Thursday | March 26, 2026 |

8.34 ಎಕರೆ ವಕ್ಫ್‌ ಆಸ್ತಿ ಹಕ್ಕು; ಕಮರುಲ್ ಇಸ್ಲಾಂ, ದಸ್ತಗಿರ್‍‌ಗೆ ರಿಯಾಯಿತಿ, ತನಿಖೆ ಅಗತ್ಯವೆಂದ ಉಪ ಲೋಕಾಯುಕ್ತ

Support THE-FILE

spot_img

ಬೆಂಗಳೂರು; ಕಲ್ಬುರ್ಗಿ ತಾಲೂಕಿನ ಬಡೇಪುರ ಗ್ರಾಮದ ಸರ್ವೆ ನಂಬರ್‍ 12‌ ರಲ್ಲಿ 8.34 ಎಕರೆ ವಿಸ್ತೀರ್ಣದ ವಕ್ಫ್‌ ಆಸ್ತಿಯನ್ನು ಪ್ಲಾಟ್‌ಗಳನ್ನಾಗಿ ಹಂಚಿಕೆ ಮಾಡಿರುವುದು ಮತ್ತು ಹೈದರಬಾದ್‌ ಮೂಲದ ಚಾರ್ಟೆಡ್‌ ಅಕೌಂಟೆಂಟ್‌ ಸೈಯದ್‌ ಗುಲಾಂ ದಸ್ತಗಿರ್ ಹಾಗೂ ಮಾಜಿ ಸಚಿವ ಕಮರುಲ್ ಇಸ್ಲಾಂ (ದಿವಂಗತ) ಅವರ ಪರವಾಗಿ ವಕ್ಫ್‌ ಮಂಡಳಿಯು ವಿನಾಕಾರಣ ರಿಯಾಯಿತಿ ತೋರಿಸಿತ್ತು ಎಂಬುದನ್ನು ಉಪ ಲೋಕಾಯುಕ್ತ ಎನ್‌ ಆನಂದ್‌ ಅವರು ಬಯಲು ಮಾಡಿದ್ದಾರೆ.

 

ವಕ್ಫ್ ಆಸ್ತಿ ದುರ್ಬಳಕೆ, ಅತಿಕ್ರಮಣಕ್ಕೆ ಸಂಬಂಧಿಸಿದಂತೆ ಸರ್ಕಾರದ ಸೂಚನೆಯಂತೆ ಉಪ ಲೋಕಾಯುಕ್ತರಾಗಿದ್ದ ಎನ್‌ ಆನಂದ್‌ ಅವರು ತನಿಖೆ ನಡೆಸಿದ್ದರು. 2016ರಲ್ಲಿ ಸರ್ಕಾರಕ್ಕೆ ಸಲ್ಲಿಸಿದ್ದ ವರದಿಯಲ್ಲಿ ವಕ್ಫ್‌ ಆಸ್ತಿ ದುರ್ಬಳಕೆಯ ವಿವಿಧ ಮುಖಗಳನ್ನು ತೆರೆದಿಟ್ಟಿದ್ದಾರೆ. ಈ ತನಿಖಾ ವರದಿಯನ್ನು ‘ದಿ ಫೈಲ್‌’ ಆರ್‍‌ಟಿಐ ಅಡಿಯಲ್ಲಿ ಪಡೆದುಕೊಂಡಿದೆ.

 

ಗುಲ್ಬರ್ಗಾದ ಶಾಸಕರು ಮತ್ತು ಸಚಿವರೂ ಆಗಿದ್ದ ಕಮರುಲ್ ಇಸ್ಲಾಂ ಅವರು ವಕ್ಫ್‌ ಆಸ್ತಿಗೆ ಸಂಬಂಧಿಸಿದ ವಾಸ್ತವಾಂಶಗಳನ್ನು ತಪ್ಪಾಗಿ ಪ್ರತಿನಿಧಿಸಿದ್ದರು. ಈ ಮೂಲಕ 8.34 ಎಕರೆ ವಿಸ್ತೀರ್ಣದ ಭೂಮಿಯನ್ನು ಅನಧಿಕೃತವಾಗಿ ಸ್ವಾಧೀನಕ್ಕೆ ಪಡೆದುಕೊಂಡಿದ್ದರು ಎಂದು ಅನ್ವರ್‍‌ ಮಾಣಿಪ್ಪಾಡಿ ಅವರ ನೇತೃತ್ವದ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗವೂ ತನ್ನ ವರದಿಯಲ್ಲಿ ವಿವರಿಸಿತ್ತು.

 

ಉಪ ಲೋಕಾಯುಕ್ತ ಎನ್‌ ಆನಂದ್‌ ಅವರು ಈ ವರದಿಯಲ್ಲಿನ ಬಹುತೇಕ ಸಂಗತಿ, ಅಂಶಗಳನ್ನು ಮತ್ತಷ್ಟು ವಿಸ್ತರಿಸಿರುವುದು ವರದಿಯಿಂದ ಗೊತ್ತಾಗಿದೆ. 8.34 ಎಕರೆ ವಿಸ್ತೀರ್ಣದ ವಕ್ಫ್‌ ಆಸ್ತಿಯನ್ನು ಕಾಲ್ಪನಿಕ ದಾಖಲೆಗಳ ಮೂಲಕ ವಶಪಡಿಸಿಕೊಂಡು ಸಾರ್ವಜನಿಕರಿಗೆ ಮನೆ, ನಿವೇಶನಗಳ ರೂಪದಲ್ಲಿ ಮಾರಾಟ ಮಾಡಿದ್ದರು ಎಂದು ವರದಿಯಲ್ಲಿ ವಿವರಿಸಿರುವುದು ತಿಳಿದು ಬಂದಿದೆ.

 

ಕಮರುಲ್ ಇಸ್ಲಾಂ ಅವರು ವಕ್ಫ್‌ ಭೂಮಿಯನ್ನು ಪ್ಲಾಟ್‌ಗಳಾಗಿ ಪರಿವರ್ತಿಸುವಲ್ಲಿ ಸಕ್ರಿಯ ಪಾತ್ರವನ್ನು ವಹಿಸಿದೆ ಎಂದು ಮೇಲಿನವುಗಳಿಂದ ಸ್ಪಷ್ಟವಾಗುತ್ತದೆ. ಇದನ್ನು ತನಿಖೆಗೊಳಪಡಿಸುವ ಅಗತ್ಯವಿದೆ. ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯು ಸೈಯದ್ ಗುಲಾಂ ದಸ್ತಗೀರ್ ಮತ್ತು ಕಮರುಲ್ ಇಸ್ಲಾಂ ಅವರ ಪರವಾಗಿ ವಿನಾಕಾರಣ ರಿಯಾಯತಿಯನ್ನು ತೋರಿಸಿದ್ದಕ್ಕಾಗಿ ಸರ್ಕಾರವು ಕ್ರಮ ತೆಗೆದುಕೊಳ್ಳಬೇಕು,’ ಎಂದು ವರದಿಯಲ್ಲಿ ಉಪ ಲೋಕಾಯುಕ್ತರು ಶಿಫಾರಸ್ಸು ಮಾಡಿರುವುದು ಗೊತ್ತಾಗಿದೆ.

 

 

ಕಲ್ಬುರ್ಗಿ ತಾಲೂಕಿನ ಬಡೇಪುರ ಗ್ರಾಮದ ಸರ್ವೆ ನಂಬರ್‍ 12‌ ರಲ್ಲಿ 8.34 ಎಕರೆ ವಕ್ಫ್‌ ಎಂದು 1974ರಲ್ಲೇ ಅಧಿಸೂಚಿಸಲಾಗಿದೆ. ಸೈಯದ್‌ ಶಾ ಮೊಹ್ಮದ್‌ ಹುಸೈನ್, ಅಕ್ಪಬರ್‍‌ ಮೊಹ್ಮದ್‌ ಇವರನ್ನು ಮುತವಲ್ಲಿಗಳು ಎಂದು ಹೇಳಲಾಗಿದೆ. ಮೂಲತಃ ಈ ಜಮೀನು ವಕ್ಫ್‌ ಆಸ್ತಿ ಎಂದು ಜಿಲ್ಲಾ ವಕ್ಫ್‌ ಅಧಿಕಾರಿಗಳೇ ವರದಿ ನೀಡಿದ್ದಾರೆ.

 

ಅಲ್ಲದೇ ಮುತವಲ್ಲಿ ಅಡಿಯಲ್ಲಿ ಅಫ್ಸರ್ ಜಹಾನ್ ಬೇಗಂ ಈ ಜಮೀನಿಗೆ ಗುತ್ತಿಗೆದಾರರಾಗಿದ್ದರು. ಕ್ರಮೇಣ ಆಸ್ತಿಯ ಗುತ್ತಿಗೆ ಹಕ್ಕುಗಳನ್ನು ಅಪ್ಸರ್‍‌ ಜಹಾನ್ ಬೇಗಂ ಅವರು ಸೈಯದ್‌ ಗುಲಾಮ್ ದಸ್ತಗಿರ್‍‌ ಎಂಬುವರಿಗೆ ಮಾರಾಟ ಮಾಡಿದ್ದರು. ಇದಕ್ಕೆ ಸೇಲ್‌ ಡೀಡ್‌ ಕೂಡ ಮಾಡಲಾಗಿತ್ತು ಎಂದು ವರದಿಯಲ್ಲಿ ಉಲ್ಲೇಖಿಸಿರುವುದು ತಿಳಿದು ಬಂದಿದೆ.

 

 

ಈ ಮಧ್ಯೆ ಸೈಯದ್‌ ಗುಲಾಮ್ ದಸ್ತಗಿರ್ ಎಂಬುವರು ಕರ್ನಾಟಕ ಇನಾಂ ರದ್ದತಿ ಕಾಯ್ದೆ 1977ರ ಅನ್ವಯ ಅರ್ಜಿ ಸಲ್ಲಿಸಿದ್ದರು. ದರ್ಗಾದ ಮುತವಲ್ಲಿ ಸರ್ವೆ ನಂಬರ್ 12ರಲ್ಲಿನ 8 ಎಕರೆ 34 ಗುಂಟೆ ಜಮೀನನ್ನು ಅಪ್ಸರ್‍‌ ಜಹಾನ್‌ ಬೇಗಂ ಅವರಿಗೆ ಗುತ್ತಿಗೆ ನೀಡಿದ್ದಾರೆ. ಈಕೆ ಹೈದರಾಬಾದ್‌ ಮೂಲದ ಸೈಯದ್‌ ಗುಲಾಂ ದಸ್ತಗಿರ್ ಅವರಿಗೆ ಗುತ್ತಿಗೆ ಹಕ್ಕುಗಳನ್ನು ಮಾರಾಟ ಮಾಡಿದ್ದರು.

 

‘ಆದರೆ, ಸೈಯದ್ ಗುಲಾಮ್ ದಸ್ತಗೀರ್ ಪರವಾಗಿ ಅಫ್ಜರ್ ಜಹಾನ್ ಬೇಗಂ ಅವರು ಗುತ್ತಿಗೆ ಹಕ್ಕುಗಳ ಮಾರಾಟವು ಅನೂರ್ಜಿತವಾಗಿದೆ ಎಂದು ವರದಿಯಲ್ಲಿ ಹೇಳಲಾಗಿದೆ. ಹಾಗೆಯೇ ಹೈದರಾಬಾದ್ ಮೂಲದ ಚಾರ್ಟೆಟ್‌ ಅಕೌಂಟೆಂಟ್‌ ಆಗಿರುವ ಸೈಯದ್‌ ದಸ್ತಗಿರ್, ಗುಲ್ಬರ್ಗಾ ನಿವಾಸಿಯಾಗಿರುವ ಕಮರುಲ್ ಇಸ್ಲಾಂ ಅವರನ್ನು ಜಿಪಿಎ ಹೋಲ್ಡರ್ ಎಂದು ಲ್ಯಾಂಡ್‌ ಟ್ರಿಬ್ಯುನಲ್ ಮುಂದೆ ದಾಖಲೆ ಸಲ್ಲಿಸಿದ್ದರು. ಆದರೆ ಈ ಜಮೀನಿಗೆ ಸೈಯದ್‌ ಗುಲಾಮ್ ದಸ್ತಗಿರ್ ಅವರು ಅರ್ಜಿದಾರರೇ ಆಗಿರಲಿಲ್ಲ,’ ಎಂದು ವಿವರಿಸಿರುವುದು ಗೊತ್ತಾಗಿದೆ.

 

ಲ್ಯಾಂಡ್‌ ಟ್ರಿಬ್ಯೂನಲ್‌ ಈ ಬಗ್ಗೆ ಆದೇಶ ಹೊರಡಿಸಿತ್ತು. 1981ರ ಮಾರ್ಚ್‌ 19 ರಿಂದಲೇ 8 ಎಕರೆ 34 ಗುಂಟೆ ಜಮೀನಿಗೆ ಸೈಯದ್‌ ಗುಲಾಮ್ ದಸ್ತಗಿರ್ ಅವರ ಹೆಸರಿಗೆ ಭೂ ಸ್ವಾಧೀನ ಹಕ್ಕುಗಳನ್ನು ನೀಡಿತ್ತು. ಇದರಿಂದ ಸೈಯದ್‌ ಗುಲಾಮ್ ದಸ್ತಗಿರ್ ಎಂಬಾತ ಈ ಜಮೀನಿಗೆ ಶಾಶ್ವತ ಬಾಡಿಗೆದಾರ ಆಗಿದ್ದ.

 

 

ಅಲ್ಲದೇ ಇದೇ ಪ್ರಕರಣದಲ್ಲಿ ಸೈಯದ್‌ ಗುಲಾಮ್ ದಸ್ತಗಿರ್ ಬಳಿ ನೌಕರನಾಗಿದ್ದ ಮತ್ತೊಬ್ಬ ಅರ್ಜಿದಾರನಾಗಿದ್ದ ಚುನ್ನುಮಿಯಾ ಎಂಬುವರು ಸಲ್ಲಿಸಿದ್ದ ಅರ್ಜಿಯನ್ನು ಲ್ಯಾಂಡ್‌ ಟ್ರಿಬ್ಯೂನಲ್ ವಜಾಗೊಳಿಸಿತ್ತು. ಅಲ್ಲದೇ ಈತ ಜಮೀನನ್ನು ಉಳುಮೆ ಮಾಡುತ್ತಿರಲಿಲ್ಲ ಎಂದೂ ವರದಿಯಲ್ಲಿ ಉಲ್ಲೇಖಿಸಿರುವುದು ತಿಳಿದು ಬಂದಿದೆ.

 

ಸೈಯದ್‌ ಗುಲಾಂ ದಸ್ತಗಿರ್‍‌ ಎಂಬಾತ ಚಾರ್ಟಡ್‌ ಅಕೌಂಟೆಂಟ್‌ ಹಾಗೂ ಹೈದರಾಬಾದ್‌ನ ನಿವಾಸಿಯಾಗಿದ್ದ ಮತ್ತು ಈತ ಬಾಡಿಗೆದಾರನೂ ಅಲ್ಲ, ಈ ಜಮೀನಿನಲ್ಲಿ ಉಳುಮೆಯನ್ನೂ ಮಾಡುತ್ತಿರಲಿಲ್ಲ ಎಂಬ ಅಂಶವನ್ನೂ ಲ್ಯಾಂಡ್‌ ಟ್ರಿಬ್ಯೂನಲ್ ಕೂಡ ನಿರ್ಲಕ್ಷ್ಯಿಸಿತ್ತು. ಮತ್ತು ಕರ್ನಾಟಕ ಇನಾಂ ರದ್ದತಿ ಕಾಯ್ದೆಯು ವಕ್ಫ್‌ ಆಸ್ತಿಗೆ ಅನ್ವಯವಾಗುವುದಿಲ್ಲ ಎಂಬ ಕಾನೂನಾತ್ಮಕ ಅಂಶಗಳನ್ನು ಪರಿಶೀಲನೆಗೆ ಒಳಪಡಿಸಿರಲಿಲ್ಲ ಎಂದು ವರದಿಯಲ್ಲಿ ವಿವರಿಸಿದೆ.

 

 

ಮುತವಲ್ಲಿಗಳಿಗೆ ವಕ್ಫ್‌ ಆಸ್ತಿಗಳ ರಕ್ಷಣೆ ಮಾಡುವ ಹೊಣೆಗಾರಿಕೆಯಿದೆಯೇ ವಿನಃ ಇವರಿಗೆ ಈ ಭೂಮಿಯ ಸ್ವಾಧೀನದ ಹಕ್ಕುಗಳನ್ನು ಹೊಂದಲು ಅವಕಾಶವಿಲ್ಲ ಮತ್ತು ಮುತವಲ್ಲಿಗಳು ಈ ವಿಚಾರದಲ್ಲಿ ಸ್ವಯಂ ಯಾವುದೇ ಹಕ್ಕೂ ಹೊಂದಿಲ್ಲ. ಹೀಗಾಗಿ ಮುತವಲ್ಲಿಗಳು ಇತರೆ ಖಾಸಗಿ ಯಾರೇ ವ್ಯಕ್ತಿಗಳಿಗೆ ವಕ್ಫ್‌ ಆಸ್ತಿಯ ಕಾನೂನುಬದ್ಧ ಹಕ್ಕುಗಳನ್ನು ವರ್ಗಾವಣೆ ಮಾಡಲು ಅಧಿಕಾರವಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಿದೆ.

Hot this week

ಹಿಂದುಳಿದ ವರ್ಗ ವಸತಿ ಶಾಲೆ ಕಟ್ಟಡಗಳು ಶಿಥಿಲ; ಕಟ್ಟಡಗಳ ದುರಸ್ತಿಗೂ ಅನುದಾನವಿಲ್ಲ, ‘ಕೈ’ ಎತ್ತಿದ ಸರ್ಕಾರ

ಬೆಂಗಳೂರು;  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವಸತಿ ಶಾಲೆಗಳು ಶಿಥಿಲಗೊಂಡಿದ್ದರೂ...

ನರೇಗಾ ಕಾಮಗಾರಿಗಳ ಆರಂಭದ ದಿನಾಂಕವೂ ಇಲ್ಲ, ದತ್ತಾಂಶವೂ ಇಲ್ಲ; 1,007.83 ಕೋಟಿ ರು. ವೆಚ್ಚದ ಕಾಮಗಾರಿಗಳು ಅಪೂರ್ಣ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡಿದ್ದ ಕಾಮಗಾರಿಗಳ ಪೈಕಿ ಒಂದು ವ‍ರ್ಷಕ್ಕಿಂತಲೂ ಹೆಚ್ಚು...

ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿಗಳ ಕುಟುಂಬ ಸದಸ್ಯರ ಉದ್ಯಮ, ಹಣಕಾಸಿನ ವ್ಯವಹಾರ; ಸದನಕ್ಕೆ ಒದಗಿಸಬಹುದೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಖಿಲ ಭಾರತ...

ನರೇಗಾ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಿಯಮ ಉಲ್ಲಂಘನೆ; 86.67 ಕೋಟಿ ರು ಅಕ್ರಮ ಪತ್ತೆ ಹಚ್ಚಿದ ಸಿಎಜಿ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಮಾನವ ಸಂಪನ್ಮೂಲ ಬಳಕೆಗಾಗಿ ಮಾಡಿಕೊಂಡಿದ್ದ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಡೆದಿದ್ದ...

ಮೋಸದ ವಹಿವಾಟು, ಹೆಚ್ಚಿನ ಪಾವತಿ, ಅಕ್ರಮ ವೆಚ್ಚ; ನರೇಗಾದ ಮತ್ತೊಂದು ಮುಖ ಬಯಲು ಮಾಡಿದ ಸಿಎಜಿ

ಬೆಂಗಳೂರು; ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೈಗೊಂಡಿದ್ದ ಕಾಮಗಾರಿಗಳು...

Topics

ಹಿಂದುಳಿದ ವರ್ಗ ವಸತಿ ಶಾಲೆ ಕಟ್ಟಡಗಳು ಶಿಥಿಲ; ಕಟ್ಟಡಗಳ ದುರಸ್ತಿಗೂ ಅನುದಾನವಿಲ್ಲ, ‘ಕೈ’ ಎತ್ತಿದ ಸರ್ಕಾರ

ಬೆಂಗಳೂರು;  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವಸತಿ ಶಾಲೆಗಳು ಶಿಥಿಲಗೊಂಡಿದ್ದರೂ...

ನರೇಗಾ ಕಾಮಗಾರಿಗಳ ಆರಂಭದ ದಿನಾಂಕವೂ ಇಲ್ಲ, ದತ್ತಾಂಶವೂ ಇಲ್ಲ; 1,007.83 ಕೋಟಿ ರು. ವೆಚ್ಚದ ಕಾಮಗಾರಿಗಳು ಅಪೂರ್ಣ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಕೈಗೆತ್ತಿಕೊಂಡಿದ್ದ ಕಾಮಗಾರಿಗಳ ಪೈಕಿ ಒಂದು ವ‍ರ್ಷಕ್ಕಿಂತಲೂ ಹೆಚ್ಚು...

ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿಗಳ ಕುಟುಂಬ ಸದಸ್ಯರ ಉದ್ಯಮ, ಹಣಕಾಸಿನ ವ್ಯವಹಾರ; ಸದನಕ್ಕೆ ಒದಗಿಸಬಹುದೇ?

ಬೆಂಗಳೂರು; ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಖಿಲ ಭಾರತ...

ನರೇಗಾ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಿಯಮ ಉಲ್ಲಂಘನೆ; 86.67 ಕೋಟಿ ರು ಅಕ್ರಮ ಪತ್ತೆ ಹಚ್ಚಿದ ಸಿಎಜಿ

ಬೆಂಗಳೂರು; ನರೇಗಾ ಯೋಜನೆಯಡಿಯಲ್ಲಿ ಮಾನವ ಸಂಪನ್ಮೂಲ ಬಳಕೆಗಾಗಿ ಮಾಡಿಕೊಂಡಿದ್ದ ಹೊರಗುತ್ತಿಗೆ ಒಪ್ಪಂದಗಳಲ್ಲಿ ನಡೆದಿದ್ದ...

ಮೋಸದ ವಹಿವಾಟು, ಹೆಚ್ಚಿನ ಪಾವತಿ, ಅಕ್ರಮ ವೆಚ್ಚ; ನರೇಗಾದ ಮತ್ತೊಂದು ಮುಖ ಬಯಲು ಮಾಡಿದ ಸಿಎಜಿ

ಬೆಂಗಳೂರು; ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೈಗೊಂಡಿದ್ದ ಕಾಮಗಾರಿಗಳು...

ಗೃಹಜ್ಯೋತಿ; 23,823.06 ಮಿಲಿಯನ್ ಯೂನಿಟ್ ವಿದ್ಯುತ್ ಬಳಕೆ, ಎಸ್ಕಾಂಗಳಿಗೆ 631.75 ಕೋಟಿ ಬಾಕಿ ಉಳಿಸಿಕೊಂಡ ಸರ್ಕಾರ

  ಬೆಂಗಳೂರು; ಗೃಹ ಜ್ಯೋತಿ ಯೋಜನೆ ಅನುಷ್ಠಾನಗೊಳಿಸಿರುವ ವಿದ್ಯುತ್ ಸರಬರಾಜು ಕಂಪನಿಗಳಿಗೆ ಸರ್ಕಾರವು...

ವಿನಾಶಕಾರಿ ಭೂ ಕುಸಿತ; ಕೊಡಗು ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರದಲ್ಲಿ ಸಭೆಯೇ ನಡೆದಿಲ್ಲ, ಪುರಾವೆಯೂ ಇಲ್ಲ

ಬೆಂಗಳೂರು; ಕೊಡಗಿನಲ್ಲಿ 2018-19ನೇ ಸಾಲಿನಲ್ಲಿ  ಭಾರೀ ಪ್ರಮಾಣದ ವಿನಾಶಕಾರಿ ಭೂ ಕುಸಿತಗಳಾಗಿದ್ದರೂ ...

ಭೂ ಸ್ವಾಧೀನ, ಪರಿಹಾರದಲ್ಲಿ ಅಕ್ರಮ; ಬಿಸ್ವಾಸ್ ವರದಿ ಮೂಲೆಗುಂಪು, 29.96 ಕೋಟಿ ನಷ್ಟ ಪ್ರಕರಣಕ್ಕೆ ಕ್ಲೀನ್ ಚಿಟ್

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಸಾಬೀತಾಗಿದ್ದ  ಬೆಳಗಾವಿ ಜಿಲ್ಲೆ ಹುಕ್ಕೇರಿ...

Related Articles

Popular Categories

error: Content is protected !!