Wednesday | March 18, 2026 |

ಸಹಕಾರ ಮಂಡಲದ 19.34 ಕೋಟಿ ಅಕ್ರಮ ವರ್ಗಾವಣೆ; ಪ್ರಭಾರಿ ಸಿಇಒ ಸೇರಿ 6 ಮಂದಿ ವಿರುದ್ಧ ಎಫ್‌ಐಆರ್‍‌

Support THE-FILE

spot_img

ಬೆಂಗಳೂರು; ಸಿದ್ದರಾಮಯ್ಯ ಅವರು ಮೊದಲ ಬಾರಿಗೆ ಮುಖ್ಯಮಂತ್ರಿ ಆಗಿದ್ದ ಅವಧಿಯಿಂದಲೂ ಕರ್ನಾಟಕ ರಾಜ್ಯ ಕೋ-ಆಪರೇಟೀವ್‌ ಸೊಸೈಟಿ ಮಹಾಮಂಡಲದಲ್ಲಿ 2023ರ ಅಕ್ಟೋಬರ್‍‌ವರೆಗೆ ಒಟ್ಟಾರೆ 19.34 ಕೋಟಿ ರು. ದುರುಪಯೋಗ ಆಗಿದೆ ಎಂದು ದೂರು ಸಲ್ಲಿಕೆಯಾಗಿದೆ.

 

ಈ ಪ್ರಕರಣದಲ್ಲಿ ಕರ್ನಾಟಕ ರಾಜ್ಯ ಅಪೆಕ್ಸ್‌ ಬ್ಯಾಂಕ್‌ ಮತ್ತು ಬಿಡಿಸಿಸಿ ಬ್ಯಾಂಕ್‌ ಅಧಿಕಾರಿ, ಸಿಬ್ಬಂದಿಯೂ ಶಾಮೀಲಾಗಿದ್ದಾರೆ. ಸಹಕಾರ ಸಚಿವ ಕೆ ಎನ್‌ ರಾಜಣ್ಣ ಅವರು 2024ರ ಅಕ್ಟೋಬರ್‍‌ 9ರಂದು ನಡೆಸಿದ್ದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಸಭೆಯಲ್ಲಿ ಈ ವಿಚಾರವು ಬೆಳಕಿಗೆ ಬಂದಿದೆ.

 

ಸೊಸೈಟಿ ಹೆಸರಿನಲ್ಲಿ ಸ್ಥಿರ ಠೇವಣಿ ರೂಪದಲ್ಲಿದ್ದ 19.34 ಕೋಟಿ ರು.ಗಳನ್ನು ಆಶಾಲತಾ ಅವರು ತಮ್ಮ ಪತಿ ಸೋಮಶೇಖರ್‍‌ ಸೇರಿದಂತೆ ಇನ್ನಿತರೆ ಖಾಸಗಿ ವ್ಯಕ್ತಿಗಳ ಖಾತೆಗೆ ಅಕ್ರಮವಾಗಿ ವರ್ಗಾವಣೆ ಮಾಡಿದ್ದರು ಎಂದು ಮಂಡಳದ ಅಧ್ಯಕ್ಷ ರಾಜು ಅವರು ದೂರು ಸಲ್ಲಿಸಿದ್ದರು.

 

ಈ ದೂರನ್ನಾಧರಿಸಿ ನಂದಿನಿ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‍‌ ದಾಖಲಾಗಿದೆ. ಇದರ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

 

 

ಮಂಡಳಿಯ ಅಧ್ಯಕ್ಷ ರಾಜು ಅವರು ಸಲ್ಲಿಸಿದ್ದ ದೂರರ್ಜಿಗೆ ಸಂಬಂಧಿಸಿದಂತೆ ಮಂಡಳಿಯ ಹಿಂದಿನ ಸಿಇಒ ಆಶಾಲತಾ ಸೇರಿದಂತೆ ಒಟ್ಟು 6 ಮಂದಿ ವಿರುದ್ಧ ನಂದಿನಿ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‍‌ ದಾಖಲಾಗಿದೆ.

 

 

ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಕೋಟ್ಯಂತರ ರುಪಾಯಿಗಳನ್ನು ಖಾಸಗಿ ವ್ಯಕ್ತಿಗಳ ಖಾತೆಗೆ ಅಕ್ರಮವಾಗಿ ವರ್ಗಾವಣೆ ಪ್ರಕರಣದ ಬೆನ್ನಲ್ಲೇ ಇದೀಗ ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳದಲ್ಲಿನ 19.34 ಕೋಟಿ ರು.ಗಳನ್ನು ಅಕ್ರಮವಾಗಿ ವರ್ಗಾವಣೆ ಮಾಡಿರುವ ಪ್ರಕರಣದಲ್ಲಿ ದಾಖಲಾಗಿರುವ ಎಫ್‌ಐಆರ್‍‌ ಮುನ್ನೆಲೆಗೆ ಬಂದಿದೆ.

 

ಮಂಡಳಿಯ ಹೆಸರಿನಲ್ಲಿ ಒಟ್ಟು 111 ಸ್ಥಿರ ಠೇವಣಿಗಳಲ್ಲಿದ್ದ 19,34,00,000 ರು.ಗಳ ನಕಲಿ ಠೇವಣೆ ಬಾಂಡ್‌ಗಳಿದ್ದವು. ಈ ಪೈಕಿ ಕೆಲವು ನಿಶ್ಚಿತ ಠೇವಣಿಗಳನ್ನು ಮಂಡಳಿಯ ಹಿಂದಿನ ಸಿಇಒ ಆಶಾಲತಾ ಅವರೇ ಬರೆದಿದ್ದರು. ಬ್ಯಾಂಕ್‌ ದೃಢೀಕರಣ ಪತ್ರವನ್ನು ಅವರೇ ಖುದ್ದಾಗಿ ತಂದಿದ್ದರು. ಅಲ್ಲದೇ ಲೆಕ್ಕ ಪರಿಶೋ‍ಧಕರಿಗೂ ನಕಲಿ ಪ್ರಮಾಣ ಪತ್ರ ನೀಡಿದ್ದಾರೆ ಎಂದು ಮಂಡಳಿ ಅಧ್ಯಕ್ಷ ರಾಜು ಅವರು ದೂರಿನಲ್ಲಿ ವಿವರಿಸಿರುವುದು ಎಫ್‌ಐಆರ್‍‌ನಿಂದ ತಿಳಿದು ಬಂದಿದೆ.

 

‘2017ರಿಂದ ಬ್ಯಾಂಕ್‌ನ ಸ್ಥಿರ ಠೇವಣಿಗಳಲ್ಲಿನ ಹಣವನ್ನು ತಮ್ಮ ಪತಿ ಸೋಮಶೇಖರ್‍‌, ವಿಜಯ್‌ ಕಿರಣ್‌, ಮಂಜುನಾಥ್‌ ಜೆ, ಸುಜಯ್‌ ಅವರಿಗೆ ವರ್ಗಾವಣೆ ಮಾಡಿದ್ದಾರೆ. ಹಾಗೂ 2017ರಿಂದ 2023ರವರೆಗೆ ಆಶಾಲತಾ ಅವರು ಮೂಲ ಸ್ಥಿರ ಠೇವಣಿಯನ್ನು ವರ್ಗಾಯಿಸುವಾಗ ಅಧ್ಯಕ್ಷರ ನಕಲಿ ಸಹಿ ಹಾಕಿ ದಾಖಲೆಗಳನ್ನು ಸಲ್ಲಿಸಿದ್ದಾರೆ,’ ಎಂದು ರಾಜು ಅವರು ದೂರಿನಲ್ಲಿ ಉಲ್ಲೇಖಿಸಿರುವುದು ಗೊತ್ತಾಗಿದೆ.

 

ಮೂಲ ಎಫ್‌ಡಿ ಬಾಂಡ್‌ಗಳನ್ನು ಸಲ್ಲಿಸುವಾಗ ಕವರ್‍‌ ಲೆಟರ್‍‌ಗಳನ್ನು ಸಹಕಾರಿ ಫೆಡರೇಷನ್‌ನಲ್ಲಿ ಇಡಬೇಕಿತ್ತು. ಇದರಲ್ಲಿ ಅಧ್ಯಕ್ಷರು ಮತ್ತು ಸಿಇಒ ಇಬ್ಬರ ಸಹಿಯೂ ಇರಬೇಕು. ಆದರೆ ಸಿಇಒ ಒಬ್ಬರೇ ಸಹಿ ಮಾಡಿ ಎಫ್‌ಡಿ ಮೊತ್ತವನ್ನು ಆಶಾಲತಾ ಅವರು ತಮ್ಮ ಪತಿಯ ವೈಯಕ್ತಿಕ ಖಾತೆಗೆ ಸೇರಿದಂತೆ ಇನ್ನಿತರೆ ಖಾಸಗಿ ವ್ಯಕ್ತಿಗಳ ಖಾತೆಗೆ ಜಮೆ ಮಾಡಲಾಗಿದೆ ಎಂದು ದೂರಿನಲ್ಲಿ ಹೇಳಲಾಗಿದೆ.

 

 

ವಾಸ್ತವವಾಗಿ ಆರ್‍‌ಟಿಜಿಎಸ್‌ ಫಾರಂನಲ್ಲಿ ಅಧ್ಯಕ್ಷರು ಮತ್ತು ಸಿಇಒ ಅವರ ಸಹಿ ಇರಬೇಕಿತ್ತು. ಬ್ಯಾಂಕ್‌ನವರು ಆಶಾಲತಾ ಅವರೊಂದಿಗೆ ಶಾಮೀಲಾಗಿ ಅಧ್ಯಕ್ಷರ ಸಹಿಯನ್ನೂ ಪಡೆಯದೇ ಹಣವನ್ನು ವರ್ಗಾಯಿಸಿದ್ದಾರೆ. ಇಲ್ಲಿಯವರೆಗೆ ಬ್ಯಾಂಕ್‌ನವರು ಅಧ್ಯಕ್ಷರಿಗೆ, ನಿರ್ದೇಶಕರಿಗೆ ಹಾಗೂ ಪದಾಧಿಕಾರಿಗಳಿಗೆ ಹಣದ ವ್ಯವಹಾರದ ಬಗ್ಗೆ ಯಾವುದೇ ಮಾಹಿತಿಯನ್ನೂ ನೀಡಿಲ್ಲ. ಇದರಿಂದ ಪ್ರಭಾರಿ ಸಿಇಒ ಆಶಾಲತಾ ಅವರೊಂದಿಗೆ ಬ್ಯಾಂಕ್‌ನವರೂ ಶಾಮೀಲಾಗಿರುವುದು ತಿಳಿದು ಬಂದಿದೆ ಎಂದು ದೂರರ್ಜಿಯಲ್ಲಿ ವಿವರಿಸಿರುವುದು ಗೊತ್ತಾಗಿದೆ.

 

‘ನಕಲಿ ಠೇವಣಿ ಮಾಡುವ ಮೂಲಕ ಫೆಡರೇಷನ್‌ಗೆ ಮೋಸ ಮಾಡಿದ್ದಾರೆ. ಫೆಡರೇಷನ್‌ನ ಲೆಕ್ಕ ಪರಿಶೋಧಕರಿಗೂ ನಕಲಿ ದಾಖಲಾತಿಗಳನ್ನು ನೀಡಿದ್ದಾರೆ. ಪ್ರಭಾರಿ ಸಿಇಒ ಅವರು ನೀಡಿದ್ದ ಮೋಸದ ದಾಖಲೆಗಳನ್ನು ಲೆಕ್ಕ ಪರಿಶೋಧಕರು ಪರಿಶೀಲಿಸಿಲ್ಲ. ಆದ್ದರಿಂದ ಫೆಡರೇ‍ಷನ್‌ನ 19.34 ಕೋಟಿ ಹಣವನ್ನು ದುರುಪಯೋಗಪಡಿಸಿಕೊಂಡಿರುವ ಪ್ರಭಾರಿ ಸಿಇಒ ಆಶಾಲತಾ, ಸೋಮಶೇಖರ್‍‌, ವಿಜಯ್‌ ಕಿರಣ್‌, ಮಂಜುನಾಥ್‌ ಜೆ, ಸುಜಯ್‌, ಬಿಡಿಸಿಸಿ ಹಾಗೂ ಅಪೆಕ್ಸ್‌ ಬ್ಯಾಂಕ್‌ನ ಮ್ಯಾನೇಜರ್‍‌, ಆಡಿಟರ್‍‌ಗಳ ವಿರುದ್ಧ ಕ್ರಮ ಕೈಗೊಳ್ಳಬೇಕು,’ ಎಂದು ಮಂಡಳಿ ಅಧ್ಯಕ್ಷ ರಾಜು ಅವರು ದೂರಿನಲ್ಲಿ ಕೋರಿರುವುದು ಗೊತ್ತಾಗಿದೆ.

Hot this week

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ...

ರೋಹಿತ್ ವೇಮುಲ ಕಾಯ್ದೆ; ವ್ಯಾಖ್ಯಾನಗಳು ಅಸ್ಪಷ್ಟ, ಕಾನೂನು ಬಲವಿಲ್ಲ, ವಿಧೇಯಕವೇ ಅಪೂರ್ಣ

ಬೆಂಗಳೂರು; ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಯಾರೊಬ್ಬರೂ ಜಾತಿ ಆಧಾರದಲ್ಲಿ ತಾರತಮ್ಯ ಎದುರಿಸಬಾರದು...

ಗ್ರಾಮಠಾಣ ಜಮೀನು ಅದಲು-ಬದಲು; ಆರ್ಥಿಕ ಇಲಾಖೆ ಆಕ್ಷೇಪ ಬದಿಗೊತ್ತಿ ಎಂ ಆರ್ ಸೀತಾರಾಂ ಕುಟುಂಬದ ಬೆನ್ನಿಗೆ ನಿಂತ ಸರ್ಕಾರ

ಬೆಂಗಳೂರು; ಸರ್ಕಾರಿ ಭೂಮಿಗೆ ರಸ್ತೆಯ ಸಂಪರ್ಕ ಹೊಂದಿಲ್ಲದಿರುವ, ರಸ್ತೆ ಸಂಪರ್ಕ ಕಲ್ಪಿಸದೇ...

ಅದಾನಿ ಎಸಿಸಿ ಲಿಮಿಟೆಡ್‌ನಿಂದ ಅಕ್ರಮ ಗಣಿಗಾರಿಕೆ; ನಿರ್ದೇಶಕರು, ಅಧಿಕಾರಿಗಳ ವಿರುದ್ಧ ಲೋಕಾ ತನಿಖೆಗೆ ಶಿಫಾರಸ್ಸು, ಕಡತಕ್ಕೆ ಧೂಳು

ಬೆಂಗಳೂರು;  ಕಲ್ಬುರ್ಗಿಯ ವಾಡಿಯಲ್ಲಿ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್ ಪ್ರೈವೈಟ್ ಲಿಮಿಟೆಡ್...

1,260 ಕೋಟಿ ಮೊತ್ತದ ಹಗರಣ; 3 ವರ್ಷವಾದರೂ ಕಾಣದ ತಾರ್ಕಿಕ ಅಂತ್ಯ, ತೆವಳಿದ ಲೋಕಾ ತನಿಖೆ

ಬೆಂಗಳೂರು;  1,260 ಕೋಟಿ ರು ಮೊತ್ತದಲ್ಲಿ  108 ಆರೋಗ್ಯ ಕವಚ ಆಂಬ್ಯುಲೆನ್ಸ್‌ಗಳನ್ನು...

Topics

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ...

ರೋಹಿತ್ ವೇಮುಲ ಕಾಯ್ದೆ; ವ್ಯಾಖ್ಯಾನಗಳು ಅಸ್ಪಷ್ಟ, ಕಾನೂನು ಬಲವಿಲ್ಲ, ವಿಧೇಯಕವೇ ಅಪೂರ್ಣ

ಬೆಂಗಳೂರು; ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಯಾರೊಬ್ಬರೂ ಜಾತಿ ಆಧಾರದಲ್ಲಿ ತಾರತಮ್ಯ ಎದುರಿಸಬಾರದು...

ಗ್ರಾಮಠಾಣ ಜಮೀನು ಅದಲು-ಬದಲು; ಆರ್ಥಿಕ ಇಲಾಖೆ ಆಕ್ಷೇಪ ಬದಿಗೊತ್ತಿ ಎಂ ಆರ್ ಸೀತಾರಾಂ ಕುಟುಂಬದ ಬೆನ್ನಿಗೆ ನಿಂತ ಸರ್ಕಾರ

ಬೆಂಗಳೂರು; ಸರ್ಕಾರಿ ಭೂಮಿಗೆ ರಸ್ತೆಯ ಸಂಪರ್ಕ ಹೊಂದಿಲ್ಲದಿರುವ, ರಸ್ತೆ ಸಂಪರ್ಕ ಕಲ್ಪಿಸದೇ...

ಅದಾನಿ ಎಸಿಸಿ ಲಿಮಿಟೆಡ್‌ನಿಂದ ಅಕ್ರಮ ಗಣಿಗಾರಿಕೆ; ನಿರ್ದೇಶಕರು, ಅಧಿಕಾರಿಗಳ ವಿರುದ್ಧ ಲೋಕಾ ತನಿಖೆಗೆ ಶಿಫಾರಸ್ಸು, ಕಡತಕ್ಕೆ ಧೂಳು

ಬೆಂಗಳೂರು;  ಕಲ್ಬುರ್ಗಿಯ ವಾಡಿಯಲ್ಲಿ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್ ಪ್ರೈವೈಟ್ ಲಿಮಿಟೆಡ್...

1,260 ಕೋಟಿ ಮೊತ್ತದ ಹಗರಣ; 3 ವರ್ಷವಾದರೂ ಕಾಣದ ತಾರ್ಕಿಕ ಅಂತ್ಯ, ತೆವಳಿದ ಲೋಕಾ ತನಿಖೆ

ಬೆಂಗಳೂರು;  1,260 ಕೋಟಿ ರು ಮೊತ್ತದಲ್ಲಿ  108 ಆರೋಗ್ಯ ಕವಚ ಆಂಬ್ಯುಲೆನ್ಸ್‌ಗಳನ್ನು...

ಶೈಕ್ಷಣಿಕ ಸಂಯೋಜಕ ಹುದ್ದೆ; 88.06 ಕೋಟಿ ಹೊರೆ, ಅರ್ಹ 1,500 ಅತಿಥಿ ಉಪನ್ಯಾಸಕರ ಹುದ್ದೆ ಕಿತ್ತುಕೊಂಡಿತೇ?

ಬೆಂಗಳೂರು; ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ದ  ನಿಗದಿತ ವಿದ್ಯಾರ್ಹತೆ ಹೊಂದದ...

ಅರಣ್ಯ ಜಮೀನಿನ ಖಾತೆ ಬದಲಾವಣೆ, ಅಸಮರ್ಪಕ ವರದಿ; ತಡವಾಗಿ ವಿಚಾರಣೆ, ನೋಟೀಸ್ ಜಾರಿ

ಬೆಂಗಳೂರು; ಭಾರತ ಸರ್ಕಾರದ ಅರಣ್ಯ ಸಚಿವಾಲಯದಿಂದ ಯಾವುದೇ ಪೂರ್ವಾನುಮತಿ ಪಡೆಯದೇ ಅಂದಾಜು...

ಸಾಮಾಜಿಕ ಭದ್ರತಾ ಯೋಜನೆ; ಖರ್ಚಾಗದ ಪೂರ್ಣ ಅನುದಾನ, 676.16 ಕೋಟಿ ಉಳಿಕೆ

ಬೆಂಗಳೂರು; ವೃದ್ಧಾಪ್ಯ, ಸಂಧ್ಯಾ ಸುರಕ್ಷಾ ಸೇರಿದಂತೆ ಒಟ್ಟಾರೆ 12 ಸಾಮಾಜಿಕ ಭದ್ರತಾ...

Related Articles

Popular Categories

error: Content is protected !!