Wednesday | August 19, 2026 |

ಪ.ಜಾತಿ ಕಾಲೋನಿ ಸೌಕರ್ಯ ಕಲ್ಪಿಸಲು ಮಂಜೂರಾಗಿದ್ದ ಸಿಎಂ ವಿಶೇಷ ಅನುದಾನ ರದ್ದು; ಸ್ಪೀಕರ್ ಪತ್ರಕ್ಕೆ ಮಾನ್ಯತೆ

ಬೆಂಗಳೂರು; ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿ ಮಂಗಳೂರು ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ನೀಡಿದ್ದ ಮಂಜೂರಾತಿ ಆದೇಶವನ್ನು ಸರ್ಕಾರವು ರದ್ದುಪಡಿಸಿದೆ. ಅಲ್ಲದೇ ಈಗಾಗಲೇ ಅನುದಾನ ಬಿಡುಗಡೆ ಮಾಡಿದ್ದರೇ ಅದನ್ನು ಕೂಡಲೇ ಹಿಂಪಡೆಯಬೇಕು ಎಂದೂ ಸೂಚಿಸಿದೆ.

 

ವಿಧಾನಸಭೆ ಸಭಾಧ್ಯಕ್ಷ ಯು ಟಿ ಖಾದರ್‍‌ ಅವರ ಕೋರಿಕೆ ಮೇರೆಗೆ ಈ ಮಂಜೂರಾತಿ ಆದೇಶವನ್ನು ರದ್ದುಪಡಿಸಿದೆ. ಈ ಸಂಬಂಧ 2024ರ ಡಿಸೆಂಬರ್‍‌ 3ರಂದೇ ಆದೇಶ ಹೊರಡಿಸಿದೆ. ಈ ಆದೇಶದ (ಸಕಇ 250 ಪಕವಿ 2024 ) ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.

 

ಮಂಗಳೂರು ವಿಧಾನಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿ ಕಾಲೋನಿಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿಯಲ್ಲಿ 2024ರ ಆಗಸ್ಟ್‌ 8ರಂದು 1 ಕೋಟಿ ರು. ಅನುದಾನ ಮಂಜೂರಾಗಿತ್ತು. ಈ ಬಗ್ಗೆ ಸರ್ಕಾರದ ಆದೇಶವನ್ನೂ ಹೊರಡಿಸಲಾಗಿತ್ತು.

 

ಈ ಆದೇಶದಂತೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕು ಎಂದು ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯು 2024ರ ನವೆಂಬರ್‍‌ 11ರಂದು ಸೂಚಿಸಿದ್ದರು.

 

 

ಈ ಮಧ್ಯೆ ಈ ಅನುದಾನವನ್ನು ವಿವಿಧ ಇಲಾಖೆಗಳಿಗೆ ಮರು ಹಂಚಿಕೆಮಾಡಬೇಕು ಎಂದು ವಿಧಾನಸಭೆ ಸಭಾಧ್ಯಕ್ಷ ಯು ಟಿ ಖಾದರ್‍‌ ಅವರು ಕೋರಿದ್ದರು. ಅಲ್ಲದೇ ಸಮಾಜ ಕಲ್ಯಾಣ ಇಲಾಖೆಗೆ ಮಂಜೂರಾಗಿದ್ದ ಮೊತ್ತವನ್ನು ಕಡಿತ ಮಾಡುವಂತೆ ತಿಳಿಸಿದ್ದರು ಎಂಬುದು ಆದೇಶದ ಪ್ರತಿಯಿಂದ ಗೊತ್ತಾಗಿದೆ.

 

 

‘ಈ ಹಿನ್ನೆಲೆಯಲ್ಲಿ ಮಂಗಳೂರು ವಿಧಾನಸಭೆ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿ ಸಮಾಜ ಕಲ್ಯಾಣ ಇಲಾಖೆಗೆ ಮಂಜೂರಾದ 1.00 ಕೋಟಿ ಮೊತ್ತಕ್ಕೆ ಕಾಮಗಾರಿ ಕೈಗೆತ್ತಿಕೊಳ್ಳಲು ಈಗಾಗಲೇ ಆಡಳಿತಾತ್ಮಕ ಅನುಮೋದನೆ ನೀಡಿದಲ್ಲಿ ಈ ಆದೇಶವನ್ನು ಹಿಂಪಡೆಯಬೇಕು. ಹಿಂಪಡೆಯಲಾದ ಮಾಹಿತಿಯನ್ನು ಆರ್ಥಿಕ ಇಲಾಖೆಗೆ ಸಲ್ಲಿಸಬೇಕು,’ ಎಂದೂ ಆದೇಶದಲ್ಲಿ ಹೇಳಲಾಗಿದೆ.

 

ಪಕ್ಷದ ಸದಸ್ಯರಿಗೆ ತಲಾ 25 ಕೋಟಿ ವಿಶೇಷ ಅನುದಾನ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದರು. ಈ ಅನುದಾನ ಪಡೆಯಲು ಕಾಂಗ್ರೆಸ್‌ ಶಾಸಕರು ಪೈಪೋಟಿಗಿಳಿದಿದ್ದರು. ಕಾಮಗಾರಿಗಳ ಪಟ್ಟಿ, ಅದಕ್ಕೆ ತಗಲುವ ಅಂದಾಜು ಮೊತ್ತ ಮತ್ತು ಅನುಷ್ಠಾನಗೊಳಿಸಬೇಕಾದ ಏಜೆನ್ಸಿಯ ವಿವರಗಳನ್ನು ಮುಖ್ಯಮಂತ್ರಿಗಳಿಗೆ ಶಾಸಕರು ಪ್ರಸ್ತಾವ ಸಲ್ಲಿಸಿದ್ದರು.

Hot this week

30,01,169 ರೈತರಿಂದ 25,180.77 ಕೋಟಿ ಹೊರಬಾಕಿ; ರೈತರ ಸಾಲ ಮನ್ನಾ ಪ್ರಸ್ತಾವವಿಲ್ಲ, ರೈತರ ಕೆಂಗಣ್ಣಿಗೆ ಗುರಿಯಾಗಲಿದೆಯೇ ಸರ್ಕಾರ?

ಬೆಂಗಳೂರು; ಸಹಕಾರ ಸಂಸ್ಥೆಗಳ ಮೂಲಕ ರೈತರು ಪಡೆದಿರುವ ಕೃಷಿ ಸಾಲವನ್ನು ಮನ್ನಾ...

ಇ-ಆಫೀಸ್‌ ತಂತ್ರಾಂಶದಲ್ಲೇ ಬೆಟ್ಟದಷ್ಟು ಬೆಳೆದು ನಿಂತ ಕಡತಗಳ ರಾಶಿ; ಗರಿಷ್ಠ 3,187, ಕನಿಷ್ಟ 32 ದಿನಗಳಾದರೂ ವಿಲೇವಾರಿಯಾಗಿಲ್ಲ, ಜಡ್ಡುಗಟ್ಟಿದೆಯೇ ಆಡಳಿತ?

ಬೆಂಗಳೂರು;   ಭೌತಿಕ ಕಡತಗಳ ವಿಲೇವಾರಿಯಲ್ಲಿ ಆಗುತ್ತಿದ್ದ ವಿಳಂಬವನ್ನು ತಪ್ಪಿಸುವ ಉದ್ದೇಶದಿಂದ ಇ-ಆಫೀಸ್‌...

ಹಿಂದುಳಿದ ಸಮುದಾಯ ಅಭಿವೃದ್ಧಿ ನಿಗಮಗಳಿಗೆ 473.41 ಕೋಟಿ ಅನುದಾನ ಹಂಚಿಕೆ; ನಾಲ್ಕೂವರೆ ತಿಂಗಳಾದರೂ ನಯಾಪೈಸೆಯೂ ಬಿಡುಗಡೆಯಾಗಿಲ್ಲ

ಬೆಂಗಳೂರು; ಆರ್ಥಿಕ ವರ್ಷ ಆರಂಭವಾಗಿ ನಾಲ್ಕೂವರೆ ತಿಂಗಳಾದರೂ ಸಹ ಹಿಂದುಳಿದ ವರ್ಗಗಳ...
Please Scan to make Your Contribution

Topics

30,01,169 ರೈತರಿಂದ 25,180.77 ಕೋಟಿ ಹೊರಬಾಕಿ; ರೈತರ ಸಾಲ ಮನ್ನಾ ಪ್ರಸ್ತಾವವಿಲ್ಲ, ರೈತರ ಕೆಂಗಣ್ಣಿಗೆ ಗುರಿಯಾಗಲಿದೆಯೇ ಸರ್ಕಾರ?

ಬೆಂಗಳೂರು; ಸಹಕಾರ ಸಂಸ್ಥೆಗಳ ಮೂಲಕ ರೈತರು ಪಡೆದಿರುವ ಕೃಷಿ ಸಾಲವನ್ನು ಮನ್ನಾ...

ಇ-ಆಫೀಸ್‌ ತಂತ್ರಾಂಶದಲ್ಲೇ ಬೆಟ್ಟದಷ್ಟು ಬೆಳೆದು ನಿಂತ ಕಡತಗಳ ರಾಶಿ; ಗರಿಷ್ಠ 3,187, ಕನಿಷ್ಟ 32 ದಿನಗಳಾದರೂ ವಿಲೇವಾರಿಯಾಗಿಲ್ಲ, ಜಡ್ಡುಗಟ್ಟಿದೆಯೇ ಆಡಳಿತ?

ಬೆಂಗಳೂರು;   ಭೌತಿಕ ಕಡತಗಳ ವಿಲೇವಾರಿಯಲ್ಲಿ ಆಗುತ್ತಿದ್ದ ವಿಳಂಬವನ್ನು ತಪ್ಪಿಸುವ ಉದ್ದೇಶದಿಂದ ಇ-ಆಫೀಸ್‌...

ಫ್ರೀಡಂ ಹಬ್ಬಕ್ಕೆ 6 ಕೋಟಿ ವೆಚ್ಚ!; ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳುವ ಮುನ್ನವೇ ಕೆಲಸ ಆರಂಭಿಸಿದ ಕಂಪನಿ

ಬೆಂಗಳೂರು; ಹೊಸದಾಗಿ ವಿದ್ಯಾರ್ಥಿ ನಿಲಯಗಳ ಆರಂಭ, ಅನುಮೋದಿತ ಕಾಮಗಾರಿಗಳ ಕಾರ್ಯಭಾರಕ್ಕೆ ನಲುಗಿ...

3,206 ಪಂಚಾಯ್ತಿಗಳಲ್ಲಿ ಶಾಸನಬದ್ಧ ತೆರಿಗೆ ವಸೂಲು; ಸರ್ಕಾರಕ್ಕೆ ಪಾವತಿಯಾಗದ 17.28 ಕೋಟಿ ಎಲ್ಲಿದೆ?

ಬೆಂಗಳೂರು; ರಾಜ್ಯದ 27 ಜಿಲ್ಲೆಗಳ 3,206 ಪಂಚಾಯ್ತಿಗಳು ಸರಕು ಸೇವಾ ತೆರಿಗೆ,...

Related Articles

Popular Categories

error: Content is protected !!