Tuesday | July 21, 2026 |

ಅರ್ಧ ವರ್ಷ ಕಳೆದರೂ 22 ಇಲಾಖೆಗಳಲ್ಲಿ ಖರ್ಚೇ ಆಗದ 32,250.02 ಕೋಟಿ; ಕುಸಿದ ಆಡಳಿತ ಯಂತ್ರ?

ಬೆಂಗಳೂರು; ಇಲಾಖೆಗಳಲ್ಲಿ ವಿಲೇವಾರಿ ಆಗದೇ ಇರುವ ಕಡತಗಳ ಸಂಖ್ಯೆ ಬೆಟ್ಟದಷ್ಟು ಬೆಳೆದು ನಿಂತಿದ್ದರೇ ಇತ್ತ ಬಿಡುಗಡೆ ಮಾಡಿದ್ದ  ಅನುದಾನದ ಪೈಕಿ  22 ಇಲಾಖೆಗಳು ಅರ್ಥಿಕ ಸಾಲಿನ ಅರ್ಧ ವರ್ಷ ಕಳೆದರೂ  32,250.02 ಕೋಟಿಯಷ್ಟು ಖರ್ಚು ಮಾಡದೇ ಹಾಗೇ ಇಟ್ಟಿವೆ.

 

ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರ ಅಧ್ಯಕ್ಷತೆಯಲ್ಲಿ 2024ರ ಅಕ್ಟೋಬರ್‍‌ 1ರಂದು ನಡೆದಿದ್ದ ಸರ್ಕಾರದ ಎಲ್ಲಾ ಇಲಾಖೆಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಕಾರ್ಯದರ್ಶಿಗಳ ಸಭೆಯಲ್ಲಿ 32,250.02 ಕೋಟಿ ರು. ಖರ್ಚಾಗದೇ ಬಾಕಿ ಇರುವ ಸಂಗತಿ ಕುರಿತು ಚರ್ಚೆಯಾಗಿದೆ.

 

ಈ ಸಭೆಗೆ ಇಲಾಖೆಗಳು ಮಂಡಿಸಿದ್ದ ಅಂಕಿ ಅಂಶಗಳ ದಾಖಲೆಗಳು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಕಡತಗಳನ್ನು ಬಾಕಿ ಉಳಿಸಿಕೊಳ್ಳುವುದರಲ್ಲಿ ಪೈಪೋಟಿ ಒಡ್ಡಿರುವ ಇಲಾಖೆಗಳು, ಅನುದಾನವನ್ನು ಖರ್ಚು ಮಾಡುವುದರಲ್ಲಿ ಮಾತ್ರ ಹಿಂದೆ ಬಿದ್ದಿವೆ. 22 ಇಲಾಖೆಗಳ ಪೈಕಿ ಒಂದು ಇಲಾಖೆಯೂ ಶೇ.50ರ ಗಡಿಯನ್ನೂ ದಾಟಿಲ್ಲ.

 

ಸಚಿವ ಜಮೀರ್‍‌ ಅಹ್ಮದ್‌ ಖಾನ್‌, ಬೋಸರಾಜು, ಡಾ ಶರಣ ಪ್ರಕಾಶ್‌ ಪಾಟೀಲ್‌, ಕೆ ಹೆಚ್‌ ಮುನಿಯಪ್ಪ, ಹೆಚ್‌ ಕೆ ಪಾಟೀಲ್‌, ಸಂತೋಷ್‌ ಲಾಡ್‌, ಎಂ ಬಿ ಪಾಟೀಲ್‌, ಕೆ ವೆಂಕಟೇಶ್‌ ಅವರು ಸಚಿವರಾಗಿರುವ ಇಲಾಖೆಗಳೇ ಅತೀ ಹೆಚ್ಚಿನ ಮೊತ್ತವನ್ನು ಉಳಿಸಿಕೊಂಡಿದೆ.

 

ಸಣ್ಣ ನೀರಾವರಿ, ತೋಟಗಾರಿಕೆ, ಪಶು ಸಂಗೋಪನೆ, ಕರ್ನಾಟಕ ವಿಧಾನಸಭೆ, ಪರಿಷತ್‌, ವೈದ್ಯಕೀಯ ಶಿಕ್ಷಣ, ಅಲ್ಪಸಂಖ್ಯಾತರ ಕಲ್ಯಾಣ, ಆಹಾರ, ಯುವ ಸಬಲೀಕರಣ, ಪ್ರವಾಸೋದ್ಯಮ, ರೇಷ್ಮೆ, ಮೀನುಗಾರಿಕೆ, ವಾರ್ತಾ, ವಾಣಿಜ್ಯ ಕೈಗಾರಿಕೆ, ಮೂಲಭೂತ ಸೌಕರ್ಯ, ಪರಿಶಿಷ್ಟ ಪಂಗಡ, ಇಂಧನ, ಕನ್ನಡ, ಸಂಸ್ಕೃತಿ, ಮಾಹಿತಿ ತಂತ್ರಜ್ಞಾನ, ಕಾರ್ಮಿಕ ಇಲಾಖೆಯಲ್ಲಿ  ಒಟ್ಟಾರೆಯಾಗಿ 2024ರ ಸೆ.21ರ ಅಂತ್ಯಕ್ಕೆ 32,250.02 ಕೋಟಿ ರು. ಖರ್ಚಾಗದೇ ಹಾಗೇ ಉಳಿದುಕೊಂಡಿರುವುದು ಗೊತ್ತಾಗಿದೆ.

 

2024-25ನೇ ಸಾಲಿನಲ್ಲಿ ಒಟ್ಟು 3.28 ಲಕ್ಷ ಕೋಟಿ ರು ಅನುದಾನವನ್ನು ಬಜೆಟ್‌ನಲ್ಲಿ ಹಂಚಿಕೆ ಮಾಡಲಾಗಿತ್ತು. ಈ ಪೈಕಿ ಸೆ.21ರ ಅಂತ್ಯಕ್ಕೆ 1.26 ಲಕ್ಷ ಕೋಟಿ ರು. ಬಿಡುಗಡೆ ಆಗಿತ್ತು. ಇದು ಒಟ್ಟು ಅನುದಾನಕ್ಕೆ ಶೇ. 40.67ರಷ್ಟಿತ್ತು ಈ ಪೈಕಿ 1.11 ಲಕ್ಷ ಕೋಟಿ ರು. ಒಟ್ಟು ವೆಚ್ಚವಾಗಿದೆ. ಇದು ಸಹ ಒಟ್ಟು ಅನುದಾನಕ್ಕೆ ಶೇ. 34.00 ರಷ್ಟಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉಪ ಯೋಜನೆಗೆ ಬಿಡುಗಡೆಯಾಗಿದ್ದ ಒಟ್ಟು ಅನುದಾನದ ಪೈಕಿ ಶೇ. 27.37ರಷ್ಟು ಮಾತ್ರ ವೆಚ್ಚವಾಗಿದೆ ಎಂದು ತಿಳಿದು ಬಂದಿದೆ.

 

ಸಣ್ಣ ನೀರಾವರಿ ಇಲಾಖೆಗೆ ಹಂಚಿಕೆಯಾಗಿದ್ದ ಒಟ್ಟು 2,388.49 ಕೋಟಿ ರು. ಅನುದಾನದ ಪೈಕಿ 1,003.54 ಕೋಟಿ ರು (ಶೇ.42.02) ಬಿಡುಗಡೆಯಾಗಿದೆ. ಇದರಲ್ಲಿ ಸೆ.21ರ ಅಂತ್ಯಕ್ಕೆ 761.92 ಕೋಟಿ ರು. ಮಾತ್ರ ಖರ್ಚಾಗಿದೆ. ಖರ್ಚು ಮಾಡಲು ಇನ್ನೂ 241.63 ಕೋಟಿ ರು. ಬಾಕಿ ಇರುವುದು ಗೊತ್ತಾಗಿದೆ.

 

ತೋಟಗಾರಿಕೆ ಇಲಾಖೆಯಲ್ಲಿ 221.35 ಕೋಟಿ, ಪಶು ಸಂಗೋಪನೆಯಲ್ಲಿ 162.16 ಕೋಟಿ, ಕರ್ನಾಟಕ ವಿಧಾನಸಭೆ, ಪರಿಷತ್‌ 159.69 ಕೋಟಿ, ವೈದ್ಯಕೀಯ ಶಿಕ್ಷಣದಲ್ಲಿ 140.07 ಕೋಟಿ, ವಾಣಿಜ್ಯ ಕೈಗಾರಿಕೆ (ಬೃಹತ್‌) 134.70 ಕೋಟಿ, ಅಲ್ಪಸಂಖ್ಯಾತರ ಕಲ್ಯಾಣದಲ್ಲಿ 133.05 ಕೋಟಿ, ಆಹಾರ ಇಲಾಖೆ 94.82 ಕೋಟಿ, ವಾಣಿಜ್ಯ ಕೈಗಾರಿಕೆ (ಸಣ್ಣ, ಜವಳಿ, ಗಣಿ) 82.86 ಕೋಟಿ, ಕಾರ್ಮಿಕ ಇಲಾಖೆ 76.25 ಕೋಟಿ ರು ಬಾಕಿ ಇದೆ.

 

ಯುವಸಬಲೀಕರಣದಲ್ಲಿ 72.78 ಕೋಟಿ, ಮೂಲಭೂತ ಸೌಕರ್ಯ 58.07 ಕೋಟಿ, ಪ್ರವಾಸೋದ್ಯಮ 45.12 ಕೋಟಿ, ಪರಿಶಿಷ್ಟ ಪಂಗಡಗಳು 33.01 ಕೋಟಿ, ರೇಷ್ಮೆ 30.49 ಕೋಟಿ, ಇಂಧನ 23.26 ಕೋಟಿ, ಮೀನುಗಾರಿಕೆ 20.30 ಕೋಟಿ, ಇ-ಆಡಳಿತ16.04 ಕೋಟಿ, ಸಿಬ್ಬಂದಿ ಆಡಳಿತ ಸುಧಾರಣೆ (ಆಡಳಿತ ಸುಧಾರಣೆ) 13.24 ಕೋಟಿ, ಕನ್ನಡ ಸಂಸ್ಕೃತಿ 11.78 ಕೋಟಿ, ವಾರ್ತಾ 9.12 ಕೋಟಿ, ಮಾಹಿತಿ ತಂತ್ರಜ್ಞಾನ 1.46 ಕೋಟಿ ರು. ಖರ್ಚಾಗದೇ ಬಾಕಿ ಇರುವುದು ತಿಳಿದು ಬಂದಿದೆ.

 

2023-24ನೇ ಸಾಲಿಗೆ ಹೋಲಿಸಿದರೇ ಸೆಪ್ಟಂಬರ್‍‌ ಅಂತ್ಯಕ್ಕೆ ಶೇ. 31ರಷ್ಟು ಅನುದಾನ ಖರ್ಚು ಮಾಡಿತ್ತು. 2024-25ನೇ ಸಾಲಿನ ಸೆಪ್ಟಂಬರ್‍‌ ಅಂತ್ಯಕ್ಕೆ ಶೇ. 34.96ರಷ್ಟಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಇದೇ ಅವಧಿಯಲ್ಲಿ ಶೇ.3ರಷ್ಟು ಮಾತ್ರ ಖರ್ಚಾಗಿರುವುದು ಗೊತ್ತಾಗಿದೆ.

Hot this week

ಚಿಕ್ಕಮಗಳೂರು ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿ; ಡಿಪಿಆರ್, ಟೆಂಡರ್ ಪ್ರಕ್ರಿಯೆಯಲ್ಲಿ ಲೋಪ ದೋಷ, 130 ಕೋಟಿ ರು ಹೆಚ್ಚುವರಿ

ಬೆಂಗಳೂರು; ಚಿಕ್ಕಮಗಳೂರು ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿಗೆ ನಡೆಸಲು ಕರೆದಿದ್ದ...

ಆದಾಯಕ್ಕಿಂತ ಹೆಚ್ಚಿನ ಅಕ್ರಮ ಸಂಪತ್ತು ಗಳಿಕೆ ; ಡಾ ಬೂವನಹಳ್ಳಿ ನಾಗರಾಜ್ ವಿರುದ್ಧದ ಪ್ರಕರಣದಲ್ಲಿ ಬಿ ರಿಪೋರ್ಟ್‌ ಅಂಗೀಕರಿಸಿದ ನ್ಯಾಯಾಲಯ

ಬೆಂಗಳೂರು; ತುಮಕೂರು ಜಿಲ್ಲಾ ಪಂಚಾಯ್ತಿಯಲ್ಲಿ ಕುಂದುಕೊರತೆ ನಿವಾರಣೆ ಪ್ರಾಧಿಕಾರಿಯಾಗಿದ್ದ ಡಾ ಬೂವನಹಳ್ಳಿ...

ಏಕಬಳಕೆ ಪ್ಲಾಸ್ಟಿಕ್‌ ಬಳಕೆಗಿಲ್ಲ ಕಡಿವಾಣ, ನಿಷೇಧದ ಕಾನೂನು ಕಾಗದದ ಮೇಲಷ್ಟೇ ಜಾರಿ; ಪಾಲಿಕೆ ಬಳಿ ಮಾಹಿತಿಯೇ ಇಲ್ಲ

ಮೈಸೂರು: ಏಕಬಳಕೆ ಪ್ಲಾಸ್ಟಿಕ್‌ನ ಉತ್ಪಾದನೆ, ಸಂಗ್ರಹಣೆ, ವಿತರಣೆ ಮತ್ತು ಬಳಕೆಯನ್ನು ಸಂಪೂರ್ಣವಾಗಿ...
Please Scan to make Your Contribution

Topics

ಚಿಕ್ಕಮಗಳೂರು ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿ; ಡಿಪಿಆರ್, ಟೆಂಡರ್ ಪ್ರಕ್ರಿಯೆಯಲ್ಲಿ ಲೋಪ ದೋಷ, 130 ಕೋಟಿ ರು ಹೆಚ್ಚುವರಿ

ಬೆಂಗಳೂರು; ಚಿಕ್ಕಮಗಳೂರು ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿಗೆ ನಡೆಸಲು ಕರೆದಿದ್ದ...

ಆದಾಯಕ್ಕಿಂತ ಹೆಚ್ಚಿನ ಅಕ್ರಮ ಸಂಪತ್ತು ಗಳಿಕೆ ; ಡಾ ಬೂವನಹಳ್ಳಿ ನಾಗರಾಜ್ ವಿರುದ್ಧದ ಪ್ರಕರಣದಲ್ಲಿ ಬಿ ರಿಪೋರ್ಟ್‌ ಅಂಗೀಕರಿಸಿದ ನ್ಯಾಯಾಲಯ

ಬೆಂಗಳೂರು; ತುಮಕೂರು ಜಿಲ್ಲಾ ಪಂಚಾಯ್ತಿಯಲ್ಲಿ ಕುಂದುಕೊರತೆ ನಿವಾರಣೆ ಪ್ರಾಧಿಕಾರಿಯಾಗಿದ್ದ ಡಾ ಬೂವನಹಳ್ಳಿ...

ಏಕಬಳಕೆ ಪ್ಲಾಸ್ಟಿಕ್‌ ಬಳಕೆಗಿಲ್ಲ ಕಡಿವಾಣ, ನಿಷೇಧದ ಕಾನೂನು ಕಾಗದದ ಮೇಲಷ್ಟೇ ಜಾರಿ; ಪಾಲಿಕೆ ಬಳಿ ಮಾಹಿತಿಯೇ ಇಲ್ಲ

ಮೈಸೂರು: ಏಕಬಳಕೆ ಪ್ಲಾಸ್ಟಿಕ್‌ನ ಉತ್ಪಾದನೆ, ಸಂಗ್ರಹಣೆ, ವಿತರಣೆ ಮತ್ತು ಬಳಕೆಯನ್ನು ಸಂಪೂರ್ಣವಾಗಿ...

ಖಾಸಗಿ ವಿಶ್ವವಿದ್ಯಾಲಯಗಳ ಸ್ಥಾಪನೆ; ಕನಿಷ್ಟ ಭೂಮಿ ಪ್ರಮಾಣ, ಜಂಟಿ ಸ್ಥಿರ ಠೇವಣಿ 25 ಕೋಟಿ ಬದಲಿಗೆ 20 ಕೋಟಿ ರು ಇಳಿಕೆಗೆ ಚಿಂತನೆ

ಬೆಂಗಳೂರು;  ಖಾಸಗಿ ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಇದ್ದ  ಕನಿಷ್ಠ ಭೂಮಿ ಅವಶ್ಯಕತೆ ತೆಗೆದುಹಾಕುವುದು...

Related Articles

Popular Categories

error: Content is protected !!