Thursday | August 27, 2026 |

‘ದಿ ಫೈಲ್‌’ಗೆ ಸಮನ್ಸ್‌; ಕೋವಿಡ್‌ ಅಕ್ರಮಗಳ ಕುರಿತು ಪ್ರಕಟಿಸಿದ ವರದಿ ಸಲ್ಲಿಕೆ, ಆಯೋಗದ ಮುಂದೆ ಹೇಳಿಕೆ ದಾಖಲು

ಬೆಂಗಳೂರು; ಕೋವಿಡ್‌ ಕಾಲದಲ್ಲಿ ವೈದ್ಯಕೀಯ ಸಲಕರಣೆಗಳ ಖರೀದಿಯಲ್ಲಿ ನಡೆದಿದೆ ಎನ್ನಲಾಗಿರುವ ನಿಯಮಗಳ ಉಲ್ಲಂಘನೆ, ಅವ್ಯವಹಾರ ಸೇರಿದಂತೆ ವಿವಿಧ ರೀತಿಯ ಅಕ್ರಮಗಳ ಕುರಿತು ವಿಚಾರಣೆ ನಡೆಸುತ್ತಿರುವ ಹೈಕೋರ್ಟ್‌ ನಿವೃತ್ತ ನ್ಯಾಯಾಧೀಶ ಮೈಕಲ್‌ ಡಿ ಕುನ್ಹಾ ಅವರ ನೇತೃತ್ವದ ಆಯೋಗವು ‘ದಿ ಫೈಲ್‌’ಗೆ ಸಮನ್ಸ್‌ ಜಾರಿ ಮಾಡಿದೆ.

 

ಈ ವರದಿಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ದಾಖಲೆಗಳನ್ನು ಸಲ್ಲಿಸಬೇಕು ಎಂದು ಕುನ್ಹಾ ಅವರ ನೇತೃತ್ವದ ವಿಚಾರಣೆ ಆಯೋಗವು ಖುದ್ದು ಹಾಜರಾತಿಗೆ ಸಮನ್ಸ್‌ ಜಾರಿಗೊಳಿಸಿತ್ತು.

 

 

ಆಯೋಗದ ಸೂಚನೆಯಂತೆ ‘ದಿ ಫೈಲ್‌’ 2024ರ ಅಕ್ಟೋಬರ್‍‌ 24ರಂದು ಆಯೋಗದ ಮುಂದೆ ಹಾಜರಾಗಿತ್ತು.

 

 

ಸರಣಿ ರೂಪದಲ್ಲಿ ಪ್ರಕಟಿಸಿದ್ದ ವರದಿಗಳ ಪಿಡಿಎಫ್‌ ಪ್ರತಿಗಳನ್ನು ಪೆನ್‌ಡ್ರೈವ್‌ನಲ್ಲಿ ಅಡಕಗೊಳಿಸಿ ಸಲ್ಲಿಸಿದೆ.

 

 

ಅಲ್ಲದೇ ವಿಚಾರಣೆ ಆಯೋಗವು ಕೇಳಿದ್ದ ಪ್ರಶ್ನೆಗಳಿಗೂ ‘ದಿ ಫೈಲ್‌’ ಉತ್ತರ ಒದಗಿಸಿದೆ.

 

 

ಎನ್‌-95 ಮಾಸ್ಕ್‌, ಪಲ್ಸ್‌ ಆಕ್ಸಿಮೀಟರ್‍‌, ಪ್ಯಾರಾಮೀಟರ್‍‌, ರ್‍ಯಾಟ್‌ ಕಿಟ್‌, ವೆಂಟಿಲೇಟರ್ಸ್‌, ಸ್ಯಾನಿಟೈಜರ್ಸ್‌ ಸೇರಿದಂತೆ ಇನ್ನಿತರೆ ವೈದ್ಯಕೀಯ ಸಲಕರಣೆಗಳ ಖರೀದಿ ಸಂಬಂಧ ಪ್ರಾಥಮಿಕ ದಾಖಲೆಗಳನ್ನಾಧರಿಸಿ ‘ದಿ ಫೈಲ್‌’ 2020ರಿಂದಲೇ ವರದಿಗಳನ್ನು ಪ್ರಕಟಿಸಿತ್ತು.

 

‘ದಿ ಫೈಲ್‌’ ಹೊರಗೆಡವಿದ ಕೋವಿಡ್‌ ಭ್ರಷ್ಟಾಚಾರದ 50 ಮುಖಗಳು

 

ಅಲ್ಲದೇ ಕುನ್ಹಾ ಅವರ ನೇತೃತ್ವದ ವಿಚಾರಣೆ ಆಯೋಗವು ಸರ್ಕಾರಕ್ಕೆ ಸಲ್ಲಿಸಿದ್ದ ಮಧ್ಯಂತರ ವರದಿ ಆಧರಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಸಚಿವ ಸಂಪುಟಕ್ಕೆ ಸಲ್ಲಿಸಿದ್ದ ಮುಖ್ಯಾಂಶಗಳನ್ನು ಆಧರಿಸಿ ‘ದಿ ಫೈಲ್‌’ ವರದಿಗಳನ್ನು ಪ್ರಕಟಿಸಿತ್ತು.

 

ಅಂದು ಪ್ರತಿಪಕ್ಷ ನಾಯಕರಾಗಿದ್ದ ಸಿದ್ದರಾಮಯ್ಯ ಅವರು ಸದನದಲ್ಲಿ ‘ದಿ ಫೈಲ್‌’ ವರದಿಗಳನ್ನು ಉಲ್ಲೇಖಿಸಿ ಹಿಂದಿನ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದನ್ನು ಸ್ಮರಿಸಬಹುದು.

 

ದಾಖಲೆಗಳು ಇಲ್ಲದೆಯೇ ‘ದಿ ಫೈಲ್‌’ ವರದಿಗಳನ್ನು ಪ್ರಕಟಿಸಿಲ್ಲ. ಕೋವಿಡ್‌ ಅವಧಿಯಲ್ಲಿ ವೈದ್ಯಕೀಯ ಸಲಕರಣೆಗಳ ಖರೀದಿಗೆ ಸಂಬಂಧಿಸಿದಂತೆಯೂ ಅಂದು  ಲಭ್ಯವಿದ್ದ ಪ್ರಾಥಮಿಕ ದಾಖಲೆಗಳನ್ನು ಆಧರಿಸಿ ವರದಿಗಳನ್ನು  ಪ್ರಕಟಿಸಿತ್ತು. ಪ್ರಕಟವಾಗಿದ್ದ ವರದಿಗಳಲ್ಲಿಯೇ ದಾಖಲೆಗಳನ್ನು ಅಡಕಗೊಳಿಸಿತ್ತು. ಹಾಗಾಗಿಯೇ ವಿಚಾರಣೆ ಆಯೋಗದ ಮುಂದೆ ‘ದಿ ಫೈಲ್‌’ ತನ್ನ ಹೇಳಿಕೆಯನ್ನು ದಾಖಲು ಮಾಡಿದೆ. ಅಲ್ಲದೇ ಇದು ಪತ್ರಿಕೋದ್ಯಮದ ಸರಿಯಾದ ಮಾದರಿ ಎಂದು ನಾವು ತಿಳಿದಿದ್ದೇವೆ.

Hot this week

ನೀರಾವರಿ ನಿಗಮಗಳ ಗುತ್ತಿಗೆದಾರರಿಗೆ 15,429.51 ಕೋಟಿ ರು ಬಾಕಿ; ಸ್ಥಗಿತಗೊಂಡಿವೆಯೇ ಕಾಮಗಾರಿಗಳು?

ಬೆಂಗಳೂರು;  ಕೃಷ್ಣಭಾಗ್ಯ ಜಲನಿಗಮ ಸೇರಿದಂತೆ ರಾಜ್ಯದ ನಾಲ್ಕು ನೀರಾವರಿ ನಿಗಮಗಳು ಅನುಷ್ಠಾನಗೊಳಿಸುತ್ತಿರುವ...

ಟೆಂಡರ್ ಇಲ್ಲದೆಯೇ 3.11 ಕೋಟಿ ನೇರ ಹೂಡಿಕೆ, ಮುಂಗಡ ಹಣ ಹೊಂದಾಣಿಕೆಯಲ್ಲೂ ವಿಳಂಬ, ಲಕ್ಷಾಂತರ ರು ನಷ್ಟ; ಮಹರ್ಷಿ ವಾಲ್ಮೀಕಿ ವಿವಿಯಲ್ಲಿ ಮತ್ತೊಂದು ಅಕ್ರಮ!

ಬೆಂಗಳೂರು; ರಾಯಚೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಯಾವುದೇ ಟೆಂಡರ್‍‌ ಕರೆಯದೇ ನೇರವಾಗಿ...

ವಾಲ್ಮೀಕಿ ವಿವಿಯಲ್ಲಿ ಮತ್ತೊಂದು ಲೋಪ; ಹಣ ಪಾವತಿಯಲ್ಲಿ ಸರ್ಕಾರದ ಆದೇಶಗಳ ಉಲ್ಲಂಘನೆ, 51.21 ಕೋಟಿ ಮೊತ್ತದ ವಹಿವಾಟು ಪಾರದರ್ಶಕವಾಗಿವೆಯೇ?

ಬೆಂಗಳೂರು; ರಾಯಚೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು ಹಣ ಪಾವತಿ ಸಂದರ್ಭಗಳಲ್ಲಿ ಸರ್ಕಾರದ...
Please Scan to make Your Contribution

Topics

ನೀರಾವರಿ ನಿಗಮಗಳ ಗುತ್ತಿಗೆದಾರರಿಗೆ 15,429.51 ಕೋಟಿ ರು ಬಾಕಿ; ಸ್ಥಗಿತಗೊಂಡಿವೆಯೇ ಕಾಮಗಾರಿಗಳು?

ಬೆಂಗಳೂರು;  ಕೃಷ್ಣಭಾಗ್ಯ ಜಲನಿಗಮ ಸೇರಿದಂತೆ ರಾಜ್ಯದ ನಾಲ್ಕು ನೀರಾವರಿ ನಿಗಮಗಳು ಅನುಷ್ಠಾನಗೊಳಿಸುತ್ತಿರುವ...

ಟೆಂಡರ್ ಇಲ್ಲದೆಯೇ 3.11 ಕೋಟಿ ನೇರ ಹೂಡಿಕೆ, ಮುಂಗಡ ಹಣ ಹೊಂದಾಣಿಕೆಯಲ್ಲೂ ವಿಳಂಬ, ಲಕ್ಷಾಂತರ ರು ನಷ್ಟ; ಮಹರ್ಷಿ ವಾಲ್ಮೀಕಿ ವಿವಿಯಲ್ಲಿ ಮತ್ತೊಂದು ಅಕ್ರಮ!

ಬೆಂಗಳೂರು; ರಾಯಚೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಯಾವುದೇ ಟೆಂಡರ್‍‌ ಕರೆಯದೇ ನೇರವಾಗಿ...

ವಾಲ್ಮೀಕಿ ವಿವಿಯಲ್ಲಿ ಮತ್ತೊಂದು ಲೋಪ; ಹಣ ಪಾವತಿಯಲ್ಲಿ ಸರ್ಕಾರದ ಆದೇಶಗಳ ಉಲ್ಲಂಘನೆ, 51.21 ಕೋಟಿ ಮೊತ್ತದ ವಹಿವಾಟು ಪಾರದರ್ಶಕವಾಗಿವೆಯೇ?

ಬೆಂಗಳೂರು; ರಾಯಚೂರಿನಲ್ಲಿರುವ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು ಹಣ ಪಾವತಿ ಸಂದರ್ಭಗಳಲ್ಲಿ ಸರ್ಕಾರದ...

ಮಹರ್ಷಿ ವಾಲ್ಮೀಕಿ ವಿ.ವಿ.ಯಲ್ಲಿ 38.98 ಕೋಟಿ ರು ಗೆ ಆಕ್ಷೇಪಣೆ; ವಾರ್ಷಿಕ ಲೆಕ್ಕಪತ್ರಗಳಲ್ಲಿ ಬ್ಯಾಂಕ್‌ ಖಾತೆಗಳ ವಿವರ ಒದಗಿಸಿಲ್ಲವೇಕೆ?

ಬೆಂಗಳೂರು;  ರಾಯಚೂರಿನಲ್ಲಿರುವ  ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯವು  ಟೆಂಡರ್ ಕರೆಯದೇ ನೇರವಾಗಿ ಏಜೆನ್ಸಿ...

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ, ಜನಸೇವಾ ಟ್ರಸ್ಟ್‌ಗೆ 121 ಎಕರೆ ಜಮೀನು ಮಂಜೂರು; ಸದನಕ್ಕೆ ಪಟ್ಟಿ ಒದಗಿಸಿದ ಸರ್ಕಾರ

ಬೆಂಗಳೂರು; ಕಳೆದ 16 ವರ್ಷಗಳಲ್ಲಿ  ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಸಂಘ ಪರಿವಾರದ...

ಸಿಎಂ ಮಾಧ್ಯಮ ಕಾರ್ಯದರ್ಶಿಗಳಿಗೆ ಮಾಸಿಕ 3 ಲಕ್ಷ ರು ವೇತನ; ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು, ಅಧಿಕಾರಿವರ್ಗದಲ್ಲಿ ಚರ್ಚೆ

ಬೆಂಗಳೂರು;  ಚಾಲ್ತಿಯಲ್ಲಿರುವ ಕಾಮಗಾರಿಗಳಿಗೆ ಮತ್ತು ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಅನುದಾನ...

Related Articles

Popular Categories

error: Content is protected !!