Thursday | May 7, 2026 |

ನೇಮಕಾತಿ ಅಕ್ರಮ; ಸಿದ್ದರಾಮಯ್ಯರ ಆದೇಶ ಬದಿಗೊತ್ತಿ ಸಿಬಿಐ ತನಿಖೆಯೇ ಬೇಡವೆಂದಿದ್ದ ಹೆಚ್‌ಡಿಕೆ

ಬೆಂಗಳೂರು; ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್‌ ಬ್ಯಾಂಕ್‌ನಲ್ಲಿ 102 ಸಿಬ್ಬಂದಿಗಳ ನೇರ ನೇಮಕಾತಿ ಪ್ರಕರಣಗಳಲ್ಲಿ ನಡೆದಿದೆ ಎನ್ನಲಾಗಿರುವ ಅಕ್ರಮಗಳ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂದು ಅಂದು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಸೂಚಿಸಿದ್ದರೂ ನಂತರ ಮುಖ್ಯಮಂತ್ರಿಯಾಗಿ ಅಧಿಕಾರ ಹಿಡಿದಿದ್ದ ಹೆಚ್‌ ಡಿ ಕುಮಾರಸ್ವಾಮಿ ಅವರು ಇದನ್ನು ತಿರಸ್ಕರಿಸಿದ್ದರು.

 

ಸಿದ್ದರಾಮಯ್ಯ ಮತ್ತು ಹೆಚ್‌ ಡಿ ಕುಮಾರಸ್ವಾಮಿ ಅವರ ಮಧ್ಯೆ ನಡೆದಿರುವ ಮಾತಿನ ಚಕಮಕಿಯ ನಡುವೆಯೇ ಅಪೆಕ್ಸ್‌ ಬ್ಯಾಂಕ್‌ನಲ್ಲಿನ ನೇರ ನೇಮಕಾತಿ ಕುರಿತಾದ ಸಿಬಿಐ ತನಿಖೆಗೆ ಸಂಬಂಧಿಸಿದ ಟಿಪ್ಪಣಿ ಹಾಳೆಯೊಂದು ಮುನ್ನೆಲೆಗೆ ಬಂದಿದೆ. ಟಿಪ್ಪಣಿ ಹಾಳೆಯ (ಸಿಇ 44 ಸಿಎಲ್‌ಎಲ್‌ 2013) ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಮುಡಾ, ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ  ನಡೆದಿದೆ ಎನ್ನಲಾಗಿರುವ ವಿವಿಧ ರೀತಿಯ ಅಕ್ರಮಗಳ ಬಗ್ಗೆ  ಸಿಬಿಐ ತನಿಖೆ ನೀಡುವ ವಿಚಾರದಲ್ಲಿ ಜಟಾಪಟಿ ನಡೆಯುತ್ತಿರುವ ಹೊತ್ತಿನಲ್ಲೇ ಅಪೆಕ್ಸ್‌ ಬ್ಯಾಂಕ್‌ ತನಿಖೆ ವಿಚಾರದಲ್ಲಿ ಸಿದ್ದರಾಮಯ್ಯ ಮತ್ತು ಹೆಚ್‌ ಡಿ ಕುಮಾರಸ್ವಾಮಿ ಅವರು ವ್ಯಕ್ತಪಡಿಸಿದ್ದ ಅಭಿಪ್ರಾಯಗಳ ಟಿಪ್ಪಣಿ ಹಾಳೆಯೂ ಮುನ್ನೆಲೆಗೆ ಬಂದಿದೆ.

 

ಟಿಪ್ಪಣಿಯಲ್ಲೇನಿದೆ?

 

2012-13ನೇ ಸಾಲಿನಲ್ಲಿ 102 ಸಿಬ್ಬಂದಿಗಳ ನೇರ ನೇಮಕಾತಿ ಮುಖೇನ ನೇಮಕ ಮಾಡುವ ಪ್ರಕ್ರಿಯೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ತನಿಖೆ ನಡೆಸುವ ಬಗ್ಗೆ ಈ ಕಡತದಲ್ಲಿ ಪ್ರಸ್ತಾಪಿಸಲಾಗಿರುವುದನ್ನು ಗಮನಿಸಲಾಗಿದೆ.

 

ಉಲ್ಲೇಖಿತ ಭ್ರಷ್ಟಾಚಾರ ಪ್ರಕರಣವನ್ನು ತನಿಖೆಗಾಗಿ ಲೋಕಾಯುಕ್ತ ಸಂಸ್ಥೆಗೆ ವಹಿಸಿಕೊಡುವುದಾಗಿ ಅಂದಿನ ಸಹಕಾರ ಸಚಿವರು ವಿಧಾನಸಭೆಗೆ ಉತ್ತರ ನೀಡಿದ್ದ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆ ನಡೆಸುವಂತೆ ಲೋಕಾಯುಕ್ತರನ್ನು ಕೋರಲಾಗಿತ್ತು. ಆದರೆ ವಸ್ತುಸ್ಥಿತಿ ವಿಷಯವು ಲೋಕಾಯುಕ್ತ ಸಂಸ್ಥೆಯ ಅಧಿಕಾರ ವ್ಯಾಪ್ತಿಗೆ ಒಳಪಟ್ಟಿಲ್ಲ ಎಂಬ ಕಾರಣಕ್ಕಾಗಿ ಲೋಕಾಯುಕ್ತ ಸಂಸ್ಥೆಯು ಪ್ರಕರಣದ ತನಿಖೆ ನಡೆಸಿಲ್ಲ ಎಂಬುದನ್ನು ಕೂಡ ಗಮನಿಸಲಾಗಿದೆ.

 

ಮುಂದುವರೆದು ಉಲ್ಲೇಖಿತ ಪ್ರಕರಣವನ್ನು ಸಿಐಡಿ/ಸಿಒಡಿಗೆ ವಹಿಸಬಹುದೆಂಬುದಾಗಿ ಕಾನೂನು ಇಲಾಖೆಯು ಕೂಡ ಈ ಹಿಂದೆ ಅಭಿಪ್ರಾಯ ಪಟ್ಟಿದೆ ಎಂಬುದು ಕಡತದಿಂದ ಕಂಡು ಬಂದಿದೆ. ಆದರೆ ಅಂದಿನ ಮುಖ್ಯಮಂತ್ರಿಯವರು ಕಂಡಿಕೆ (89) ಅನ್ವಯ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆದೇಶಿಸಿರುವುದು ಕಂಡು ಬಂದಿದೆ.

 

 

ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್‌ ಬ್ಯಾಂಕ್‌ನಲ್ಲಿ 2012-13ನೇ ಸಾಲಿನಲ್ಲಿ 102 ಸಿಬ್ಬಂದಿಗಳನ್ನು ನೇರ ನೇಮಕಾತಿ ಮುಖೇನ ನೇಮಕ ಮಾಡುವ ಪ್ರಕ್ರಿಯೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ದೂರಿಗೆ ಸಂಬಂಧಿಸಿದಂತೆ ಇದುವರೆಗೂ ಯಾವುದೇ ಅಧಿಕಾರಿ, ಸಂಸ್ಥೆಯಿಂದ ಪ್ರಾಥಮಿಕ ತನಿಖೆಯನ್ನು ಕೂಡ ಕೈಗೊಂಡಿಲ್ಲ ಎಂಬುದನ್ನು ಗಮನಿಸಲಾಗಿದೆ ಎಂದು ಟಿಪ್ಪಣಿ ಹಾಳೆಯಲ್ಲಿ ವಿವರಿಸಲಾಗಿದೆ.

 

ವಸ್ತು ಸ್ಥಿತಿ ಹೀಗಿರುವಲ್ಲಿ ಉಲ್ಲೇಖಿತ ಭ್ರಷ್ಟಾಚಾರ ಪ್ರಕರಣವನ್ನು ನೇರವಾಗಿ ಸಿಬಿಐ ಸಂಸ್ಥೆಗೆ ತನಿಖೆಗಾಗಿ ವಹಿಸುವುದಕ್ಕಾಗಲೀ ಸಿಬಿಐ ಸಂಸ್ಥೆಯಿಂದ ತನಿಖೆಗೆ ಒಳಪಡಿಸಲು ಮೇಲ್ನೋಟಕ್ಕೆ ಸಾಕಷ್ಟು ಕಾರಣಗಳಿವೆಯೇ ಎಂಬುದನ್ನು ಪರಿಶೀಲಿಸುವುದು ಸೂಕ್ತವೆನಿಸಿದೆ.

 

ಆದ್ದರಿಂದ ಉಲ್ಲೇಖಿತ ಭ್ರಷ್ಟಾಚಾರದ ಪ್ರಕರಣದ ಸತ್ಯಾಸತ್ಯತೆಯನ್ನು ತಿಳಿಯುವ ಸಲುವಾಗಿ ಮೊದಲ ಹಂತದಲ್ಲಿ ಕರ್ನಾಟಕ ರಾಜ್ಯ ನ್ಯಾಯಾಲಯದ ಓರ್ವ ನಿವೃತ್ತ ನ್ಯಾಯಮೂರ್ತಿ ಅಥವಾ ನಿವೃತ್ತ ಓರ್ವ ಹಿರಿಯ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರಿಂದ ಪ್ರಾಥಮಿಕ ತನಿಖೆ ನಡೆಸಿ ಅವರು ನೀಡಬಹುದಾದ ವರದಿ ಆಧರಿಸಿ ನಂತರ ಅವಶ್ಯವೆನಿಸಿದ್ದಲ್ಲಿ ಸೂಕ್ತ ತನಿಖಾ ಸಂಸ್ಥೆಯಿಂದ ಸಮಗ್ರ ತನಿಖೆ ನಡೆಸುವುದು ಸೂಕ್ತವೆನಿಸಿದೆ ಎಂದು ಅಂದು ಮುಖ್ಯಮಂತ್ರಿಯಾಗಿದ್ದ ಹೆಚ್‌ ಡಿ ಕುಮಾರಸ್ವಾಮಿ ಅವರು ಸೂಚಿಸಿರುವುದು ಟಿಪ್ಪಣಿ ಹಾಳೆಯಿಂದ ಗೊತ್ತಾಗಿದೆ.

 

ಗುರುರಾಘವೇಂದ್ರ ಸಹಕಾರ ಬ್ಯಾಂಕ್‌ ಅಕ್ರಮ ಸಿಬಿಐ ತನಿಖೆಗೆ ಒಳಪಡಿಸಿ, ಅಪೆಕ್ಸ್‌ ಬ್ಯಾಂಕ್‌ ಹಗರಣ ಮರೆತಿತೇ?

ಹೀಗಾಗಿ ಅಂದಿನ ಮುಖ್ಯಮಂತ್ರಿ ಮಾಡಿರುವ ಆದೇಶವನ್ನು (ಖಂಡಿಕೆ (89)ರಲ್ಲಿ ಹಿಂಪಡೆದಿತ್ತು. ಉಲ್ಲೇಖಿತ ಭ್ರಷ್ಟಾಚಾರ ಪ್ರಕರಣದ ತನಿಖೆಯನ್ನು ಕರ್ನಾಟಕ ರಾಜ್ಯ ಉಚ್ಛ ನ್ಯಾಯಾಲಯದ ಓರ್ವ ನಿವೃತ್ತ ನ್ಯಾಯಮೂರ್ತಿ ಅಥವಾ ಓರ್ವ ಹಿರಿಯ ಜಿಲ್ಲಾ ನ್ಯಾಯಾಧೀಶರಿಗೆ ವಹಿಸಬೇಕು. ಮತ್ತು ತನಿಖೆ ನಂತರ ಸದರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಮುಖ್ಯಮಂತ್ರಿಯಾಗಿದ್ದ ಹೆಚ್‌ ಡಿ ಕುಮಾರಸ್ವಾಮಿ ಅವರು ಸಹಕಾರ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಟಿಪ್ಪಣಿಯಲ್ಲಿ ಸೂಚಿಸಿರುವುದು ತಿಳಿದು ಬಂದಿದೆ.

Hot this week

ಶೌಚಾಲಯ, ಸ್ನಾನದ ಗೃಹ, ಮೂತ್ರಾಲಯ ಶುಲ್ಕ ವಸೂಲಿ; ಸುಲಭ್‌ ಇಂಟರ್ ನ್ಯಾಷನಲ್‌, ಬಿಬಿಎಂಪಿ ಖಾತೆಗೆ ಹಣ ಜಮೆ ಮಾಡಿದೆಯೇ, ನುಂಗಿದೆಯೇ?

ಬೆಂಗಳೂರು;  ಸುಲಭ್ ಶೌಚಾಲಯ ಮತ್ತು ಸಾರ್ವಜನಿಕ ಮೂತ್ರಾಲಯ  ನಿರ್ವಹಣೆಗೆ ಸಂಬಂಧಿಸಿದಂತೆ ಗುತ್ತಿಗೆದಾರರು...

ಬಿಜೆಪಿ ಅವಧಿಯಲ್ಲಿದ್ದ 120 ಎಕರೆ ಗೋಮಾಳ, ಕಾಂಗ್ರೆಸ್‌ ಅವಧಿಯಲ್ಲಿ ಕಣ್ಮರೆ!; 24 ಕೋಟಿ ಮೌಲ್ಯದ ಜಮೀನು, ಖಾಸಗಿ ವ್ಯಕ್ತಿಗಳ ಪಾಲು?

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ...

ಒಂದೇ ಜಾಗದಲ್ಲಿ ಎರಡು ಫ್ಲೈ ಓವರ್, ಶೇ.50ರಷ್ಟು ಕಾಮಗಾರಿಯಾಗಿದ್ದರೂ ಪೂರ್ಣ ಪಾವತಿ; ಬ್ಯಾಂಕ್‌ ಗ್ಯಾರಂಟಿ ಮುಟ್ಟುಗೋಲಿಲ್ಲ, ಗುತ್ತಿಗೆದಾರರಿಗೆ ಲಾಭ, ಬಿಬಿಎಂಪಿ ನಿಧಿಗೆ ನಷ್ಟ

ಬೆಂಗಳೂರು;  ಈಜಿಪುರ ಮೇಲ್ಸೇತುವೆ ಎಲಿವೇಟೆಡ್‌ ಕಾರಿಡಾರ್  ಕಾಮಗಾರಿಯನ್ನು ನಿಗದಿತ ಅವಧಿಯಲ್ಲಿ  ಪೂರ್ಣಗೊಳಿಸದ...
Please Scan to make Your Contribution

Topics

ಶೌಚಾಲಯ, ಸ್ನಾನದ ಗೃಹ, ಮೂತ್ರಾಲಯ ಶುಲ್ಕ ವಸೂಲಿ; ಸುಲಭ್‌ ಇಂಟರ್ ನ್ಯಾಷನಲ್‌, ಬಿಬಿಎಂಪಿ ಖಾತೆಗೆ ಹಣ ಜಮೆ ಮಾಡಿದೆಯೇ, ನುಂಗಿದೆಯೇ?

ಬೆಂಗಳೂರು;  ಸುಲಭ್ ಶೌಚಾಲಯ ಮತ್ತು ಸಾರ್ವಜನಿಕ ಮೂತ್ರಾಲಯ  ನಿರ್ವಹಣೆಗೆ ಸಂಬಂಧಿಸಿದಂತೆ ಗುತ್ತಿಗೆದಾರರು...

ಬಿಜೆಪಿ ಅವಧಿಯಲ್ಲಿದ್ದ 120 ಎಕರೆ ಗೋಮಾಳ, ಕಾಂಗ್ರೆಸ್‌ ಅವಧಿಯಲ್ಲಿ ಕಣ್ಮರೆ!; 24 ಕೋಟಿ ಮೌಲ್ಯದ ಜಮೀನು, ಖಾಸಗಿ ವ್ಯಕ್ತಿಗಳ ಪಾಲು?

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ...

ಅನುದಾನ ಬಿಡುಗಡೆಯಾಗಿದ್ದರೂ ಪೂರ್ಣಗೊಳ್ಳದ ಕಾಮಗಾರಿ; ತನಿಖಾ ವರದಿಗೆ ಮೆತ್ತಿಕೊಂಡ ಧೂಳು, ಕ್ರಮಕೈಗೊಳ್ಳದ ಸಚಿವ

ಬೆಂಗಳೂರು; ತುಮಕೂರು ಜಿಲ್ಲೆಯ ಶಿರಾ ಪಟ್ಟಣದಲ್ಲಿರುವ ಕಸ್ತೂರಿ ರಂಗಪ್ಪ ನಾಯಕ ಕೋಟೆಯ...

ಧರ್ಮಸ್ಥಳ ಪ್ರಕರಣಗಳ ತನಿಖೆ; ಎಸ್‌ಐಟಿ ವರದಿ ಪ್ರತಿ ಒದಗಿಸದ ಸರ್ಕಾರ, ಗೃಹ ಇಲಾಖೆ ಶಾಖೆಯಲ್ಲಿ ಸಭೆ ನಡವಳಿಯೂ ಲಭ್ಯವಿಲ್ಲ

ಬೆಂಗಳೂರು: ಧರ್ಮಸ್ಥಳದ ಸುತ್ತಮುತ್ತ ನಡೆದಿರುವ ಮಹಿಳೆಯರು ಮತ್ತು ಯುವತಿಯರ ಮೇಲಿನ ದೌರ್ಜನ್ಯ/ಕೊಲೆ,...

Related Articles

Popular Categories

error: Content is protected !!