Friday | June 12, 2026 |

21,767 ವಕ್ಫ್‌ ಆಸ್ತಿಗಳ ಖಾತೆ ಬದಲಾವಣೆ; 7 ತಿಂಗಳ ಹಿಂದೆಯೇ ಕಂದಾಯ ಇಲಾಖೆಗೆ ಸೂಚನೆ, ಪತ್ರ ಬಹಿರಂಗ

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿರುವ 21,767 ವಕ್ಫ್‌ ಆಸ್ತಿಗಳ ಖಾತೆ ಬದಲಾವಣೆ ಮಾಡಲು 7 ತಿಂಗಳ ಹಿಂದೆಯೇ ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಸೂಚನೆ ನೀಡಲಾಗಿತ್ತು. ಈಗಿನ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರು ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾಗಿದ್ದ ಸಂದರ್ಭದಲ್ಲೇ ವಕ್ಪ್‌ ಆಸ್ತಿ ಖಾತೆ ಬದಲಾವಣೆ ಮಾಡಲು  ಪತ್ರವನ್ನು ಬರೆದಿದ್ದರು.

 

ರೈತರು ಅನುಭವ ಮತ್ತು ಸ್ವಾಧೀನದಲ್ಲಿರುವ ಜಮೀನುಗಳ ಆರ್ ಟಿ ಸಿ ಗಳಲ್ಲಿ ವಕ್ಫ್‌ ಎಂದು ನಮೂದಿಸಲು ಸೂಚಿಸಿರುವ  ಕುರಿತು ಪ್ರತಿಪಕ್ಷ ಬಿಜೆಪಿಯು ಕಾಂಗ್ರೆಸ್‌ ಮೇಲೆ ಮುಗಿ ಬಿದ್ದಿದೆ. ರೈತರ ಪ್ರತಿರೋಧ ಹೆಚ್ಚಾಗುತ್ತಿದ್ದಂತೆ ರೈತರಿಗೆ ನೀಡಿರುವ ನೋಟೀಸ್‌ ಹಿಂಪಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ. ಈ ಬೆಳವಣಿಗೆಗಳ ಬೆನ್ನಲ್ಲೇ ಇದೀಗ ಕಂದಾಯ ಇಲಾಖೆಯೊಂದರಲ್ಲೇ 21,767 ವಕ್ಫ್‌ ಆಸ್ತಿಗಳ ಖಾತೆ ಬದಲಾವಣೆ ಮಾಡಬೇಕು ಮತ್ತು ಅವುಗಳ ಮಾಹಿತಿಯನ್ನು  ಭೂಮಿ ತಂತ್ರಾಂಶದಲ್ಲಿ ನೋಂದಾಯಿಸಬೇಕು ಎಂದು ಶಾಲಿನಿ ರಜನೀಶ್‌ ಅವರು ಸೂಚಿಸಿದ್ದ ಪತ್ರವು ಮುನ್ನೆಲೆಗೆ ಬಂದಿದೆ.

 

ರಾಜ್ಯಮಟ್ಟದ ವಕ್ಫ್‌ ಆಸ್ತಿಗಳ ಕಾರ್ಯಪಡೆಯು ಸಾಧಿಸಿರುವ ಕುರಿತು ಪ್ರಗತಿ ಪರಿಶೀಲನೆ ಕುರಿತು 2024ರ ಏಪ್ರಿಲ್‌ 15ರಂದೇ ಸಭೆ ನಡೆದಿತ್ತು. ಈ  ಸಭೆಯಲ್ಲಿ ಕಂದಾಯ ಇಲಾಖೆಯೊಂದರಲ್ಲೇ 21,767 ವಕ್ಫ್‌ ಆಸ್ತಿಗಳ ಖಾತೆ ಬದಲಾವಣೆಯಾಗಿಲ್ಲ ಎಂಬ ಸಂಗತಿಯ ಕುರಿತು ಚರ್ಚೆಯಾಗಿತ್ತು.

 

ಈ ಕುರಿತು ಅಭಿವೃದ್ಧಿ ಆಯುಕ್ತರಾಗಿದ್ದ ಡಾ ಶಾಲಿನಿ ರಜನೀಶ್‌ ಅವರು ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಾಜೇಂದರ್‍‌ ಕುಮಾರ್‍‌ ಕಟಾರಿಯಾ ಅವರಿಗೆ 2024ರ ಏಪ್ರಿಲ್‌ 16ರಂದು ಪತ್ರವೊಂದನ್ನು ಬರೆದಿದ್ದರು.  ಈ ಪತ್ರದ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

‘ಕಂದಾಯ ಇಲಾಖೆಯಲ್ಲಿ ಒಟ್ಟು 21,767 ವಕ್ಫ್‌ ಆಸ್ತಿಗಳ ಖಾತೆ ಬದಲಾವಣೆಯಾಗಬೇಕಿದ್ದು ಈ ವಕ್ಫ್‌ ಆಸ್ತಿಗಳ ಮಾಹಿತಿಯನ್ನು ಭೂಮಿ ತಂತ್ರಾಂಶದಡಿಯಲ್ಲಿ ನೋಂದಾಯಿಸಬೇಕಿದೆ,’ ಎಂದು ಪತ್ರದಲ್ಲಿ ತಿಳಿಸಿದ್ದರು ಎಂಬುದು  ಗೊತ್ತಾಗಿದೆ.

 

ಈ ಕುರಿತು ಕಂದಾಯ ಸಚಿವ ಕೃಷ್ಣಬೈರೇಗೌಡ ಮತ್ತು ಸಚಿವ ಬಿ ಝಡ್‌ ಜಮೀರ್‍‌ ಅಹ್ಮದ್‌ ಖಾನ್‌ ಅವರೊಂದಿಗೆ ಎರಡೂ ಇಲಾಖೆಗಳ ಅಧಿಕಾರಿಗಳು ಚರ್ಚಿಸಿದ್ದಾರೆ ಎಂದು ತಿಳಿದು ಬಂದಿದೆ.

 

ಅಲ್ಲದೇ ನೋಂದಾಯಿಸಲ್ಪಡದ ಆಸ್ತಿಗಳ ವಿವರಗಳನ್ನು ಆಡಳಿತಾತ್ಮಕವಾಗಿ ಅಧಿನಿಯಮದಡಿ ತರಬೇಕು. ಕಂದಾಯ ಇಲಾಖೆಗೆ ಸಲ್ಲಿಸಿರುವ 328 ಪ್ರಸ್ತಾವನೆಗಳ ಬಗ್ಗೆ ಪರಿಶೀಲಿಸಿ, ಲಭ್ಯವಿರುವ ಸರ್ಕಾರಿ ಜಮೀನಿನಲ್ಲಿ ಖಬರಸ್ತಾನ್‌ ಜಮೀನುಗಳಿಗೆ ಮಂಜೂರಾತಿ ನೀಡಬೇಕು. ಹಾಗೂ ಲಭ್ಯವಿಲ್ಲದ ಸಂದಭ್ದಲ್ಲಿ ನಿಯಮಾನುಸಾರ ಖಾಸಗಿ ಜಮೀನು ಖರೀದಿಸಿ ವಿತರಿಸಲು ಅಗತ್ಯಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿರುವುದು ಪತ್ರದಿಂದ ತಿಳಿದು ಬಂದಿದೆ.

 

 

 

ಅದೇ ರೀತಿ ‘ಕರ್ನಾಟಕ ಭೂ ಕಬಳಿಕೆ ನಿಯಂತ್ರಣಾ ಕಾಯ್ದೆ ಹಾಗೂ ವಕ್ಫ್‌ ಕಾಯ್ದೆ ಕಲಂ 52(ಎ) ಪ್ರಕಾರ ವಕ್ಫ್‌ ಆಸ್ತಿಗಳ ಭೂಮಿ ಅತಿಕ್ರಮಣವಾಗಿರುವ ವಿಷಯವನ್ನು ಇಲಾಖೆಯ ಮಾಸಿಕ ಸಭೆ ಮತ್ತು ಸಚಿವರ ಅಧ್ಯಕ್ಷತೆಯ ತ್ರೈಮಾಸಿಕ ಸಭೆಗಳಲ್ಲಿ ಕಾರ್ಯಸೂಚಿಯನ್ನಾಗಿ ಇಡಬೇಕು,’ ಎಂದೂ ನಿರ್ದೇಶಿಸಿರುವುದು ಗೊತ್ತಾಗಿದೆ.

 

ರಾಜ್ಯದಲ್ಲಿ ಅನಧಿಕೃತ ಒತ್ತುವರಿ ವಿಚಾರವಾಗಿ ಈವರೆಗೆ ಒಟ್ಟು 3,720 ಪ್ರಕರಣ ದಾಖಲಾಗಿದೆ. ಒತ್ತುವರಿಯನ್ನು ತೆರವುಗೊಳಿಸುವ ನಿಟ್ಟಿನಲ್ಲಿ ವಕ್ಫ್ ಕಾಯ್ದೆ ಕಲಂ – 54 ರ ಪ್ರಕಾರ ಈಗಾಗಲೇ ಪ್ರಕರಣ ದಾಖಲು ಮಾಡಿದೆ. ಕರ್ನಾಟಕ ವಕ್ಫ್‌ ನ್ಯಾಯಾಧೀಕರಣಕ್ಕೆ ಒತ್ತುವರಿ ತೆರವು ಆದೇಶಕ್ಕಾಗಿ ಒಟ್ಟು 1458 ಅರ್ಜಿ ಸಲ್ಲಿಕೆಯಾಗಿವೆ.

 

ಈವರೆಗೆ ಒಟ್ಟು 319 ಎಕರೆ ಹಾಗೂ 9 ಗುಂಟೆ ಹಾಗೂ 128453.9 ಚದರ ಅಡಿ ವಕ್ಫ್‌ ಅಸ್ತಿಯನ್ನು ಒತ್ತುವರಿದಾರರಿಂದ ತೆರವುಗೊಳಿಸಿ ಸಂಬಂಧಪಟ್ಟ ವಕ್ಫ್‌ ಸಂಸ್ಥೆಯ ಸ್ವಾಧೀನಕ್ಕೆ ಪಡೆದಿದೆ.

 

ರಾಯಚೂರು ಜಿಲ್ಲೆಯೊಂದರಲ್ಲೇ 423 ಎಕರೆ 17 ಗುಂಟೆ ಮತ್ತು 89649 ಚದರ ಅಡಿ ವಕ್ಫ್ ಬೋರ್ಡ್ ಆಸ್ತಿಯನ್ನು ಅತಿಕ್ರಮಣವಾಗಿದೆ. ವಕ್ಫ್‌ ಆಸ್ತಿ ವಿಚಾರವಾಗಿ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್‍‌ ಮಾಣಿಪ್ಪಾಡಿ ಅವರು ದನಿ ಎತ್ತಿದ್ದರು. ಅಲ್ಲದೇ ವಕ್ಫ್‌ ಆಸ್ತಿ ಅತಿಕ್ರಮಣದಲ್ಲಿ 2ರಿಂದ 3 ಲಕ್ಷ ಕೋಟಿ ರು ಅಕ್ರಮ ನಡೆದಿದೆ ಎಂಬ ಆರೋಪವೂ ಕೇಳಿ ಬಂದಿತ್ತು.

 

ಒಂದು ಬಾರಿ ವಕ್ಫ್‌ ಸ್ವತ್ತು ಎಂದು ಘೋಷಿಸಿದ ಮೇಲೆ ಅದು ಎಂದೆಂದಿಗೂ ವಕ್ಫ್‌ ಸ್ವತ್ತಾಗಿಯೇ ಉಳಿಯುತ್ತದೆ ಎಂದು ಸರ್ವೋಚ್ಛ ನ್ಯಾಯಾಲಯವು ಆಂಧ್ರಪ್ರದೇಶ ವಕ್ಫ್‌ ಮಂಡಳಿ ಹಾಗೂ ಇತರರು ಪ್ರಕರಣದಲ್ಲಿ ತಿಳಿಸಿತ್ತು. ಆದರೆ ಕಂದಾಯ ಇಲಾಖೆಯ ಉಪ ವಿಭಾಗಾಧಿಕಾರಿ, ಜಿಲ್ಲಾಧಿಕಾರಿ ಕಚೇರಿಗಳಲ್ಲಿ ರಾಜ್ಯದ ವಕ್ಫ್‌ ಆಸ್ತಿಗಳ ಹಕ್ಕುಗಳ ವರ್ಗಾವಣೆ ಮಾಡುತ್ತಿದ್ದರು. ಇದು ಸರ್ಕಾರದ ಗಮನಕ್ಕೂ ಬಂದಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರೂ ಸಹ ವಿಧಾನಸಭೆಗೆ ಲಿಖಿತ ಉತ್ತರ ನೀಡಿದ್ದರು.

 

 

ಪೌರಾಡಳಿತ ನಿರ್ದೇಶನದ ಸುತ್ತೋಲೆ ಮೇರೆಗೆ 2023ರ ಆಗಸ್ಟ್‌ 1ರಿಂದ ಅನ್ವಯವಾಗುವಂತೆ ಸ್ಥಳೀಯ ಸಂಸ್ಥೆ ಮತ್ತು ವಕ್ಫ್‌ ಬೋರ್ಡ್‌ ಆಸ್ತಿಗಳಿಗೆ ಸಂಬಂಧಿಸಿದಂತೆ ಇಲಾಖೆಗಳು ಹಕ್ಕು ವರ್ಗಾವಣೆಗೆ ಕೋರಿಕೆ ಸಲ್ಲಿಸಿದಲ್ಲಿ ಮಾತ್ರ ಸಂಬಂಧಿಸಿದ ಜಿಲ್ಲಾಧಿಕಾರಿಗಳಿಂದ ಅನುಮತಿ ಪಡೆದು ಹಕ್ಕು ವರ್ಗಾವಣೆ ಮಾಡಬೇಕು ಎಂದು ಸೂಚಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸದನಕ್ಕೆ ಮಾಹಿತಿ ಒದಗಿಸಿದ್ದರು.

Hot this week

ಆರ್ಥಿಕ ಬಿಕ್ಕಟ್ಟು; ಶಿಕ್ಷಕರ ನೇಮಕಾತಿ, ವೃತ್ತಿಪರತೆ ಅಭಿವೃದ್ಧಿ ವೆಚ್ಚಕ್ಕೆ ತಡೆಹಿಡಿದಿತ್ತೇ ಸರ್ಕಾರ?

ಬೆಂಗಳೂರು; ರಾಜ್ಯದ ಹೆಚ್ಚಿನ ಸರ್ಕಾರಿ ಶಾಲೆಗಳು ಆರ್‍‌ಟಿಇ ಕಾಯ್ದೆಯು ಭೌತಿಕ ಮೂಲಸೌಕರ್ಯಗಳು...

ತ್ಯಾಜ್ಯ ವಿಲೇವಾರಿ ಟೆಂಡರ್ ಪ್ರಕ್ರಿಯೆಗಳಲ್ಲಿ ಅಕ್ರಮ ಆರೋಪ; ಮಧ್ಯಪ್ರವೇಶಕ್ಕೆ ಲೋಕಭವನ ಕದ ತಟ್ಟಿದ ಬಿಜೆಪಿ, ಸ್ವತಂತ್ರ ತನಿಖೆಗೆ ಮುಂದಾಗುವರೇ?

ಬೆಂಗಳೂರು; ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಸಮಗ್ರ ಘನ ತ್ಯಾಜ್ಯ ನಿರ್ವಹಣಾ...

ಕಸ ವಿಲೇವಾರಿ ಟೆಂಡರ್‍‌ನಲ್ಲಿ ಅಕ್ರಮ; 10,000 ಕೋಟಿ ಕಿಕ್‌ ಬ್ಯಾಕ್‌ ಆರೋಪ, ಹೈಕಮಾಂಡ್ ಕಪ್ಪದ ಟೆಂಡರ್, ರಾಜ್ಯಪಾಲರಿಗೆ ದೂರು, ದಿ ಫೈಲ್ ವರದಿ ಬೆನ್ನಲ್ಲೇ ತುಟಿ ಬಿಚ್ಚಿದ ಆರ್ ಅಶೋಕ್

ಬೆಂಗಳೂರು; ಸಮಗ್ರ ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯೂಎಂಎಲ್‌ ಯೋಜಿಸಿದ್ದ ಟೆಂಡರ್ ಪ್ಯಾಕೇಜ್‌ಗಳಲ್ಲಿ...
Please Scan to make Your Contribution

Topics

ಆರ್ಥಿಕ ಬಿಕ್ಕಟ್ಟು; ಶಿಕ್ಷಕರ ನೇಮಕಾತಿ, ವೃತ್ತಿಪರತೆ ಅಭಿವೃದ್ಧಿ ವೆಚ್ಚಕ್ಕೆ ತಡೆಹಿಡಿದಿತ್ತೇ ಸರ್ಕಾರ?

ಬೆಂಗಳೂರು; ರಾಜ್ಯದ ಹೆಚ್ಚಿನ ಸರ್ಕಾರಿ ಶಾಲೆಗಳು ಆರ್‍‌ಟಿಇ ಕಾಯ್ದೆಯು ಭೌತಿಕ ಮೂಲಸೌಕರ್ಯಗಳು...

ಕಸ ವಿಲೇವಾರಿ ಟೆಂಡರ್‍‌ನಲ್ಲಿ ಅಕ್ರಮ; 10,000 ಕೋಟಿ ಕಿಕ್‌ ಬ್ಯಾಕ್‌ ಆರೋಪ, ಹೈಕಮಾಂಡ್ ಕಪ್ಪದ ಟೆಂಡರ್, ರಾಜ್ಯಪಾಲರಿಗೆ ದೂರು, ದಿ ಫೈಲ್ ವರದಿ ಬೆನ್ನಲ್ಲೇ ತುಟಿ ಬಿಚ್ಚಿದ ಆರ್ ಅಶೋಕ್

ಬೆಂಗಳೂರು; ಸಮಗ್ರ ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಬಿಎಸ್‌ಡಬ್ಲ್ಯೂಎಂಎಲ್‌ ಯೋಜಿಸಿದ್ದ ಟೆಂಡರ್ ಪ್ಯಾಕೇಜ್‌ಗಳಲ್ಲಿ...

ಒಂದು ರಾಷ್ಟ್ರ ಒಂದು ಚುನಾವಣೆ; ಸಂಸತ್‌ ಜಂಟಿ ಸಮಿತಿಗೆ 5 ತಿಂಗಳಾದರೂ ಮಾಹಿತಿ ನೀಡದ ರಾಜ್ಯ

ಬೆಂಗಳೂರು; ಒಂದು ರಾಷ್ಟ್ರ ಒಂದು ಚುನಾವಣೆಗೆ ಸಂಬಂಧಿಸಿದಂತೆ ಸಂವಿಧಾನದ 129ನೇ ತಿದ್ದುಪಡಿ...

ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌, ಸಿಎಂ ಜನಸ್ಪಂದನ, ಸಿ ಎಸ್ ಕಚೇರಿಯಲ್ಲಿ ಇತ್ಯರ್ಥವಾಗದ 37,782 ಅರ್ಜಿಗಳು; ನಿಷ್ಕ್ರೀಯವಾಯಿತೇ ಆಡಳಿತ?

ಬೆಂಗಳೂರು;  ಸಾರ್ವಜನಿಕರು ವಿವಿಧ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌,...

ಅತಿಥಿ ಶಿಕ್ಷಕರ ನೇಮಕ ಪದ್ಧತಿಗೆ ರಾಜ್ಯ ಶಿಕ್ಷಣ ನೀತಿ ಆಯೋಗ ವಿರೋಧ; ಪದ್ದತಿ ಸಂಪೂರ್ಣವಾಗಿ ತೆಗೆದು ಹಾಕದೇ ವರದಿಯನ್ನೇ ಮೂಲೆಗುಂಪು ಮಾಡಿತೇ ಸರ್ಕಾರ?

ಬೆಂಗಳೂರು; 'ರಾಜ್ಯದಲ್ಲಿ   ಬೇರೂರಿದ ಗುತ್ತಿಗೆ ಶಿಕ್ಷಕ ನೇಮಕ ಪದ್ಧತಿಯಿಂದಾಗಿ  ವೃತ್ತಿಪರತೆಯ ಕೊರತೆ...

Related Articles

Popular Categories

error: Content is protected !!