚೇರಿಯಲ್ಲಿ ಇಲ್ಲ ಎಂದು ಮಾಹಿತಿ ನೀಡಿತ್ತು.

 

ಅಬ್ರಾಹಂ ಅವರಿಗೆ  ರಾಜಭವನ ಕಚೇರಿ ನೀಡಿದ್ದ  ಮಾಹಿತಿಯಲ್ಲೇನಿತ್ತು?

 

ಮುರುಗೇಶ್‌ ನಿರಾಣಿ ಅವರ ವಿರುದ್ಧ ತನಿಖೆಗೆ ಸಂಬಂಧಿಸಿದಂತೆ ರಾಜಭವನ ಕಚೇರಿಯು 2024ರ ಫೆ.26ರಂದು ಸ್ವೀಕೃತವಾಗಿದೆ. ಮತ್ತು ಇದನ್ನು 2024ರ ಮಾರ್ಚ್‌ 26ರಂದು ಸಕ್ಷಮ ಪ್ರಾಧಿಕಾರಕ್ಕೆ ಕಡತವನ್ನು ಹಿಂದಿರುಗಿಸಿದೆ. ಇದೇ ಪ್ರಕರಣದಲ್ಲಿ ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿ ವಿಚಾರಣೆ (ಡಬ್ಲ್ಯೂ ಪಿ 22356/2024) ನಡೆಯುತ್ತಿದೆ. 2024ರ ಆಗಸ್ಟ್‌ 19ರಂದು ವಿಚಾರಣೆ ನಡೆದಿದೆ. ಹೀಗಾಗಿ ಈ ಸಂಬಂಧಿತ ಕಡತವು ರಾಜ್ಯಪಾಲರ ಕಚೇರಿಯಲ್ಲಿಲ್ಲ ಎಂದು ಉತ್ತರ ನೀಡಿತ್ತು.

 

ಹೆಚ್‌ಡಿಕೆ ಸೇರಿ ಮತ್ತಿತರ ವಿರುದ್ಧ ವಿಚಾರಣೆ ಪ್ರಕರಣ; ಕಡತ ಲಭ್ಯವಿಲ್ಲವೆಂದ ರಾಜಭವನ, ಸುಳ್ಳು ಹೇಳಿತೇ ಕಾಂಗ್ರೆಸ್‌?

ಹೆಚ್‌ ಡಿ ಕುಮಾರಸ್ವಾಮಿ ಅವರ ವಿರುದ್ಧ ವಿಚಾರಣೆಗೆ ಅನುಮತಿ ನೀಡುವ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ಕಚೇರಿಯಲ್ಲಿ ಕಡತವನ್ನು 2023ರ ನವೆಂಬರ್‍‌ 21ರಂದು ಸ್ವೀಕೃತವಾಗಿದ್ದ ಕಡತವನ್ನು ಸಕ್ಷಮ ಪ್ರಾಧಿಕಾರಕ್ಕೆ 2024ರ ಜುಲೈ 29ಕ್ಕೆ ಹಿಂದಿರುಗಿಸಲಾಗಿದೆ. ಈ ಸಂಬಂಧ ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿ ( ಸಂಖ್ಯೆ 22356/2024) ಸಲ್ಲಿಕೆಯಾಗಿದೆ. ಹೀಗಾಗಿ ಈ ಪ್ರಕರಣವು ರಾಜ್ಯಪಾಲರ ಕಚೇರಿಯಲ್ಲಿ ಪೆಂಡಿಂಗ್ ಇರುವುದಿಲ್ಲ ಮತ್ತು ಈ ಸಂಬಂಧಿತ ಕಡತವೂ ರಾಜಭವನದ ಕಚೇರಿಯಲ್ಲಿ ಲಭ್ಯವಿಲ್ಲ ಎಂದು ಮಾಹಿತಿ ನೀಡಿತ್ತು.

 

ಜನಾರ್ದನ ರೆಡ್ಡಿ ಅವರ ಪ್ರಕರಣದಲ್ಲಿಯೂ 2024ರ ಮೇ 13ರಂದು ಕಡತವನ್ನು ರಾಜಭವನ ಕಚೇರಿಯು ಸ್ವೀಕರಿಸಿತ್ತು. ಈ ಕಡತವನ್ನು ಸಕ್ಷಮ ಪ್ರಾಧಿಕಾರದ ಕೋರಿಕೆ ಮೇರೆಗೆ 2024ರ ಜೂನ್‌ 27ರಂದು ಹಿಂದಿರುಗಿಸಲಾಗಿದೆ. ಮತ್ತು ರಿಟ್‌ ಅರ್ಜಿ (22356/2024)ಯು ಹೈಕೋರ್ಟ್‌ನಲ್ಲಿ 2024ರ ಆಗಸ್ಟ್‌ 19ರಂದು ಪ್ರಸ್ತುತಪಡಿಸಲಾಗಿದೆ. ಹೀಗಾಗಿ ಈ ಪ್ರಕರಣಕ್ಕೆ ಸಂಬಂಧಿಸಿದ ಕಡತವು ರಾಜಭವನ ಕಚೇರಿಯಲ್ಲಿಲ್ಲ ಎಂದು ಉತ್ತರಿಸಿತ್ತು.

 

1988ರ ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 17ಎ ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಸೆಕ್ಷನ್ 218ರ ಅಡಿಯಲ್ಲಿ ಸಿಎಂ ವಿರುದ್ಧ ಮೂವರು ಸಾಮಾಜಿಕ ಕಾರ್ಯಕರ್ತರು ಸಲ್ಲಿಸಿರುವ ದೂರುಗಳಲ್ಲಿ ಉಲ್ಲೇಖಿಸಿರುವ ಅಪರಾಧ ಕುರಿತ ತನಿಖೆ ನಡೆಸಿ, ಕಾನೂನು ಕ್ರಮ ಜರುಗಿಸಲು ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರು ಆಗಸ್ಟ್ 16ರಂದು ಅನುಮತಿ ನೀಡಿದ್ದನ್ನು ಸ್ಮರಿಸಬಹುದು.

Hot this week

ಅನಂತ್‌ ನಾಗ್‌ ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಗೌರವ; 8 ವರ್ಷದ ಹಿಂದಿನ ವಿಸ್ತೃತ ಸಂದರ್ಶನ

ಬೆಂಗಳೂರು;  ಕನ್ನಡ ಚಿತ್ರರಂಗದ  ಹಿರಿಯ ನಟ ಅನಂತ್ ನಾಗ್ ಅವರಿಗೆ 2024ರ...

ಭೂಗತ ಸುರಂಗ ಮಾರ್ಗ; ರಿಯಾಯಿತಿ ಅವಧಿಯಲ್ಲೇ ಗರಿಷ್ಠ ಟೋಲ್‌ ಸಂಗ್ರಹಣೆ, ದರ ಪರಿಷ್ಕರಣೆಯ ಹಿಂದಿನ ರಹಸ್ಯ ಬಯಲು

ಬೆಂಗಳೂರು; ಭೂಗತ ಸುರಂಗ ಮಾರ್ಗದಲ್ಲಿ ರಿಯಾಯಿತಿ ಅವಧಿಯಲ್ಲಿ ಗರಿಷ್ಠ ಟೋಲ್‌ ಸಂಗ್ರಹಣೆ...

ಕೋವಿಡ್ ವೆಚ್ಚದಲ್ಲಿ ಅಕ್ರಮ ಆರೋಪ; ಐಎಎಸ್‌ ಗೌರವ್ ಗುಪ್ತಾ, ರಾಜೇಂದ್ರ ಚೋಳನ್ ಆರೋಪ ಮುಕ್ತ, ಕುನ್ಹಾ ವರದಿಗಿಲ್ಲ ಕಿಮ್ಮತ್ತು

ಬೆಂಗಳೂರು;  ಕೋವಿಡ್‌ 19ರ ಸಂದರ್ಭದಲ್ಲಿ ಸಕ್ಷಮ ಪ್ರಾಧಿಕಾರದ ಅಧಿಕಾರಿಗಳಿಂದ ಅನುಮೋದನೆ ಇಲ್ಲದೆಯೇ,...

ಶಿವಮೊಗ್ಗ ಜಿಲ್ಲೆಯಿಂದ ಅತೀ ಹೆಚ್ಚು, ಕಲ್ಬುರ್ಗಿ ಜಿಲ್ಲೆಯಿಂದ ಅತೀ ಕಡಿಮೆ ಅನುದಾನಕ್ಕೆ ಬೇಡಿಕೆ; ಜಿಲ್ಲಾಡಳಿತ ನಿಷ್ಕ್ರೀಯವಾಯಿತೇ?

ಬೆಂಗಳೂರು;  ಜಿಲ್ಲಾ ವಾರ್ಷಿಕ ಕರಡು ಅಭಿವೃದ್ಧಿಯ ಅನುದಾನ ಬೇಡಿಕೆ ಮುಂದಿರಿಸಿರುವ ಇಲಾಖೆಗಳ ...
Please Scan to make Your Contribution

Topics

ಅನಂತ್‌ ನಾಗ್‌ ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಗೌರವ; 8 ವರ್ಷದ ಹಿಂದಿನ ವಿಸ್ತೃತ ಸಂದರ್ಶನ

ಬೆಂಗಳೂರು;  ಕನ್ನಡ ಚಿತ್ರರಂಗದ  ಹಿರಿಯ ನಟ ಅನಂತ್ ನಾಗ್ ಅವರಿಗೆ 2024ರ...

ಭೂಗತ ಸುರಂಗ ಮಾರ್ಗ; ರಿಯಾಯಿತಿ ಅವಧಿಯಲ್ಲೇ ಗರಿಷ್ಠ ಟೋಲ್‌ ಸಂಗ್ರಹಣೆ, ದರ ಪರಿಷ್ಕರಣೆಯ ಹಿಂದಿನ ರಹಸ್ಯ ಬಯಲು

ಬೆಂಗಳೂರು; ಭೂಗತ ಸುರಂಗ ಮಾರ್ಗದಲ್ಲಿ ರಿಯಾಯಿತಿ ಅವಧಿಯಲ್ಲಿ ಗರಿಷ್ಠ ಟೋಲ್‌ ಸಂಗ್ರಹಣೆ...

ಕೋವಿಡ್ ವೆಚ್ಚದಲ್ಲಿ ಅಕ್ರಮ ಆರೋಪ; ಐಎಎಸ್‌ ಗೌರವ್ ಗುಪ್ತಾ, ರಾಜೇಂದ್ರ ಚೋಳನ್ ಆರೋಪ ಮುಕ್ತ, ಕುನ್ಹಾ ವರದಿಗಿಲ್ಲ ಕಿಮ್ಮತ್ತು

ಬೆಂಗಳೂರು;  ಕೋವಿಡ್‌ 19ರ ಸಂದರ್ಭದಲ್ಲಿ ಸಕ್ಷಮ ಪ್ರಾಧಿಕಾರದ ಅಧಿಕಾರಿಗಳಿಂದ ಅನುಮೋದನೆ ಇಲ್ಲದೆಯೇ,...

ಶಿವಮೊಗ್ಗ ಜಿಲ್ಲೆಯಿಂದ ಅತೀ ಹೆಚ್ಚು, ಕಲ್ಬುರ್ಗಿ ಜಿಲ್ಲೆಯಿಂದ ಅತೀ ಕಡಿಮೆ ಅನುದಾನಕ್ಕೆ ಬೇಡಿಕೆ; ಜಿಲ್ಲಾಡಳಿತ ನಿಷ್ಕ್ರೀಯವಾಯಿತೇ?

ಬೆಂಗಳೂರು;  ಜಿಲ್ಲಾ ವಾರ್ಷಿಕ ಕರಡು ಅಭಿವೃದ್ಧಿಯ ಅನುದಾನ ಬೇಡಿಕೆ ಮುಂದಿರಿಸಿರುವ ಇಲಾಖೆಗಳ ...

ಪೆರಿಫೆರಲ್ ರಿಂಗ್‌ ರೋಡ್‌- 2; 4,500 ಕೋಟಿ ಭೂ ಪರಿಹಾರ, 15,450 ಕೋಟಿ ಅಂದಾಜು ವೆಚ್ಚ, ಸರ್ಕಾರಕ್ಕೆ ಪರಿಷ್ಕೃತ ಯೋಜನೆ ಸಲ್ಲಿಕೆ

ಬೆಂಗಳೂರು; ರೈತರು ಮತ್ತು  ಸ್ಥಳೀಯರ ವಿರೋಧದ ನಡುವೆಯೂ ಫೆರಿಫೆರಲ್ ರಿಂಗ್‌ ರಸ್ತೆ (ಭಾಗ...

Related Articles

Popular Categories

error: Content is protected !!