Monday | March 9, 2026 |

‘ದಿ ಫೈಲ್‌’ಗೆ ಸಮನ್ಸ್‌; ಕೋವಿಡ್‌ ಅಕ್ರಮಗಳ ಕುರಿತು ಪ್ರಕಟಿಸಿದ ವರದಿ ಸಲ್ಲಿಕೆ, ಆಯೋಗದ ಮುಂದೆ ಹೇಳಿಕೆ ದಾಖಲು

Support THE-FILE

spot_img

ಬೆಂಗಳೂರು; ಕೋವಿಡ್‌ ಕಾಲದಲ್ಲಿ ವೈದ್ಯಕೀಯ ಸಲಕರಣೆಗಳ ಖರೀದಿಯಲ್ಲಿ ನಡೆದಿದೆ ಎನ್ನಲಾಗಿರುವ ನಿಯಮಗಳ ಉಲ್ಲಂಘನೆ, ಅವ್ಯವಹಾರ ಸೇರಿದಂತೆ ವಿವಿಧ ರೀತಿಯ ಅಕ್ರಮಗಳ ಕುರಿತು ವಿಚಾರಣೆ ನಡೆಸುತ್ತಿರುವ ಹೈಕೋರ್ಟ್‌ ನಿವೃತ್ತ ನ್ಯಾಯಾಧೀಶ ಮೈಕಲ್‌ ಡಿ ಕುನ್ಹಾ ಅವರ ನೇತೃತ್ವದ ಆಯೋಗವು ‘ದಿ ಫೈಲ್‌’ಗೆ ಸಮನ್ಸ್‌ ಜಾರಿ ಮಾಡಿದೆ.

 

ಈ ವರದಿಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ದಾಖಲೆಗಳನ್ನು ಸಲ್ಲಿಸಬೇಕು ಎಂದು ಕುನ್ಹಾ ಅವರ ನೇತೃತ್ವದ ವಿಚಾರಣೆ ಆಯೋಗವು ಖುದ್ದು ಹಾಜರಾತಿಗೆ ಸಮನ್ಸ್‌ ಜಾರಿಗೊಳಿಸಿತ್ತು.

 

 

ಆಯೋಗದ ಸೂಚನೆಯಂತೆ ‘ದಿ ಫೈಲ್‌’ 2024ರ ಅಕ್ಟೋಬರ್‍‌ 24ರಂದು ಆಯೋಗದ ಮುಂದೆ ಹಾಜರಾಗಿತ್ತು.

 

 

ಸರಣಿ ರೂಪದಲ್ಲಿ ಪ್ರಕಟಿಸಿದ್ದ ವರದಿಗಳ ಪಿಡಿಎಫ್‌ ಪ್ರತಿಗಳನ್ನು ಪೆನ್‌ಡ್ರೈವ್‌ನಲ್ಲಿ ಅಡಕಗೊಳಿಸಿ ಸಲ್ಲಿಸಿದೆ.

 

 

ಅಲ್ಲದೇ ವಿಚಾರಣೆ ಆಯೋಗವು ಕೇಳಿದ್ದ ಪ್ರಶ್ನೆಗಳಿಗೂ ‘ದಿ ಫೈಲ್‌’ ಉತ್ತರ ಒದಗಿಸಿದೆ.

 

 

ಎನ್‌-95 ಮಾಸ್ಕ್‌, ಪಲ್ಸ್‌ ಆಕ್ಸಿಮೀಟರ್‍‌, ಪ್ಯಾರಾಮೀಟರ್‍‌, ರ್‍ಯಾಟ್‌ ಕಿಟ್‌, ವೆಂಟಿಲೇಟರ್ಸ್‌, ಸ್ಯಾನಿಟೈಜರ್ಸ್‌ ಸೇರಿದಂತೆ ಇನ್ನಿತರೆ ವೈದ್ಯಕೀಯ ಸಲಕರಣೆಗಳ ಖರೀದಿ ಸಂಬಂಧ ಪ್ರಾಥಮಿಕ ದಾಖಲೆಗಳನ್ನಾಧರಿಸಿ ‘ದಿ ಫೈಲ್‌’ 2020ರಿಂದಲೇ ವರದಿಗಳನ್ನು ಪ್ರಕಟಿಸಿತ್ತು.

 

‘ದಿ ಫೈಲ್‌’ ಹೊರಗೆಡವಿದ ಕೋವಿಡ್‌ ಭ್ರಷ್ಟಾಚಾರದ 50 ಮುಖಗಳು

 

ಅಲ್ಲದೇ ಕುನ್ಹಾ ಅವರ ನೇತೃತ್ವದ ವಿಚಾರಣೆ ಆಯೋಗವು ಸರ್ಕಾರಕ್ಕೆ ಸಲ್ಲಿಸಿದ್ದ ಮಧ್ಯಂತರ ವರದಿ ಆಧರಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಸಚಿವ ಸಂಪುಟಕ್ಕೆ ಸಲ್ಲಿಸಿದ್ದ ಮುಖ್ಯಾಂಶಗಳನ್ನು ಆಧರಿಸಿ ‘ದಿ ಫೈಲ್‌’ ವರದಿಗಳನ್ನು ಪ್ರಕಟಿಸಿತ್ತು.

 

ಅಂದು ಪ್ರತಿಪಕ್ಷ ನಾಯಕರಾಗಿದ್ದ ಸಿದ್ದರಾಮಯ್ಯ ಅವರು ಸದನದಲ್ಲಿ ‘ದಿ ಫೈಲ್‌’ ವರದಿಗಳನ್ನು ಉಲ್ಲೇಖಿಸಿ ಹಿಂದಿನ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದನ್ನು ಸ್ಮರಿಸಬಹುದು.

 

ದಾಖಲೆಗಳು ಇಲ್ಲದೆಯೇ ‘ದಿ ಫೈಲ್‌’ ವರದಿಗಳನ್ನು ಪ್ರಕಟಿಸಿಲ್ಲ. ಕೋವಿಡ್‌ ಅವಧಿಯಲ್ಲಿ ವೈದ್ಯಕೀಯ ಸಲಕರಣೆಗಳ ಖರೀದಿಗೆ ಸಂಬಂಧಿಸಿದಂತೆಯೂ ಅಂದು  ಲಭ್ಯವಿದ್ದ ಪ್ರಾಥಮಿಕ ದಾಖಲೆಗಳನ್ನು ಆಧರಿಸಿ ವರದಿಗಳನ್ನು  ಪ್ರಕಟಿಸಿತ್ತು. ಪ್ರಕಟವಾಗಿದ್ದ ವರದಿಗಳಲ್ಲಿಯೇ ದಾಖಲೆಗಳನ್ನು ಅಡಕಗೊಳಿಸಿತ್ತು. ಹಾಗಾಗಿಯೇ ವಿಚಾರಣೆ ಆಯೋಗದ ಮುಂದೆ ‘ದಿ ಫೈಲ್‌’ ತನ್ನ ಹೇಳಿಕೆಯನ್ನು ದಾಖಲು ಮಾಡಿದೆ. ಅಲ್ಲದೇ ಇದು ಪತ್ರಿಕೋದ್ಯಮದ ಸರಿಯಾದ ಮಾದರಿ ಎಂದು ನಾವು ತಿಳಿದಿದ್ದೇವೆ.

Hot this week

ಬಾಗಮನೆ ಡೆವಲಪರ್ಸ್‌ ಪ್ರಸ್ತಾವ ತಿರಸ್ಕೃತ; ಒತ್ತುವರಿ ಜಾಗ ವಶಕ್ಕೆ ಪಡೆಯಲು ಮೀನಮೇಷ

ಬೆಂಗಳೂರು; ಒತ್ತುವರಿ ಮಾಡಿಕೊಂಡಿರುವ ಜಮೀನಿಗೆ ಪ್ರತಿಯಾಗಿ ತಮ್ಮ ಸ್ವಂತ ಭೂಮಿಯನ್ನು ಸರ್ಕಾರಕ್ಕೆ...

ವಿವಿಗಳ ಹುದ್ದೆ ನೇಮಕಾತಿಯಲ್ಲಿ ಅಕ್ರಮ ಚಟುವಟಿಕೆ, ಯುಜಿಸಿ ನಿಯಮ ಉಲ್ಲಂಘನೆ; ಒಪ್ಪಿಕೊಂಡ ಸರ್ಕಾರ

ಬೆಂಗಳೂರು;  ರಾಜ್ಯದ ಬಹುತೇಕ ವಿಶ್ವವಿದ್ಯಾಲಯಗಳು ಬೋಧಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಯುಜಿಸಿ...

ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ರಾಜ್ಯದ ಪಾಲು ಕುಸಿತ; ಕರ್ನಾಟಕಕ್ಕೆ ತೀವ್ರ ಸವಾಲು ಒಡ್ಡಲಿದೆಯೇ?

ಬೆಂಗಳೂರು;  ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ವರ್ಷದಿಂದ ವರ್ಷಕ್ಕೆ  ರಾಜ್ಯ ಪಾಲು ಕುಸಿತವಾಗುತ್ತಿರುವ...

ಕೃಷಿ, ಕೈಗಾರಿಕೆ ವಲಯದ ಪಾಲು ಇಳಿಕೆ; ಒಟ್ಟಾರೆ ಆಂತರಿಕ ಉತ್ಪನ್ನದಲ್ಲಿ ಹಿನ್ನಡೆ

ಬೆಂಗಳೂರು;  ರಾಜ್ಯದ ಒಟ್ಟು ಆಂತರಿಕ ಉತ್ಪನ್ನದಲ್ಲಿ 2024-25ರಲ್ಲಿ ಕೃಷಿ ವಲಯದ ಪಾಲು...

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

Topics

ಬಾಗಮನೆ ಡೆವಲಪರ್ಸ್‌ ಪ್ರಸ್ತಾವ ತಿರಸ್ಕೃತ; ಒತ್ತುವರಿ ಜಾಗ ವಶಕ್ಕೆ ಪಡೆಯಲು ಮೀನಮೇಷ

ಬೆಂಗಳೂರು; ಒತ್ತುವರಿ ಮಾಡಿಕೊಂಡಿರುವ ಜಮೀನಿಗೆ ಪ್ರತಿಯಾಗಿ ತಮ್ಮ ಸ್ವಂತ ಭೂಮಿಯನ್ನು ಸರ್ಕಾರಕ್ಕೆ...

ವಿವಿಗಳ ಹುದ್ದೆ ನೇಮಕಾತಿಯಲ್ಲಿ ಅಕ್ರಮ ಚಟುವಟಿಕೆ, ಯುಜಿಸಿ ನಿಯಮ ಉಲ್ಲಂಘನೆ; ಒಪ್ಪಿಕೊಂಡ ಸರ್ಕಾರ

ಬೆಂಗಳೂರು;  ರಾಜ್ಯದ ಬಹುತೇಕ ವಿಶ್ವವಿದ್ಯಾಲಯಗಳು ಬೋಧಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಯುಜಿಸಿ...

ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ರಾಜ್ಯದ ಪಾಲು ಕುಸಿತ; ಕರ್ನಾಟಕಕ್ಕೆ ತೀವ್ರ ಸವಾಲು ಒಡ್ಡಲಿದೆಯೇ?

ಬೆಂಗಳೂರು;  ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ವರ್ಷದಿಂದ ವರ್ಷಕ್ಕೆ  ರಾಜ್ಯ ಪಾಲು ಕುಸಿತವಾಗುತ್ತಿರುವ...

ಕೃಷಿ, ಕೈಗಾರಿಕೆ ವಲಯದ ಪಾಲು ಇಳಿಕೆ; ಒಟ್ಟಾರೆ ಆಂತರಿಕ ಉತ್ಪನ್ನದಲ್ಲಿ ಹಿನ್ನಡೆ

ಬೆಂಗಳೂರು;  ರಾಜ್ಯದ ಒಟ್ಟು ಆಂತರಿಕ ಉತ್ಪನ್ನದಲ್ಲಿ 2024-25ರಲ್ಲಿ ಕೃಷಿ ವಲಯದ ಪಾಲು...

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌...

ಅಂಬೇಡ್ಕರ್ ಆಶಾಕಿರಣ ಯೋಜನೆ ಜಾರಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ 50 ಪೈಸೆ ಸುಂಕ; ಪ್ರಸ್ತಾವ

ಬೆಂಗಳೂರು; ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪ್ರತಿ ಲೀಟರ್ ಮೇಲೆ 50 ಪೈಸೆಯಂತೆ...

ಸಾಲಬಾಧ್ಯತೆ: 33 ವರ್ಷಗಳಲ್ಲಿ 87 ಪಟ್ಟು ಹೆಚ್ಚಳ, ಬಿಜೆಪಿ ಅವಧಿಯಲ್ಲೇ 5,351.57 ಶತಕೋಟಿಗೆ ಏರಿಕೆ

ಬೆಂಗಳೂರು; ರಾಜ್ಯದ ಒಟ್ಟು ಸಾಲಬಾಧ್ಯತೆಯು ಕಳೆದ ಮೂರು ದಶಕಗಳಲ್ಲಿ ತೀವ್ರವಾಗಿ ಏರಿಕೆಯಾಗುತ್ತಲೇ...

ಅದಾನಿ ಎಸಿಸಿಗೆ ಲೆಟರ್ ಆಫ್‌ ಇಂಟೆಂಟ್‌; ದಿ ಫೈಲ್ ವರದಿ ಬೆನ್ನಲ್ಲೇ ಗಣಿ ವಿಭಾಗದಿಂದ ರೋಹಿಣಿ ಸಿಂಧೂರಿ ಎತ್ತಂಗಡಿ

ಬೆಂಗಳೂರು;  850.21 ಕೋಟಿಯಷ್ಟು ಬಾಕಿ ಉಳಿಸಿಕೊಂಡಿದ್ದರೂ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್‌...

Related Articles

Popular Categories

spot_imgspot_img
error: Content is protected !!