Monday | March 16, 2026 |

‘ದಿ ಫೈಲ್‌’ಗೆ ಸಮನ್ಸ್‌; ಕೋವಿಡ್‌ ಅಕ್ರಮಗಳ ಕುರಿತು ಪ್ರಕಟಿಸಿದ ವರದಿ ಸಲ್ಲಿಕೆ, ಆಯೋಗದ ಮುಂದೆ ಹೇಳಿಕೆ ದಾಖಲು

Support THE-FILE

spot_img

ಬೆಂಗಳೂರು; ಕೋವಿಡ್‌ ಕಾಲದಲ್ಲಿ ವೈದ್ಯಕೀಯ ಸಲಕರಣೆಗಳ ಖರೀದಿಯಲ್ಲಿ ನಡೆದಿದೆ ಎನ್ನಲಾಗಿರುವ ನಿಯಮಗಳ ಉಲ್ಲಂಘನೆ, ಅವ್ಯವಹಾರ ಸೇರಿದಂತೆ ವಿವಿಧ ರೀತಿಯ ಅಕ್ರಮಗಳ ಕುರಿತು ವಿಚಾರಣೆ ನಡೆಸುತ್ತಿರುವ ಹೈಕೋರ್ಟ್‌ ನಿವೃತ್ತ ನ್ಯಾಯಾಧೀಶ ಮೈಕಲ್‌ ಡಿ ಕುನ್ಹಾ ಅವರ ನೇತೃತ್ವದ ಆಯೋಗವು ‘ದಿ ಫೈಲ್‌’ಗೆ ಸಮನ್ಸ್‌ ಜಾರಿ ಮಾಡಿದೆ.

 

ಈ ವರದಿಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ದಾಖಲೆಗಳನ್ನು ಸಲ್ಲಿಸಬೇಕು ಎಂದು ಕುನ್ಹಾ ಅವರ ನೇತೃತ್ವದ ವಿಚಾರಣೆ ಆಯೋಗವು ಖುದ್ದು ಹಾಜರಾತಿಗೆ ಸಮನ್ಸ್‌ ಜಾರಿಗೊಳಿಸಿತ್ತು.

 

 

ಆಯೋಗದ ಸೂಚನೆಯಂತೆ ‘ದಿ ಫೈಲ್‌’ 2024ರ ಅಕ್ಟೋಬರ್‍‌ 24ರಂದು ಆಯೋಗದ ಮುಂದೆ ಹಾಜರಾಗಿತ್ತು.

 

 

ಸರಣಿ ರೂಪದಲ್ಲಿ ಪ್ರಕಟಿಸಿದ್ದ ವರದಿಗಳ ಪಿಡಿಎಫ್‌ ಪ್ರತಿಗಳನ್ನು ಪೆನ್‌ಡ್ರೈವ್‌ನಲ್ಲಿ ಅಡಕಗೊಳಿಸಿ ಸಲ್ಲಿಸಿದೆ.

 

 

ಅಲ್ಲದೇ ವಿಚಾರಣೆ ಆಯೋಗವು ಕೇಳಿದ್ದ ಪ್ರಶ್ನೆಗಳಿಗೂ ‘ದಿ ಫೈಲ್‌’ ಉತ್ತರ ಒದಗಿಸಿದೆ.

 

 

ಎನ್‌-95 ಮಾಸ್ಕ್‌, ಪಲ್ಸ್‌ ಆಕ್ಸಿಮೀಟರ್‍‌, ಪ್ಯಾರಾಮೀಟರ್‍‌, ರ್‍ಯಾಟ್‌ ಕಿಟ್‌, ವೆಂಟಿಲೇಟರ್ಸ್‌, ಸ್ಯಾನಿಟೈಜರ್ಸ್‌ ಸೇರಿದಂತೆ ಇನ್ನಿತರೆ ವೈದ್ಯಕೀಯ ಸಲಕರಣೆಗಳ ಖರೀದಿ ಸಂಬಂಧ ಪ್ರಾಥಮಿಕ ದಾಖಲೆಗಳನ್ನಾಧರಿಸಿ ‘ದಿ ಫೈಲ್‌’ 2020ರಿಂದಲೇ ವರದಿಗಳನ್ನು ಪ್ರಕಟಿಸಿತ್ತು.

 

‘ದಿ ಫೈಲ್‌’ ಹೊರಗೆಡವಿದ ಕೋವಿಡ್‌ ಭ್ರಷ್ಟಾಚಾರದ 50 ಮುಖಗಳು

 

ಅಲ್ಲದೇ ಕುನ್ಹಾ ಅವರ ನೇತೃತ್ವದ ವಿಚಾರಣೆ ಆಯೋಗವು ಸರ್ಕಾರಕ್ಕೆ ಸಲ್ಲಿಸಿದ್ದ ಮಧ್ಯಂತರ ವರದಿ ಆಧರಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಸಚಿವ ಸಂಪುಟಕ್ಕೆ ಸಲ್ಲಿಸಿದ್ದ ಮುಖ್ಯಾಂಶಗಳನ್ನು ಆಧರಿಸಿ ‘ದಿ ಫೈಲ್‌’ ವರದಿಗಳನ್ನು ಪ್ರಕಟಿಸಿತ್ತು.

 

ಅಂದು ಪ್ರತಿಪಕ್ಷ ನಾಯಕರಾಗಿದ್ದ ಸಿದ್ದರಾಮಯ್ಯ ಅವರು ಸದನದಲ್ಲಿ ‘ದಿ ಫೈಲ್‌’ ವರದಿಗಳನ್ನು ಉಲ್ಲೇಖಿಸಿ ಹಿಂದಿನ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದನ್ನು ಸ್ಮರಿಸಬಹುದು.

 

ದಾಖಲೆಗಳು ಇಲ್ಲದೆಯೇ ‘ದಿ ಫೈಲ್‌’ ವರದಿಗಳನ್ನು ಪ್ರಕಟಿಸಿಲ್ಲ. ಕೋವಿಡ್‌ ಅವಧಿಯಲ್ಲಿ ವೈದ್ಯಕೀಯ ಸಲಕರಣೆಗಳ ಖರೀದಿಗೆ ಸಂಬಂಧಿಸಿದಂತೆಯೂ ಅಂದು  ಲಭ್ಯವಿದ್ದ ಪ್ರಾಥಮಿಕ ದಾಖಲೆಗಳನ್ನು ಆಧರಿಸಿ ವರದಿಗಳನ್ನು  ಪ್ರಕಟಿಸಿತ್ತು. ಪ್ರಕಟವಾಗಿದ್ದ ವರದಿಗಳಲ್ಲಿಯೇ ದಾಖಲೆಗಳನ್ನು ಅಡಕಗೊಳಿಸಿತ್ತು. ಹಾಗಾಗಿಯೇ ವಿಚಾರಣೆ ಆಯೋಗದ ಮುಂದೆ ‘ದಿ ಫೈಲ್‌’ ತನ್ನ ಹೇಳಿಕೆಯನ್ನು ದಾಖಲು ಮಾಡಿದೆ. ಅಲ್ಲದೇ ಇದು ಪತ್ರಿಕೋದ್ಯಮದ ಸರಿಯಾದ ಮಾದರಿ ಎಂದು ನಾವು ತಿಳಿದಿದ್ದೇವೆ.

Hot this week

1,260 ಕೋಟಿ ಮೊತ್ತದ ಹಗರಣ; 3 ವರ್ಷವಾದರೂ ಕಾಣದ ತಾರ್ಕಿಕ ಅಂತ್ಯ, ತೆವಳಿದ ಲೋಕಾ ತನಿಖೆ

ಬೆಂಗಳೂರು;  1,260 ಕೋಟಿ ರು ಮೊತ್ತದಲ್ಲಿ  108 ಆರೋಗ್ಯ ಕವಚ ಆಂಬ್ಯುಲೆನ್ಸ್‌ಗಳನ್ನು...

ಶೈಕ್ಷಣಿಕ ಸಂಯೋಜಕ ಹುದ್ದೆ; 88.06 ಕೋಟಿ ಹೊರೆ, ಅರ್ಹ 1,500 ಅತಿಥಿ ಉಪನ್ಯಾಸಕರ ಹುದ್ದೆ ಕಿತ್ತುಕೊಂಡಿತೇ?

ಬೆಂಗಳೂರು; ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ದ  ನಿಗದಿತ ವಿದ್ಯಾರ್ಹತೆ ಹೊಂದದ...

ಅರಣ್ಯ ಜಮೀನಿನ ಖಾತೆ ಬದಲಾವಣೆ, ಅಸಮರ್ಪಕ ವರದಿ; ತಡವಾಗಿ ವಿಚಾರಣೆ, ನೋಟೀಸ್ ಜಾರಿ

ಬೆಂಗಳೂರು; ಭಾರತ ಸರ್ಕಾರದ ಅರಣ್ಯ ಸಚಿವಾಲಯದಿಂದ ಯಾವುದೇ ಪೂರ್ವಾನುಮತಿ ಪಡೆಯದೇ ಅಂದಾಜು...

ಸಾಮಾಜಿಕ ಭದ್ರತಾ ಯೋಜನೆ; ಖರ್ಚಾಗದ ಪೂರ್ಣ ಅನುದಾನ, 676.16 ಕೋಟಿ ಉಳಿಕೆ

ಬೆಂಗಳೂರು; ವೃದ್ಧಾಪ್ಯ, ಸಂಧ್ಯಾ ಸುರಕ್ಷಾ ಸೇರಿದಂತೆ ಒಟ್ಟಾರೆ 12 ಸಾಮಾಜಿಕ ಭದ್ರತಾ...

ಎಪಿಎಂಸಿಯಲ್ಲಿ ಅಕ್ರಮ; ನಿಯಮಬಾಹಿರವಾಗಿ 2,132 ಕಮಿಷನ್ ಏಜೆಂಟ್ ಲೈಸೆನ್ಸ್ ಮಂಜೂರು,

ಬೆಂಗಳೂರು; ಕೃಷಿ ಉತ್ಪನ್ನ ಮಾರುಕಟ್ಟೆ  ಸ್ವಂತ ಪ್ರಾಂಗಣ ಹೊಂದದೇ ಇದ್ದರೂ ಸಹ...

Topics

1,260 ಕೋಟಿ ಮೊತ್ತದ ಹಗರಣ; 3 ವರ್ಷವಾದರೂ ಕಾಣದ ತಾರ್ಕಿಕ ಅಂತ್ಯ, ತೆವಳಿದ ಲೋಕಾ ತನಿಖೆ

ಬೆಂಗಳೂರು;  1,260 ಕೋಟಿ ರು ಮೊತ್ತದಲ್ಲಿ  108 ಆರೋಗ್ಯ ಕವಚ ಆಂಬ್ಯುಲೆನ್ಸ್‌ಗಳನ್ನು...

ಶೈಕ್ಷಣಿಕ ಸಂಯೋಜಕ ಹುದ್ದೆ; 88.06 ಕೋಟಿ ಹೊರೆ, ಅರ್ಹ 1,500 ಅತಿಥಿ ಉಪನ್ಯಾಸಕರ ಹುದ್ದೆ ಕಿತ್ತುಕೊಂಡಿತೇ?

ಬೆಂಗಳೂರು; ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ದ  ನಿಗದಿತ ವಿದ್ಯಾರ್ಹತೆ ಹೊಂದದ...

ಅರಣ್ಯ ಜಮೀನಿನ ಖಾತೆ ಬದಲಾವಣೆ, ಅಸಮರ್ಪಕ ವರದಿ; ತಡವಾಗಿ ವಿಚಾರಣೆ, ನೋಟೀಸ್ ಜಾರಿ

ಬೆಂಗಳೂರು; ಭಾರತ ಸರ್ಕಾರದ ಅರಣ್ಯ ಸಚಿವಾಲಯದಿಂದ ಯಾವುದೇ ಪೂರ್ವಾನುಮತಿ ಪಡೆಯದೇ ಅಂದಾಜು...

ಸಾಮಾಜಿಕ ಭದ್ರತಾ ಯೋಜನೆ; ಖರ್ಚಾಗದ ಪೂರ್ಣ ಅನುದಾನ, 676.16 ಕೋಟಿ ಉಳಿಕೆ

ಬೆಂಗಳೂರು; ವೃದ್ಧಾಪ್ಯ, ಸಂಧ್ಯಾ ಸುರಕ್ಷಾ ಸೇರಿದಂತೆ ಒಟ್ಟಾರೆ 12 ಸಾಮಾಜಿಕ ಭದ್ರತಾ...

ಎಪಿಎಂಸಿಯಲ್ಲಿ ಅಕ್ರಮ; ನಿಯಮಬಾಹಿರವಾಗಿ 2,132 ಕಮಿಷನ್ ಏಜೆಂಟ್ ಲೈಸೆನ್ಸ್ ಮಂಜೂರು,

ಬೆಂಗಳೂರು; ಕೃಷಿ ಉತ್ಪನ್ನ ಮಾರುಕಟ್ಟೆ  ಸ್ವಂತ ಪ್ರಾಂಗಣ ಹೊಂದದೇ ಇದ್ದರೂ ಸಹ...

ರಾಜ್ಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಬೇಕು 10,000 ಕೋಟಿ ಹೆಚ್ಚುವರಿ ಅನುದಾನ; ಸಚಿವ ಸಂಪುಟಕ್ಕೆ ಪ್ರಸ್ತಾವ

ಬೆಂಗಳೂರು; ರಾಜ್ಯ ಶಿಕ್ಷಣ ನೀತಿ ಆಯೋಗವು ಮಾಡಿರುವ  ಒಟ್ಟು 72 ಪ್ರಮುಖ...

ಸರ್ಕಾರಿ ಜಮೀನು ಭೂಗಳ್ಳರ ಪಾಲು; ಪಿ ನಂಬರ್ ದುರಸ್ತಿ ಹೆಸರಿನಲ್ಲಿ ಅಕ್ರಮ, ತಹಶೀಲ್ದಾರ್‍‌ಗಳೇ ಭಾಗಿ, ಕ್ರಮವೇ ಇಲ್ಲ

ಬೆಂಗಳೂರು;  ಕೋಲಾರ ಜಿಲ್ಲೆಯ ಮಾಲೂರು ತಾಲೂಕು ಲಕ್ಕೂರು ಹೋಬಳಿ ಸಂಪಂಗೆರೆ ಗ್ರಾಮದಲ್ಲಿನ...

7ನೇ ವೇತನ ಆಯೋಗ ಶಿಫಾರಸ್ಸು; ಬದ್ಧ ವೆಚ್ಚದಲ್ಲಿ ಹೆಚ್ಚಳ, 15,000 ಕೋಟಿಯಿಂದ 20,000 ಕೋಟಿಗೆ ಏರಿಕೆ

ಬೆಂಗಳೂರು;  7ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸಿದಲ್ಲಿ  ಮುಂಬರುವ ವರ್ಷಗಳಲ್ಲಿ ಬದ್ಧ...

Related Articles

Popular Categories

error: Content is protected !!