Thursday | March 19, 2026 |

ಗೃಹ ಜ್ಯೋತಿ; ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಫಲಾನುಭವಿಗಳ ಅಂಕಿ ಅಂಶಗಳೇ ಸರ್ಕಾರದಲ್ಲಿಲ್ಲ

Support THE-FILE

spot_img

ಬೆಂಗಳೂರು;  ಗೃಹ ಜ್ಯೋತಿ ಯೋಜನೆ ಒಟ್ಟು ಫಲಾನುಭವಿಗಳ ಪೈಕಿ  ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳ ನಿರ್ದಿಷ್ಯ ಅಂಕಿ ಅಂಶಗಳು ಸರ್ಕಾರದ ಬಳಿ  ಲಭ್ಯವಿಲ್ಲ.

 

ರಾಜ್ಯದ ಎಲ್ಲಾ ಪ್ರವರ್ಗದ ಗೃಹ ಬಳಕೆ ಮತ್ತು ಗ್ರಾಹಕರ ಸೌಲಭ್ಯಕ್ಕಾಗಿ ಗೃಹ ಜ್ಯೋತಿ  ಅನುಷ್ಠಾನಗೊಂಡಿದೆ.  ಗೃಹ ಜ್ಯೋತಿ ಯೋಜನೆಗೆ ನೋಂದಣಿಯಲ್ಲಿಯೂ  ಜಾತಿವಾರು ಮಾಹಿತಿ ಅಂಕಣ ನಮೂದಿಸಿಲ್ಲ. ಜಾತಿವಾರು ವಿವರಗಳ ಮಾಹಿತಿ ಸಂಗ್ರಹಿಸದ ಕಾರಣ ಗೃಹ ಜ್ಯೋತಿ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳ ನಿರ್ದಿಷ್ಟ ಅಂಕಿ ಅಂಶಗಳು ಲಭ್ಯವಿಲ್ಲ ಎಂದು ಖುದ್ದು ಸಚಿವ ಕೆ ಜೆ ಜಾರ್ಜ್‌ ಅವರು ಸದನಕ್ಕೆ ಉತ್ತರ ನೀಡಿದ್ದರು.

 

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉಪ ಯೋಜನೆಯ ನಿಧಿಯನ್ನು ಗ್ಯಾರಂಟಿ ಯೋಜನೆಗಳಿಗೆ ಮಾರ್ಗಪಲ್ಲಟಗೊಳಿಸಿದ್ದರ ಕುರಿತು ಭಾರೀ ವಿರೋಧ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ   ಗೃಹ ಜ್ಯೋತಿ ಯೋಜನೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ  ಫಲಾನುಭವಿಗಳ ಅಂಕಿ ಅಂಶಗಳು ಲಭ್ಯವಿಲ್ಲ ಎಂದು ಸದನಕ್ಕೆ ಕೊಟ್ಟಿರುವ ಉತ್ತರವು ಮುನ್ನೆಲೆಗೆ ಬಂದಿದೆ.

 

ಗೃಹ ಜ್ಯೋತಿ ಯೋಜನೆಯಡಿಯಲ್ಲಿ ನೋಂದಣಿ ಮಾಡಿಕೊಂಡಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವ್ಯಾಪ್ತಿಗೆ ಒಳಪಡುವ ವಿದ್ಯುತ್‌ ಬಳಕೆದಾರರ ವಿವರಗಳು ಮತ್ತು ಅಂಕಿ ಅಂಶಗಳ ಕುರಿತಾಗಿ ವಿಧಾನ ಪರಿಷತ್‌ನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಚುಕ್ಕೆ ಗುರುತಿಲ್ಲದ ಪ್ರಶ್ನೆ ಕೇಳಿದ್ದರು. ಇದಕ್ಕೆ ಸಚಿವ ಕೆ ಜೆ ಜಾರ್ಜ್‌ ಅವರು ಉತ್ತರ ನೀಡಿದ್ದರು.

 

ಉತ್ತರದಲ್ಲೇನಿದೆ?

 

ಗೃಹ ಜ್ಯೋತಿ ಯೋಜನೆಯನ್ನು ರಾಜ್ಯದಲ್ಲಿನ ಎಲ್ಲಾ ಪ್ರವರ್ಗದ ಗೃಹ ಬಳಕೆ ಗ್ರಾಹಕರ ಸೌಲಭ್ಯಕ್ಕಾಗಿ ಅನುಷ್ಠಾನಗೊಳಿಸಲಾಗಿರುತ್ತದೆ. ಈ ಯೋಜನೆಯ ಸೌಲಭ್ಯಕ್ಕಾಗಿ ನೋಂದಾಯಿಸುವ ಫಲಾನುಭವಿಗಳು ಸೇವಾ ಸಿಂಧು ತಂತ್ರಾಂಶದಲ್ಲಿ ನೋಂದಣಿ ಮಾಡಬೇಕಾಗಿದೆ. ಈ ನೋಂದಣಿ ಅರ್ಜಿಯಲ್ಲಿ ಮಾಹಿತಿಯನ್ನು ಸರಳೀಕರಣಗೊಳಿಸುವ ಸಲುವಾಗಿ ಪ್ರತ್ಯೇಕವಾಗಿ ಜಾತಿವಾರು ಮಾಹಿತಿ ಅಂಕಣ ನಮೂದಿಸಿರುವುದಿಲ್ಲ. ಹೊಸದಾಗಿ ವಿದ್ಯುತ್‌ ಸಂಪರ್ಕ ಪಡೆಯುವ ಸಂದರ್ಭದಲ್ಲಿಯೂ ಸಹ ಜಾತಿವಾರು ವಿವರಗಳ ಮಾಹಿತಿ ಸಂಗ್ರಹಿಸಲ್ಪಡುವುದಿಲ್ಲ. ಹೀಗಾಗಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಫಲಾನುಭವಿಗಳ ನಿರ್ದಿಷ್ಟ ಅಂಕಿ ಅಂಶಗಳು ಲಭ್ಯವಿರುವುದಿಲ್ಲ ಎಂದು ಸಚಿವ ಕೆ ಜೆ ಜಾರ್ಜ್‌ ಅವರು ಉತ್ತರ ಒದಗಿಸಿರುವುದು ಗೊತ್ತಾಗಿದೆ.

 

 

ವಿಶೇಷವೆಂದರೇ ಇಂಧನ ಇಲಾಖೆಯಡಿ ಒಟ್ಟು 3.53 ಲಕ್ಷ ಎಸ್‌ ಸಿ ಮತ್ತು ಎಸ್‌ ಟಿ ರೈತರ ಪಂಪ್‌ ಸೆಟ್‌ಗಳಿವೆ. ಇದಕ್ಕೆ ಅನುಗುಣವಾಗಿ 1,437.18 ಅನುದಾನ ಮಾತ್ರ ಅಗತ್ಯವಿದೆ. ಎಸ್‌ಸಿಎಸ್‌ಪಿ ಮತ್ತು ಎಸ್‌ಟಿಪಿ ಕಾಯ್ದೆಯಂತೆ ಫಲಾನುಭವಿಗಳ ಸಂಖ್ಯೆಗೆ ಅನುಗುಣವಾಗಿ ವೆಚ್ಚ ಭರಿಸಬೇಕಾಗಿದೆ. ಅಂದಾಜು 846 ಕೋಟಿ ರು ಉಳಿಕೆಯಾಗಗುತ್ತದೆ. ಅದೇ ರೀತಿ ಗೃಹ ಜ್ಯೋತಿ ಯೋಜನೆಯಡಿಯೂ ಸಹ ನಿಖರ ಅಂಕಿ ಅಂಶಗಳನ್ನು ಇಂಧನ ಇಲಾಖೆಯಿಂದ ಒದಗಿಸಿಲ್ಲ.

 

 

ಸಮಾಜ ಕಲ್ಯಾಣ ಇಲಾಖೆಯು 2025ರ ಜನವರಿ 18ರಂದು ನಡೆದಿದ್ದ ಎಸ್‌ಸಿಸಿಎಸ್‌ಪಿ ಮತ್ತು ಎಸ್‌ಟಿಪಿ ನೋಡಲ್‌ ಏಜೆನ್ಸಿ ಸಭೆಯಲ್ಲಿ ಈ ಸಂಗತಿಯ ಕುರಿತು ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಯು ಚರ್ಚಿಸಿದ್ದರು.

 

ಬೆಸ್ಕಾಂ ಸೇರಿದಂತೆ ಎಸ್ಕಾಂಗಳ ವ್ಯಾಪ್ತಿಯಲ್ಲಿ ಗೃಹ ಜ್ಯೋತಿ ಯೋಜನೆಯಡಿಯಲ್ಲಿ 2024ರ ಜೂನ್‌ ಅಂತ್ಯಕ್ಕೆ ಒಟ್ಟಾರೆ 1,66,41,767 ಮಂದಿ ನೋಂದಣಿ ಮಾಡಿಕೊಂಡಿದ್ದರು. ಇದೇ ಅವಧಿಯಲ್ಲಿ 30,99, 711 ಮಂದಿ ಗೃಹ ಜ್ಯೋತಿ ಯೋಜನೆಯಿಂದ ಹೊರಗುಳಿದಿದ್ದರು.

 

 

ಬೆಸ್ಕಾಂ ವ್ಯಾಪ್ತಿಯಲ್ಲಿ 7013678, ಮೆಸ್ಕಾಂ ವ್ಯಾಪ್ತಿಯಲ್ಲಿ 1744327, ಸೆಸ್ಕ್‌ 2393702, ಹೆಸ್ಕಾಂ 3317039, ಜೆಸ್ಕಾಂ 2173021 ಸೇರಿ ಒಟ್ಟಾರೆ 1,66,41,767 ಮಂದಿ ನೋಂದಣಿ ಮಾಡಿಸಿಕೊಂಡಿದ್ದರು. ಅದೇ ರೀತಿ ಬೆಸ್ಕಾಂ ವ್ಯಾಪ್ತಿಯಲ್ಲಿ 2190395, ಮೆಸ್ಕಾಂ 347150, ಸೆಸ್ಕ್‌ 135250, ಹೆಸ್ಕಾಂ 348355, ಜೆಸ್ಕಾಂ 78561 ಸೇರಿ 3099711 ಮಂದಿ  ಯೋಜನೆಯಿಂದ ಹೊರಗುಳಿದಿದ್ದರು ಎಂದು ಸದನಕ್ಕೆ ಮಾಹಿತಿ ಒದಗಿಸಿದ್ದರು.

 

 

ಹಾಗೆಯೇ 2023-24ನೇ ಸಾಲಿನಲ್ಲಿ ಗೃಹ ಜ್ಯೋತಿ ಯೋಜನೆಯಡಿಯಲ್ಲಿ ನೋಂದಾಯಿತ ವಿದ್ಯುತ್‌ ಬಳೆಕದಾರರು 5953.89 ದಶಲಕ್ಷ ಯೂನಿಟ್‌ ವಿದ್ಯುತ್‌ ಬಳಕೆ ಮಾಡಿದ್ದರು. ಇದಕ್ಕಾಗಿ ಒಟ್ಟಾರೆ 2,554.11 ಕೋಟಿ ರು ವೆಚ್ಚವಾಗಿತ್ತು. 2024-25ನೇ ಸಾಲಿನಲ್ಲಿ 2558.40 ದಶಲಕ್ಷ ಯೂನಿಟ್‌ ವಿದ್ಯುತ್‌ನನ್ನು 2024ರ ಜೂನ್‌ ಅಂತ್ಯಕ್ಕೆ ಬಳಕೆ ಮಾಡಿದ್ದರು. ಇದಕ್ಕಾಗಿ 2,304.24 ಕೋಟಿ ರು ವೆಚ್ಚವಾಗಿತ್ತು ಎಂದು ಉತ್ತರಿಸಿದ್ದರು.

 

 

2023-24ನೇ ಸಾಲಿನಲ್ಲಿ ಎಸ್ಕಾಂಗಳಿಗೆ ಯಾವುದೇ ಬಾಕಿ ಉಳಿಸಿರಲಿಲ್ಲ. ಇದೇ ಅವಧಿಯಲ್ಲಿ ಬೆಸ್ಕಾಂಗೆ 2,771.59 ಕೋಟಿ ರು., ಮೆಸ್ಕಾಂಗೆ 639.00 ಕೋಟಿ, ಸೆಸ್ಕ್‌ಗೆ 629.69 ಕೋಟಿ, ಹೆಸ್ಕಾಂಗೆ 1,092.91 ಕೋಟಿ, ಜೆಸ್ಕಾಂಗೆ 675 ಕೋಟಿ ರು ಬಿಡುಗಡೆಯಾಗಿತ್ತು ಎಂದು ಸಚಿವ ಜಾರ್ಜ್‌ ಅವರು ನೀಡಿದ್ದ ಉತ್ತರದಿಂದ ಗೊತ್ತಾಗಿದೆ.

 

ಗ್ಯಾರಂಟಿ ಹಣವೇನು ಸರ್ಕಾರದ ಸಂಬಳವೇ ಎಂದು ಸಚಿವ ಕೆ ಜೆ ಜಾರ್ಜ್‌ ಅವರು ಉತ್ತರಿಸಿದ್ದರು.   ಗೃಹ ಜ್ಯೋತಿ ಯೋಜನೆ ಅನುಷ್ಠಾನಗೊಳಿಸಿದ್ದ ಎಸ್ಕಾಂಗಳಿಗೆ ಸರ್ಕಾರವು ಬಾಕಿ  ಹಣ ಬಿಡುಗಡೆ ಮಾಡಿರಲಿಲ್ಲ. ಹೀಗಾಗಿ   ಗ್ರಾಹಕರಿಂದಲೇ ಹಣ ವಸೂಲು ಮಾಡಲಾಗುವುದು ಎಂದು ನೋಟೀಸ್‌ ಕೂಡ ಜಾರಿಗೊಳಿಸಿದ್ದವು. ನಂತರ ಸಚಿವ ಕೆ ಜೆ ಜಾರ್ಜ್‌ ಸೂಚನೆ ಮೇರೆಗೆ ನೋಟೀಸ್‌ ಹಿಂಪಡೆದುಕೊಳ್ಳಲು ಸೂಚಿಸಿದ್ದನ್ನು ಸ್ಮರಿಸಬಹುದು.

Hot this week

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ...

ರೋಹಿತ್ ವೇಮುಲ ಕಾಯ್ದೆ; ವ್ಯಾಖ್ಯಾನಗಳು ಅಸ್ಪಷ್ಟ, ಕಾನೂನು ಬಲವಿಲ್ಲ, ವಿಧೇಯಕವೇ ಅಪೂರ್ಣ

ಬೆಂಗಳೂರು; ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಯಾರೊಬ್ಬರೂ ಜಾತಿ ಆಧಾರದಲ್ಲಿ ತಾರತಮ್ಯ ಎದುರಿಸಬಾರದು...

ಗ್ರಾಮಠಾಣ ಜಮೀನು ಅದಲು-ಬದಲು; ಆರ್ಥಿಕ ಇಲಾಖೆ ಆಕ್ಷೇಪ ಬದಿಗೊತ್ತಿ ಎಂ ಆರ್ ಸೀತಾರಾಂ ಕುಟುಂಬದ ಬೆನ್ನಿಗೆ ನಿಂತ ಸರ್ಕಾರ

ಬೆಂಗಳೂರು; ಸರ್ಕಾರಿ ಭೂಮಿಗೆ ರಸ್ತೆಯ ಸಂಪರ್ಕ ಹೊಂದಿಲ್ಲದಿರುವ, ರಸ್ತೆ ಸಂಪರ್ಕ ಕಲ್ಪಿಸದೇ...

ಅದಾನಿ ಎಸಿಸಿ ಲಿಮಿಟೆಡ್‌ನಿಂದ ಅಕ್ರಮ ಗಣಿಗಾರಿಕೆ; ನಿರ್ದೇಶಕರು, ಅಧಿಕಾರಿಗಳ ವಿರುದ್ಧ ಲೋಕಾ ತನಿಖೆಗೆ ಶಿಫಾರಸ್ಸು, ಕಡತಕ್ಕೆ ಧೂಳು

ಬೆಂಗಳೂರು;  ಕಲ್ಬುರ್ಗಿಯ ವಾಡಿಯಲ್ಲಿ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್ ಪ್ರೈವೈಟ್ ಲಿಮಿಟೆಡ್...

1,260 ಕೋಟಿ ಮೊತ್ತದ ಹಗರಣ; 3 ವರ್ಷವಾದರೂ ಕಾಣದ ತಾರ್ಕಿಕ ಅಂತ್ಯ, ತೆವಳಿದ ಲೋಕಾ ತನಿಖೆ

ಬೆಂಗಳೂರು;  1,260 ಕೋಟಿ ರು ಮೊತ್ತದಲ್ಲಿ  108 ಆರೋಗ್ಯ ಕವಚ ಆಂಬ್ಯುಲೆನ್ಸ್‌ಗಳನ್ನು...

Topics

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ...

ರೋಹಿತ್ ವೇಮುಲ ಕಾಯ್ದೆ; ವ್ಯಾಖ್ಯಾನಗಳು ಅಸ್ಪಷ್ಟ, ಕಾನೂನು ಬಲವಿಲ್ಲ, ವಿಧೇಯಕವೇ ಅಪೂರ್ಣ

ಬೆಂಗಳೂರು; ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಯಾರೊಬ್ಬರೂ ಜಾತಿ ಆಧಾರದಲ್ಲಿ ತಾರತಮ್ಯ ಎದುರಿಸಬಾರದು...

ಗ್ರಾಮಠಾಣ ಜಮೀನು ಅದಲು-ಬದಲು; ಆರ್ಥಿಕ ಇಲಾಖೆ ಆಕ್ಷೇಪ ಬದಿಗೊತ್ತಿ ಎಂ ಆರ್ ಸೀತಾರಾಂ ಕುಟುಂಬದ ಬೆನ್ನಿಗೆ ನಿಂತ ಸರ್ಕಾರ

ಬೆಂಗಳೂರು; ಸರ್ಕಾರಿ ಭೂಮಿಗೆ ರಸ್ತೆಯ ಸಂಪರ್ಕ ಹೊಂದಿಲ್ಲದಿರುವ, ರಸ್ತೆ ಸಂಪರ್ಕ ಕಲ್ಪಿಸದೇ...

ಅದಾನಿ ಎಸಿಸಿ ಲಿಮಿಟೆಡ್‌ನಿಂದ ಅಕ್ರಮ ಗಣಿಗಾರಿಕೆ; ನಿರ್ದೇಶಕರು, ಅಧಿಕಾರಿಗಳ ವಿರುದ್ಧ ಲೋಕಾ ತನಿಖೆಗೆ ಶಿಫಾರಸ್ಸು, ಕಡತಕ್ಕೆ ಧೂಳು

ಬೆಂಗಳೂರು;  ಕಲ್ಬುರ್ಗಿಯ ವಾಡಿಯಲ್ಲಿ ಅದಾನಿ ಸಮೂಹದ ಎಸಿಸಿ ಸಿಮೆಂಟ್ಸ್ ಪ್ರೈವೈಟ್ ಲಿಮಿಟೆಡ್...

1,260 ಕೋಟಿ ಮೊತ್ತದ ಹಗರಣ; 3 ವರ್ಷವಾದರೂ ಕಾಣದ ತಾರ್ಕಿಕ ಅಂತ್ಯ, ತೆವಳಿದ ಲೋಕಾ ತನಿಖೆ

ಬೆಂಗಳೂರು;  1,260 ಕೋಟಿ ರು ಮೊತ್ತದಲ್ಲಿ  108 ಆರೋಗ್ಯ ಕವಚ ಆಂಬ್ಯುಲೆನ್ಸ್‌ಗಳನ್ನು...

ಶೈಕ್ಷಣಿಕ ಸಂಯೋಜಕ ಹುದ್ದೆ; 88.06 ಕೋಟಿ ಹೊರೆ, ಅರ್ಹ 1,500 ಅತಿಥಿ ಉಪನ್ಯಾಸಕರ ಹುದ್ದೆ ಕಿತ್ತುಕೊಂಡಿತೇ?

ಬೆಂಗಳೂರು; ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ದ  ನಿಗದಿತ ವಿದ್ಯಾರ್ಹತೆ ಹೊಂದದ...

ಅರಣ್ಯ ಜಮೀನಿನ ಖಾತೆ ಬದಲಾವಣೆ, ಅಸಮರ್ಪಕ ವರದಿ; ತಡವಾಗಿ ವಿಚಾರಣೆ, ನೋಟೀಸ್ ಜಾರಿ

ಬೆಂಗಳೂರು; ಭಾರತ ಸರ್ಕಾರದ ಅರಣ್ಯ ಸಚಿವಾಲಯದಿಂದ ಯಾವುದೇ ಪೂರ್ವಾನುಮತಿ ಪಡೆಯದೇ ಅಂದಾಜು...

ಸಾಮಾಜಿಕ ಭದ್ರತಾ ಯೋಜನೆ; ಖರ್ಚಾಗದ ಪೂರ್ಣ ಅನುದಾನ, 676.16 ಕೋಟಿ ಉಳಿಕೆ

ಬೆಂಗಳೂರು; ವೃದ್ಧಾಪ್ಯ, ಸಂಧ್ಯಾ ಸುರಕ್ಷಾ ಸೇರಿದಂತೆ ಒಟ್ಟಾರೆ 12 ಸಾಮಾಜಿಕ ಭದ್ರತಾ...

Related Articles

Popular Categories

error: Content is protected !!